ಸಮಗ್ರ ಸಮಾಚಾರ

ಪ್ರಿಯಕರನ ಜೊತೆ ಸೇರಿ ಪತಿಯ ಬದುಕಿಗೆ ಕೊಳ್ಳಿಯಿಟ್ಟ ಪತ್ನಿ, ಸುರಸುಂದರಿಯ ಲವ್ವಿ ಡವ್ವಿಗೆ ಮಗು ತಬ್ಬಲಿ

ಬೆಂಗಳೂರು: ಪ್ರಿಯಕರನ ಜೊತೆ ಕಾಲ ಕಳೆಯಲು ಪತಿಯಿಂದ ಅಡ್ಡಿಯಾಗುತ್ತಿದೆ ಎಂದು ಪತಿಯನ್ನೇ ಕೊಂದು, ನಾಪತ್ತೆಯ ನಾಟಕವಾಡಿ ಪತ್ನಿ ಸಿಕ್ಕಿಬಿದ್ದ ಘಟನೆ ಕೆ.ಜಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪತ್ನಿ ರಂಜಿತಾ, ಪ್ರಿಯಕರ ಸಂಜೀವ್, ಸುಬ್ರಮಣ್ಯ ಬಂಧಿತ ಆರೋಪಿಗಳು. ರಂಜಿತಾ ಐದು ವರ್ಷದ ಹಿಂದೆ ಆಟೋ ಚಾಲಕವಾಗಿದ್ದ ಕಾರ್ತಿಕ್ ಎಂಬತಾನನ್ನು ಪ್ರೀತಿಸಿ ಮದುವೆ ಆಗಿದ್ದಳು. ಇಬ್ಬರ ಮದುವೆಗೆ ಸಾಕ್ಷಿ ಎಂಬಂತೆ ನಾಲ್ಕು ವರ್ಷದ ಹೆಣ್ಣು ಮಗುವಿದೆ. ಕೊಲೆಯಾದ ಕಾರ್ತಿಕ್ ಗೆ ಸಂಜೀವ್ ಸ್ನೇಹಿತನಾಗಿದ್ದ, ಇಬ್ಬರು ಜೊತೆಯಲ್ಲಿ ಇರುತಿದ್ದರು, […]

ಪ್ರಿಯಕರನ ಜೊತೆ ಸೇರಿ ಪತಿಯ ಬದುಕಿಗೆ ಕೊಳ್ಳಿಯಿಟ್ಟ ಪತ್ನಿ, ಸುರಸುಂದರಿಯ ಲವ್ವಿ ಡವ್ವಿಗೆ ಮಗು ತಬ್ಬಲಿ Read More »

ಗಡಿಜಿಲ್ಲೆಗಳಲ್ಲಿ ಕೋವಿಡ್ ಹೆಚ್ಚಳ- ಸಿಎಂ ಕಳವಳ- ಇಂದು ವಿಡಿಯೋ ಕಾನ್ಫರೆನ್ಸ್

ಮಂಗಳೂರು (ಜು. 30): ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ಕಡಿಮೆಯಾಯ್ತು ಎನ್ನುವಷ್ಟರಲ್ಲಿ ಮೂರನೇ ಅಲೆ ಶುರುವಾಗುವ ಆತಂಕ ಎದುರಾಗಿದೆ. ಪಕ್ಕದ ಕೇರಳ ರಾಜ್ಯದಲ್ಲಿ ಕೊರೊನಾ ಕೇಸ್ ಭಾರೀ ಸಂಖ್ಯೆಯಲ್ಲಿ ಹೆಚ್ಚಳ ಹಿನ್ನಲೆಯಲ್ಲಿ ಗಡಿ ಜಿಲ್ಲೆ ದಕ್ಷಿಣಕನ್ನಡದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಸಿ.ಎಂ ಬಸವರಾಜ ಬೊಮ್ಮಾಯಿ ಸೂಚನೆ ಹಿನ್ನಲೆಯಲ್ಲಿ ಸ್ವತಃ ಜಿಲ್ಲಾಧಿಕಾರಿಗಳೆ ಗಡಿಗಳಿಗೆ ಭೇಟಿ ನೀಡಿ ತಪಾಸಣೆ ನಡೆಸಿದ್ದಾರೆ. ಗಡಿ ಜಿಲ್ಲೆಗಳಲ್ಲಿ ಸೋಂಕು ಹೆಚ್ಚುತ್ತಿರುವ ಹಿನ್ನಲೆ ಆತಂಕ ವ್ಯಕ್ತಪಡಿಸಿರುವ ಸಿಎಂ ಸೋಂಕು ನಿಯಂತ್ರಣ ಸಂಬಂಧ ನಾಳೆ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.

ಗಡಿಜಿಲ್ಲೆಗಳಲ್ಲಿ ಕೋವಿಡ್ ಹೆಚ್ಚಳ- ಸಿಎಂ ಕಳವಳ- ಇಂದು ವಿಡಿಯೋ ಕಾನ್ಫರೆನ್ಸ್ Read More »

ಕಿರುತೆರೆಗೆ ಎಂಟ್ರಿ ಕೊಡಲಿದ್ದಾರೆ ಪ್ರಜ್ವಲ್ ದೇವರಾಜ್

ಬೆಂಗಳೂರು: ಸಿಕ್ಸರ್ ಸಿನಿಮಾ ಮೂಲಕ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿರುವ ಪ್ರಜ್ವಲ್ ದೇವರಾಜ್ ಇನ್ಮುಂದೆ ನಿಮ್ಮ ಮನೆ ಟಿವಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಡ್ಯಾನ್ಸ್ ಶೋ ಒಂದರ ಜಡ್ಜ್ ಆಗಿ ಪ್ರಜ್ವಲ್ ದೇವರಾಜ್ ಕಿರುತೆರೆಗೆ ಬರುತ್ತಿದ್ದು, ಶೋನ ಪ್ರೋಮೊ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಕಿರುತೆರೆಯಲ್ಲಿ ಡ್ಯಾನ್ಸ್ ರಿಯಾಲಿಟಿ ಶೋಗಳು ಈಗಾಗಲೇ ಬಿತ್ತರವಾಗುತ್ತಿದ್ದು, ಈ ನಡುವೆ ಸ್ಟಾರ್ ಸುವರ್ಣ ಹೊಸದೊಂದು ಡ್ಯಾನ್ಸ್ ಶೋ ಆಯೋಜಿಸುತ್ತಿದೆ. ಇದಕ್ಕೆ ಪ್ರಜ್ವಲ್ ದೇವರಾಜ್ ಅವರನ್ನು ತೀರ್ಪುಗಾರರನ್ನಾಗಿ ಆಹ್ವಾನಿಸಿದೆ. ಒಳ್ಳೆಯ ಡ್ಯಾನ್ಸರ್ ಆಗಿರುವ ಪ್ರಜ್ವಲ್ ದೇವರಾಜ್ ಚಾನೆಲ್

ಕಿರುತೆರೆಗೆ ಎಂಟ್ರಿ ಕೊಡಲಿದ್ದಾರೆ ಪ್ರಜ್ವಲ್ ದೇವರಾಜ್ Read More »

ರಾಜ್ಯದ 30ನೇ‌ ಸಿಎಂ ಆಗಿ ಬಸವರಾಜ ಬೊಮ್ಮಾಯಿ ಪ್ರಮಾಣವಚನ ಸ್ವೀಕಾರ

ಬೆಂಗಳೂರು : ನಿನ್ನೆಯಷ್ಟೇ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ನಿಯೋಜನೆಗೊಂಡಿದ್ದಂತ ಬಸವರಾಜ ಬೊಮ್ಮಾಯಿಯವರು, ರಾಜಭವನದಲ್ಲಿ ನಡೆದಂತ ಸರಳ ಸಮಾರಂಭದಲ್ಲಿ, 30ನೇ ಮುಖ್ಯಮಂತ್ರಿಯಾಗಿ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಇವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ರಾಜಕೀಯ ಹಿನ್ನಲೆ, ಉತ್ತಮ ನಡೆ, ವಿದ್ಯಾರ್ಹತೆ ಹೊಂದಿರುವವರು, ರಾಜಕೀಯ ಅನುಭವ ಹೊಂದಿರುವಂತ ಬಸವರಾಜ ಬೊಮ್ಮಾಯಿಯವರನ್ನು ಬಿಎಸ್ ಯಡಿಯೂರಪ್ಪ ನಂತ್ರ, ಕರ್ನಾಟಕದ 30ನೇ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿತ್ತು. ಇಂತಹ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ರಾಜಭವನದ ಗಾಜಿನ ಅರಮನೆಯಲ್ಲಿ

ರಾಜ್ಯದ 30ನೇ‌ ಸಿಎಂ ಆಗಿ ಬಸವರಾಜ ಬೊಮ್ಮಾಯಿ ಪ್ರಮಾಣವಚನ ಸ್ವೀಕಾರ Read More »

ತಾಯಿಯ ಆಶೀರ್ವಾದ, ತರವಾಡು ಮನೆ ಭೇಟಿ: ಸ್ಪಷ್ಟನೆ ನೀಡಿದ ನಳಿನ್ ಕುಮಾರ್

ಸವಣೂರು: ದ.ಕ.ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ತಾಯಿಯ ಆಶೀರ್ವಾದ ಹಾಗೂ ದೈವ ದೇವರುಗಳಿಗೆ ಪ್ರಾರ್ಥನೆ ಸಲ್ಲಿಸಿದಕ್ಕೆ ವಿಶೇಷ ಅರ್ಥ ಕಲ್ಪಿಸುವುದು ಬೇಡ ಎಂದು ಅವರು ಹೇಳಿದ್ದಾರೆ. ನಳಿನ್ ಕುಮಾರ್ ತನ್ನ ಹುಟ್ಟೂರು ಕಡಬದ ಪಾಲ್ತಾಡಿ ಗ್ರಾಮದ ಕುಂಜಾಡಿಗೆ ಬಂದು ತಾಯಿಯ ಆಶೀರ್ವಾದ ಹಾಗೂ ದೈವ ದೇವರುಗಳಿಗೆ ಪ್ರಾರ್ಥನೆ ಸಲ್ಲಿಸಿದ್ದರು. ಬಳಿಕ ಅವರು ದೆಹಲಿಗೆ ತೆರಳಿದ್ದರು. ಈ ವಿಚಾರ ಬಹಿರಂಗವಾಗುತ್ತಿದ್ದಂಂತೆ ಮುಂದಿನ ಸಿಎಂ ನಳಿನ್ ಕುಮಾರ ಎಂದು ಕೆೆಲವು ಮಾಧ್ಯಮಗಳು ವರದಿ ಮಾಡಿದ್ದವು. ಅಲ್ಲದೆ

ತಾಯಿಯ ಆಶೀರ್ವಾದ, ತರವಾಡು ಮನೆ ಭೇಟಿ: ಸ್ಪಷ್ಟನೆ ನೀಡಿದ ನಳಿನ್ ಕುಮಾರ್ Read More »

ದುಃಖದಿಂದ ರಾಜೀನಾಮೆ ನೀಡುತ್ತಿಲ್ಲ ಬದಲಿಗೆ ಸಂತೋಷದಿಂದ ರಾಜೀನಾಮೆ ನೀಡುತ್ತಿದ್ದೇನೆ: ಸಿಎಂ ಯಡಿಯೂರಪ್ಪ

ಬೆಂಗಳೂರು: ಹಲವು ದಿನಗಳಿಂದ ನಡೆಯುತ್ತಿದ್ದ ಕರ್ನಾಟಕ ಸಿಎಂ ಬದಲಾವಣೆ ವಿಚಾರ ಇಂದು ತಾರ್ಕಿಕ ಅಂತ್ಯಕ್ಕೆ ತಲುಪಿದೆ. ಬಿ.ಎಸ್ ಯಡಿಯೂರಪ್ಪನವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಇಂದು ಸಾಧನಸಮಾವೇಶದಲ್ಲಿ ಘೋಷಿಸಿದ್ದಾರೆ. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ 2 ವರ್ಷಗಳ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ನಾನು ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ. ಊಟದ ನಂತರ ನಾನು ರಾಜ್ಯಪಾಲರನ್ನು ಭೇಟಿಯಾಗುತ್ತೇನೆ, ರಾಜೀನಾಮೆ ಪತ್ರ ಸಲ್ಲಿಸುತ್ತೇವೆ” ಎಂದು ಘೋಷಿಸಿದ್ದಾರೆ. ದುಃಖತಪ್ತರಾಗಿ ಮಾತನಾಡಿದ ಅವರು “75 ವರ್ಷ ದಾಟಿದ ಯಡಿಯೂರಪ್ಪನವರನ್ನು ಮತ್ತೆ ಎರಡು ವರ್ಷ

ದುಃಖದಿಂದ ರಾಜೀನಾಮೆ ನೀಡುತ್ತಿಲ್ಲ ಬದಲಿಗೆ ಸಂತೋಷದಿಂದ ರಾಜೀನಾಮೆ ನೀಡುತ್ತಿದ್ದೇನೆ: ಸಿಎಂ ಯಡಿಯೂರಪ್ಪ Read More »

ಪಿಯುಸಿ ಫಲಿತಾಂಶ ಪ್ರಕಟ: ಎಲ್ಲಾ ವಿದ್ಯಾರ್ಥಿಗಳು ಪಾಸ್

ಬೆಂಗಳೂರು: ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟಗೊಂಡಿದ್ದು ಎಲ್ಲಾ ವಿದ್ಯಾರ್ಥಿಗಳು ಪಾಸ್ ಆಗಿದ್ದರೆ. ದಕ್ಷಿಣ ಕನ್ನಡದ 445 ವಿದ್ಯಾರ್ಥಿಗಳು 600ಕ್ಕೆ 600 ಅಂಕ ಪಡೆದಿದ್ದು ಈ ಮೂಲಕ ದ.ಕ. ಪ್ರಥಮ ಸ್ಥಾನ ಗಳಿಸಿದೆ. ಬೆಂಗಳೂರು ದಕ್ಷಿಣವೂ ದ್ವಿತೀಯ ಸ್ಥಾನದಲ್ಲಿದ್ದು, 302 ವಿದ್ಯಾರ್ಥಿಗಳಿಗೆ 600ಕ್ಕೆ 600 ಅಂಕ ಲಭಿಸಿದೆ. 2ನೇ ಪಿಯು ಫಲಿತಾಂಶದಲ್ಲಿ ಬೆಂಗಳೂರು ಉತ್ತರ 3ನೇ ಸ್ಥಾನ ಪಡೆದುಕೊಂಡಿದೆ. ಬೆಂಗಳೂರು ಉತ್ತರದ 261 ವಿದ್ಯಾರ್ಥಿಗಳಿಗೆ 600ಕ್ಕೆ 600 ಅಂಕ ದೊರಕಿದೆ. ಇನ್ನು ಕೃಷ್ಣ ನಗರಿ ಉಡುಪಿ

ಪಿಯುಸಿ ಫಲಿತಾಂಶ ಪ್ರಕಟ: ಎಲ್ಲಾ ವಿದ್ಯಾರ್ಥಿಗಳು ಪಾಸ್ Read More »

ವಿದ್ಯಾರ್ಥಿಗಳು ಪ್ರಿಪೇಡ್‌ ಎಜುಕೇಷನ್ App ಡೌನ್‌ಲೋಡ್ ಮಾಡಿಕೊಳ್ಳುವುದು ಹೇಗೆ?

ಬಾಗಲಕೋಟೆಯ ಜನಪ್ರಿಯ ನೆಪ್ರೊಲಜಿಸ್ಟ್ ಡಾ. ಸಂದೀಪ್ ಹುಯಿಲಗೋಳ ಅವರು ಒಂದಿಷ್ಟು ಸಮಾನಾಸಕ್ತ ತಂಡವನ್ನು ಕಟ್ಟಿಕೊಂಡು ಆರಂಭಿಸಿದ ಪ್ರಿಪೆಡ್‌ ಕಲಿಕಾ ಆಪ್‌ಗೆ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗಿದೆ. ಮುಖ್ಯವಾಗಿ ನರ್ಸಿಂಗ್‌, ಪ್ಯಾರಾಮೆಡಿಕಲ್‌ ಮತ್ತು ಅಲೈಡ್‌ ಹೆಲ್ತ್ ಕೇರ್‌ ವಿದ್ಯಾರ್ಥಿಗಳಿಗೆ, ಇಂಗ್ಲಿಷ್‌ನಲ್ಲಿ ಕಲಿಯುವುದು ಕಷ್ಟ ಎನ್ನುವವರಿಗೆ ಈ ವೈದ್ಯರ ತಂಡವು ಸರಳವಾಗಿ ಆಪ್‌ ಮೂಲಕ ಬೋಧಿಸುತ್ತಿದೆ. ಶೈಕ್ಷಣಿಕ ಹಬ್ ಆದ ಬಾಗಲಕೋಟೆಯ ಡಾ. ಸಂದೀಪ್ ಅವರು ಕನ್ನಡ ವಿದ್ಯಾರ್ಥಿಗಳಿಗೆ ಅರ್ಥವಾಗುವಂತೆ ನರ್ಸಿಂಗ್, ಪ್ಯಾರಾಮೆಡಿಕಲ್ ಮತ್ತು ಆರೋಗ್ಯಸೇವೆಯ ಬೋಧಿಸುವ ವಿಶೇಷ ಸೇವೆ ಪರಿಚಯಿಸಿದ್ದಾರೆ.

ವಿದ್ಯಾರ್ಥಿಗಳು ಪ್ರಿಪೇಡ್‌ ಎಜುಕೇಷನ್ App ಡೌನ್‌ಲೋಡ್ ಮಾಡಿಕೊಳ್ಳುವುದು ಹೇಗೆ? Read More »

ಇನ್ನು ಮುಂದೆ ಆನ್ ಲೈನ್ ನಲ್ಲೇ‌ ಪಡೆಯಬಹುದು ಋಣಭಾರ ಪ್ರಮಾಣ ಪತ್ರ

ಬೆಂಗಳೂರು : ಋಣಭಾರ ಪ್ರಮಾಣ ಪತ್ರ ವನ್ನು ಆನ್ ಲೈನ್ ನಲ್ಲೇ‌ ಪಡೆಯಲು ಅವಕಾಶ ಕಲ್ಪಿಸುವ ಮೂಲಕ ಆಸ್ತಿ ತೆರಿಗೆದಾರರಿಗೆ ಸರಕಾರ ಸಿಹಿಸುದ್ದಿ ನೀಡಿದೆ. ಆಸ್ತಿಗಳ ಋಣಭಾರ ಪ್ರಮಾಣ ಪತ್ರ (ಇ.ಸಿ) ಪಡೆಯಲು ಸಬ್ ರಿಜಿಸ್ಟಾರ್ ಕಚೇರಿಗೆ ಹೋಗಿ ಕ್ಯೂ ನಿಲ್ಲಬೇಕಿತ್ತು. ಆದರೆ ಮುಂದಿನ ದಿನಗಳಲ್ಲಿ ಇದಕೆಲ್ಲಾ ಅವಕಾಶ ನೀಡದೆ ತಮ್ಮ ತಮ್ಮ ಮನೆ, ಕಚೇರಿಗಳಲ್ಲೇ ಕುಳಿತು ಆನ್ ಲೈನ್ ಮೂಲಕ ಇ.ಸಿ. ಪಡೆಯಬಹುದು ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ. ಸರ್ಕಾರಕ್ಕೆ ಪಾವತಿಸಬೇಕಾದ ಶುಲ್ಕವನ್ನು

ಇನ್ನು ಮುಂದೆ ಆನ್ ಲೈನ್ ನಲ್ಲೇ‌ ಪಡೆಯಬಹುದು ಋಣಭಾರ ಪ್ರಮಾಣ ಪತ್ರ Read More »

ಸುಳ್ಯ: ಜೀತ ಕಾರ್ಮಿಕ ಪದ್ದತಿ ಇನ್ನೂ ಜೀವಂತ, ಮಕ್ಕಳು, ಮಹಿಳೆಯರಿಂದ ಸಂಬಳವಿಲ್ಲದ ದುಡಿಮೆ; ಅಧಿಕಾರಿಗಳಿಂದ ದಾಳಿ | ಸಾಮಾಜಿಕ ಸೇವೆಯೆಂದ ಮನೆ ಯಜಮಾನ!

ಸುಳ್ಯ: ಮನೆಯಲ್ಲಿ ಮಕ್ಕಳು, ಮಹಿಳೆಯರು ಸೇರಿದಂತೆ ಸೇರಿದಂತೆ ಹಲವು ಮಂದಿಗೆ ಸಂಬಳ ನೀಡದೆ ದುಡಿಸುತ್ತಿರುವುದು ಕಂಡುಬಂದು, ಅಧಿಕಾರಿಗಳು ದಾಳಿ ನಡೆಸಿದ ಘಟನೆ ದ.ಕ ಜಿಲ್ಲೆಯ ಸುಳ್ಯ ತಾಲೂಕಿನ ಪಂಜ ಗ್ರಾಮದ ಕರಿಕಳದಲ್ಲಿ ನಡೆದಿದೆ. ಪಂಜ ಗ್ರಾಮದ ಕರಿಕಳದ ವಿಶ್ವನಾಥ್ ಭಟ್ ಎಂಬವರ ಮನೆಯಲ್ಲಿ ಈ ಘಟನೆ‌ ನಡೆದಿದ್ದು ಇಲ್ಲಿ ಸುಮಾರು 8-10 ಮಕ್ಕಳು ಹಾಗೂ ಮಹಿಳೆಯರನ್ನು ದುಡಿಯುತ್ತಿದ್ದರು. ಆದರೆ ಇವರ ದುಡಿಮೆಗೆ ಯಾವುದೇ ರೀತಿಯಲ್ಲಿ ಸಂಬಳವನ್ನು ನೀಡಲಾಗುತ್ತಿಲ್ಲ ಎನ್ನಲಾಗಿದೆ. ಇದಕ್ಕೆ ಪೂರಕವಾಗಿ ಪುಟ್ಟ ಪುಟ್ಟ ಮಕ್ಕಳು ದನ

ಸುಳ್ಯ: ಜೀತ ಕಾರ್ಮಿಕ ಪದ್ದತಿ ಇನ್ನೂ ಜೀವಂತ, ಮಕ್ಕಳು, ಮಹಿಳೆಯರಿಂದ ಸಂಬಳವಿಲ್ಲದ ದುಡಿಮೆ; ಅಧಿಕಾರಿಗಳಿಂದ ದಾಳಿ | ಸಾಮಾಜಿಕ ಸೇವೆಯೆಂದ ಮನೆ ಯಜಮಾನ! Read More »