ಸಮಗ್ರ ಸಮಾಚಾರ

ಸುಳ್ಯ: ಸರ್ಕಾರಿ ಜಾಗ ಅತಿಕ್ರಮಣಕ್ಕೆ ಯತ್ನ..! ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ಪ್ರತಿಭಟನೆಯ ಎಚ್ಚರಿಕೆ|

ಸಮಗ್ರ ನ್ಯೂಸ್: ಸರಕಾರಿ ಜಾಗವನ್ನು ಅತಿಕ್ರಮಣಕ್ಕೆ ಯತ್ನಿಸಿದ್ದು, ಈ ಬಗ್ಗೆ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದಿರುವ ಘಟನೆ ಸುಳ್ಯ ನಗರದ ಜಯನಗರ ಎಂಬಲ್ಲಿ ನಡೆದಿದೆ. ಜಯನಗರದ ಸರಕಾರಿ ಶಾಲೆಯ ಸಮೀಪ ಗೋಪಾಲ್ ನಾಯಕ್ ಎಂಬವರಿಗೆ ವಾಸಿಸಲು ಮನೆ ಮತ್ತು ಖಾಲಿ ಜಾಗವಿದ್ದರೂ ಸರಕಾರಿ ಜಾಗವನ್ನು ಅತಿಕ್ರಮಣ ಮಾಡಲು ಸೆ.16 ರಂದು ಜೆ.ಸಿ.ಬಿ ತರಿಸಿ ಕೆಲಸ ಪ್ರಾರಂಭಿಸಿದ್ದರು. ಈ ವೇಳೆ ಸ್ಥಳೀಯರಾದ ಹಸೈನಾರ್ ಜಯನಗರ ಎಂಬವರು ಇದನ್ನು ತಡೆ ಹಿಡಿದು, ಈ ಬಗ್ಗೆ ಸಂಬಂದಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, […]

ಸುಳ್ಯ: ಸರ್ಕಾರಿ ಜಾಗ ಅತಿಕ್ರಮಣಕ್ಕೆ ಯತ್ನ..! ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ಪ್ರತಿಭಟನೆಯ ಎಚ್ಚರಿಕೆ| Read More »

ದೇವಸ್ಥಾನದಲ್ಲಿ ನಡೆಯಿತು ‘ಪ್ಯಾಷನ್ ಶೋ’| ಭಜರಂಗದಳದಿಂದ ದೂರು ದಾಖಲು

ಸಮಗ್ರ ನ್ಯೂಸ್: ದೇವಸ್ಥಾನದಲ್ಲಿ ‘ಫ್ಯಾಷನ್ ಶೋ’ ಆಯೋಜಿಸಿದ್ದನ್ನು ಭಜರಂಗ ದಳದ ಕಾರ್ಯಕರ್ತರು ಆಕ್ಷೇಪಿಸಿರುವ ಘಟನೆ ಛತ್ತೀಸ್ ಗಢ ರಾಜ್ಯದ ರಾಯ್ಪುರದ ಬಾಲಾಜಿ ದೇವಸ್ಥಾನದಲ್ಲಿ ‌ನಡೆದಿದೆ. ಇದರಿಂದ ಧಾರ್ಮಿಕ ಭಾವನೆಗೆ ಧಕ್ಕೆ ತಂದ ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸುವುದಾಗಿ ಭಜರಂಗ ದಳ ಹೇಳಿದೆ. ಟೆಲಿಬಂಡಾ ಪೊಲೀಸ್ ಠಾಣೆ ವ್ಯಾಪ್ತಿಯ ಸಾಲಸರ್ ದೇವಸ್ಥಾನದಲ್ಲಿ ಭಾನುವಾರ ಎಫ್‌ಡಿಸಿಎ ಹೆಸರಿನ ಕಂಪನಿಯು ‘ಫ್ಯಾಷನ್ ಶೋ’ ಆಯೋಜಿಸಿದೆ. ಆರಿಫ್ ಮತ್ತು ಮನೀಶ್ ಸೋನಿ ಎಂಬುವವರೇ ಈ ‘ಫ್ಯಾಶನ್ ಶೋ’ದ ಆಯೋಜಕರು ಎಂದು ವರದಿಯಾಗಿದೆ. ಧಾರ್ಮಿಕ

ದೇವಸ್ಥಾನದಲ್ಲಿ ನಡೆಯಿತು ‘ಪ್ಯಾಷನ್ ಶೋ’| ಭಜರಂಗದಳದಿಂದ ದೂರು ದಾಖಲು Read More »

ಬೆಳಗಾವಿ: ರಸ್ತೆ ಸುರಕ್ಷತಾ ತಡೆಗೋಡೆಯ ನಿರ್ಮಿಸಲು ಸಮೀಕ್ಷೆ ನಡೆಸಿದ ಅಧಿಕಾರಿಗಳು

ಸಮಗ್ರ ನ್ಯೂಸ್: ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಉಗಾರಖುರ್ದ ಪಟ್ಟಣ ಹಾಗೂ ಉಗಾರ ಬುದ್ರುಕ ಗ್ರಾಮದ ಮಾರ್ಗದ ರಸ್ತೆಯ ಬಗ್ಗೆ ‘ಸಮಗ್ರ ಸಮಾಚಾರ’ ಅಧಿಕಾರಿಗಳು ನಿರ್ಲಕ್ಷ್ಯಕ್ಕೆ ನೆಲಕ್ಕೆ ಉರುಳಿದ ಗೂಡ್ಸ್ ವಾಹನ ಎಂಬ ಶೀರ್ಷಿಕೆಯ‌ಡಿಯಲ್ಲಿ ವರದಿ ಬಿತ್ತರಿಸಿತ್ತು. ವರದಿ ಬಿತ್ತರವಾಗುತ್ತಿದಂತೆ ರಸ್ತೆ ತಡೆಗೋಡೆಯ ನಿರ್ಮಾಣಕ್ಕೆ ಅಧಿಕಾರಿಗಳು ಸಮೀಕ್ಷೆ ಮಾಡಿದ್ದಾರೆ. ಇನ್ನು ಕೆಲವೇ ದಿನಗಳಲ್ಲಿ ರಸ್ತೆಗೆ ಸುರಕ್ಷತಾ ತಡೆಗೋಡೆಯನ್ನು ನಿರ್ಮಾಣ ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇನ್ನು ಸಮಗ್ರ ಸಮಾಚಾರ ವರದಿಗೆ ಸಾರ್ವಜನಿಕರು ಮೆಚ್ಚುಗೆಯನ್ನು ‌ವ್ಯಕ್ತಪಡಿಸಿದ್ದಾರೆ.

ಬೆಳಗಾವಿ: ರಸ್ತೆ ಸುರಕ್ಷತಾ ತಡೆಗೋಡೆಯ ನಿರ್ಮಿಸಲು ಸಮೀಕ್ಷೆ ನಡೆಸಿದ ಅಧಿಕಾರಿಗಳು Read More »

ಮುಲ್ಕಿ: ಅನ್ಯಕೋಮಿನ ಯುವಕನ ಜೊತೆ ಪತ್ತೆಯಾದ ಹಿಂದೂ ಯುವತಿ| ಯುವಕ ಬಂಧನ; ಯುವತಿ ಪರಾರಿ

ಸಮಗ್ರ ನ್ಯೂಸ್: ಅನ್ಯ ಕೋಮಿನ ಯುವಕನೋರ್ವನ ಜೊತೆ ಯುವತಿಯೋರ್ವಳು ಪತ್ತೆಯಾಗಿದ್ದು, ಯುವಕ ಈಗ ಪೊಲೀಸರ ಅತಿಥಿಯಾಗಿರುವ ಘಟನೆಯೊಂದು ನಡೆದಿದೆ. ಸ್ಥಳೀಯ ಯುವಕರ ಕಾರ್ಯಾಚರಣೆಯಿಂದ ಅನ್ಯಕೋಮಿನ ಯುವಕನ ಬಂಧನವಾಗಿದೆ. ಈ ಘಟನೆ ಮಂಗಳೂರು ಹೊರವಲಯದ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕೆಎಸ್ ರಾವ್ ನಗರ ಪೊಲೀಸ್ ಕ್ವಾರ್ಟರ್ಸ್ ಬಳಿ ನಡೆದಿದೆ. ಫಯಿಮ್ ಎಂಬಾತನೇ ಬಂಧಿತ ವ್ಯಕ್ತಿ. ಉಡುಪಿಯ ಕಟಪಾಡಿಯಲ್ಲಿ ವಾಸ್ತವ್ಯವಿರುವ ಉತ್ತರ ಪ್ರದೇಶ ಮೂಲದ ಈತ ಕಟಪಾಡಿಯಲ್ಲಿ ಸೆಲೂನ್ ಅಂಗಡಿಯಲ್ಲಿ ಕೆಲಸಕ್ಕಿದ್ದು ತನ್ನ ಮಿತ್ರ ಗುಲ್ಬಾಮ್ ಎಂಬವರ ರೂಮ್‌ಗೆ

ಮುಲ್ಕಿ: ಅನ್ಯಕೋಮಿನ ಯುವಕನ ಜೊತೆ ಪತ್ತೆಯಾದ ಹಿಂದೂ ಯುವತಿ| ಯುವಕ ಬಂಧನ; ಯುವತಿ ಪರಾರಿ Read More »

ಕರಾವಳಿ ಜಿಲ್ಲೆಗಳಲ್ಲಿ ಕುಚಲಕ್ಕಿ ವಿತರಣೆಗೆ ರಾಜ್ಯಸರ್ಕಾರ ಸಮ್ಮತಿ

ಸಮಗ್ರ ನ್ಯೂಸ್: ರಾಜ್ಯದ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಜನರ ಪ್ರಮುಖ ಆಹಾರವಾಗಿರುವ ಕುಚಲಕ್ಕಿಯನ್ನು ಗುಣಮಟ್ಟದಲ್ಲಿ ಪಡಿತರದಾರರಿಗೆ ವಿತರಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮ್ಮತಿಸಿದ್ದಾರೆ. ರಾಜ್ಯ ಬಿಜೆಪಿ ಅಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ, ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ನಿರ್ಮಲ್ ಕುಮಾರ್ ಸುರಾಣಾ ಹಾಗೂ ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಉಪಾಧ್ಯಕ್ಷ ಕಿರಣ್

ಕರಾವಳಿ ಜಿಲ್ಲೆಗಳಲ್ಲಿ ಕುಚಲಕ್ಕಿ ವಿತರಣೆಗೆ ರಾಜ್ಯಸರ್ಕಾರ ಸಮ್ಮತಿ Read More »

ಯೋಗಿನಾಡಲ್ಲಿ ದಲಿತ ಅಪ್ರಾಪ್ತ ಸಹೋದರಿಯರ ಮೇಲೆ ಅತ್ಯಾಚಾರವೆಸಗಿ ಕೊಲೆ| ಮತ್ತೊಂದು ಕರಾಳ ಘಟನೆಗೆ ಸಾಕ್ಷಿಯಾಯ್ತು ಲಖೀಂಪುರ

ಸಮಗ್ರ ನ್ಯೂಸ್: ಯೋಗಿ ಆದಿತ್ಯನಾಥ್ ರವರ ರಾಜ್ಯ ಉತ್ತರ ಪ್ರದೇಶದ ಲಖೀಂಪುರಖೇರಿಯಲ್ಲಿ ಇಬ್ಬರು ದಲಿತ ಸಹೋದರಿಯರು ಮರಕ್ಕೆ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಅಪ್ರಾಪ್ತ ವಯಸ್ಸಿನ ಈ ಬಾಲಕಿಯರ ಮೇಲೆ ಅತ್ಯಾಚಾರ ಮತ್ತು ಕೊಲೆ ಮಾಡಲಾಗಿದೆ ಅನ್ನೋ ಆರೋಪ ಕೇಳಿಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೂ ಆರು ಮಂದಿಯನ್ನು ಬಂಧಿಸಲಾಗಿದೆ. 15 ಮತ್ತು 17 ವರ್ಷದ ಈ ಹೆಣ್ಣುಮಕ್ಕಳನ್ನು ಇಬ್ಬರು ಆರೋಪಿಗಳು ಮದುವೆ ಮಾಡಿಕೊಳ್ಳುವುದಾಗಿ ಹೇಳಿ, ನಾಲ್ವರ ಜತೆಗೆ ಸೇರಿಕೊಂಡು ಅತ್ಯಾಚಾರ ಎಸಗಿ, ಕತ್ತುಹಿಸುಕಿ ಕೊಂದಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಯೋಗಿನಾಡಲ್ಲಿ ದಲಿತ ಅಪ್ರಾಪ್ತ ಸಹೋದರಿಯರ ಮೇಲೆ ಅತ್ಯಾಚಾರವೆಸಗಿ ಕೊಲೆ| ಮತ್ತೊಂದು ಕರಾಳ ಘಟನೆಗೆ ಸಾಕ್ಷಿಯಾಯ್ತು ಲಖೀಂಪುರ Read More »

ಮತಾಂತರ ನಿಷೇಧ ವಿಧೇಯಕ ಮೇಲ್ಮನೆಯಲ್ಲಿ ಪಾಸ್| ಪ್ರತಿಹರಿದು ಕಾಂಗ್ರೆಸ್ ಆಕ್ರೋಶ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಬಲವಂತದ ಮತಾಂತರಕ್ಕೆ ಬ್ರೇಕ್ ಬೀಳಲಿದೆ. ಯಾಕೆಂದರೆ ವಿಧಾನ ಪರಿಷತ್‍ನಲ್ಲಿ ಮತಾಂತರ ನಿಷೇಧ ವಿಧೇಯಕಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ವಿಧಾನಸಭೆಯಿಂದ ಅಂಗೀಕಾರವಾದ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕ 2022ನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ವಿಧಾನ ಪರಿಷತ್‌ನಲ್ಲಿ ಇಂದು ಮಂಡನೆ ಮಾಡಿದರು. ವಿಧೇಯಕ ಅಂಗೀಕಾರವಾಗಿದ್ದು ಮತ್ತೊಂದೆಡೆ ಮತಾಂತರ ನಿಷೇಧ ವಿಧೇಯಕ್ಕೆ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಪಡಿಸಿದೆ. ಕಾಂಗ್ರೆಸ್ ನಾಯಕ ಬಿಕೆ ಹರಿಪ್ರಸಾದ್ ಬಿಲ್‌ನ ಪ್ರತಿಯನ್ನು ಹರಿದು ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕರ್ನಾಟಕದಲ್ಲಿ

ಮತಾಂತರ ನಿಷೇಧ ವಿಧೇಯಕ ಮೇಲ್ಮನೆಯಲ್ಲಿ ಪಾಸ್| ಪ್ರತಿಹರಿದು ಕಾಂಗ್ರೆಸ್ ಆಕ್ರೋಶ Read More »

ಮೈಸೂರು ದಸರಾಗೆ ಮೋದಿ ಬರ್ತಾ ಇಲ್ಲ| ಪಿಎಂ ಕಚೇರಿಯಿಂದ‌ ರವಾನೆಯಾಗಿದೆ ಮಾಹಿತಿ

ಸಮಗ್ರ ನ್ಯೂಸ್: ವಿಶ್ವವಿಖ್ಯಾತ ಮೈಸೂರು ದಸರಾ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಬರಲಿದ್ದಾರೆ. ಅವರು ದಸರಾ ಜಂಬೂಸವಾರಿಯನ್ನು ಉದ್ಘಾಟಿಸಲಿದ್ದಾರೆ ಎನ್ನಲಾಗಿತ್ತು. ಆದ್ರೇ ಪ್ರಧಾನಿ ಮೋದಿ ದಸರಾ ಮಹೋತ್ಸವಕ್ಕೆ ಬರಲ್ಲ ಎಂಬುದಾಗಿ ಪಿಎಂ ಕಚೇರಿಯಿಂದ ಸಿಎಂ ಕಚೇರಿಗೆ ಮಾಹಿತಿ ನೀಡಲಾಗಿದೆ ಎನ್ನಲಾಗಿದೆ. ಈ ಕುರಿತಂತೆ ಪಿಎಂ ಕಚೇರಿಯ ಉನ್ನತ ಮೂಲಗಳಿಂದ ತಿಳಿದು ಬಂದಿದ್ದು, ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯಕ್ರಮಗಳ ಪಟ್ಟಿಯಲ್ಲಿ ಬದಲಾವಣೆಯಾಗಿದೆ. ಅವರು ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಬರುವುದಿಲ್ಲ ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಕಚೇರಿಗೆ ಪಿಎಂ

ಮೈಸೂರು ದಸರಾಗೆ ಮೋದಿ ಬರ್ತಾ ಇಲ್ಲ| ಪಿಎಂ ಕಚೇರಿಯಿಂದ‌ ರವಾನೆಯಾಗಿದೆ ಮಾಹಿತಿ Read More »

ಗೂಡ್ಸ್‌ ಲಾರಿ ಢಿಕ್ಕಿ| ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿ ಮೃತ್ಯು

ಪಡುಬಿದ್ರಿ: ರಾಷ್ಟ್ರೀಯ ಹೆದ್ದಾರಿ 66ರ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಮುಂಭಾಗದಲ್ಲಿ ಬುಧವಾರ ಬೆಳ್ಳಂಬೆಳಗ್ಗೆ 6 ಗಂಟೆಗೆ ಸುಮಾರಿಗೆ ಅಪರಿಚಿತ ಗೂಡ್ಸ್‌ ಲಾರಿ ಢಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿ ಸಮರ್ಥ್ (14) ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾನೆ. ಸಮರ್ಥ್ ತಂದೆ ಪ್ರಭಾಕರ್ ನಿನ್ನೆ ಅಪಘಾತದ ಸ್ಥಳದಲ್ಲೇ ಮೃತಪಟ್ಟಿದ್ದರು. ಮೃತರಾದ ಪ್ರಭಾಕರ್ ಹಾಗೂ ಮಗ ಸಮರ್ಥ್ ಬೆಳಗಾವಿಯಿಂದ ಮಂಗಳವಾರ ರಾತ್ರಿ ಸರಕಾರಿ ಬಸ್ಸು ಮೂಲಕ ಹೊರಟು ಕಾಪು ಸಮೀಪದ ಕುತ್ಯಾರಿನ ಆನೆಗುಂದಿ ಸಂಸ್ಥಾನದ ವಿದ್ಯಾ ಸಂಸ್ಥೆಯಲ್ಲಿ ಓದುತ್ತಿದ್ದ ಮಗನನ್ನು

ಗೂಡ್ಸ್‌ ಲಾರಿ ಢಿಕ್ಕಿ| ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿ ಮೃತ್ಯು Read More »

ವಿಧಾನಸಭಾ ಕಲಾಪದ ನಡುವೆ ಸಮನ್ಸ್: ಡಿಕೆ ಶಿವಕುಮಾರ್ ಬೇಸರ

ಬೆಂಗಳೂರು: ಭಾರತ ಜೋಡೋ ಯಾತ್ರೆ, ವಿಧಾನಸಭಾ ಕಲಾಪದ ನಡುವೆ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿರುವುದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬೇಸರ ವ್ಯಕ್ತಪಡಿಸಿದ್ದಾರೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸಮನ್ಸ್ ನೀಡಿದ್ದಾರೆ. ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟ್ವೀಟ್ ಮಾಡಿ ಬೇಸರ ವ್ಯಕ್ತಪಡಿಸಿದ್ದಾರೆ. “ಭಾರತ ಜೋಡೋ ಯಾತ್ರೆಹಾಗೂ ವಿಧಾನಸಭಾ ಅಧಿವೇಶನ ನಡೆಯುತ್ತಿರುವ ಮಧ್ಯೆಯೇ ಮತ್ತೊಮ್ಮೆ ಇಡಿ ನನಗೆ ಸಮನ್ಸ್‌ ನೀಡಿದೆ” ಎಂದಿದ್ದಾರೆ. “ನಾನು ತನಿಖೆಗೆ ಸಹಕರಿಸಲು ಸಿದ್ಧ. ಆದರೆ, ಈ

ವಿಧಾನಸಭಾ ಕಲಾಪದ ನಡುವೆ ಸಮನ್ಸ್: ಡಿಕೆ ಶಿವಕುಮಾರ್ ಬೇಸರ Read More »