ಸಮಗ್ರ ಸಮಾಚಾರ

ರಾಜ್ಯ ಹ್ಯಾಂಡ್‌ಬಾಲ್ ತಂಡಕ್ಕೆ ನವೀನ್ ಈಜೇರಿ ಆಯ್ಕೆ

ಸಮಗ್ರ ನ್ಯೂಸ್: ವಿಜಯಪುರ ಜಿಲ್ಲೆ ತಾಳಿಕೋಟೆಯ ಕ್ರೀಡಾಪಟು ನವೀನಕುಮಾರ ಸಂಗಪ್ಪ ಈಜೇರಿ ಕರ್ನಾಟಕ ರಾಜ್ಯ ಹ್ಯಾಂಡ್‌ಬಾಲ್ ತಂಡಕ್ಕೆ ಆಯ್ಕೆಯಾಗಿದ್ದಾರೆ. ಈಚೆಗೆ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಿ ಉತ್ತಮ ಆಟ ಪ್ರದರ್ಶನ ನೀಡುವ ಮೂಲಕ ಹ್ಯಾಂಡ್‌ಬಾಲ್ ತಂಡಕ್ಕೆ ಆಯ್ಕೆಯಾಗಿದ್ದಾರೆ. ಉತ್ತರಪ್ರದೇಶದ ಲಕ್ಕೋದ ಕೆ.ಡಿ.ಸಿಂಗ್ ಸ್ಟೇಡಿಯಂನಲ್ಲಿ ರಾಷ್ಟ್ರಮಟ್ಟದ ಹ್ಯಾಂಡ್ ಬಾಲ್ ಕ್ರೀಡಾಕೂಟದಲ್ಲಿ ಭಾಗವಹಿಸುವ ಕರ್ನಾಟಕ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ರಾಜ್ಯ ಹ್ಯಾಂಡ್‌ಬಾಲ್ ತಂಡಕ್ಕೆ ನವೀನ್ ಈಜೇರಿ ಆಯ್ಕೆ Read More »

ಪ್ಲಾಸ್ಟಿಕ್‌ ಮುಕ್ತ ದಸರಾ ಆಚರಣೆಗೆ ಮುಂದಾದ ರಾಜವಂಶಸ್ಥರು

ಸಮಗ್ರ ನ್ಯೂಸ್: ಈ ವರ್ಷ ಪ್ಲಾಸ್ಟಿಕ್ ಮುಕ್ತ ಮೈಸೂರು ದಸರಾ ಆಚರಣೆಗಾಗಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಯದುವಂಶದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಮುಂದಾಗಿದ್ದಾರೆ. ಜಿಎಸ್‌ಎಸ್ ಯೋಗಸಂಸ್ಥೆಯು ಅಭಿಯಾನ ಆಯೋಜಿಸಿದ್ದು, ದಸರಾ ಕಾರ್ಯಕ್ರಮ ಹಾಗೂ ಪ್ರವಾಸಿ ತಾಣದಲ್ಲಿ ಪ್ಲಾಸ್ಟಿಕ್ ಬಳಸದಂತೆ ಜಾಗೃತಿ ಮೂಡಿಸಲು ಯತ್ನಿಸುತ್ತಿದೆ. ಅಭಿಯಾನಕ್ಕೆ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಜೊತೆಯಾಗಿದ್ದು, ವಿಡಿಯೋ ಸಂದೇಶದ ಮೂಲಕ ಪ್ಲಾಸ್ಟಿಕ್ ಬಳಸದಂತೆ ಮನವಿ ಮಾಡಿದ್ದಾರೆ.

ಪ್ಲಾಸ್ಟಿಕ್‌ ಮುಕ್ತ ದಸರಾ ಆಚರಣೆಗೆ ಮುಂದಾದ ರಾಜವಂಶಸ್ಥರು Read More »

ನಾಡಹಬ್ಬ ದಸರಾ ಪ್ರಯುಕ್ತ | ಊಟಿ ಸೇರಿದಂತೆ ವಿವಿಧ ಕಡೆ ಸಾರಿಗೆ ಸಂಸ್ಥೆಯಿಂದ ವಿಶೇಷ ಪ್ಯಾಕೇಜ್‌

ಸಮಗ್ರ ನ್ಯೂಸ್: ನಾಡಹಬ್ಬ ದಸರಾ ಪ್ರಯುಕ್ತ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಮೈಸೂರಿಗೆ ಬರುವ ಪ್ರವಾಸಿಗರ ಅನುಕೂಲಕ್ಕಾಗಿ ಒಂದು ದಿನದ ವಿಶೇಷ ಪ್ಯಾಕೇಜ್ ವ್ಯವಸ್ಥೆ ಕಲ್ಪಿಸಿದೆ. ಗಿರಿದರ್ಶಿನಿ: ಬಂಡೀಪುರ, ಗೋಪಾಲಸ್ವಾಮಿ ಬೆಟ್ಟ, ಬಿಳಿಗಿರಿರಂಗನ ಬೆಟ್ಟ, ನಂಜನಗೂಡು ಮತ್ತು ಚಾಮುಂಡಿ ಬೆಟ್ಟ ಸುತ್ತಾಡಲು ಅವಕಾಶವಿದ್ದು, ವಯಸ್ಕರಿಗೆ ₹ 400, ಮಕ್ಕಳಿಗೆ 250 ರೂ ದರ ನಿಗದಿಪಡಿಸಿದೆ. ಜಲದರ್ಶಿನಿ: ಗೋಲ್ಡನ್ ಟೆಂಪಲ್ (ಬೈಲಕುಪ್ಪೆ), ದುಬಾರೆ ಅರಣ್ಯ ನಿಸರ್ಗಧಾಮ, ರಾಜಾಸೀಟ್, ಹಾರಂಗಿ ಜಲಾಶಯ ಮತ್ತು ಕೆ.ಆರ್.ಎಸ್. ( ವಯಸ್ಕರಿಗೆ 450ರೂ ,

ನಾಡಹಬ್ಬ ದಸರಾ ಪ್ರಯುಕ್ತ | ಊಟಿ ಸೇರಿದಂತೆ ವಿವಿಧ ಕಡೆ ಸಾರಿಗೆ ಸಂಸ್ಥೆಯಿಂದ ವಿಶೇಷ ಪ್ಯಾಕೇಜ್‌ Read More »

ಮಂಗಳೂರು ವಿವಿ ವಿಭಜನೆ| ಶೀಘ್ರದಲ್ಲೇ ಕೊಡಗು ವಿಶ್ವವಿದ್ಯಾಲಯ ಅಸ್ತಿತ್ವಕ್ಕೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ, ಉಡುಪಿ ಹಾಗೂ ಕೊಡಗು ಜಿಲ್ಲೆಗಳನ್ನು ಒಳಗೊಂಡಿದ್ದ ಮಂಗಳೂರು ವಿಶ್ವವಿದ್ಯಾನಿಲಯವು ಇನ್ನು ಮುಂದೆ ಕೊಡಗು ಜಿಲ್ಲೆಯ ಶೈಕ್ಷಣಿಕ ಚಟುವಟಿಕೆಯ ಅಧಿಕಾರವನ್ನು ಕಳೆದುಕೊಳ್ಳಲಿದೆ. ಕೊಡಗು ಜಿಲ್ಲೆಗೆ ಸಂಬಂಧಿಸಿದ 24 ಕಾಲೇಜುಗಳು ಹೊಸದಾಗಿ ನಿರ್ಮಾಣವಾಗಲಿರುವ ಕೊಡಗು ವಿ.ವಿ.ಗೆ ಸೇರ್ಪಡೆಯಾಗಲಿದೆ. ಮಂಗಳೂರು ವಿ.ವಿ.ಯಲ್ಲಿ 215 ಕಾಲೇಜುಗಳು ಸಂಯೋಜಿತಗೊಂಡಿದ್ದು, ಅವುಗಳಲ್ಲಿ 24 ಕಾಲೇಜುಗಳು ಕೊಡಗು ವಿ.ವಿ.ಯ ಪಾಲಾಗಲಿವೆ. ಮಡಿಕೇರಿಯ ಫೀಲ್ಡ್‌ ಮಾರ್ಷಲ್‌ ಕಾರ್ಯಪ್ಪ ಕಾಲೇಜು, ಚಿಕ್ಕಳುವಾರದಲ್ಲಿರುವ ಮಂಗಳೂರು ವಿ.ವಿ. ಸ್ನಾತಕೊಕೋತ್ತರ ಹಾಗೂ ಸಂಶೋಧನ ಕೇಂದ್ರ ಸೇರಿದಂತೆ ಅಲ್ಲಿನ ಸರಕಾರಿ

ಮಂಗಳೂರು ವಿವಿ ವಿಭಜನೆ| ಶೀಘ್ರದಲ್ಲೇ ಕೊಡಗು ವಿಶ್ವವಿದ್ಯಾಲಯ ಅಸ್ತಿತ್ವಕ್ಕೆ Read More »

ಕೇರಳ: ಕಲ್ಲು ತೂರಾಟದಿಂದ ಪಾರಾಗಲು ಹೆಲ್ಮೆಟ್ ಧರಿಸಿ ಬಸ್ ಚಲಿಸಿದ ಚಾಲಕ

ತಿರುವನಂತಪುರಂ: ಕೇರಳದ ಕೆಎಸ್‍ಆರ್‌ಟಿಸಿ ಚಾಲಕರೊಬ್ಬರು ರಾಜ್ಯದಲ್ಲಿ ನಡೆಯುತ್ತಿರುವ ಕಲ್ಲು ತೂರಾಟದಿಂದ ರಕ್ಷಿಸಿಕೊಳ್ಳಲು ಬಸ್ ಚಾಲನೆ ಮಾಡುವಾಗ ಹೆಲ್ಮೆಟ್ ಧರಿಸಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಗುರುವಾರ ಎನ್‍ಐಎ ನಡೆಸಿದ್ದ ದಾಳಿ ವಿರೋಧಿಸಿ ಇಡೀ ದಿನ ಕೇರಳ ಬಂದ್‌ಗೆ ಪಿಎಫ್‍ಐ (PFI) ಕರೆ ನೀಡಿದೆ. ಈ ಹಿನ್ನೆಲೆಯಲ್ಲಿ ಬಂದ್‌ ಹಿಂಸಾಚಾರ ನಡೆದಿದ್ದು, ಕೇರಳದ ಆಲುವಾ ಬಸ್ ಹಾಗೂ ಖಾಸಗಿ ವಾಹನಗಳ ಮೇಲೆ ಕಲ್ಲು ತೂರಾಟ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಕೇರಳದ ಕೆಎಸ್‍ಆರ್‌ಟಿಸಿ ಚಾಲಕನೊಬ್ಬ ತನ್ನನ್ನು ತಾನೂ ರಕ್ಷಿಸಿಕೊಳ್ಳಲು ಹೆಲ್ಮೆಟ್

ಕೇರಳ: ಕಲ್ಲು ತೂರಾಟದಿಂದ ಪಾರಾಗಲು ಹೆಲ್ಮೆಟ್ ಧರಿಸಿ ಬಸ್ ಚಲಿಸಿದ ಚಾಲಕ Read More »

ಮದುವೆ ಆಗಿ ಒಂದು ವರ್ಷಕ್ಕೆ ಕೈಕೊಟ್ಟ ಪತಿ| ದಿಕ್ಕೆಟ್ಟ ಪತ್ನಿಯಿಂದ ಪತಿ ಸೇರಿ 16 ಮಂದಿ ವಿರುದ್ದ ದೂರು

ಸಮಗ್ರ ನ್ಯೂಸ್: ಪ್ರೀತಿಸಿ ವಿವಾಹವಾದ ಒಂದೇ ವರ್ಷಕ್ಕೆ ಸಂಸಾರದಲ್ಲಿ ಬಿರುಕು ಬಿಟ್ಟಿದ್ದು,‌‌ಪತ್ನಿಗೆ ಪತಿ ಕೈಕೊಟ್ಟಿರುವ ಘಟನೆ ಮೈಸೂರು‌ ಜಿಲ್ಲೆಯ ಹುಣಸೂರಿನಿಂದ ವರದಿಯಾಗಿದೆ. ಹೆತ್ತವರು ಹಾಗೂ ಸಂಬಂಧಿಕರ ಮಾತು ಕೇಳಿ ಪತಿ ಕೈಕೊಟ್ಟಿದ್ದು, ಜಾತಿ ನಿಂದನೆ ಮಾಡಿ ಅಪಪ್ರಚಾರ ಮಾಡಿ ಕೊಲೆ ಬೆದರಿಕೆ ಹಾಕಿ ಪತ್ನಿಯನ್ನ ದೂರ ಮಾಡಿದ ಹಿನ್ನಲೆ ವಂಚನೆಗೆ ಒಳಗಾದ ವಿವಾಹಿತೆ ನ್ಯಾಯಕ್ಕಾಗಿ ಹುಣಸೂರು ಗ್ರಾಮಾಂತರ ಠಾಣೆ ಪೊಲೀಸರ ಮೊರೆ ಹೋಗಿದ್ದಾರೆ.ಗಂಡ ಸೇರಿದಂತೆ ಒಂದೇ ಕುಟುಂಬದ 16 ಮಂದಿ ಮೇಲೆ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ

ಮದುವೆ ಆಗಿ ಒಂದು ವರ್ಷಕ್ಕೆ ಕೈಕೊಟ್ಟ ಪತಿ| ದಿಕ್ಕೆಟ್ಟ ಪತ್ನಿಯಿಂದ ಪತಿ ಸೇರಿ 16 ಮಂದಿ ವಿರುದ್ದ ದೂರು Read More »

ಚಿಕ್ಕಮಗಳೂರು : ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ| ಸಂಘಟನೆಯಿಂದ ತೀವ್ರ ಅಕ್ರೋಶ

ಸಮಗ್ರ ನ್ಯೂಸ್: ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಮಾಡಿದ ಹಿನ್ನಲೆ ಸಂಘಟನೆಯಿಂದ ತೀವ್ರ ಅಕ್ರೋಶ ಹೊರಹಾಕಿದ ಘಟನೆ ಚಿಕ್ಕಮಗಳೂರು ನಗರದ ಹನುಮಂತಪ್ಪ ವೃತ್ತ ಬಳಿ ನಡೆದಿದೆ. ನಗರದ ಹನುಮಂತ ವೃತ್ತದಲ್ಲಿ ಹಾಕಿದ್ದ ಫ್ಲೆಕ್ಸ್ ನಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಆಗಿರುವುದನ್ನು ಖಂಡಿಸಿ ದಲಿತ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ವಿಷಯ ತಿಳಿದು ಹಲವಾರು ಸಂಘಟನೆ ಕಾರ್ಯಕರ್ತರು ಈ ಸ್ಥಳಕ್ಕೆ ಬಂ‌ದಿದ್ದು, ಈ ಕುರಿತು ಮುಂಜಾಗ್ರತಾ ಕ್ರಮವಾಗಿ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಅಳವಡಿಸಲಾಗಿದೆ. ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಮಾಡಿದವರ

ಚಿಕ್ಕಮಗಳೂರು : ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ| ಸಂಘಟನೆಯಿಂದ ತೀವ್ರ ಅಕ್ರೋಶ Read More »

NIA ದಾಳಿ ಖಂಡಿಸಿ ಪಿಎಫ್ಐ, ಎಸ್ಡಿಪಿಐ ನಿಂದ ಕೇರಳ ಬಂದ್| ಬಸ್ ಗಳಿಗೆ ಕಲ್ಲೇಟು, ಅಲ್ಲಲ್ಲಿ ಪ್ರತಿಭಟನೆ

ಸಮಗ್ರ ನ್ಯೂಸ್: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕಚೇರಿ ಮೇಲೆ ಎನ್‌ಐಎ ದಾಳಿ ಬೆನ್ನಲ್ಲೇ ಕೇರಳ ಬಂದ್‌ಗೆ ಪಿಎಫ್‌ಐ ಕರೆ ನೀಡಿದೆ. ಪಿಎಫ್‌ಐ ಕಾರ್ಯಕರ್ತರು ಆಲುವಾದಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳಿಗೆ ಕಲ್ಲು ತೂರಾಟ ಮಾಡಲಾಗಿದ್ದು, ಬಸ್ಸಿನ ಕನ್ನಡಿಗಳು ಒಡೆದು ಹಾನಿ ಮಾಡಿದ್ದಾರೆ. ದೇಶದಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ಬೆಂಬಲಿಸುತ್ತಿದ್ದಾರೆಂದು ಆರೋಪಿಸಿ 15 ರಾಜ್ಯಗಳಲ್ಲಿ ಪಿಎಫ್‌ಐ ಮುಖಂಡರ ಕಚೇರಿಗಳು ಮತ್ತು ನಿವಾಸಗಳ ಮೇಲೆ ದಾಳಿ ನಡೆಸಲಾಗಿದೆ. ಎನ್‌ಐಎ ನೇತೃತ್ವದ ಬಹು ಏಜೆನ್ಸಿ ತನಿಖಾ ತಂಡಗಳು ನಡೆಸಿದ ದಾಳಿಗಳು, 106 ನಾಯಕರು ಮತ್ತು

NIA ದಾಳಿ ಖಂಡಿಸಿ ಪಿಎಫ್ಐ, ಎಸ್ಡಿಪಿಐ ನಿಂದ ಕೇರಳ ಬಂದ್| ಬಸ್ ಗಳಿಗೆ ಕಲ್ಲೇಟು, ಅಲ್ಲಲ್ಲಿ ಪ್ರತಿಭಟನೆ Read More »

ಈ‌ ಮುದ್ದಾದ ಅಕ್ಷರಗಳಿಂದಲೇ ಈ ಡಾಕ್ಟರ್ ಪೇಮಸ್| ಇವರ ಔಷಧ ಚೀಟಿಗೆ ಜನ ಫಿದಾ!!

ಸಮಗ್ರ ನ್ಯೂಸ್: ಔಷಧ ಚೀಟಿಯ ಮೇಲೆ ಬರೆಯುವ ವೈದ್ಯರ ಬರವಣಿಗೆಯು ಮೆಡಿಕಲ್​ ಶಾಪ್​ ಸಿಬ್ಬಂದಿಗೆ ಮಾತ್ರ ಅರ್ಥವಾಗುತ್ತದೆ. ಬಹುತೇಕ ವೈದ್ಯರು ಬರಹ ಅಸ್ಪಷ್ಟವಾಗಿರುತ್ತದೆ. ಜನಸಾಮಾನ್ಯರಿಗೆ ಅದರ ಮೊದಲ ಅಕ್ಷರ ಬಿಟ್ರೆ ಬೇರೇನೂ ಗೊತ್ತಾಗದು. ಆದರೆ ಇಲ್ಲೊಬ್ಬ ಡಾಕ್ಟರ್ ಈಗ ಈ ಅಪವಾದಕ್ಕೆ ಹೊರತಾಗಿದ್ದಾರೆ. ಕೇರಳದ ಮಕ್ಕಳ ತಜ್ಞರೊಬ್ಬರು ಬರೆದಿರುವ ಔಷಧ ಚೀಟಿಯು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿದೆ. ಕೇರಳದ ಪಾಲಕ್ಕಾಡ್‌ನಲ್ಲಿರುವ ಸಮುದಾಯ ಆರೋಗ್ಯ ಕೇಂದ್ರದ (ಸಿಎಚ್‌ಸಿ) ಡಾ. ನಿತಿನ್ ನಾರಾಯಣನ್ ಅವರು ತಮ್ಮ ಔಷಧ ಚೀಟಿಯಿಂದಲೇ ಸಾಮಾಜಿಕ

ಈ‌ ಮುದ್ದಾದ ಅಕ್ಷರಗಳಿಂದಲೇ ಈ ಡಾಕ್ಟರ್ ಪೇಮಸ್| ಇವರ ಔಷಧ ಚೀಟಿಗೆ ಜನ ಫಿದಾ!! Read More »

ಕೊಕ್ಕಡ: ವಿದ್ಯುತ್ ಸಂಪರ್ಕ ಕಡಿತಗೊಳಿಸಿದ ಲೈನ್ ಮ್ಯಾನ್ ಮೇಲೆ ಮಾರಣಾಂತಿಕ ಹಲ್ಲೆ

ಬೆಳ್ತಂಗಡಿ: ವಿದ್ಯುತ್ ಬಿಲ್ ಪಾವತಿಸದ ಹಿನ್ನಲೆ ಕರೆಂಟ್ ಕಟ್ ಮಾಡಿದ್ದಕ್ಕೆ ಲೈನ್ ಮ್ಯಾನ್ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಜಂಕ್ಷನ್ ನಲ್ಲಿ ಗುರುವಾರ ರಾತ್ರಿ ಸಂಭವಿಸಿದೆ. ಹಲ್ಲೆ ನಡೆಸಿದಾತನನ್ನು ಹತ್ಯಡ್ಕ ಗ್ರಾಮದ ಅಡ್ಕಾಡಿ ನಿವಾಸಿ ರಿಜೀಶ್ (38) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಮೆಸ್ಕಾಂ ಪವರ್ ಮ್ಯಾನ್ ದುಂಡಪ್ಪ ಅವರ ತಲೆಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಹತ್ಯಡ್ಕ ಗ್ರಾಮದ ಅಡ್ಕಾಡಿ ನಿವಾಸಿ ದಿ. ಕಾಂತು ಪೂಜಾರಿ ಎಂಬುವವರ ಮನೆಯ ಕರೆಂಟ್ ಬಿಲ್

ಕೊಕ್ಕಡ: ವಿದ್ಯುತ್ ಸಂಪರ್ಕ ಕಡಿತಗೊಳಿಸಿದ ಲೈನ್ ಮ್ಯಾನ್ ಮೇಲೆ ಮಾರಣಾಂತಿಕ ಹಲ್ಲೆ Read More »