ಸಮಗ್ರ ಸಮಾಚಾರ

ಲಸಿಕೆ ಪಡೆದು ಸರ್ಟಿಫಿಕೇಟ್ ಸ್ಟೇಟಸ್ ಹಾಕುವ ಮುನ್ನ ಇರಲಿ ಎಚ್ಚರ…!

ನವದೆಹಲಿ: ಕೊರೊನಾ ನಿಯಂತ್ರಣಕ್ಕಾಗಿ ದೇಶಾದ್ಯಂತ ವ್ಯಾಕ್ಸಿನೇಷನ್ ಕಾರ್ಯಕ್ರಮ ಹಂತ ಹಂತವಾಗಿ ನಡೆಯುತ್ತಿದ್ದು, ಇತ್ತೀಚಿನ ದಿನಗಳಲ್ಲಿ ವ್ಯಾಕ್ಸೀನ್ ಪಡೆದವರು ವ್ಯಾಕ್ಸಿನೇಷನ್ ಪ್ರಮಾಣಪತ್ರವನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡುವುದು ಟ್ರೆಂಡ್ ಆಗಿ ಬಿಟ್ಟಿದೆ. ಇದೀಗ ಕೇಂದ್ರ ಗೃಹ ಸಚಿವಾಲಯ ಜನತೆಗೆ ಎಚ್ಚರಿಕೆಯ ಸಂದೇಶ ನೀಡಿದ್ದು ವ್ಯಾಕ್ಸಿನೇಷನ್ ಪ್ರಮಾಣಪತ್ರವನ್ನು ಹಂಚಿಕೊಳ್ಳದಂತೆ ತಿಳಿಸಿದೆ. ಪ್ರಸ್ತುತ 18 ರಿಂದ 44 ವರ್ಷದವರಿಗೆ ಲಸಿಕೆ ನೀಡಲಾಗುತ್ತಿದೆ. ಈ ವಯಸ್ಸಿನ ಅವರೆಲ್ಲರೂ ಸ್ಮಾರ್ಟ್ಫೋನ್ ಉಳ್ಳವರಾಗಿದ್ದು, ಅಪಾಯವನ್ನು ಅರಿಯದೆ ಲಸಿಕೆ ಪಡೆದ ನಂತರ ಸರ್ಟಿಫಿಕೇಟ್ ಅನ್ನು ಸೋಶಿಯಲ್ ಮೀಡಿಯಾದಲ್ಲಿ […]

ಲಸಿಕೆ ಪಡೆದು ಸರ್ಟಿಫಿಕೇಟ್ ಸ್ಟೇಟಸ್ ಹಾಕುವ ಮುನ್ನ ಇರಲಿ ಎಚ್ಚರ…! Read More »

ಆನ್ ಲೈನ್ ಕ್ಲಾಸ್ ವೇಳೆ ಅರೆಬೆತ್ತಲೆ ಶೋ | ಕಾಮುಕ ಉಪನ್ಯಾಸಕ ಅರೆಸ್ಟ್

ಚೆನ್ನೈ: ಈತ ವೃತ್ತಿಯಲ್ಲಿ ಶಿಕ್ಷಕ. ಆದರೆ ಮಾಡಿರುವುದು ಖಚಡಾ ಕೆಲಸ. ಹೌದು, ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದಲ್ಲಿ ಶಿಕ್ಷಕನೋರ್ವನನ್ನು ಪೊಲೀಸರು ಬಂಧಿಸಿರುವ ಘಟನೆ ಚೆನ್ನೈನಲ್ಲಿ ಸೋಮವಾರ ನಡೆದಿದೆ. ಜಿ.ರಾಜಗೋಪಾಲನ್ ಅವರ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಕೇಳಿ ಬಂದಿದೆ. ಹತ್ತಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಈತನ ವಿರುದ್ಧ ದೂರಿದ್ದಾರೆ. ತರಗತಿಯಲ್ಲಿ ಅಸಭ್ಯವಾಗಿ ಮುಟ್ಟುವುದು ಹಾಗು ಅಶ್ಲೀಲವಾಗಿ ಮಾತನಾಡುವುದು ಈತನ ಕೆಟ್ಟ ಚಾಳಿ ಎಂದು ವಿದ್ಯಾರ್ಥಿಯರು ಆರೋಪಿಸಿದ್ದಾರೆ. ಕೋವಿಡ್ ಕಾರಣದಿಂದಾಗಿ ಪ್ರಾರಂಭವಾಗಿರುವ ಆನ್ ಲೈನ್ ಕ್ಲಾಸ್ ನಲ್ಲಿಯೂ ಈತ

ಆನ್ ಲೈನ್ ಕ್ಲಾಸ್ ವೇಳೆ ಅರೆಬೆತ್ತಲೆ ಶೋ | ಕಾಮುಕ ಉಪನ್ಯಾಸಕ ಅರೆಸ್ಟ್ Read More »

ಮೂಲ್ಕಿ | ಫೇಸ್‌ಬುಕ್‌ನಲ್ಲಿ ಇಸ್ರೇಲ್ ಪರ ಸಂದೇಶ; ಬೇಕರಿ ಮಾಲೀಕನ ಮೇಲೆ ಹಲ್ಲೆ- ಐವರು ಯುವಕರ ಬಂಧನ

ಮೂಲ್ಕಿ: ಫೇಸ್‌ಬುಕ್‌ನಲ್ಲಿ ಇಸ್ರೇಲ್ ಪರ ಸಂದೇಶ ಹಾಕಿದ ಕಾರಣಕ್ಕೆ ಬೇಕರಿಯಲ್ಲಿ ದಾಂಧಲೆ ನಡೆಸಿ, ಮಾಲೀಕನಿಗೆ ಹಲ್ಲೆ ಮಾಡಿದ ಆರೋಪದಲ್ಲಿ ಐವರು ಯುವಕರನ್ನು ಮೂಲ್ಕಿ ಪೊಲೀಸರು ಬಂಧಿಸಿದ್ದಾರೆ. ಘಟನಾ ವಿವರ: ಕಾರ್ನಾಡಿನ ಐಶಾನಿ ಬೇಕರಿ ನಡೆಸುತ್ತಿರುವ ಕುಂದಾಪುರ ಮೂಲದ ಸುರತ್ಕಲ್ ನಿವಾಸಿ ಯುವಕ ಫೇಸ್‌ಬುಕ್‌ನ ತನ್ನ ಖಾತೆಯಲ್ಲಿ, ಇಸ್ರೇಲ್ ಘಟನೆ ಬಗ್ಗೆ ಸಂದೇಶ ಹಾಕಿ ಪ್ಯಾಲಿಸ್ತೇನ್ ಉಗ್ರರ ವಿರುದ್ಧ ಕೈಗೊಂಡ ಕ್ರಮವನ್ನು ಬೆಂಬಲಿಸಿದ್ದರು. ಈ ಬಗ್ಗೆ ಆಕ್ರೋಶಗೊಂಡ ಸ್ಥಳೀಯ ಯುವಕರು ಬೇಕರಿಗೆ ನುಗ್ಗಿ ಬೆದರಿಕೆ ಹಾಕಿದ್ದಲ್ಲದೆ, ಯುವಕನಿಂದ ಕ್ಷಮೆ

ಮೂಲ್ಕಿ | ಫೇಸ್‌ಬುಕ್‌ನಲ್ಲಿ ಇಸ್ರೇಲ್ ಪರ ಸಂದೇಶ; ಬೇಕರಿ ಮಾಲೀಕನ ಮೇಲೆ ಹಲ್ಲೆ- ಐವರು ಯುವಕರ ಬಂಧನ Read More »

ರಾಜ್ಯದ ಮುಖ್ಯಮಂತ್ರಿ ಬದಲಾವಣೆಯ ಮಾತು | ಆಪ್ತರ ಬಳಿ ಬೇಸರ ವ್ಯಕ್ತಪಡಿಸಿದ ಬಿಎಸ್ ವೈ

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿಗಳ ಬದಲಾವಣೆ ಎಂಬ ವಿಚಾರದಲ್ಲಿ ರಾಜ್ಯ ರಾಜಕಾರಣ ಮುಳುಗಿ ಹೋದಂತಿದೆ. ಈ ಕುರಿತು ಸ್ವತ: ಸಿಎಂ ಬಿ.ಎಸ್.ಯಡಿಯೂರಪ್ಪ ತಮ್ಮ ಆಪ್ತರ ಬಳಿ ಬೇಸರ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ. ಸಿಎಂ ಸ್ಥಾನಕ್ಕೆ ಕೆಲ ನಾಯಕರ ಹೆಸರು ಕೇಳಿಬರುತ್ತಿದೆ. ಪ್ರತಿನಿತ್ಯ ನನ್ನ ಬಳಿ ಬರುವವರ, ಜತೆಯಲ್ಲಿಯೇ ಇರುವವರ ಹೆಸರೇ ಕೇಳಿಬರುತ್ತಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಮ್ಮ ಆಪ್ತ ಸಚಿವರ ಬಳಿ ಚರ್ಚೆ ವೇಳೆ ಬೇಸರ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಈ ನಡುವೆ ಜೂನ್ 7ರಂದು ಬಿಜೆಪಿ ಶಾಸಕಾಂಗ ಪಕ್ಷದ

ರಾಜ್ಯದ ಮುಖ್ಯಮಂತ್ರಿ ಬದಲಾವಣೆಯ ಮಾತು | ಆಪ್ತರ ಬಳಿ ಬೇಸರ ವ್ಯಕ್ತಪಡಿಸಿದ ಬಿಎಸ್ ವೈ Read More »

ನೀರಿನ ಟ್ಯಾಂಕ್ ಗೆ ಬಿದ್ದ ಚಿರತೆಯ ರಕ್ಷಣೆ

ಕುಂದಾಪುರ:ಆಹಾರ ಹುಡುಕಿಕೊಂಡು ಬಂದು ನೀರಿನ ಟ್ಯಾಂಕ್ ಒಳಗೆ ಬಿದ್ದ ಚಿರತೆಯೊಂದನ್ನು ರಕ್ಷಿಸಲಾದ ಘಟನೆ ಮಂಗಳವಾರ ನಡೆದಿದೆ. ಕೊಡ್ಲಾಡಿಯ ಚಂದ್ರ ಶೆಟ್ಟಿಯವರ ಮನೆಯ ನೀರಿನ ಟ್ಯಾಂಕ್ ಗೆ ೫ ವರ್ಷದ ಗಂಡು ಚಿರತೆ ಮಂಗಳವಾರ ಮುಂಜಾನೆ ವೇಳೆಗೆ ಬಿದ್ದಿದೆ ಎನ್ನಲಾಗಿದ್ದು, ಮಧ್ಯಾಹ್ನ ಮನೆಯವರು ಗಮನಿಸಿದ್ದು, ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಚಿರತೆಯನ್ನು ಅರಣ್ಯಧಿಕಾರಿಗಳು ರಕ್ಷಿಸಿ ಕಾಡಿಗೆ ಬಿಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ನೀರಿನ ಟ್ಯಾಂಕ್ ಗೆ ಬಿದ್ದ ಚಿರತೆಯ ರಕ್ಷಣೆ Read More »

ಹೊಸ ಐಟಿ ನೀತಿ ಗ್ರಾಹಕರ ಖಾಸಗಿತನಕ್ಕೆ ದಕ್ಕೆಯುಂಟುಮಾಡಲಿದೆ | ಹೈಕೋರ್ಟ್ ಮೆಟ್ಟಿಲೇರಿದ ವಾಟ್ಸಪ್

ಹೊಸದಿಲ್ಲಿ: ಕೇಂದ್ರ ಸರ್ಕಾರ ಇಂದಿನಿಂದಿ ಜಾರಿಗೆ ತರಲು ಉದ್ದೇಶಿಸಿರುವ ಹೊಸ ಐಟಿ ನೀತಿ ವಿರೋದಿಸಿ ವಾಟ್ಸಾಪ್ ದೆಹಲಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದೆ. ಹೊಸ ನಿಯಮವು ವಾಟ್ಸಪ್ ಗ್ರಾಹಕರ ಖಾಸಗಿತನಕ್ಕೆ ದಕ್ಕೆ ತರಲಿದೆ ಎಂದು ಕಳವಳ ವ್ಯಕ್ತಪಡಿಸಿರುವ ಫೇಸ್‌ಬುಕ್ ಮಾಲೀಕತ್ವದ ವಾಟ್ಸಪ್ ಹೊಸ ನಿಯಮದ ಪ್ರಕಾರ ನಾವು ಸಂದೇಶ ಕಳುಹಿಸಿದ ಮೂಲಗಳನ್ನು ಕಂಡುಹಿಡಿಯಬೇಕಾಗುತ್ತದೆ. ಇದು ಬಳಕೆದಾರರ ಖಾಸಗಿತನಕ್ಕೆ ಹಾನಿ ಮಾಡಲಿದೆ. ಸಾಮಾಜಿಕ ಮಾಧ್ಯಮಗಳು ಅಧಿಕಾರಿಗಳು ಬಯಸಿದ ಸಂದರ್ಭದಲ್ಲಿ ಸಂದೇಶವೊಂದರ ಮೊದಲ ಮೂಲ ಸೃಷ್ಟಿಕರ್ತನನ್ನು ಪತ್ತೆಹಚ್ಚುವುದು ಅಗತ್ಯ ಎಂದು

ಹೊಸ ಐಟಿ ನೀತಿ ಗ್ರಾಹಕರ ಖಾಸಗಿತನಕ್ಕೆ ದಕ್ಕೆಯುಂಟುಮಾಡಲಿದೆ | ಹೈಕೋರ್ಟ್ ಮೆಟ್ಟಿಲೇರಿದ ವಾಟ್ಸಪ್ Read More »

ಕರುನಾಡಿನ ಬೀಗ ತೆರೆಯುವ ಕಾರ್ಯ ಸದ್ಯಕ್ಕಿಲ್ಲ | ಅಗತ್ಯ ಸಂಚಾರಕ್ಕೆ ಸಿಗಲಿದೆ ಅನುಮತಿ | ಹೋಮ್ ಐಸೋಲೇಶನ್ ಬದಲು ಟ್ರಯಾಸ್ ಸೆಂಟರ್

ಬೆಂಗಳೂರು: ಬಹುತೇಕ ನಿಯಂತ್ರಣದ ಹೊರತಾಗಿ, ಹೇರಲಾದ ಲಾಕ್ಡೌನ್ ತೆರವುಗೊಳಿಸಿದರೆ, ಮತ್ತೆ ಸಂಕಷ್ಟ ಎದುರಾದರೆ ಲಾಕ್ಡೌನ್ ಹೇರುವುದು ಕಠಿಣವಾಗಲಿದೆ ಎಂಬ ತಜ್ಞರ ಅಭಿಪ್ರಾಯದ ಮೇರೆಗೆ ಕೊರೋನಾ ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ಪ್ರಸ್ತುತ ಹೇರಲಾಗಿರುವ ಲಾಕ್​ಡೌನ್​ ತೆರವುಗೊಳಿಸುವ ಕಾರ್ಯ ಸದ್ಯಕ್ಕಿಲ್ಲ ಎಂಬುದು ಬಹುತೇಕ ಖಚಿತವಾಗಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಿವಾಸದಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆದಿದ್ದು, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,000 ಹಾಗೂ ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ 500ಕ್ಕೆ ಇಳಿಯುವವರೆಗೂ ಪೂರ್ಣ ಪ್ರಮಾಣದಲ್ಲಿ ಅನ್‌ಲಾಕ್ ಮಾಡದಿರುವ ತೀರ್ಮಾನಿಸಲಾಗಿದ್ದು, ಇನ್ನಷ್ಟು

ಕರುನಾಡಿನ ಬೀಗ ತೆರೆಯುವ ಕಾರ್ಯ ಸದ್ಯಕ್ಕಿಲ್ಲ | ಅಗತ್ಯ ಸಂಚಾರಕ್ಕೆ ಸಿಗಲಿದೆ ಅನುಮತಿ | ಹೋಮ್ ಐಸೋಲೇಶನ್ ಬದಲು ಟ್ರಯಾಸ್ ಸೆಂಟರ್ Read More »

ಜಿಂಕೆ ಮಾಂಸ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ

ಚಾಮರಾಜನಗರ: ತಾಲೂಕಿನ ಪುಣಜನೂರು ಬಳಿ ಜಿಂಕೆ ಮಾಂಸ ಮಾರಾಟ ಮಾಡುತ್ತಿದ್ದವರನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ದೊಡ್ಡ ಮೂಡಹಳ್ಳಿ ಗ್ರಾಮದ ನಂದೀಶ್ ನಾಯಕ (36), ಗೋಡೆಮಡುವಿನ ದೊಡ್ಡಿಯ ರಂಗಸ್ವಾಮಿ ಬಂಧಿತರು. ಜಿಂಕೆ ಮಾಂಸ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಸ್ಥಳೀಯ ವಲಯ ಅರಣ್ಯ ಅಧಿಕಾರಿಗಳು ನಂದೀಶ್ ನ ಮನೆಗೆ ದಾಳಿ ನಡೆಸಿದ್ದಾರೆ. ಆತನಲ್ಲಿ ಜಿಂಕೆ ಮಾಂಸದ ಮೂಲದ ಬಗ್ಗೆ ವಿಚಾರಿದಾಗ ಗೋಡೆಮಡುವಿನ ದೊಡ್ಡಿಯ ರಂಗಸ್ವಾಮಿಯಿಂದ ಖರೀದಿಸಿದ್ದಾಗಿ ತಿಳಿಸಿದ್ದಾನೆ. ನಂತರ ರಂಗಸ್ವಾಮಿಯನ್ನು ಅರಣ್ಯಾಧಿಕಾರಿಗಳು ಬಂಧಿಸಿ ವಿಚಾರಿಸಿದಾಗ ಗೋಡೆಮಡುವಿನದೊಡ್ಡಿಯ ಹಳ್ಳದ

ಜಿಂಕೆ ಮಾಂಸ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ Read More »

ಪಿಎಸ್ ಐ ತಲೆಯೊಳಗಿದ್ದವು 23 ವರ್ಷದ ಹಿಂದೆ ಒಳಹೊಕ್ಕ ಗುಂಡುಗಳು | ವೀರಪ್ಪನ್ ವಿರುದ್ಧ ಹೋರಾಡಿದ್ದ ಪೊಲೀಸ್ ಅಧಿಕಾರಿ ನಿಧನ

ಚಾಮರಾಜನಗರ: 23 ವರ್ಷಗಳ ಹಿಂದೆ ಕಾಡುಗಳ್ಳ ವೀರಪ್ಪನ್ ವಿರುದ್ಧ ಹೋರಾಡಿದ್ದ ಪೊಲೀಸ್ ಅಧಿಕಾರಿ, ಚಾಮರಾಜನಗರ ಪಟ್ಟಣ ಠಾಣೆಯ ಅಪರಾಧ ವಿಭಾಗದ ಪಿಎಸ್ ಐ ಸಿದ್ದರಾಜನಾಯ್ಕ (59 ವ.) ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ವೀರಪ್ಪನ್ 1993 ರಲ್ಲಿ ಹೊಡೆದಿದ್ದ ಗುಂಡುಗಳನ್ನು ತಲೆ ಮತ್ತು ಕಣ್ಣಿನಲ್ಲಿ ಇಟ್ಟುಕೊಂಡೇ ಕಳೆದ 23 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಾ, ಜೀವನ ಸಾಗಿಸಿದ್ದ ಪಿಎಸ್ ಐ ನಿವೃತ್ತಿಗೆ ಕೇವಲ 5 ದಿನ ಬಾಕಿ ಇರುವಾಗ ನಿಧನರಾಗಿದ್ದಾರೆ. ಸಬ್ ಇನ್ಸ್​ಪೆಕ್ಟರ್ ಆಗಿದ್ದರೂ ದರ್ಪ, ಗತ್ತು ಪ್ರದರ್ಶಿಸದೇ ಜನರೊಂದಿಗೆ

ಪಿಎಸ್ ಐ ತಲೆಯೊಳಗಿದ್ದವು 23 ವರ್ಷದ ಹಿಂದೆ ಒಳಹೊಕ್ಕ ಗುಂಡುಗಳು | ವೀರಪ್ಪನ್ ವಿರುದ್ಧ ಹೋರಾಡಿದ್ದ ಪೊಲೀಸ್ ಅಧಿಕಾರಿ ನಿಧನ Read More »

ಸಿಬಿಐ ನೂತನ ನಿರ್ದೇಶಕರಾಗಿ ಸುಬೋಧ್ ಕುಮಾರ್ ಜೈಸ್ವಾಲ್

ನವದೆಹಲಿ: ಕೇಂದ್ರ ತನಿಖಾ ದಳ ಸಿಬಿಐ ನ ನೂತನ ನಿರ್ದೇಶಕರನ್ನಾಗಿ ಹಿರಿಯ ಐಪಿಎಸ್ ಅಧಿಕಾರಿ ಸುಬೋಧ್ ಕುಮಾರ್ ಜೈಸ್ವಾಲ್ ಅವರನ್ನು ಮುಂದಿನ ಎರಡು ವರ್ಷಗಳ ಅವಧಿಗೆ ನೇಮಿಸಿ, ಸಿಬ್ಬಂದಿ ಸಚಿವಾಲಯ ಮಂಗಳವಾರ ಆದೇಶ ಹೊರಡಿಸಿದೆ. ಪ್ರಧಾನಿ ನರೇಂದ್ರ ಮೋದಿ, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ಮತ್ತು ಲೋಕಸಭಾ ವಿರೋಧಪಕ್ಷದ ನಾಯಕ ಅಧೀರ್ ರಂಜನ್ ಚೌಧುರಿ ಅವರನ್ನೊಳಗೊಂಡ ಸಮಿತಿ ನಡುವೆ ನಡೆದ ಸರಣಿ ಸಭೆಗಳ ಬಳಿಕ ಮಂಗಳವಾರ ಸಂಜೆ ಸರ್ಕಾರ ಈ ನೇಮಕಾತಿ ಅಧಿಸೂಚನೆ ಪ್ರಕಟಿಸಿದೆ. ಮಹಾರಾಷ್ಟ್ರ

ಸಿಬಿಐ ನೂತನ ನಿರ್ದೇಶಕರಾಗಿ ಸುಬೋಧ್ ಕುಮಾರ್ ಜೈಸ್ವಾಲ್ Read More »