ಸಮಗ್ರ ಸಮಾಚಾರ

ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ನಡೆಸಿದ ಆರೋಪಿ ಸೆರೆ

ಮಂಗಳೂರು, ಮೇ ೨೧: ಯುವತಿವೋರ್ವಳಿಗೆ ಮದುವೆಯಾಗುವುದಾಗಿ ನಂಬಿಸಿ, ಆಕೆಯನ್ನು ದೈಹಿಕವಾಗಿ ಬಳಸಿಕೊಂಡು ಕೊನೆಗೆ ವಂಚಿಸಿದ ಆರೋಪಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿದಿಸಿದೆ.ಆರೋಪಿಯನ್ನು ಅರುಣ್ ರಾಜ್ ಕಾಪಿಕಾಡ್ (39) ಎಂದು ಗುರುತಿಸಲಾಗಿದ್ದು, ಈತನನ್ನು ಪಾಂಡೇಶ್ವರದ ಮಹಿಳಾ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಈತ ಯುವತಿಯನ್ನು ಕಳೆದ ಡಿಸೆಂಬರ್‌ನಲ್ಲಿ ನಗರದ ಹೊಟೇಲ್‌ಗೆ ಕರೆತಂದು ಜ್ಯೂಸ್ ನೀಡಿ ಪ್ರಜ್ಞೆ ತಪ್ಪಿಸಿ ಬಲಾತ್ಕಾರವಾಗಿ ಲೈಂಗಿಕ ಸಂಪರ್ಕ ನಡೆಸಿದ್ದಾನೆ. ಅಲ್ಲದೆ ಬೆದರಿಸಿದ್ದಾನೆ ಎಂದು ದೂರು ದಾಖಲಾಗಿದೆ.ಆ ಬಳಿಕ ಆಕೆಯನ್ನು ಮದುವೆಯಾಗುವುದಾಗಿ ನಂಬಿಸಿ ಮತ್ತೊಮ್ಮೆ ತನ್ನ ಅಪಾರ್ಟ್ಮೆಟ್‌ನಲ್ಲೂ […]

ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ನಡೆಸಿದ ಆರೋಪಿ ಸೆರೆ Read More »

ಬ್ಲ್ಯಾಕ್ ಫಂಗಸ್ ಸೋಂಕಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಚಿಕಿತ್ಸೆ: ಸಿಎಂ

ಬೆಂಗಳೂರು: ಬ್ಲ್ಯಾಕ್ ಫಂಗಸ್ ಸೋಂಕಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಚಿಕಿತ್ಸೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಘೋಷಿಸಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಸಿಎಂ ಕೊರೋನಾ ಸೋಂಕಿನಿಂದ ಚೇತರಿಸಿಕೊಂಡವರಿಗೆ ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಕಾಣಿಸಿಕೊಳ್ಳುತ್ತಿದೆ. ಹಾಗಾಗಿ ಇದಕ್ಕೆ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಚಿಕಿತ್ಸೆ ನೀಡಲು ತೀರ್ಮಾನಿಸಿದ್ದೇವೆ. ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ರೋಗಿಗಳಿಗೆ ಚಿಕಿತ್ಸೆ ಲಭ್ಯವಾಗುತ್ತಿದ್ದು ಸರ್ಕಾರ ಚಿಕಿತ್ಸಾ ವೆಚ್ಚ ಭರಿಸಲಿದೆ ಎಂದು ಅವರು ಹೇಳಿದ್ದಾರೆ. ‘ಸಾರ್ವಜನಿಕರು ಕೋವಿಡ್ ಹರಡುವಿಕೆ ತಡೆಯಲು ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು ಹಾಗೂ

ಬ್ಲ್ಯಾಕ್ ಫಂಗಸ್ ಸೋಂಕಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಚಿಕಿತ್ಸೆ: ಸಿಎಂ Read More »

ಮತ್ತೆ 15 ದಿನ ರಾಜ್ಯ ಲಾಕ್: ಏನೇನಿರುತ್ತೆ? ಏನಿರಲ್ಲ?ಇಲ್ಲಿದೆ ಸಂಪೂರ್ಣ ಮಾಹಿತಿ

ಬೆಂಗಳೂರು.ಮೇ21: ರಾಜ್ಯದಲ್ಲಿ ಮೇ.24ರಿಂದ ಜೂನ್ 7ರವರೆಗೆ ವಿಸ್ತರಣೆಗೊಂಡಿರುವಂತ ಸಂಪೂರ್ಣ ಲಾಕ್ ಡೌನ್ ಸಂದರ್ಭದಲ್ಲಿ ಯಾವುದಕ್ಕೆ ಅನುಮತಿ.? ಯಾವುದಕ್ಕೆ ಇಲ್ಲ.? ಇಲ್ಲಿದೆ ಸಂಪೂರ್ಣ ಮಾಹಿತಿ. ಯಾವುದಕ್ಕೆ ಅನುಮತಿ: ಕೋವಿಡ್ ಸುರಕ್ಷಾ ನಿಯಮಗಳೊಂದಿಗೆ ಎಲ್ಲಾ ಬಗೆಯ ನಿರ್ಮಾಣ, ದುರಸ್ತಿ ಚಟುವಟಿಕೆಗಳಿಗೆ ಅನುಮತಿ.ಮುಂಗಾರು ಪೂರ್ವ ಕೃಷಿ ಚಟುವಟಿಕೆಗಳಿಗೂ ಯಾವುದೇ ನಿರ್ಬಂಧವಿಲ್ಲ.ಎಲ್ಲಾ ಬಗೆಯ ಕೈಗಾರಿಕೆಗಳು, ಸಂಸ್ಥೆಗಳು, ಉತ್ಪಾದನಾ ಘಟಕಗಳು ಕಾರ್ಯನಿರ್ವಹಿಸಬಹುದು.ಸಿಬ್ಬಂದಿ ಓಡಾಟಕ್ಕೆ ಸಂಸ್ಥೆಗಳಿಂದ ಪಡೆದುಕೊಂಡ ಐಡಿ ಕಾರ್ಡ್ ತೋರಿಸುವುದು ಕಡ್ಡಾಯ.ಪಡಿತರ ಅಂಗಡಿ ಹಾಗೂ ದಿನಸಿ, ಹಣ್ಣು ತರಕಾರಿ, ಹಾಲಿನ ಬೂತ್, ಮೀನು-ಮಾಂಸ, ಪಶು

ಮತ್ತೆ 15 ದಿನ ರಾಜ್ಯ ಲಾಕ್: ಏನೇನಿರುತ್ತೆ? ಏನಿರಲ್ಲ?ಇಲ್ಲಿದೆ ಸಂಪೂರ್ಣ ಮಾಹಿತಿ Read More »

ಕೇರಳದಲ್ಲಿ ಮತ್ತೆ ಲಾಕ್ ಡೌನ್: ಮೇ.30ರ ವರೆಗೂ‌ ವಿಸ್ತರಣೆ

ತಿರುವನಂತಪುರ:  ರಾಜ್ಯದಲ್ಲಿ ಕೋವಿಡ್ -19 ಲಾಕ್‌ಡೌನ್ ಅನ್ನು ಮೇ 30ರವರೆಗೆ ವಿಸ್ತರಿಸಲಾಗಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶುಕ್ರವಾರ ಪ್ರಕಟಿಸಿದ್ದಾರೆ.ಕೋವಿಡ್ ಪ್ರಕರಣಗಳು ನಿಯಂತ್ರಣಕ್ಕೆ ಬಾರದ ಕಾರಣ ರಾಜ್ಯದ ಮಲಪ್ಪುರಂನಲ್ಲಿ ಟ್ರಿಪಲ್ ಲಾಕ್ ಡೌನ್ ಮುಂದುವರಿಯುತ್ತದೆ ಎಂದು ಅವರು ಹೇಳಿದ್ದಾರೆ.ಇನ್ನೂ ಕೋವಿಡ್ -19 ಟೆಸ್ಟ್ ಪಾಸಿಟಿವಿಟಿ ದರ ಹಾಗೂ ಸಕ್ರಿಯ ಪ್ರಕರಣಗಳು ಕಡಿಮೆಯಾಗಿರುವ ಕಾರಣ ತಿರುವನಂತಪುರ, ಎರ್ನಾಕುಲಂ ಹಾಗೂ  ತ್ರಿಶೂರ್ ಜಿಲ್ಲೆಗಳಲ್ಲಿ ವಿಧಿಸಲಾದ ಟ್ರಿಪಲ್ ಲಾಕ್‌ಡೌನ್‌ನ್ನು ನಾಳೆಯಿಂದ ಹಿಂಪಡೆಯಲಾಗುವುದು ಎಂದು ಅವರು ಹೇಳಿದರು.Attachments area

ಕೇರಳದಲ್ಲಿ ಮತ್ತೆ ಲಾಕ್ ಡೌನ್: ಮೇ.30ರ ವರೆಗೂ‌ ವಿಸ್ತರಣೆ Read More »

ಬ್ರೇಕಿಂಗ್ ಸಮಾಚಾರ: ರಾಜ್ಯದಲ್ಲಿ ಜೂ.7ರ ವರೆಗೆ ಮತ್ತೆ ಲಾಕ್ ಡೌನ್ ವಿಸ್ತರಣೆ

ಬೆಂಗಳೂರು: ಮೇ.21: ರಾಜ್ಯದಲ್ಲಿ ಇನ್ನೂ ನಿರೀಕ್ಷಿತ ಮಟ್ಟದಲ್ಲಿ ಕೊರೋನಾ ಸೋಂಕು ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಲಾಕ್​ಡೌನ್​​ನ ವಿಸ್ತರಿಸಿದೆ. ಮೇ 24ರವರೆಗೆ ಲಾಕ್​ಡೌನ್​ ಘೋಷಿಸಿದ್ದ ಸಿಎಂ ಬಿ.ಎಸ್​. ಯಡಿಯೂರಪ್ಪ ಈಗ ಲಾಕ್​​ಡೌನ್​​ನ ಜೂ.7ರವರೆಗೆ ವಿಸ್ತರಿಸಿ ಆದೇಶ ಹೊರಡಿಸಿದ್ದಾರೆ. ಸಚಿವರ ಜೊತೆ ಸಭೆ ನಡೆಸಿದ ಬಳಿಕ ಮಾಧ್ಯಮಗಳ ಎದುರು ಮತ್ತೆ 14 ದಿನಗಳ ಕಾಲ ರಾಜ್ಯಾದ್ಯಂತ ಟಫ್​ ಲಾಕ್​ಡೌನ್​ ಮುಂದುವರೆಯಲಿದೆ ಎಂದು ಘೋಷಿಸಿದರು. ಹಿರಿಯ ಸಚಿವರು ಹಾಗೂ ಅಧಿಕಾರಿಗಳ ಜೊತೆ ಚರ್ಚಿಸಿದ್ದೇನೆ. ಲಾಕ್‌ಡೌನ್ ವಿಚಾರದಲ್ಲಿ ಕೆಲ ನಿರ್ಧಾರ

ಬ್ರೇಕಿಂಗ್ ಸಮಾಚಾರ: ರಾಜ್ಯದಲ್ಲಿ ಜೂ.7ರ ವರೆಗೆ ಮತ್ತೆ ಲಾಕ್ ಡೌನ್ ವಿಸ್ತರಣೆ Read More »

ಮಂಗಳೂರು: ಲಾರಿ ಢಿಕ್ಕಿ- ಸೈಕಲ್ ಸವಾರ ಸ್ಥಳದಲ್ಲೇ ಸಾವು

ಮಂಗಳೂರು, ಮೇ ೨೧: ರಾ.ಹೆ.ಯ ಬೈಕಂಪಾಡಿಯಲ್ಲಿ ಲಾರಿಯೊಂದು ಸೈಕಲ್ ಸವಾರನಿಗೆ  ಢಿಕ್ಕಿ ಹೊಡೆದ ಪರಿಣಾಮ ಆತ ಸ್ಥಳದಲ್ಲೇ ಸಾವನಪ್ಪಿದ ಘಟನೆ ಶುಕ್ರವಾರ ಸಂಜೆ ನಡೆದಿದೆ.ಮಧು ಕೆ. ಮೃತ ಸೈಕಲ್ ಸವಾರ ಎಂದು ಗುರುತಿಸಲಾಗಿದೆ. ಈತ ಹೈರೇಂಜ್ ಸೆಕ್ಯುರಿಟಿ ಸರ್ವಿಸಸ್‌ನ ಉದ್ಯೋಗಿ ಎಂದು ತಿಳಿದುಬಂದಿದೆ.ಈತ ಸೈಕಲ್‌ನಲ್ಲಿ ತೆರಳುತ್ತಿದ್ದಾಗ ಅತೀ ವೇಗವಾಗಿ, ಅಜಾಗರೂಕತೆಯಿಂದ ಧಾವಿಸಿ ಬಂದ ಲಾರಿ ಢಿಕ್ಕಿ ಹೊಡೆಯಿತು ಎನ್ನಲಾಗಿದ್ದು. ಇದರಿಂದ ಸೈಕಲ್ ಸವಾರ ಸ್ಥಳದಲ್ಲೇ ಕೊನೆಯುಸಿರೆಳೆದರು ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಮಂಗಳೂರು ಉತ್ತರ ಸಂಚಾರ

ಮಂಗಳೂರು: ಲಾರಿ ಢಿಕ್ಕಿ- ಸೈಕಲ್ ಸವಾರ ಸ್ಥಳದಲ್ಲೇ ಸಾವು Read More »

ರಾಜ್ಯದಲ್ಲಿ ಮತ್ತೆರಡು ವಾರ ಲಾಕ್ ಡೌನ್!? ಸಂಜೆ ಸಭೆಯಲ್ಲಿ ನಿರ್ಧಾರ ಸಾದ್ಯತೆ

ಬೆಂಗಳೂರು.ಮೇ.21: ರಾಜ್ಯದಲ್ಲಿ ಕೊರೋನಾ ಮಹಾಮಾರಿ ಮುಂದುವರಿದಿದ್ದು ಈ ನಿಟ್ಟಿನಲ್ಲಿ ಮುಂದಿನ ಎರಡು ವಾರ ಲಾಕ್ ಡೌನ್ ಮಾಡುವುದು ಬಹುತೇಕ ಖಚಿತವಾಗಿದೆ.ವಿಧಾನಸೌಧದಲ್ಲಿಂದು ರಾಜ್ಯದ ಸ್ಥಿತಿಗತಿಗಳ ಬಗ್ಗೆ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಹಿರಿಯ ಅಧಿಕಾರಿಗಳ ಮಹತ್ವದ ಸಭೆ ನಡೆದಿದ್ದು, ಈ ಸಭೆಯಲ್ಲಿ ಒಮ್ಮತ ಅಭಿಪ್ರಾಯ ವ್ಯಕ್ತವಾಗಿದೆ. ವಿಪತ್ತು ನಿರ್ವಹಣಾ ಸಮಿತಿ ಯ ಅಧಿಕಾರಿಗಳು ರಾಜ್ಯದ ಸ್ಥಿತಿಗತಿಯ ಬಗ್ಗೆ ಗಂಭೀರ ಪ್ರಸ್ತಾಪ ಮಾಡಿದ್ದು, ರಾಜ್ಯದ ಭವಿಷ್ಯದ ದೃಷ್ಟಿಯಿಂದ 15 ದಿನ ಲಾಕ್ ಡೌನ್ ಬೇಕು ಎಂದು ಒತ್ತಾಯಿಸಿದ್ದಾರೆ. ಲಾಕ್ ಡೌನ್ ತೆರವಿನಿಂದ

ರಾಜ್ಯದಲ್ಲಿ ಮತ್ತೆರಡು ವಾರ ಲಾಕ್ ಡೌನ್!? ಸಂಜೆ ಸಭೆಯಲ್ಲಿ ನಿರ್ಧಾರ ಸಾದ್ಯತೆ Read More »

ಅಪ್ಪಿಕೋ ಚಳುವಳಿ ನೇತಾರ ಬಹುಗುಣ ಕೊರೊನಾಗೆ ಬಲಿ

ಪರಿಸರವಾದಿ ಹಾಗೂ ಅಪ್ಪಿಕೊ (ಚಿಪ್ಕೊ) ಚಳವಳಿಯ ನೇತಾರ ಸುಂದರಲಾಲ್ ಬಹುಗುಣ (94) ಅವರು ಶುಕ್ರವಾರ ವಿಧಿವಶರಾಗಿದ್ದಾರೆ. ಕೋವಿಡ್ 19 ಸೋಂಕಿಗೆ ತುತ್ತಾಗಿದ್ದ ಸುಂದರಲಾಲ್ ಬಹುಗುಣ ಅವರು ಮೇ 8ರಂದು ರಿಷಿಕೇಶದ ಏಮ್ಸ್​ ಆಸ್ಪತ್ರೆಗೆ ದಾಖಲಾಗಿದ್ದರು. ಸ್ಥಳೀಯ ವರದಿಗಳ ಪ್ರಕಾರ ಅವರು ನ್ಯುಮೋನಿಯಾದಿಂದ ಬಳಲುತ್ತಿದ್ದರು ಮತ್ತು ಮಧುಮೇಹವನ್ನು ಹೊಂದಿದ್ದರು. ಇದನ್ನು ಕೊರೋನಾ ವೈರಸ್ ಪ್ರಕರಣಗಳಲ್ಲಿ ಕೊಮೊರ್ಬಿಡಿಟಿ ಎಂದು ಪರಿಗಣಿಸಲಾಗುತ್ತದೆ. ತಜ್ಞ ವೈದ್ಯರ ತಂಡ ಬಹುಗುಣ ಅವರಿಗೆ ಚಿಕಿತ್ಸೆ ನೀಡುತ್ತಿತ್ತು. ಎಲೆಕ್ಟ್ರೋಲೈಟ್‌ಗಳು ಮತ್ತು ಯಕೃತ್ತಿನ ಕಾರ್ಯವನ್ನು ಒಳಗೊಂಡಂತೆ ರಕ್ತದಲ್ಲಿನ ಸಕ್ಕರೆ

ಅಪ್ಪಿಕೋ ಚಳುವಳಿ ನೇತಾರ ಬಹುಗುಣ ಕೊರೊನಾಗೆ ಬಲಿ Read More »

ಖಾಸಗಿ ಆಂಬ್ಯುಲೆನ್ಸ್ ಗಳಿಗೆ ಪ್ರತಿ ಕಿಲೋಮಿಟರ್‌ಗೆ ದರ ನಿಗದಿ

ಬೆಂಗಳೂರು, ಮೇ ೨೧: ಕೊರೊನಾ ವೈರಸ್‌ನ ಎರಡನೇ ಅಲೆಯಲ್ಲಿ ನಲುಗಿರುವ ಸಂದರ್ಭದಲ್ಲಿ ಕೆಲ ಖಾಸಗಿ ಆಂಬ್ಯುಲೆನ್ಸ್ಗಳು ಬೇಕಾ ಬಿಟ್ಟಿ ಬಾಡಿಗೆಗಳನ್ನು ಪಡೆದುಕೊಳ್ಳುತ್ತಿದೆ. ಇದಕ್ಕೆ ಕಡಿವಾಣ ಹಾಕಲು ಉದ್ದೇಶದಿಂದ ಖಾಸಗಿ ಆಂಬ್ಯುಲೆನ್ಸ್ಗಳಿಗೆ ರಾಜ್ಯಸರ್ಕಾರ ದರವನ್ನು ನಿಗದಿಪಡಿಸಿ ಆದೇಶವನ್ನು ಹೊರಡಿಸಿದೆ. ಎರಡು ವಿಭಾಗದಲ್ಲಿ ಆಂಬ್ಯುಲೆನ್ಸ್ಗಳಿಗೆ ದರವನ್ನು ನಿಗದಿ ಪಡಿಸಲಾಗಿದ್ದು, ಸಾಮಾನ್ಯ ಆಂಬ್ಯುಲೆನ್ಸ್ಗಳಿಗೆ (ಪೇಶೆಂಟ್ ಟ್ರಾನ್ಸ್ಪೋರ್ಟ್ ಆಂಬ್ಯುಲೆನ್ಸ್)ಮೊದಲ ೧೦ ಕಿ.ಮೀಟರ್‌ಗಳಿಗೆ ೧೫೦೦ ರೂ.ಗರಿಷ್ಟದರವನ್ನು ನಿಗದಿಗೊಳಿಸಲಾಗಿದೆ. ೧೦ ನಂತರದ ಪ್ರಯಾಣಕ್ಕೆ ಪ್ರತಿ ಕಿ.ಮೀಗೆ ೧೨೦ ರೂಪಾಯಿ ನಿಗದಿಗೊಳಿಸಲಾಗಿದೆ. ಇದು ಆಮ್ಲಜನಕ, ಪಿಪಿಇ ಕಿಟ್,

ಖಾಸಗಿ ಆಂಬ್ಯುಲೆನ್ಸ್ ಗಳಿಗೆ ಪ್ರತಿ ಕಿಲೋಮಿಟರ್‌ಗೆ ದರ ನಿಗದಿ Read More »

ಮಹಾರಾಷ್ಟ್ರ: 13 ನಕ್ಸಲರ ಎನ್ಕೌಂಟರ್

ಮಹಾರಾಷ್ಟ್ರ: ರಾಜ್ಯದ ಗಡಚಿರೋಲಿ ಜಿಲ್ಲೆಯ ಕೊಟ್ಮಿ ಅರಣ್ಯ ಪ್ರದೇಶದಲ್ಲಿ ಸಿ-60 ಕಮಾಂಡೋ ಪೊಲೀಸರು ಮತ್ತು ಮಾವೋವಾದಿಗಳ ನಡುವಿನ ಗುಂಡಿನ ಚಕಮಕಿಯಲ್ಲಿ 13 ನಕ್ಸಲರು ಹತ್ಯೆಯಾದ ಘಟನೆ ಇಂದು ಮುಂಜಾನೆ ನಡೆದಿದೆ. ಮುಂಜಾನೆ ಐದು ಮೂವತ್ತರ ಸುಮಾರಿಗೆ ಮಾವೋವಾದಿಗಳು ಅರಣ್ಯದ ನಡುವೆ ಒಟ್ಟು ಸೇರಿರುವುದಾಗಿ ಖಚಿತ ಮಾಹಿತಿ ಪಡೆದ ಪೊಲೀಸರು ಸುಸಜ್ಜಿತ ದಾಳಿ ನಡೆಸಿ ನಕ್ಸಲರನ್ನು ಎನ್ಕೌಂಟರ್ ಮಾಡಿದ್ದಾರೆ. ಪೊಲೀಸರನ್ನು ಕಂಡ ನಕ್ಸಲರು ತೀವ್ರ ಪ್ರತಿದಾಳಿ ನಡೆಸಿದ್ದು, ಒಂದು ಗಂಟೆಗೂ ಹೆಚ್ಚು ಕಾಲ ನಡೆದ ಗುಂಡಿನ ಚಕಮಕಿಯಲ್ಲಿ ಒಟ್ಟು

ಮಹಾರಾಷ್ಟ್ರ: 13 ನಕ್ಸಲರ ಎನ್ಕೌಂಟರ್ Read More »