ಸುಳ್ಯ: ಸರ್ಕಾರಿ ಜಾಗ ಅತಿಕ್ರಮಣಕ್ಕೆ ಯತ್ನ..! ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ಪ್ರತಿಭಟನೆಯ ಎಚ್ಚರಿಕೆ|
ಸಮಗ್ರ ನ್ಯೂಸ್: ಸರಕಾರಿ ಜಾಗವನ್ನು ಅತಿಕ್ರಮಣಕ್ಕೆ ಯತ್ನಿಸಿದ್ದು, ಈ ಬಗ್ಗೆ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದಿರುವ ಘಟನೆ ಸುಳ್ಯ ನಗರದ ಜಯನಗರ ಎಂಬಲ್ಲಿ ನಡೆದಿದೆ. ಜಯನಗರದ ಸರಕಾರಿ ಶಾಲೆಯ ಸಮೀಪ ಗೋಪಾಲ್ ನಾಯಕ್ ಎಂಬವರಿಗೆ ವಾಸಿಸಲು ಮನೆ ಮತ್ತು ಖಾಲಿ ಜಾಗವಿದ್ದರೂ ಸರಕಾರಿ ಜಾಗವನ್ನು ಅತಿಕ್ರಮಣ ಮಾಡಲು ಸೆ.16 ರಂದು ಜೆ.ಸಿ.ಬಿ ತರಿಸಿ ಕೆಲಸ ಪ್ರಾರಂಭಿಸಿದ್ದರು. ಈ ವೇಳೆ ಸ್ಥಳೀಯರಾದ ಹಸೈನಾರ್ ಜಯನಗರ ಎಂಬವರು ಇದನ್ನು ತಡೆ ಹಿಡಿದು, ಈ ಬಗ್ಗೆ ಸಂಬಂದಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, […]










