ಸಮಗ್ರ ಸಮಾಚಾರ

ನೈಟ್ರೋಜನ್ ಆಕ್ಸೈಡ್ ಲೀಕೇಜ್ ಪರಿಣಾಮ: ಆ್ಯಸಿಡ್ ಮಳೆ ಭೀತಿಯಲ್ಲಿ ಕೊಲಂಬೋ

ಕೊಲಂಬೋ,ಮೇ.29-ಕಳೆದ ವಾರ ಕೊಲಂಬೊ ಸಮುದ್ರ ತೀರದಲ್ಲಿ ಸಿಂಗಾಪೂರ್ ನ ಸರಕು ಸಾಗಾಣೆ ಹಡಗಿನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ನೈಟ್ರೋಜನ್ ಡೈ ಆಕ್ಸೆಡ್ ಹೊರಸೂಸಿರುವುದರಿಂದ ಸಮೀಪದ ಪ್ರದೇಶಗಳಲ್ಲಿ ಸ್ವಲ್ಪ ಪ್ರಮಾಣದ ಆಸಿಡ್ ಮಳೆಯಾಗುವ ಸಾಧ್ಯತೆಗಳಿವೆ ಎನ್ನಲಾಗಿದೆ. ಹೀಗಾಗಿ ಕೊಲಂಬೊ ಸುತ್ತಮುತ್ತಲಿನ ಜನ ಎಚ್ಚರಿಕೆ ವಹಿಸಬೇಕು ಎಂದು ಶ್ರೀಲಂಕಾ ಪರಿಸರ ಇಲಾಖೆ ಕರೆ ನೀಡಿದೆ.ಗುಜರಾತ್‍ನ ಹಜೀರಾದಿಂದ ಕೆಮಿಕಲ್ ಹಾಗೂ ಕಾಸ್ಮೇಟಿಕ್ ಕಚ್ಚಾ ವಸ್ತುಗಳನ್ನು ಕೊಲಂಬೊ ತರುತ್ತಿದ್ದ ಸಿಂಗಾಪೂರ್‍ನ ಎಂವಿ ಎಕ್ಸ್‍ಪ್ರೆಸ್ ಪರ್ಲ್ ಹಡಗಿನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿತ್ತು. ಹಡಗಿನ ಟ್ಯಾಂಕಿನಲ್ಲಿ […]

ನೈಟ್ರೋಜನ್ ಆಕ್ಸೈಡ್ ಲೀಕೇಜ್ ಪರಿಣಾಮ: ಆ್ಯಸಿಡ್ ಮಳೆ ಭೀತಿಯಲ್ಲಿ ಕೊಲಂಬೋ Read More »

ಕೊರೋನಾಗೆ ಜೀವತೆತ್ತರೆ 4 ಲಕ್ಷ :ವೈರಲ್ ಆಗುತ್ತಿದೆ ಫೇಕ್ ಪಿಡಿಎಫ್

ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ, ಕೊರೋನಾದಿಂದ ಮೃತಪಟ್ಟರೆ 400000 ಪರಿಹಾರ ಧನ ಸಿಗಲಿದೆ ಮಾಹಿತಿಯುಳ್ಳ ಪಿಡಿಎಫ್ ಫೈಲ್ ನ ಅಂಶಗಳು ಸಂಪೂರ್ಣ ಶುದ್ಧ ಸುಳ್ಳು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದ್ದಾರೆ. ಕಳೆದೆರಡುದಿನಗಳಲ್ಲಿ ಭಾರಿ ವೈರಲ್ ಆಗುತ್ತಿರುವ ಈ ಪಿಡಿಎಫ್ ಫೈಲ್ ನಲ್ಲಿ ಕೊರೊನಾದಿಂದ ಮೃತಪಟ್ಟವರಿಗೆ ಕೇಂದ್ರ ಸರ್ಕಾರ ನಾಲ್ಕು ಲಕ್ಷ ಪರಿಹಾರ ಧನ ನೀಡಲಿದೆ ಇದಕ್ಕೆ ಸಂಬಂಧಿಸಿದ ಅರ್ಜಿ ನಮೂನೆಗಳು ಜಿಲ್ಲಾಧಿಕಾರಿ ಕಚೇರಿಯಲ್ಲಿ ಲಭ್ಯವಿದೆ ಎಂಬ ಇನ್ನಿತರ ಮಾಹಿತಿ ಇದ್ದು, ಇದನ್ನು ಎಲ್ಲರಿಗೂ ತಲುಪಿಸಿ

ಕೊರೋನಾಗೆ ಜೀವತೆತ್ತರೆ 4 ಲಕ್ಷ :ವೈರಲ್ ಆಗುತ್ತಿದೆ ಫೇಕ್ ಪಿಡಿಎಫ್ Read More »

ಖಾಸಗಿ ಸಾರಿಗೆ ವಾಹನ ಮಾಲಿಕರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್

ಬೆಂಗಳೂರು: ಕೊರೊನಾ ಹಿನ್ನೆಲೆಯಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ಹೇರಿರುವ ಕಾರಣ ಮೇ ತಿಂಗಳ ಮೋಟಾರು ವಾಹನ ತೆರಿಗೆ ಪಾವತಿಯಿಂದ ವಿನಾಯಿತಿ ನೀಡಿ ಕರ್ನಾಟಕ ರಾಜ್ಯ ಸರ್ಕಾರ ಆದೇಶಿಸಿದೆ. ನೋಂದಾಯಿತ ಸಾರಿಗೆ ಪ್ರಯಾಣಿಕ ವಾಹನಗಳಿಗೆ ಈ ಆದೇಶ ಅನ್ವಯವಾಗಲಿದ್ದು, ಹೊಸ ವಾಹನಗಳ ನೋಂದಣಿಯನ್ನು ಹೊರತುಪಡಿಸಿ ಆದೇಶ ಹೊರಡಿಸಲಾಗಿದೆ. ರಾಜ್ಯದಲ್ಲಿ ನೋಂದಾಯಿಸಿರುವ ಎಲ್ಲಾ ಸಾರಿಗೆ ಪ್ರಯಾಣಿಕ ವಾಹನಗಳಿಗೆ ಮಾತ್ರ ಅನ್ವಯಿಸುವಂತೆ ಮೇ 2021ರ ಒಂದು ತಿಂಗಳ ಅವಧಿಗೆ ಮೋಟಾರು ವಾಹನ ತೆರಿಗೆ ಪಾವತಿಯಿಂದ ವಿನಾಯಿತಿ ನೀಡಿ ರಾಜ್ಯ ಸರ್ಕಾರ ಆದೇಶ

ಖಾಸಗಿ ಸಾರಿಗೆ ವಾಹನ ಮಾಲಿಕರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್ Read More »

ಕನ್ನಡದಲ್ಲಿ ನ್ಯಾಯ ಬರೆಯುತ್ತಿದ್ದ ಕೆ.ವಿ ವಾಸುದೇವ ಮೂರ್ತಿ ಇನ್ನಿಲ್ಲ

ಬೆಂಗಳೂರು(ಮೇ.30): ರಾಜ್ಯದ ನ್ಯಾಯಾಂಗ ಇತಿಹಾಸದಲ್ಲಿ ಮೊದಲ ಬಾರಿಗೆ ಕನ್ನಡದಲ್ಲಿ ಆದೇಶಗಳನ್ನು ಬರೆಸಿದ ಕೀರ್ತಿಗೆ ಭಾಜನರಾಗಿದ್ದ ನಿವೃತ್ತ ಜಿಲ್ಲಾ ನ್ಯಾಯಾಧೀಶ ಕೆ.ವಿ. ವಾಸುದೇವ ಮೂರ್ತಿ (83) ಹೃದಯಾಘಾತದಿಂದ ಶನಿವಾರ ನಿಧನರಾದರು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ನಗರದ ಹನುಮಂತನಗರದ ತಮ್ಮ ನಿವಾಸದಲ್ಲಿ ಮೃತಪಟ್ಟಿದ್ದಾರೆ. ಸಂಜೆ 6.30ಕ್ಕೆ ಚಾಮರಾಜಪೇಟೆಯ ಟಿ.ಆರ್‌.ಮಿಲ್‌ ಚಿತಾಗಾರದಲ್ಲಿ ಅಂತ್ಯಸಂಸ್ಕಾರ ನೆರವೇರಿಸಲಾಗಿದೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.ಸಮಾಜಸೇವೆ, ಸಾಹಿತ್ಯ ಮತ್ತು ಕ್ರೀಡಾ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದ ಅವರು, ಕಾನೂನು ಪದವಿ ಪಡೆದ ಬಳಿಕ ಶಿವಮೊಗ್ಗದ ನ್ಯಾಯವಾದಿ ವೆಂಕಟರಾಮಾಶಾಸ್ತಿರಗಳ ಕಚೇರಿಯಲ್ಲಿ

ಕನ್ನಡದಲ್ಲಿ ನ್ಯಾಯ ಬರೆಯುತ್ತಿದ್ದ ಕೆ.ವಿ ವಾಸುದೇವ ಮೂರ್ತಿ ಇನ್ನಿಲ್ಲ Read More »

ಈ ವಾರ ನಿಮ್ಮ ಭವಿಷ್ಯ

ಮೇಷ ರಾಶಿ (ಅಶ್ವಿನಿ ಭರಣಿ ಕೃತಿಕ 1) ಮುಂದಿನ ಬದುಕಿನ ಬಗ್ಗೆ ಸ್ವಲ್ಪ ಚಿಂತೆ ಮಾಡುವಿರಿ. ಸರಿಯಾದ ನಿರ್ಣಯದಿಂದ ಮುಂದಿನ ಬದುಕಿಗೊಂದು ದಾರಿ ಕಂಡುಕೊಳ್ಳುವಿರಿ. ಕಾರ್ಯಕ್ಷೇತ್ರದಲ್ಲಿ ಸ್ನೇಹಿತರಿಂದ ಮತ್ತು ಸಹೋದ್ಯೋಗಿಗಳಿಂದ ಉತ್ತಮ ಸಹಕಾರ ದೊರೆತು ನೆಮ್ಮದಿ ಕಾಣುವಿರಿ. ಹಿರಿಯರಿಂದ ಬಂದ ಸಲಹೆಗಳನ್ನು ನಿರಾಕರಿಸಬೇಡಿ. ದಿಢೀರ್‌ ಶ್ರೀಮಂತರಾಗಲು ಹೋಗಿ ಅಪಕೀರ್ತಿ ಸಂಭವಿಸಬಹುದು. ಪ್ರೀತಿಪಾತ್ರರು ನಿಮ್ಮ ನಿರ್ಧಾರದ ವಿರುದ್ಧ ತಗಾದೆ ತೆಗೆಯಬಹುದು. ಬುದ್ಧಿಮತ್ತೆಯಿಂದ ಕಾರ್ಯತಂತ್ರಗಳನ್ನು ರೂಪಿಸಿದಲ್ಲಿ ಕೆಲಸಗಳಲ್ಲಿ ಯಶಸ್ಸನ್ನು ಕಾಣಬಹುದು. ಹಣದ ಒಳಹರಿವು ನಿಮ್ಮ ಅಗತ್ಯವನ್ನು ಪೂರೈಸುತ್ತದೆ. ಮನೆಯಲ್ಲಿ ಇದ್ದಂತಹ

ಈ ವಾರ ನಿಮ್ಮ ಭವಿಷ್ಯ Read More »

ಜೂ.7ರ ನಂತರ ರಾಜ್ಯದಲ್ಲಿ ಲಾಕ್ ಡೌನ್ ಕಂಟಿನ್ಯೂ. ಸಿಎಂ ಹೇಳಿದ್ದೇನು?

ಬೆಂಗಳೂರು : ಜೂನ್ 7 ರ ನಂತರ ರಾಜ್ಯದಲ್ಲಿ ಲಾಕ್ ಡೌನ್ ಮುಂದುವರೆಸುವ ಕುರಿತಂತೆ ಸಿಎಂ ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ. ಜನರು ಸಹಕರಿಸಿದರೆ ಲಾಕ್‌ಡೌನ್ ಮುಂದುವರಿಸುವ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ತಿಳಿಸಿರುವ ಅವರು ಗೃಹ ಕಚೇರಿ ಕೃಷ್ಣದಲ್ಲಿ ಐದು ಜಿಲ್ಲೆಗಳ ಜನಪ್ರತಿನಿಗಳ ಜೊತೆ ಸಭೆ ನಡೆಸಿ ಬಳಿಕ ಮಾತನಾಡಿದರು. ಲಾಕ್​ಡೌನ್ ಜೂನ್ 7ರವರೆಗೂ ಮುಂದುವರೆಯಲಿದ್ದು, ಅಲ್ಲಿಯವರೆಗೂ ಇರುತ್ತದೆ. ಅಲ್ಲಿವರೆಗೂ ಬಿಗಿಯಾದ ಕ್ರಮ ಮುಂದುವರೆಯಲಿದೆ. ಕೊರೊನಾ ಕಡಿಮೆ ಆದರೆ ಲಾಕ್​ಡೌನ್ ಮುಂದುವರಿಸುವುದಿಲ್ಲ. ಜನ ಸಹಕರಿಸಿದರೆ ಲಾಕ್​ಡೌನ್ ಮುಂದುವರೆಸುವ ಪ್ರಶ್ನೆಯೇ

ಜೂ.7ರ ನಂತರ ರಾಜ್ಯದಲ್ಲಿ ಲಾಕ್ ಡೌನ್ ಕಂಟಿನ್ಯೂ. ಸಿಎಂ ಹೇಳಿದ್ದೇನು? Read More »

ಅಗೆದಷ್ಟು ಆಳ ಬೆಂಗಳೂರು ಗ್ಯಾಂಗ್ ರೇಪ್ ಪ್ರಕರಣ | ಸಂತ್ರಸ್ತೆ ಭಾರತದಲ್ಲಿ ಅಂತರ್ರಾಜ್ಯ ವೇಶ್ಯಾವಾಟಿಕೆ ಕಿಂಗ್ ಪಿನ್…!? | ಬಾಂಗ್ಲಾ ಪ್ರಜೆಗಳಿಗೆ ಬೆಂಗ್ಳೂರಲ್ಲಿ ಆಧಾರ್….?

ಬೆಂಗಳೂರು: ರಾಮಮೂರ್ತಿ ನಗರ ಸಾಮೂಹಿಕ ಅತ್ಯಾಚಾರ ಎಸಗಿ ವಿಡಿಯೋ ವೈರಲ್ ಪ್ರಕರಣದಲ್ಲಿ ಪೊಲೀಸರು ವಶಕ್ಕೆ ಪಡೆದ ಆರೋಪಿಗಳ ಬಳಿ ಆಧಾರ ಕಾರ್ಡ್ ಪತ್ತೆಯಾಗಿದೆ. ಆದರೆ ಈ ಬಾಂಗ್ಲಾ ಪ್ರಜೆಗಳಿಗೆ ಆಧಾರ ಕಾರ್ಡ್ ಸಿಕ್ಕಿದ್ದು ಹೇಗೆ..? ಎಂಬುದನ್ನು ಬೆಂಗಳೂರು ಪೊಲೀಸರು ಅತ್ಯಂತ ಗಂಭೀರವಾಗಿ ಪರಿಗಣಿಸಿ ಅದರ ಬೆನ್ನು ಬಿದ್ದಿದ್ದಾರೆ. ಅಕ್ರಮವಾಗಿ ಆಧಾರ ಕಾರ್ಡ್ ಮಾಡಿಕೊಟ್ಟವರಿಗಾಗಿ ವಿಶೇಷ ತಂಡ ರಚಿಸಿ ಶೋಧ ಆರಂಭಿಸಿದ್ದಾರೆ. ಇದರ ಹಿಂದೆ ವ್ಯವಸ್ಥಿತ ಅಕ್ರಮ ಜಾಲ ಕೆಲಸ ಮಾಡಿದ್ದರ ಬಗ್ಗೆ ಶಂಕೆ ವ್ಯಕ್ತವಾಗಿದ್ದು, ಅಕ್ರಮವಾಗಿ ಬಾಂಗ್ಲಾದಿಂದ

ಅಗೆದಷ್ಟು ಆಳ ಬೆಂಗಳೂರು ಗ್ಯಾಂಗ್ ರೇಪ್ ಪ್ರಕರಣ | ಸಂತ್ರಸ್ತೆ ಭಾರತದಲ್ಲಿ ಅಂತರ್ರಾಜ್ಯ ವೇಶ್ಯಾವಾಟಿಕೆ ಕಿಂಗ್ ಪಿನ್…!? | ಬಾಂಗ್ಲಾ ಪ್ರಜೆಗಳಿಗೆ ಬೆಂಗ್ಳೂರಲ್ಲಿ ಆಧಾರ್….? Read More »

ತವರು ಜಿಲ್ಲೆಗೆ ತೆಲಂಗಾಣ ಎನ್ಕೌಂಟರ್ ಖ್ಯಾತಿಯ ಐಪಿಎಸ್ ಅಧಿಕಾರಿ ವಿಶ್ವನಾಥ ಸಜ್ಜನರ ನೆರವು

ಗದಗ: ತನ್ನ ತವರು ಜಿಲ್ಲೆ ಗದಗಕ್ಕೆ ತೆಲಂಗಾಣದಲ್ಲಿ ಪಶು ವೈದ್ಯೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಕೊಲೆಗೈದ ಆರೋಪಿಗಳನ್ನು ಎನ್‌ಕೌಂಟರ್‌ ಮಾಡುವ ಮೂಲಕ ದೇಶದ ಗಮನ ಸೆಳೆದಿದ್ದ ಕರ್ನಾಟಕ ಮೂಲದ ಹಿರಿಯ ಐಪಿಎಸ್‌ ಅಧಿಕಾರಿ ವಿಶ್ವನಾಥ ಸಜ್ಜನರ ಅವರು ನೆರವು ನೀಡಿದ್ದಾರೆ. ಕೋವಿಡ್‌ ಸಂಕಷ್ಟದ ಸಮಯದಲ್ಲಿ ಗದಗ ಜಿಲ್ಲೆಗೆ ಸುಮಾರು 40 ಲಕ್ಷ ರೂ ಮೌಲ್ಯದ ವೈದ್ಯಕೀಯ ಸಾಮಗ್ರಿಗಳನ್ನು ಒದಗಿಸುವ ಮೂಲಕ ಸಹಾಯಹಸ್ತ ಚಾಚಿದ್ದಾರೆ. ಅವರು 22 ಆಕ್ಸಿಜನ್‌ ಕಾನ್ಸಂಟ್ರೇಟರ್‌, 84 ಆಕ್ಸಿಜನ್‌ ಸಿಲಿಂಡರ್‌, 2000 ಕೋವಿಡ್‌

ತವರು ಜಿಲ್ಲೆಗೆ ತೆಲಂಗಾಣ ಎನ್ಕೌಂಟರ್ ಖ್ಯಾತಿಯ ಐಪಿಎಸ್ ಅಧಿಕಾರಿ ವಿಶ್ವನಾಥ ಸಜ್ಜನರ ನೆರವು Read More »

ನಾನೇ ಈ ರೀತಿ ಪರದಾಡಬೇಕಾದ್ರೆ ಜನಸಾಮಾನ್ಯರ ಕಥೆಯೇನು…?: ಸಿದ್ದರಾಮಯ್ಯ

ಬೆಂಗಳೂರು: ಕೊರೊನಾ ಸೋಂಕಿಗೆ ಲಸಿಕೆ ನೀಡಲು ಸರಕಾರ ಖಾಸಗಿಯವರಿಗೆ ಅವಕಾಶ ನೀಡಿದೆ. ಆದರೆ ಇದನ್ನೇ ಬಂಡವಾಳವಾಗಿ ಬಳಸಿಕೊಂಡಿರುವ ಖಾಸಗಿ ಆಸ್ಪತ್ರೆಗಳು ಜನರಿಂದ ಹಣ ಲೂಟಿ ಹೊಡೆಯುತ್ತಿವೆ. ಒಂದೊಂದು ಆಸ್ಪತ್ರೆಯಲ್ಲೂ ಲಸಿಕೆಗೆ ಒಂದೊಂದು ದರವಿದೆ ಎಂದು ಆರೋಪಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಲಸಿಕೆಗಳಿಗೆ ಏಕರೂಪದ ದರ ನಿಗದಿ ಮಾಡಲೇಬೇಕು ಎಂದು ಆಗ್ರಹಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಶನಿವಾರ ಮಾತನಾಡಿದ ಸಿದ್ದರಾಮಯ್ಯ, “ಸರ್ಕಾರಿ ಆಸ್ಪತ್ರೆಗಳಲ್ಲಿ ಲಸಿಕೆ ಸಿಗುತ್ತಿಲ್ಲ. ಖಾಸಗಿ ಆಸ್ಪತ್ರೆಗಳಲ್ಲಿ ಒಂದೊಂದು ರೀತಿ ದರವಿದೆ. ೯೦೦ರೂ ಇಂದ ೧೨೫೦ರೂವರೆಗೆ ದರ ನಿಗದಿ

ನಾನೇ ಈ ರೀತಿ ಪರದಾಡಬೇಕಾದ್ರೆ ಜನಸಾಮಾನ್ಯರ ಕಥೆಯೇನು…?: ಸಿದ್ದರಾಮಯ್ಯ Read More »

ಕಾಪು: ಟಿಪ್ಪರ್ ಢಿಕ್ಕಿ ರಿಕ್ಷಾ ಚಾಲಕ ಮೃತ್ಯು

ಕಾಪು: ಆಟೋಗೆ ಟಿಪ್ಪರ್ ಢಿಕ್ಕಿಯಾಗಿ ಆಟೋ ಚಾಲಕ ಮೃತಪಟ್ಟ ಘಟನೆ ಇಂದು ಇಲ್ಲಿನ ಶಿರ್ವ ರಸ್ತೆಯ ಮಲ್ಲಾರು ಗ್ರಾಮದ ಸ್ವಾಗತನಗರ ಬಳಿ ನಡೆದಿದೆ.ಉಡುಪಿಯ ಮಧ್ವನಗರ ಕೊಡುವೂರು ನಿವಾಸಿ ಶಾವೂರು (೪೦) ಮೃತಪಟ್ಟವರು. ಇವರು ಶಾವೂರು ಫಕೀರಣ ಕಟ್ಟೆಗೆ ಆಗಮಿಸಿ ತಮ್ಮ ಆಟೋರಿಕ್ಷಾದಲ್ಲಿ ಹಿಂತಿರುಗುತ್ತಿದ್ದ ವೇಳೆ ಟಿಪ್ಪರ್ ಢಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾಪು: ಟಿಪ್ಪರ್ ಢಿಕ್ಕಿ ರಿಕ್ಷಾ ಚಾಲಕ ಮೃತ್ಯು Read More »