ಸಮಗ್ರ ಸಮಾಚಾರ

ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಹಿಂಸಾಚಾರಕ್ಕೆ ಸುವೇಂಧು ಅಧಿಕಾರಿಯ ಆಪ್ತ ಸಹಾಯಕ ಬಲಿ| ಗುಂಡಿಕ್ಕಿ ಕೊಂದ ದುಷ್ಕರ್ಮಿಗಳು

ಸಮಗ್ರ ನ್ಯೂಸ್: ಪಶ್ಚಿಮ ಬಂಗಾಳದ ಪ್ರತಿಪಕ್ಷ ನಾಯಕ ಹಾಗೂ ಬಿಜೆಪಿ ಹಿರಿಯ ಮುಖಂಡ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ ಚಂದ್ರನಾಥ್ ರಥ್ ಅವರನ್ನು ಬುಧವಾರ ರಾತ್ರಿ ಉತ್ತರ 24 ಪರಗಣ ಜಿಲ್ಲೆಯ ಮಾಧ್ಯಮಗ್ರಾಮದಲ್ಲಿ ಗುಂಡಿಕ್ಕಿ ಕೊಲೆ ಮಾಡಲಾಗಿದೆ. ಈ ಘಟನೆಯು ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ರಾಜಕೀಯ ಸಂಘರ್ಷಕ್ಕೆ ಎಡೆಮಾಡಿಕೊಟ್ಟಿದೆ. ಪ್ರಾಥಮಿಕ ವರದಿಗಳ ಪ್ರಕಾರ, ಚಂದ್ರನಾಥ್ ರಥ್ ಅವರು ತಮ್ಮ ಸ್ಕಾರ್ಪಿಯೋ ಎಸ್‌ಯುವಿ ಕಾರಿನಲ್ಲಿ ಕುಳಿತಿದ್ದಾಗ ಈ ದಾಳಿ ನಡೆದಿದೆ. ಸುಮಾರು ಎಂಟು ಮಂದಿ ದುಷ್ಕರ್ಮಿಗಳು […]

ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಹಿಂಸಾಚಾರಕ್ಕೆ ಸುವೇಂಧು ಅಧಿಕಾರಿಯ ಆಪ್ತ ಸಹಾಯಕ ಬಲಿ| ಗುಂಡಿಕ್ಕಿ ಕೊಂದ ದುಷ್ಕರ್ಮಿಗಳು Read More »

ಹವಾಮಾನ ವರದಿ| ಕರಾವಳಿಯಲ್ಲಿ ಇಂದಿನಿಂದ ವಾರಾಂತ್ಯದವರೆಗೂ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ಕರಾವಳಿ ಕರ್ನಾಟಕದ ಜನತೆಗೆ ಹವಾಮಾನ ಇಲಾಖೆಯು ಮಳೆಯ ಸಿಹಿ ಸುದ್ದಿ ನೀಡಿದೆ. ಮೇ 6ರ ಬುಧವಾರದಿಂದ ಕರಾವಳಿ ಪ್ರದೇಶದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಮಂಗಳವಾರ ಸಂಜೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಿತ್ತು. ಬುಧವಾರ(ಮೇ.6)ದಿಂದ ವಾರಾಂತ್ಯದವರೆಗೆ ಕರಾವಳಿಯುದ್ದಕ್ಕೂ ಮಳೆಯಾಗಲಿದ್ದು, ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದೆ. ಈ ಮಳೆಯ ಅವಧಿಯಲ್ಲಿ ಬಿರುಗಾಳಿ ಹಾಗೂ ಸಿಡಿಲು ಸಹಿತ ಗುಡುಗು

ಹವಾಮಾನ ವರದಿ| ಕರಾವಳಿಯಲ್ಲಿ ಇಂದಿನಿಂದ ವಾರಾಂತ್ಯದವರೆಗೂ ಮಳೆ ಸಾಧ್ಯತೆ Read More »

ವಿಟ್ಲ: ಅಮಲು ಪದಾರ್ಥ ಸೇವಿಸಿ ಅನುಚಿತ ವರ್ತನೆ| ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದಾತ ಬಂಧನ

ಸಮಗ್ರ ನ್ಯೂಸ್: ಅಮಲು ಪದಾರ್ಥ ಸೇವಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಘಟನೆ ವಿಟ್ಲದ ನಾಲ್ಕು ಮಾರ್ಗ ಜಂಕ್ಷನ್‌ನಲ್ಲಿ ಭಾನುವಾರ ಮಧ್ಯಾಹ್ನ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಬಂಟ್ವಾಳ ತಾಲೂಕಿನ ಕೊಳ್ನಾಡು ನಿವಾಸಿ ಮಹಮ್ಮದ್ ಅಸ್ಬೀರ್ (26) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ವಿಟ್ಲ ಪೊಲೀಸ್ ಉಪ ನಿರೀಕ್ಷಕರಾದ ಬಿ.ಎಸ್. ನಾಯಕ್ ಅವರು ಸಿಬ್ಬಂದಿಗಳೊಂದಿಗೆ ನಾಲ್ಕು ಮಾರ್ಗ ಜಂಕ್ಷನ್‌ನಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದರು. ಈ ವೇಳೆ ಸ್ಕೂಟರ್‌ನಲ್ಲಿ ಬಂದ ಅಸ್ಬೀರ್ ಹೆಲ್ಮೆಟ್ ಧರಿಸಿರಲಿಲ್ಲ. ಪೊಲೀಸರು ಆತನನ್ನು ತಡೆದು ವಿಚಾರಿಸಿದಾಗ, ಆರೋಪಿತನು ಉಪ

ವಿಟ್ಲ: ಅಮಲು ಪದಾರ್ಥ ಸೇವಿಸಿ ಅನುಚಿತ ವರ್ತನೆ| ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದಾತ ಬಂಧನ Read More »

ಪುತ್ತೂರು: ಟ್ಯಾಂಕರ್ – ಬೈಕ್ ನಡುವೆ ಅಪಘಾತ| ಇಬ್ಬರು ದುರ್ಮರಣ

ಸಮಗ್ರ ನ್ಯೂಸ್: ಟ್ಯಾಂಕರ್, ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಘಟನೆ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ ಸವಣೂರು ಬಳಿ ಅಪಘಾತ ನಡೆದಿದೆ. ಮಿತ್ತೂರಿನ ಯಜ್ಞೇಶ್(21), ಆರ್ಲಪದವು ನಿವಾಸಿ ಜಗನ್(20) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಅಪಘಾತ ಕಂಡು ಬ್ರೇಕ್ ಹಾಕಿದ ಮತ್ತೊಂದು ಬೈಕ್ ನಲ್ಲಿದ್ದ ಇಬ್ಬರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ಪರಿಣಾಮ ವಾಟರ್ ಟ್ಯಾಂಕರ್ ಕಂದಕಕ್ಕೆ ಉರುಳಿ ಬಿದ್ದಿದೆ. ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಗನ್ ಅವರು ಪುತ್ತೂರಿನ ಅಕ್ಷಯ ಕಾಲೇಜಿನ

ಪುತ್ತೂರು: ಟ್ಯಾಂಕರ್ – ಬೈಕ್ ನಡುವೆ ಅಪಘಾತ| ಇಬ್ಬರು ದುರ್ಮರಣ Read More »

ತಮಿಳುನಾಡಿನಲ್ಲಿ ಟಿವಿಕೆ – ಕಾಂಗ್ರೆಸ್ ಮೈತ್ರಿ ಸರ್ಕಾರ| ರಾಗಾ ಬೆಂಬಲ ಕೋರಿದ ವಿಜಯ್

ಸಮಗ್ರ ನ್ಯೂಸ್: ತಮಿಳುನಾಡಿನಲ್ಲಿ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ ಪಕ್ಷ ಹಾಗೂ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬರುವುದು ಬಹುತೇಕ ಅಂತಿಮವಾಗಿದೆ. ತಮಿಳುನಾಡಿನ ವಿಧಾನಸಭೆ ಚುನಾವಣೆಯಲ್ಲಿ ಅತಂತ್ರ ವಿಧಾನಸಭೆ ರಚನೆಯಾಗಿದೆ. ಟಿವಿಕೆ ಪಕ್ಷವು ಈ ಬಾರಿಯ ಚುನಾವಣೆಯಲ್ಲಿ ಅತ್ಯಂತ ಹೆಚ್ಚು ಸ್ಥಾನಗಳಲ್ಲಿ ಅಂದರೆ 108 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆಯಾದರೂ ಬಹುಮತಕ್ಕೆ ಇನ್ನೂ 10 ಸ್ಥಾನಗಳು ಕಡಿಮೆ ಇದೆ.ಹೀಗಾಗಿ, ಅನಿವಾರ್ಯವಾಗಿ ಟಿವಿಕೆ ಮೈತ್ರಿ ಮಾಡಿಕೊಳ್ಳುತ್ತಿದೆ. ಇದೀಗ ಟಿವಿಕೆ ಪಕ್ಷವು ಕಾಂಗ್ರೆಸ್ ಪಕ್ಷದ ಬೆಂಬಲ ಕೇಳಿದೆ. ಕಾಂಗ್ರೆಸ್ ಪಕ್ಷವು ತಮಿಳುನಾಡಿನ

ತಮಿಳುನಾಡಿನಲ್ಲಿ ಟಿವಿಕೆ – ಕಾಂಗ್ರೆಸ್ ಮೈತ್ರಿ ಸರ್ಕಾರ| ರಾಗಾ ಬೆಂಬಲ ಕೋರಿದ ವಿಜಯ್ Read More »

ರಾತ್ರಿವೇಳೆ ಮಹಿಳೆಯರನ್ನು ಪೊಲೀಸರು ವಿಚಾರಣೆಗೆ ಕರೆಯುವಂತಿಲ್ಲ| ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

ಸಮಗ್ರ ನ್ಯೂಸ್: ಮಹಿಳೆಯರ ಸುರಕ್ಷತೆ ಮತ್ತು ಹಕ್ಕುಗಳನ್ನು ರಕ್ಷಿಸುವ ದೃಷ್ಟಿಯಿಂದ, ಸೂರ್ಯಾಸ್ತದ ನಂತರ ಮತ್ತು ಸೂರ್ಯೋದಯಕ್ಕೆ ಮೊದಲು ಯಾವುದೇ ವಿಚಾರಣೆ ಅಥವಾ ತನಿಖೆಗಾಗಿ ಮಹಿಳೆಯರನ್ನು ಪೊಲೀಸ್ ಠಾಣೆಗೆ ಕರೆತರಬಾರದು ಎಂದು ರಾಜ್ಯದ ಎಲ್ಲಾ ಪೊಲೀಸ್ ಘಟಕಗಳಿಗೆ ಡಿಜಿ ಮತ್ತು ಐಜಿಪಿ (ಡೈರೆಕ್ಟರ್ ಜನರಲ್ ಮತ್ತು ಇನ್ಸ್‌ಪೆಕ್ಟರ್ ಜನರಲ್ ಆಫ್ ಪೊಲೀಸ್) ಕಚೇರಿ ಕಟ್ಟುನಿಟ್ಟಿನ ನಿರ್ದೇಶನ ನೀಡಿದೆ. ರೈಲ್ವೆ ಮತ್ತು ಕೆಜಿಎಫ್ ಸೇರಿದಂತೆ ರಾಜ್ಯದ ಎಲ್ಲಾ ಪೊಲೀಸ್ ಆಯುಕ್ತರು, ರೇಂಜ್ ಇನ್ಸ್‌ಪೆಕ್ಟರ್ ಜನರಲ್‌ಗಳು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಈ

ರಾತ್ರಿವೇಳೆ ಮಹಿಳೆಯರನ್ನು ಪೊಲೀಸರು ವಿಚಾರಣೆಗೆ ಕರೆಯುವಂತಿಲ್ಲ| ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ Read More »

ಹವಾಮಾನ ವರದಿ| ಮೇ.6ರಿಂದ ಕರಾವಳಿಯಲ್ಲಿ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ಕೆಲವು ದಿನಗಳ ವಿರಾಮದ ಬಳಿಕ ಕರಾವಳಿಯಲ್ಲಿ ಬುಧವಾರದಿಂದ ಮತ್ತೆ ಗುಡುಗು ಸಹಿತ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಒಂದೆರಡು ಕಡೆ ಮಂಗಳವಾರ ಲಘು ಮಳೆಯಾಗಬಹುದು. ಬುಧವಾರದಿಂದ ವಾರಾಂತ್ಯದವರೆಗೆ ಕರಾವಳಿಯಲ್ಲಿ ಸಾಧಾರಣ ಮತ್ತು ದಕ್ಷಿಣ ಒಳನಾಡಿನಾದ್ಯಂತ ಸಾಧಾರಣದಿಂದ ಉತ್ತಮ ಮಳೆಯಾಗುವ ನಿರೀಕ್ಷೆ ಹೊಂದಲಾಗಿದೆ. ಗಾಳಿ ಮತ್ತು ಸಿಡಿಲಿನ ಅಬ್ಬರವೂ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದೇ ಅವಧಿಯಲ್ಲಿ ಉತ್ತರ

ಹವಾಮಾನ ವರದಿ| ಮೇ.6ರಿಂದ ಕರಾವಳಿಯಲ್ಲಿ ಮಳೆ ಸಾಧ್ಯತೆ Read More »

ವಿಜಯ್, ಮಮತಾಗೆ ಪೋನಾಯಿಸಿದ ರಾಗಾ| ತಮಿಳುನಾಡಿನಲ್ಲಿ ಅಧಿಕಾರ ಸ್ಥಾಪನೆಯ ಕಸರತ್ತು!!

ಸಮಗ್ರ ನ್ಯೂಸ್: ಪಂಚರಾಜ್ಯ ಚುನಾವಣೆ ಫಲಿತಾಂಶ ಹೊರಬಿದ್ದಿದೆ. ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಟಿಎಂಸಿ ನೆಲಕಚ್ಚಿದರೆ, ತಮಿಳುನಾಡಿನಲ್ಲಿ ನಟ ವಿಜಯ್ ಅವರ ಟಿವಿಕೆ ಪಕ್ಷ ಭರ್ಜರಿ ಗೆಲುವು ಕಂಡಿದೆ. ಇತ್ತ ಅಸ್ಸಾಂನಲ್ಲಿ ಹಿಮಂತ ಬಿಸ್ವ ಶರ್ಮಾ ನೇೃತ್ವದ ಬಿಜೆಪಿ ಹ್ಯಾಟ್ರಿಕ್ ಗೆಲವು ಕಂಡಿದೆ. ಕೇರಳದಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಅಧಿಕಾರ ಹಿಡಿದಿದೆ. ಇದರ ನಡುವೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ದಿಢೀರ್ ಟಿವಿಕೆ ನಟ ವಿಜಯ್‌ಗೆ ಕರೆ ಮಾಡಿ ಮಾತನಾಡಿದ್ದಾರೆ. ಭರ್ಜರಿ ಗೆಲುವಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಇದೇ

ವಿಜಯ್, ಮಮತಾಗೆ ಪೋನಾಯಿಸಿದ ರಾಗಾ| ತಮಿಳುನಾಡಿನಲ್ಲಿ ಅಧಿಕಾರ ಸ್ಥಾಪನೆಯ ಕಸರತ್ತು!! Read More »

ಹಾರ್ಮೋಜ್ ಜಲಸಂಧಿ ರೀಒಪನ್| ಸಿಲುಕಿಕೊಂಡ ಹಡಗುಗಳ ರಕ್ಷಣೆಗೆ ‘ಪ್ರಾಜೆಕ್ಟ್ ಫ್ರೀಡಂ’ – ಟ್ರಂಪ್

ಸಮಗ್ರ ನ್ಯೂಸ್: ‘ಹೊರ್ಮುಜ್ ಜಲಸಂಧಿಯಲ್ಲಿ ಸಿಲುಕಿಕೊಂಡಿರುವ ವಿದೇಶಿ ಹಡಗುಗಳನ್ನು ಸೋಮವಾರದಿಂದ ಸುರಕ್ಷಿತವಾಗಿ ಹೊರತರಲು ನಮ್ಮ ನೌಕಾಪಡೆ ಸಹಾಯ ಮಾಡಲಿದೆ’ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ‘ಪಶ್ಚಿಮ ಏಷ್ಯಾ ಸಂಘರ್ಷದಲ್ಲಿ ಭಾಗಿಯಾಗದೆ ಹೊರ್ಮುಜ್ ಜಲಸಂಧಿಯಲ್ಲಿ ಸಿಲುಕಿರುವ ವಿದೇಶಿ ಹಡಗುಗಳಿಗೆ ಸಹಾಯ ಮಾಡುವ ಉದ್ದೇಶದಿಂದ ‘ಪ್ರಾಜೆಕ್ಟ್ ಫ್ರೀಡಂ’ ಕಾರ್ಯಾಚರಣೆ ಆರಂಭಿಸಿದ್ದೇವೆ. ಹೊರ್ಮುಜ್‌ನಲ್ಲಿ ಸಿಲುಕಿಕೊಂಡಿರುವ ಹಡಗುಗಳಲ್ಲಿ ಆಹಾರ, ಕುಡಿಯುವ ನೀರು ಮತ್ತು ಸಿಬ್ಬಂದಿಯ ಆರೋಗ್ಯ ಕಾಪಾಡಲು ಅಗತ್ಯವಿರುವ ವಸ್ತುಗಳ ಕೊರತೆ ಉಂಟಾಗಿದೆ’ ಎಂದು ಟ್ರಂಪ್ ತಮ್ಮ ಒಡೆತನದ ಸಾಮಾಜಿಕ

ಹಾರ್ಮೋಜ್ ಜಲಸಂಧಿ ರೀಒಪನ್| ಸಿಲುಕಿಕೊಂಡ ಹಡಗುಗಳ ರಕ್ಷಣೆಗೆ ‘ಪ್ರಾಜೆಕ್ಟ್ ಫ್ರೀಡಂ’ – ಟ್ರಂಪ್ Read More »

ಪಂಚರಾಜ್ಯ ಚುನಾವಣೆ 2026| ಮೂರು ರಾಜ್ಯಗಳ ಸಿಎಂಗಳಿಗೆ ಭಾರೀ ಸೋಲು

ಸಮಗ್ರ ನ್ಯೂಸ್: ಪಂಚರಾಜ್ಯ ಚುನಾವಣೆ 2026ರಲ್ಲಿ ದಾಖಲೆಯ ಫಲಿತಾಂಶಗಳು ಹೊರಬಿದ್ದಿದ್ದು, ಪ್ರಪ್ರಥಮ ಬಾರಿಗೆ ಮೂರು ರಾಜ್ಯಗಳಲ್ಲಿ ದಶಕಗಳ ಕಾಲ ಮುಖ್ಯಮಂತ್ರಿಗಳಾಗಿ ಅಧಿಪತ್ಯ ಮೆರೆದ ರಾಜಕೀಯ ನಾಯಕರು ಇದೀಗ ಹೀನಾಯ ಸೋಲಿನ ಮೂಲಕ ಭಾರೀ ಮುಖಭಂಗ ಅನುಭವಿಸಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ದಾಖಲೆಯ ಮತಗಳು ಬಿದ್ದಾಗಲೇ ಹೊಸ ಅಧಿಕಾರದ ಮುನ್ಸೂಚನೆ ಇದು ಎಂಬುದು ಬಹುತೇಕರಿಗೆ ತಿಳಿಯಿತು. ಆದರೂ ಸಹ ಅಧಿಕೃತ ಫಲಿತಾಂಶ ಏನು ಹೇಳುತ್ತೆ ಎಂಬುದನ್ನು ಕಾದು ನೋಡಲು ತುದಿಗಾಲಿನಲ್ಲಿದ್ದರು. ಅಂತೆಯೇ, ಈಗ ಹೊರಬಿದ್ದಿರುವ ಪಂಚರಾಜ್ಯ ಚುನಾವಣೆಯಲ್ಲಿ ಹತ್ತತ್ತು

ಪಂಚರಾಜ್ಯ ಚುನಾವಣೆ 2026| ಮೂರು ರಾಜ್ಯಗಳ ಸಿಎಂಗಳಿಗೆ ಭಾರೀ ಸೋಲು Read More »