ಸಮಗ್ರ ಸಮಾಚಾರ

ಕೇಂದ್ರ ಸಚಿವ ರಮೇಶ್ ಪೋಖ್ರಿಯಾಳ್ ಆರೋಗ್ಯದಲ್ಲಿ ವ್ಯತ್ಯಯ: ಆಸ್ಪತ್ರೆಗೆ ದಾಖಲು

ದೆಹಲಿ : ಕೊರೋನಾ ಸೋಂಕಿನ ನಂತರ ಉಂಟಾದಂತ ತೊಂದರೆಯಿಂದಾಗಿ ಕೇಂದ್ರ ಸಚಿವ ರಮೇಶ್ ಪೋಖ್ರಿಯಾಳ್ ನಿಶಾಂಕ್ ಅವರು, ಅನಾರೋಗ್ಯಕ್ಕೆ ಒಳಗಾಗಿ, ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತಂತೆ ದೆಹಲಿಯ ಏಮ್ಸ್ ಆಸ್ಪತ್ರೆಯ ಮೂಲಗಳಿಂದ ಮಾಹಿತಿ ತಿಳಿದು ಬಂದಿದ್ದು, ಕೋವಿಡ್-19 ರ ನಂತರದ ತೊಡಕುಗಳಿಂದಾಗಿ ಕೇಂದ್ರ ಶಿಕ್ಷಣ ಸಚಿವ ಡಾ. ರಮೇಶ್ ಪೋಖ್ರಿಯಾಲ್ ನಿಶಾಂಕ್ ಅವರನ್ನು ಮಂಗಳವಾರ ಏಮ್ಸ್ ಗೆ ದಾಖಲಿಸಲಾಗಿದೆ, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.ಸಚಿವ ರಮೇಶ್ ಪೋಖ್ರಿಯಾಳ್ ಇತ್ತೀಚೆಗೆ ಕೊರೋನಾ […]

ಕೇಂದ್ರ ಸಚಿವ ರಮೇಶ್ ಪೋಖ್ರಿಯಾಳ್ ಆರೋಗ್ಯದಲ್ಲಿ ವ್ಯತ್ಯಯ: ಆಸ್ಪತ್ರೆಗೆ ದಾಖಲು Read More »

ಪುತ್ತೂರು:ಅನ್ಯಕೋಮಿನ ಯುವಕನಿಂದ ಅತ್ಯಾಚಾರಕ್ಕೆ ಯತ್ನ

ಪುತ್ತೂರು: ಭಿನ್ನ ಕೋಮಿನ ಯುವಕನೋರ್ವ ಮೆಡಿಕಲ್‌ನ ಒಳಗೆ ನುಗ್ಗಿ ಮಹಿಳಾ ಸಿಬ್ಬಂದಿಯ ಮಾನಭಂಗಕ್ಕೆ ಯತ್ನಿಸಿರುವ ಘಟನೆ ಜೂ.1ರಂದು ಈಶ್ವರಮಂಗಲದಲ್ಲಿ ನಡೆದಿದೆ. ನೆಟ್ಟಣಿಗೆ ಮುಡ್ನೂರು ಗ್ರಾಮದ ಈಶ್ವರಮಂಗಲ ಪೇಟೆಯಲ್ಲಿರುವ ಮೆಡಿಕಲ್‌ಗೆ ಔಷಧಿ ಖರೀದಿಸಲು ಬಂದಿರುವ ಯುವಕ ಮೆಡಿಕಲ್‌ನಲ್ಲಿ ಯುವತಿಯೋರ್ವಳೆ ಇರುವುದನ್ನು ಗಮನಿಸಿ ಮೆಡಿಕಲ್ ಒಳನುಗ್ಗಿದ್ದು ಯುವತಿಯ ಮಾನಭಂಗಕ್ಕೆ ಯತ್ನಿಸಿದ್ದಾನೆ ಎನ್ನಲಾಗಿದೆ. ಈ ಸಂದರ್ಭದಲ್ಲಿ ಯುವತಿ ಕೂಗಿಕೊಂಡಾಗ ಅಲ್ಲಿನ ಸ್ಥಳೀಯರು ಜಮಾಯಿಸಿ, ಆರೋಪಿ ಯುವಕನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ತಿಳಿದುಬಂದಿದೆ.

ಪುತ್ತೂರು:ಅನ್ಯಕೋಮಿನ ಯುವಕನಿಂದ ಅತ್ಯಾಚಾರಕ್ಕೆ ಯತ್ನ Read More »

ಉತ್ತರ ಪ್ರದೇಶ ಕಳ್ಳಭಟ್ಟಿ ದುರಂತ | ಏರುತ್ತಲೇ ಇದೆ ಮೃತರ ಸಂಖ್ಯೆ

ಲಖನೌ: ರಾಜ್ಯದ ಅಲಿಗಡದಲ್ಲಿ ಕಳೆದ ವಾರ ವಿಷಕಾರಿ ಮದ್ಯಸೇವಿಸಿ ಆಸ್ಪತ್ರೆ ಸೇರಿದ್ದವರಲ್ಲಿ ನಿನ್ನೆ ಒಂದೇ ದಿನ 11 ಮಂದಿ ಅಸುನೀಗಿದ್ದಾರೆ. ಇದರೊಂದಿಗೆ ಮೃತಪಟ್ಟವರ ಒಟ್ಟು ಸಂಖ್ಯೆ 36 ಕ್ಕೆ ಏರಿಕೆಯಾಗಿದೆ. ಘಟನೆ ನಡೆದ ಶುಕ್ರವಾರದಿಂದ ಸೋಮವಾರ ಮುಂಜಾನೆಯವರೆಗೆ ಒಟ್ಟು 71 ಶವಗಳು ಮರಣೋತ್ತರ ಪರೀಕ್ಷೆಗೆ ಬಂದಿವೆ. ಇವುಗಳ ಪೈಕಿ 36 ಜನರ ಸಾವಿಗೆ ವಿಷಕಾರಿ ಮದ್ಯವೇ ಕಾರಣ ಎಂಬುದು ದೃಢಪಟ್ಟಿದೆ. ಉಳಿದ 35 ಶವಗಳ ಮರಣೋತ್ತರ ಪರೀಕ್ಷೆಯನ್ನೂ ನಡೆಸಲಾಗಿದ್ದು, ಅವರ ಸಾವಿಗೂ ವಿಷಯುಕ್ತ ಮದ್ಯವೇ ಕಾರಣ ಎಂದು

ಉತ್ತರ ಪ್ರದೇಶ ಕಳ್ಳಭಟ್ಟಿ ದುರಂತ | ಏರುತ್ತಲೇ ಇದೆ ಮೃತರ ಸಂಖ್ಯೆ Read More »

ಮಾಜಿ ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ವ್ಯತ್ಯಯ

ಬೆಂಗಳೂರು: ಮಾಜಿ ಸಿಎಂ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು ವೈದ್ಯರ ಪರೀಕ್ಷೆಗೆ ಒಳಪಟ್ಟಿದ್ದಾರೆ. ನಿನ್ನೆ ರಾತ್ರಿ ಸಿದ್ದರಾಮಯ್ಯ ಅವರಿಗೆ ತೀವ್ರ ಜ್ವರ ಕಾಣಿಸಿಕೊಂಡಿತ್ತು. ನಂತರ ಅವರ ಆಪ್ತ ವೈದ್ಯ ಡಾ. ರವಿಕುಮಾರ್ ಅವರನ್ನು ಪರೀಕ್ಷಿಸಿದ್ದು, ಮನೆಯಲ್ಲಿಯೇ ವಿಶ್ರಾಂತಿ ಪಡೆಯಲು ಸೂಚಿಸಿದ್ದಾರೆ. ಸಿದ್ದರಾಮಯ್ಯ ಅವರ ಕೋವಿಡ್ ವರದಿ ನೆಗೆಟಿವ್ ಬಂದಿದ್ದು ಅವರ ಇಂದಿನ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ ಎಂದು ತಿಳಿದುಬಂದಿದೆ.

ಮಾಜಿ ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ವ್ಯತ್ಯಯ Read More »

ಮುಂದಿನ ವರ್ಷ 20,810 ಕೋಟಿ ಬೆಳೆಸಾಲ ಗುರಿ ಸಚಿವ ಸೋಮಶೇಖರ್

ಬೆಂಗಳೂರು: ಮುಂದಿನ ವರ್ಷ ರೈತರಿಗೆ 20,810 ಕೋಟಿಗೂ ಅಧಿಕ ನೀಡುವ ಗುರಿ ಹೊಂದಲಾಗಿದೆ ಎಂದು ಸಚಿವ ಎಸ್ ಟಿ ಸೋಮಶೇಖರ್ ಹೇಳಿದ್ದಾರೆ. ಕಳೆದ ವರ್ಷ ಅಂದರೆ 2020-21 ನೇ ಸಾಲಿನಲ್ಲಿ 15,400 ಕೋಟಿಗೂ ಅಧಿಕ ಬೆಳೆಸಾಲ ವಿತರಿಸಲಾಗಿತ್ತು. ಈ ಬಾರಿ ಅಂದರೆ 2021-22 ನೇ ಸಾಲಿಗೆ ಈಗಾಗಲೇ ಗುರಿ ನಿಗದಿಪಡಿಸಲಾಗಿದ್ದು ಈ ಬಗ್ಗೆ ರಾಜ್ಯದ ಎಲ್ಲಾ ಜಿಲ್ಲೆಗಳ ಕೇಂದ್ರ ಸಹಕಾರಿ ಬ್ಯಾಂಕುಗಳಿಗೆ ನಿರ್ದೇಶನ ನೀಡಲಾಗಿದೆ. ಮೂರು ಕೋಟಿಗೂ ಅಧಿಕ ರೈತರು ಫಲಾನುಭವಿಗಳಾಗುವ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ ಎಂದು ಸಚಿವರು

ಮುಂದಿನ ವರ್ಷ 20,810 ಕೋಟಿ ಬೆಳೆಸಾಲ ಗುರಿ ಸಚಿವ ಸೋಮಶೇಖರ್ Read More »

ಮಂಗಳೂರು ನಗರ ಪೊಲೀಸ್ ವತಿಯಿಂದ ಇಂದು “ಗಾನಸುಧೆ” ಕಾರ್ಯಕ್ರಮ

ಮಂಗಳೂರು: ಮಂಗಳೂರು ನಗರ ಪೊಲೀಸ್ ವತಿಯಿಂದ ಇಂದು ಕೋವಿಡ್ ವಾರಿಯರ್ಸ್ ಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ‘ಗಾನಸುಧೆ’ ಸಂಗೀತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇಂದು ಮಧ್ಯಾಹ್ನ ಫೇಸ್ ಬುಕ್ ಲೈವ್ ನಲ್ಲಿ ಮಂಗಳೂರು ನಗರ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ನಡೆಸಿಕೊಡುವ ಸಂಗೀತ ಕಾರ್ಯಕ್ರಮ ಪ್ರಸಾರವಾಗಲಿದೆ. ಕೇಳಲಿಚ್ಚಿಸುವವರು Arvind Vivek’s ಫೇಸ್ಬುಕ್ ಪೇಜ್ ಅನ್ನು ಅನುಸರಿಸುವಂತೆ ಸೂಚಿಸಲಾಗಿದೆ. ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸಿಕೊಂಡು ಈ ಕಾರ್ಯಕ್ರಮ ನಡೆಸಲಾಗುತ್ತಿದೆ. “ಗಾನಸುಧೆ”ಯನ್ನು ರಾಜ್ಯದ ಎಲ್ಲಾ ಕೋವಿಡ್ ವಾರಿಯರ್ಸ್ ಗಳಿಗೆ ಸಮರ್ಪಿಸಲಾಗುತ್ತಿದೆ ಎಂದು ಮಂಗಳೂರು ನಗರ

ಮಂಗಳೂರು ನಗರ ಪೊಲೀಸ್ ವತಿಯಿಂದ ಇಂದು “ಗಾನಸುಧೆ” ಕಾರ್ಯಕ್ರಮ Read More »

ಸರ್ಕಾರದ ಮೇಲಿನ ಮಾಧ್ಯಮಗಳ ಟೀಕೆಯನ್ನು ದೇಶದ್ರೋಹ ಎಂದು ಪರಿಗಣಿಸಲಾಗದು: ಸುಪ್ರೀಂ

ನವದೆಹಲಿ: ಸರ್ಕಾರದ ಕೆಲಸಗಳು ಅಥವಾ ನೀತಿ-ನಿಯಮಗಳನ್ನು ಟೀಕಿಸಿ ಮಾಧ್ಯಮಗಳು ವರದಿ ಮಾಡಿದರೆ ಅದನ್ನು ದೇಶದ್ರೋಹ ಎಂದು ಪರಿಗಣಿಸಲಾಗದು ಎಂದು ಸುಪ್ರೀಂಕೋರ್ಟ್ ಹೇಳಿದೆ. ಆಂಧ್ರ ಪ್ರದೇಶ ಸರ್ಕಾರದ ವಿರುದ್ಧ ಅಲ್ಲಿನ ಟಿವಿ5 ಹಾಗೂ ಎಬಿಎನ್ ಆಂಧ್ರಜ್ಯೋತಿ ಸುದ್ದಿವಾಹಿನಿಗಳು ಅಲ್ಲಿನ ಸಂಸದರೊಬ್ಬರ ನಿಲುವನ್ನು ಪ್ರಕಟಿಸಿ, ದೇಶದ್ರೋಹ ಆರೋಪ ಎದುರಿಸುತ್ತಿದ್ದವು. ಈ ಬಗ್ಗೆ ಸುಪ್ರೀಂಕೋರ್ಟ್ ನಲ್ಲಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ವೇಳೆ, ಸುಪ್ರೀಂಕೋರ್ಟ್ ಟಿವಿ ಚಾನೆಲ್ ಗಳ ಮೇಲೆ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಪೊಲೀಸರಿಗೆ ಸೂಚನೆ ನೀಡಿದೆ. ದೇಶದ್ರೋಹ ಸೇರಿದಂತೆ

ಸರ್ಕಾರದ ಮೇಲಿನ ಮಾಧ್ಯಮಗಳ ಟೀಕೆಯನ್ನು ದೇಶದ್ರೋಹ ಎಂದು ಪರಿಗಣಿಸಲಾಗದು: ಸುಪ್ರೀಂ Read More »

ಜೂ. 7 ರ ಬಳಿಕ ಮುಂದುವರಿಯಲಿದೆ ಲಾಕ್ಡೌನ್…? | ಇಲ್ಲಿದೆ ತಜ್ಞರ ಶಿಫಾರಸ್ಸಿನ ಮುಖ್ಯಾಂಶಗಳು

ಬೆಂಗಳೂರು: ರಾಜ್ಯ ಸರ್ಕಾರದ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸರಕಾರಕ್ಕೆ ಶಿಫಾರಸ್ಸು ಒಂದನ್ನು ಮಾಡಿದ್ದು ಸದ್ಯ ರಾಜ್ಯದಲ್ಲಿರುವ ಲಾಕ್ಡೌನ್ ಅನ್ನು ಮುಂದುವರೆಸುವಂತೆ ಸಲಹೆ ನೀಡಿದೆ. ಮೇ 30ರಂದು ನಡೆದ ತಜ್ಞರನ್ನೊಳಗೊಂಡ 14 ಸದಸ್ಯರುಗಳ, ಕೋವಿಡ್ ತಾಂತ್ರಿಕ ಸಲಹಾ ಸಮಿತಿಯ ಸಭೆಯ ವರದಿ ನಿನ್ನೆ ರಾಜ್ಯ ಸರ್ಕಾರದ ಕೈಸೇರಿದೆ. ವರದಿಯಲ್ಲಿ ದಿನದ ಕೋವಿಡ್ ಪಾಸಿಟಿವ್ ಪ್ರಮಾಣ ಶೇಕಡಾ 5ಕ್ಕಿಂತ ಕೆಳಗೆ ಬರುವವರೆಗೆ ಮತ್ತು ಮರಣ ಪ್ರಮಾಣ ಶೇಕಡ 1ಕ್ಕಿಂತ ಕೆಳಗೆ ಇಳಿಯುವವರೆಗೆ ರಾಜ್ಯದಲ್ಲಿ ಸದ್ಯ ಇರುವ ನಿರ್ಬಂಧಗಳನ್ನು ಮುಂದುವರಿಸಬೇಕು

ಜೂ. 7 ರ ಬಳಿಕ ಮುಂದುವರಿಯಲಿದೆ ಲಾಕ್ಡೌನ್…? | ಇಲ್ಲಿದೆ ತಜ್ಞರ ಶಿಫಾರಸ್ಸಿನ ಮುಖ್ಯಾಂಶಗಳು Read More »

ಪಾಸಿಟಿವ್ ಸಮಾಚಾರ : ಚಾಲಕರಿಂದ ಲಂಚ ಸ್ವೀಕರಿಸಿ ವೈರಲ್ ಆಗಿದ್ದ ಅರಣ್ಯಾಧಿಕಾರಿ ಅಮಾನತು

ಉಪ್ಪು ತಿಂದವ ನೀರು ಕುಡಿಯಬೇಕು ಎಂಬ ಗಾದೆಗೆ‌ ಈ ಘಟನೆ ಸಾಕ್ಷಿಯಾಗಿದೆ. ಮಾಣಿ‌ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸಂಪಾಜೆ ಚೆಕ್ ಪೋಸ್ಟ್ ‌ನಲ್ಲಿ ಲಾರಿ ಚಾಲಕರಿಂದ ಲಂಚ ಪಡೆಯುತ್ತಿದ್ದ ಅರಣ್ಯಾಧಿಕಾರಿ ಇದೀಗ ಸಸ್ಪೆಂಡ್ ಆಗಿದ್ದಾರೆ.ಸಂಪಾಜೆ ವಲಯದ ದಬ್ಬಡ್ಕ ಶಾಖೆಯಲ್ಲಿ ಉಪವಲಯ ಅರಣ್ಯಾಧಿಕಾರಿ ಹಾಗೂ ಮೋಜಣಿದಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ರಕ್ಷಿತ್ ಅಮಾನತುಗೊಂಡ ಅಧಿಕಾರಿ. ಮೇ.24ರಂದು‌ ಸಂಪಾಜೆ ‌ತನಿಖಾ ಠಾಣೆಯಲ್ಲಿ ಕರ್ತವ್ಯದಲ್ಲಿದ್ದಾಗ ಲಾರಿ ಚಾಲಕನಿಂದ ಹಣ ಪಡೆದು ಧಮ್ಕಿ ಹಾಕಿದ ವಿಡಿಯೋ ವೈರಲ್ ಆಗಿ ಸುದ್ದಿಯಾಗಿತ್ತು. ಈ ಹಿನ್ನೆಲೆಯಲ್ಲಿ ಈತನನ್ನು

ಪಾಸಿಟಿವ್ ಸಮಾಚಾರ : ಚಾಲಕರಿಂದ ಲಂಚ ಸ್ವೀಕರಿಸಿ ವೈರಲ್ ಆಗಿದ್ದ ಅರಣ್ಯಾಧಿಕಾರಿ ಅಮಾನತು Read More »

ಕಡಿಮೆಯಾಗುತ್ತಿರುವ ಪಾಸಿಟಿವ್ ದರ. ಜೂ.7ರಿಂದ ರಾಜ್ಯ ಅನ್ ಲಾಕ್!?

ಬೆಂಗಳೂರು : ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಕೋವಿಡ್ -19 ಸೋಂಕಿನ ಪ್ರಕರಣಗಳು ಗಣನೀಯವಾಗಿ ಇಳಿಮುಖವಾಗುತ್ತಿರುವುದರಿಂದ ರಾಜ್ಯ ಸರ್ಕಾರ ಅನ್‌ಲಾಕ್ ಪ್ಲಾನ್ ರೂಪಿಸುತ್ತಿದೆ. ಕೊರೊನಾ ಎರಡನೇ ಅಲೆ ಕರುನಾಡನ್ನು ಸಂಪೂರ್ಣ ನಲುಗಿಸಿದೆ. ದಿನೇದಿನೇ ಉಲ್ಬಣಿಸುತ್ತಿದ್ದ ಕೊರೊನಾ ಅಬ್ಬರ, ಮತ್ತೊಂದೆಡೆ ಹೆಚ್ಚುತ್ತಿರುವ ಸಾವಿನ ಸಂಖ್ಯೆ ರಾಜ್ಯವನ್ನು ಸಂಪೂರ್ಣ ಹಿಂಡಿ ಹಿಪ್ಪೆಯಾಗಿಸಿತ್ತು. ಈ ಕೊರೊನಾದ ಆರ್ಭಟಕ್ಕೆ ನಿಯಂತ್ರಣ ಹೇರಲು ಅನಿವಾರ್ಯವಾಗಿ ಸರ್ಕಾರ ಲಾಕ್‌ಡೌನ್ ಮೊರೆ ಹೋಗಿದೆ. ಏಪ್ರಿಲ್ 27ರಿಂದ ಚಾಲ್ತಿಯಲ್ಲಿರುವ ಲಾಕ್‌ಡೌನ್‌ ದಿನ ಕಳೆದಂತೆ ಮತ್ತಷ್ಟು ಬಿಗಿಗೊಳಿಸಲಾಯಿತು.‌ ಜೂನ್ 7ರವರೆಗೆ

ಕಡಿಮೆಯಾಗುತ್ತಿರುವ ಪಾಸಿಟಿವ್ ದರ. ಜೂ.7ರಿಂದ ರಾಜ್ಯ ಅನ್ ಲಾಕ್!? Read More »