ಸಮಗ್ರ ಸಮಾಚಾರ

ಮಂಗಳೂರು: ನ.19 ಕ್ಕೆ ಸ್ವಾತಂತ್ರ್ಯ ಸಮರವೀರ ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆ ಲೋಕಾರ್ಪಣೆ| ಜಿಲ್ಲಾಡಳಿತದಿಂದ ವಿಜೃಂಭಣೆಯ ಕಾರ್ಯಕ್ರಮಕ್ಕೆ ಸಿದ್ದತೆ

ಸಮಗ್ರ ನ್ಯೂಸ್: ಕ್ರಿ.ಶ. 1837ರಲ್ಲಿ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯಕ್ಕಾಗಿ ರಣಕಹಳೆ ಮೊಳಗಿಸಿದ ಸ್ವಾತಂತ್ರ್ಯ ಸಮರವೀರ ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆ ಲೋಕಾರ್ಪಣೆ ಹಾಗೂ ವೇದಿಕೆ ಕಾರ್ಯಕ್ರಮವನ್ನು ಜಿಲ್ಲಾಡಳಿತ, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಉಸ್ತುವಾರಿ ಸಮಿತಿಯ ಸಹಭಾಗಿತ್ವದಲ್ಲಿ ವಿಜೃಂಭಣೆಯಿಂದ ನೆರವೇರಿಸಲಾಗುವುದು. ಅದಕ್ಕೆ ಎಲ್ಲರ ಸಹಕಾರ ಅಗತ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್ ಹೇಳಿದರು. ಮಂಗಳವಾರ ಮಂಗಳೂರಿನಲ್ಲಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. […]

ಮಂಗಳೂರು: ನ.19 ಕ್ಕೆ ಸ್ವಾತಂತ್ರ್ಯ ಸಮರವೀರ ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆ ಲೋಕಾರ್ಪಣೆ| ಜಿಲ್ಲಾಡಳಿತದಿಂದ ವಿಜೃಂಭಣೆಯ ಕಾರ್ಯಕ್ರಮಕ್ಕೆ ಸಿದ್ದತೆ Read More »

ಮೋದಿ – ರಿಷಿ ಸುನಕ್ ಮುಖಾಮುಖಿ| ಹಲವು ವಿಚಾರಗಳ ಬಗ್ಗೆ ಚರ್ಚೆ

ಸಮಗ್ರ ನ್ಯೂಸ್: ಪ್ರಧಾನಿ ಮೋದಿ ನಿನ್ನೆ ಸಂಜೆ ಇಂಡೋನೆಷ್ಯಾದ ಬಾಲಿಯಲ್ಲಿ ನಡೆಯುತ್ತಿರುವ ಜಿ-20 ಶೃಂಗ ಸಭೆಗೆ ತೆರಳಿದ್ದಾರೆ. ಈಗ ಅನೇಕ ಜಾಗತಿಕ ನಾಯಕರನ್ನು ಭೇಟಿ ಮಾಡಿ ದ್ವಿಪಕ್ಷೀಯ ಸಂಭಾಷಣೆ ನಡೆಸುತ್ತಿರುವ ಮೋದಿ ಈಗ ಬ್ರಿಟನ್​ ಪ್ರಧಾನಿ ರಿಷಿ ಸುನಕ್ ರನ್ನೂ ಭೇಟಿ ಮಾಡಿದ್ದಾರೆ. ಈ ಬಗ್ಗೆ ಪ್ರಧಾನಿ ಕಾರ್ಯಾಲಯ ‘ಪ್ರಧಾನಿ ಮೋದಿ ಮತ್ತು ಪ್ರಧಾನಿ ರಿಷಿ ಸುನಕ್​ ಬಾಲಿಯಲ್ಲಿ ನಡೆಯುತ್ತಿರುವ ಜಿ-20 ಶೃಂಗದಲ್ಲಿ ಮಾತುಕತೆ ನಡೆಸುತ್ತಿದ್ದಾರೆ’ ಎಂದು ಟ್ವೀಟ್​ ಮಾಡಿದೆ. ಮೋದಿ ಮತ್ತು ಸುನಕ್​ ಇದೇ ಮೊದಲ

ಮೋದಿ – ರಿಷಿ ಸುನಕ್ ಮುಖಾಮುಖಿ| ಹಲವು ವಿಚಾರಗಳ ಬಗ್ಗೆ ಚರ್ಚೆ Read More »

ವಂದೇ ಭಾರತ್ ನಲ್ಲಿ ದೂರ ಪ್ರಯಾಣಕ್ಕೆ ಕಡಿಮೆ ದರ! ಚೆನ್ನೈ- ಬೆಂಗಳೂರಿಗಿಂತ ಮೈಸೂರು- ಬೆಂಗಳೂರು ದರವೇ ತುಟ್ಟಿ

ಸಮಗ್ರ ನ್ಯೂಸ್: ಚೆನ್ನೈ- ಬೆಂಗಳೂರು – ಮೈಸೂರು ನಡುವೆ ಸಂಚರಿಸುವ ದಕ್ಷಿಣ ಭಾರತದ ಮೊದಲ ‘ವಂದೇ ಭಾರತ್‌’ ಎಕ್ಸ್‌ಪ್ರೆಸ್‌ ರೈಲಿಗೆ ಪ್ರಧಾನಿ ಮೋದಿ ಅವರು ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ (ಕೆಎಸ್‌ಆರ್‌) ರೈಲ್ವೆ ನಿಲ್ದಾಣದಲ್ಲಿ ಕಳೆದ ಶುಕ್ರವಾರ ಹಸಿರು ನಿಶಾನೆ ತೋರಿದ್ದಾರೆ. ಈ ರೈಲಿನ ದರ ಈಗಿರುವ ಶತಾಬ್ದಿ ರೈಲಿಗಿಂತ ಭಿನ್ನವಾಗಿದೆ. ಮೈಸೂರು-ಬೆಂಗಳೂರು ಟಿಕೆಟ್‌ಗೆ ಶತಾಬ್ದಿ ರೈಲಿಗಿಂತ ಹೆಚ್ಚಿನ ದರ ನಿಗದಿ ಮಾಡಲಾಗಿದ್ದರೆ, ಬೆಂಗಳೂರು ಚೆನ್ನೈ ಪ್ರಯಾಣಿಕರಿಗೆ ಮಾತ್ರ ಈಗಿರುವ ದರಕ್ಕಿಂತ ಕಡಿಮೆ ದರ ವಿಧಿಸಲಾಗಿದೆ. ಮೈಸೂರು-

ವಂದೇ ಭಾರತ್ ನಲ್ಲಿ ದೂರ ಪ್ರಯಾಣಕ್ಕೆ ಕಡಿಮೆ ದರ! ಚೆನ್ನೈ- ಬೆಂಗಳೂರಿಗಿಂತ ಮೈಸೂರು- ಬೆಂಗಳೂರು ದರವೇ ತುಟ್ಟಿ Read More »

ಬಂಟ್ವಾಳ: ಸಿಡಿಲಿಗೆ 16 ವರ್ಷದ ಬಾಲಕ ಬಲಿ

ಸಮಗ್ರ ನ್ಯೂಸ್: ಸಿಡಿಲು ಬಡಿದು ಬಾಲಕನೋರ್ವ ಮೃತಪಟ್ಟ ಹೃದಯವಿದ್ರಾವಕ ಘಟನೆ ನ.14 ರ ರಾತ್ರಿ ಕರಿಯಂಗಳ ಗ್ರಾಮದ ಸಾಣೂರು ಪದವಿನಲ್ಲಿ ನಡೆದಿದೆ. ಸಾಣೂರುಪದವು ಗಣೇಶ್ ಆದಿದ್ರಾವಿಡ ಅವರ ಪುತ್ರ ಕಾರ್ತಿಕ್ (16) ಮೃತಪಟ್ಟ ಬಾಲಕ. ರಾತ್ರಿ 9 ರ ಸುಮಾರಿಗೆ ಊಟ ಮುಗಿಸಿ ಮಲಗಿದ್ದು, 9.30 ರ ಸುಮಾರಿಗೆ ಜೋರಾಗಿ ಸಿಡಿಲು ಸಹಿತ ಮಳೆ ಬಂದು, ಮಲಗಿದ್ದವರಿಗೆ ಕರೆಂಟ್ ಶಾಕ್ ಹೊಡೆದ ಅನುಭವವಾಗಿದೆ .ಈ ವೇಳೆ ಮನೆಮಂದಿ ಹಾಲ್ ಗೆ ಓಡಿ ಬಂದಿದ್ದು, ಅದರೆ ಕಾರ್ತಿಕ್ ಏಳದೆ

ಬಂಟ್ವಾಳ: ಸಿಡಿಲಿಗೆ 16 ವರ್ಷದ ಬಾಲಕ ಬಲಿ Read More »

ಜೆಡಿಎಸ್ ನಲ್ಲಿ ಮತ್ತೊಂದು ವಿಕೆಟ್ ಪತನ|ಪಕ್ಷಕ್ಕೆ ಇಬ್ಬರು ರಾಜೀನಾಮೆ ಸಲ್ಲಿಕೆ

ಸಮಗ್ರ ನ್ಯೂಸ್: ರಾಜ್ಯ ವಿಧಾನಸಭೆ ಚುನಾವಣೆ ಹೊತ್ತಲ್ಲೇ ಜೆಡಿಎಸ್ ನ ಮತ್ತೊಂದು ವಿಕೆಟ್ ಪತನವಾಗಿದ್ದು, ಜೆಡಿಎಸ್ ಮಾಜಿ ಶಾಸಕ ಹೆಚ್. ನಿಂಗಪ್ಪ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂಗೆ ಹೆಚ್.ನಿಮಗಪ್ಪ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ಜೆಡಿಎಸ್ ಪಕ್ಷದ ಚಟುವಟಿಕೆಗಳಿಂದ ದೂರ ಇಟ್ಟಿದ್ದಕ್ಕೆ ಮಾಜಿ ಶಾಸಕ ಹೆಚ್.ನಿಂಗಪ್ಪ ಅಸಮಾಧಾನಗೊಂಡಿದ್ದರು. ಹೀಗಾಗಿ ಪಕ್ಷಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ರಾಜೀನಾಮೆಯಲ್ಲಿ ಉಲ್ಲೇಖಿಸಿದ್ದಾರೆ. 2006 ರಲ್ಲಿ ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕರಾಗಿದ್ದ ಹೆಚ್. ನಿಂಗಪ್ಪ, 2013 ರಲ್ಲಿ ಜೆಡಿಎಸ್ ಬಿಟ್ಟು

ಜೆಡಿಎಸ್ ನಲ್ಲಿ ಮತ್ತೊಂದು ವಿಕೆಟ್ ಪತನ|ಪಕ್ಷಕ್ಕೆ ಇಬ್ಬರು ರಾಜೀನಾಮೆ ಸಲ್ಲಿಕೆ Read More »

ಅದೊಂದು ಸಿನಿಮಾ ಪ್ಲಾಪ್ ಆದ ಹಿನ್ನೆಲೆ
ಚಿತ್ರರಂಗದ ಸಹವಾಸವೇ ಬೇಡ ಎಂದ ನಟ ಅಮಿರ್ ಖಾನ್….!!

ಮುಂಬೈ : ಬಹು ನಿರೀಕ್ಷಿತ ಲಾಲ್ ಸಿಂಗ್ ಚಡ್ಡಾ ಸಿನೆಮಾ ಪ್ಲಾಪ್ ಆದ ಬಳಿಕ ಇದೀಗ ನಟ ಅಮಿರ್ ಖಾನ್ ಸಿನೆಮಾ ಕ್ಷೇತ್ರದಿಂದ ಬಿಡುವು ಪಡೆಯಲು ಮುಂದಾಗಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು ಸಿನಿಮಾ ಕ್ಷೇತ್ರದಿಂದ ಕೊಂಚ ಬಿಡುವು ಪಡೆದು, ಕುಟುಂಬದ ಜತೆ ಕಾಲ ಕಳೆಯಲು ನಿರ್ಧರಿಸಿದ್ದೇನೆ. 35 ವರ್ಷಕ್ಕೂ ಹೆಚ್ಚು ಕಾಲ ಸಿನಿಮಾರಂಗದಲ್ಲಿ ತೊಡಗಿಸಿಕೊಂಡಿದ್ದೇನೆ. ಈಗ ಒಂದು ವರ್ಷ ಬಿಡುವು ಪಡೆದುಕೊಳ್ಳಲು ನಿರ್ಧರಿಸಿದ್ದೇನೆ. ಕುಟುಂಬದ ಜತೆ ಇರಲು ಬಯಸಿದ್ದೇನೆ ಎಂದು ಅಮೀರ್ ತಿಳಿಸಿದ್ದಾರೆ. ಲಾಲ್ ಸಿಂಗ್

ಅದೊಂದು ಸಿನಿಮಾ ಪ್ಲಾಪ್ ಆದ ಹಿನ್ನೆಲೆ
ಚಿತ್ರರಂಗದ ಸಹವಾಸವೇ ಬೇಡ ಎಂದ ನಟ ಅಮಿರ್ ಖಾನ್….!!
Read More »

ಸುಳ್ಯ: ದಲಿತ ಬಾಲಕಿಗೆ ಲೈಂಗಿಕ ದೌರ್ಜನ್ಯ ಪ್ರಕರಣ| ಆರೋಪ ಸುಳ್ಳು ಎಂದವರು ಕಾನತ್ತೂರು ದೈವಸ್ಥಾನಕ್ಕೆ ಬರಲಿ| ಭಜರಂಗಿಗಳಿಗೆ ಅಂಬೇಡ್ಕರ್ ರಕ್ಷಣಾ ವೇದಿಕೆ ಸವಾಲು

ಸಮಗ್ರ ನ್ಯೂಸ್: ಸುಳ್ಯದ ಚೊಕ್ಕಾಡಿಯಲ್ಲಿ ನ.5 ರಂದು ನಡೆದ ದಲಿತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದ ಸಂಬಂಧ ಈ ರೀತಿಯ ಯಾವುದೆ ಪ್ರಕರಣ ನಡೆದಿಲ್ಲ ಎಂದ ಭಜರಂಗದಳದವರುಕಾನತ್ತೂರು ದೈವಸ್ಥಾನಕ್ಕೆ ಬರಲಿ ಎಂದು ಅಂಬೇಡ್ಕರ್ ರಕ್ಷಣಾ ವೇದಿಕೆ ಸವಾಲು ಹಾಕಿದ್ದಾರೆ. ನ.14 ರಂದು ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು ಗೋಪೂಜೆ ಕಾರ್ಯಕ್ರಮದ ವಠಾರದಲ್ಲಿ ದಲಿತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವ ಕುರಿತು ನೊಂದ ಬಾಲಕಿ ನಮ್ಮ ಸಂಘಟನೆಗೆ ದೂರು ನೀಡಿದ್ದಾರೆ.‌ ಆದರೆ

ಸುಳ್ಯ: ದಲಿತ ಬಾಲಕಿಗೆ ಲೈಂಗಿಕ ದೌರ್ಜನ್ಯ ಪ್ರಕರಣ| ಆರೋಪ ಸುಳ್ಳು ಎಂದವರು ಕಾನತ್ತೂರು ದೈವಸ್ಥಾನಕ್ಕೆ ಬರಲಿ| ಭಜರಂಗಿಗಳಿಗೆ ಅಂಬೇಡ್ಕರ್ ರಕ್ಷಣಾ ವೇದಿಕೆ ಸವಾಲು Read More »

ಕೊನೆಗೂ ಸುರತ್ಕಲ್ ಟೋಲ್ ಗೇಟ್ ರದ್ದು

ಸಮಗ್ರ ನ್ಯೂಸ್: ಹಲವು ತಿಂಗಳಿಂದ ಭಾರೀ ವಿವಾದಕ್ಕೆ ಕಾರಣವಾಗಿದ್ದ ಸುರತ್ಕಲ್ ಟೋಲ್‌ಗೇಟ್ ವಿರುದ್ಧ ಟೋಲ್‌ ವಿರೋಧಿ ಹೋರಾಟ ಸಮಿತಿ ಅನಿರ್ದಿಷ್ಟಾವಧಿ ಹೋರಾಟ ನಡೆಸುತ್ತಿದ್ದು ಇದೀಗ ಟೋಲ್ ಸಂಗ್ರಹ ರದ್ದುಪಡಿಸಿರುವುದರ ಬಗ್ಗೆ ಸಂಸದ ನಳಿನ್ ಕುಮಾರ್ ಕಟೀಲ್ ಟ್ವೀಟ್ ಮಾಡಿದ್ದಾರೆ. ಮಂಗಳೂರಿನ ಸುರತ್ಕಲ್ ಸಮೀಪದ ಟೋಲ್ ಸಂಗ್ರಹ ಕೇಂದ್ರ ರದ್ದಾಗಿದ್ದು, ನಮ್ಮ ಮನವಿಗೆ ಸೂಕ್ತವಾಗಿ ಸ್ಪಂದಿಸಿದ ಕೇಂದ್ರ ಸಚಿವರಾದ ನಿತಿನ್ ಗಡ್ಕರಿ ಹಾಗೂ ಪ್ರಧಾನಿ ಮೋದಿ ಅವರಿಗೆ ನಾಗರಿಕರ ಪರವಾಗಿ ಧನ್ಯವಾದಗಳು ಎಂದು ತಿಳಿಸಿದ್ದಾರೆ.

ಕೊನೆಗೂ ಸುರತ್ಕಲ್ ಟೋಲ್ ಗೇಟ್ ರದ್ದು Read More »

ಮುರುಘಾ ಶ್ರೀ ವಿರುದ್ದ ಷಡ್ಯಂತ್ರ| ಇಬ್ಬರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ

ಸಮಗ್ರ ನ್ಯೂಸ್: ಫೋಕ್ಸೋ ಪ್ರಕರಣದಲ್ಲಿ ಜೈಲುಪಾಲಾಗಿರುವ ಮುರುಘಾ ಶ್ರೀಗಳ ವಿರುದ್ಧ ಪಿತೂರಿ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಬಂಧಿತರಾಗಿರುವ ಬಸವರಾಜೇಂದ್ರ, ಬಸವರಾಜನ್ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಚಿತ್ರದುರ್ಗದ 1 ನೇ ಹೆಚ್ಚುವರಿ ಜೆಎಂಎಫ್ ಸಿ ನ್ಯಾಯಾಲಯ ಆದೇಶ ಹೊರಡಿಸಿದೆ. ಮುರುಘಾಮಠದ ಮಾಜಿ ಆಡಳಿತಾಧಿಕಾರಿ ಬಸವರಾಜನ್ ಹಾಗೂ ಮುರುಘಾ ಮಠದ ಶಾಲೆಯ ಶಿಕ್ಷಕ ರಾಜೇಂದ್ರ ಅವರು ಮುರುಘಶ್ರೀ ವಿರುದ್ಧ ಪಿತೂರಿ ನಡೆಸಿದ್ದಾರೆ ಎನ್ನುವ ಆರೋಪದ ಹಿನ್ನೆಲೆಯಲ್ಲಿ ಬಂಧಿಸಲಾಗಿತ್ತು. ಇಂದು ಅವರ ನ್ಯಾಯಾಂಗ ಬಂಧನ ಅವಧಿ ಮುಕ್ತಾಯವಾಗಿದ್ದು,

ಮುರುಘಾ ಶ್ರೀ ವಿರುದ್ದ ಷಡ್ಯಂತ್ರ| ಇಬ್ಬರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ Read More »

ಹಾಲು, ಮೊಸರಿನ ದರದಲ್ಲಿ ₹3 ಏರಿಕೆ| ಗ್ರಾಹಕರಿಗೆ ಕತ್ತರಿ, ಹೈನುಗಾರರಿಗೆ ಬಂಪರ್ ಕೊಡುಗೆ

ಸಮಗ್ರ ನ್ಯೂಸ್: ಪ್ರತಿ ಲೀಟರ್ ನಂದಿನಿ ಹಾಲಿನ ದರದಲ್ಲಿ 3 ರೂಪಾಯಿ ಏರಿಸಲು ಕೆಎಂಎಫ್ ನಿರ್ಧರಿಸಿದೆ. ಹಾಗೂ ಮೊಸರಿನ ಬೆಲೆಯೂ ಕೂಡ 3 ರೂಪಾಯಿ ಏರಿಕೆ ಮಾಡಲಾಗಿದೆ. ಕರ್ನಾಟಕ ಹಾಲು ಒಕ್ಕೂಟವು ನಡೆಸಿದ ಸಭೆಯಲ್ಲಿ ನಂದಿನಿ ಹಾಲಿನ ದರ ಏರಿಕೆಗೆ ಸಂಬಂಧಿಸಿದಂತೆ ಅಂತಿಮ ನಿರ್ಣಯ ಕೈಗೊಳ್ಳಲಾಗಿದೆ. ಹೈನುಗಾರಿಕೆಗೆ ಹೆಚ್ಚಿನ ಒತ್ತು ನೀಡುವುದು ಹಾಗೂ ರೈತರ ಆರ್ಥಿಕ ಅಭಿವೃದ್ಧಿಗಾಗಿ ಪ್ರತಿ ಲೀಟರ್ ಹಾಲು ಹಾಗೂ ಮೊಸರಿನ ಮೇಲೆ 3 ರೂಪಾಯಿ ಹೆಚ್ಚಳ ಮಾಡುವುದಕ್ಕೆ ಕೆಎಂಎಫ್ ನಿರ್ಧರಿಸಿದೆ ಎಂದು ತಿಳಿದು

ಹಾಲು, ಮೊಸರಿನ ದರದಲ್ಲಿ ₹3 ಏರಿಕೆ| ಗ್ರಾಹಕರಿಗೆ ಕತ್ತರಿ, ಹೈನುಗಾರರಿಗೆ ಬಂಪರ್ ಕೊಡುಗೆ Read More »