ಸಮಗ್ರ ಸಮಾಚಾರ

ಬೆಳ್ತಂಗಡಿ: ಹೆಂಡತಿಯ ಕೈಗೆ ಚೊಂಬು ಕೊಟ್ಟು ನಾದಿನಿಯನ್ನು ಹಾರಿಸಿಕೊಂಡು ಹೋದ ಗಂಡ

ಬೆಳ್ತಂಗಡಿ: ನವ ವಿವಾಹಿತ ಓರ್ವ ತನ್ನ ಹೆಂಡತಿಯನ್ನು ಬಿಟ್ಟು ನಾದಿನಿಯ ಜೊತೆ ಪರಾರಿಯಾದ ಘಟನೆ ಘಟನೆ ಬೆಳ್ತಂಗಡಿ ತಾಲೂಕಿನ ಕನ್ಯಾಡಿ ಗ್ರಾಮದ ಕೈಕಂಬ ಎಂಬಲ್ಲಿ ನಡೆದಿದೆ. ಪರಾರಿಯಾದವರನ್ನು ಮುಸ್ತಾಫ್ ಮತ್ತು ರೈಹಾನಳ ಎಂದು ಹೇಳಲಾಗಿದೆ. ಮುಸ್ತಫಾ 9 ತಿಂಗಳ ಹಿಂದೆ ಮುಹಮ್ಮದ್ ಅವರ ಪುತ್ರಿ ಸೌಧಾ ಎಂಬಾಕೆಯನ್ನು ವಿವಾಹ ವಾಗಿದ್ದನು. ಅನಂತರ ಆತ ಮತ್ತು ಪತ್ನಿ ಸೌದ ಮಾವನ ಮನೆಗೆ ಬಂದು ಹೋಗುತ್ತಿದ್ದರು. ಈ ಸಂದರ್ಭ ನಾದಿನಿ ರೈಹಾನಳ ಜೊತೆಗೆ ಅಳಿಯ ಮುಸ್ತಫಾ ಸಲುಗೆಯಿಂದ ಇದ್ದುದ್ದಲ್ಲದೇ ಪೋನ್ […]

ಬೆಳ್ತಂಗಡಿ: ಹೆಂಡತಿಯ ಕೈಗೆ ಚೊಂಬು ಕೊಟ್ಟು ನಾದಿನಿಯನ್ನು ಹಾರಿಸಿಕೊಂಡು ಹೋದ ಗಂಡ Read More »

ಆಧಾರ್ ಕಾರ್ಡ್ ನೋಂದಣಿ ಮತ್ತು ತಿದ್ದುಪಡಿಗೆ ಗ್ರಾಮ ಪಂಚಾಯತ್ ನಲ್ಲಿ ಅವಕಾಶ

ಬೆಂಗಳೂರು: ಆಧಾರ್ ಕಾರ್ಡ್ ನೋಂದಣಿ ಮತ್ತು ತಿದ್ದುಪಡಿ ಕೇಂದ್ರಗಳನ್ನು ಗ್ರಾಮ ಪಂಚಾಯತ್ ಮಟ್ಟದಲ್ಲಿ ಆರಂಭಿಸಲು ಈಗಾಗಲೇ ಆದೇಶ ಹೊರಬಿದ್ದಿದೆ. ಆಧಾರ್ ಕಾರ್ಡ್ ಇಂದು ಬಹುತೇಕ ಎಲ್ಲ ಸೇವೆಗಳಿಗೆ ಅನಿವಾರ್ಯವಾಗಿದೆ. ಆದರೆ ಆಧಾರ್ ಕಾರ್ಡ್ ನೊಂದಣಿ ಮಾಡಲು ಅಥವಾ ತಿದ್ದುಪಡಿ ಮಾಡಲು ನಗರ ಪ್ರದೇಶಗಳಿಗೆ ಅಲೆದಾಡ ಬೇಕಾಗುತ್ತದೆ. ಇದೀಗ ಅದೆಕೆಲ್ಲ ಬ್ರೇಕ್ ಹಾಕಲು ಸರಕಾರಿ ನಿರ್ಧರಿಸಿದ್ದು ಗ್ರಾಮೀಣ ಮಟ್ಟದಲ್ಲಿ ನೋಂದಣಿ ಮತ್ತು ತಿದ್ದುಪಡಿ ಮಾಡಲು ಅವಕಾಶ ಕಲ್ಪಿಸಿದೆ. ಇನ್ನೂ ಕೊರೊನಾ ಲಸಿಕೆ ಪಡೆಯಲು ಸಹ ಆಧಾರ್ ಸಂಖ್ಯೆ ಅನಿವಾರ್ಯವಾಗಿದ್ದು

ಆಧಾರ್ ಕಾರ್ಡ್ ನೋಂದಣಿ ಮತ್ತು ತಿದ್ದುಪಡಿಗೆ ಗ್ರಾಮ ಪಂಚಾಯತ್ ನಲ್ಲಿ ಅವಕಾಶ Read More »

ಕರಾವಳಿಯಲ್ಲಿ ಮತ್ತೆ ತಳವಾರ ಝಳಪಿಸಿದ ದುಷ್ಕರ್ಮಿಗಳು, ಗ್ರಾ.ಪಂ ಅಧ್ಯಕ್ಷನ ಕೊಲೆ ಯತ್ನ

ಕಾಪು: ಮಜೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಗಣೇಶ್ ಶೆಟ್ಟಿ ಹೇರೂರು ಇವರ ಕೊಲೆ ಯತ್ನ ನಡೆದ ಬಗ್ಗೆ ವರದಿಯಾಗಿದೆ. ಬಂಟಕಲ್ಲು ಹೇರೂರಿನಲ್ಲಿ ತನ್ನ ಅಂಗಡಿ ಬಾಗಿಲು ಮುಚ್ಚುವ ಸಮಯದಲ್ಲಿ ಸ್ಥಳಕಾಗಮಿಸಿದ ತಲವಾರು ಸಮೇತವಾಗಿ ಬೈಕಿನಲ್ಲಿ ಬಂದ ದುಷ್ಕರ್ಮಿಗಳು ಗಣೇಶ್ ಶೆಟ್ಟಿಯ ಮೇಲೆ ಹಲ್ಲೆ ನಡೆಸಿ ಕೊಲೆಯತ್ನ ನಡೆಸಲು ಪ್ರಯತ್ನಿಸಿದರು ಈ ಸಮಯದಲ್ಲಿ ಬೊಬ್ಬೆ ಹಾಕಿದ ಶೆಟ್ಟಿ ಪಾರಾಗಲು ಯತ್ನಿಸಿದರು ಈ ಸಂಧರ್ಭದಲ್ಲಿ ಬೊಬ್ಬೆ ಕೇಳಿದ ಸ್ಥಳೀಯರು ಜಮಾವಣೆಯಾಗಿ ದುಷ್ಕರ್ಮಿಗಳಿಗೆ ಗೂಸ ನೀಡಿದ್ದಾರೆ. ಗಣೇಶ್ ಶೆಟ್ಟಿ ಹೆರೂರು

ಕರಾವಳಿಯಲ್ಲಿ ಮತ್ತೆ ತಳವಾರ ಝಳಪಿಸಿದ ದುಷ್ಕರ್ಮಿಗಳು, ಗ್ರಾ.ಪಂ ಅಧ್ಯಕ್ಷನ ಕೊಲೆ ಯತ್ನ Read More »

ರಾಜ್ಯ ರಾಜಕಾರಣಕ್ಕೆ ವಾಪಾಸ್ಸಾಗ್ತಾರಾ‌ ಡಿ.ವಿ.ಎಸ್?ರಾಜೀನಾಮೆ ಬೆನ್ನಲ್ಲೇ ಗರಿಗೆದರಿದ ರಾಜ್ಯ ರಾಜಕೀಯ.

ಬೆಂಗಳೂರು. ಕೇಂದ್ರ ಸಚಿವ ಸಂಪುಟಕ್ಕೆ ಡಿ.ವಿ ಸದಾನಂದ ಗೌಡ ರಾಜೀನಾಮೆ ನೀಡಿರುವ‌ ಬೆನ್ನಲ್ಲೇ ರಾಜ್ಯ ರಾಜಕಾರಣದಲ್ಲಿ ಬೆಳವಣಿಗೆಗಳು ಗರಿಗೆದರಿವೆ. ಕೇಂದ್ರ. ಮಂತ್ರಿಯಾಗಿದ್ದ ಸದಾನಂದ ಗೌಡರು ರಾಜೀನಾಮೆ ನೀಡಿದ್ದು, ರಾಜ್ಯದಲ್ಲಿ ಮತ್ತೆ ಮುಖ್ಯಮಂತ್ರಿ ಸ್ಥಾನ ಅಲಂಕರಿಸುತ್ತಾರೆ ಎಂದು ಹೇಳಲಾಗುತ್ತಿದೆ. ಕರ್ನಾಟಕದಲ್ಲಿ ಈಗಾಗಲೇ ಯಡಿಯೂರಪ್ಪರವರನ್ನು ಕೆಳಗಿಳಿಸುವ ಕುರಿತಂತೆ ಹಲವು ಪ್ರಯತ್ನಗಳು ತೆರೆಮರೆಯಲ್ಲಿ ನಡೆಯುತ್ತಿದ್ದು, ಈ ಬೆಳವಣಿಗೆಗಳನ್ನು ಬಿಜೆಪಿ ದೆಹಲಿ ಹೈಕಮಾಂಡ್ ಕೂಲಂಕುಷವಾಗಿ ಪರಿಶೀಲಿಸುತ್ತಿದೆ. ಈ ಹಿನ್ನೆಲೆಯಲ್ಲಿ ದೆಹಲಿಯ ನಾಯಕರು ಹಲವು ಬಾರಿ‌ ಬೆಂಗಳೂರಿಗೂ, ರಾಜ್ಯನಾಯಕರು ದೆಹಲಿಗೂ‌ ಪರೇಡ್ ನಡೆಸಿರುವುದು ಗೊತ್ತೇ

ರಾಜ್ಯ ರಾಜಕಾರಣಕ್ಕೆ ವಾಪಾಸ್ಸಾಗ್ತಾರಾ‌ ಡಿ.ವಿ.ಎಸ್?ರಾಜೀನಾಮೆ ಬೆನ್ನಲ್ಲೇ ಗರಿಗೆದರಿದ ರಾಜ್ಯ ರಾಜಕೀಯ. Read More »

ಕೇಂದ್ರ ಸಚಿವ ಸ್ಥಾನಕ್ಕೆ ಸದಾನಂದ ಗೌಡರು ಸೇರಿದಂತೆ ನಾಲ್ಕು ಸಚಿವರು ರಾಜೀನಾಮೆ; ಕರ್ನಾಟಕದಿಂದ ಇಬ್ಬರೂ ಸಚಿವ ಸಂಪುಟಕ್ಕೆ ಸೇರ್ಪಡೆ; ಇಂದು ನೂತನ ಸಚಿವರ ಪ್ರಮಾಣ ವಚನ

ನವದೆಹಲಿ: ಕೇಂದ್ರ ಸಚಿವ ಸ್ಥಾನಕ್ಕೆ ಸದಾನಂದ ಗೌಡ, ರಮೇಶ್ ಪೋಖ್ರಿಯಾಲ್ ನಿಶಾಂಕ್ ರಾಜೀನಾಮೆ ನೀಡಿದ್ದಾರೆ. ಸಚಿವ ಸಂಪುಟ ಪುನಾರಚನೆ ಹಿನ್ನೆಲೆಯಲ್ಲಿ ಇವರಿಬ್ಬರೂ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಅನಾರೋಗ್ಯ ಸಮಸ್ಯೆ ಹಿನ್ನೆಲೆ ಕೇಂದ್ರ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಅವರನ್ನು ಕೈಬಿಡಲು ಯೋಚಿಸಲಾಗಿದೆ ಎಂಬ ಸುದ್ದಿ ಈ ಹಿಂದೆಯೇ ಹೊರಬಿದ್ದಿತ್ತು. ಅದಕ್ಕೆ ಪೂರಕವಾಗಿ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದೇವೇಳೆ, ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರ ಖಾತೆ ಸಚಿವ ಸ್ಥಾನಕ್ಕೆ

ಕೇಂದ್ರ ಸಚಿವ ಸ್ಥಾನಕ್ಕೆ ಸದಾನಂದ ಗೌಡರು ಸೇರಿದಂತೆ ನಾಲ್ಕು ಸಚಿವರು ರಾಜೀನಾಮೆ; ಕರ್ನಾಟಕದಿಂದ ಇಬ್ಬರೂ ಸಚಿವ ಸಂಪುಟಕ್ಕೆ ಸೇರ್ಪಡೆ; ಇಂದು ನೂತನ ಸಚಿವರ ಪ್ರಮಾಣ ವಚನ Read More »

ಮಾಜಿ ಕೇಂದ್ರ ಸಚಿವರ‌ ಪತ್ನಿ‌ ಬರ್ಬರ ಹತ್ಯೆ. ಮನೆ ದರೋಡೆ

ನವದೆಹಲಿ: ಕೇಂದ್ರದ ಮಾಜಿ ಸಚಿವ, ಬಿಜೆಪಿ ನಾಯಕ ದಿವಂಗತ ಪಿ.ರಂಗರಾಜನ್ ಕುಮಾರಮಂಗಲಂ ಅವರ ಪತ್ನಿಯನ್ನು ಮಂಗಳವಾರ ರಾತ್ರಿ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಕಿಟ್ಟಿ ಕುಮಾರಮಂಗಲಂ ಮೃತರು. 2000ರ ಆಗಸ್ಟ್​ 23ರಂದು ಪಿ.ರಂಗರಾಜನ್ ಮೃತಪಟ್ಟಿದ್ದರು. ಕಿಟ್ಟಿ ಕುಮಾರಮಂಗಲಂ ಅವರು ವೃತ್ತಿಯಲ್ಲಿ ವಕೀಲರಾಗಿದ್ದರು. ದೆಹಲಿಯ ವಸಂತ ವಿಹಾರದಲ್ಲಿರುವ ಅವರ ನಿವಾಸದಲ್ಲಿ ಕಳೆದ ರಾತ್ರಿ ಹತ್ಯೆಗೀಡಾಗಿದ್ದು, ಇದುವರೆಗೆ ಓರ್ವ ಶಂಕಿತನನ್ನು ಬಂಧಿಸಿ ಮತ್ತಿಬ್ಬರಿಗಾಗಿ ಹುಡುಕಾಟ ನಡೆಯುತ್ತಿದೆ ಎಂದು ನೈರುತ್ಯ ವಲಯ ಡಿಸಿಪಿ ತಿಳಿಸಿದ್ದಾರೆ. ನಿನ್ನೆ ರಾತ್ರಿ 8.30ರ ಸುಮಾರಿಗೆ ಲಾಂಡ್ರಿಮ್ಯಾನ್

ಮಾಜಿ ಕೇಂದ್ರ ಸಚಿವರ‌ ಪತ್ನಿ‌ ಬರ್ಬರ ಹತ್ಯೆ. ಮನೆ ದರೋಡೆ Read More »

ಕೇಂದ್ರ ಸಚಿವೆಯಾಗಿ ಶೋಭಾ ಕರಂದ್ಲಾಜೆ ?ಪ್ರಧಾನಿ ನಿವಾಸಕ್ಕೆ ಶೋಭಾ ಸ್ಮೈಲ್ ಗೌಡರಿಗೆ ಗೇಟ್ ಪಾಸ್? ಸಿ.ಡಿ ತಂದಿತೇ ಕಂಠಕ?

ಮಂಗಳೂರು : ಉಡುಪಿ ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಮೋದಿ ಸಂಪುಟಕ್ಕೆ ಸೇರುವುದು ಬಹುತೇಕ ಖಚಿತವಾಗಿದೆ. ಮೂಲತ ಕಡಬ ತಾಲೂಕಿನ ಚಾರ್ವಾಕ ಗ್ರಾಮದ ಕರಂದ್ಲಾಜೆ ದಿ. ಮೋನಪ್ಪ ಗೌಡ ಹಾಗೂ ಪೂವಕ್ಕ ದಂಪತಿಯ ಪುತ್ರಿಯಾದ ಕರಂದ್ಲಾಜೆ ಮೊದಲ ಭಾರಿಗೆ ಎಂಎಲ್‌ಸಿಯಾಗಿ ರಾಜಕೀಯಕ್ಕೆ ಎಂಟ್ರಿಕೊಟ್ಟಿದ್ದರು. ಇದೀಗ ರಾಜಕೀಯದಲ್ಲಿ ಹೋರಾಟದ ಮೂಲಕ ಹಂತ ಹಂತವಾಗಿ ಮೇಲೇರಿದರು. ಯಶವಂತಪುರದ ಶಾಸಕಿಯಾಗಿ ಯಡಿಯೂರಪ್ಪ ಸರ್ಕಾರದಲ್ಲಿ ಮೊದಲ ಬಾರಿ ಸಚಿವೆಯಾದರು. ಗ್ರಾಮೀಣಾಭಿವೃದ್ಧಿ, ಇಂಧನ ಸಚಿವೆಯಾಗಿ ಕರ್ತವ್ಯ ನಿರ್ವಹಿಸಿದರು. ನಂತರ ರಾಜಕೀಯ ಅಸ್ಥಿರತೆ ಎದುರಾದಾಗ ಯಡಿಯೂರಪ್ಪರ

ಕೇಂದ್ರ ಸಚಿವೆಯಾಗಿ ಶೋಭಾ ಕರಂದ್ಲಾಜೆ ?ಪ್ರಧಾನಿ ನಿವಾಸಕ್ಕೆ ಶೋಭಾ ಸ್ಮೈಲ್ ಗೌಡರಿಗೆ ಗೇಟ್ ಪಾಸ್? ಸಿ.ಡಿ ತಂದಿತೇ ಕಂಠಕ? Read More »

ಮಂಗಳೂರು: ವಿಮಾನ ನಿಲ್ದಾಣದಲ್ಲಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ವ್ಯಕ್ತಿ ಪೊಲೀಸ್ ವಶಕ್ಕೆ

ಮಂಗಳೂರು : ನಿನ್ನೆ ತಡರಾತ್ರಿ ಹಳೆಯ ವಿಮಾನ ನಿಲ್ದಾಣದ ಎಟಿಎಸ್ ವಿಭಾಗದಲ್ಲಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ಅಪರಿಚಿತ ವ್ಯಕ್ತಿಯೊಬ್ಬನನ್ನು ವಶಕ್ಕೆ ಪಡೆದು ಅಕ್ರಮ ಪ್ರವೇಶ ಆರೋಪದಡಿ ಪ್ರಕರಣ ದಾಖಲಾಗಿದೆ. ವಶಕ್ಕೊಳಗಾದ ವ್ಯಕ್ತಿಯನ್ನು ಪಶ್ಚಿಮ ಬಂಗಾಳದ ಮುರ್ಸಿದಾಬಾದ್‌ನ ಬಧುಹಾ ಗ್ರಾಮದ ರಾಕೇಶ್ ಎಂದು ಗುರುತಿಸಲಾಗಿದೆ. ರಾತ್ರಿ ಸಿಐಎಸ್‌ಎಫ್ ಸಿಬ್ಬಂದಿಯು ಗಸ್ತು ತಿರುಗುತ್ತಿದ್ದಾಗ ರನ್‌ವೇ ಕಾಮಗಾರಿ ನಡೆಯುತ್ತಿದ್ದ ಹಳೆಯ ವಿಮಾನ ನಿಲ್ದಾಣದ ಎಟಿಎಸ್ ವಿಭಾಗದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಕಂಡುಬAದಿದ್ದನು. ಕೂಡಲೇ ಆತನನ್ನು ಹಿಡಿದು ವಿಚಾರಿಸಿದಾಗ ತಾನು ಲಾರಿಯಲ್ಲಿ ಕ್ಲೀನರ್ ಆಗಿ ಕೆಲಸ

ಮಂಗಳೂರು: ವಿಮಾನ ನಿಲ್ದಾಣದಲ್ಲಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ವ್ಯಕ್ತಿ ಪೊಲೀಸ್ ವಶಕ್ಕೆ Read More »

ಪುತ್ತೂರು: ಬಿನ್ನ ಕೋಮಿನ ಯುವಕರ ನಡುವೆ ಜಗಳ- ತಲವಾರು ದಾಳಿ

ಪುತ್ತೂರು: ಬಿನ್ನ ಕೋಮಿನ ಯುವಕರ ನಡುವೆ ಜಗಳ ನಡೆದು ಬಳಿಕ ಸ್ಥಳೀಯ ಅಂಗಡಿಯಲ್ಲಿದ್ದ ಯುವಕರ ಮೇಲೆ ಇಬ್ಬರು ಯುವಕರು ತಲವಾರಿನಿಂದ ಹಲ್ಲೆಗೆ ಯತ್ನಿಸಿದ ಘಟನೆ ಜು.6ರಂದು ಪುತ್ತೂರಿನ ಹೊರವಲಯ ಬನ್ನೂರು ಜೈನರಗುರಿ ಸಮೀಪ ನಡೆದಿದೆ. ಫಯಾಝ್ ಎಂಬವರು ದೂರು ನೀಡಿದ್ದೂ ಅಭಿಜಿತ್ ಮತ್ತು ಶರತ್ ತಲವಾರು ಪ್ರದರ್ಶಿಸುತ್ತಾ ಬೆದರಿಕೆಯೊಡ್ಡಿದ್ದಾಗಿ ದೂರಿನಲ್ಲಿ ಆರೋಪಿಸಿದ್ದಾರೆ. ದೂರು ಸ್ವೀಕರಿಸಿರುವ ಪುತ್ತೂರು ನಗರ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮೂಲಗಳ ಪ್ರಕಾರ ನಿನ್ನೆ ರಾತ್ರಿ ಒಂದು ಕೋಮಿಗೆ ಸೇರಿದ ಯುವಕರ ಗುಂಪೊAದು ಬನ್ನೂರು

ಪುತ್ತೂರು: ಬಿನ್ನ ಕೋಮಿನ ಯುವಕರ ನಡುವೆ ಜಗಳ- ತಲವಾರು ದಾಳಿ Read More »

ದ.ಕ.: ಮೊದಲ ಕೊರೊನಾ `ಮಿಸ್ – ಸಿ’ ಪ್ರಕರಣ: ಬಾಲಕಿಗೆ ಯಶಸ್ವಿ ಚಿಕಿತ್ಸೆ

ಮಂಗಳೂರು: ಕೊರೊನಾ ಭಾದಿತ ಮಕ್ಕಳಲ್ಲಿ ಕಾಣಿಸಿಕೊಳ್ಳುವಂತಹ ಬರುವ ಮಿಸ್- ಸಿ (ಮಲ್ಟಿ ಸಿಸ್ಟಂ ಇನ್ ಪ್ಲೋ ಮ್ಯಾಟರಿ ಸಿಂಡ್ರೋಮ್ ) ಪ್ರಕರಣದ ಕಾಣಿಸಿಕೊಂಡ ೧೬ ವರ್ಷದ ಬಾಲಕಿಗೆ ವೆನ್ಲಾಕ್ ಆಸ್ಪತ್ರೆಯಲ್ಲಿ ಯಶಸ್ವಿ ಚಿಕಿತ್ಸೆ ನೀಡಲಾಗಿದೆ. ಜಿಲ್ಲೆಯಲ್ಲಿ ಕಾಣಿಸಿಕೊಂಡ ಮಿಸ್ – ಸಿ ಮೊದಲ ಪ್ರಕರಣವಿದು ಎನ್ನಲಾಗಿದೆ. ಬಾಲಕಿ ಶ್ವಾಸಕೋಶದ ಸಮಸ್ಯೆಯಿಂದಾಗಿ ಜೂ.16 ರಂದು ವೆನ್ಲಾಕ್‌ಗೆ ದಾಖಲಾಗಿದ್ದಳು. ಕೋವೀಡ್ ಚಿಕಿತ್ಸೆ ನೀಡಿದ ಅನಂತರ ನ್ಯುಮೋನಿಯ, ಶ್ವಾಸಕೋಶದ ಸಮಸ್ಯೆ, ಮೆದುಳಿನಲ್ಲಿ ಸಮಸ್ಯೆ, ಹಿಮೋಗ್ಲೋಬೀನ್ ಸಮಸ್ಯೆ ಸೇರಿದಂತೆ ಕೆಲವೊಂದು ಸಮಸ್ಯೆ ಕಾಣಿಸಿಕೊಂಡಿತ್ತು.

ದ.ಕ.: ಮೊದಲ ಕೊರೊನಾ `ಮಿಸ್ – ಸಿ’ ಪ್ರಕರಣ: ಬಾಲಕಿಗೆ ಯಶಸ್ವಿ ಚಿಕಿತ್ಸೆ Read More »