‘ಪೊಲೀಸ್ ಠಾಣೆಗೆ ನುಗ್ತೇವೆ’ ಎಂದ ಪ್ರತಾಪ್ ಸಿಂಹ| ‘ಪರಪ್ಪನ ಅಗ್ರಹಾರ’ ಕ್ಕೆ ನುಗ್ಗಿಸ್ತೀವಿ ಎಂದ ಹೋಮ್ ಮಿನಿಸ್ಟರ್
ಸಮಗ್ರ ನ್ಯೂಸ್: ‘ಪೊಲೀಸ್ ಠಾಣೆಗೆ ನುಗ್ಗುತ್ತೇನೆ’ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ನೀಡಿದ್ದ ಎಚ್ಚರಿಕೆಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ತೀಕ್ಷ್ಣ ತಿರುಗೇಟು ನೀಡಿದ್ದಾರೆ. ಪೊಲೀಸ್ ಠಾಣೆಗೆ ನುಗ್ಗುವವರಿಗೆ ಮುಕ್ತ ಆಹ್ವಾನವಿದೆ. ಠಾಣೆಗೆ ನುಗ್ಗಿದ ಬಳಿಕ ನೇರವಾಗಿ ಪರಪ್ಪನ ಅಗ್ರಹಾರಕ್ಕೆ ಕಳುಹಿಸುವ ವ್ಯವಸ್ಥೆಯನ್ನು ಉಚಿತವಾಗಿ ಕಲ್ಪಿಸಲಾಗುವುದು ಎಂದು ಅವರು ವ್ಯಂಗ್ಯವಾಡಿದ್ದಾರೆ. ಮೈಸೂರು ಜಿಲ್ಲೆಯ ಟಿ. ನರಸೀಪುರದಲ್ಲಿ ಗಣೇಶೋತ್ಸವದ ಮೆರವಣಿಗೆಗೆ ಸಂಬಂಧಿಸಿದಂತೆ ಪೊಲೀಸ್ ಇನ್ಸ್ಪೆಕ್ಟರ್ ಧನಂಜಯ್ ನೀಡಿರುವ ಎಚ್ಚರಿಕೆ ಇದೀಗ ರಾಜಕೀಯ ವಾಕ್ಸಮರಕ್ಕೆ ಕಾರಣವಾಗಿದೆ. ಗೌರಿ-ಗಣೇಶ ಹಬ್ಬದ










