ಸಮಗ್ರ ಸಮಾಚಾರ

ಕರಾವಳಿ: ಸೋಂಕಿತರ ಸಂಖ್ಯೆ ಇಳಿಮುಖ, ಸಾವಿನ ಸಂಖ್ಯೆ ಏರಿಕೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಮೇ.೨೬ ರಂದು ಒಂದೇ ದಿನ ಹನ್ನೊಂದು ಮಂದಿ ಬಲಿಯಾಗಿರುವ ಬಗ್ಗೆ ಜಿಲ್ಲಾಡಳಿತ ಮಾಹಿತಿ ನೀಡಿದೆ. ಸಾವಿನ ಸಂಖ್ಯೆಯಲ್ಲಿ ಒಂದೇ ಬಾರಿಗೆ ಏರಿಕೆಯಾಗಿದ್ದು ಆತಂಕ ಮೂಡಿಸಿದೆ.ಕಳೆದ ೨೪ ಗಂಟೆಗಳಲ್ಲಿ ಕೊರೊನಾ ಸೋಂಕಿಗೆ ೧೧ ಮಂದಿ ಸಾವನ್ನಪಿದ್ದು, ಜಿಲ್ಲೆಯಲ್ಲಿ ಈವರೆಗೆ ಬಲಿಯಾದವರ ಸಂಖ್ಯೆ ೮೮೪ ಕ್ಕೆ ಏರಿಕೆಯಾಗಿದೆ.ಇನ್ನು ಜಿಲ್ಲೆಯಲ್ಲಿ ಇದೇ ವೇಳೆ ೭೨೯ ಮಂದಿ ಕೊರೊನಾ ಪಾಸಿಟಿವ್ ಆಗಿದ್ದಾರೆ. ೭೫೬ ಮಂದಿ ಕೊರೊನಾದಿಂದ ಗುಣಮುಖರಾಗಿದ್ದಾರೆ. ಇನ್ನೂ ಜಿಲ್ಲೆಯಲ್ಲಿ ೧೦,೦೯೯ ಮಂದಿ ಒಟ್ಟು […]

ಕರಾವಳಿ: ಸೋಂಕಿತರ ಸಂಖ್ಯೆ ಇಳಿಮುಖ, ಸಾವಿನ ಸಂಖ್ಯೆ ಏರಿಕೆ Read More »

ಸಚಿವರಿಗೆ ಪಿಡಿಒ ಕಾನೂನು ಪಾಠ: ಬುದ್ದಿಮಾತು ಹೇಳಿ ಓದಾರ್ಯ ಮೆರೆದ ಕೋಟ ವೈರಲ್ ಆದ ಸಂಭಾಷಣೆಯ ಆಡಿಯೋ ಇಲ್ಲಿದೆ

ಸಚಿವರೆಂದರೆ ಸಾಮಾನ್ಯವಾಗಿ ಅಧಿಕಾರಿ ವರ್ಗದವರು ಮಾತನಾಡಲೂ ಭಯಪಡುತ್ತಾರೆ. ಆದರೆ ಇಲ್ಲೊಬ್ಬ ಪಿಡಿಒ ಉಸ್ತುವಾರಿ ಸಚಿವರನ್ನು ಪ್ರಶ್ನಿಸುವುದಲ್ಲದೆ ಸಚಿವರಿಗೇ ಕಾನೂನು ಪಾಠ ಮಾಡಿದ ಘಟನೆ ‌ನಡೆದಿದೆ. ಪಿಡಿಒ ರಿಂದ‌ ಪಾಠ ಹೇಳಿಸಿಕೊಂಡ ಸಚಿವರು ಬುದ್ದಿಮಾತು ಹೇಳಿ ಕಳಿಸಿದ ಸ್ವಾರಸ್ಯ ಸಂಗತಿಯೊಂದು‌ ಬೆಳಕಿಗೆ ಬಂದಿದೆ.ದ.ಕ ಜಿಲ್ಲೆಯ ಕಂದಾವರ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಯಶವಂತರವರು ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಫೋನ್‌ ಮಾಡಿ ಕೋವಿಡ್ ಕಿಟ್ ವಿತರಣೆ ವಿಚಾರದಲ್ಲಿ ಚರ್ಚೆ ಮಾಡಿದ್ದಲ್ಲದೇ, ವಾಗ್ವಾದ ನಡೆಸಿದ ಆಡಿಯೋ ವೈರಲ್ ಆಗಿದೆ.

ಸಚಿವರಿಗೆ ಪಿಡಿಒ ಕಾನೂನು ಪಾಠ: ಬುದ್ದಿಮಾತು ಹೇಳಿ ಓದಾರ್ಯ ಮೆರೆದ ಕೋಟ ವೈರಲ್ ಆದ ಸಂಭಾಷಣೆಯ ಆಡಿಯೋ ಇಲ್ಲಿದೆ Read More »

ಹಸಿಗಾಯವನ್ನು ಮತ್ತೆ ಕೆರೆಯುತ್ತಿರುವ ಕೇಂದ್ರ ಸರ್ಕಾರ | ಪೆಟ್ರೋಲಿಯಂ ಉತ್ಪನ್ನಗಳ ಜೊತೆಗೆ ಅಡುಗೆ ಎಣ್ಣೆಯೂ ದುಬಾರಿ

ನವದೆಹಲಿ: ದೇಶದ ಅನೇಕ ರಾಜ್ಯಗಳಲ್ಲಿ ಪೆಟ್ರೋಲ್ ದರ 100 ರೂಪಾಯಿ ಗಡಿ ದಾಟಿದ್ದು, ಅಡುಗೆ ಎಣ್ಣೆ ದರ 200 ರೂ. ಸನಿಹಕ್ಕೆ ತಲುಪಿದೆ. ಈ ಮೂಲಕ ಮತ್ತೆ ಮತ್ತೆ ಜನಸಾಮಾನ್ಯರ ಜೀವನದಲ್ಲಿ ಗಾಯದ ಮೇಲೆ ಬರೆ ಎಳೆಯುತ್ತಿದೆ. ಕಳೆದ ವರ್ಷದಿಂದಲೇ ಏರುಗತಿಯಲ್ಲಿ ಸಾಗುತ್ತಿರುವ ಅಡುಗೆ ಎಣ್ಣೆ ದರ 180 ರೂಪಾಯಿ ದಾಟಿ 200 ರೂ. ಸನಿಹಕ್ಕೆ ಬಂದಿದೆ. ಇದರಿಂದಾಗಿ ಬಡವರು, ಮಧ್ಯಮವರ್ಗದವರು ತೊಂದರೆ ಅನುಭವಿಸುವಂತಾಗಿದೆ. ಕೊರೋನಾ ಕಾರಣದಿಂದ ಲಾಕ್ಡೌನ್, ಕಠಿಣ ನಿರ್ಬಂಧಗಳನ್ನು ಜಾರಿಗೊಳಿಸಲಾಗಿದ್ದು, ಮೊದಲೇ ಸಂಕಷ್ಟದಲ್ಲಿರುವ ಜನರಿಗೆ

ಹಸಿಗಾಯವನ್ನು ಮತ್ತೆ ಕೆರೆಯುತ್ತಿರುವ ಕೇಂದ್ರ ಸರ್ಕಾರ | ಪೆಟ್ರೋಲಿಯಂ ಉತ್ಪನ್ನಗಳ ಜೊತೆಗೆ ಅಡುಗೆ ಎಣ್ಣೆಯೂ ದುಬಾರಿ Read More »

ರಾಜಕೀಯ ಸಮಾಚಾರ : ರಾಜ್ಯ ಬಿಜೆಪಿಯಲ್ಲಿ ಮತ್ತೆ ನಾಯಕತ್ವ ಬದಲಾವಣೆ ಕೂಗು| ಯಡಿಯೂರಪ್ಪ ಪದಚ್ಯುತಿಗೆ ತೀವ್ರಗೊಂಡ ಪ್ರಯತ್ನ..!

ಬೆಂಗಳೂರು. ಮೇ.26: ರಾಜ್ಯ ಬಿಜೆಪಿಯಲ್ಲಿ ಮತ್ತೊಮ್ಮೆ ನಾಯಕತ್ವ ಬದಲಾವಣೆಯ ಕೂಗು ಜೋರಾಗಿದ್ದು, ಸಿಎಂ ಬದಲಾವಣೆಗೆ ಕೆಲವು ನಾಯಕರು ಟೊಂಕಕಟ್ಟಿ‌ ನಿಂತಿದ್ದಾರೆ. ದೆಹಲಿ ಮಟ್ಟದಲ್ಲೂ ಚಿತಾವಣೆ ನಡೆಸಿದ್ದು, ಹೈಕಮಾಂಡ್ ಈ ಬಾರಿ ನಾಯಕತ್ವ ಬದಲಾವಣೆ ಮಾಡುತ್ತಾ? ರಾಜ್ಯ ನಾಯಕರ ಒತ್ತಡಕ್ಕೆ ಮಣಿಯುತ್ತಾ? ಈ ಕುರಿತು ಮುಂದೆ ಓದಿ… ಕಳೆದ ಆರೇಳು ತಿಂಗಳಿಂದಲೂ ಯಡಿಯೂರಪ್ಪನವರನ್ನ ಕೆಳಗಿಳಿಸೋ ಪ್ರಯತ್ನಗಳು ತೆರೆಮರೆಯಲ್ಲಿ ನಡೆಯುತ್ತಲೇ ಇವೆ.ಆದ್ರೆ ಕೋವಿಡ್ ನ ಕಾರಣದಿಂದ ಯಾವ ಪ್ರಯತ್ನಗಳೂ ಕೈಗೂಡುತ್ತಿಲ್ಲ. ಈ ಹಿಂದೆ ರಾಷ್ಟ್ರೀಯ ನಾಯಕರು ಸಿಎಂ ಬದಲಾವಣೆಗೆ ಮನಸ್ಸು

ರಾಜಕೀಯ ಸಮಾಚಾರ : ರಾಜ್ಯ ಬಿಜೆಪಿಯಲ್ಲಿ ಮತ್ತೆ ನಾಯಕತ್ವ ಬದಲಾವಣೆ ಕೂಗು| ಯಡಿಯೂರಪ್ಪ ಪದಚ್ಯುತಿಗೆ ತೀವ್ರಗೊಂಡ ಪ್ರಯತ್ನ..! Read More »

ಅಟೋರಿಕ್ಷಾ, ಟ್ಯಾಕ್ಸಿ ಚಾಲಕರಿಗೆ ಸಹಾಯಧನ: ಮೇ.27ರಿಂದ ಅರ್ಜಿ ಸ್ವೀಕಾರ

ಬೆಂಗಳೂರು: ಕೋವಿಡ್ ನಿಯಂತ್ರಣಕ್ಕೆ ಹೇರಿರುವ ಲಾಕ್‍ಡೌನ್‍ನಿಂದ ದುಡಿಮೆಯಿಲ್ಲದೆ ಸಂಕಷ್ಟಕ್ಕೆ ಒಳಗಾಗಿರುವ ಆಟೋರಿಕ್ಷಾ, ಟ್ಯಾಕ್ಸಿ ಮತ್ತು ಮ್ಯಾಕ್ಸಿಕ್ಯಾಬ್ ಚಾಲಕರಿಗೆ ತಲಾ 3 ಸಾವಿರ ರೂ. ಸಹಾಯಧನ ಘೋಷಣೆ ಮಾಡಲಾಗಿದ್ದು, ನಾಳೆ ಮೇ 27ರಿಂದ ಅರ್ಜಿ ಸ್ವೀಕಾರ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ. ಇಂದು ಈ ಸಂಬಂಧ ಮಾತನಾಡಿರುವ ಅವರುಅರ್ಹ ಅಭ್ಯರ್ಥಿಗಳು `ಸೇವಾ ಸಿಂಧು’ ವೆಬ್ ಪೋರ್ಟಲ್ ಮೂಲಕ ಸೂಕ್ತ ದಾಖಲೆಗಳನ್ನು ಒದಗಿಸಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಿದ ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ

ಅಟೋರಿಕ್ಷಾ, ಟ್ಯಾಕ್ಸಿ ಚಾಲಕರಿಗೆ ಸಹಾಯಧನ: ಮೇ.27ರಿಂದ ಅರ್ಜಿ ಸ್ವೀಕಾರ Read More »

ಕಾಸರಗೋಡು: ಜಿಲ್ಲಾ ಉಸ್ತುವಾರಿ ಸಚಿವರಾಗಿ ಸಚಿವ ಅಹಮ್ಮದ್ ದೇವರ್ ನೇಮಕ

ಕಾಸರಗೋಡು: ಇಲ್ಲಿನ ಜಿಲ್ಲಾ ಉಸ್ತುವಾರಿ ಸಚಿವರಾಗಿ ಬಂದರು ಸಚಿವ ಅಹಮ್ಮದ್ ದೇವರ್ ಕೋವಿಳ್‌ರವರು  ನೇಮಕರಾಗಿದ್ದಾರೆ. ಈ ಬಾರಿ ಪಿಣರಾಯಿ ವಿಜಯನ್ ನೇತೃತ್ವದ ಎಲ್‌ಡಿಎಫ್ ಸರಕಾರದಲ್ಲಿ ಕಾಸರಗೋಡಿಗೆ ಸಚಿವ ಸ್ಥಾನ ಲಭಿಸಿಲ್ಲ. ಈ ಹಿನ್ನೆಲೆ ಅಹಮ್ಮದ್ ದೇವರ್ ಅವರಿಗೆ ಕಾಸರಗೋಡು ಜಿಲ್ಲಾ ಉಸ್ತುವಾರಿ ಸ್ಥಾನ ಲಭಿಸಿದೆ. ಜಿಲ್ಲೆಯ ಸಚಿವರ ಕೊರತೆ ನೀಗಿಸುವ ನಿಟ್ಟಿನಲ್ಲಿ ಅಹಮ್ಮದ್ ದೇವರ್ ಕೋವಿಳ್ ರವರನ್ನು ಜಿಲ್ಲಾ ಉಸ್ತುವಾರಿ ನೀಡಲಾಗಿದೆ. ಕೋಜಿಕ್ಕೋಡ್ ಸೌತ್ ಕ್ಷೇತ್ರದಿಂದ ಆಯ್ಕೆಯಾದ ಎಲ್‌ಡಿಎಫ್ ಘಟಕ ಪಕ್ಷವಾದ ಇಂಡಿಯನ್ ನ್ಯಾಷನಲ್ ಲೀಗ್(ಐ.ಎನ್.ಎಲ್)ನ ಶಾಸಕರಾಗಿದ್ದು,

ಕಾಸರಗೋಡು: ಜಿಲ್ಲಾ ಉಸ್ತುವಾರಿ ಸಚಿವರಾಗಿ ಸಚಿವ ಅಹಮ್ಮದ್ ದೇವರ್ ನೇಮಕ Read More »

ಗರಿಷ್ಠ 150 ವರ್ಷಗಳವರೆಗೂ ಮಾನವನು ಬದುಕಬಲ್ಲನು !

ನ್ಯೂಯಾರ್ಕ್: ಮಾನವನ ಆಯುಷ್ಯದ ಮೇಲೆ ನಿರಂತರ ಸಂಶೋಧನೆಗಳು ನಡೆಯುತ್ತಲೇ ಬಂದಿದೆ. ಇದೀಗ ಮಾನವನ ಜೀವಿತಾವಧಿಯ ಮೇಲೆ ನಡೆದ ಸಂಶೋಧನೆಯು ಮಾನವನ ಜೀವಿತಾವಧಿ ಗರಿಷ್ಠ 120-150 ವರ್ಷ ಎಂದು ತಿಳಿಸಿದೆ. ನೇಚರ್ ಕಮ್ಯೂನಿಕೇಷನ್‌ ಜರ್ನಲ್‌ನಲ್ಲಿ ಮಾನವ ಕ್ಯಾನ್ಸರ್, ಹೃದ್ರೋಗ ಅಥವಾ ಅಪಘಾತಗಳಿಂದ ಸಾಯದೇ ಉಳಿದರೆ 120-150ವರ್ಷಗಳ ಕಾಲ ಬದುಕಬಹುದು ಎಂದು ವರದಿಯಾಗಿದೆ.ಮನುಷ್ಯನ ವಯಸ್ಸಾಗುವ ವೇಗವು ಆತನ ಜೀವಾತಾವಧಿಯನ್ನು ನಿರ್ಧರಿಸುತ್ತದೆ.‌ವಯಸ್ಸಾದಂತೆ ದೇಹದ ಚಟುವಟಿಗಳಿಗೆ ರಕ್ತಕಣಗಳು ಸ್ಪಂದಿಸುವ ಸಾಮರ್ಥ್ಯ ಕಡಿಮೆಯಾಗುತ್ತದೆ. ವಯಸ್ಸಾದ ವ್ಯಕ್ತಿಯ ಚೇತರಿಕೆಗೆ ಅಧಿಕ ಸಮಯ ಬೇಕಾಗುತ್ತದೆ. ಆದರೆ, ಮನುಷ್ಯನ

ಗರಿಷ್ಠ 150 ವರ್ಷಗಳವರೆಗೂ ಮಾನವನು ಬದುಕಬಲ್ಲನು ! Read More »

ರಾಜ್ಯ ರಾಜಕೀಯದಲ್ಲಿ ಗರಿಗೆದರಿದ ಬೆಳವಣಿಗೆ | ಮತ್ತೆ ಬಿಜೆಪಿ- ಜೆಡಿಎಸ್ ಮೈತ್ರಿ?

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಯಾರೂ ನಿರೀಕ್ಷಿಸಲಾಗದ ಬೆಳವಣಿಗೆಗಳು ಗರಿಗೆದರುತ್ತಿದ್ದು ಮತ್ತೆ ಬಿಜೆಪಿ ಜೆಡಿಎಸ್ ಜೊತೆಗೆ ಮೈತ್ರಿ ಕುರಿತು ಆಲೋಚಿಸುತ್ತಿದೆ ಎನ್ನಲಾಗಿದೆ. ರಾಜ್ಯ ಬಿಜೆಪಿ ನಾಯಕರು ನಾಯಕತ್ವ ಬದಲಾವಣೆಗೆ ಹೈಕಮಾಂಡ್ ನ ಕದ ತಟ್ಟಿದ್ದು, ಈ ಅನುಮಾನಕ್ಕೆ ಮತ್ತಷ್ಟು ಪುಷ್ಟಿ ನೀಡಿದೆ.ಈಗಾಗಲೇ ಕೆಲ ಪ್ರಭಾವಿ ನಾಯಕರು ಯಡಿಯೂರಪ್ಪ ನಾಯಕತ್ವ ಬದಲಾವಣೆಗಾಗಿ ದೆಹಲಿಯಲ್ಲಿ ಝಂಡಾ ಹೂಡಿದ್ದು, ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯದಿದ್ದರೆ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಲು ತಂತ್ರಗಳನ್ನು ರೂಪಿಸುತ್ತಿರುವುದಾಗಿ ಹೇಳಲಾಗುತ್ತಿದೆ.ಉತ್ತರಾಖಂಡ ಮತ್ತು ಅಸ್ಸಾಂ ರಾಜ್ಯಗಳಲ್ಲಿ ಹೈಕಮಾಂಡ್

ರಾಜ್ಯ ರಾಜಕೀಯದಲ್ಲಿ ಗರಿಗೆದರಿದ ಬೆಳವಣಿಗೆ | ಮತ್ತೆ ಬಿಜೆಪಿ- ಜೆಡಿಎಸ್ ಮೈತ್ರಿ? Read More »

ಆಸ್ಪತ್ರೆ ಆವರಣದಲ್ಲೇ ಹೆರಿಗೆ | ಕೆಳಗೆ ಬಿದ್ದು ಶಿಶು ಮೃತ್ಯು

ಮಂಡ್ಯ: ಹೆರಿಗೆ ನೋವು ತೀವ್ರಗೊಂಡು ಗರ್ಬಿಣಿಯೊಬ್ಬರು ದಯವಿಟ್ಟು ಅಡ್ಮಿಟ್​ ಮಾಡಿಕೊಳ್ಳಿ, ನಮ್ಮನ್ನು ಬದುಕಿಸಿ ಎಂದು ಗೋಗರೆದರೂ ಆಸ್ಪತ್ರೆ ಸಿಬ್ಬಂದಿ ಆಸ್ಪತ್ರೆಯೊಳಗೆ ಸೇರಿಸಿಕೊಳ್ಳದೆ, ಆಸ್ಪತ್ರೆ ಆವರಣದಲ್ಲೆ ಹೆರಿಗೆಯಾಗಿ, ನೆಲಕ್ಕೆ ಬಿದ್ದು ಮಗು ಮೃತಪಟ್ಟ ಆಘಾತಕಾರಿ ಘಟನೆ ಮಂಡ್ಯದಲ್ಲಿ ನಡೆದಿದೆ. ಇಂತಹ ಅಮಾನವೀಯ ಘಟನೆ ಮಂಡ್ಯ ಜಿಲ್ಲಾಸ್ಪತ್ರೆಯ ಹೆರಿಗೆ ವಾರ್ಡ್ ಮುಂಭಾಗ ಇಂದು ಬೆಳಿಗ್ಗೆ ಸಂಭವಿಸಿದ್ದು, ನಿನ್ನೆ ಸೋನು ಎಂಬ ಗರ್ಬಿಣಿ ಹೆರಿಗೆಗೆ ದಿನವಾದ ಕಾರಣ ಆಸ್ಪತ್ರೆಗೆ ಬಂದಿದ್ದರು. ಕೋವಿಡ್ ರಿಪೋರ್ಟ್ ಇಲ್ಲ ಎನ್ನುವ ಕಾರಣಕ್ಕೆ ಆಸ್ಪತ್ರೆ ಸಿಬ್ಬಂದಿ ಅಡ್ಮಿಟ್

ಆಸ್ಪತ್ರೆ ಆವರಣದಲ್ಲೇ ಹೆರಿಗೆ | ಕೆಳಗೆ ಬಿದ್ದು ಶಿಶು ಮೃತ್ಯು Read More »

ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್ ಎಸ್ ದೊರೆಸ್ವಾಮಿ ಇನ್ನಿಲ್ಲ

ಬೆಂಗಳೂರು: ಹಿರಿಯ ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಇಂದು ವಿಧಿವಶರಾಗಿದ್ದಾರೆ. ಜಯದೇವ ಆಸ್ಪತ್ರೆಯಲ್ಲಿ ಅವರು ನಿಧನಹೊಂದಿದ್ದಾರೆ. ಇತ್ತೀಚೆಗೆ ಅವರು ಕೊರೋನಾ ಸೋಂಕಿಗೆ ತುತ್ತಾಗಿ ಚೇತರಿಸಿಕೊಂಡಿದ್ದರು.ಬಳಿಕ ಉಸಿರಾಟದ ಸಮಸ್ಯೆ ತಲೆದೋರಿದ ಕಾರಣ ಅವರನ್ನು ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವಯೋ ಸಹಜ ಇತರ ಕಾಯಿಲೆಯಿಂದ ಕೂಡ ಅವರು ಬಳಲುತ್ತಿದ್ದರು. ಸಮಾಜದ ಎಲ್ಲ ಪ್ರಸಕ್ತ ವಿದ್ಯಮಾನಗಳಿಗೂ ತಮ್ಮದೇ ಆದ ರೀತಿಯಲ್ಲಿ ಸ್ಪಂದಿಸುತ್ತಿದ್ದರು. ಸರಳತೆಗೆ ಹೆಸರುವಾಸಿಯಾಗಿದ್ದರು.

ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್ ಎಸ್ ದೊರೆಸ್ವಾಮಿ ಇನ್ನಿಲ್ಲ Read More »