ಸಮಗ್ರ ಸಮಾಚಾರ

ನಾಮಪತ್ರ ಹಿಂಪಡೆಯಲು ಹಣದ ಆಮೀಷ ಆರೋಪ | ಕೆ.ಸುರೇಂದ್ರನ್ ವಿರುದ್ಧ ಕೇಸು ದಾಖಲಿಸಲು ಕೋರ್ಟ್ ಅನುಮತಿ

ಕಾಸರಗೋಡು: ಕೇರಳ ವಿಧಾನಸಭೆಗೆ ಕಳೆದ ಏಪ್ರಿಲ್ ನಲ್ಲಿ ಚುನಾವಣೆ ನಡೆದು ಮೇ ತಿಂಗಳಲ್ಲಿ ಫಲಿತಾಂಶ ಹೊರಬಂದಿತ್ತು. ವಿಧಾನಸಭಾ ಚುನಾವಣೆ ವೇಳೆ ಹಣ ಹಾಗೂ ಆಮಿಷ ನೀಡಿ ನಾಮಪತ್ರ ಹಿಂತೆಗೆಯಲು ಅನ್ಯ ಪಕ್ಷದ ಅಭ್ಯರ್ಥಿ ಓರ್ವರಿಗೆ ಒತ್ತಡ ಹೇರಿದ ಆರೋಪದ ಮೇಲೆ ಸುರೇಂದ್ರನ್ ಅವರ ಮೇಲೆ ಕೇಸು ದಾಖಲಿಸಿ ಕೊಳ್ಳಲು ನ್ಯಾಯಾಲಯ ಅನುಮತಿ ನೀಡಿದೆ. ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಎಸ್ ಪಿ ಅಭ್ಯರ್ಥಿಯಾಗಿದ್ದ ಕೆ.ಸುಂದರರವರ ಹೇಳಿಕೆ ಹಿನ್ನಲೆಯಲ್ಲಿ, ಎಲ್ ಡಿ ಎಫ್ ಅಭ್ಯರ್ಥಿಯಾಗಿದ್ದ ರಮೇಶನ್ ನೀಡಿದ ದೂರಿನನ್ವಯ ಇದೀಗ […]

ನಾಮಪತ್ರ ಹಿಂಪಡೆಯಲು ಹಣದ ಆಮೀಷ ಆರೋಪ | ಕೆ.ಸುರೇಂದ್ರನ್ ವಿರುದ್ಧ ಕೇಸು ದಾಖಲಿಸಲು ಕೋರ್ಟ್ ಅನುಮತಿ Read More »

ಪುತ್ತೂರು: ನೇಣು ಬಿಗಿದು ಯುವತಿ ಆತ್ಮಹತ್ಯೆ

ಪುತ್ತೂರು: ವಿವಾಹ ನಿಶ್ಚಿತಾರ್ಥ ವಾಗಿದ್ದ ಯುವತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಸರಗೋಡು ಜಿಲ್ಲೆಯ ನೆಟ್ಟಣಿಗೆ ಗ್ರಾಮದ ಕುಳದಪಾರೆಯಲ್ಲಿ ನಡೆದಿದೆ. ನಿದಿಯಡ್ಕ ನಿವಾಸಿ ಸುಬ್ಬಣ್ಣ ನಾಯ್ಕ ಅವರ ಪುತ್ರಿ ಪ್ರಿಯಾ (25) ಮೃತ ಯುವತಿ. ಈಶ್ವರಮಂಗಲದ ಜೆರಾಕ್ಸ್ ಅಂಗಡಿಯೊಂದರಲ್ಲಿ ಉದ್ಯೋಗಿಯಾಗಿದ್ದ ಪ್ರಿಯ, ತನ್ನ ಮನೆಯಲ್ಲಿ ನಿನ್ನೆ ಯಾರು ಇಲ್ಲದ ಸಂಧರ್ಭ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇವರು ಈ ಹಿಂದೆ ಪುತ್ತೂರು ತಾಲ್ಲೂಕಿನ ಬಡಗನ್ನೂರು ಸರ್ಕಾರಿ ಶಾಲೆಯಲ್ಲಿ ಗೌರವ ಶಿಕ್ಷಕಿಯಾಗಿಯೂ ಕಾರ್ಯ ನಿರ್ವಹಿಸಿದ್ದರು. ಅದೂರು ಪೊಲೀಸ್

ಪುತ್ತೂರು: ನೇಣು ಬಿಗಿದು ಯುವತಿ ಆತ್ಮಹತ್ಯೆ Read More »

ಮರಕ್ಕೆ ಢಿಕ್ಕಿ ಹೊಡೆದ ಆಂಬುಲೆನ್ಸ್ : ಮೂವರು ಸಾವು

ಕೇರಳ : ಆಂಬುಲೆನ್ಸ್ ಒಂದು ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟು, ಓರ್ವ ಗಂಭೀರ ಗಾಯಗೊಂಡ ಘಟನೆ ಕಣ್ಣೂರಿನಲ್ಲಿ ಸೋಮವಾರ ನಡೆದಿದೆ. ಮೃತರನ್ನು ಪಯ್ಯನ್ನೂರು ನಿವಾಸಿಗಳಾದ ಬೀಜೋ (45), ಆತನ ಸಹೋದರಿ ರಜಿನಾ (37), ಮತ್ತು ಆಂಬುಲೆನ್ಸ್ ಚಾಲಕ ನಿತಿನ್ ರಾಜ್ (40) ಎಂದು ಗುರುತಿಸಲಾಗಿದೆ. ಜೊತೆಯಲ್ಲಿ ಇದ್ದ ಬೆಣ್ಣಿ ಎಂಬವರು ಗಂಭೀರ ಗಾಯಗೊಂಡಿದ್ದು ಕಣ್ಣೂರಿನ ಜಿಲ್ಲಾ ಆಸ್ಪತ್ರೆಗೆ ಸೇರಿಸಲಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಈ ದುರ್ಘಟನೆ ಸಂಭವಿಸಿದ್ದು, ಚಾಲಕ ನಿದ್ರೆಯ ಮಂಪರಿನಲ್ಲಿ ಇದ್ದುದರಿಂದ ನಿಯಂತ್ರಣ

ಮರಕ್ಕೆ ಢಿಕ್ಕಿ ಹೊಡೆದ ಆಂಬುಲೆನ್ಸ್ : ಮೂವರು ಸಾವು Read More »

ಪುಣೆ: ಕಾರ್ಖಾನೆಯಲ್ಲಿ ಅಗ್ನಿ ಅವಘಡ | 17 ಜನ ಮೃತ್ಯು

ಪುಣೆ: ಇಲ್ಲಿಯ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಇಂದು ಸಂಜೆ ಅಗ್ನಿ ಆಕಸ್ಮಿಕ ಸಂಭವಿಸಿದ್ದು ಬೆಂಕಿಯ ಕೆನ್ನಾಲಿಗೆ ಸಿಲುಕಿ 17 ಜನ ಪ್ರಾಣ ಕಳೆದುಕೊಂಡಿದ್ದಾರೆ. ಮುಲ್ಶಿ ಕೈಗಾರಿಕಾ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿದ್ದ ‘ಎಸ್‌ಯುಎಸ್‌ ಅಕ್ವಾ ಟೆಕ್ನಾಲಜೀಸ್’ ರಾಸಾಯನಿಕ ಕಾರ್ಖಾನೆಯಲ್ಲಿ ಈ ದುರಂತ ಸಂಭವಿಸಿದ್ದು, 15 ಮಹಿಳೆಯರು ಸೇರಿದಂತೆ 17 ಮಂದಿ ಮೃತಪಟ್ಟಿದ್ದಾರೆ ಹಾಗೂ ಸಣ್ಣಪುಟ್ಟ ಗಾಯಗೊಂಡ 20 ಮಂದಿಯನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪುಣೆ ಜಿಲ್ಲಾಡಳಿತ ತಿಳಿಸಿದೆ.ಬೆಂಕಿ ನಂದಿಸಿ ಅವಶೇಷಗಳ ತೆರವು ಕಾರ್ಯಾಚರಣೆ ಮತ್ತು ಮೃತ ವ್ಯಕ್ತಿಗಳ ಗುರುತು ಪತ್ತೆ

ಪುಣೆ: ಕಾರ್ಖಾನೆಯಲ್ಲಿ ಅಗ್ನಿ ಅವಘಡ | 17 ಜನ ಮೃತ್ಯು Read More »

ಪ್ರಧಾನಿಗೆ ಆಗಾಗ ಸುದ್ದಿಯಲ್ಲಿರುವ ಶೋಕಿ: ಕರ್ನಾಟಕ ಕಾಂಗ್ರೆಸ್

ಬೆಂಗಳೂರು: ಮೋದಿ ಅವರಿಗೆ ಆಗಾಗ ಸುದ್ದಿಯಲ್ಲಿರುವುದು ಶೋಕಿ ಎಂದು ಟ್ವೀಟ್ ಮಾಡುವ ಮೂಲಕ ಕರ್ನಾಟಕ ಕಾಂಗ್ರೆಸ್ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಟೀಕಿಸಿದೆ. ಕೋವಿಡ್ ನಿಗ್ರಹಿಸುವಲ್ಲಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಪ್ರಧಾನಿ ನರೇಂದ್ರಮೋದಿ ಅವರಿಗೆ ಆಗಾಗ ಸುದ್ದಿಯಲ್ಲಿರುವ ಶೋಕಿ, ಖಾಲಿ ಡಬ್ಬದಂತೆ ಟೆಲಿಪ್ರಾಂಪ್ಟರ್ ಎದುರು ಕುಳಿತು ಸದ್ದು ಮಾಡುವುದೇ ಅವರ ಖಯಾಲಿ. ಲಸಿಕೆ ನೀಡುವಲ್ಲಿ ವಿಫಲವಾಗಿ, ಹುರುಳಿಲ್ಲದ ಮಾತುಗಳನ್ನು ಹೆಡ್ ಲೈನ್ ಗಳನ್ನಾಗಿ ಸುವುದೇ ಮೋದಿ ತಂತ್ರ. ಧೈರ್ಯವಿದ್ದರೆ ಪತ್ರಿಕಾಗೋಷ್ಠಿ ನಡೆಸಿ ದೇಶದ

ಪ್ರಧಾನಿಗೆ ಆಗಾಗ ಸುದ್ದಿಯಲ್ಲಿರುವ ಶೋಕಿ: ಕರ್ನಾಟಕ ಕಾಂಗ್ರೆಸ್ Read More »

ಕೋವಿಡ್ 3ನೇ ಅಲೆ ಎದುರಿಸಲು ರಾಜ್ಯವನ್ನು ಸನ್ನದ್ಧವಾಗಿಸುವ ಗುರಿ | ₹1500 ಕೋ. ರೂ. ವೆಚ್ಚದಲ್ಲಿ ಮೂಲಸೌಕರ್ಯ ಅಭಿವೃದ್ಧಿ: ಡಾ. ಅಶ್ವಥ್ ನಾರಾಯಣ್

ಬೆಂಗಳೂರು: ರಾಜ್ಯ ಸರ್ಕಾರ ಕೇಂದ್ರ ಸರ್ಕಾರದ ಸಹಯೋಗದಲ್ಲಿ ಕೋವಿಡ್ ಎರಡನೇ ಅಲೆಯನ್ನು ಸಮರ್ಪಕ ರೀತಿಯಲ್ಲಿ ಎದುರಿಸುತ್ತಿದೆ. ಇನ್ನು ಮೂರನೇ ಅಲೆಯ ಮುನ್ಸೂಚನೆ ಇದ್ದು ಅದನ್ನು ಎದುರಿಸಲು ರಾಜ್ಯವನ್ನು ಎಲ್ಲಾ ರೀತಿಯಲ್ಲಿ ಸನ್ನದ್ಧವಾಗಿರಿಸುವ ಗುರಿ ಹೊಂದಲಾಗಿದೆ ಎಂದು ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ ಹೇಳಿದ್ದಾರೆ. ಇಂದು ನಡೆದ ಕೋವಿಡ್ ಟಾಸ್ಕ್ ಫೋರ್ಸ್ ಸಭೆಯ ಬಳಿಕ ಮಾತನಾಡಿದ ಅಶ್ವತ್ ನಾರಾಯಣ್, ರಾಜ್ಯದಲ್ಲಿ ಕೊರೋನ ಮೂರನೇ ಎದುರಿಸುವ ದೃಷ್ಟಿಯಲ್ಲಿ ಆರೋಗ್ಯ ಮೂಲಸೌಕರ್ಯ ಅಭಿವೃದ್ಧಿಗೊಳಿಸಲು ₹1500 ಕೋಟಿ ವೆಚ್ಚ ಮಾಡಲು ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.

ಕೋವಿಡ್ 3ನೇ ಅಲೆ ಎದುರಿಸಲು ರಾಜ್ಯವನ್ನು ಸನ್ನದ್ಧವಾಗಿಸುವ ಗುರಿ | ₹1500 ಕೋ. ರೂ. ವೆಚ್ಚದಲ್ಲಿ ಮೂಲಸೌಕರ್ಯ ಅಭಿವೃದ್ಧಿ: ಡಾ. ಅಶ್ವಥ್ ನಾರಾಯಣ್ Read More »

ಲಸಿಕಾ ನೀತಿಯಲ್ಲಿ ಮತ್ತೆ ಯೂ ಟರ್ನ್ ಹೊಡೆದ ಕೇಂದ್ರ, ರಾಜ್ಯಗಳಿಗಿಲ್ಲ ಹೊಣೆಗಾರಿಕೆ

ನವದೆಹಲಿ: ಲಸಿಕೆ ಹಂಚಿಕೆಯಲ್ಲಿ ರಾಜ್ಯಗಳಿಗೆ ನೀಡಿದ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ‌ ಮತ್ತೆ ಲಸಿಕಾ ನೀತಿಯಲ್ಲಿ ಯೂ ಟರ್ನ್ ಹೊಡೆದಿದೆ.ಇಂದು ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಇದೇ 21ರಿಂದ ಕೇಂದ್ರ ಸರ್ಕಾರವೇ ಹದಿನೆಂಟು ವರ್ಷ ಮೀರಿದ ಎಲ್ಲರಿಗೂ ಉಚಿತ ಲಸಿಕೆ‌ ನೀಡುವುದಾಗಿ ಪ್ರಕಟಿಸಿದ್ದು, ರಾಜ್ಯಗಳಿಗೆ ಲಸಿಕೆ ಹಂಚುವ ಜವಾಬ್ದಾರಿಯನ್ನು ಕೇಂದ್ರವೇ ತೆಗೆದುಕೊಳ್ಳಲಿದೆ ಎಂದು ಹೇಳಿದ್ದಾರೆ.ಕೊರೊನ ಎರಡನೇ ಅಲೆಯನ್ನು ಹತೋಟಿಗೆ ತರಲು ಕೇಂದ್ರ ಸರ್ಕಾರ ಶಕ್ತಿಮೀರಿ ಪ್ರಯತ್ನ ‌ನಡೆಸಿದೆ. ಅದಾಗ್ಯೂ ಹಲವು ಮಂದಿ ತಮ್ಮವರನ್ನು

ಲಸಿಕಾ ನೀತಿಯಲ್ಲಿ ಮತ್ತೆ ಯೂ ಟರ್ನ್ ಹೊಡೆದ ಕೇಂದ್ರ, ರಾಜ್ಯಗಳಿಗಿಲ್ಲ ಹೊಣೆಗಾರಿಕೆ Read More »

ಮುಖ್ಯಮಂತ್ರಿ ಆಮೇಲೆ ಆಗುವಿರಂತೆ, ಮೊದಲು ಕೋವಿಡ್ ನಿಯಂತ್ರಣದ ಕೆಲಸ ಮಾಡಿ: ಶಾಸಕರ ಕಿವಿಹಿಂಡಿದ ಯಡ್ಡಿ

ಬೆಂಗಳೂರು: ನಾಯಕತ್ವ ಬದಲಾವಣೆ, ಸಹಿ ಸಂಗ್ರಹಣೆ, ರಾಜಕೀಯ ಹೇಳಿಕೆಗಳನ್ನು ನೀಡುವುದನ್ನು ಬಿಟ್ಟು ನಿಮ್ಮ ಕ್ಷೇತ್ರದಲ್ಲಿ ಕೋವಿಡ್ ನಿಯಂತ್ರಣಕ್ಕೆ ಕೆಲಸ ಮಾಡಿ ಎಂದು ತಮ್ಮ ಶಾಸಕರಿಗೆ ಬಿಎಸ್ ಯಡಿಯೂರಪ್ಪ ಬುದ್ದಿವಾದ ಹೇಳಿದ್ದಾರೆ. ಯಡಿಯೂರಪ್ಪ ಅವರ ಪರವಾಗಿ ಸಹಿ ಸಂಗ್ರಹಿಸಿ ಹೈಕಮಾಂಡ್ ಗೆ ನೀಡುತ್ತೇವೆ ಎಂದು ಮಾಜಿ ಸಚಿವ ಹಾಗೂ ಹೊನ್ನಾಳಿ ಶಾಸಕ ರೇಣುಕಾಚಾರ್ಯ ಹೇಳಿದ್ದರು. ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ಬಿಜೆಪಿಯೊಳಗಡೆ ಅಧಿಕಾರ ಕಿತ್ತಾಟದ ಮಧ್ಯೆ ಈ ಹೇಳಿಕೆ ಬಂದಿತ್ತು. ಇದಕ್ಕೆ ಪ್ರತಿಪಕ್ಷಗಳು ಕೂಡ ಭಾರೀ ಟೀಕೆಯನ್ನು ಮಾಡಿದ್ದರು. ಇದರಿಂದ

ಮುಖ್ಯಮಂತ್ರಿ ಆಮೇಲೆ ಆಗುವಿರಂತೆ, ಮೊದಲು ಕೋವಿಡ್ ನಿಯಂತ್ರಣದ ಕೆಲಸ ಮಾಡಿ: ಶಾಸಕರ ಕಿವಿಹಿಂಡಿದ ಯಡ್ಡಿ Read More »

ಜೂನ್ 21ರಿಂದ ದೇಶವಾಸಿಗಳಿಗೆ ಉಚಿತ ಲಸಿಕೆ: ಪ್ರಧಾನಿ ಮೋದಿ ಘೋಷಣೆ

ನವದೆಹಲಿ: ಜೂನ್ 21ರಿಂದ ಕೇಂದ್ರದಿಂದಲೇ ಎಲ್ಲರಿಗೂ ಉಚಿತ ಕೊರೊನಾ ಲಸಿಕೆ ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಇಂದು ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಮೋದಿ ದೀಪಾವಳಿವರೆಗೂ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿಯಲ್ಲಿ ಉಚಿತ ಪಡಿತರ ವಿತರಿಸಲಾಗುವುದು ಎಂದು ತಿಳಿಸಿದರು. ಮೋದಿ ಭಾಷಣದ ಸಾರಾಂಶವೇನು?:ಕೊರೊನಾ ಎರಡನೇ ಅಲೆಯ ವಿರುದ್ಧ ಭಾರತ ಹೋರಾಡುತ್ತಿದ್ದು, ಅನೇಕು ತಮ್ಮವರನ್ನು ಕಳೆದುಕೊಂಡಿದ್ದಾರೆ. ಇದು 100 ವರ್ಷಗಳಲ್ಲಿಯೇ ಅತಿ ದೊಡ್ಡ ಮಹಾಮಾರಿ. ಕೋವಿಡ್ ವಿರುದ್ಧ ಹೋರಾಟದ ವೇಳೆ ದೇಶದಲ್ಲಿಯೇ ಹೊಸ ಆರೋಗ್ಯ ವ್ಯವಸ್ಥೆ

ಜೂನ್ 21ರಿಂದ ದೇಶವಾಸಿಗಳಿಗೆ ಉಚಿತ ಲಸಿಕೆ: ಪ್ರಧಾನಿ ಮೋದಿ ಘೋಷಣೆ Read More »

ಎರಡು ಮಕ್ಕಳ ತಾಯಿ, ಮಗನ ವಯಸ್ಸಿನ ಬಾಲಕನ ಜೊತೆ ಪರಾರಿ: ಕಾರಣ ನಿಗೂಢ

ಛತ್ತೀಸ್‌ಗಢ: ಇಲ್ಲಿನ ಕೋರಬಾದದಲ್ಲಿ 30 ವರ್ಷದ ಮಹಿಳೆಯೊಬ್ಬಳು ತನ್ನ ಮಗನ ಸಮನವಾದ 14 ವರ್ಷದ ಬಾಲಕನೊಂದಿಗೆ ಓಡಿ ಹೋದ ಘಡನೆ ನಡೆದಿದೆ. ಈ ಮಹಿಳೆಗೆ ಎರಡು ಮಕ್ಕಳಿದ್ದು ಈ ರೀತಿ ಪರಾರಿಯಾಗಿರುವುದು ಆತಂಕ ಉಂಟುಮಾಡಿದೆ. ಈಕೆಯ ಗಂಡ ಸರಕಾರಿ ನೌಕರನಾಗಿದ್ದ. ಈಕೆಗೆ ಅದೇ ಊರಿನ ಬಾಲಕನೊಂದಿಗೆ ಪ್ರೇಮಾಂಕುರಗೊಂಡಿತ್ತು. ಮನೆಯಲ್ಲಿ ಯಾರೂ ಇಲ್ಲದ ವೇಳೆ ಇವರ ನಡುವೆ ಕುಚುಕು ಪ್ರೇಮ ಕೂಡ ನಡೆಯುತ್ತಿತ್ತು ಎಂದು ಹೇಳಲಾಗಿದೆ. ಇವರಿಬ್ಬರ ನಡುವಿನ ಈ ವಿಚಿತ್ರ ಪ್ರೇಮ ದೈಹಿಕ ಸಂಪರ್ಕದವರೆಗೂ ತಲುಪಿತ್ತು. ಇದಕ್ಕೆ

ಎರಡು ಮಕ್ಕಳ ತಾಯಿ, ಮಗನ ವಯಸ್ಸಿನ ಬಾಲಕನ ಜೊತೆ ಪರಾರಿ: ಕಾರಣ ನಿಗೂಢ Read More »