ಸಮಗ್ರ ಸಮಾಚಾರ

ಇಸ್ರೇಲ್- ಲೆಬನಾನ್ ನಡುವೆ 10 ದಿನಗಳ ಕದನ ವಿರಾಮ ಘೋಷಣೆ

ಸಮಗ್ರ ನ್ಯೂಸ್: ಮಧ್ಯಪ್ರಾಚ್ಯದಲ್ಲಿ ಶಾಂತಿ ಸ್ಥಾಪನೆಯ ನಿಟ್ಟಿನಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇಸ್ರೇಲ್ ಮತ್ತು ಲೆಬನಾನ್ ನಡುವೆ 10 ದಿನಗಳ ತಾತ್ಕಾಲಿಕ ಕದನ ವಿರಾಮವನ್ನು ಘೋಷಿಸಿದ್ದಾರೆ. ದೀರ್ಘಕಾಲದ ಸಂಘರ್ಷಕ್ಕೆ ಅಂತ್ಯ ಹಾಡುವ ಉದ್ದೇಶದಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಈ ಕುರಿತು ಮಾತನಾಡಿದ ಟ್ರಂಪ್, “ಈ ಪ್ರಕ್ರಿಯೆಯ ಭಾಗವಾಗಿರುವುದು ನನ್ನ ಪಾಲಿನ ಗೌರವವಾಗಿದೆ. ಈ ಪ್ರದೇಶದಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ತರುವುದು ನಮ್ಮ ಪ್ರಮುಖ ಗುರಿ,” ಎಂದು ತಿಳಿಸಿದ್ದಾರೆ. ಟ್ರಂಪ್ ಅವರ ಈ […]

ಇಸ್ರೇಲ್- ಲೆಬನಾನ್ ನಡುವೆ 10 ದಿನಗಳ ಕದನ ವಿರಾಮ ಘೋಷಣೆ Read More »

ಹವಾಮಾನ ವರದಿ| ಬಿಸಿಲ ಬೇಗೆ ತಣಿಸಲು ಬರಲಿದ್ದಾನೆ ಮಳೆರಾಯ| ಶಾಖದ ಅಲೆಯ ನಡುವೆ ಕೆಲವು ಜಿಲ್ಲೆಗಳಿಗೆ ಮಳೆ ಮುನ್ಸೂಚನೆ ನೀಡಿದ ಐಎಂಡಿ

ಸಮಗ್ರ ನ್ಯೂಸ್: ಕರ್ನಾಟಕದಾದ್ಯಂತ ಬೇಸಿಗೆಯ ಬಿಸಿಲು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಹಲವು ಜಿಲ್ಲೆಗಳಲ್ಲಿ ತಾಪಮಾನವು ದಾಖಲೆ ಮಟ್ಟವನ್ನು ತಲುಪುತ್ತಿದೆ. ಇದರ ನಡುವೆಯೇ, ರಾಜ್ಯದ ಕೆಲವು ಭಾಗಗಳಲ್ಲಿ ವರುಣನ ಆಗಮನವಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜಧಾನಿ ಬೆಂಗಳೂರಿನಲ್ಲಿ ಇಂದು ಗರಿಷ್ಠ ತಾಪಮಾನವು 35°C ನಿಂದ 37°C ವರೆಗೆ ದಾಖಲಾಗುವ ಸಾಧ್ಯತೆಯಿದೆ. ನಗರದಲ್ಲಿ ಮೋಡಕವಿದ ವಾತಾವರಣ ಕಂಡುಬಂದರೂ, ಸೆಖೆಯ ಪ್ರಮಾಣ ಹೆಚ್ಚಿರಲಿದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳ ಕೆಲವು ಭಾಗಗಳಲ್ಲಿ ಇಂದು ಸಂಜೆ

ಹವಾಮಾನ ವರದಿ| ಬಿಸಿಲ ಬೇಗೆ ತಣಿಸಲು ಬರಲಿದ್ದಾನೆ ಮಳೆರಾಯ| ಶಾಖದ ಅಲೆಯ ನಡುವೆ ಕೆಲವು ಜಿಲ್ಲೆಗಳಿಗೆ ಮಳೆ ಮುನ್ಸೂಚನೆ ನೀಡಿದ ಐಎಂಡಿ Read More »

ಬೆಳ್ತಂಗಡಿ: ನಾಯಿ ಅಡ್ಡ ಬಂದು ರಿಕ್ಷಾ ಪಲ್ಟಿ; ಚಾಲಕ ಸಾವು

ಸಮಗ್ರ ನ್ಯೂಸ್: ನಾಯಿಯೊಂದು ಏಕಾಏಕಿ ರಸ್ತೆಗೆ ಅಡ್ಡಬಂದ ಪರಿಣಾಮ ಆಟೋ ರಿಕ್ಷಾ ಪಲ್ಟಿಯಾಗಿ ಆಟೋ ಚಾಲಕ ಸಾವನಪ್ಪಿದ ಘಟನೆ ಅಳದಂಗಡಿಯಲ್ಲಿ ನಡೆದಿದೆ. ಮೃತರನ್ನು ನಾವರ ಗ್ರಾಮದ ಹಾರಡ್ಡೆ ನಿವಾಸಿ ದೇವಪ್ಪ @ ಸುಧಾಕರ (37) ಎಂದು ಗುರುತಿಸಲಾಗಿದೆ. ಅಳದಂಗಡಿ ಸತ್ಯದೇವತೆ ದೇವಸ್ಥಾನದ ಬಳಿ ಈ ಅಪಘಾತ ಸಂಭವಿಸಿದೆ. ಗುರುವಾಯನಕೆರೆ ಕಡೆಯಿಂದ ಅಳದಂಗಡಿ ಕಡೆ ಬಾಡಿಗೆ ಮುಗಿಸಿ ವಾಪಸ್ ತೆರಳುತ್ತಿದ್ದ ವೇಳೆ, ರಸ್ತೆ ಮೇಲೆ ಏಕಾಏಕಿ ನಾಯಿ ಅಡ್ಡಬಂದ ಹಿನ್ನೆಲೆಯಲ್ಲಿ ಚಾಲಕ ನಿಯಂತ್ರಣ ಕಳೆದುಕೊಂಡು ಆಟೋ ಪಲ್ಟಿಯಾಗಿದೆ. ಈ

ಬೆಳ್ತಂಗಡಿ: ನಾಯಿ ಅಡ್ಡ ಬಂದು ರಿಕ್ಷಾ ಪಲ್ಟಿ; ಚಾಲಕ ಸಾವು Read More »

ಪುತ್ತೂರು: ಮಹಾಲಿಂಗೇಶ್ವರ ಜಾತ್ರಾ ಹಿನ್ನಲೆ| ಎ.17ರಂದು ಮದ್ಯ ಮಾರಾಟ ನಿಷೇಧಿಸಿ ದ.ಕ ಜಿಲ್ಲಾಧಿಕಾರಿ ಆದೇಶ

ಸಮಗ್ರ ನ್ಯೂಸ್: ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆ ಪ್ರಯುಕ್ತ ಇದೇ 16ರಂದು ಬಲ್ನಾಡು ಶ್ರೀದಂಡನಾಯಕ ಉಳ್ಳಾಲ್ತಿ ದೈವಗಳ ಭೇಟಿ, ಕೆರೆ ಉತ್ಸವ, ತೆಪ್ಪೋತ್ಸವ ಹಾಗೂ ಇದೇ 17 ರಂದು ಬ್ರಹ್ಮರಥೋತ್ಸವ ಮತ್ತು ಇದೇ 18ರಂದು ಅವಭೃತ ಸ್ನಾನಕ್ಕಾಗಿ ದೇವರು ವೀರಮಂಗಲಕ್ಕೆ ತೆರಳುವ ಸಂಪ್ರದಾಯಗಳು ನಡೆಯಲಿವೆ. ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಈ ಅವಧಿಯಲ್ಲಿ ಮದ್ಯ ಮಾರಾಟವನ್ನು ಜಿಲ್ಲಾಡಳಿತ ನಿಷೇಧಿಸಿದೆ. ಪುತ್ತೂರು ನಗರ ಠಾಣಾ ವ್ಯಾಪ್ತಿಯ ಬಾರ್ ಮತ್ತು ವೈನ್ ಶಾಪ್‍ಗಳನ್ನು 17ರಂದು ಬೆಳಿಗ್ಗೆ 6ರಿಂದ

ಪುತ್ತೂರು: ಮಹಾಲಿಂಗೇಶ್ವರ ಜಾತ್ರಾ ಹಿನ್ನಲೆ| ಎ.17ರಂದು ಮದ್ಯ ಮಾರಾಟ ನಿಷೇಧಿಸಿ ದ.ಕ ಜಿಲ್ಲಾಧಿಕಾರಿ ಆದೇಶ Read More »

ಪ್ರಧಾನಿ ಮೋದಿಗೆ 18 ಬೇಡಿಕೆ ಸಲ್ಲಿಸಿದ ಸಿಎಂ ಸಿದ್ದು| ಕಿವಿಯಲ್ಲಿ ಗುಟ್ಟಾಗಿ ಮಾತ್ನಾಡಿಕೊಂಡಿದ್ದೇನು?

ಸಮಗ್ರ ನ್ಯೂಸ್: ರಾಜ್ಯಕ್ಕೆ ಬುಧವಾರ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆತ್ಮೀಯವಾಗಿ ಸ್ವಾಗತಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರಾಜ್ಯದ ವಿವಿಧ ರೈಲ್ವೆ, ನೀರಾವರಿ, ರಸ್ತೆ ಯೋಜನೆಗಳ ಮಂಜೂರಾತಿ ಹಾಗೂ ಅನುದಾನ ಬಿಡುಗಡೆ, ಜಲಜೀವನ್‌ ಮಿಷನ್‌ನ ಬಾಕಿ ಮೊತ್ತ ಬಿಡುಗಡೆ, ಬೆಂಗಳೂರು ಅಭಿವೃದ್ಧಿಗೆ ವಿಶೇಷ ಅನುದಾನ, ಹಣಕಾಸು ಆಯೋಗದ ಶಿಫಾರಸಿನಂತೆ ರಾಜ್ಯಕ್ಕೆ ವಿಶೇಷ ಅನುದಾನ ನೀಡಿಕೆ ಸೇರಿದಂತೆ ಒಟ್ಟು 18 ಬೇಡಿಕೆಗಳ ಮನವಿ ಪತ್ರ ಸಲ್ಲಿಸಿದರು. ಆದಿಚುಂಚನಗಿರಿ ಮಠದ ಶ್ರೀಗುರು ಭೈರವೈಕ್ಯ ಮಂದಿರ ಉದ್ಘಾಟನೆಗಾಗಿ ರಾಜ್ಯಕ್ಕೆ ಆಗಮಿಸಿದ

ಪ್ರಧಾನಿ ಮೋದಿಗೆ 18 ಬೇಡಿಕೆ ಸಲ್ಲಿಸಿದ ಸಿಎಂ ಸಿದ್ದು| ಕಿವಿಯಲ್ಲಿ ಗುಟ್ಟಾಗಿ ಮಾತ್ನಾಡಿಕೊಂಡಿದ್ದೇನು? Read More »

ಮಂತ್ರಾಲಯದ ಬಳಿ ಭೀಕರ ಅಪಘಾತ| ರಾಯರ ದರ್ಶನ ಮುಗಿಸಿ ಮರಳುತ್ತಿದ್ದ 8 ಮಂದಿ ಸಾವು

ಸಮಗ್ರ ನ್ಯೂಸ್: ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದು ಮರಳುತ್ತಿದ್ದ ಭಕ್ತರ ಬಾಳಿನಲ್ಲಿ ವಿಧಿ ಅಟ್ಟಹಾಸ ಮೆರೆದಿದೆ. ಮಂತ್ರಾಲಯದ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಚಿಕ್ಕಬಳ್ಳಾಪುರ ಮೂಲದ ಎಂಟು ಮಂದಿ ಭಕ್ತರು ಸ್ಥಳದಲ್ಲೇ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಮಂತ್ರಾಲಯ ತಾಲೂಕಿನ ಕಲ್ಲುದೇವರಕುಂಟ ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ಚಿಕ್ಕಬಳ್ಳಾಪುರ ಜಿಲ್ಲೆಯಿಂದ ಮಂತ್ರಾಲಯಕ್ಕೆ ತೆರಳಿದ್ದ ಭಕ್ತರು ಸಂಚರಿಸುತ್ತಿದ್ದ ಬೊಲೆರೊ ವಾಹನಕ್ಕೆ, ವೇಗವಾಗಿ ಬಂದ ಸಿಮೆಂಟ್ ಮತ್ತು ಜಲ್ಲಿಕಲ್ಲು ಸಾಗಿಸುತ್ತಿದ್ದ ಟ್ಯಾಂಕರ್ ಮುಖಾಮುಖಿ

ಮಂತ್ರಾಲಯದ ಬಳಿ ಭೀಕರ ಅಪಘಾತ| ರಾಯರ ದರ್ಶನ ಮುಗಿಸಿ ಮರಳುತ್ತಿದ್ದ 8 ಮಂದಿ ಸಾವು Read More »

‘ನೋಡಲು ತನ್ನಂತಿಲ್ಲ’ ಎಂಬ ಕಾರಣಕ್ಕೆ ಪುತ್ರನನ್ನೇ ಕೊಲೆಗೈದ ತಂದೆ!!

ಸಮಗ್ರ ನ್ಯೂಸ್: ʼನೋಡಲು ತನ್ನಂತಿಲ್ಲʼ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬ ತನ್ನ ಪುತ್ರನನ್ನೇ ಕೊಲೆ ಮಾಡಿದ ವಿಲಕ್ಷಣ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ. ವಿಜಯಪುರ ತಾಲೂಕಿನ ನಾಗಠಾಣ ಗ್ರಾಮದಲ್ಲಿ ಕಳೆದ ಮಾ. 15ರಂದು ಈ ಘಟನೆ ನಡೆದಿದೆ. ಈ ಮೊದಲು ಮಗು ಕಾಣೆಯಾಗಿದೆ ಎಂದು ದೂರು ಕೊಟ್ಟಿದ್ದ ಕುಟುಂಬಸ್ಥರೇ ಇದೀಗ ತಂದೆಯೇ ಪುತ್ರನನ್ನು ಕೊಂದಿದ್ದಾನೆಂದು ದೂರು ದಾಖಲಿಸಿದ್ದು, ಇಡೀ ಪ್ರಕರಣ ರೋಚಕ ತಿರುವು ಪಡೆದಿದೆ. ವಿಜಯಪುರ ತಾಲೂಕಿನ ನಾಗಠಾಣ ಗ್ರಾಮದ ಮಲ್ಲಿಕಾರ್ಜುನ ಅರಕೇರಿ ಎಂಬಾತ ಮಾ. 15ರಂದು ತನ್ನ

‘ನೋಡಲು ತನ್ನಂತಿಲ್ಲ’ ಎಂಬ ಕಾರಣಕ್ಕೆ ಪುತ್ರನನ್ನೇ ಕೊಲೆಗೈದ ತಂದೆ!! Read More »

ಬಿಹಾರದ ನೂತನ ಸಿಎಂ ಆಗಿ‌ ಸಾಮ್ರಾಟ್ ಚೌಧರಿ ಪ್ರಮಾಣ ಸ್ವೀಕಾರ

ಸಮಗ್ರ ನ್ಯೂಸ್: ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಸಾಮ್ರಾಟ್ ಚೌಧರಿ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಮೂಲಕ ಬಿಹಾರ ಸರ್ಕಾರವನ್ನು ಮುನ್ನಡೆಸಲಿರುವ ಭಾರತೀಯ ಜನತಾ ಪಾರ್ಟಿಯ (ಬಿಜೆಪಿ) ಮೊದಲ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದಾರೆ. ಸಾಮ್ರಾಟ್ ಚೌಧರಿ ಅವರು ಬಿಹಾರದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಇಂದು ಬೆಳಿಗ್ಗೆ 11 ಗಂಟೆಗೆ ಪ್ರಮಾಣವಚನ ಸ್ವೀಕರಿಸುವ ಮುನ್ನ, ಪಾಟ್ನಾದ ಪಂಚಮುಖಿ ಹನುಮಾನ್ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ನಿತೀಶ್ ಕುಮಾರ್ ಅವರು ಬಿಹಾರದ ಸುದೀರ್ಘ ಅವಧಿಯ ಮುಖ್ಯಮಂತ್ರಿಯಾಗಿ

ಬಿಹಾರದ ನೂತನ ಸಿಎಂ ಆಗಿ‌ ಸಾಮ್ರಾಟ್ ಚೌಧರಿ ಪ್ರಮಾಣ ಸ್ವೀಕಾರ Read More »

TCS ನ ನಾಸಿಕ್ ಶಾಖೆಯಲ್ಲಿ ಕಾರ್ಪೊರೇಟ್ ಲವ್ ಜಿಹಾದ್| ಏಳು ಮಂದಿಯ ಬಂಧನ

ಸಮಗ್ರ ನ್ಯೂಸ್: ಭಾರತದ ಅತಿದೊಡ್ಡ ಸಾಫ್ಟ್‌ವೇರ್ ಸಂಸ್ಥೆ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (TCS) ನಾಸಿಕ್ ಶಾಖೆಯಲ್ಲಿ ನಡೆದಿದೆ ಎನ್ನಲಾದ ಘಟನೆಗಳು ಇಡೀ ಐಟಿ ಲೋಕವನ್ನೇ ಬೆಚ್ಚಿಬೀಳಿಸಿವೆ. ಕೇವಲ ವೃತ್ತಿಪರ ಕೆಲಸಕ್ಕೆ ಸೀಮಿತವಾಗಬೇಕಿದ್ದ ಕಚೇರಿ ಆವರಣದಲ್ಲಿ ಲೈಂಗಿಕ ದೌರ್ಜನ್ಯ, ಮಾನಸಿಕ ಕಿರುಕುಳ ಮತ್ತು ವ್ಯವಸ್ಥಿತ ಮತಾಂತರದ ಸಂಚು ನಡೆಯುತ್ತಿತ್ತು ಎಂಬ ಸ್ಫೋಟಕ ಮಾಹಿತಿ ತನಿಖೆಯಿಂದ ಹೊರಬಂದಿದೆ. ಆರೋಪಿಗಳು ಹಿಂದೂ ಹುಡುಗಿಯರನ್ನು ಪ್ರೀತಿಸಿ ಮದುವೆಯಾಗುವಂತೆ ಪರಸ್ಪರ ಪ್ರಚೋದಿಸುತ್ತಿದ್ದರು ಮತ್ತು ಈ ಕೆಲಸಕ್ಕಾಗಿ ಅವರಿಗೆ ಹಣದ ಆಮಿಷ ಒಡ್ಡಲಾಗುತ್ತಿತ್ತು ಎಂದು ಪ್ರತ್ಯಕ್ಷದರ್ಶಿ

TCS ನ ನಾಸಿಕ್ ಶಾಖೆಯಲ್ಲಿ ಕಾರ್ಪೊರೇಟ್ ಲವ್ ಜಿಹಾದ್| ಏಳು ಮಂದಿಯ ಬಂಧನ Read More »

ಉಡುಪಿ: ವಂಡ್ಸೆ ಸರ್ಕಾರಿ ಶಾಲೆಯಲ್ಲಿ ರಾಜ್ಯದ ಮೊದಲ ಎಐ ಟೀಚರ್ ಎಂಟ್ರಿ| ಮಕ್ಕಳಿಗೆ ಖುಷಿಯಿಂದ ಪಾಠ ಹೇಳ್ತಾಳೆ ‘ಐರಿಸ್’

ಸಮಗ್ರ ನ್ಯೂಸ್: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬೈಂದೂರು ಶೈಕ್ಷಣಿಕ ವಲಯದ ವಂಡ್ಸೆ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈಗ ಹೊಸ ಸಂಚಲನ ಮೂಡಿದೆ. ರಾಜ್ಯದ ಸರ್ಕಾರಿ ಶಾಲೆಯೊಂದಕ್ಕೆ ಮೊಟ್ಟಮೊದಲ ಬಾರಿಗೆ ಪ್ರವೇಶ ಪಡೆದಿರುವ ‘ಐರಿಸ್’ (Iris) ಎಂಬ ಎಐ (ಆರ್ಟಿಫಿಶಿಯಲ್ ಇಂಟೆಲಿಜೆನ್ಸ್) ಶಿಕ್ಷಕಿ ಇದೀಗ ಯಶಸ್ವಿಯಾಗಿ ತನ್ನ ಬೋಧನಾ ಕಾರ್ಯವನ್ನು ಆರಂಭಿಸಿದ್ದಾಳೆ. ಕಳೆದ ಶನಿವಾರ, ಅಂದರೆ ಏಪ್ರಿಲ್ 11 ರಂದು ಶಾಲೆಯಲ್ಲಿ ಈ ವಿನೂತನ ಎಐ ರೋಬೋಟ್ ಟೀಚರ್ ಅನ್ನು ಅದ್ದೂರಿಯಾಗಿ ಲೋಕಾರ್ಪಣೆ ಮಾಡಲಾಗಿದ್ದು,

ಉಡುಪಿ: ವಂಡ್ಸೆ ಸರ್ಕಾರಿ ಶಾಲೆಯಲ್ಲಿ ರಾಜ್ಯದ ಮೊದಲ ಎಐ ಟೀಚರ್ ಎಂಟ್ರಿ| ಮಕ್ಕಳಿಗೆ ಖುಷಿಯಿಂದ ಪಾಠ ಹೇಳ್ತಾಳೆ ‘ಐರಿಸ್’ Read More »