ಸಮಗ್ರ ಸಮಾಚಾರ

75ನೇ ವಸಂತಕ್ಕೆ ಕಾಲಿಟ್ಟ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ

ಸಮಗ್ರ ನ್ಯೂಸ್: ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರು ನ. 25ರಂದು 75ನೇ ವಸಂತಕ್ಕೆ ಕಾಲಿಡಲಿದ್ದು, ತಮ್ಮ ನಿವಾಸದಲ್ಲಿ ಸರಳವಾಗಿ ಜನ್ಮದಿನಾಚರಣೆ ಆಚರಿಸಿಕೊಳ್ಳಲಿರುವರು. ಧರ್ಮಾಧಿಕಾರಿಗಳಾಗಿದ್ದ ಕೀರ್ತಿಶೇಷ ಡಿ. ರತ್ಮವರ್ಮ ಹೆಗ್ಗಡ ಮತ್ತು ರತ್ನಮ್ಮ ದಂಪತಿಯ ಹಿರಿಯ ಪುತ್ರನಾಗಿ 1948ರ ನ. 25ರಂದು ಜನಿಸಿದ ವೀರೇಂದ್ರ ಕುಮಾರ್‌ ಅವರು ಡಿ. ವೀರೇಂದ್ರ ಹೆಗ್ಗಡೆಯಾಗಿ 1964ರ ಅ. 24ರಂದು ಧರ್ಮಸ್ಥಳದ 21 ನೇ ಧರ್ಮಾಧಿಕಾರಿಯಾಗಿ ನೆಲ್ಯಾಡಿ ಬೀಡಿನಲ್ಲಿ ಪಟ್ಟಾಭಿಷಿಕ್ತರಾಗಿದ್ದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಸ್ವಉದ್ಯೋಗ […]

75ನೇ ವಸಂತಕ್ಕೆ ಕಾಲಿಟ್ಟ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ Read More »

ಏಳು ಕೊಪ್ಪ‌ ದಾಟಿ ಘಟ್ಟ ಹತ್ತಿದ ಕೊರಗಜ್ಜ| ದೈವದ ಹೆಸರಲ್ಲಿ‌ ದುಡ್ಡು ಮಾಡಲು ಹೊರಟ ಬೆಂಗಳೂರಿನ ಮಹಿಳೆ| ಕರಾವಳಿಯಲ್ಲಿ ಕೋಲಾಹಲ

ಸಮಗ್ರ ನ್ಯೂಸ್: ಕಾಂತಾರ ಸಿನಿಮಾ ಕರಾವಳಿಯ ದೈವಾರಾಧನೆಯನ್ನು ಪ್ರಪಂಚದಾದ್ಯಂತ ಪರಿಚಯಿಸಿದ ಬೆನ್ನಲ್ಲೇ ಬೆಂಗಳೂರಿನಲ್ಲಿಯೂ ಈಗ ದೈವಕೋಲ, ದೈವಸ್ಥಾನದ ವೈಭವ ಶುರುವಾಗಿದ್ದು, ಕರಾವಳಿಯಲ್ಲಿ ಕೋಲಾಹಲ ಹಬ್ಬಿದೆ. ಕಾಂತಾರ ಸಿನಿಮಾ ಅಬ್ಬರದ ಓಟದ ಹಿಂದೆ ದೈವಶಕ್ತಿಯ ಪ್ರೇರಣೆ ಇದೆ ಅನ್ನೋದು ಚಿತ್ರತಂಡದ ಮಾತು. ಕರಾವಳಿಯ ಭಾಗದ ದೈವಾರಾಧನೆ ಸಂಸ್ಕೃತಿ ಈಗ ಇಡಿ ದೇಶಕ್ಕೆ ಚಿರಪರಿಚಿತವಾಗಿದೆ. ಆದರೆ ಈಗ ಬೆಂಗಳೂರಿನಲ್ಲಿ ಮಾತ್ರ ಹೊಸ ದೈವದ ವಿಚಾರದಲ್ಲಿ ದೊಡ್ಡ ಸಮರ ಶುರುವಾಗಿದೆ. ಬೆಂಗಳೂರಿನ ದೊಡ್ಡಬಳ್ಳಾಪುರದಲ್ಲಿ ಈಗ ಕೊರಗಜ್ಜನ ದೈವಸ್ಥಾನ ಶುರುವಾಗಿದೆ. ಅಲ್ಲದೆ ಬೆಂಗಳೂರಿನಲ್ಲಿ

ಏಳು ಕೊಪ್ಪ‌ ದಾಟಿ ಘಟ್ಟ ಹತ್ತಿದ ಕೊರಗಜ್ಜ| ದೈವದ ಹೆಸರಲ್ಲಿ‌ ದುಡ್ಡು ಮಾಡಲು ಹೊರಟ ಬೆಂಗಳೂರಿನ ಮಹಿಳೆ| ಕರಾವಳಿಯಲ್ಲಿ ಕೋಲಾಹಲ Read More »

ಹವಾಮಾನ ವರದಿ: ಇನ್ನೆರಡು ದಿನವೂ ರಾಜ್ಯದಾದ್ಯಂತ ‌ಮಳೆ

ಸಮಗ್ರ ನ್ಯೂಸ್: ಕಳೆದ ಎರಡು ದಿನಗಳಿಂದ ಬೆಂಗಳೂರು ಸೇರಿದಂತೆ ವಾಯುಭಾರ ಕುಸಿತ ಹಿನ್ನೆಲೆ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಇಂದು ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡಿನಲ್ಲಿ ವರುಣ ಅಬ್ಬರಿಸಲಿದ್ದಾನೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಕೊಡಗು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಹಾಸನ, ಮೈಸೂರು, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ವರದಿ ತಿಳಿಸಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ನಾಳೆಯೂ ಮಳೆ ಮುನ್ಸೂಚನೆ ಇದೆ. ಕರಾವಳಿ ಹಾಗೂ

ಹವಾಮಾನ ವರದಿ: ಇನ್ನೆರಡು ದಿನವೂ ರಾಜ್ಯದಾದ್ಯಂತ ‌ಮಳೆ Read More »

ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ| ಎಡಿಜಿಪಿ ಅಲೋಕ್ ಕುಮಾರ್ ಕೂಡಾ ಟಾರ್ಗೆಟ್? ಪೋಸ್ಟರ್ ವೈರಲ್; ತನಿಖೆ ಚುರುಕು

ಸಮಗ್ರ ನ್ಯೂಸ್: ಮಂಗಳೂರು ನಗರದ ಕಂಕನಾಡಿ ಸಮೀಪದಲ್ಲಿ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ತನಿಖೆ ವಿವಿಧ ಆಯಾಮಗಳಲ್ಲಿ ಮುನ್ನಡೆಸಲಾಗಿದೆ. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಸ್ಟ್ ಒಂದು ವೈರಲ್ ಆಗುತ್ತಿದೆ. ವೈರಲ್ ಆಗುತ್ತಿರುವ ಪೋಸ್ಟ್ ಗೆ ಸಂಬಂಧಿಸಿದಂತೆ ಎಡಿಜಿಪಿ ಅಲೋಕ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಇನ್ಸ್ಟಾಗ್ರಾಂನಲ್ಲಿ ಒಂದು ಸಂಘಟನೆ ಏಕಾಏಕಿ ಪೋಸ್ಟ್ ಹಾಕಿಕೊಂಡಿದ್ದು ಸ್ವತಃ ಈ ಕೃತ್ಯದ ಹೊಣೆ ಹೆಗಲೇರಿಸಿಕೊಂಡಿದೆ. ವೈರಲ್ ಆಗುತ್ತಿರುವ ಪೋಸ್ಟ್‌ಗೆ ಪ್ರತಿಕ್ರಿಯೆ ನೀಡಿರುವ ಅವರು ‘ನಾವು ಸಂಘಟನೆ ಮತ್ತು ಆ ಪೋಸ್ಟ್

ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ| ಎಡಿಜಿಪಿ ಅಲೋಕ್ ಕುಮಾರ್ ಕೂಡಾ ಟಾರ್ಗೆಟ್? ಪೋಸ್ಟರ್ ವೈರಲ್; ತನಿಖೆ ಚುರುಕು Read More »

ಬದಲಾಗಿದೆ ‘ಕಾಂತಾರ’ ದ ‘ವರಾಹರೂಪಂ’ ಹಾಡು| ಹೊಸ ಟ್ಯೂನ್ ಹೇಗಿದೆ ಗೊತ್ತಾ?

ಸಮಗ್ರ ನ್ಯೂಸ್: ಕಾಂತಾರ’ ಚಿತ್ರದ ‘ವರಾಹ ರೂಪಂ..’ ಹಾಡು ವಿವಾದದಿಂದ ಸಮಸ್ಯೆ ಎದುರಿಸಿತ್ತು. ಕೇರಳದ ಸ್ಥಳೀಯ ನ್ಯಾಯಾಲಯ ಈ ಹಾಡನ್ನು ಪ್ರಸಾರ ಮಾಡದಂತೆ ತಡೆ ನೀಡಿತ್ತು. ಇದನ್ನು ಪ್ರಶ್ನಿಸಿ ‘ಹೊಂಬಾಳೆ ಫಿಲ್ಮ್ಸ್​’ ಕೇರಳ ಹೈಕೋರ್ಟ್​​ಗೆ ಮೇಲ್ಮನವಿ ಸಲ್ಲಿಕೆ ಮಾಡಿತ್ತು. ಆದರೆ, ಇದನ್ನು ಹೈಕೋರ್ಟ್ ರದ್ದು ಮಾಡಿ ಆದೇಶ ನೀಡಿದೆ. ಇದರಿಂದ ಚಿತ್ರಕ್ಕೆ ಹಿನ್ನಡೆಯಾಗಿದ್ದು ಈ ಕಾರಣದಿಂದ ಹಾಡಿನ ಟ್ಯೂನ್ ಬದಲಿಸಲಾಗಿದೆ. ‘ವರಾಹ ರೂಪಂ..’ ಹಾಡು ‘ಕಾಂತಾರ’ ಕ್ಲೈಮ್ಯಾಕ್ಸ್​ನಲ್ಲಿ ಬರುತ್ತದೆ. ಈ ಸಾಂಗ್ ಸಾಕಷ್ಟು ಗಮನ ಸೆಳೆದಿತ್ತು. ಹಾಡನ್ನು

ಬದಲಾಗಿದೆ ‘ಕಾಂತಾರ’ ದ ‘ವರಾಹರೂಪಂ’ ಹಾಡು| ಹೊಸ ಟ್ಯೂನ್ ಹೇಗಿದೆ ಗೊತ್ತಾ? Read More »

ಮುಖ, ಮೈ ಮೇಲೆಲ್ಲಾ ಕೂದಲು!
ಅಪರೂಪದ ಕಾಯಿಲೆಗೆ ತುತ್ತಾದ ಮಧ್ಯಪ್ರದೇಶದ ಯುವಕ

ಮಧ್ಯಪ್ರದೇಶ:ಮಧ್ಯಪ್ರದೇಶದ ರತ್ಲಾಮ್‌ ಜಿಲ್ಲೆಯ ಚಿಕ್ಕ ಹಳ್ಳಿಯ ಲಲಿತ್ ಪಾಟಿದಾರ್ (17) ಎಂಬ ಯುವಕನೊಬ್ಬ ಅಪರೂಪದ ‘ವೆರ್‌ವುಲ್ಫ್ ಸಿಂಡ್ರೋಮ್’ ಕಾಯಿಲೆಯಿಂದ ಬಳಲುತ್ತಿದ್ದು, ಮುಖ ಸೇರಿ ದೇಹದ ತುಂಬೆಲ್ಲ ದಟ್ಟವಾದ ಕೂದಲು ಬೆಳೆಯುತ್ತಿವೆ. ಪಾಟಿದಾರ್ ಹುಟ್ಟಿನಿಂದಲೇ ಅನಾರೋಗ್ಯದಿಂದ ಬಳಲುತ್ತಿದ್ದು, ಇಲ್ಲಿಯವರಗೆ ಕೇವಲ 50 ಜನರು ಮಾತ್ರ ಈ ಅಪರೂಪದ ಕಾಯಿಲೆಗೆ ತುತ್ತಾಗಿದ್ದಾರೆ ಎನ್ನಲಾಗಿದೆ. ಈ ಕುರಿತು ಬೇಸರ ವ್ಯಕ್ತಪಡಿಸಿರುವ ಲಲಿತ್, ನನ್ನ ದೇಹ ಪೂರ್ತಿಯಾಗಿ ಕೂದಲು ಆವರಿಸಿಕೊಂಡಿದ್ದು, ನನ್ನ ಸಹಪಾಠಿಗಳು ನನ್ನನ್ನು ಕೋತಿ ಹುಡುಗ ಎಂದು ಕರೆಯುತ್ತಾರೆ ಮತ್ತು ಕಚ್ಚುವ

ಮುಖ, ಮೈ ಮೇಲೆಲ್ಲಾ ಕೂದಲು!
ಅಪರೂಪದ ಕಾಯಿಲೆಗೆ ತುತ್ತಾದ ಮಧ್ಯಪ್ರದೇಶದ ಯುವಕ
Read More »

ಉಡುಪಿ:ರಕ್ತದೊತ್ತಡ ಕಡಿಮೆಯಾಗಿ‌ ಯುವತಿ ಸಾವು

ಸಮಗ್ರ ನ್ಯೂಸ್: ಕ್ರೈಸ್ತರ ಮದುವೆಯ ಮುನ್ನ ದಿನ ನಡೆಯುವ ರೋಸ್ ಕಾರ್ಯಕ್ರಮದ ವೇಳೆ ರಕ್ತದೊತ್ತಡ ಕಡಿಮೆಯಾಗಿ ಕುಸಿದುಬಿದ್ದು ಯುವತಿ ಮೃತಪಟ್ಟ ಘಟನೆ ಕೊಳಲಗಿರಿ ಹಾವಂಜೆಯಲ್ಲಿ ನಡೆದಿದೆ. ಮೃತ ಯುವತಿಯನ್ನು ಹಾವಂಜೆ ನಿವಾಸಿ ಜೋಸ್ನಾ ಲೂಯಿಸ್ ಎಂದು ಗುರುತಿಸಲಾಗಿದೆ. ಇವರು ನಿನ್ನೆ ರಾತ್ರಿ ಕೊಳಲಗಿರಿ ಹಾವಂಜೆಯ ಸಂಬಂಧಿಕರ ಮನೆಯಲ್ಲಿ ನಡೆದ ರೋಸ್ ಸಮಾರಂಭಕ್ಕೆ ತೆರಳಿದ್ದರು. ಅಲ್ಲಿ 8.30ರ ಸುಮಾರಿಗೆ ಏಕಾಏಕಿಯಾಗಿ ರಕ್ತದ ಒತ್ತಡ ಕಡಿಮೆಯಾದ ಪರಿಣಾಮ ಜೋಸ್ನಾ ಅವರು ಅಲ್ಲೆ ಕುಸಿದು ಬಿದ್ದು ಅಸ್ವಸ್ಥಗೊಂಡಿದ್ದರು. ತಕ್ಷಣ ಅವರನ್ನು ಮಣಿಪಾಲ

ಉಡುಪಿ:ರಕ್ತದೊತ್ತಡ ಕಡಿಮೆಯಾಗಿ‌ ಯುವತಿ ಸಾವು Read More »

ಸುರತ್ಕಲ್ ನ ಟೋಲ್ ಹೆಜಮಾಡಿಗೆ ಶಿಪ್ಟ್| ಪರಿಷ್ಕೃತ ದರ ಜಾರಿಗೊಳಿಸಿದ ಹೆದ್ದಾರಿ ಪ್ರಾಧಿಕಾರ| ಈಗ ಡಬ್ಬಲ್ ಅಲ್ಲ, ಅದಕ್ಕಿಂತಲೂ ಹೆಚ್ಚು!!

ಸಮಗ್ರ ನ್ಯೂಸ್: ಸುರತ್ಕಲ್ ಟೋಲ್‌ಗೇಟ್‌ನ್ನು ಹೆಜಮಾಡಿ ಟೋಲ್‌ಗೇಟ್‌ನೊಂದಿಗೆ ವಿಲೀನಗೊಳಿಸಿರುವ ಹಿನ್ನೆಲೆಯಲ್ಲಿ ಹೆಜಮಾಡಿ ಟೋಲ್‌ಗೇಟ್‌ನ ದರವನ್ನು ಪರಿಷ್ಕೃರಿಸಿ ಟೋಲ್ ಸಂಗ್ರಹಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಗುರುವಾರ ಸುತ್ತೋಲೆಯೊಂದನ್ನು ಹೊರಡಿಸಿದೆ. “ಕರ್ನಾಟಕ ಸರ್ಕಾರದ ನಿರಂತರ ವಿನಂತಿ/ಬೇಡಿಕೆ ಮೇರೆಗೆ, ಸ್ಥಳೀಯ ಸಾರ್ವಜನಿಕ/ವಿಐಪಿ ಒತ್ತಾಯಗಳ ಆಧಾರದ ಮೇಲೆ, ಸಕ್ಷಮ ಪ್ರಾಧಿಕಾರವು ಹೊಸ ಮಂಗಳೂರು ಬಂದರು ರಸ್ತೆಯ ಸುರತ್ಕಲ್ ಟೋಲ್ ಪ್ಲಾಜಾ (NITK ಹತ್ತಿರ, NH-66 ರ ಕ್ಯಾಂಪಸ್) ವಿಲೀನಕ್ಕೆ ಅನುಮೋದನೆ ನೀಡಿದೆ. ನವಯುಗ ಉಡುಪಿ ಟೋಲ್‌ವೇ ಪ್ರೈವೇಟ್ ಲಿಮಿಟೆಡ್‌ನ (ಟೋಲ್) ಯೋಜನೆಯ ಅಡಿಯಲ್ಲಿ

ಸುರತ್ಕಲ್ ನ ಟೋಲ್ ಹೆಜಮಾಡಿಗೆ ಶಿಪ್ಟ್| ಪರಿಷ್ಕೃತ ದರ ಜಾರಿಗೊಳಿಸಿದ ಹೆದ್ದಾರಿ ಪ್ರಾಧಿಕಾರ| ಈಗ ಡಬ್ಬಲ್ ಅಲ್ಲ, ಅದಕ್ಕಿಂತಲೂ ಹೆಚ್ಚು!! Read More »

ಟಾಟಾ ತೆಕ್ಕೆಗೆ ಸೇರಿದ ಬಿಸ್ಲೇರಿ

ಸಮಗ್ರ ನ್ಯೂಸ್: ದೇಶದ ಹೆಮ್ಮೆಯ ಟಾಟಾ ಗ್ರೂಪ್ ರಮೇಶ್ ಜೆ ಚೌಹಾನ್ ಮಾಲೀಕತ್ವದ ಬಿಸ್ಲೇರಿ ಇಂಟರ್‌ನ್ಯಾಶನಲ್‌ ಕಂಪನಿಯನ್ನು ಖರೀದಿಸುವ ಪ್ರಕ್ರಿಯೆಯಲ್ಲಿದ್ಧು ಒಟ್ಟು 7,000 ಕೋಟಿ ರೂ.ಗೆ ಈ ವಹಿವಾಟು ನಡೆದಿದೆ ಎನ್ನಲಾಗಿದೆ.ಒಪ್ಪಂದದ ಭಾಗವಾಗಿ ಈಗಿನ ಆಡಳಿತ ಮಂಡಳಿಯು ಮುಂದಿನ ಎರಡು ವರ್ಷಗಳ ಕಾಲ ಮುಂದುವರಿಯಲಿದೆ. ಟಾಟಾ ಸಮೂಹವು ತನ್ನ ಟಾಟಾ ಕನ್‌ಸ್ಯೂಮರ್‌ ಪ್ರಾಡಕ್ಟ್ಸ್‌ (TCPL) ಕಂಪನಿಯ ಅಡಿಯಲ್ಲಿ ತನ್ನ ಪ್ಯಾಕೇಜ್ಡ್‌ ಮಿನರಲ್‌ ವಾಟರ್‌ ಮಾರಾಟವನ್ನು ನಡೆಸುತ್ತಿದೆ. ಹಿಮಾಲಯನ್‌ ಮತ್ತು ಟಾಟಾ ಕಾಪ್ಪರ್‌ ಪ್ಲಸ್‌ ವಾಟರ್‌, ಟಾಟಾ ಗ್ಲೊಕೊ+

ಟಾಟಾ ತೆಕ್ಕೆಗೆ ಸೇರಿದ ಬಿಸ್ಲೇರಿ Read More »

ನಟ ದರ್ಶನ್ ಫಾರ್ಮ್ ಹೌಸ್ ನಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ|ಯುವಕನಿಗೆ 43 ವರ್ಷ ಜೈಲು ಶಿಕ್ಷೆ

ಸಮಗ್ರ ನ್ಯೂಸ್: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಯುವಕನಿಗೆ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ವಿಶೇಷ ನ್ಯಾಯಾಲಯವು 43 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು ರೂ 50,000 ದಂಡ ವಿಧಿಸಿದೆ. ಬಿಹಾರ ಮೂಲದ ಕಾರ್ಮಿಕ ಎಂ.ಡಿ.ನಾಜೀಮ್ ಪ್ರಕರಣ ಆರೋಪಿ. ಈತ ಸ್ಯಾಂಡಲ್ವುಡ್ ನಟ ದರ್ಶನ್ ತೂಗುದೀಪ ಮಾಲೀಕತ್ವದ ಟಿ ನರಸೀಪುರ ಮುಖ್ಯರಸ್ತೆಯಲ್ಲಿರುವ ವಿನೀಶ್ ದರ್ಶನ್ ಕಾಟೇವಾರಿ ಸ್ಟಡ್ ಫಾರ್ಮ್ನಲ್ಲಿ ಕೆಲಸ ಮಾಡುತ್ತಿದ್ದ. ಈತ 10 ವರ್ಷದ ಬಾಲಕಿ ಮೇಲೆ ಲೈಂಗಿಕ ಅಪರಾಧ ಎಸಗಿದ್ದ.

ನಟ ದರ್ಶನ್ ಫಾರ್ಮ್ ಹೌಸ್ ನಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ|ಯುವಕನಿಗೆ 43 ವರ್ಷ ಜೈಲು ಶಿಕ್ಷೆ Read More »