ಸಮಗ್ರ ಸಮಾಚಾರ

ಪುತ್ತೂರು: ದೇವಸ್ಥಾನದ ಅಭಿವೃದ್ಧಿ ಆರೋಪಗಳಿಗೆ ಖಡಕ್ ತಿರುಗೇಟು‌ ನೀಡಿದ ಅಶೋಕ್ ರೈ

ಸಮಗ್ರ ನ್ಯೂಸ್: “ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿಯನ್ನು ನೋಡಿ ನಿಮಗೆ ಸಹಿಸಲು ಆಗದಿದ್ದರೆ, ದಯಮಾಡಿ ದೇವರಿಗಾಗಿ ಅದನ್ನು ಸಹಿಸಿಕೊಳ್ಳಿ” ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ವಿರೋಧಿಗಳು ಹಾಗೂ ಅಪಪ್ರಚಾರ ಮಾಡುವವರಿಗೆ ಖಾರವಾಗಿ ತಿರುಗೇಟು ನೀಡಿದ್ದಾರೆ. ದೇವಸ್ಥಾನದ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಕೇಳಿಬಂದಿರುವ ಆರೋಪಗಳ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕ್ಷೇತ್ರದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳ ಕುರಿತು ಮುಕ್ತವಾಗಿ ಸ್ಪಷ್ಟನೆ ನೀಡಿದರು.ಕ್ಷೇತ್ರಕ್ಕೆ ವೈಯಕ್ತಿಕವಾಗಿ 1 ಕೋಟಿ ರೂ. ಹಾಗೂ ಚಿನ್ನ ದೇಣಿಗೆ: “ಪುತ್ತೂರು

ಪುತ್ತೂರು: ದೇವಸ್ಥಾನದ ಅಭಿವೃದ್ಧಿ ಆರೋಪಗಳಿಗೆ ಖಡಕ್ ತಿರುಗೇಟು‌ ನೀಡಿದ ಅಶೋಕ್ ರೈ Read More »

ಗ್ರಾಹಕರಿಗೆ ಬಿಗ್ ರಿಲೀಫ್| ಗ್ಯಾಸ್‌ ಸಿಲಿಂಡರ್ ಬುಕ್ಕಿಂಗ್ ಅವಧಿ ಇಳಿಕೆ

ಸಮಗ್ರ ನ್ಯೂಸ್: ಮಧ್ಯಪ್ರಾಚ್ಯ ಸಂಘರ್ಷದಿಂದ‌ ಗ್ಯಾಸ್ ಬುಕ್ಕಿಂಗ್ ಗೆ ಸಂಬಂಧಿಸಿದಂತೆ ಕಠಿಣ ನಿಯಮಗಳನ್ನು ಜಾರಿಗೆ ತಂದಿದ್ದ ಕೇಂದ್ರ ಸರ್ಕಾರ ಈ ನಿಯಮಗಳಲ್ಲಿ ಮತ್ತೊಮ್ಮೆ ಬದಲಾವಣೆ ಮಾಡಿದ್ದು, ಜನರಿಗೆ ಕೊಂಚ ರಿಲೀಫ್ ಸಿಕ್ಕಿದೆ. ಇತ್ತೀಚೆಗೆ ದೇಶದಲ್ಲಿ ಗ್ಯಾಸ್ ಕೊರತೆ ಉಂಟಾದ ಹಿನ್ನೆಲೆಯಲ್ಲಿ, ಒಂದು ಸಿಲಿಂಡರ್ ಪಡೆದ ಬಳಿಕ ಎರಡನೇ ಸಿಲಿಂಡರ್ ಬುಕ್ ಮಾಡಲು 45 ದಿನಗಳ ಕಾಲ ಕಾಯಬೇಕು ಎಂಬ ನಿಯಮವನ್ನು ಸರ್ಕಾರ ಜಾರಿಗೆ ತಂದಿತ್ತು. ಆದರೆ ಇದೀಗ ಕೇಂದ್ರ ಸರ್ಕಾರ ಈ ನಿಯಮವನ್ನು ಬದಲಾಯಿಸಿದೆ. ಕೇಂದ್ರ ಸಚಿವ

ಗ್ರಾಹಕರಿಗೆ ಬಿಗ್ ರಿಲೀಫ್| ಗ್ಯಾಸ್‌ ಸಿಲಿಂಡರ್ ಬುಕ್ಕಿಂಗ್ ಅವಧಿ ಇಳಿಕೆ Read More »

ಬೆಳ್ಳಾರೆ: ಪತ್ನಿ ಹಾಗೂ ಅತ್ತೆಗೆ ಚಾಕುವಿನಿಂದ ಇರಿದು ಪರಾರಿ; ಆರೋಪಿ ಅರೆಸ್ಟ್

ಸಮಗ್ರ ನ್ಯೂಸ್: ಪೆರುವಾಜೆ ಗ್ರಾಮದ ಕಾನಾವು ಸಮೀಪದ ಅನವುಗುಂಡಿಯಲ್ಲಿ ಪತ್ನಿ ಹಾಗೂ ಅತ್ತೆಗೆ ಚೂರಿಯಿಂದ ಭೀಕರವಾಗಿ ಇರಿದು ಕಾಡಿನತ್ತ ಪರಾರಿಯಾಗಿದ್ದ ಆರೋಪಿಯನ್ನು ಬೆಳ್ಳಾರೆ ಠಾಣೆ ಪೊಲೀಸರು ಯಶಸ್ವಿಯಾಗಿ ವಶಕ್ಕೆ ಪಡೆದಿದ್ದಾರೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಅತ್ತೆ ಕುಸುಮ ಹಾಗೂ ಪತ್ನಿ ವಿನುತಾ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅನವುಗುಂಡಿ ನಿವಾಸಿ ಗಣೇಶ ಎಂಬಾತನೇ ಈ ದೌರ್ಜನ್ಯ ಎಸಗಿದ ಆರೋಪಿ.ಆರೋಪಿ ಗಣೇಶ ಸಾಮಾನ್ಯವಾಗಿ ಪತ್ನಿಯ ಮನೆಯಲ್ಲೇ ವಾಸವಾಗಿದ್ದ. ಸೆಪ್ಟೆಂಬರ್ 6ರಂದು ಭಾನುವಾರ ಮಧ್ಯಾಹ್ನ

ಬೆಳ್ಳಾರೆ: ಪತ್ನಿ ಹಾಗೂ ಅತ್ತೆಗೆ ಚಾಕುವಿನಿಂದ ಇರಿದು ಪರಾರಿ; ಆರೋಪಿ ಅರೆಸ್ಟ್ Read More »

ಸುಬ್ರಹ್ಮಣ್ಯ: ಹೊತ್ತಿ ಉರಿದ‌ KSRTC ಬಸ್| ಚಾಲಕನ ಸಮಯಪ್ರಜ್ಞೆಯಿಂದ 37 ಪ್ರಯಾಣಿಕರು ಪಾರು

ಸಮಗ್ರ ನ್ಯೂಸ್: ಕುಕ್ಕೆ ಸುಬ್ರಹ್ಮಣ್ಯದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ (KSRTC) ಬಸ್‌ ಆಕಸ್ಮಿಕವಾಗಿ ಬೆಂಕಿಗಾಹುತಿಯಾದ ಘಟನೆ ಸುಬ್ರಹ್ಮಣ್ಯ-ಗುಂಡ್ಯ ರಾಜ್ಯ ಹೆದ್ದಾರಿಯ ಎರ್ಮಾಯಿಲ್ ಸಮೀಪ ಶನಿವಾರ ರಾತ್ರಿ ಸಂಭವಿಸಿದೆ. ಚಾಲಕನ ತ್ವರಿತ ಸಮಯಪ್ರಜ್ಞೆಯಿಂದಾಗಿ ಬಸ್‌ನಲ್ಲಿದ್ದ 37 ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಬಿ.ಸಿ‌ ರೋಡ್ ಡಿಪೋಗೆ ಸೇರಿದ ಕೆಎಸ್‌ಆರ್‌ಟಿಸಿ ಬಸ್ ಕುಕ್ಕೆ ಸುಬ್ರಹ್ಮಣ್ಯದಿಂದ ಹಾಸನ ಮಾರ್ಗವಾಗಿ ಬೆಂಗಳೂರಿಗೆ ಸಂಚರಿಸುತ್ತಿತ್ತು. ರಾತ್ರಿ 9:15ರ ವೇಳೆಗೆ ಎರ್ಮಾಯಿಲ್ ತಲುಪುತ್ತಿದ್ದಂತೆ ಬಸ್‌ನ ಇಂಜಿನ್ ಭಾಗದಲ್ಲಿ ಏಕಾಏಕಿ ದಟ್ಟ ಹೊಗೆ ಕಾಣಿಸಿಕೊಂಡಿದೆ. ಇದನ್ನು ತಕ್ಷಣವೇ ಗಮನಿಸಿದ

ಸುಬ್ರಹ್ಮಣ್ಯ: ಹೊತ್ತಿ ಉರಿದ‌ KSRTC ಬಸ್| ಚಾಲಕನ ಸಮಯಪ್ರಜ್ಞೆಯಿಂದ 37 ಪ್ರಯಾಣಿಕರು ಪಾರು Read More »

ಮೈಸೂರು ದಸರಾ ಮಹೋತ್ಸವಕ್ಕೆ ಭರ್ಜರಿ ಸಿದ್ಧತೆ| ಪಟ್ಟದಾನೆಯಾಗಿ ಶ್ರೀಕಂಠ, ನಿಶಾನೆ ಆನೆಯಾಗಿ ಏಕಲವ್ಯ

ಸಮಗ್ರ ನ್ಯೂಸ್: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಭರದಿಂದ ಸಾಗುತ್ತಿವೆ. ಈ ಬಾರಿ ದಸರಾ ಜಂಬೂಸವಾರಿಯ ಪ್ರಮುಖ ಆನೆಗಳ ಆಯ್ಕೆ ಕುರಿತು ಕುತೂಹಲ ಮೂಡಿದ್ದು, ಪಟ್ಟದ ಆನೆಯಾಗಿ ಶ್ರೀಕಂಠ ಹಾಗೂ ನಿಶಾನೆ ಆನೆಯಾಗಿ ಏಕಲವ್ಯ ಆಯ್ಕೆಯಾಗಿದ್ದಾರೆ ಎಂದು ವರದಿಯಾಗಿದೆ.ರಾಜಮಾತೆ ಪ್ರಮೋದಾ ದೇವಿ ಒಡೆಯರ್ ಈ ಆಯ್ಕೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಮೈಸೂರು ದಸರಾ ಮಹೋತ್ಸವ 2026ಕ್ಕೆ ಗಜಪಡೆ ಸಜ್ಜಾಗುತ್ತಿದ್ದು, ಈ ಬಾರಿ ಪಟ್ಟದ ಆನೆಯ ಜವಾಬ್ದಾರಿಯನ್ನು ಶ್ರೀಕಂಠ ಮತ್ತೊಮ್ಮೆ ವಹಿಸಿಕೊಳ್ಳಲಿದ್ದಾನೆ. ನಿಶಾನೆ ಆನೆಯಾಗಿ

ಮೈಸೂರು ದಸರಾ ಮಹೋತ್ಸವಕ್ಕೆ ಭರ್ಜರಿ ಸಿದ್ಧತೆ| ಪಟ್ಟದಾನೆಯಾಗಿ ಶ್ರೀಕಂಠ, ನಿಶಾನೆ ಆನೆಯಾಗಿ ಏಕಲವ್ಯ Read More »

ಏಷ್ಯಾಕಪ್ ಕ್ರಿಕೆಟ್| ಸೆಮಿಫೈನಲ್ಸ್ ಗೆ ಲಗ್ಗೆ ಇಟ್ಟ ಭಾರತೀಯ ವನಿತಾ ತಂಡ

ಸಮಗ್ರ ನ್ಯೂಸ್: ದುಬೈನಲ್ಲಿ ನಡೆಯುತ್ತಿರುವ 2026 ರ ಮಹಿಳಾ ಟಿ20 ಏಷ್ಯಾಕಪ್​ನ ತನ್ನ ಎರಡನೇ ಪಂದ್ಯದಲ್ಲಿ, ಭಾರತ ತಂಡವು ಹಾಂಗ್ ಕಾಂಗ್ ಚೀನಾ ತಂಡವನ್ನು ಎದುರಿಸಿತ್ತು. ಈ ಪಂದ್ಯದಲ್ಲಿ ಮೊದಲೇ ನಿರೀಕ್ಷಿಸಿದಂತೆ ಹಾಂಗ್ ಕಾಂಗ್ ಚೀನಾ ತಂಡವನ್ನು ಮಣಿಸಿದ ಭಾರತ ಮಹಿಳಾ ತಂಡ ಸತತ ಎರಡನೇ ಗೆಲುವಿನೊಂದಿಗೆ ಸೆಮಿಫೈನಲ್​ಗೆ ತನ್ನ ಸ್ಥಾನವನ್ನು ಭದ್ರಪಡಿಸಿಕೊಂಡಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಹಾಂಗ್ ಕಾಂಗ್ ಚೀನಾ ಮೊದಲು ಬೌಲಿಂಗ್ ಮಾಡಲು ಆಯ್ಕೆ ಮಾಡಿಕೊಂಡಿತು. ಹೀಗಾಗಿ ಮೊದಲು ಬ್ಯಾಟಿಂಗ್‌ ಮಾಡಿದ ಟೀಂ

ಏಷ್ಯಾಕಪ್ ಕ್ರಿಕೆಟ್| ಸೆಮಿಫೈನಲ್ಸ್ ಗೆ ಲಗ್ಗೆ ಇಟ್ಟ ಭಾರತೀಯ ವನಿತಾ ತಂಡ Read More »

ನಾಳೆಯಿಂದ ನಾಗರಿಕರ ಮನೆಬಾಗಿಲಿಗೆ ರಾಜ್ಯ ಸರ್ಕಾರ| ಅಧಿಕೃತವಾಗಿ ಆರಂಭವಾಗಲಿದೆ ‘ಪ್ರಜಾಸೇವೆ’

ಸಮಗ್ರ ನ್ಯೂಸ್: ಸೆಪ್ಟೆಂಬರ್‌ 5ರಿಂದ ವಿಜಯನಗರ ಜಿಲ್ಲೆಯ ಕೂಡ್ಲಿಗಿ ಹೋಬಳಿಯಿಂದ “ಪ್ರಜಾಸೇವೆ” ಅಭಿಯಾನ ಆರಂಭವಾಗಲಿದ್ದು, ಪ್ರತಿ ಶನಿವಾರ ತಾಲೂಕು/ಹೋಬಳಿ ಮಟ್ಟದಲ್ಲಿ ಸಭೆಗಳು ನಡೆಯಲಿದ್ದು ಸ್ಥಳದಲ್ಲೇ ಅರ್ಜಿ ಹಾಗೂ ದೂರುಗಳನ್ನು ಆನ್‌ಲೈನ್‌ ಮೂಲಕ ಸಲ್ಲಿಸಲು ಗ್ರಾಮ ಒನ್‌ ಮಳಿಗೆಗಳ ವ್ಯವಸ್ಥೆ ಮಾಡಲಾಗಿದೆ. ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಲು ಪ್ರತಿ ಶನಿವಾರ ಬೆಳಗ್ಗೆ 10:00 ಗಂಟೆಯಿಂದ ಸಂಜೆಯವರೆಗೆ ತಾಲೂಕು ಮತ್ತು ಹೋಬಳಿ ಮಟ್ಟದಲ್ಲಿ ಸಭೆಗಳನ್ನು ಆಯೋಜಿಸಲಾಗುತ್ತದೆ. 1ನೇ ಮತ್ತು 3ನೇ ಶನಿವಾರ ತಾಲೂಕು ಮಟ್ಟದಲ್ಲಿ ಆಯಾ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ

ನಾಳೆಯಿಂದ ನಾಗರಿಕರ ಮನೆಬಾಗಿಲಿಗೆ ರಾಜ್ಯ ಸರ್ಕಾರ| ಅಧಿಕೃತವಾಗಿ ಆರಂಭವಾಗಲಿದೆ ‘ಪ್ರಜಾಸೇವೆ’ Read More »

ಇಂದು ಶ್ರೀ ಕೃಷ್ಣ ಜನ್ಮಾಷ್ಟಮಿ| ಕೃಷ್ಣನೊಲಿಸಲು ಹೇಗೆ ಪೂಜಿಸಬೇಕು ಗೊತ್ತಾ?

ಸಮಗ್ರ ನ್ಯೂಸ್: ಹಿಂದೂ ಧರ್ಮದ ಪ್ರಮುಖ ಹಬ್ಬಗಳಲ್ಲಿ ಒಂದಾದ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ದೇಶಾದ್ಯಂತ ಭಕ್ತಿಭಾವದಿಂದ ಆಚರಿಸಲಾಗುತ್ತದೆ. ಭಗವಾನ್ ವಿಷ್ಣುವಿನ ಅವತಾರವೆಂದು ನಂಬಲಾಗಿರುವ ಶ್ರೀಕೃಷ್ಣನ ಜನ್ಮವನ್ನು ಸ್ಮರಿಸುವ ಈ ಪವಿತ್ರ ದಿನವು ಭಕ್ತರಿಗೆ ವಿಶೇಷ ಮಹತ್ವ ಹೊಂದಿದೆ. 2026ರಲ್ಲಿ ಕೃಷ್ಣ ಜನ್ಮಾಷ್ಟಮಿ ಸೆಪ್ಟೆಂಬರ್ 4ರಂದು ಶುಕ್ರವಾರ ಆಚರಿಸಲಾಗುತ್ತಿದೆ. ಕೆಲವು ವೈಷ್ಣವ ಸಂಪ್ರದಾಯಗಳಲ್ಲಿ ಸೆಪ್ಟೆಂಬರ್ 5ರಂದು ಆಚರಣೆ ನಡೆಯಲಿದೆ. ಪುರಾಣಗಳ ಪ್ರಕಾರ, ಮಥುರಾದಲ್ಲಿ ದೇವಕಿ ಮತ್ತು ವಸುದೇವರ ಎಂಟನೇ ಮಗನಾಗಿ ಶ್ರೀಕೃಷ್ಣ ಜನಿಸಿದನು. ಆ ಸಂದರ್ಭದಲ್ಲಿ ಮಥುರಾದ ರಾಜನಾಗಿದ್ದ ಕಂಸನಿಗೆ

ಇಂದು ಶ್ರೀ ಕೃಷ್ಣ ಜನ್ಮಾಷ್ಟಮಿ| ಕೃಷ್ಣನೊಲಿಸಲು ಹೇಗೆ ಪೂಜಿಸಬೇಕು ಗೊತ್ತಾ? Read More »

ಡಿಜೆ ಸೌಂಡ್ಸ್ ಗೆ ಡ್ಯಾನ್ಸ್ ಮಾಡುತ್ತಿದ್ದ ಯುವಕ ಹೃದಯಾಘಾತದಿಂದ ಸಾವು

ಸಮಗ್ರ ನ್ಯೂಸ್: DJ ಸೌಂಡ್‌ಗೆ ಡ್ಯಾನ್ಸ್ ಮಾಡುತ್ತಿದ್ದ ಪಿಯು ವಿದ್ಯಾರ್ಥಿಯೊಬ್ಬ ಏಕಾಏಕಿ ಕುಸಿದು ಬಿದ್ದು ಮೃತಪಟ್ಟಿದ್ದಾನೆ. ತಕ್ಷಣ ಸ್ನೇಹಿತರು ಆತನನ್ನು ಆಸ್ಪತ್ರೆಗೆ ಕರೆದೊಯ್ದರಾದರೂ, ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ. ಸ್ನೇಹಿತನ ಮನೆಯ ಮದುವೆ ಸಂಭ್ರಮದಲ್ಲಿ DJ ಸೌಂಡ್‌ಗೆ ಡ್ಯಾನ್ಸ್ ಮಾಡುತ್ತಿದ್ದ ವೇಳೆ ಈ ದುರಂತ ಸಂಭವಿಸಿದ್ದು, ತೆಲಂಗಾಣದ ನಾರಾಯಣಪೇಟೆ ಜಿಲ್ಲೆಯ ಕೋಸ್ಗಿಯಲ್ಲಿ ನಡೆದಿದೆ. ನಾರಾಯಣಪೇಟೆ ಜಿಲ್ಲೆಯ ಕೋಸ್ಗಿ ಪುರಸಭೆ ವ್ಯಾಪ್ತಿಯ ಪೊತಿರೆಡ್ಡಿಪಲ್ಲಿಗೆ ಸೇರಿದ ದಸ್ತಯ್ಯ ಹಾಗೂ ಲಕ್ಷ್ಮೀ ದಂಪತಿಯ ಪುತ್ರ ರವಿತೇಜ (17) ಮೃತಪಟ್ಟ ವಿದ್ಯಾರ್ಥಿ. ರವಿತೇಜ

ಡಿಜೆ ಸೌಂಡ್ಸ್ ಗೆ ಡ್ಯಾನ್ಸ್ ಮಾಡುತ್ತಿದ್ದ ಯುವಕ ಹೃದಯಾಘಾತದಿಂದ ಸಾವು Read More »

ಬೆಳ್ತಂಗಡಿ: ಅಪಘಾತದ ಗಾಯಾಳು ಚಿಕಿತ್ಸೆ ಫಲಿಸದೇ ಸಾವು

ಸಮಗ್ರ ನ್ಯೂಸ್: ಬೆಳ್ತಂಗಡಿಯ ಪಣಕಜೆ ಮಸೀದಿ ಸಮೀಪ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕನೊಬ್ಬ ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಮಂಗಳವಾರ ಸಂಜೆ ನಡೆದಿದೆ. ಮೃತ ಯುವಕನನ್ನು ಉಜಿರೆ ನಿವಾಸಿ ರಿನ್ಸ್ ಶಿಬಿ (24) ಎಂದು ಗುರುತಿಸಲಾಗಿದೆ. ಮಂಗಳವಾರ ಸಂಜೆ ಪಣಕಜೆ ಮಸೀದಿ ಬಳಿ ತೆರಳುತ್ತಿದ್ದಾಗ ಟೆಂಪೋಗೆ ರಿನ್ಸ್ ಚಲಾಯಿಸುತ್ತಿದ್ದ ಬೈಕ್ ಹಿಂಬದಿಯಿಂದ ಢಿಕ್ಕಿಯಾಗಿದೆ. ಢಿಕ್ಕಿಯ ರಭಸಕ್ಕೆ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ರಿನ್ಸ್‌ನನ್ನು ತಕ್ಷಣವೇ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ

ಬೆಳ್ತಂಗಡಿ: ಅಪಘಾತದ ಗಾಯಾಳು ಚಿಕಿತ್ಸೆ ಫಲಿಸದೇ ಸಾವು Read More »