ಕಾರ್ಕಳ: ಮೀನು ಹಿಡಿಯಲು ಹೋದ ಬಾಲಕ ನೀರು ಪಾಲು
ಕಾರ್ಕಳ: ಮೀನು ಹಿಡಿಯುಲು ಹೋದ ಬಾಲಕನೊರ್ವ ಆಕಸ್ಮಿಕವಾಗಿ ಮದಗಕ್ಕೆ ಬಿದ್ದು ಪ್ರಾಣ ಕಳೆದುಕೊಂಡ ಘಟನೆ ಅಜೆಕಾರು ಠಾಣಾ ವ್ಯಾಪ್ತಿಯ ಎಳ್ಳಾರೆ ಎಂಬಲ್ಲಿ ಸಂಭವಿಸಿದೆ. ಎಳ್ಳಾರೆಯ ಸೋಮನಾಥ ಶೇರಿಗಾರ ಎಂಬವರ ಮಗ ಆದಿತ್ಯ (14) ಮೃತಪಟ್ಟ ಬಾಲಕ. ಈತ ತನ್ನ ಗೆಳೆಯರೊಂದಿಗೆ ಮೀನು ಹಿಡಿಯಲೆಂದು ಮನೆಯಿಂದ ಮನೆ ಸಮೀಪದ ಮದಗಕ್ಕೆ ಹೋಗಿದ್ದ. ಮಧ್ಯಾಹ್ನ 1 ಗಂಟೆಯ ಸುಮಾರಿಗೆ ಮೀನು ಹಿಡಿಯುತ್ತಿದ್ದಾಗ ಆಯ ತಪ್ಪಿ ನೀರಿಗೆ ಬಿದ್ದಿದ್ದಾನೆ.ಘಟನೆಯ ಬಗ್ಗೆ ಅಜೆಕಾರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾರ್ಕಳ: ಮೀನು ಹಿಡಿಯಲು ಹೋದ ಬಾಲಕ ನೀರು ಪಾಲು Read More »










