ಸಮಗ್ರ ಸಮಾಚಾರ

ನಂದಿನಿ ಹಾಲು ಮಾರಾಟದಲ್ಲಿ ಇಳಿಕೆ ಹಿನ್ನಲೆ-ವಾರದಲ್ಲಿ ಎರಡು ದಿನ ಖರೀದಿ ಸ್ಥಗಿತ ಸಾಧ್ಯತೆ

ಬೆಂಗಳೂರು: ಲಾಕ್ ಡೌನ್ ಇರುವ ಪರಿಣಾಮ ನಂದಿನಿ ಹಾಲು ಮಾರಾಟ ಗಣನೀಯ ಕುಸಿತ ಕಂಡ ಹಿನ್ನಲೆಯಲ್ಲಿ, ಹಾಲು ಖರೀದಿ ಕಡಿಮೆ ಮಾಡುವ ಸಾಧ್ಯತೆ ಹೆಚ್ಚಾಗಿದೆ. ಭಾರೀ ಪ್ರಮಾಣದಲ್ಲಿ ಹಾಲು ಉಳಿಯುತ್ತಿರುವ ಕಾರಣ ವಾರಕ್ಕೆ ಎರಡು ದಿನ ಹಾಲು ಖರೀದಿ ನಿಲ್ಲಿಸಲು ಕೆಎಂಎಫ್ ಚಿಂತನೆ ನಡೆಸಿದೆ. ಮೇ ಆರಂಭದಲ್ಲಿ ಪ್ರತಿದಿನ ಸುಮಾರು 70 ಲಕ್ಷ ಲೀಟರ್ ಹಾಲು ಬರುತ್ತಿತ್ತು. ಈ ವಾರ 88 ಲಕ್ಷ ಲೀಟರ್ ಹಾಲು ಸಂಗ್ರಹವಾಗುತ್ತಿದೆ. ಖಾಸಗಿಯವರು ಹಾಲು ಖರೀದಿ ಕಡಿಮೆ ಮಾಡಿರುವುದರಿಂದ ಮತ್ತು ಜಾನುವಾರುಗಳಿಗೆ […]

ನಂದಿನಿ ಹಾಲು ಮಾರಾಟದಲ್ಲಿ ಇಳಿಕೆ ಹಿನ್ನಲೆ-ವಾರದಲ್ಲಿ ಎರಡು ದಿನ ಖರೀದಿ ಸ್ಥಗಿತ ಸಾಧ್ಯತೆ Read More »

ಮಂಗಳೂರು: ಅಕ್ರಮ ಚಿನ್ನ ಸಾಗಾಟ ಪತ್ತೆ

ಮಂಗಳೂರು : ವಿದೇಶದಿಂದ ಅಕ್ರಮವಾಗಿ ತರಲಾಗುತ್ತಿದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನವನ್ನು ಕಸ್ಟಮ್ ಅಧಿಕಾರಿಗಳು ವಶ ಪಡಿಸಿಕೊಂಡಿರುವ ಘಟನೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಭಟ್ಕಳ ಮೂಲದ ಆರೋಪಿ ಸಿದ್ದಿಕ್ ಮಿಕ್ಡಾಮ್ ಹುಸೇನ್(27) ಬಂಧಿತ ಆರೋಪಿ. ಆತ ಏರ್ ಇಂಡಿಯಾ ಫ್ಲೈಟ್ ಐಎಕ್ಸ್ 384 ಮೂಲಕ ದುಬೈನಿಂದ ಮಂಗಳೂರಿಗೆ ಆಗಮಿಸಿದ್ದ ವೇಳೆ ಕಸ್ಟಮ್ಸ್ ಪೊಲೀಸರು ಚಿನ್ನವನ್ನು ವಶಕ್ಕೆ ಪಡೆದು ಆರೋಪಿಯನ್ನು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಸುಮಾರು 13 ಲಕ್ಷ ರೂ.ಬೆಲೆ ಬಾಳುವ 262 ಗ್ರಾಂ

ಮಂಗಳೂರು: ಅಕ್ರಮ ಚಿನ್ನ ಸಾಗಾಟ ಪತ್ತೆ Read More »

ಮಂಗಳೂರು: ಭೀಕರ ರಸ್ತೆ ಅಪಘಾತ – ಇಬ್ಬರು ಮೃತ್ಯು, ಓರ್ವ ಗಂಭೀರ

ಮಂಗಳೂರು: ಇಂದು ಮಧ್ಯಾಹ್ನ ರಾಷ್ಟ್ರೀಯ ಹೆದ್ದಾರಿ 75ರ ಅಡ್ಯಾರ್ ಎಂಬಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟು, ಓರ್ವ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. ಮೃತಪಟ್ಟವರನ್ನು ಪುದು ಗ್ರಾಮದ ಅಮೆಮಾರ್ ನಿವಾಸಿ ದಾವೂದ್(22) ಹಾಗೂ ಕುಂಜತ್ಕಲ ನಿವಾಸಿ ಉನೈಸ್(27) ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ಫರಂಗಿಪೇಟೆ ಕಡೆಗೆ ಬರುತ್ತಿದ್ದ ಓಮ್ನಿ ಕಾರು ಚಾಲಕನ ನಿಯಂತ್ರಣ ತಪ್ಪಿ ಅಡ್ಯಾರ್ ಮಾಂಡೋವಿ ಕಾರು ಶೋ ರೂಂ ಬಳಿ ರಸ್ತೆ ಬದಿಯಲ್ಲಿ ನಿಂತಿದ್ದ ಟ್ಯಾಂಕರ್ ಲಾರಿಗೆ ಢಿಕ್ಕಿ ಹೊಡದಿದ್ದು, ಅಪಘಾತದ ತೀವ್ರತೆಗೆ ಓಮ್ನಿ ಸಂಫೂರ್ಣ

ಮಂಗಳೂರು: ಭೀಕರ ರಸ್ತೆ ಅಪಘಾತ – ಇಬ್ಬರು ಮೃತ್ಯು, ಓರ್ವ ಗಂಭೀರ Read More »

ಭಾರತರತ್ನ ಸಿಎನ್ಆರ್ ರಾವ್ ಗೆ ಪ್ರತಿಷ್ಟಿತ ಇಎನ್ಐ ಪುರಸ್ಕಾರ

ಬೆಂಗಳೂರು: ಭಾರತ ರತ್ನ ಪುರಸ್ಕೃತ ವಿಜ್ಞಾನಿ  ಸಿ.ಎನ್.ಆರ್ ರಾವ್ ಪ್ರತಿಷ್ಠಿತ ಅಂತಾರಾಷ್ಟ್ರೀಯ ಇಎನ್ ಐ ಪ್ರಶಸ್ತಿಗೆ ಭಾಜನರಾಗಿದ್ದಾರೆ. ನವೀಕರಿಸಬಹುದಾದ ಇಂಧನ ಮೂಲಗಳು ಮತ್ತು ಇಂಧನ ಸಂಗ್ರಹಣೆಯ ಸಂಶೋಧನೆಗಾಗಿ ಈ ಪ್ರಶಸ್ತಿ ಸಂದಿದೆ  ಎಂದು ಕೇಂದ್ರ  ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯ ತಿಳಿಸಿದೆ. ಶಕ್ತಿ ಸಂಶೋಧನೆಯಲ್ಲಿ ನೊಬೆಲ್ ಪ್ರಶಸ್ತಿ ಎಂದು ಗುರುತಿಸಲಾಗಿರುವಇದನ್ನು ಎನರ್ಜಿ ಫ್ರಾಂಟಿಯರ್ ಪ್ರಶಸ್ತಿ ಎಂದು ಕರೆಯಲಾಗುತ್ತದೆ. ರೋಮ್ ನಲ್ಲಿ ಮುಂಬರುವ ಅಕ್ಟೋಬರ್ 14 ರಂದು ನಡೆಯಲಿರುವ ಸಮಾರಂಭದಲ್ಲಿ ಅಧಿಕೃತವಾಗಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದು

ಭಾರತರತ್ನ ಸಿಎನ್ಆರ್ ರಾವ್ ಗೆ ಪ್ರತಿಷ್ಟಿತ ಇಎನ್ಐ ಪುರಸ್ಕಾರ Read More »

ಸುಳ್ಯ: ಪಿಡಿಓ ಕಂಡು ಪರಾರಿಯಾದ ಆಟಗಾರರು | ಬ್ಯಾಟ್ ಬಾಲ್ ವಶ

ಸುಳ್ಯ: ಲಾಕ್ ಡೌನ್ ನಿಯಮ ಉಲ್ಲಂಘಿಸಿ ಮೈದಾನದಲ್ಲಿ, ಕ್ರಿಕೆಟ್ ಆಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪಿಡಿಒ ದಾಳಿ ನಡೆಸಿದ್ದು, ಇದನ್ನರಿತ ಯುವಕರು ಸ್ಥಳದಿಂದ ಕಾಲ್ಕಿತ ಘಟನೆ ವರದಿಯಾಗಿದೆ. ಜಿಲ್ಲೆಯಲ್ಲಿ ಕ್ರಿಕೆಟ್, ವಾಲಿಬಾಲ್ ಆಡುತ್ತಿರುವ ಬಗ್ಗೆ ಇತ್ತೀಚೆಗೆ ಸಾಕಷ್ಟು ದೂರುಗಳು ಕೇಳಿಬರುತ್ತಿದ್ದು, ಈ ಬಗ್ಗೆ ಈಗಾಗಲೇ ಸಂಬಂಧಪಟ್ಟ ಠಾಣೆಗಳ ಸಿಬ್ಬಂದಿಗಳು ನಿಗಾ ವಹಿಸುವಂತೆ ಸೂಚಿಸಲಾಗಿತ್ತು.ಈ ನಡುವೆ ಇದ್ಯವುದಕ್ಕೂ ಕ್ಯಾರೇ ಅನ್ನದೇ ನಿಯಮ ಉಲ್ಲಂಘಿಸಿ ಕೊಲ್ಲಮೊಗ್ರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಯುವಕರು, ಬಾಲಕರು ಗುಂಪು ಸೇರಿ ಭರ್ಜರಿಯಾಗಿ ಕ್ರಿಕೆಟ್

ಸುಳ್ಯ: ಪಿಡಿಓ ಕಂಡು ಪರಾರಿಯಾದ ಆಟಗಾರರು | ಬ್ಯಾಟ್ ಬಾಲ್ ವಶ Read More »

ಕೊರೋನಾ ತಡೆಯಲು ಹಾವು ತಿಂದ ಭೂಪ ಪರಿಸರ ಪ್ರೇಮಿಗಳ ಆಕ್ರೋಶದ ಬೆನ್ನಲ್ಲೇ ಖಾಕಿ ಬಲೆಗೆ

ಚೆನ್ನೈ: ಕೊರೊನಾ ಸೋಂಕು ತಗಲಬಹುದು ಎಂದು ಸರಕಾರ ಹೋರಾಡುತ್ತಿರುವ ಬೆನ್ನಲ್ಲಿ ಹಲವು ಮಂದಿ ತಮ್ಮ ತಮ್ಮದೇ ರೀತಿಯಲ್ಲಿ ಹೋರಾಟ ನಡೆಸುತ್ತಿದ್ದಾರೆ. ಇದರ ನಡುವೆ ಹೊಸ ಹೊಸ ಅನ್ವೇಷಣೆಗಳು ಸಹ ನಡೆಯುತ್ತಿವೆ. ಇದೇ ಉದ್ದೇಶದಿಂದ ಹಾವೊಂದನ್ನು ತಿಂದ ತಮಿಳುನಾಡಿನ ವ್ಯಕ್ತಿಯೋರ್ವನನ್ನು ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ತಿರುನೆಲ್ವೇಲಿ ಜಿಲ್ಲೆಯ ಪೆರುಮಲ್ಪತ್ತಿ ಗ್ರಾಮದ ವಡಿವೇಲ್ ಎಂಬಾತನೇ ಹಾವು ತಿಂದ ಭೂಪ. ತಾನು ಹಾವು ತಿನ್ನುವುದನ್ನು ವಿಡಿಯೋ ಮಾಡಿಸಿರುವ ಈತ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದಾನೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಪರಿಸರ

ಕೊರೋನಾ ತಡೆಯಲು ಹಾವು ತಿಂದ ಭೂಪ ಪರಿಸರ ಪ್ರೇಮಿಗಳ ಆಕ್ರೋಶದ ಬೆನ್ನಲ್ಲೇ ಖಾಕಿ ಬಲೆಗೆ Read More »

ಜೂನ್ 30ರವರೆಗೆ ಲಾಕ್ಡೌನ್ ಮುಂದುವರಿಸಲು ರಾಜ್ಯಗಳಿಗೆ ಕೇಂದ್ರ ಗೃಹ ಇಲಾಖೆ ಸೂಚನೆ

ನವದೆಹಲಿ: ಕೋವಿಡ್ 19 ಹಿನ್ನೆಲೆಯಲ್ಲಿ, ರಾಷ್ಟ್ರವ್ಯಾಪಿ ಸದ್ಯ ಜಾರಿಯಲ್ಲಿರುವ ಲಾಕ್ಡೌನ್ ಅನ್ನು ಜೂನ್ 30ರವರೆಗೆ ಮುಂದುವರೆಸುವಂತೆ ಎಲ್ಲಾ ರಾಜ್ಯಗಳಿಗೆ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಗೃಹ ಸಚಿವಾಲಯ ಸೂಚಿಸಿದೆ. ಈ ಬಗ್ಗೆ ಆದೇಶ ಹೊರಡಿಸಿದ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲ, ಕೊರೋನಾ ನಿಗ್ರಹಕ್ಕಾಗಿ ರಾಜ್ಯ ಸರ್ಕಾರಗಳು ಹಾಗೂ ಕೇಂದ್ರಾಡಳಿತ ಪ್ರದೇಶದ ಆಡಳಿತ ವರ್ಗ ಕೈಗೊಂಡಿರುವ ಕಟ್ಟುನಿಟ್ಟಿನ ಕ್ರಮಗಳಿಂದಾಗಿ ಹೆಚ್ಚಿನ ರಾಜ್ಯಗಳಲ್ಲಿ ಕೋರೋನಾ ಸೋಂಕಿಗೊಳಗಾಗಿ ಜನರು ಸಾವಿಗೀಡಾಗುತ್ತಿರುವ ಸಂಖ್ಯೆ ಹಾಗು ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿದೆ. ಸಕ್ರಿಯ ಪ್ರಕರಣಗಳ

ಜೂನ್ 30ರವರೆಗೆ ಲಾಕ್ಡೌನ್ ಮುಂದುವರಿಸಲು ರಾಜ್ಯಗಳಿಗೆ ಕೇಂದ್ರ ಗೃಹ ಇಲಾಖೆ ಸೂಚನೆ Read More »

ಬೆಂಗಳೂರು: ಬೆಳ್ಳಂಬೆಳಗ್ಗೆ ಅತ್ಯಾಚಾರ ಆರೋಪಿಗಳ ಮೇಲೆ ಫೈರಿಂಗ್ | ಕೃತ್ಯದಲ್ಲಿ ಬಾಂಗ್ಲಾ ಮೂಲದ ಯುವಕರಿಗೆ ಯುವತಿಯರ ಸಾಥ್….!

ಬೆಂಗಳೂರು: ಅತ್ಯಾಚಾರ ಆರೋಪಿಗಳನ್ನು ಸ್ಥಳ ಮಹಜರಿಗೆ ಕರೆದುಕೊಂಡು ಹೋಗಲಾಗಿದ್ದಾಗ, ಆರೋಪಿಗಳು ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ್ದು ಆತ್ಮರಕ್ಷಣೆಗಾಗಿ ಪೊಲೀಸರು ಆರೋಪಿಗಳ ಮೇಲೆ ಫೈರಿಂಗ್ ನಡೆಸಿದ ಘಟನೆ ಇಂದು ಬೆಳಿಗ್ಗೆ ರಾಜಧಾನಿಯ ಚನ್ನಸಂದ್ರದಲ್ಲಿ ನಡೆದಿದೆ. ನಿರ್ಭಯಾ ರೀತಿಯ ಅತ್ಯಾಚಾರ ಪ್ರಕರಣ ತಡವಾಗಿ ಬೆಳಕಿಗೆ ಬಂದಿತ್ತು. ಇತರೆ ಇಬ್ಬರು ಯುವತಿಯರ ಸಹಾಯದಿಂದ ಯುವತಿಯನ್ನು ಅತ್ಯಾಚಾರಗೈದು ಗುಪ್ತಾಂಗಕ್ಕೆ ಮದ್ಯದ ಬಾಟಲ್ ಇರಿಸಿ ವಿಕೃತಿ ಮರೆದಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿತ್ತು. ಇಂದು ಅತ್ಯಾಚಾರ ಮಾಡಿದ ಸ್ಥಳ ಪರಿಶೀಲನೆಗೆ ಆರೋಪಿಗಳಾದ ಸಾಗರ್, ಮೊಹಮ್ಮದ್ ಬಾಬಾ

ಬೆಂಗಳೂರು: ಬೆಳ್ಳಂಬೆಳಗ್ಗೆ ಅತ್ಯಾಚಾರ ಆರೋಪಿಗಳ ಮೇಲೆ ಫೈರಿಂಗ್ | ಕೃತ್ಯದಲ್ಲಿ ಬಾಂಗ್ಲಾ ಮೂಲದ ಯುವಕರಿಗೆ ಯುವತಿಯರ ಸಾಥ್….! Read More »

ಕೊಣಾಜೆ: ಪಾವೂರಿನಲ್ಲಿ ಮೆಹಂದಿ ಪಾರ್ಟಿ | ಪೊಲೀಸ್ ದೂರು ದಾಖಲಿಸಿದ ಪಿಡಿಒ

ಮಂಗಳೂರು: ತಾಲೂಕಿನ ಪಾವೂರಿನಲ್ಲಿ, ಕೋವಿಡ್ 19 ನಿಯಮಗಳನ್ನು ಉಲ್ಲಂಘಿಸಿ, ಮೆಹಂದಿ ಡಿಜೆ ಪಾರ್ಟಿ ನಡೆಸಿದವರ ವಿರುದ್ದ ಕೊಣಾಜೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮೇ.20 ರಂದು ಶೋಭಾ ಮತ್ತು ಕೌಶಲ್ ಎಂಬವರು ಮದುವೆಗೆ ಪಾವೂರು ಗ್ರಾಮ ಪಂಚಾಯತಿಯಿಂದ ಷರತ್ತು ಭದ್ದ ಅನುಮತಿ ನೀಡಲಾಗಿತ್ತು. ಆದರೆ ಮೇ 19 ರಂದು ರಾತ್ರಿ ಮೆಹಂದಿ ಕಾರ್ಯಕ್ರಮದ ಅನುಮತಿ ಇಲ್ಲದಿದ್ದರೂ ದ್ವನಿವರ್ಧಕ ಬಳಸಿ ಯಾವುದೇ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಮಾಸ್ಕ್ ಧರಿಸದೆ ಹೆಚ್ಚಿನ ಜನ ಸೇರಿಸಿ ನೃತ್ಯ ಮಾಡಿರುತ್ತಾರೆ. ಈ ರೀತಿಯಾಗಿ

ಕೊಣಾಜೆ: ಪಾವೂರಿನಲ್ಲಿ ಮೆಹಂದಿ ಪಾರ್ಟಿ | ಪೊಲೀಸ್ ದೂರು ದಾಖಲಿಸಿದ ಪಿಡಿಒ Read More »

ಶವ ಹೊತ್ತ ಅಂಬ್ಯುಲೆನ್ಸ್ ಚಲಾಯಿಸಿದ ರೇಣುಕಾಚಾರ್ಯ | ಕ್ಷೇತ್ರದ ಸೋಂಕಿತರ ಸೇವೆಗೆ ಸ್ವತಃ ಫೀಲ್ಡಿಗಿಳಿದ ಬಿಜೆಪಿ ಶಾಸಕ

ದಾವಣಗೆರೆ: ರಾಜ್ಯದ ಹೆಚ್ಚಿನ ಶಾಸಕರು ಮತ್ತು ಸಂಸದರುಗಳು ಇಂತಹ ಕಠಿಣ ತುರ್ತು ಪರಿಸ್ಥಿತಿಯಲ್ಲೂ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುವಲ್ಲಿ ಬ್ಯುಸಿಯಾಗಿರುವ ಈ ಸಂದರ್ಭದಲ್ಲಿ , ತಮ್ಮ ಕ್ಷೇತ್ರದ ಜನರ ಸೇವೆಗೆ ನಿಂತಿರುವ ಕೆಲವೇ ಕೆಲವು ಶಾಸಕ, ಸಂಸದರಲ್ಲಿ ರೇಣುಕಾಚಾರ್ಯ ಒಬ್ಬರು. ಹೌದು, ಜಿಲ್ಲೆಯ ಹೊನ್ನಾಳಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿರವ ಎಂ.ಪಿ. ರೇಣುಕಾಚಾರ್ಯ ಆಗಾಗ ಸುದ್ದಿಯಾಗುತ್ತಿರುತ್ತಾರೆ. ಪ್ರಸ್ತುತ ಸಿಎಂ ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿಯಾಗಿದ್ದರೂ, ಅವರು ಬೆಂಗಳೂರಿನಲ್ಲಿ ಕಾಲ ಕಳೆಯದೆ ತನ್ನ ಸ್ವ ಕ್ಷೇತ್ರದ ಕೊರೋನಾ ಸೋಂಕಿತರ ಸೇವೆಯಲ್ಲಿ

ಶವ ಹೊತ್ತ ಅಂಬ್ಯುಲೆನ್ಸ್ ಚಲಾಯಿಸಿದ ರೇಣುಕಾಚಾರ್ಯ | ಕ್ಷೇತ್ರದ ಸೋಂಕಿತರ ಸೇವೆಗೆ ಸ್ವತಃ ಫೀಲ್ಡಿಗಿಳಿದ ಬಿಜೆಪಿ ಶಾಸಕ Read More »