ಸಮಗ್ರ ಸಮಾಚಾರ

ಚಿಕ್ಕಮಗಳೂರು : ಒಳಚರಂಡಿ ಕಾಮಗಾರಿ ವಿಳಂಬ

ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಕೇಸ್ ಮಾಡಿ ಜೈಲಿಗೆ ಹಾಕಿ : ಬೋಜೇಗೌಡ ಚಿಕ್ಕಮಗಳೂರು : ಒಳಚರಂಡಿ ಕಾಮಗಾರಿ ವಿಳಂಬ ಹಿನ್ನೆಲೆ ಅಧಿಕಾರಿಗಳಿಗೆ ವಿಧಾನ ಪರಿಷತ್ ಸದಸ್ಯ ಬೋಜೇಗೌಡರಿಂದ ಕ್ಲಾಸ್ ತೆಗೆದುಕೊಂಡ ಘಟನೆ ನಡೆದಿದೆ. ಅಮೃತ್ ಯೋಜನೆ ಹಾಗೂ ಒಳಚರಂಡಿ ಕಾಮಗಾರಿ ಮಾಡಲಾಗಿದ್ದು ಈ ಕಾಮಗಾರಿ ಕಳೆದ ನವಂಬರ್ ನಲ್ಲಿ ಮುಗಿಯಬೇಕಿತ್ತು, ಆದರೆ ಆಗಸ್ಟ್ ಬಂದರು ಕಾಮಗಾರಿ ಮುಗಿಸದ ಹಿನ್ನೆಲೆ ವಿಧಾನ ಪರಿಷತ್ ಸದಸ್ಯ ಬೋಜೇಗೌಡ ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ಚಿಕ್ಕಮಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ […]

ಚಿಕ್ಕಮಗಳೂರು : ಒಳಚರಂಡಿ ಕಾಮಗಾರಿ ವಿಳಂಬ Read More »

ವಿಶ್ವದ ಅತ್ಯಂತ ದುಬಾರಿ ದಿಂಬು ಇದು ! ಏಕೆ ಗೊತ್ತೆ

ದಿನವಿಡೀ ಕೆಲಸ, ಒಂದೊಂದು ಟೆನ್ಶನ್,  ಇದೆಲ್ಲಾ ಕಳೆದು ರಾತ್ರಿ ವೇಳೆ  ಹಾಸಿಗೆಗೆ ಹೋಗುವುದು ಆರಾಮದಾಯಕವಾಗಿರುತ್ತದೆ. ಎಲ್ಲರೂ ರಾತ್ರಿ ಚೆನ್ನಾಗಿ ನಿದ್ದೆ ಮಾಡಬೇಕು ಎಂದು ಬಯಸುತ್ತಾರೆ. ನಿದ್ರೆ ಮಾಡಲು ದಿಂಬು ಅತಿ ಅವಶ್ಯಕ.‌ ದಿಂಬು ಒಬ್ಬೊಬ್ಬರು ಒಂದೊಂದು ರೀತಿ ಕೊಳ್ಳುತ್ತಾರೆ. ಆದರೆ ಇಲ್ಲಿದೆ ಒಂದು ಅಪರೂಪದ ದಿಂಬು ವಿಶ್ವದ ಅತ್ಯಂತ ದುಬಾರಿ ದಿಂಬನ್ನು ನೆದರ್ಲೆಂಡ್ಸ್‌ನ ಫಿಸಿಯೋಥೆರಪಿಸ್ಟ್ ರಚಿಸಿದ್ದಾರೆ. ಹದಿನೈದು ವರ್ಷಗಳ ಕಠಿಣ ಪರಿಶ್ರಮದ ನಂತರ ಈ ದಿಂಬನ್ನು ವಿನ್ಯಾಸಗೊಳಿಸಲಾಗಿದೆ.  ಒಂದು ದಿಂಬಿಗೆ 57,000 ಡಾಲರ್‌ಗಳು, ಸರಿಸುಮಾರು 45 ಲಕ್ಷ

ವಿಶ್ವದ ಅತ್ಯಂತ ದುಬಾರಿ ದಿಂಬು ಇದು ! ಏಕೆ ಗೊತ್ತೆ Read More »

ತುಳುವಿಗೆ ಅಕಾಡೆಮಿಯೊಂದನ್ನು ಬಿಟ್ಟರೆ ಸರಕಾರ ಬೇರೆ ಏನೂ ಮಾಡಿಲ್ಲ: ತುಳು ಅಕಾಡೆಮಿ ಅಧ್ಯಕ್ಷರ ಬೇಸರ

ಮಂಗಳೂರು: ಪಂಚ ದ್ರಾವಿಡ ಭಾಷೆಯಲ್ಲಿಯೇ ತುಳುವಿಗೆ ಬಹಳ ಉನ್ನತ ಸ್ಥಾನವಿದೆ. ಕರ್ನಾಟಕದಲ್ಲಿ ತುಳು ಸಾಹಿತ್ಯ ಅಕಾಡೆಮಿಯೊಂದನ್ನು ಬಿಟ್ಟರೆ ಉಳಿದಂತೆ ಸರಕಾರ ಯಾವುದೇ ರೀತಿಯಲ್ಲಿ ನೆರವಾಗಿಲ್ಲ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲ್‌ ಸಾರ್‌ ಬೇಸರ ವ್ಯಕ್ತಪಡಿಸಿದರು. ಅವರು ಭಾನುವಾರ ನಗರದ ಉರ್ವ ಸ್ಟೋರ್‌ನಲ್ಲಿರುವ ಡಾ.ಬಿಆರ್‌ ಅಂಬೇಡ್ಕರ್‌ ಭವನದಲ್ಲಿ ಜೈ ತುಳುನಾಡು ಮಂಗಳೂರು ಆಶ್ರಯದಲ್ಲಿ ತುಲುವೆರೆ ಆಟಿ ಕಾರ‍್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ದಯಾನಂದ ಜಿ ಕತ್ತಲ್‌ಸಾರ್, ಕರ್ನಾಟಕ ಸರಕಾರ ತುಳು ಅಕಾಡೆಮಿಯೊಂದನ್ನು ಕೊಟ್ಟಿದೆ.

ತುಳುವಿಗೆ ಅಕಾಡೆಮಿಯೊಂದನ್ನು ಬಿಟ್ಟರೆ ಸರಕಾರ ಬೇರೆ ಏನೂ ಮಾಡಿಲ್ಲ: ತುಳು ಅಕಾಡೆಮಿ ಅಧ್ಯಕ್ಷರ ಬೇಸರ Read More »

ಕೆಲ್ಸ ಮಾಡಿ, ಇಲ್ದೇ ಇದ್ರೆ ರಾಜೀನಾಮೆ ಕೊಟ್ಟು ಮನೆಗೆ ಹೋಗಿ

ಬಿಎಸ್‌ಎನ್‌ಎಲ್‌ ಉದ್ಯೋಗಿಗಳಿಗೆ ಅಶ್ವಿನಿ ವೈಷ್ಣವ್‌ ಲಾಸ್ಟ್‌ ವಾರ್ನಿಂಗ್‌ ನವದೆಹಲಿ: ಕೇಂದ್ರ ಸರ್ಕಾರ ಸಹಕಾರ ನೀಡುತ್ತಿದ್ದರೂ ಮುಂದಿನ 24 ತಿಂಗಳಿನಲ್ಲಿ ಸರಿಯಾಗಿ ಕೆಲಸ ಮಾಡದೇ ಇದ್ದರೆ ಬಿಎಸ್‌ಎನ್‌ಎಲ್‌ ಉದ್ಯೋಗಿಗಳು ಸ್ವಯಂ ನಿವೃತ್ತಿ ತೆಗೆದುಕೊಂಡು ಮನೆಗೆ ಹೋಗುತ್ತಾರೆ ಎಂದು ಟೆಲಿಕಾಂ ಸಚಿವ ಅಶ್ವಿನಿ ವೈಷ್ಣವ್‌ ಎಚ್ಚರಿಕೆ ನೀಡಿದ್ದಾರೆ. ಮುಖ್ಯ ಜನರಲ್ ಮ್ಯಾನೇಜರ್‌ಗಳೊಂದಿಗಿನ ಸಭೆಯಲ್ಲಿ ವೈಷ್ಣವ್‌, ಸರ್ಕಾರ ಬಿಎಸ್‌ಎನ್‌ಎಲ್‌ ಹಿಂದೆ ಬಂಡೆಯಾಗಿ ನಿಂತಿದ್ದು, ಕೆಲಸ ಮಾಡುತ್ತಿರುವ 62 ಸಾವಿರ ಉದ್ಯೋಗಿಗಳಿಂದ ಅದೇ ಮಟ್ಟದ ಬದ್ಧತೆಯನ್ನು ನಿರೀಕ್ಷಿಸುತ್ತಿದೆ. ನಾನು ಪ್ರತಿ ತಿಂಗಳು ಕಾರ್ಯಕ್ಷಮತೆಯ

ಕೆಲ್ಸ ಮಾಡಿ, ಇಲ್ದೇ ಇದ್ರೆ ರಾಜೀನಾಮೆ ಕೊಟ್ಟು ಮನೆಗೆ ಹೋಗಿ Read More »

ಈ ದೇವಸ್ಥಾನದಲ್ಲಿ ಹಾಕಿರುವ ಬೋರ್ಡ್ ಎಲ್ಲೆಡೆ ವೈರಲ್ ಏಕೆ ಗೊತ್ತೆ

ಪ್ರತಿದೇವಸ್ಥಾನಕ್ಕೆ ಹೋಗುವ ಮುನ್ನ ಪಾದರಕ್ಷೆ ಇಲ್ಲಿಯೇ ಬಿಡಿ.‌ಶಾಂತತೆ ಕಾಪಾಡಿ ಎಂಬ ಬರಹ ಸಾಮಾನ್ಯ. ಆದರೆ, ಇಲ್ಲೊಂದು ದೇವಸ್ಥಾನದಲ್ಲಿ ಬರೆದ ಬೋರ್ಡ್ ಎಲ್ಲೆಡೆ ಸುದ್ದಿಯಗುತ್ತಿದೆ. ಇಲ್ಲೊಂದು ದೇವಸ್ಥಾನದಲ್ಲಿ ಪದವಿ ಮತ್ತು ಪಾದರಕ್ಷೆ ಇಲ್ಲಿಯೆ ಬಿಡ್ರಿ ಎಂದು ಬರೆಯುವ ಮೂಲಕ ಭಕ್ತರಲ್ಲಿ ಚಿಂತನೆ ಹುಟ್ಟುಹಾಕಲಾಗಿದೆ. ಈ ರೀತಿಯ ಬರಹ ಬರೆದಿರುವುದು ಹಾವೇರಿ ನಗರದ ತೇರುಬೀದಿಯ ಹನುಮಂತ ದೇವರ ದೇವಸ್ಥಾನದಲ್ಲಿ. ಈ ದೇವಸ್ಥಾನದಲ್ಲಿ ಪಾದರಕ್ಷೆ ಬಿಡುವ ಜಾಗದಲ್ಲಿ ಈ ರೀತಿ ಬರಹ ಬರೆಯಲಾಗಿದೆ. ದೇವಸ್ಥಾನದ ಹೊರಗೆ ಪದವಿ, ಹುದ್ದೆ, ಸ್ಥಾನಮಾನ ಮತ್ತು ಬಡವ

ಈ ದೇವಸ್ಥಾನದಲ್ಲಿ ಹಾಕಿರುವ ಬೋರ್ಡ್ ಎಲ್ಲೆಡೆ ವೈರಲ್ ಏಕೆ ಗೊತ್ತೆ Read More »

ಮೀನುಗಾರಿಕೆಗೆ ಈ ವರ್ಷವೂ ಆರಂಭದಲ್ಲೇ ಅಡ್ಡಿ| ಕಡಲಿಗಿಳಿಯದೆ ದಡದಲ್ಲೇ ಉಳಿದ ಬೋಟುಗಳು|ಹೋದ ದೋಣಿಗಳೂ ಬರಿಗೈಯಲ್ಲಿ ವಾಪಸ್‌

ಉಡುಪಿ: ಮಳೆ, ಗಾಳಿಯಿಂದಾಗಿ ಸಮುದ್ರ ಪ್ರಕ್ಷುಬ್ಧವಾಗಿದ್ದು, ಯಾಂತ್ರಿಕ ಮೀನುಗಾರಿಕೆ ಆರಂಭದ ದಿನದಲ್ಲೇ ಅಡಚಣೆ ಉಂಟಾಗಿದೆ. 61 ದಿನಗಳ ರಜೆಯ ಬಳಿಕ ಬಹು ನಿರೀಕ್ಷೆಯೊಂದಿಗೆ ಆ. 1ರಿಂದ ಕಡಲಿಗಿಳಿಯಬೇಕಿದ್ದ ಮೀನುಗಾರರಿಗೆ ನಿರಾಶೆಯಾಗಿದೆ. ದೋಣಿಗಳನ್ನು ಕಡಲಿಗೆ ಇಳಿಸುವುದು ವಿಳಂಬವಾಗುತ್ತಿರುವುದರಿಂದ ಮಂಜುಗಡ್ಡೆ ವ್ಯವಹಾರ, ಮೀನು ಸಾಗಾಟ ವ್ಯವಸ್ಥೆ, ಮಾರಾಟಗಾರರು ಸೇರಿದಂತೆ ಮೀನುಗಾರಿಕೆಗೆ ಅವಲಂಬಿತ ಕ್ಷೇತ್ರಗಳೆಲ್ಲವೂ ಹಿನ್ನೆಡೆ ಕಂಡಿವೆ. ಕಳೆದ ಋತುವಿನಲ್ಲಿ ಮೀನಿನ ಕ್ಷಾಮದ ಜತೆಗೆ ಚಂಡಮಾರುತದಿಂದಾಗಿ ಪದೇಪದೆ ಸಮುದ್ರ ಪ್ರಕ್ಷುಬ್ಧವಾಗಿದ್ದು ಮೀನುಗಾರರು ಸಂಕಷ್ಟ ಎದುರಿಸಿದ್ದರು. ಈ ಋತುವಿನ ಆರಂಭವೂ ಅದೇ ರೀತಿ

ಮೀನುಗಾರಿಕೆಗೆ ಈ ವರ್ಷವೂ ಆರಂಭದಲ್ಲೇ ಅಡ್ಡಿ| ಕಡಲಿಗಿಳಿಯದೆ ದಡದಲ್ಲೇ ಉಳಿದ ಬೋಟುಗಳು|ಹೋದ ದೋಣಿಗಳೂ ಬರಿಗೈಯಲ್ಲಿ ವಾಪಸ್‌ Read More »

ಕುಂದಾಪುರ: ವಿದ್ಯುತ್ ತಂತಿ ತಗುಲಿ ನಾಲ್ಕು ಹಸುಗಳು ಮೃತ್ಯು

ಮೆಸ್ಕಾಂ ಅಧಿಕಾರಿಗಳ ವಿರುದ್ಧ ಆಕ್ರೋಶ ಕುಂದಾಪುರ: ಗದ್ದೆಯಲ್ಲಿ ಮೇಯುತ್ತಿದ್ದ ನಾಲ್ಕು ಹಸುಗಳು ವಿದ್ಯುತ್ ತಂತಿ ತಗುಲಿ ಸಾವನ್ನಪ್ಪಿರುವ ಘಟನೆ ಆಲೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಹರ್ಕೂರಿನಲ್ಲಿ ನಡೆದಿದೆ. ಪಶು ವೈದ್ಯಾಧಿಕಾರಿಗಳು ಹಾಗೂ ಮೆಸ್ಕಾಂ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ತಂತಿಗಳು ತೀರಾ ಹಳೆಯದಾಗಿದ್ದು, ಇದರಿಂದ ಹಸುಗಳು ಸಾವನ್ನಪ್ಪಿರಬಹುದು ಎಂದು ಗ್ರಾಮಸ್ಥರು ಮೆಸ್ಕಾಂ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕುಂದಾಪುರ: ವಿದ್ಯುತ್ ತಂತಿ ತಗುಲಿ ನಾಲ್ಕು ಹಸುಗಳು ಮೃತ್ಯು Read More »

ಹೆಲ್ಮೆಟ್‌ನಲ್ಲಿ ಕ್ಯಾಮರಾ ಹಾಕಿ ಓಡಾಡಿದರೆ ಪರವಾನಗಿ ರದ್ದು| ದ್ವಿಚಕ್ರ ವಾಹನ ಸವಾರರೆ ಎಚ್ಚರ!

ಸಮಗ್ರ ನ್ಯೂಸ್: ಹೆಲ್ಮೆಟ್‌ನಲ್ಲಿ ಅಳವಡಿಸಿ ದ್ವಿಚಕ್ರವಾಹನ ಸವಾರಿ ಮಾಡುವುದು ಸಾಮಾನ್ಯವಾಗಿದೆ. ಆದರೆ ಕೇರಳದ ಸಾರಿಗೆ ಇಲಾಖೆ ಹೆಲ್ಮೆಟ್‌ನಲ್ಲಿ ಕ್ಯಾಮರಾ ಅಳವಡಿಸಿ ಸಂಚರಿಸುವ ದ್ವಿಚಕ್ರವಾಹನ ಸವಾರರಿಗೆ ಖಡಕ್ ಎಚ್ಚರಿಕೆ ನೀಡಿದೆ. ಇನ್ನು ಮುಂದೆ ಹೆಲ್ಮೆಟ್‌ನಲ್ಲಿ ಕ್ಯಾಮರಾ ಕಂಡುಬಂದರೆ 1000 ರೂಪಾಯಿ ದಂಡ, ಮೊದಲ ಎಚ್ಚರಿಕೆ ನೀಡಿ ಬಳಿಕವೂ ಮರುಕಳಿಸಿದರೆ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಸಂಚಾರ ಆಯುಕ್ತರು ಹೇಳಿದ್ದಾರೆ. ಇದಲ್ಲದೆ ಎಚ್ಚರಿಕೆಯ ಹೊರತಾಗಿಯೂ ಅಕ್ರಮ ಮುಂದುವರಿದರೆ ಮೂರು ತಿಂಗಳವರೆಗೆ ಪರವಾನಗಿ ರದ್ದುಪಡಿಸಲು ಆಯುಕ್ತರು ಆದೇಶ ನೀಡಿದ್ದಾರೆ. ಹೆಲ್ಮೆಟ್‌ಗೆ ಕ್ಯಾಮೆರಾ

ಹೆಲ್ಮೆಟ್‌ನಲ್ಲಿ ಕ್ಯಾಮರಾ ಹಾಕಿ ಓಡಾಡಿದರೆ ಪರವಾನಗಿ ರದ್ದು| ದ್ವಿಚಕ್ರ ವಾಹನ ಸವಾರರೆ ಎಚ್ಚರ! Read More »

ಮಂಗಳೂರು: ಹೊಂಡ ತಪ್ಪಿಸಲು ಹೋಗಿ ಡಿವೈಡರ್‌‌ಗೆ ಸ್ಕೂಟರ್ ಢಿಕ್ಕಿ-ಯುವಕ ಸಾವು

ಮಂಗಳೂರು: ರಸ್ತೆಯ ಗುಂಡಿ ತಪ್ಪಿಸಲು ಹೋಗಿ ಡಿವೈಡರ್‌‌ಗೆ ಸ್ಕೂಟರ್ ಢಿಕ್ಕಿ ಹೊಡೆದು ಸವಾರ ಮೃತಪಟ್ಟ ಘಟನೆ ಬಿಕರ್ನಕಟ್ಟೆ ಕಂಡೆಟ್ಟು ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿ 73ರಲ್ಲಿ ನಡೆದಿದೆ. ಕೊಂಚಾಡಿ ನಿವಾಸಿ ಆತೀಶ್ (20) ಮೃತಪಟ್ಟವರು. ಆತೀಶ್ ನಂತೂರು ಜಂಕ್ಷನ್ ಕಡೆಯಿಂದ ಬಿಕರ್ನಕಟ್ಟೆ ಕೈಕಂಬ ಕಡೆಗೆ ಹಾದು ಹೋಗಿರುವ ರಸ್ತೆಯಲ್ಲಿ ಸಂಜೆ 6.45ರ ಸುಮಾರಿಗೆ ಸಂಚರಿಸುತ್ತಿದ್ದರು. ಮಳೆ ಜೋರಾಗಿ ಸುರಿಯುತ್ತಿದ್ದುದರಿಂದ ಬಿಕರ್ನಕಟ್ಟೆ ಕಂಡೆಟ್ಟು ಕ್ರಾಸ್‌ಗಿಂತ ಮೊದಲು ಡಿವೈಡರ್‍ ಪಕ್ಕದಲ್ಲಿದ್ದ ಹೊಂಡವನ್ನು ಅವರು ಗಮನಿಸಲಿಲ್ಲ. ಹೊಂಡದ ಸನಿಹಕ್ಕೆ ಬರುವಾಗ ಹೊಂಡ

ಮಂಗಳೂರು: ಹೊಂಡ ತಪ್ಪಿಸಲು ಹೋಗಿ ಡಿವೈಡರ್‌‌ಗೆ ಸ್ಕೂಟರ್ ಢಿಕ್ಕಿ-ಯುವಕ ಸಾವು Read More »

ಸ್ವಂತ ಸೂರಿನ ನಿರೀಕ್ಷೆಯಲ್ಲೆ ಕೊನೆಯುಸಿರೆಳೆದ ನೆರೆ ಸಂತ್ರಸ್ತ

ಕೊಟ್ಟಿಗೆಹಾರ: 2019ರ ಮಹಾಮಳೆಗೆ ಮನೆ ಜಮೀನು ಕಳೆದುಕೊಂಡ ನೆರೆ ಸಂತ್ರಸ್ತರೊಬ್ಬರು ಸ್ವಂತ ಸೂರಿನ ನಿರೀಕ್ಷೆಯಲ್ಲೆ ಇಂದು ಕೊನೆಯುಸಿರೆಳಿದ್ದಾರೆ. ಜಾವಳಿ ಗ್ರಾ.ಪಂ ವ್ಯಾಪ್ತಿಯ ಮಲೆಮನೆಯ ನೆರೆ ಸಂತ್ರಸ್ತ ನಾರಾಯಣಗೌಡ (೬೫) ೨೦೧೯ ರಲ್ಲಿ ಸುರಿದ ಮಹಾಮಳೆಯಿಂದಾಗಿ ಮನೆ ಹಾಗೂ ಜಮೀನನ್ನು ಕಳೆದುಕೊಂಡಿದ್ದರು. ಮನೆಯೊಂದಿಗೆ ಮನೆಯಲ್ಲಿದ್ದ ವಸ್ತುಗಳು, ಚಿನ್ನಾಭರಣಗಳು, ದಾಖಲೆ ಪತ್ರಗಳು ಎಲ್ಲವನ್ನು ಕಳೆದುಕೊಂಡು ಅಕ್ಷರಶಃ ಬರಿಗೈನಲ್ಲಿ ಬೀದಿಗೆ ಬಿದ್ದಿದ್ದರು.ಮೂಡಿಗೆರೆಯಲ್ಲಿ ಬಾಡಿಗೆ ಮನೆಯಲ್ಲಿ ಕುಟುಂಬದೂಂದಿಗೆ ವಾಸವಿದ್ದ ನಾರಾಯಣ ಗೌಡ ಅವರು ಸರ್ಕಾರ ಮನೆ ಕಟ್ಟಲು ಪರ್ಯಾಯ ಜಾಗ ಹಾಗೂ ಪರ್ಯಾಯ

ಸ್ವಂತ ಸೂರಿನ ನಿರೀಕ್ಷೆಯಲ್ಲೆ ಕೊನೆಯುಸಿರೆಳೆದ ನೆರೆ ಸಂತ್ರಸ್ತ Read More »