ಪ್ಲಾಸ್ಟಿಕ್ ಮುಕ್ತ ದಸರಾ ಆಚರಣೆಗೆ ಮುಂದಾದ ರಾಜವಂಶಸ್ಥರು
ಸಮಗ್ರ ನ್ಯೂಸ್: ಈ ವರ್ಷ ಪ್ಲಾಸ್ಟಿಕ್ ಮುಕ್ತ ಮೈಸೂರು ದಸರಾ ಆಚರಣೆಗಾಗಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಯದುವಂಶದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಮುಂದಾಗಿದ್ದಾರೆ. ಜಿಎಸ್ಎಸ್ ಯೋಗಸಂಸ್ಥೆಯು ಅಭಿಯಾನ ಆಯೋಜಿಸಿದ್ದು, ದಸರಾ ಕಾರ್ಯಕ್ರಮ ಹಾಗೂ ಪ್ರವಾಸಿ ತಾಣದಲ್ಲಿ ಪ್ಲಾಸ್ಟಿಕ್ ಬಳಸದಂತೆ ಜಾಗೃತಿ ಮೂಡಿಸಲು ಯತ್ನಿಸುತ್ತಿದೆ. ಅಭಿಯಾನಕ್ಕೆ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಜೊತೆಯಾಗಿದ್ದು, ವಿಡಿಯೋ ಸಂದೇಶದ ಮೂಲಕ ಪ್ಲಾಸ್ಟಿಕ್ ಬಳಸದಂತೆ ಮನವಿ ಮಾಡಿದ್ದಾರೆ.
ಪ್ಲಾಸ್ಟಿಕ್ ಮುಕ್ತ ದಸರಾ ಆಚರಣೆಗೆ ಮುಂದಾದ ರಾಜವಂಶಸ್ಥರು Read More »










