ಸಮಗ್ರ ಸಮಾಚಾರ

ಪರಿಶಿಷ್ಟರ ಕಲ್ಯಾಣಕ್ಕೆ 26 ಸಾವಿರ ಕೋಟಿ ಅನುದಾನ: ಸಚಿವ ಶ್ರೀರಾಮುಲು

ಬೆಂಗಳೂರು: ರಾಜ್ಯದ ಪರಿಶಿಷ್ಟರ ಕಲ್ಯಾಣಕ್ಕಾಗಿ 26,005 ಕೋಟಿ ಅನುದಾನ ಹಂಚಿಕೆ ಮಾಡಲಾಗಿದ್ದು, ಅನುಮೋದನೆ ಬಾಕಿ ಇದೆ ಎಂದು ಸಮಾಜ ಕಲ್ಯಾಣ ಸಚಿವ ಶ್ರೀರಾಮುಲು ಹೇಳಿದ್ದಾರೆ. ವಿಕಾಸಸೌಧದಲ್ಲಿ ಎರಡು ದಿನಗಳ ಕಾಲ ನಡೆದ ವರ್ಚುವಲ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಪರಿಶಿಷ್ಟಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯದ ಕಲ್ಯಾಣಕ್ಕಾಗಿ ಪ್ರಸಕ್ತ 2021-22ನೇ ಸಾಲಿನಲ್ಲಿ ಎಸ್‌ಸಿಎಸ್‌ಟಿ ಮತ್ತು ಟಿಎಸ್‌ಪಿ ಯೋಜನೆಯಡಿ 26,005 ಕೋಟಿ ರೂ. ಅನುದಾನವನ್ನು ಹಂಚಿಕೆ ಮಾಡಲಾಗಿದೆ. ಈ ಬಗ್ಗೆ ಶೀಘ್ರದಲ್ಲೇ ಮುಖ್ಯಮಂತ್ರಿಗಳ ಅಧ್ಯಕ್ಷತೆಯ ರಾಜ್ಯ […]

ಪರಿಶಿಷ್ಟರ ಕಲ್ಯಾಣಕ್ಕೆ 26 ಸಾವಿರ ಕೋಟಿ ಅನುದಾನ: ಸಚಿವ ಶ್ರೀರಾಮುಲು Read More »

ಪೂರ್ಣಾಹುತಿಯಾದ ಭಾಸ್ಕರ ಶೆಟ್ಟಿ ಕೊಲೆ‌ ಪ್ರಕರಣ | ಬಹುಕೋಟಿ ಆಸ್ತಿಯ ವಾರಸ್ದಾರ ಯಾರು…?

ಉಡುಪಿ: 2016ರ ಬಹುಕೋಟಿ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣದ ಅಂತಿಮ ತೀರ್ಪು ಕಳೆದವಾರ ಹೊರಬಂದಿತ್ತು. ಉಡುಪಿಯ ಜಿಲ್ಲಾ ನ್ಯಾಯಾಲಯ ಪತ್ನಿ ಪುತ್ರ ಹಾಗೂ ಓರ್ವ ಜ್ಯೋತಿಷಿಗೆ ಜೀವಾವಧಿ ಶಿಕ್ಷೆ ನೀಡಿ ಆದೇಶ ಹೊರಡಿಸಿತ್ತು. ಇನ್ನು ಭಾಸ್ಕರ ಶೆಟ್ಟಿ ತನ್ನ ಬಹುಕೋಟಿ ಆಸ್ತಿಗೆ ಬರೆದಿದ್ದ ವೀಲುನಾಮೆ ಬಹಿರಂಗಗೊಂಡಿದೆ. ಇನ್ನು, ತನ್ನ ಪತ್ನಿ ಒಬ್ಬನೊಂದಿಗೆ ಅನೈತಿಕ ಸಂಬಂಧ ಹೊಂದಿದ್ದು ಅವನು ನನ್ನ ಆಸ್ತಿಯನ್ನು ಲಪಟಾಯಿಸುವ ಉದ್ದೇಶದಿಂದ ತನ್ನ ಪುತ್ರ ಹಾಗೂ ಪತ್ನಿಯ ಸ್ನೇಹ ಬೆಳೆಸಿ, ನನ್ನನ್ನು ಮುಗಿಸಲು ಯೋಜನೆ

ಪೂರ್ಣಾಹುತಿಯಾದ ಭಾಸ್ಕರ ಶೆಟ್ಟಿ ಕೊಲೆ‌ ಪ್ರಕರಣ | ಬಹುಕೋಟಿ ಆಸ್ತಿಯ ವಾರಸ್ದಾರ ಯಾರು…? Read More »

ಆನ್ಲೈನ್ ನಲ್ಲಿ ಮಗು ಖರೀದಿಸಿದ ದಂಪತಿ | ಸಿಕ್ಕಿಬಿದ್ದಳು 1.5 ಲಕ್ಷಕ್ಕೆ ಡೆಲಿವರಿ ಕೊಟ್ಟ ಮಹಾತಾಯಿ

ಎಚ್.ಡಿ. ಕೋಟೆ: ಅಕ್ರಮವಾಗಿ ತನ್ನ ಕರುಳಕುಡಿಯನ್ನೇ ಹಣದಾಸೆಗೆ ಮಾರಾಟ ಮಾಡಿ ತಾಯಿಯೊಬ್ಬಳು ಪೊಲೀಸರ ಅತಿಥಿಯಾದ ಘಟನೆ ನಡೆದಿದೆ. ಆನ್ಲೈನ್ ಮೂಲಕ ಗಿಡಮೂಲಿಕೆ ತೈಲ, ಕೇಶ ತೈಲ ಇತ್ಯಾದಿ ಮಾರಾಟ ಮಾಡುತ್ತಿದ್ದ ಹಾಸನ ಮೂಲದ ರೋಜಾ ಎಂಬಾಕೆಯೇ ಮಗು ಮಾರಾಟ ಮಾಡಿ ಸಿಕ್ಕಿ ಬಿದ್ದವಳು. ಆಕೆಗೆ ವ್ಯವಹಾರದ ಸಮಯದಲ್ಲಿ ಎಚ್ ಡಿ ಕೋಟೆ ಸಮೀಪದ ಟೈಗರ್‌ಬ್ಲಾಕ್‌ನ ನಿವಾಸಿಗಳಾದ ಅಂಬರೀಶ್‌ ಹಾಗೂ ಮಧುಮಾಲತಿ ದಂಪತಿಯ ಪರಿಚವಾಗಿದೆ. ಆಗಾಗ ರೋಜಾ ಬಳಿ ವ್ಯವಹಾರ ನಡೆಸುತ್ತಿದ್ದ ದಂಪತಿಗೆ 7 ತಿಂಗಳ ಹಿಂದೆ ಆಕೆಗೆ

ಆನ್ಲೈನ್ ನಲ್ಲಿ ಮಗು ಖರೀದಿಸಿದ ದಂಪತಿ | ಸಿಕ್ಕಿಬಿದ್ದಳು 1.5 ಲಕ್ಷಕ್ಕೆ ಡೆಲಿವರಿ ಕೊಟ್ಟ ಮಹಾತಾಯಿ Read More »

ಕನ್ನಡ ಚಿತ್ರರಂಗದ ಹಿರಿಯ ನಟ, ಪತ್ರಕರ್ತ ಸುರೇಶ್ಚಂದ್ರ ಕೊರೋನಾಗೆ ಬಲಿ

ಬೆಂಗಳೂರು: ಸ್ಯಾಂಡಲ್ವುಡ್ ಹಿರಿಯ ನಟ ಸುರೇಶ್ಚಂದ್ರ ಇಂದು ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕೆಲದಿನಗಳ ಹಿಂದೆ ಇವರಿಗೆ ಕೋವಿಡ್ ಪಾಸಿಟಿವ್ ಬಂದಿತ್ತು. ಹಿನ್ನೆಲೆಯಲ್ಲಿ ಅವರನ್ನು ಜಯನಗರದ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಐವತ್ತಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ ನಟಿಸಿರುವ ಸುರೇಶ್ಚಂದ್ರ ಚೆಲುವಿನ ಚಿತ್ತಾರ ಚಿತ್ರದಲ್ಲಿ ನಟಿಸಿ ಖ್ಯಾತಿ ಪಡೆದಿದ್ದರು. ಅವರು 80ರ ದಶಕದಲ್ಲಿ ಸಂಜೆವಾಣಿ ಪತ್ರಿಕೆಯಲ್ಲಿ ಪತ್ರಕರ್ತರಾಗಿಯೂ ಸೇವೆ ಸಲ್ಲಿಸಿದ್ದರು.

ಕನ್ನಡ ಚಿತ್ರರಂಗದ ಹಿರಿಯ ನಟ, ಪತ್ರಕರ್ತ ಸುರೇಶ್ಚಂದ್ರ ಕೊರೋನಾಗೆ ಬಲಿ Read More »

ಬೆಂಗಳೂರು ವಿಷಯದಲ್ಲಿ ನನಗೆ ಭಯ ಎದುರಾಗಿದೆ ಎಂದ ಸುಧಾಕರ್ | ತುರಾತುರಿಯಲ್ಲಿ ಸಿಲಿಕಾನ್ ಸಿಟಿ ಅನ್ಲಾಕ್ ಅಗತ್ಯವಿತ್ತೆ…?

ಬೆಂಗಳೂರು: ಅನ್ಲಾಕ್ ಆಯಿತೆಂದು ಸ್ವಲ್ಪ ಯಾಮಾರಿದರೂ ಅಪಾಯ ಖಚಿತ. ಬೆಂಗಳೂರಿನ ಪರಿಸ್ಥಿತಿ ಕಂಡರೆ ನನಗೂ ಭಯವಾಗುತ್ತಿದೆ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ಹೇಳಿದ್ದಾರೆ. ಕಳೆದ ಒಂದುವರೆ ತಿಂಗಳ ಹಿಂದೆ ಕರುನಾಡಿಗೆ ಹಾಕಿದ್ದ ಬೀಗ ತೆರೆಯಲಾಗಿದೆ. ನಿನ್ನೆ ಸಿಎಂ ಯಡಿಯೂರಪ್ಪ 11 ಜಿಲ್ಲೆಗಳನ್ನು ಹೊರತುಪಡಿಸಿ, ಈ ತಿಂಗಳ 21ರಿಂದ ರಾಜ್ಯವನ್ನು ಅನ್ಲಾಕ್ ಗೊಳಿಸುವ ನಿರ್ಧಾರ ಕೈಗೊಂಡಿದ್ದರು. ಕೋವಿಡ್ ನಿಯಂತ್ರಣಕ್ಕೆ ಬಾರದ 11 ಜಿಲ್ಲೆಗಳಲ್ಲಿ ಮುಂದಿನಂತೆ ನಿರ್ಬಂಧ ಮುಂದುವರಿಸಲು ಆದೇಶಿಸಲಾಗಿತ್ತು. ಆದರೆ ಬೆಂಗಳೂರು ನಗರವನ್ನು ಅನ್ಲಾಕ್ ಮಾಡಿರುವುದು ಆಶ್ಚರ್ಯ

ಬೆಂಗಳೂರು ವಿಷಯದಲ್ಲಿ ನನಗೆ ಭಯ ಎದುರಾಗಿದೆ ಎಂದ ಸುಧಾಕರ್ | ತುರಾತುರಿಯಲ್ಲಿ ಸಿಲಿಕಾನ್ ಸಿಟಿ ಅನ್ಲಾಕ್ ಅಗತ್ಯವಿತ್ತೆ…? Read More »

ಮಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ 38 ಲಂಕಾ ಪ್ರಜೆಗಳ ಬಂಧನ

ಮಂಗಳೂರು: ನಗರದಲ್ಲಿ ಅಕ್ರಮವಾಗಿ ನೆಲೆಸಿದ್ದ 38 ಶ್ರೀಲಂಕಾ ದೇಶದ ಪ್ರಜೆಗಳನ್ನು ಪೊಲೀಸರು ಬಂಧಿಸಿದ್ದಾರೆ. ಎರಡು ಲಾಡ್ಜ್ ಗಳಲ್ಲಿ ಮತ್ತು ನಗರದ ಕೆಲವು ಮನೆಗಳಲ್ಲಿ ಅವರು ವಾಸಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಬಂಧಿತ ಲಂಕಾ ಪ್ರಜೆಗಳು ಕಳೆದ ಮಾರ್ಚ್ ತಿಂಗಳಿನಲ್ಲಿ ತಮಿಳುನಾಡಿನ ತೂತುಕುಡಿಗೆ ಆಗಮಿಸಿದ್ದರು. ಅಲ್ಲಿಂದ ಉದ್ಯೋಗಕ್ಕಾಗಿ ಕೆನಡಾಗೆ ಹೋಗುವವರಿದ್ದರು. ತಮಿಳುನಾಡಿನಲ್ಲಿ ಲಂಕನ್ನರಿಗೆ ಕೆನಡಾದಲ್ಲಿ ಕೆಲಸ ಕೊಡಿಸುವ ಏಜೆಂಟ್ ಳಿದ್ದರು. ಆ ಸಮಯದಲ್ಲಿ ತಮಿಳುನಾಡಿನಲ್ಲಿ ಚುನಾವಣೆ ಇದ್ದುದರಿಂದ ಅವರಿಗೆ ಕೆನಡಾಗೆ

ಮಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ 38 ಲಂಕಾ ಪ್ರಜೆಗಳ ಬಂಧನ Read More »

ಸೊಂಕಿತರಿಗೆ ಲಸಿಕೆಯ ಅಗತ್ಯವಿಲ್ಲ | ಅವೈಜ್ಞಾನಿಕ ಲಸಿಕೀಕರಣ ಹೊಸ ರೂಪಾಂತರಿ ತಳಿ ಸೃಷ್ಟಿಗೆ ದಾರಿ: ಕೇಂದ್ರಕ್ಕೆ ತಜ್ಞರ ಎಚ್ಚರಿಕೆ

ದೆಹಲಿ: ಸರಿಯಾದ ಯೋಜನೆಯಿಲ್ಲದ ಲಸಿಕೀಕರಣ ಹೊಸ ರೂಪಾಂತರಿ ತಳಿ ಸೃಷ್ಟಿಗೆ ಕಾರಣವಗಬಹುದು ಎಂದು ತಜ್ಞರು ಕೇಂದ್ರ ಸರಕಾರಕ್ಕೆ ಎಚ್ಚರಿಕೆ ನೀಡಿದೆ. ಹಾಗು ಕೋವಿಡ್ ಸೊಂಕಿಗೊಳಗಾದವರಿಗೆ ಲಸಿಕೆ ಹಾಕುವ ಅಗತ್ಯವಿಲ್ಲ ಎಂದು ಸಲಹೆ ನೀಡಿದೆ. ಸರಿಯಾದ ವೈಜ್ಞಾನಿಕ ರೀತಿ ಅನುಸರಿಸದೆ, ವಿವೇಚನಾ ರಹಿತವಾಗಿ ಮತ್ತು ಅಪೂರ್ಣವಾದ ಸಾಮೂಹಿಕ ಲಸಿಕೀಕರಣವು ರೂಪಾಂತರ ತಳಿಗಳ ಸೃಷ್ಟಿಗೆ ಪ್ರಚೋದನೆ ನೀಡುತ್ತದೆ ಎಂದು ತಜ್ಞ ವೈದ್ಯರ ಸಮಿತಿ ಪ್ರಧಾನಿಗೆ ಸಲ್ಲಿಸಿದ ವರದಿಯಲ್ಲಿ ಸ್ಪಷ್ಟಪಡಿಸಿದೆ. ಏಮ್ಸ್‌ನ ವೈದ್ಯರು, ಕೋವಿಡ್-19 ರಾಷ್ಟ್ರೀಯ ಕಾರ್ಯಪಡೆಯ ಸದಸ್ಯರು, ಸಾರ್ವಜನಿಕ ಆರೋಗ್ಯ

ಸೊಂಕಿತರಿಗೆ ಲಸಿಕೆಯ ಅಗತ್ಯವಿಲ್ಲ | ಅವೈಜ್ಞಾನಿಕ ಲಸಿಕೀಕರಣ ಹೊಸ ರೂಪಾಂತರಿ ತಳಿ ಸೃಷ್ಟಿಗೆ ದಾರಿ: ಕೇಂದ್ರಕ್ಕೆ ತಜ್ಞರ ಎಚ್ಚರಿಕೆ Read More »

ದ ಕ: ಕಪ್ಪು ಶಿಲೀಂದ್ರ ಕ್ಕೆ ಮತ್ತೆರಡು ಬಲಿ

ಮಂಗಳೂರು: ಮಾರಕ ಕಪ್ಪು ಶಿಲೀಂದ್ರ ಸೊಂಕಿಗೆ ಜಿಲ್ಲೆಯಲ್ಲಿ ಮತ್ತೆರಡು ಸಾವು ಸಂಭವಿಸಿದ್ದು ಮೂರು ಹೊಸ ಪ್ರಕರಣಗಳು ವರದಿಯಾಗಿದೆ. ಮೃತಪಟ್ಟವರು ಮತ್ತು ಹೊಸದಾಗಿ ಸೋಂಕಿಗೊಳಗಾದ ವರು ಎಲ್ಲರೂ ಹೊರಜಿಲ್ಲೆಯವರಗಿದ್ದಾರೆ. ಪತ್ತೆಯಾದ ಮೂರು ಹೊಸ ಪ್ರಕರಣಗಳು ಉತ್ತರ ಕನ್ನಡ, ಚಿಕ್ಕಮಗಳೂರು, ಹಾವೇರಿ ಜಿಲ್ಲೆಗೆ ಸಂಬಂಧಿಸಿದ್ದಾಗಿವೆ. ಎಲ್ಲರನ್ನು ವೆನ್ಲಾಕ್ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಇನ್ನು ಈ ಹಿಂದೆ ಸೊಂಕಿಗೊಳಗಾಗಿ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇಬ್ಬರು ನಿನ್ನೆ ಮೃತಪಟ್ಟಿದ್ದಾರೆ. ಅವರಲ್ಲಿ ಒಬ್ಬರು ಚಿಕ್ಕಮಗಳೂರು ಮತ್ತು ಇನ್ನೊಬ್ಬರು ಉತ್ತರ ಕನ್ನಡ ಜಿಲ್ಲೆಗೆ ಸೇರಿದವರಾಗಿದ್ದಾರೆ.

ದ ಕ: ಕಪ್ಪು ಶಿಲೀಂದ್ರ ಕ್ಕೆ ಮತ್ತೆರಡು ಬಲಿ Read More »

ಸೋಮವಾರ ವಿಶ್ವಸಂಸ್ಥೆ ವೇದಿಕೆಯಲ್ಲಿ ಮೋದಿ ಭಾಷಣ

ವಿಶ್ವಸಂಸ್ಥೆ: ಜೂನ್ 14 ರಂದು ಪ್ರಧಾನಿ ನರೇಂದ್ರ ಮೋದಿ ವಿಶ್ವಸಂಸ್ಥೆಯ ಸಮಾವೇಶವೊಂದರಲ್ಲಿ ಭಾಷಣ ಮಾಡಲಿದ್ದಾರೆ. ವರ್ಚುವಲ್ ವೇದಿಕೆ ಮೂಲಕ ಮುಂದಿನ ಸೋಮವಾರ ವಿಶ್ವಸಂಸ್ಥೆ ಆಯೋಜಿಸಿರುವ ಉನ್ನತ ಮಟ್ಟದ ಸಂವಾದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಲಿದ್ದಾರೆ ಎಂದು ಪ್ರಧಾನಿ ಕಛೇರಿ ಮೂಲಗಳು ತಿಳಿಸಿವೆ. ವಿಶ್ವಸಂಸ್ಥೆಯ 75ನೇ ಸಾಮಾನ್ಯಸಭೆಯ ಅಧ್ಯಕ್ಷರಾದ ವೋಲ್ಕನ್‌ ಬೊಜ್ಕಿರ್ ಆಯೋಜಿಸಿರುವ ಈ ಕಾರ್ಯಕ್ರಮದಲ್ಲಿ ಪ್ರಧಾನಿ ಮಣ್ಣಿನ ಗುಣಮಟ್ಟ ನಾಶ, ಮರುಭೂಮೀಕರಣ ಹಾಗೂ ಬರ ಪರಿಸ್ಥಿತಿ ಕುರಿತು ಮಾತನಾಡಲಿದ್ದಾರೆ ಎಂದು ತಿಳಿದುಬಂದಿದೆ. ಅದಲ್ಲದೆ ಪ್ರಧಾನಿ ಮೋದಿ

ಸೋಮವಾರ ವಿಶ್ವಸಂಸ್ಥೆ ವೇದಿಕೆಯಲ್ಲಿ ಮೋದಿ ಭಾಷಣ Read More »

ಬಿಎಸ್ ವೈ ಸಿಎಂ ಆದಾಗಲೆಲ್ಲ ರಾಜ್ಯಕ್ಕೆ ಸಂಕಷ್ಟ ಕಾಡುತ್ತಿದೆ: ಬಿಜೆಪಿ ಶಾಸಕ

ಚಿತ್ರದುರ್ಗ: ಸಿಎಂ ಬಿ ಎಸ್ ಯಡಿಯೂರಪ್ಪ ರಾಜ್ಯದ ಚುಕ್ಕಾಣಿ ಹಿಡಿದಾಗಲೆಲ್ಲ ರಾಜ್ಯಕ್ಕೆ ಸಂಕಷ್ಟ ಕಟ್ಟಿಟ್ಟ ಬುತ್ತಿ ಎಂದು ಹೊಸದುರ್ಗ ಬಿಜೆಪಿ ಶಾಸಕ ಅಭಿಪ್ರಾಯ ಪಟ್ಟಿದ್ದಾರೆ. ಯಡಿಯೂರಪ್ಪ ಅತ್ಯುತ್ತಮ ನಾಯಕ, ಶ್ರಮಿಕ ರಾಜಕಾರಣಿ. ಅವರಿಗೆ ಯಾವ ದುರದೃಷ್ಟ, ಗ್ರಹಚಾರ ಇದೆಯೋ ನಮಗೆ ತಿಳಿಯದು. ಅವರು ರಾಜ್ಯದ ಮುಖ್ಯಮಂತ್ರಿ ಯಾದಾಗಲೆಲ್ಲ ರಾಜ್ಯದಲ್ಲಿ ಸಂಕಷ್ಟ ಎದುರಾಗುತ್ತದೆ. ಎಂದು ಶಾಸಕ ಗೂಳಿಹಟ್ಟಿ ಶೇಖರ್‌ ಬೇಸರ ವ್ಯಕ್ತಪಡಿಸಿದರು. ಹೊಸದುರ್ಗ ನಗರದ ಕಡು ಬಡವರಿಗೆ ಉಚಿತವಾಗಿ 6,500 ಆಹಾರ ಕಿಟ್ ವಿತರಿಸಿದ ಬಳಿಕ ಈ ಬಗ್ಗೆ

ಬಿಎಸ್ ವೈ ಸಿಎಂ ಆದಾಗಲೆಲ್ಲ ರಾಜ್ಯಕ್ಕೆ ಸಂಕಷ್ಟ ಕಾಡುತ್ತಿದೆ: ಬಿಜೆಪಿ ಶಾಸಕ Read More »