ಸಮಗ್ರ ಸಮಾಚಾರ

ಲಸಿಕೆಗೆ ಬಗ್ಗೆ ಅಪಪ್ರಚಾರ, ಜನರಿಗೆ ಭಯ ಹುಟ್ಟಿಸಿದ್ದೇ ಕಾಂಗ್ರೇಸ್: ಕುಮಾರಸ್ವಾಮಿ

ಬೆಂಗಳೂರು: ದೇಶದಲ್ಲಿ ಲಸಿಕೆ ಅಭಿಯಾನ ಸರಿಯಾಗಿ ಆಗದೇ ಇರೋದಕ್ಕೆ ಮತ್ತು ಅಪಪ್ರಚಾರ ಮಾಡಿದ್ದು, ಜನರಿಗೆ ಭಯ ಹುಟ್ಟಲು ಕಾಂಗ್ರೆಸ್ ಕಾರಣ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಆರೋಪಿಸಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಸಿಕೆ ನೀಡಲು ೧೦೦ ಕೋಟಿ ರೂ. ಕೊಡುವುದಾಗಿ ಹೇಳುತ್ತಿರೋ ಕಾಂಗ್ರೆಸ್ ವರ್ತನೆಗೆ ಕಿಡಿಕಾರಿದರು. ಕಾಂಗ್ರೆಸ್ ಶಾಸಕರು ಅ ಹಣವನ್ನು ಕೈಯಿಂದ ಕೊಡುತ್ತಿಲ್ಲ. ಶಾಸಕರ ಕ್ಷೇತ್ರ ಅಭಿವೃದ್ಧಿ ಹಣ ಕೊಡುತ್ತೇವೆ ಎಂದು ಹೇಳುತ್ತಿದ್ದಾರೆ. ಗಾಂಧಿ ಪ್ರತಿಮೆ ಮುಂದೆ ಪ್ರತಿಭಟನೆ ಮಾಡಿದರು. ಆದರೆ ಲಸಿಕೆ […]

ಲಸಿಕೆಗೆ ಬಗ್ಗೆ ಅಪಪ್ರಚಾರ, ಜನರಿಗೆ ಭಯ ಹುಟ್ಟಿಸಿದ್ದೇ ಕಾಂಗ್ರೇಸ್: ಕುಮಾರಸ್ವಾಮಿ Read More »

ಬಂಟ್ವಾಳ: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಮೃತ್ಯು

ಬಂಟ್ವಾಳ: ಕಳೆದು ಎರಡು ದಿನಗಳ ಹಿಂದೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕ ಮಂಗಳವಾರ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಬಂಟ್ವಾಳ ಬಿ.ಕಸ್ಬಾ ಗ್ರಾಮದ ಮುಗ್ಡಾಲ್ ಗುಡ್ಡೆ ನಿವಾಸಿ ವಿನಯ್ (೨೪) ಮೃತಪಟ್ಟ ಯುವಕ. ಮಾ.೧೦ ರಂದು ಪಾಣೆಮಂಗಳೂರು ಅಕ್ಕರಂಗಡಿ ಎಂಬಲ್ಲಿ ಪಿಕಪ್ ಜೀಪ್ ಸ್ಕೂಟರ್‌ಗೆ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ವಿನಯ್ ಅವರ ತಲೆಗೆ ಗಾಯವಾಗಿದ್ದು, ಅವರು ಕೋಮಾ ಅವಸ್ಥೆಯಿಂದ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಬಂಟ್ವಾಳ: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಮೃತ್ಯು Read More »

ವಿಶ್ವಸುಂದರಿ ರನ್ನರ್ ಅಪ್ ಸ್ಥಾನ ಪಡೆದ ಕರಾವಳಿ ಬೆಡಗಿ. ಯಾರೀ ಸುಂದರಿ ಗೊತ್ತಾ..?

ಅಮೆರಿಕಾದ ಫ್ಲೋರಿಡಾದಲ್ಲಿ ನಡೆದ 69ನೇ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಉದ್ಯಾವರ ಮೂಲದ ಆ್ಯಡ್ಲಿನ್ ಕ್ಯಾಸ್ಟೆಲಿನೋ ಮೂರನೇ ರನ್ನರ್ ಅಪ್ ಸ್ಥಾನ ಪಡೆದಿದ್ದಾರೆ. 22ರ ಹರೆಯದ ಆ್ಯಡ್ಲಿನ್ ಕ್ಯಾಸ್ಟೆಲಿನೋ, ಉದ್ಯಾವರ ಮೂಲದ ಅಲ್ಫೋನ್ಸಸ್ ಕ್ಯಾಸ್ಟೆಲಿನೊ ಮತ್ತು ಮೀರಾ ಕ್ಯಾಸ್ಟೆಲಿನೊ ದಂಪತಿ ಪುತ್ರಿ. ವಿವಿಧ ಆನ್‌ಲೈನ್ ಸೌಂದರ್ಯ ಸ್ಪರ್ಧೆಗಳಲ್ಲಿ ಭಾಗವಹಿಸುತ್ತಿದ್ದ ಅವರು, 2020ರಲ್ಲಿ ಲಿವಾ ಮಿಸ್ ದಿವಾ ಯೂನಿವರ್ಸ್ ಸ್ಪರ್ಧೆಯಲ್ಲಿ ವಿಜೇತರಾಗುವ ಮೂಲಕ ನೇರವಾಗಿ ಮಿಸ್ ಯೂನಿವರ್ಸ್ ಸ್ಪರ್ಧೆಗೆ ಪ್ರವೇಶ ಪಡೆದುಕೊಂಡಿದ್ದರು. ಕುವೈತ್ ನಲ್ಲಿ ಹುಟ್ಟಿ ಬೆಳೆದು, ಮುಂಬೈನಲ್ಲಿ ಪ್ರೌಢ

ವಿಶ್ವಸುಂದರಿ ರನ್ನರ್ ಅಪ್ ಸ್ಥಾನ ಪಡೆದ ಕರಾವಳಿ ಬೆಡಗಿ. ಯಾರೀ ಸುಂದರಿ ಗೊತ್ತಾ..? Read More »

ಕನ್ನಡ ನೆಲದ ಹೆಮ್ಮೆಯ ಸುಪುತ್ರ ಹೆಚ್.ಡಿ.ದೇವೇಗೌಡ

ಶ್ರೀ ಹೆಚ್.ಡಿ.ದೇವೇಗೌಡರ ಅವರು ಸಾಮಾಜಿಕ-ಆರ್ಥಿಕ ಅಭಿವೃದ್ಧಿಯ ಸುಧಾರಕರು ಹಾಗೂ ಭಾರತದ ಭವ್ಯ ಸಂಸ್ಕೃತಿ ಪರಂಪರೆಯ ಪ್ರಶಂಸಕರು. ಇವರು ಮೇ 18, 1933ರಂದು ಕರ್ನಾಟಕದ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಹರದನಹಳ್ಳಿ ಗ್ರಾಮದಲ್ಲಿ ಜನಿಸಿದರು. ಸಿವಿಲ್ ಎಂಜಿನಿಯರಿಂದ ಡಿಪ್ಲೊಮಾ ಪಡೆದಿರುವ ಶ್ರೀದೇವೇಗೌಡರು 20 ವರ್ಷದ ಯುವಕನಾಗಿದ್ದಾಗಲೇ ಸಕ್ರಿಯ ರಾಜಕಾರಣಕ್ಕೆ ಧುಮುಕಿದರು. ಶಿಕ್ಷಣ ಪೂರೈಸಿದ ನಂತರ 1953ರಲ್ಲಿ ಕಾಂಗ್ರೆಸ್ ಪಕ್ಷವನ್ನು ಸೇರಿ 1962ರ ತನಕ ಆ ಪಕ್ಷದಲ್ಲೇ ಸದಸ್ಯರಾಗಿ ಉಳಿದಿದ್ದರು. ಮಧ್ಯಮ ವರ್ಗದ ಕೃಷಿ ಕುಟುಂಬದ ಹಿನ್ನೆಲೆಯಿಂದ ಬಂದ ಗೌಡರಿಗೆ

ಕನ್ನಡ ನೆಲದ ಹೆಮ್ಮೆಯ ಸುಪುತ್ರ ಹೆಚ್.ಡಿ.ದೇವೇಗೌಡ Read More »

ಲಾಕ್‍ಡೌನ್ ಹೇರಲು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಸಂಪೂರ್ಣ ಅಧಿಕಾರ: ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ‌ಜಿಲ್ಲೆಗೆ ಅನುಗುಣವಾಗುವಂತೆ ಕ್ರಮ ಕೈಗೊಳ್ಳಿ ಎಂದು ಹೇಳುವ ಮೂಲಕ ಲಾಕ್ ಡೌನ್ ಸಂಬಂಧ ಸಂಪೂರ್ಣ ಅಧಿಕಾರವನ್ನು ಡಿಸಿಗಳ ನೀಡಿದ್ದಾರೆ. ಜಿಲ್ಲಾಡಳಿತಕ್ಕೆ ಜಿಲ್ಲೆಯ ಪರಿಸ್ಥಿತಿ ಚೆನ್ನಾಗಿ ಗೊತ್ತಿರುತ್ತದೆ. ಹೀಗಾಗಿ ಜಿಲ್ಲೆಗೆ ಅನುಗುಣವಾಗಿ ಜಿಲ್ಲಾಧಿಕಾರಿಗಳೇ ನಿರ್ಧಾರಗಳನ್ನು ತೆಗೆದುಕೊಳ್ಳಬಹುದು ಎಂದು ಕರ್ನಾಟಕದ 17 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಸಭೆ ಬಳಿಕ ಮಾತನಾಡಿದ ಪ್ರಧಾನಿ ತಿಳಿಸಿದ್ದಾರೆ. ಜಿಲ್ಲೆಗಳಲ್ಲಿ ಕೊರೊನಾ ನಿಯಂತ್ರಣಕ್ಕೆ ಬಂದರೆ ಇಡೀ ದೇಶ ಗೆದ್ದಂತೆ. ಕಾಳಸಂತೆಕೋರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ ಎಂದು ಹೇಳಿದ್ದಾರೆ. ಇಂದಿನ ಸಭೆಯಲ್ಲಿ

ಲಾಕ್‍ಡೌನ್ ಹೇರಲು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಸಂಪೂರ್ಣ ಅಧಿಕಾರ: ಪ್ರಧಾನಿ ಮೋದಿ Read More »

ಪುತ್ತೂರು | ಡಿವೈಡರ್ ಗೆ ಕಾರು ಢಿಕ್ಕಿ; ಚಾಲಕ ಸಾವು

ಪುತ್ತೂರು: ಪುತ್ತೂರಿನ ಕೆಮ್ಮಾಯಿಯಲ್ಲಿ ಬೆಳ್ಳಂಬೆಳಗ್ಗೆ ಕಾರೊಂದು ರಸ್ತೆ ಡಿವೈಡರ್ ಢಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ ಮೃತಪಟ್ಟ ದುರ್ಘಟನೆ ನಡೆದಿದೆ. ಸಾವನ್ನಪ್ಪಿದವರನ್ನು ಬೆಳ್ತಂಗಡಿ ಬಾರ್ಯ ನಿವಾಸಿ ಅರುಣ್ ಕುಮಾರ್ ಎಂದು ಗುರುತಿಸಲಾಗಿದ್ದು. ಕಾರು‌ ರಸ್ತೆ ಡಿವೈಡರ್ ಢಿಕ್ಕಿ ಹೊಡೆದ ಪರಿಣಾಮ ಕಾರಿನ ಒಂದು ಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರು ಚಾಲಕ ಗಂಭೀರ ಗಾಯಗೊಂಡಿದ್ದು ಅವರನ್ನು ಆದರ್ಶ ಆಸ್ಪತ್ರೆಯ ಆಂಬುಲೆನ್ಸ್ ಚಾಲಕ ದಯಾನಂದ ಅವರ ಸಹಾಯದೊಂದಿಗೆ ಪುತ್ತೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಸಾವನ್ನಪ್ಪಿದ್ದಾರೆ

ಪುತ್ತೂರು | ಡಿವೈಡರ್ ಗೆ ಕಾರು ಢಿಕ್ಕಿ; ಚಾಲಕ ಸಾವು Read More »

ಉಪ್ಪಿನಂಗಡಿ: ಮನೆಯಿಂದ ಲಕ್ಷಾಂತರ ಮೌಲ್ಯದ ನಗ-ನಗದು ಕಳವು

ಉಪ್ಪಿನಂಗಡಿ: ಮನೆಯಲ್ಲಿ ಮನೆಮಂದಿ ಇಲ್ಲದ ಸಮಯದಲ್ಲಿ ಕೈಚಳಕ ತೋರಿಸಿದ ಕಳ್ಳರು ಚಿನ್ನಾಭರಣ ಸಹಿತ ಮನೆಯಲ್ಲಿದ್ದ ನಗದು ದೋಚಿದ ಘಟನೆ ಇಲ್ಲಿಗೆ ಸಮೀಪದ ಕರಾಯ ಎಂಬಲ್ಲಿ ನಡೆದಿದೆ. ಕರಾಯ ಗ್ರಾಮದ ಮುರಿಯಾಳ ಮಹಮ್ಮದ್ ಅಶ್ರಫ್ ಎಂಬವರ ಮನೆಯಿಂದ, ಮನೆಮಂದಿ ಇಲ್ಲದಿದ್ದಾಗ ಬೀಗ ಒಡೆದು ಕಳ್ಳತನ ನಡೆದಿದೆ. ಅಶ್ರಫ್ ಅವರು ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದು, ಅವರ ತಂದೆ, ಪತ್ನಿ ಮತ್ತು ಮಕ್ಕಳು ಮನೆಯಲ್ಲಿರುತ್ತಿದ್ದರು. ಕಳೆದವಾರ ಹಬ್ಬದ ನಿಮಿತ್ತ ಮನೆಯವರೆಲ್ಲರೂ ಅಶ್ರಫ್ ಅವರ ಪತ್ನಿ ಶಾಹಿದ್ ಅವರ ತವರು ಮನೆಗೆ ತೆರಳಿದ್ದು ಸೋಮವಾರ

ಉಪ್ಪಿನಂಗಡಿ: ಮನೆಯಿಂದ ಲಕ್ಷಾಂತರ ಮೌಲ್ಯದ ನಗ-ನಗದು ಕಳವು Read More »

ಮಂಗಳೂರು: ಎಸ್ಪಿ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮಹಿಳಾ ಪಿಎಸ್ಐ ಕೊರೋನಾಗೆ ಬಲಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ತುಂಬು ಗರ್ಭಿಣಿ ಮಹಿಳಾ ಪಿಎಸ್ಐ ಕೋವಿಡ್ ಗೆ ಬಲಿಯಾದ ಘಟನೆ ನಡೆದಿದೆ. ಕಳೆದ 5 ತಿಂಗಳ ಹಿಂದೆ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಿ ಕರ್ತವ್ಯಕ್ಕೆ ಹಾಜರಾಗಿದ್ದ ಶ್ಯಾಮಿಲಿ (24 ವ) ಮೃತಪಟ್ಟ ಮಹಿಳೆ. ಶ್ಯಾಮಿಲಿಯವರು ಹೆರಿಗೆ ರಜೆ ನಿಮಿತ್ತ ತವರಿಗೆ ತೆರಳಿದ್ದರು. ಕಳೆದೆರಡು ವಾರಗಳ ಹಿಂದೆ ಅವರಿಗೆ ಕೋವಿಡ್ ಪಾಸಿಟಿವ್ ವರದಿ ಬಂದಿತ್ತು. ನಂತರ ಕೋಲಾರದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ

ಮಂಗಳೂರು: ಎಸ್ಪಿ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮಹಿಳಾ ಪಿಎಸ್ಐ ಕೊರೋನಾಗೆ ಬಲಿ Read More »

ಮಂಗಳೂರು | ಜೆಪ್ಪು ಮಾರ್ಕೆಟ್ ಬಳಿ ನಿಲ್ಲಿಸಿದ್ದ ಬಸ್ಸು ಬೆಂಕಿಗಾಹುತಿ

ಮಂಗಳೂರು: ಇಂದು ಬೆಳಿಗ್ಗಿನ ಜಾವ ಲಾಕ್‌ಡೌನ್ ಹಿನ್ನಲೆಯಲ್ಲಿ ಜೆಪ್ಪು ಮಾಕೆರ್ಟ್ನಲ್ಲಿ ನಿಂತಿದ್ದ ಬಸ್ಸುವೊಂದು ಬೆಂಕಿಗಾಹುತಿಯಾದ ಘಟನೆ ಸಂಭವಿಸಿದೆ. ನರೇಶ್ ಪೂಜಾರಿ ಮಾಲಕತ್ವದ ರಾಜಲಕ್ಷ್ಮಿ ಟ್ರಾವೆಲ್ಸ್ ಬಸ್ಸಿನಲ್ಲಿ ಮುಂಜಾನೆ 4ರ ಹೊತ್ತಿಗೆ ಬೆಂಕಿಕಾಣಿಸಿಕೊಂಡಿದೆ. ಹಾಗೆಯೇ ಬಸ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಹತ್ತಿರದಲ್ಲೇ ಇದ್ದ ಬಸ್ಸುಗಳಿಗೆ ಯಾವುದೇ ಹಾನಿ ಉಂಟಾಗಿಲ್ಲ. ಇದು ದುಷ್ಕರ್ಮಿಗಳ ಕೃತ್ಯ ಎಂದು ಶಂಕಿಸಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗಳೂರು | ಜೆಪ್ಪು ಮಾರ್ಕೆಟ್ ಬಳಿ ನಿಲ್ಲಿಸಿದ್ದ ಬಸ್ಸು ಬೆಂಕಿಗಾಹುತಿ Read More »

‘ಇತ್ತೆ ಪಂಪ್ವೆಲ್ ಬತ್ತ್ ತೂಲೆ’ ವರ್ಲಿ‌ಕಲೆಯಿಂದ ಕಂಗೊಳಿಸುತ್ತಿದೆ ಮಂಗಳೂರಿನ ಪಂಪ್ವೆಲ್

ಮಂಗಳೂರು: ಟ್ರೋಲಿಗರಿಂದ ಸಾಕಷ್ಟು ಸುದ್ದಿಯಾಗಿದ್ದ ಮಂಗಳೂರಿನ ಪಂಪ್ ವೆಲ್ ಪ್ಲೈ ಓವರ್ ಮತ್ತೆ ಸುದ್ದಿಯಾಗುತ್ತಿದೆ. ಪ್ಲೈ ಓವರ್ ನ ಗೋಡೆಗಳು ಸುಂದರ ವರ್ಣರಂಜಿತ ವರ್ಲಿ ಚಿತ್ರಗಳಿಂದ ಕಂಗೊಳಿಸುತ್ತಿದ್ದು, ತನ್ನನ್ನು ಅಣಕಿಸಿದವರನ್ನು ಕೆಣಕುತ್ತಿದೆ. ಪ್ಲೈ ಓವರ್ ನ ಎರಡು ಬದಿ ರಸ್ತೆಗಳಲ್ಲಿ ಸಂಚರಿಸುವಾಗ ವರ್ಲಿ ಚಿತ್ತಾರಗಳು ಕಣ್ಣುಗಳಿಗೆ ಮುದನೀಡುತ್ತಿವೆ. ಮಂಗಳೂರಿನ ಆದಿತತ್ವ ಕಲಾವಿದರ ಬಳಗದ ಕುಂಚದಲ್ಲಿ ಮೂಡಿದ ಈ ವರ್ಲಿ ಚಿತ್ತಾರಗಳು ಪ್ರಯಾಣಿಕರ ಕಣ್ಮನ ಸೆಳೆಯುತ್ತಿದೆ.ಕರ್ನಾಟಕ ಬ್ಯಾಂಕ್ ಸಹಕಾರದೊಂದಿಗೆ ರಸ್ತೆ ಗೋಡೆಗೆ ಬೇಸ್ ಪೈಂಟ್ ನಿಂದ ಅಂದಗೊಳಿಸಿ ವರ್ಲಿ

‘ಇತ್ತೆ ಪಂಪ್ವೆಲ್ ಬತ್ತ್ ತೂಲೆ’ ವರ್ಲಿ‌ಕಲೆಯಿಂದ ಕಂಗೊಳಿಸುತ್ತಿದೆ ಮಂಗಳೂರಿನ ಪಂಪ್ವೆಲ್ Read More »