ಮೈಸೂರಲ್ಲೊಬ್ಬ ಉಕ್ಕಿನ ಮನುಷ್ಯ, ಮಗನ ಶವವನ್ನು ಮನೆಯಲ್ಲೇ ಬಿಟ್ಟು ಕರ್ತವ್ಯದ ಕರೆಗೆ ಓಗೊಟ್ಟ ಅಂಬ್ಯುಲೆನ್ಸ್ ಡ್ರೈವರ್…!
ಮೈಸೂರು: ಮನೆಯಲ್ಲಿ ಮಗ ಮೃತಪಟ್ಟಿದ್ದರೂ ಆತನ ಶವವನ್ನು ಮನೆಯಲ್ಲಿಯೇ ಬಿಟ್ಟು ಆಂಬ್ಯುಲೆನ್ಸ್ ಚಾಲಕ ಒಬ್ಬರು ಕರ್ತವ್ಯ ಕರೆಗೆ ಓಗೊಟ್ಟು ಹೋದ ಘಟನೆ ಮೈಸೂರಿನಲ್ಲಿ ನಡೆದಿದೆ. ಸಹಾಯವಾಣಿ ಕೇಂದ್ರದ ಅಂಬ್ಯುಲೆನ್ಸ್ ಡ್ರೈವರ್ ಆಗಿರುವ ಮುಬಾರಕ್ ಅವರಿಗೆ ಎಲ್ಲೆಡೆಯಿಂದ ಜನರು ಕೊಂಡಾಡುತ್ತಿದ್ದಾರೆ. ಮೈಮೇಲೆ ಬಿಸಿನೀರು ಬಿದ್ದ ಕಾರಣ ಇವರ ಮಗುವು ಮೃತಪಟ್ಟಿತ್ತು. ನಿನ್ನೆ ತಡರಾತ್ರಿ ಈ ಘಟನೆ ನಡೆದಿದೆ. ಮಗುವಿನ ಸಾವಿನಿಂದ ಕಂಗೆಟ್ಟು ಹೋಗಿದ್ದ ನಡುವೆಯೇ ಸಹಾಯವಾಣಿಯಿಂದ ರೋಗಿಯೊಬ್ಬರಿಗೆ ಆಸ್ಪತ್ರೆಗೆ ಸಾಗಿಸುವಂತೆ ಕರೆ ಬಂದಿದೆ. ಮೈಸೂರಿನ ಸಿಗ್ಮಾ ಆಸ್ಪತ್ರೆಯಿಂದ ಚಾಮರಾಜನಗರಕ್ಕೆ […]










