ಸಮಗ್ರ ಸಮಾಚಾರ

“ವಶೀಕರಣ ಸ್ಪೆಷಲಿಸ್ಟ್ಗೆ” ಮಹಾ ಮಂಗಳಾರತಿ|ನಕಲಿ ಜ್ಯೋತಿಷಿಯ ಚಳಿ ಬಿಡಿಸಿದ ಸಾಮಾಜಿಕ ಕಾರ್ಯಕರ್ತ

ಸಮಗ್ರ ನ್ಯೂಸ್: ಸೋಷಿಯಲ್ ಮೀಡಿಯಾದಲ್ಲಿ “ವಶೀಕರಣ ಸ್ಪೆಷಲಿಸ್ಟ್” ಎಂದು ತೀರಾ ಅಶ್ಲೀಲವಾಗಿ ಜಾಹೀರಾತು ಹಾಕಿಕೊಂಡಿದ್ದಲ್ಲದೆ ಮಂಗಳೂರಿನ ಸ್ಟೇಟ್ ಬ್ಯಾಂಕ್, ಹಂಪನಕಟ್ಟೆ ಹಾಗೂ ಉಡುಪಿಯನ್ನು ಕಾರ್ಯಸ್ಥಾನ ಮಾಡಿಕೊಂಡಿದ್ದ ನಕಲಿ ಜ್ಯೋತಿಷಿಗೆ ಸಾಮಾಜಿಕ ಕಾರ್ಯಕರ್ತ ದೀಪು ಶೆಟ್ಟಿಗಾರ್ ಎಂಬವರು ಮಂಗಳಾರತಿ ಮಾಡಿದ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಕೇರಳ, ಶಿವಮೊಗ್ಗ, ಭದ್ರಾವತಿ, ಮೈಸೂರು, ಬೆಂಗಳೂರು, ಕೊಳ್ಳೇಗಾಲ ಕಡೆಯಿಂದ ಮಂಗಳೂರಿಗೆ ವಕ್ಕರಿಸುವ ಇವರು ಆಡಿದ್ದೇ ಆಟ ಎಂಬಂತಾಗಿದ್ದು ನಗರದ ಪ್ರಮುಖ ನಿಲ್ದಾಣಗಳಲ್ಲಿ ಲಾಡ್ಜ್, ಎಸಿ ರೂಮ್‌ಗಳಲ್ಲಿ […]

“ವಶೀಕರಣ ಸ್ಪೆಷಲಿಸ್ಟ್ಗೆ” ಮಹಾ ಮಂಗಳಾರತಿ|ನಕಲಿ ಜ್ಯೋತಿಷಿಯ ಚಳಿ ಬಿಡಿಸಿದ ಸಾಮಾಜಿಕ ಕಾರ್ಯಕರ್ತ Read More »

ನಾಳೆ ಮಂಗಳೂರಿಗೆ ಸಿಎಂ ಬೊಮ್ಮಾಯಿ ಭೇಟಿ

ಸಮಗ್ರ ನ್ಯೂಸ್: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನ. 19ರ ಶನಿವಾರ ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ. ಅವರು ಅಂದು ಬೆಳಿಗ್ಗೆ 9:30ಕ್ಕೆ ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ಹೊರಟು 10.30ಕ್ಕೆ ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವರು. ನಂತರ ಜಿಲ್ಲಾಡಳಿತ, ಕನ್ನಡ ಮತ್ತು ಸಂಸಂಸ್ಕೃತಿ ಇಲಾಖೆ, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯಗೌಡ ಸ್ಮಾರಕ ಉಸ್ತುವಾರಿ ಸಮಿತಿ(ರಿ), ವತಿಯಿಂದ ನಗರದ ಬಾವುಟಗುಡ್ಡೆಯಲ್ಲಿ ಆಯೋಜಿಸಿರುವ ಸ್ವಾತಂತ್ರ್ಯ ಹೋರಾಟಗಾರರಾದ ಶ್ರೀ ಕೆದಂಬಾಡಿ ರಾಮಯ್ಯಗೌಡರ ಪ್ರತಿಮೆ ಲೋಕಾರ್ಪಣೆ

ನಾಳೆ ಮಂಗಳೂರಿಗೆ ಸಿಎಂ ಬೊಮ್ಮಾಯಿ ಭೇಟಿ Read More »

ಶಾಲೆಗೆ ಹೋಗಿದ್ದ 7ನೇ ತರಗತಿ ಬಾಲಕಿ ನಿಗೂಢ ರೀತಿಯಲ್ಲಿ ನಾಪತ್ತೆ – ಶಾಲಾ ಆವರಣದಲ್ಲಿ ಬ್ಯಾಗ್ ಇಟ್ಟು ದಿಢೀರ್ ಕಣ್ಮರೆ

ಸಮಗ್ರ ನ್ಯೂಸ್: ಶಾಲೆಗೆ ತೆರಳಿದ್ದ ಏಳನೇ ತರಗತಿ ವಿದ್ಯಾರ್ಥಿನಿ ನಿಗೂಢ ರೀತಿಯಲ್ಲಿ ನಾಪತ್ತೆಯಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಅಣತಿ ಗ್ರಾಮದಲ್ಲಿ ನಡೆದಿದೆ. ದಾಸರಹಳ್ಳಿ ಗ್ರಾಮದ ಡಿ.ಬಿ.ಕುಮಾರ್ ಅವರ ಸಾಕು ಮಗಳು ನಂದಿತಾ ಕಾಣೆಯಾದಾಕೆ. ಅಣತಿ ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ ನಂದಿತಾ, ಸರ್ಕಾರಿ ಹಾಸ್ಟೆಲ್‍ನಲ್ಲಿದ್ದಳು. ನವೆಂಬರ್ 7ರಂದು ಸಂಜೆ 5 ಗಂಟೆ ಸುಮಾರಿಗೆ ಶಾಲೆ ಮುಗಿಸಿ ಹಾಸ್ಟೆಲ್‍ಗೆ ಹೋಗದೆ ನಾಪತ್ತೆಯಾಗಿದ್ದಾಳೆ. ಮೂಲತಃ ಕೆ.ಆರ್.ಪೇಟೆ, ತಾಲ್ಲೂಕಿನ ನಂಜೇಗೌಡ ಮಂಗಳ ದಂಪತಿ ಪುತ್ರಿ ನಂದಿತಾಳನ್ನು ತಾತ ಚನ್ನರಾಯಪಟ್ಟಣ ದಾಸರಹಳ್ಳಿ

ಶಾಲೆಗೆ ಹೋಗಿದ್ದ 7ನೇ ತರಗತಿ ಬಾಲಕಿ ನಿಗೂಢ ರೀತಿಯಲ್ಲಿ ನಾಪತ್ತೆ – ಶಾಲಾ ಆವರಣದಲ್ಲಿ ಬ್ಯಾಗ್ ಇಟ್ಟು ದಿಢೀರ್ ಕಣ್ಮರೆ Read More »

ಒತ್ತುವರಿ ಜಮೀನು ತೆರವಿಗೆ ಹೋದ ತಹಸೀಲ್ದಾರ್ ವಿರುದ್ದ ತಿರುಗಿಬಿದ್ದ ರೈತ| ಕರ್ತವ್ಯಕ್ಕೆ ಅಡ್ಡಿ ಆರೋಪ; ಬಂದ ದಾರಿಗೆ ಸುಂಕವಿಲ್ಲದಂತೆ ವಾಪಸ್

ಸಮಗ್ರ ನ್ಯೂಸ್: ಒತ್ತುವರಿ ಆಗಿದ್ದ ಸರ್ಕಾರಿ ಜಮೀನು ತೆರವಿಗೆ ಹೋದ ತಹಸೀಲ್ದಾರ್ ವಿರುದ್ದ ರೈತ ತಿರುಗಿಬಿದ್ದ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ರತ್ನಪುರಿ ಗ್ರಾಮದಲ್ಲಿ ನಡೆದಿದೆ.‌ ಜೆಸಿಬಿ ಯಂತ್ರದ ಮುಂದೆ ಕುಳಿತು ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾನೆ. ರೈತನ ಪಟ್ಟಿಗೆ ಮಣಿದ ಅಧಿಕಾರಿಗಳು ಬಂದ ದಾರಿಗೆ ಸುಂಕವಿಲ್ಲವೆಂಬಂತೆ ವಾಪಸ್ ಬಂದಿದ್ದಾರೆ. ರತ್ನಪುರಿ ಗ್ರಾಮದ ಸರ್ವೆ ನಂ 1369ರ 1.33 ಗುಂಟೆ ಜಮೀನು ಸರ್ಕಾರಿ ಜಮೀನಾಗಿದೆ. ಸದರಿ ಜಮೀನನ್ನ ದೇಶಕ್ಕೆ ಸೇವೆ ಸಲ್ಲಿಸಿದ ಯೋಧರಿಗೆ ನೀಡುವ ಉದ್ದೇಶದಿಂದ ಮೀಸಲಿಡಲು ಮುಂದಾದ

ಒತ್ತುವರಿ ಜಮೀನು ತೆರವಿಗೆ ಹೋದ ತಹಸೀಲ್ದಾರ್ ವಿರುದ್ದ ತಿರುಗಿಬಿದ್ದ ರೈತ| ಕರ್ತವ್ಯಕ್ಕೆ ಅಡ್ಡಿ ಆರೋಪ; ಬಂದ ದಾರಿಗೆ ಸುಂಕವಿಲ್ಲದಂತೆ ವಾಪಸ್ Read More »

ಸುಳ್ಯ: ಕಾಂಗ್ರೆಸ್ ಬಿಜೆಪಿ ಮಧ್ಯೆ ಜಂಗಿಕುಸ್ತಿ| ನೀರಿಗಾಗಿ ಚುನಾವಣೆ ಬಹಿಷ್ಕರಿಸಿದ ಬಡ ಕುಟುಂಬ

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ಕುದ್ಪಾಜೆ ಎಂಬಲ್ಲಿ ದಲಿತ ನಿವಾಸಿಗಳಿಗೆ ಕಾಂಗ್ರೆಸ್ ಬಿಜೆಪಿಯವರ ಜಂಗಿಕುಸ್ತಿಯಿಂದ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಈ ಹಿನ್ನಲೆ ಮುಂದಿನ ದಿನಗಳಲ್ಲಿ ಬರುವ ಚುನಾವಣೆಗೆ ಮತದಾನವನ್ನು ಬಹಿಷ್ಕರಿಸಿ ಬ್ಯಾನರ್ ಅಳವಡಿಸಿದ್ದಾರೆ. ಕಳೆದ ಎರಡು ವರ್ಷಗಳಿಂದ ಕುದ್ಪಾಜೆಯ ದಲಿತ ನಿವಾಸಿಗಳು ಕುಡಿಯಲು ನೀರು ಇಲ್ಲದೆ ತುಂಬಾ ತೊಂದರೆ ಉಂಟಾಗಿದ್ದು ಈ ಕಾರಣ ಗಂಗಾಕಲ್ಯಾಣ ಯೋಜನೆ ಅಡಿಯಲ್ಲಿ ಬೋರ್ವೆಲ್ ಕೊರೆಯಲು ಗುರುತು ಮಾಡಿದ್ದರು. ಈ ನಡುವೆ ಕಾಂಗ್ರೆಸ್ ಪಕ್ಷದವರು ನಾವು ಹೇಳಿದ ಜಾಗದಲ್ಲಿ ಬೋರ್ವೆಲ್ ಕೊರೆಯಬೇಕು,

ಸುಳ್ಯ: ಕಾಂಗ್ರೆಸ್ ಬಿಜೆಪಿ ಮಧ್ಯೆ ಜಂಗಿಕುಸ್ತಿ| ನೀರಿಗಾಗಿ ಚುನಾವಣೆ ಬಹಿಷ್ಕರಿಸಿದ ಬಡ ಕುಟುಂಬ Read More »

ಬೆಂಗಳೂರು: ಕಿಲ್ಲರ್‌ ಬಿಎಂಟಿಸಿ ಗೆ ಯೋಧ‌ ಬಲಿ

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ಕೋಲಾರ ಮೂಲದ ಯೋಧ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದರು.ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ಚಿನ್ನಕೋಟೆ ಗ್ರಾಮದ ಯೋಧ ಚೇತನ್(22) ಮೃತ ದುರ್ದೈವಿ. ಇವರ ತಂದೆ ಸುರೇಶ್ ನಿವೃತ್ತ ಯೋಧರು. ತಂದೆಯಂತೇ ತಾನೂ ಕೂಡ ಭಾರತೀಯ ಸೇನೆಯಲ್ಲಿ ಕಾರ್ಯನಿರ್ವಹಿಸಬೇಕೆಂದು ಮಹತ್ತರ ಆಸೆಯೊಂದಿಗೆ ಸೇನೆಗೆ ಸೇರಿದ್ದ ಚೇತನ್​, ಚೆನ್ನೈ ರೆಜಿಮೆಂಟ್​ನಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಮೂರು ವರ್ಷ ಪೂರೈಸಿದ್ದ ಚೇತನ್, ರಜೆ ಮೇಲೆ ಊರಿಗೆ ಆಗಮಿಸಿದ್ದರು.

ಬೆಂಗಳೂರು: ಕಿಲ್ಲರ್‌ ಬಿಎಂಟಿಸಿ ಗೆ ಯೋಧ‌ ಬಲಿ Read More »

ಭಾರತದಲ್ಲಿ ಎಲ್ಲಾ ಸ್ಮಾರ್ಟ್ ಫೋನ್‌ಗಳಿಗೂ ಒಂದೇ ರೀತಿಯ ಚಾರ್ಜಿಂಗ್ ಪೋರ್ಟ್

ನವದೆಹಲಿ: ಭಾರತವು ಎಲ್ಲಾ ಸ್ಮಾರ್ಟ್ ಸಾಧನಗಳಿಗಾಗಿ ಯುಎಸ್ಬಿ ಮಾದರಿಯ ಸಿ ಚಾರ್ಜಿಂಗ್ ಪೋರ್ಟ್‌‌ಗೆ ಸ್ಥಳಾಂತರಗೊಳ್ಳಲಿದೆ ಎಂದು ಗ್ರಾಹಕ ವ್ಯವಹಾರಗಳ ಕಾರ್ಯದರ್ಶಿ ರೋಹಿತ್ ಕುಮಾರ್ ಸಿಂಗ್ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಅವರು, ಕೇಂದ್ರ ಸರ್ಕಾರವು ರಚಿಸಿರುವ ಅಂತರ್ ಸಚಿವಾಲಯದ ಕಾರ್ಯಪಡೆಯ ಸಭೆಯಲ್ಲಿ ಪಾಲುದಾರರು ಒಮ್ಮತಕ್ಕೆ ಬಂದ ಬಳಿಕ ಎಲ್ಲಾ ಸ್ಮಾರ್ಟ್ ಸಾಧನಗಳಿಗಾಗಿ ಯುಎಸ್ಬಿ ಮಾದರಿಯ ಸಿ ಚಾರ್ಜಿಂಗ್ ಪೋರ್ಟ್‌‌ಗೆ ಸ್ಥಳಾಂತರಗೊಳ್ಳಲಿದೆ ಎಂದು ತೀರ್ಮಾನಿಸಲಾಗಿದೆ ಎಂದರು. ಇನ್ನು ‘ಸ್ಮಾರ್ಟ್ಫೋನ್‌ಗಳು, ಟ್ಯಾಬ್‌ಗಳು ಮತ್ತು ಲ್ಯಾಪ್‌ಟಾಪಗಳಂತಹ ಎಲೆಕ್ಟ್ರಾನಿಕ್ ಸಾಧನಗಳಿಗೆ ಚಾರ್ಜಿಂಗ್

ಭಾರತದಲ್ಲಿ ಎಲ್ಲಾ ಸ್ಮಾರ್ಟ್ ಫೋನ್‌ಗಳಿಗೂ ಒಂದೇ ರೀತಿಯ ಚಾರ್ಜಿಂಗ್ ಪೋರ್ಟ್ Read More »

ಜಗತ್ತಿನಲ್ಲೇ ಅತಿ ಉದ್ದನೆಯ ಮೂಗು ಇರುವ ವ್ಯಕ್ತಿಯನ್ನು ನೋಡಿದ್ದೀರ?

ದೆಹಲಿ: ಜಗತ್ತಿನಲ್ಲೇ ಅತಿ ಉದ್ದನೆಯ ಮೂಗು ಹೊಂದಿರುವ ವ್ಯಕ್ತಿಯ ಫೋಟೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಥಾಮಸ್ ವಾಡ್‌ಹೌಸ್‌ (ವೆಡ್ಡೆರ್‌) ಎಂಬ ವ್ಯಕ್ತಿ ಉದ್ದನೆಯ ಮೂಗು ಹೊಂದಿದ್ದರು. ಅವರ ಮೂಗು 7.5 ಇಂಚು ಉದ್ದವಾಗಿದೆ ಎಂದು ಹಿಸ್ಟಾರಿಕ್ ವಿಡ್ಸ್ ಎಂಬ ಟ್ವಿಟ್ಟರ್ ಪೇಜ್ ಟ್ವೀಟ್‌ ಮಾಡಿದೆ. ಗಿನ್ನೆಸ್ ವರ್ಲ್ಡ್ ರೆಕಾರ್ಡ್ಸ್ ವೆಬ್‌ಸೈಟ್‌ನಲ್ಲೂ ಈ ವ್ಯಕ್ತಿಯ ಪರಿಚಯವಿದೆ. ವಿಶ್ವದಲ್ಲೇ ಅತಿ ಉದ್ದನೆಯ ಮೂಗು ಹೊಂದಿರುವ ವ್ಯಕ್ತಿ ಇವರಾಗಿದ್ದಾರೆ. ಥಾಮಸ್ ವಾಡ್‌ಹೌಸ್ 18ನೇ ಶತಮಾನದಲ್ಲಿ ವಾಸವಾಗಿದ್ದರು. ಇವರು ಬ್ರಿಟನ್‌ ಸರ್ಕಸ್ ಕಂಪನಿಯಲ್ಲಿ

ಜಗತ್ತಿನಲ್ಲೇ ಅತಿ ಉದ್ದನೆಯ ಮೂಗು ಇರುವ ವ್ಯಕ್ತಿಯನ್ನು ನೋಡಿದ್ದೀರ? Read More »

ಕರಾವಳಿ ನಿಯಂತ್ರಣ ವಲಯದಲ್ಲಿ(CRZ) ಸಾಂಪ್ರದಾಯಿಕ ಮರಳುಗಾರಿಕೆಗೆ ಅನುಮತಿ| ದ.ಕ‌ ಜಿಲ್ಲಾಧಿಕಾರಿ ಎಂ.ಆರ್ ರವಿಕುಮಾರ್ ಹಸಿರು ನಿಶಾನೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕರಾವಳಿ ನಿಯಂತ್ರಣ ವಲಯದಲ್ಲಿ ಸಾಂಪ್ರದಾಯಿಕ ಮರಳುಗಾರಿಕೆ ಪುನರಾರಂಭಿಸಲು ಜಿಲ್ಲಾಡಳಿತ ಮತ್ತೆ ಹಸಿರು ನಿಶಾನೆ ತೋರಿದೆ. ಜಿಲ್ಲಾಧಿಕಾರಿ ರವಿಕುಮಾರ್‌ ಎಂ.ಆರ್‌. ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಏಳು ಸದಸ್ಯರ ಸಮಿತಿಯ ಸಭೆಯಲ್ಲಿ ಸಿಆರ್‌ಜೆಡ್‌ ವಲಯದಲ್ಲೂ ಮರಳುಗಾರಿಕೆ ನಡೆಸಲು ಅನುಮತಿ ನೀಡುವ ನಿರ್ಧಾರ ಕೈಗೊಳ್ಳಲಾಗಿದೆ. ಸಿಆರ್‌ಜೆಡ್‌ ವಲಯದಲ್ಲಿ ನೇತ್ರಾವತಿ ಮತ್ತು ಫಲ್ಗುಣಿ ನದಿಗಳಲ್ಲಿ ಮರಳು ದಿಬ್ಬ ತೆರವುಗೊಳಿಸಲು ಜಿಲ್ಲಾಡಳಿತವು 14 ಕಡೆ ಸ್ಥಳಗಳನ್ನು ಗುರುತಿಸಿತ್ತು. ಅಲ್ಲಿ ಸಾಂಪ್ರದಾಯಿಕವಾಗಿ ಮರಳುಗಾರಿಕೆಗೆ ಅನುಮತಿ ನೀಡಲು ಜಿಲ್ಲಾಡಳಿತವು ಮೇ

ಕರಾವಳಿ ನಿಯಂತ್ರಣ ವಲಯದಲ್ಲಿ(CRZ) ಸಾಂಪ್ರದಾಯಿಕ ಮರಳುಗಾರಿಕೆಗೆ ಅನುಮತಿ| ದ.ಕ‌ ಜಿಲ್ಲಾಧಿಕಾರಿ ಎಂ.ಆರ್ ರವಿಕುಮಾರ್ ಹಸಿರು ನಿಶಾನೆ Read More »

ಕರುನಾಡ ಜನತೆಗೆ ‘ನಮ್ಮ ಕ್ಲಿನಿಕ್’

ಸಮಗ್ರ ನ್ಯೂಸ್: ಮಗುವಿನ ಆರೈಕೆ ಸೇರಿದಂತೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ದೊರಕುವ ಎಲ್ಲ ರೀತಿಯ ಸೌಲಭ್ಯಗಳು ಸಿಗಲಿರುವ, ಅಲ್ಲದೆ ಕೇಂದ್ರ ಸರಕಾರದ ರಾಷ್ಟ್ರೀಯ ಆರೋಗ್ಯ ಮಿಷನ್‌ ನಡಿ ಸಿಗುವ ಎಲ್ಲ ಸೌಲಭ್ಯ ಲಭ್ಯವಿರುವ ಕ್ಲಿನಿಕ್ ಇದಾಗಿದೆ. ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ತಪಾಸಣೆಯನ್ನೂ ಇಲ್ಲಿ ನಡೆಸಲಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯ 12 ಮತ್ತು ಉಡುಪಿ ಜಿಲ್ಲೆಯ 6 ಕಡೆ ಸಹಿತ ಕರಾವಳಿ ಭಾಗದ 18 ಕಡೆಗಳಲ್ಲಿ ಕೆಲವೇ ದಿನಗಳಲ್ಲಿ ನಮ್ಮ ಕ್ಲಿನಿಕ್ ಕಾರ್ಯಾರಂಭಗೊಳ್ಳುವ ಸಾಧ್ಯತೆಗಳಿದ್ದು ಪ್ರತಿ ಕ್ಲಿನಿಕ್‌ನಲ್ಲಿವೈದ್ಯಾಧಿಕಾರಿ,

ಕರುನಾಡ ಜನತೆಗೆ ‘ನಮ್ಮ ಕ್ಲಿನಿಕ್’ Read More »