ಸಮಗ್ರ ಸಮಾಚಾರ

ಬಂಟ್ವಾಳ: ಸ್ಮಶಾನದಲ್ಲಿ ಟೆಂಟ್ ಹಾಕಿ ವಿಧವೆ ವಾಸ್ತವ್ಯ | ಗ್ರಾ.ಪಂ. ನಿಂದ ಪೊಲೀಸ್ ದೂರು

ಬಂಟ್ವಾಳ: ಗ್ರಾಮ ಪಂಚಾಯತ್ ವತಿಯಿಂದ ಕುಟುಂಬಕ್ಕೆ ಮನೆ ನಿರ್ಮಿಸಿಕೊಡಲಿಲ್ಲವೆಂದು ವಿಧವೆ ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳೊಂದಿಗೆ ಸ್ಮಶಾನದಲ್ಲಿ ಮನೆ ಕಟ್ಟಿ ಕುಳಿತ ಘಟನೆ ಅನಂತಾಡಿ ಗ್ರಾಮದ ಬಂಟ್ರಿಂಜೆಯಲ್ಲಿ ನಡೆದಿದೆ. ಇದೀಗ ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಗ್ರಾಮ ಪಂಚಾಯತ್ ದೂರು ದಾಖಲಿಸಿದೆ. ಹಲವಾರು ಭಾರಿ ಅರ್ಜಿ ಸಲ್ಲಿಸಿದರು ಗ್ರಾಮ ಪಂಚಾಯತ್ ನಮಗೆ ಮನೆ ನಿವೇಶನ ಮಂಜೂರು ಮಾಡಿಲ್ಲವೆಂದು ಮಹಿಳೆ ಆರೋಪಿಸಿದ್ದಾರೆ. ದಿ. ರಾಮಚಂದ್ರ ದಾಸ್ ಎಂಬವರ ಪತ್ನಿ, ಜಯಂತಿ ಇದುವರೆಗೆ ತನ್ನ ಇಬ್ಬರು ಹೆಣ್ಣು ಮಕ್ಕಳೊಂದಿಗೆ […]

ಬಂಟ್ವಾಳ: ಸ್ಮಶಾನದಲ್ಲಿ ಟೆಂಟ್ ಹಾಕಿ ವಿಧವೆ ವಾಸ್ತವ್ಯ | ಗ್ರಾ.ಪಂ. ನಿಂದ ಪೊಲೀಸ್ ದೂರು Read More »

ಆಂಬುಲೆನ್ಸ್ ಡಿಕ್ಕಿ: ಮೂವರು ಬೈಕ್ ಸವಾರರ ಸಾವು

ಚಿತ್ರದುರ್ಗ: ಆಂಬ್ಯುಲೆನ್ಸ್ ಮತ್ತು ದ್ವಿಚಕ್ರ ವಾಹನದ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಚಿತ್ರದುರ್ಗ ಹೊರವಲಯದ ಹೊಳಲ್ಕೆರೆ ಸಮೀಪ ಸೋಮವಾರ ರಾತ್ರಿ ಅಪಘಾತ ಸಂಭವಿಸಿದೆ. ಮೃತರನ್ನು ಕಾಂತರಾಜ (22), ಶ್ರೀಕಾಂತ (20), ನಂಜುಂಡ (20) ವರ್ಷದ ಯುವಕರು ಎಂದು ಗುರುತಿಸಲಾಗಿದೆ. ಆಂಬ್ಯುಲೆನ್ಸ್ ಚಾಲಕ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಂದೇ ಸ್ಕೂಟಿಯಲ್ಲಿ ಮೂವರು ಯುವಕರು ತ್ರಿಬಲ್ ರೈಡಿಂಗ್ ಮೂಲಕ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ. ಮೃತಪಟ್ಟ ಯುವಕರು ಚಿತ್ರದುರ್ಗ

ಆಂಬುಲೆನ್ಸ್ ಡಿಕ್ಕಿ: ಮೂವರು ಬೈಕ್ ಸವಾರರ ಸಾವು Read More »

ಸೀಲ್ ಡೌನ್ ಇದ್ದರೂ ಸುಬ್ರಹ್ಮಣ್ಯಕ್ಕೆ ಭಕ್ತರ ದಂಡು | ದಂಡ ವಿಧಿಸಿ ಎಚ್ಚರಿಕೆ ನೀಡುತ್ತಿರುವ ಪೊಲೀಸರು

ಸುಬ್ರಹ್ಮಣ್ಯ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಲಾಕ್ಡೌನ್ ಸಡಿಲಿಕೆಯಾದ ಕಾರಣ ಭಕ್ತರು ತೀರ್ಥಯಾತ್ರೆ ಆರಂಭಿಸಿದ್ದು, ಕುಕ್ಕೆಗೆ ಭಕ್ತರ ದಂಡು ಹರಿದುಬರುತ್ತಿದೆ. ಸುಬ್ರಮಣ್ಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸೀಲ್ ಡೌನ್ ಹೆರಲಾಗಿದ್ದು, ಆಗಮಿಸಿದ ಭಕ್ತರಿಗೆ ದಂಡ ವಿಧಿಸಲಾಗುತ್ತಿದೆ. ಜೂ.14 ರಿಂದ ರಾಜ್ಯದ 19 ಜಿಲ್ಲೆಗಳಲ್ಲಿ ಲಾಕ್ಡೌನ್ ಸಡಿಲಿಕೆ ಮಾಡಲಾಗಿದೆ. ದ.ಕ. ಸೇರಿದಂತೆ ಉಳಿದ 11 ಜಿಲ್ಲೆಗಳಲ್ಲಿ ಲಾಕ್ಡೌನ್ ನಿಯಮಗಳನ್ನು ಜೂ. 21 ರವರೆಗೆ ಮುಂದುವರೆಸಲಾಗಿದೆ. ಇನ್ನು ಜಿಲ್ಲೆಯಲ್ಲಿ ದಿನಕ್ಕೆ 50 ಕ್ಕಿಂತ ಹೆಚ್ಚು ಪಾಸಿಟಿವ್ ಪ್ರಕರಣಗಳು ವರದಿಯಾಗುತ್ತಿದ್ದ ಗ್ರಾಮಪಂಚಾಯಿತ್ ಗಳನ್ನು

ಸೀಲ್ ಡೌನ್ ಇದ್ದರೂ ಸುಬ್ರಹ್ಮಣ್ಯಕ್ಕೆ ಭಕ್ತರ ದಂಡು | ದಂಡ ವಿಧಿಸಿ ಎಚ್ಚರಿಕೆ ನೀಡುತ್ತಿರುವ ಪೊಲೀಸರು Read More »

ಮಂಗಳೂರು: ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಮರವೂರು ಸೇತುವೆ ಕುಸಿತ

ಮಂಗಳೂರು : ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುವ ರಾಜ್ಯ ಹೆದ್ದಾರಿಯ ಮರವೂರು ಸೇತುವೆ ಮಂಗಳವಾರ ಮುಂಜಾನೆ ಕುಸಿತಗೊಂಡಿದ್ದು, ಸಂಚಾರ ನಿರ್ಬಂಧಿಸಲಾಗಿದೆ. ಮಂಗಳೂರು-ಬಜಪೆ-ಕಟೀಲು ಸಂಪರ್ಕ ರಸ್ತೆ ಇದಾಗಿದ್ದು, ಪಲ್ಗುಣಿ ನದಿಗೆ ಅಡ್ಡವಾಗಿ ನಿರ್ಮಿಸಲಾಗಿದೆ. ಬಜಪೆಯಿಂದ ಮಂಗಳೂರು ಕಡೆ ಬರುವಾಗ ಸೇತುವೆಯ ಮೊದಲ ಅಂಕಣ ಸುಮಾರು ಮೂರು ಅಡಿ ಕೆಳಗೆ ಕುಸಿದು ನಿಂತಿದೆ. ಬಿರುಕು ತುಂಬಾ ಆಳ ಮತ್ತು ಅಗಲವಾಗಿದ್ದು, ಯಾವುದೇ ಸಮಯದಲ್ಲಿ ಸೇತುವೆ ಕುಸಿಯುವ ಸಾಧ್ಯತೆಯಿದೆ. ಗುರುಪುರ ನದಿಯಲ್ಲಿರುವ ಸೇತುವೆಯ ಕೆಳಗೆ ನಡೆಯುತ್ತಿರುವ ಮರಳು ಗಣಿಗಾರಿಕೆಯು ಬಿರುಕಿಗೆ

ಮಂಗಳೂರು: ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಮರವೂರು ಸೇತುವೆ ಕುಸಿತ Read More »

ಶಿಕ್ಷಕರಿಗೆ ಲಾಕ್ಡೌನ್ ತೆರವಾದ ಬಳಿಕ ಭೌತಿಕವಾಗಿ ಹಾಜರಾಗಲು ಅವಕಾಶ : ಸುರೇಶ್ ಕುಮಾರ್

ಬೆಂಗಳೂರು: ಲಾಕ್ಡೌನ್ ತೆರವಾದ ಬಳಿಕ ಶಾಲೆಗಳಿಗೆ ಭೌತಿಕವಾಗಿ ಹಾಜರಾಗಿ ಪ್ರಸಕ್ತ ವರ್ಷದ ಶೈಕ್ಷಣಿಕ ಕೆಲಸವನ್ನು ಪ್ರಾರಂಭಿಸಲು ಶಿಕ್ಷಕರಿಗೆ ಅವಕಾಶ ನೀಡಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ಜುಲೈ 1 ರಿಂದಲೇ 2021-22 ಸಾಲಿನ ಶಾಲಾ ತರಗತಿ ಆರಂಭವಾಗಲಿದೆ. ನಾಳೆ (ಜೂ.15) ರಿಂದಲೇ ಪ್ರಸಕ್ತ ವರ್ಷದ ಶೈಕ್ಷಣಿಕ ಕೆಲಸ ಪ್ರಾರಭಿಸಬೇಕೆಂದು ಇಂದು ಶಿಕ್ಷಣ ಆಯುಕ್ತರು ಆದೇಶಿಸಿದ್ದರು.ಇನ್ನೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಲಾಕ್ಡೌನ್ ಇರುವುದರಿಂದ ಈ ಬಗ್ಗೆ ಶಿಕ್ಷಕರಲ್ಲಿ ಗೊಂದಲ ಉಂಟಾಗಿತ್ತು.ಈ ಹಿನ್ನಲೆಯಲ್ಲಿ ಇಂದು ಸಂಜೆ ವಿಧಾನಸೌಧದಲ್ಲಿ

ಶಿಕ್ಷಕರಿಗೆ ಲಾಕ್ಡೌನ್ ತೆರವಾದ ಬಳಿಕ ಭೌತಿಕವಾಗಿ ಹಾಜರಾಗಲು ಅವಕಾಶ : ಸುರೇಶ್ ಕುಮಾರ್ Read More »

ಕರಾವಳಿ : ಜೊತೆಯಾಗಿ‌ ಸಾವಿನ ಕದ ತಟ್ಟಿದ ಸಹೋದರರು

ಕಾರ್ಕಳ:  ಸಹೋದರರಿಬ್ಬರು ಒಂದೇ ದಿನದಲ್ಲಿ ಮೃತ ಪಟ್ಟ ಘಟನೆ ಕಾರ್ಕಳದಲ್ಲಿ ನಡೆದಿದೆ. ಸಾಣೂರು ಚಿಕ್ಕಬೆಟ್ಟು ನಿವಾಸಿ ಗಣೇಶ್ ರಾವ್ (60) ಸಂಜೆ ಮಣಿಪಾಲ ಖಾಸಗಿ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ಮ್ರತಪಟ್ಟರೇ, ಸಹೋದರ ಸಾಣೂರು ನಿವಾಸಿ ಮಿಯಾರು ಗುಂಡಾಜೆ ಬಳಿಯ ರಾಜಾರಾಮ. ರಾವ್ (55) ಜೂ.14 ರಂದು ಬೆಳಗ್ಗೆ ಕಾರ್ಕಳದ ಖಾಸಗಿ ಆಸ್ಪತ್ರೆಯಲ್ಲಿ ಬೆಳಗ್ಗೆ ಮೃತ ಪಟ್ಟಿದ್ದಾರೆ. ರಾಜರಾಮ್ ರಾವ್ ಅವರು ಇತ್ತೀಚೆಗೆ ಅಪಘಾತಕ್ಕೆ ಒಳಗಾಗಿದ್ದರು. ಚಿಕಿತ್ಸೆಗಾಗಿ ಮಣಿಪಾಲ ಇನ್ನಿತರ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಅಂತಿಮವಾಗಿ ಕಾರ್ಕಳ ಖಾಸಗಿ ಆಸ್ಪತ್ರೆಗೆ

ಕರಾವಳಿ : ಜೊತೆಯಾಗಿ‌ ಸಾವಿನ ಕದ ತಟ್ಟಿದ ಸಹೋದರರು Read More »

ಮಂಗಳೂರಿನಲ್ಲಿ ಒಮಾನ್ ರಾಷ್ಟದ ಪ್ರಜೆ ಪೊಲೀಸ್ ವಶಕ್ಕೆ | ಲಾಡ್ಜ್ ಗಳಿಗೆ ಇನ್ನುಮಂದೆ ಅನಿಯಮಿತ ದಾಳಿ : ಕಮಿಷನರ್

ಮಂಗಳೂರು: ಲಾಡ್ಜ್ ಒಂದರಲ್ಲಿ ಡ್ರಗ್ಸ್ ಸೇವನೆ ಮಾಡುತ್ತಿದ್ದ ಒಮಾನ್ ರಾಷ್ಟ್ರದ ಪ್ರಜೆ ಮತ್ತು ಹಿಮಾಚಲ ಪ್ರದೇಶದ ವ್ಯಕ್ತಿಯನ್ನು ಮಂಗಳೂರು ನಗರದ ಪೊಲೀಸರು ಇಂದು ಬಂಧಿಸಿದ್ದಾರ ನಗರದ ಲಾಡ್ಜ್ ಒಂದರಲ್ಲಿ ಒಮಾನ್ ರಾಷ್ಟ್ರದ ಪ್ರಜೆ ಅಹ್ಮದ್ ಮತ್ತು ಹಿಮಾಚಲ ಪ್ರದೇಶದ ನಿವಾಸಿ ರಾಮ್ ಎಂಬಾತ ಸೆರೆಸಿಕ್ಕಿರುವ ಆರೋಪಿಗಳು. ಒಮಾನ್ ಪ್ರಜೆ ಅಹ್ಮದ್ ಆರು ತಿಂಗಳ ಹಿಂದೆ ಗೋವಾಕ್ಕೆ ಟೂರಿಸ್ಟ್ ವೀಸಾದಲ್ಲಿ ಬಂದಿದ್ದ. ಆದರೆ, ಅನಾರೋಗ್ಯಕ್ಕೀಡಾಗಿದ್ದ ಅಹ್ಮದ್ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದು ಆನಂತರ ಚಿಕಿತ್ಸೆ ಪಡೆದು ಹೊರಬಂದಿದ್ದ. ಈ ನಡುವೆ

ಮಂಗಳೂರಿನಲ್ಲಿ ಒಮಾನ್ ರಾಷ್ಟದ ಪ್ರಜೆ ಪೊಲೀಸ್ ವಶಕ್ಕೆ | ಲಾಡ್ಜ್ ಗಳಿಗೆ ಇನ್ನುಮಂದೆ ಅನಿಯಮಿತ ದಾಳಿ : ಕಮಿಷನರ್ Read More »

ಸುಳ್ಯ : ಕಾರು-ರಿಕ್ಷಾ ಡಿಕ್ಕಿ | ರಿಕ್ಷಾ ಚಾಲಕ ಗಂಭೀರ

ಸುಳ್ಯ: ಕಾರು ಹಾಗೂ ರಿಕ್ಷಾ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ರಿಕ್ಷಾ ಚಾಲಕ ಗಂಭೀರ ಗಾಯಗೊಂಡ ಘಟನೆ ಅಡ್ಕಾರು ಸಮೀಪದ ವಿನೋಬನಗರ ಎಂಬಲ್ಲಿ ನಡೆದಿದೆ. ಇಂದು ಸಂಜೆ ಸುಳ್ಯದಿಂದ ಪುತ್ತೂರು ಕಡೆ ತೆರಳುತ್ತಿದ್ದ ರಿಕ್ಷಾ ಮತ್ತು ಪುತ್ತೂರು ಕಡೆಯಿಂದ ಸುಳ್ಯ ಕಡೆ ಬರುತ್ತಿದ್ದ ಟೂರಿಸ್ಟ್ ಕಾರು ನಡುವೆ ಅಪಘಾತ ಸಂಭವಿಸಿದೆ. ಈ ಪರಿಣಾಮ ಆಟೋ ರಿಕ್ಷಾ ನಜ್ಜುಗುಜ್ಜಾಗಿದ್ದು ಚಾಲಕ ಗಂಭೀರ ಗಾಯಕೊಂಡಿದ್ದಾನೆ. ತಕ್ಷಣ ಗಾಯಾಳು ಆಟೋ ಚಾಲಕನನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಸುಳ್ಯ : ಕಾರು-ರಿಕ್ಷಾ ಡಿಕ್ಕಿ | ರಿಕ್ಷಾ ಚಾಲಕ ಗಂಭೀರ Read More »

ಕಡೂರಿನ ವಿಜಯ ಕುಮಾರ್ `ಸಂಚಾರಿ’ ಯಾಗಿದ್ದು ಹೇಗೆ? ರಾಷ್ಟ್ರಪ್ರಶಸ್ತಿ ವಿಜೇತ ‘ಸಂಚಾರಿ ವಿಜಯ್’ ರ ಲೈಪ್ ಕಹಾನಿ

ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ಅದ್ಭುತ ನಟನೆಯ ಮೂಲಕ ಎಲ್ಲಾರ ಗಮನ ಸೆಳೆದ ನಟ ಸಂಚಾರಿ ವಿಜಯ್‌ರವರು ಇಂದು ನಿಧನರಾಗಿದ್ದಾರೆ. ಇವರು ಇಷ್ಟೊಂದು ಹೆಸರುವಾಸಿಯಾಗಲು ನಡೆದು ಬಂದ ಹಾದಿಯನ್ನು ಗಮನಸಿದರೆ ಅವರು ಪಟ್ಟ ಶ್ರಮ ಎಷ್ಟಿದೆ ಎನ್ನುವ ವಿಚಾರ ಇಲ್ಲಿದೆ. ನಟನೆ ಹಾಗೂ ಸಮಾಜಮುಖಿ ಕೆಲಸ ಎರಡರಲ್ಲೂ ಸೈ ಎನ್ನಿಸಿಕೊಂಡಿದ್ದ ವಿಜಯ್ 37ನೇ ವಯಸ್ಸಿಗೆ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.ಅವರ ಅಕಾಲಿಕ ವಿದಾಯ ಎಲ್ಲರಲ್ಲೂ ಶೋಕ ಮಡುಗಟ್ಟುವಂತೆ ಮಾಡಿದೆ. ಇವರ ನಿಧನಕ್ಕೆ ಚಿತ್ರರಂಗ, ಅಭಿಮಾನಿಗಳು, ಗಣ್ಯರು ಕಂಬನಿಯನ್ನು ಮಿಡಿದಿದ್ದಾರೆ. ಇವರು ಜುಲೈ

ಕಡೂರಿನ ವಿಜಯ ಕುಮಾರ್ `ಸಂಚಾರಿ’ ಯಾಗಿದ್ದು ಹೇಗೆ? ರಾಷ್ಟ್ರಪ್ರಶಸ್ತಿ ವಿಜೇತ ‘ಸಂಚಾರಿ ವಿಜಯ್’ ರ ಲೈಪ್ ಕಹಾನಿ Read More »

ಜೂನ್‌ 21ರಿಂದ ನಡೆಯಬೇಕಿದ್ದ SSLC ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ರಾಜ್ಯದಲ್ಲಿ ಜೂನ್‌ 21 ರಿಂದ ಜುಲೈ 5ರವೆಗೆ ನಿಗದಿಯಾಗಿದ್ದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನ ಮುಂದೂಡಿಕೆ ಮಾಡಲಾಗದೆ ಎಂದು ಶಿಕ್ಷಣ ಇಲಾಖೆ ಪ್ರಕಟಣೆ ಹೊರಡಿಸಿದೆ.‌ ಈ ಕುರಿತು ಶಿಕ್ಷಣ ಇಲಾಖೆ ಪ್ರಕಟಣೆ ಹೊರಡಿಸಿದ್ದು, “ರಾಜ್ಯದಲ್ಲಿ ಜೂನ್‌ 21 ರಿಂದ ಜುಲೈ 5ರವೆಗೆ ನಿಗದಿಯಾಗಿದ್ದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನ ಮುಂದೂಡಿಕೆ ಮಾಡಲಾಗದೆ. ಇನ್ನು ಜುಲೈ 3ನೇ ವಾರದಲ್ಲಿ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದ್ದು, ಪರೀಕ್ಷೆಗೂ ಮೊದಲು ಪರೀಕ್ಷಾ ಸಿಬ್ಬಂದಿಗೆ ಲಸಿಕೆ ಹಾಕಲಾಗುವುದು” ಎಂದಿದೆ.

ಜೂನ್‌ 21ರಿಂದ ನಡೆಯಬೇಕಿದ್ದ SSLC ಪರೀಕ್ಷೆ ಮುಂದೂಡಿಕೆ Read More »