ಸಮಗ್ರ ಸಮಾಚಾರ

ಕೈಗಾರಿಕಾ ಡೀಸೆಲ್‌ ಬೆಲೆಯಲ್ಲಿ ₹ 22 ಹೆಚ್ಚಳ

ಸಮಗ್ರ ನ್ಯೂಸ್: ಇರಾನ್-ಇಸ್ರೇಲ್ ಯುದ್ಧವು ಸಾಮಾನ್ಯ ಜನರಿಂದ ಹಿಡಿದು ಕೈಗಾರಿಕೆಗಳವರೆಗೆ ಎಲ್ಲರ ಮೇಲೆ ಪರಿಣಾಮ ಬೀರುತ್ತಿದೆ. ಇಂಧನ ಆಮದಿನ ಮೇಲೆ ಭಾರತ ಹೆಚ್ಚಿನ ಅವಲಂಬನೆ ಹೊಂದಿರುವುದು ಇದಕ್ಕೆ ಪ್ರಮುಖ ಕಾರಣ. ಪ್ರಸ್ತುತ, ಅಂತರರಾಷ್ಟ್ರೀಯ ಕಚ್ಚಾ ತೈಲದ ಬೆಲೆ ಬ್ರೆಂಟ್ ಕಚ್ಚಾ ತೈಲದ ಬ್ಯಾರೆಲ್‌ಗೆ $115 ದಾಟಿದೆ. ಕೆಲವು ದಿನಗಳ ಹಿಂದೆ ಒಂದು ಲೀಟರ್ ಗ್ಯಾಸ್ ಬೆಲೆಯನ್ನು ಹೆಚ್ಚಿಸಿದ್ದ ತೈಲ ಕಂಪನಿಗಳು ಶುಕ್ರವಾರ ವಿದ್ಯುತ್ ಪೆಟ್ರೋಲ್ ಬೆಲೆಯನ್ನು ರೂ.2 ಕ್ಕಿಂತ ಹೆಚ್ಚು ಹೆಚ್ಚಿಸಿವೆ. ಅದಾದ ಸ್ವಲ್ಪ ಸಮಯದ ನಂತರ, […]

ಕೈಗಾರಿಕಾ ಡೀಸೆಲ್‌ ಬೆಲೆಯಲ್ಲಿ ₹ 22 ಹೆಚ್ಚಳ Read More »

ಪ್ರೀಮಿಯಂ ಪೆಟ್ರೋಲ್ ದರದಲ್ಲಿ ₹2.35ರಷ್ಟು ಏರಿಕೆ| ನೂತನ ದರ ಇಂದಿನಿಂದಲೇ ಜಾರಿ

ಸಮಗ್ರ ನ್ಯೂಸ್: ಇಸ್ರೇಲ್ ಇರಾನ್‌ ನಡುವಿನ ಯುದ್ಧದ ಪರಿಣಾಮ ತೈಲ ಮಾರುಕಟ್ಟೆಗೆ ತಟ್ಟಿದ್ದು, ದೇಶಾದ್ಯಂತ ಪ್ರೀಮಿಯಂ ದರ್ಜೆಯ ಪವರ್ ಪೆಟ್ರೋಲ್ ಬೆಲೆ ಏರಿಕೆ ಮಾಡಲಾಗಿದೆ. ಈ ಬಗ್ಗೆ ಶುಕ್ರವಾರ ಸರ್ಕಾರಿ ಸ್ವಾಮ್ಯದ ತೈಲ ಮಾರುಕಟ್ಟೆ ಕಂಪನಿಗಳು ಮಹತ್ವದ ನಿರ್ಧಾರ ಕೈಗೊಂಡಿವೆ ಪ್ರೀಮಿಯಂ ದರ್ಜೆಯ ಪವರ್‌ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 2.09 ರಿಂದ 2.35 ರೂ.ಗಳವರೆಗೆ ಹೆಚ್ಚಾಗುತ್ತಿವೆ. ಆದರೆ, ಸಾಮಾನ್ಯ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾವಣೆಯಾಗಿಲ್ಲ. ಪರಿಷ್ಕೃತ ದರಗಳು ಬಿಪಿಸಿಎಲ್‌ನ ಸ್ಪೀಡ್, ಎಚ್‌ಪಿಸಿಎಲ್‌ನ ಪವರ್ ಮತ್ತು

ಪ್ರೀಮಿಯಂ ಪೆಟ್ರೋಲ್ ದರದಲ್ಲಿ ₹2.35ರಷ್ಟು ಏರಿಕೆ| ನೂತನ ದರ ಇಂದಿನಿಂದಲೇ ಜಾರಿ Read More »

ಜಾಲತಾಣಗಳಲ್ಲಿ ಕೋಮು ಪ್ರಚೋದನಕಾರಿ ಪೋಸ್ಟ್| ಬೆಳ್ತಂಗಡಿಯಲ್ಲಿ ಯುವತಿಯನ್ನು ಬಂಧಿಸಿದ ಮಂಗಳೂರು ಪೊಲೀಸರು

ಸಮಗ್ರ ನ್ಯೂಸ್: ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಪ್ರಚೋದನೆಗೆ ಕಾರಣವಾಗುವಂತಹ ಪೋಸ್ಟ್‌ಗಳನ್ನು ಹಂಚಿಕೊಂಡ ಆರೋಪದ ಹಿನ್ನೆಲೆಯಲ್ಲಿ ಬೆಳ್ತಂಗಡಿ ತಾಲೂಕಿನ ಕರಂಬಾರು ಗ್ರಾಮದ ಯುವತಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ 2023ರ ಫೆಬ್ರವರಿ 2ರಂದು ಭಾರತೀಯ ದಂಡ ಸಂಹಿತೆಯ ವಿವಿಧ ವಿಧಿಗಳಡಿ ಪ್ರಕರಣ ದಾಖಲಾಗಿದ್ದು, ತನಿಖೆ ಸಂದರ್ಭದಲ್ಲಿ ಯುವತಿ ಪ್ರಚೋದನಾತ್ಮಕ ವಿಷಯಗಳನ್ನು ಹಂಚಿಕೊಂಡಿರುವುದು ಬೆಳಕಿಗೆ ಬಂದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಈ ಹಿನ್ನೆಲೆಯಲ್ಲಿ ಮಾರ್ಚ್ 19ರಂದು ಆಕೆಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ವಿಚಾರಣೆ ನಡೆಸಿದ ನ್ಯಾಯಾಧೀಶರು

ಜಾಲತಾಣಗಳಲ್ಲಿ ಕೋಮು ಪ್ರಚೋದನಕಾರಿ ಪೋಸ್ಟ್| ಬೆಳ್ತಂಗಡಿಯಲ್ಲಿ ಯುವತಿಯನ್ನು ಬಂಧಿಸಿದ ಮಂಗಳೂರು ಪೊಲೀಸರು Read More »

ಪುತ್ತೂರು: ಗಂಡ ಹೆಂಡತಿ ಜಗಳ ಕೊಲೆಯಲ್ಲಿ ಅಂತ್ಯ

ಸಮಗ್ರ ನ್ಯೂಸ್: ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾಮದ ಕಟ್ಟತ್ತಾರು ಸಮೀಪದ ಗೋಳ್ತಿಲ ಎಂಬಲ್ಲಿ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯೇ ಪತ್ನಿಯನ್ನು ಹತ್ಯೆಗೈದು, ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ ದಾರುಣ ಘಟನೆ ಶುಕ್ರವಾರ ನಡೆದಿದೆ.ಮೃತ ಮಹಿಳೆಯನ್ನು ಕುಮಾರಮಂಗಲ ಮೂಲದ ಸಾವಿತ್ರಿ (42) ಎಂದು ಗುರುತಿಸಲಾಗಿದೆ. ಆರೋಪಿ ಪತಿಯನ್ನು ಎಮೆಟ್ಟಿ ನಿವಾಸಿ ಪುರುಷೋತ್ತಮ ಅಲಿಯಾಸ್ ಬೈರಪ್ಪ ಎಂದು ಗುರುತಿಸಲಾಗಿದೆ. ದಂಪತಿಗಳ ನಡುವೆ ನಡೆದ ಜಗಳ ವಿಕೋಪಕ್ಕೆ ತಿರುಗಿದ್ದು, ಈ ಸಂದರ್ಭದಲ್ಲಿ ಪುರುಷೋತ್ತಮ ತನ್ನ ಪತ್ನಿಯನ್ನು ಹತ್ಯೆ ಮಾಡಿದ್ದಾನೆ ಎಂದು ಪ್ರಾಥಮಿಕ

ಪುತ್ತೂರು: ಗಂಡ ಹೆಂಡತಿ ಜಗಳ ಕೊಲೆಯಲ್ಲಿ ಅಂತ್ಯ Read More »

ಮಂಗಳೂರು- ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ 35 ದಿನ ಸಂಚಾರ ಬಂದ್

ಸಮಗ್ರ ನ್ಯೂಸ್: ದಕ್ಷಿಣ ಪಶ್ಚಿಮ ರೈಲ್ವೆ ವ್ಯಾಪ್ತಿಯಲ್ಲಿ ನಡೆಯಲಿರುವ ತುರ್ತು ಹಳಿ ಕಾಮಗಾರಿಗಳ ಕಾರಣದಿಂದಾಗಿ ಮಂಗಳೂರು ಮತ್ತು ಸುಬ್ರಹ್ಮಣ್ಯ ನಡುವೆ ಸಂಚರಿಸುವ ಪ್ಯಾಸೆಂಜರ್ ರೈಲುಗಳ ಸೇವೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡಲಾಗಿದೆ. ಮಂಗಳೂರು ಸೆಂಟ್ರಲ್ ಮತ್ತು ಸುಬ್ರಹ್ಮಣ್ಯ ರೋಡ್ ನಡುವೆ ಸಂಚರಿಸುವ ಪ್ಯಾಸೆಂಜರ್ ರೈಲುಗಳನ್ನು ಒಟ್ಟು 35 ದಿನಗಳ ಕಾಲ ಪೂರ್ಣವಾಗಿ ರದ್ದುಗೊಳಿಸಲಾಗಿದೆ. ರೈಲು ಸಂಖ್ಯೆ 56629 (ಮಂಗಳೂರು – ಸುಬ್ರಹ್ಮಣ್ಯ ರೋಡ್ ಪ್ಯಾಸೆಂಜರ್) ಹಾಗೂ ರೈಲು ಸಂಖ್ಯೆ 56630 (ಸುಬ್ರಹ್ಮಣ್ಯ ರೋಡ್ – ಮಂಗಳೂರು ಪ್ಯಾಸೆಂಜರ್) ರದ್ದಾಗಿದೆ.

ಮಂಗಳೂರು- ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ 35 ದಿನ ಸಂಚಾರ ಬಂದ್ Read More »

ಕರಾವಳಿ ಜಿಲ್ಲೆಗಳಲ್ಲಿ ಇಂದು‌ ಈದುಲ್ ಫಿತರ್ ಹಿನ್ನೆಲೆ ಸಾರ್ವತ್ರಿಕ ರಜೆ ಘೋಷಣೆ

ಸಮಗ್ರ ನ್ಯೂಸ್: ಚಂದ್ರ ದರ್ಶನ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈದುಲ್ ಫಿತರ್ ಹಬ್ಬವು ಶುಕ್ರವಾರ ನಡೆಯಲಿರುವುದರಿಂದ ಜಿಲ್ಲೆಯಾದ್ಯಂತ ಮಾರ್ಚ್ 20ರಂದು ಸಾರ್ವತ್ರಿಕ ರಜೆ ಘೋಷಿಸಿ ಜಿಲ್ಲಾಧಿಕಾರಿ ಎಚ್ ವಿ ದರ್ಶನ್ ಆದೇಶಿಸಿದ್ದಾರೆ.ಉಡುಪಿ ಜಿಲ್ಲೆಯಲ್ಲೂ ಶುಕ್ರವಾರ ರಂಜಾನ್ ಹಬ್ಬದ ಆಚರಣೆ ಹಿನ್ನಲೆ ಜಿಲ್ಲೆಯಾದ್ಯಂತ ಸಾರ್ವತ್ರಿಕ ರಜೆ ಘೋಷಿಸಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಆದೇಶಿಸಿದ್ದಾರೆ. ಶವ್ವಾಲ್‌ನ ಪ್ರಥಮ ಚಂದ್ರದರ್ಶನ ಇಂದು ಮುಸ್ಸಂಜೆ ಆಗಿರುವುದರಿಂದ ದ.ಕ.ಜಿಲ್ಲೆಯಲ್ಲಿ ಶುಕ್ರವಾರ ಈದುಲ್ ಫಿತ್ರ್‌ ಆಚರಿಸಲು ದ.ಕ. ಜಿಲ್ಲಾ ಖಾಝಿ ಅಲ್‌ಹಾಜ್ ತ್ವಾಕಾ ಅಹ್ಮದ್

ಕರಾವಳಿ ಜಿಲ್ಲೆಗಳಲ್ಲಿ ಇಂದು‌ ಈದುಲ್ ಫಿತರ್ ಹಿನ್ನೆಲೆ ಸಾರ್ವತ್ರಿಕ ರಜೆ ಘೋಷಣೆ Read More »

ಶವ್ವಾಲ್ ಚಂದ್ರದರ್ಶನ ಹಿನ್ನಲೆ| ದ.ಕ ಮತ್ತು ಉಡುಪಿ ಜಿಲ್ಲೆಗಳಲ್ಲಿ ಇಂದು ಈದುಲ್ ಫಿತ್ರ್ ಆಚರಣೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಗುರುವಾರ ಸಂಜೆ ಶವ್ವಾಲ್ ಚಂದ್ರ ದರ್ಶನವಾಗಿದ್ದು, ಇದರೊಂದಿಗೆ ಪವಿತ್ರ ರಂಜಾನ್ ಮಾಸಕ್ಕೆ ತೆರೆ ಬಿದ್ದಿದೆ. ಈ ಹಿನ್ನೆಲೆಯಲ್ಲಿ ಮಾರ್ಚ್ 20ರ ಶುಕ್ರವಾರದಂದು ಕರಾವಳಿಯಾದ್ಯಂತ ಅತ್ಯಂತ ಸಡಗರದಿಂದ ಈದ್-ಉಲ್-ಫಿತರ್ ಹಬ್ಬವನ್ನು ಆಚರಿಸಲು ನಿರ್ಧರಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಖಾಝಿ ಶೈಖುನಾ ಅಲ್-ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ಅವರು ಚಂದ್ರ ದರ್ಶನವಾಗಿರುವುದನ್ನು ಖಚಿತಪಡಿಸಿದ್ದು, ಶುಕ್ರವಾರ ಹಬ್ಬ ಆಚರಿಸುವಂತೆ ಕರೆ ನೀಡಿದ್ದಾರೆ. ಉಳ್ಳಾಲ ಭಾಗದಲ್ಲೂ ಖಾಝಿ ಕಾಂತಪುರಂ ಎ.

ಶವ್ವಾಲ್ ಚಂದ್ರದರ್ಶನ ಹಿನ್ನಲೆ| ದ.ಕ ಮತ್ತು ಉಡುಪಿ ಜಿಲ್ಲೆಗಳಲ್ಲಿ ಇಂದು ಈದುಲ್ ಫಿತ್ರ್ ಆಚರಣೆ Read More »

ಬೆಳ್ತಂಗಡಿ: ಅಪ್ರಾಪ್ತ ಮುಸ್ಲಿಂ ಬಾಲಕನನ್ನು ಅಪಹರಿಸಿ ಹಲ್ಲೆ| ಹಿಂದೂ ಕಾರ್ಯಕರ್ತರ ಮೇಲೆ ಎಫ್ಐಆರ್

ಸಮಗ್ರ ನ್ಯೂಸ್: ಧಾರ್ಮಿಕ ಕಾರ್ಯಕ್ರಮವೊಂದಕ್ಕೆ ತೆರಳಿದ್ದ 17 ವರ್ಷದ ಅಲ್ಪಸಂಖ್ಯಾತ ಬಾಲಕನನ್ನು ಅಪಹರಿಸಿ, ಮನುಷ್ಯತ್ವ ಮರೆತು ಹಲ್ಲೆ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ನಡೆದಿದೆ. ಈ ಘಟನೆ ಸಂಬಂಧ ಭಜರಂಗದಳದ ಮೂವರು ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಾಗಿದೆ. ಉಜಿರೆಯ ಖಾಸಗಿ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಯಾಗಿರುವ ಬಾಲಕ, ಮಾರ್ಚ್ 11 ರಂದು ತನ್ನ ಸ್ನೇಹಿತರೊಂದಿಗೆ ಉಜಿರೆಯ ಜನಾರ್ಧನ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಜಾತ್ರೆಗೆ ತೆರಳಿದ್ದನು. ರಾತ್ರಿ 8:30 ರ ಸುಮಾರಿಗೆ ಆತನ

ಬೆಳ್ತಂಗಡಿ: ಅಪ್ರಾಪ್ತ ಮುಸ್ಲಿಂ ಬಾಲಕನನ್ನು ಅಪಹರಿಸಿ ಹಲ್ಲೆ| ಹಿಂದೂ ಕಾರ್ಯಕರ್ತರ ಮೇಲೆ ಎಫ್ಐಆರ್ Read More »

ಮುದಿವಯಸ್ಸಿನಲ್ಲೂ ಕುಗ್ಗದ ಕಾಮದಾಹ| ಸೊಸೆಯನ್ನೂ ಬಿಡದ ತಂದೆಯನ್ನು ಕೊಂದ ಮಗ

ಸಮಗ್ರ ನ್ಯೂಸ್: 75 ವಯಸ್ಸಾಗಿದ್ರೂ ಕಾಮದಾಟಕ್ಕಾಗಿ ಮಹಿಳೆಯರ ಜೊತೆ ಸಂಬಂಧ ಇಟ್ಟುಕೊಂಡು, ಸೊಸೆಯನ್ನೂ ಬಿಡದ ತಂದೆಯನ್ನು ಕಂಡು ಮಾರ್ಯಾದೆಗೆ ಹೆದರಿ ಮಗನೇ ಸುಪಾರಿ ಕೊಟ್ಟು ಕೊಲೆ ಮಾಡಿಸಿರುವುದು ತನಿಖೆ ವೇಳೆ ಬಯಲಾಗಿದೆ. ಯಾದಗಿರಿ‌ ಗೋನಾಳ ಗ್ರಾಮದಲ್ಲಿ 6 ದಿನಗಳ ಹಿಂದೆ ಅಂದ್ರೆ ಮಾರ್ಚ್ 12 ರ ರಾತ್ರಿ 74 ವರ್ಷದ ಪಂಪಣ್ಣ ಸಜ್ಜನ ಎಂಬಾತನ ಕೊಲೆಯಾಗಿತ್ತು. ಕೊಲೆ ನಡೆದ ಬಳಿಕ ಈ ಹಂಪಣ್ಣ ಸಜ್ಜನ ಪುತ್ರ ಶರಣಬಸಪ್ಪ ವಡಗೇರ ಪೊಲೀಸ್ ಠಾಣೆಗೆ ದೂರು ನೀಡಿದ್ದ. ಬಳಿಕ ಕೇಸ್

ಮುದಿವಯಸ್ಸಿನಲ್ಲೂ ಕುಗ್ಗದ ಕಾಮದಾಹ| ಸೊಸೆಯನ್ನೂ ಬಿಡದ ತಂದೆಯನ್ನು ಕೊಂದ ಮಗ Read More »

ಕಾಂಗ್ರೆಸ್ ಜೊತೆಗಿದ್ದದ್ದು ಪ್ರೀತಿಯಲ್ಲ, ಬಲವಂತದ ಮದುವೆ|ಖರ್ಗೆ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ದೇವೇಗೌಡ

ಸಮಗ್ರ ನ್ಯೂಸ್: ಕಾಂಗ್ರೆಸ್ ಜೊತೆಗಿನದ್ದು ಪ್ರೀತಿಯಲ್ಲ, ಅದು ಒಂದು ಬಲವಂತದ ಮದುವೆಯಾಗಿತ್ತು. ಆ ಸಂಬಂಧದಲ್ಲಿ ಕಿರುಕುಳ ಮತ್ತು ಹಿಂಸೆ ಇದ್ದ ಕಾರಣ ನಾನು ಅವರಿಗೆ ವಿಚ್ಛೇದನ ನೀಡಿದೆ ಎಂದು ಮಾಜಿ ಪ್ರಧಾನಿ, ರಾಜ್ಯ ಸಭಾ ಸದಸ್ಯ ಎಚ್‌ಡಿ ದೇವೇಗೌಡ ಹೇಳಿದ್ದಾರೆ. ಈ ಮೂಲಕ ಮಲ್ಲಿಕಾರ್ಜುನ ಖರ್ಗೆಗೆ ತಿರುಗೇಟು ನೀಡಿದ್ದಾರೆ. ಸಂಸತ್ತಿನಲ್ಲಿ ಮಾತನಾಡಿದ್ದ ಖರ್ಗೆ ಅವರು, “ದೇವೇಗೌಡರು ಮೊದಲು ಕಾಂಗ್ರೆಸ್ ಜೊತೆ ಪ್ರೀತಿಯಲ್ಲಿದ್ದರು, ಆದರೆ ಕೊನೆಗೆ ಮೋದಿ (ಬಿಜೆಪಿ) ಅವರ ಜೊತೆ ಮದುವೆಯಾದರು” ಎಂದು ಹಾಸ್ಯಮಯವಾಗಿ ಕಾಲೆಳೆದಿದ್ದರು. ಇದಕ್ಕೆ

ಕಾಂಗ್ರೆಸ್ ಜೊತೆಗಿದ್ದದ್ದು ಪ್ರೀತಿಯಲ್ಲ, ಬಲವಂತದ ಮದುವೆ|ಖರ್ಗೆ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ದೇವೇಗೌಡ Read More »