ತುಳುಭಾಷೆಗೆ ಸಾಂವಿಧಾನಿಕ ಸ್ಥಾನಮಾನ ನೀಡಲು ಒತ್ತಾಯ | ಇಂದು ಟ್ವೀಟ್ ಅಭಿಯಾನದಲ್ಲಿ ಕೈಜೋಡಿಸಲು ತುಳು ಸಂಘಟನೆಗಳ ಕರೆ
ಮಂಗಳೂರು: ತುಳುಭಾಷೆಯನ್ನು ಕರ್ನಾಟಕ ಮತ್ತು ಕೇರಳ ರಾಜ್ಯಗಳಲ್ಲಿ ಅಧಿಕೃತ ಭಾಷೆಯಾಗಿ ಪರಿಗಣಿಸಬೇಕೆಂದು ಒತ್ತಾಯಿಸಿ ತುಳು ಸಂಘಟನೆಗಳು ಇಂದು ಟ್ವಿಟರ್ ಅಭಿಯಾನಕ್ಕೆ ಕರೆ ನೀಡಿವೆ. ಉತ್ತರ ಕೇರಳ ಮತ್ತು ಕರ್ನಾಟಕದ ಕರಾವಳಿ ಪ್ರದೇಶದಲ್ಲಿ ತುಳು ಮಾತನಾಡುವ ಜನರು ಅಧಿಕವಾಗಿದ್ದಾರೆ. ರಾಜ್ಯ ಸರ್ಕಾರಗಳು ಇದುವರೆಗೂ ತುಳುಭಾಷೆಗೆ ಯಾವುದೇ ಸ್ಥಾನಮಾನ ನೀಡಿಲ್ಲ. ಆದ್ದರಿಂದ ತುಳುಭಾಷೆಗೆ ಸಾಂವಿಧಾನಿಕ ಸ್ಥಾನಮಾನ ಒದಗಿಸಿಕೊಡುವಲ್ಲಿ ಸರಕಾರವನ್ನು ಒತ್ತಾಯಿಸಲು ಇಂದು, ಜೂ.13ರಂದು ನಡೆಯುವ ಟ್ವಿಟರ್ ಅಭಿಯಾನದಲ್ಲಿ ಕೈಜೋಡಿಸುವಂತೆ ತುಳುನಾಡ ಜನತೆಗೆ ತುಳು ಸಂಘಟನೆಗಳು ಕರೆ ನೀಡಿವೆ. ಇಂದು ದಿನಪೂರ್ತಿ […]










