ಸಮಗ್ರ ಸಮಾಚಾರ

ಪುತ್ತೂರು: ವಿದ್ಯುತ್ ಶಾಕ್‌ನಿಂದ ಯುವಕ ಮೃತ್ಯು

ಸಮಗ್ರ ನ್ಯೂಸ್ : ವಿದ್ಯುತ್ ಶಾಕ್‌ನಿಂದ ಯುವಕ ಮೃತಪಟ್ಟ ಘಟನೆ  ನಿಡಳ್ಳಿ ಗ್ರಾಮದ ಬೋಳುಂಬುಡೆಯಲ್ಲಿ ಘಟನೆ ಮೇ 24ರ ರಾತ್ರಿ ಸಂಭವಿಸಿದೆ. ಬೇಲೂರಿನ ಅಂಕಿಹಳ್ಳಿ ನಿವಾಸಿ ಜೋಕಿಂ ಪಿಂಟೋ ಅವರ ಪುತ್ರ ರೋಶನ್ ಪಿಂಟೋ (29) ಮೃತಪಟ್ಟ ಯುವಕ.ಜೋಕಿಂ ಅವರು ಪತ್ನಿ ಇಬ್ಬರು ಮಕ್ಕಳೊಂದಿಗೆ ಅವರ ಮಾವನ ಮನೆ ನಿಡಳ್ಳಿಯ ಬೋಳುಂಬುಡೆಗೆ ಬಂದಿದ್ದರು. ರೋಶನ್ ರಾತ್ರಿ ಸ್ಥಾನ ಮುಗಿಸಿ ಬಟ್ಟೆ ಒಗೆಯುವ ಸ್ಥಳಕ್ಕೆ ಹೋದಾಗ ಅಲ್ಲಿದ್ದ ವಿದ್ಯುತ್ ವಯರ್ ನಿಂದ ಶಾಕ್ ಹೊಡೆದು ನೆಲಕ್ಕೆ ಬಿದ್ದಿರುವುದಾಗಿ ತಿಳಿದುಬಂದಿದೆ. ಗಂಭೀರ ಗಾಯಗೊಂಡ […]

ಪುತ್ತೂರು: ವಿದ್ಯುತ್ ಶಾಕ್‌ನಿಂದ ಯುವಕ ಮೃತ್ಯು Read More »

ದುಬೈನಲ್ಲಿ ರಸ್ತೆ ಅಪಘಾತ: ಕೋಮಾದಲ್ಲಿದ್ದ ಮಂಗಳೂರಿನ ಯುವತಿ ಸಾವು

ಸಮಗ್ರ ನ್ಯೂಸ್ : ದುಬೈನಲ್ಲಿ ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕೆಲವು ತಿಂಗಳುಗಳಿಂದ ಕೋಮಾದಲ್ಲಿದ್ದ ಯುವತಿಯೊಬ್ಬರು ಮೇ 24 ರಂದು ನಿಧನರಾಗಿದ್ದಾರೆ. ಮೃತರನ್ನು ಕಿನ್ನಿಗೋಳಿಯ ಪುನರೂರಿನ ವಾಸುದೇವ ಅಗ್ರಹಾರ ನಿವಾಸಿ ಶ್ರೀಲತಾ ತಂತ್ರಿ (26) ಎಂದು ಗುರುತಿಸಲಾಗಿದೆ. ಇವರು ಭರತನಾಟ್ಯ ಹಾಗೂ ಯಕ್ಷಗಾನ ಕಲಾವಿದೆಯಾಗಿದ್ದು, ನಿರೂಪಕಿಯಾಗಿಯೂ ಗುರುತಿಸಿಕೊಂಡಿದ್ದರು. ದುಬೈನಲ್ಲಿ ಉದ್ಯೋಗದಲ್ಲಿದ್ದ ಶ್ರೀಲತಾ ಅವರು ಕಳೆದ ವರ್ಷ ನವೆಂಬರ್‌ನಲ್ಲಿ ಅಲ್ಲಿ ನಡೆದ ರಸ್ತೆ ಅಪಘಾತವೊಂದರಲ್ಲಿ ಗಂಭೀರವಾಗಿ ಗಾಯಗೊಂಡು ಕೋಮಾ ಸ್ಥಿತಿಗೆ ತಲುಪಿದ್ದರು. ಪ್ರಾರಂಭದಲ್ಲಿ ಅವರಿಗೆ ದುಬೈನಲ್ಲೇ ಚಿಕಿತ್ಸೆ ನೀಡಲಾಗಿತ್ತು.

ದುಬೈನಲ್ಲಿ ರಸ್ತೆ ಅಪಘಾತ: ಕೋಮಾದಲ್ಲಿದ್ದ ಮಂಗಳೂರಿನ ಯುವತಿ ಸಾವು Read More »

ಬೆಳ್ತಂಗಡಿ: ಜೂ.1ರಿಂದ ಚಾರಣಿಗರ ನಿರ್ಬಂಧ ತೆರವು

ಸಮಗ್ರ ನ್ಯೂಸ್: ಬೆಳ್ತಂಗಡಿ ತಾಲೂಕಿನ ಚಾರಣ ಸ್ಥಳ, ಪ್ರಮುಖ ಜಲಪಾತ ಜೂನ್‌ 1 ರಿಂದ ಪ್ರವಾಸಿಗರ ವೀಕ್ಷಣೆಗೆ ತೆರೆದುಕೊಳ್ಳಲಿದೆ. ಕಳೆದ ಜನವರಿಯಲ್ಲಿ ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗದಿಂದ ನೇತ್ರಾವತಿ ಪೀಕ್‌, ಬಂಡಾಜೆ ಜಲಪಾತ, ಗಡಾಯಿಕಲ್ಲು ಮೊದಲಾದ ಸ್ಥಳಗಳಿಗೆ ಪ್ರವಾಸಿಗರಿಗೆ ನಿಷೇಧ ಹೇರಲಾಗಿತ್ತು. ಬೇಸಿಗೆಯಲ್ಲಿ ಬೆಂಕಿ ಪ್ರಕರಣ, ಕಾಡ್ಗಿಚ್ಚು ಇತ್ಯಾದಿ ಅನಾಹುತಗಳು ನಡೆಯದಂತೆ ಹಾಗೂ ಹುಲಿಗಣತಿ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿತ್ತು. ತಾಲೂಕಿನ ಮಲವಂತಿಗೆ ಗ್ರಾಮ ಅತೀ ಹೆಚ್ಚು ಪ್ರೇಕ್ಷಣೀಯ ಸ್ಥಳಗಳನ್ನು ಹೊಂದಿದೆ. ಇದು ಕುದುರೆಮುಖ ರಾಷ್ಟ್ರೀಯ ಉದ್ಯಾನವನದ

ಬೆಳ್ತಂಗಡಿ: ಜೂ.1ರಿಂದ ಚಾರಣಿಗರ ನಿರ್ಬಂಧ ತೆರವು Read More »

RCB vs GT:ಧರ್ಮಶಾಲಾದಲ್ಲಿ ಯಾರ ದರ್ಬಾರ್‌ ನಡೆಯುತ್ತೆ?

ಧರ್ಮಶಾಲಾ: 19ನೇ ಆವೃತ್ತಿಯ ಇಂಡಿಯನ್‌ ಪ್ರೀಮಿಯರ್‌ ಲೀಗ್‌ನ 70 ಪಂದ್ಯಗಳು ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು, ಇದೀಗ ಪ್ಲೇ ಆಫ್ ಪರ್ವ ಸುರುವಾಗಿದೆ. ಇಂದು (ಮಂಗಳವಾರ)ಸಂಜೆ 7:30ಕ್ಕೆ HPCA ಕ್ರೀಡಾಂಗಣ, ಧರ್ಮಶಾಲಾ,ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಸಮಬಲಶಾಲಿಗಳಾದ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮಾಜಿ ಚಾಂಪಿಯನ್ಸ್‌ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿ ಆಗಲಿವೆ. ಕ್ವಾಲಿಫೈಯರ್-1 ಫೈಟ್‌ ನಡೆಯಲಿದ್ದು, ಸಂಜೆ 7:30ಕ್ಕೆ ಪಂದ್ಯ ಶುರುವಾಗಲಿದೆ. ಬ್ಯಾಟಿಂಗ್ ಗೆ ಅನುಕೂಲಕರವಾದ ಧರ್ಮಶಾಲಾ ಪಿಚ್‌ನಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ತಂಡಗಳೇ ಹೆಚ್ಚುಬಾರಿ ಗೆದ್ದಿರುವುದು

RCB vs GT:ಧರ್ಮಶಾಲಾದಲ್ಲಿ ಯಾರ ದರ್ಬಾರ್‌ ನಡೆಯುತ್ತೆ? Read More »

ಗೃಹಲಕ್ಷ್ಮಿ ಮತ್ತು ಗೃಹ ಜ್ಯೋತಿ ಗ್ಯಾರಂಟಿ ಯೋಜನೆ ಪಡೆಯಲು ಹೊಸ ಅರ್ಜಿ ಕಡ್ಡಾಯ!

ಸಮಗ್ರ ನ್ಯೂಸ್ : ಗೃಹಲಕ್ಷ್ಮಿ ಮತ್ತು ಗೃಹ ಜ್ಯೋತಿ ಗ್ಯಾರಂಟಿ ಯೋಜನೆಗಳ ಲಾಭ ಅರ್ಹ ಫಲಾನುಭವಿಗಳಿಗಷ್ಟೇ ದೊರೆಯುವಂತೆ ಮಾಡಲು ಫಲಾನುಭವಿಗಳ ಪಟ್ಟಿಯನ್ನು ಪರಿಷ್ಕರಿಸಲು ಸರ್ಕಾರ ಚಿಂತನೆ ನಡೆಸಿದೆ. ಐದು ಗ್ಯಾರಂಟಿಗಳ ಪೈಕಿ ಗೃಹಲಕ್ಷ್ಮಿ ಮತ್ತು ಗೃಹ ಜ್ಯೋತಿ ಯೋಜನೆಗಳನ್ನು ಅರ್ಹರಲ್ಲದವರೂ ಪಡೆಯುತ್ತಿದ್ದು, ಫಲಾನುಭವಿಗಳ ಪಟ್ಟಿ ಪರಿಷ್ಕರಿಸುವಂತೆ ಭಾನುವಾರದ ಶಾಸಕರ ಸಭೆಯಲ್ಲಿ ಸಲಹೆಗಳು ಬಂದಿವೆ. ಅದರಲ್ಲೂ, ಫಲಾನುಭವಿಗಳ ಹಾಲಿ ಪಟ್ಟಿಯಲ್ಲಿ ಕೆಲವರು ಮೃತಪಟ್ಟಿದ್ದಾರೆ, ಬೇರೆಯವರು ಅವರ ಹೆಸರಿನಲ್ಲಿ ಸಹಾಯಧನ ಪಡೆಯುತ್ತಿದ್ದಾರೆ. ಹಾಗೆಯೇ, ಅರ್ಹರ ಹೆಸರಿನಲ್ಲಿ ಬೇರೆಯವರು ನೋಂದಣಿ ಮಾಡಿ

ಗೃಹಲಕ್ಷ್ಮಿ ಮತ್ತು ಗೃಹ ಜ್ಯೋತಿ ಗ್ಯಾರಂಟಿ ಯೋಜನೆ ಪಡೆಯಲು ಹೊಸ ಅರ್ಜಿ ಕಡ್ಡಾಯ! Read More »

ಗೃಹಲಕ್ಷ್ಮಿ ಮತ್ತು ಗೃಹ ಜ್ಯೋತಿ ಗ್ಯಾರಂಟಿ ಯೋಜನೆ ಪಡೆಯಲು ಹೊಸ ಅರ್ಜಿ ಕಡ್ಡಾಯ!

ಸಮಗ್ರ ನ್ಯೂಸ್ : ಗೃಹಲಕ್ಷ್ಮಿ ಮತ್ತು ಗೃಹ ಜ್ಯೋತಿ ಗ್ಯಾರಂಟಿ ಯೋಜನೆಗಳ ಲಾಭ ಅರ್ಹ ಫಲಾನುಭವಿಗಳಿಗಷ್ಟೇ ದೊರೆಯುವಂತೆ ಮಾಡಲು ಫಲಾನುಭವಿಗಳ ಪಟ್ಟಿಯನ್ನು ಪರಿಷ್ಕರಿಸಲು ಸರ್ಕಾರ ಚಿಂತನೆ ನಡೆಸಿದೆ. ಐದು ಗ್ಯಾರಂಟಿಗಳ ಪೈಕಿ ಗೃಹಲಕ್ಷ್ಮಿ ಮತ್ತು ಗೃಹ ಜ್ಯೋತಿ ಯೋಜನೆಗಳನ್ನು ಅರ್ಹರಲ್ಲದವರೂ ಪಡೆಯುತ್ತಿದ್ದು, ಫಲಾನುಭವಿಗಳ ಪಟ್ಟಿ ಪರಿಷ್ಕರಿಸುವಂತೆ ಭಾನುವಾರದ ಶಾಸಕರ ಸಭೆಯಲ್ಲಿ ಸಲಹೆಗಳು ಬಂದಿವೆ. ಅದರಲ್ಲೂ, ಫಲಾನುಭವಿಗಳ ಹಾಲಿ ಪಟ್ಟಿಯಲ್ಲಿ ಕೆಲವರು ಮೃತಪಟ್ಟಿದ್ದಾರೆ, ಬೇರೆಯವರು ಅವರ ಹೆಸರಿನಲ್ಲಿ ಸಹಾಯಧನ ಪಡೆಯುತ್ತಿದ್ದಾರೆ. ಹಾಗೆಯೇ, ಅರ್ಹರ ಹೆಸರಿನಲ್ಲಿ ಬೇರೆಯವರು ನೋಂದಣಿ ಮಾಡಿ

ಗೃಹಲಕ್ಷ್ಮಿ ಮತ್ತು ಗೃಹ ಜ್ಯೋತಿ ಗ್ಯಾರಂಟಿ ಯೋಜನೆ ಪಡೆಯಲು ಹೊಸ ಅರ್ಜಿ ಕಡ್ಡಾಯ! Read More »

ಪೆಟ್ರೋಲ್‌, ಡೀಸೆಲ್‌ ಬಳಿಕ  CNG ಬೆಲೆ ಏರಿಕೆ 

ನವದೆಹಲಿ: ಪೆಟ್ರೋಲ್‌, ಡೀಸೆಲ್‌ (Petrol, Diesel) ಬಳಿಕ ಇದೀಗ ದೆಹಲಿಯಲ್ಲಿ ಇಂದು ಬೆಳಗ್ಗೆ 6 ಗಂಟೆಯಿಂದ ಜಾರಿಗೆ ಬರುವಂತೆ ಸಂಕುಚಿತ ನೈಸರ್ಗಿಕ ಅನಿಲ (CNG) ಬೆಲೆಯನ್ನು 2 ರೂ. ಗಳಷ್ಟು ಹೆಚ್ಚಿಸಲಾಗಿದೆ. ಹೊಸ ಬೆಲೆಯ ಅನ್ವಯ ದೆಹಲಿಯಲ್ಲಿ ಪ್ರತಿ ಕೆಜಿ ಸಿಎನ್‌ಜಿ ಬೆಲೆ 8.09 ರೂ.ಗಳಿಗೆ ತಲುಪಿದೆ. ಜಾಗತಿಕ ಮತ್ತು ತೈಲ ಬಿಕ್ಕಟ್ಟಿನಿಂದ ಪೆಟ್ರೋಲ್‌, ಡೀಸೆಲ್‌ ದರ ಏರಿಕೆ ನಡುವೆಯೇ ಸಿಎನ್‌ಜಿ ಬೆಲೆ ಹೆಚ್ಚಳ ಕಂಡುಬಂದಿದೆ. ಇತ್ತೀಚಿನ ದಿನಗಳಲ್ಲಿ ಸಿಎನ್‌ಜಿ ಬೆಲೆಗಳನ್ನು ಎರಡು ಬಾರಿ ಹೆಚ್ಚಿಸಲಾಗಿದೆ. ಒಟ್ಟಾರೆಯಾಗಿ, ಕಳೆದ

ಪೆಟ್ರೋಲ್‌, ಡೀಸೆಲ್‌ ಬಳಿಕ  CNG ಬೆಲೆ ಏರಿಕೆ  Read More »

ಇನ್ಮುಂದೆ ಈ ಗ್ರಾಹಕರಿಗೆ ಸಿಗಲ್ಲ LPG ಸಿಲಿಂಡರ್!

ಸಮಗ್ರ  ನ್ಯೂಸ್ : ‘ಸ್ಟ್ರೇಟ್ ಆಫ್ ಹಾರ್ಮುಜ್’ ಸಮುದ್ರ ಮಾರ್ಗ (Strait of Hormuz) ಬಂದ್ ಆಗಿರುವ ಹಿನ್ನೆಲೆಯಲ್ಲಿ ಭಾರತದಲ್ಲಿ ಎಲ್‌ಪಿಜಿ ಗ್ಯಾಸ್ ಕೊರತೆ ಎದುರಾಗಿದೆ. ಈ ಗಂಭೀರ ಪರಿಸ್ಥಿತಿಯನ್ನು ನಿಭಾಯಿಸಲು ಕೇಂದ್ರ ಸರ್ಕಾರವು ಅತ್ಯಂತ ಮಹತ್ವದ ಹಾಗೂ ಕಠಿಣ ತೀರ್ಮಾನವೊಂದನ್ನು ಕೈಗೊಂಡಿದೆ.  ಹೊಸ ನಿಯಮವನ್ನು ತಕ್ಷಣದಿಂದಲೇ ಜಾರಿಗೆ ತರಲಾಗಿದ್ದು, ಗ್ಯಾಸ್ ಪೈಪ್‌ಲೈನ್ ಸಂಪರ್ಕ ಹೊಂದಿರುವ ದೇಶದ ಕೋಟ್ಯಂತರ ಗ್ರಾಹಕರಿಗೆ ಇನ್ಮುಂದೆ ಎಲ್‌ಪಿಜಿ ಸಿಲಿಂಡರ್ ವಿತರಣೆಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲು ಆದೇಶಿಸಲಾಗಿದೆ. ಸೋಮವಾರವಷ್ಟೇ ಕೇಂದ್ರ ಸರ್ಕಾರದ ವತಿಯಿಂದ ಈ ಕಟ್ಟುನಿಟ್ಟಿನ

ಇನ್ಮುಂದೆ ಈ ಗ್ರಾಹಕರಿಗೆ ಸಿಗಲ್ಲ LPG ಸಿಲಿಂಡರ್! Read More »

ರಾಕಿಂಗ್ ಸ್ಟಾರ್ ಯಶ್ ನಟನೆಯ “ರಾಮಾಯಣ“ ರಿಲೀಸ್ ಗೆ ಡೇಟ್ ಫಿಕ್ಸ್ 

ಸಮಗ್ರ ನ್ಯೂಸ್ : ರಾಕಿಂಗ್ ಸ್ಟಾರ್ ಯಶ್ (Yash) ಅಭಿನಯದ ಟಾಕ್ಸಿಕ್ ಸಿನಿಮಾ ರಿಲೀಸ್ ಬಗ್ಗೆಯಾವುದೇ ಮಾಹಿತಿ ಇಲ್ಲ, ಆದರೆ ಟಾಕ್ಸಿಕ್ ಗೂ ಮುನ್ನ ರಾಮಾಯಣ ಬರೋದಂತೂ ಫಿಕ್ಸ್ ಆಗಿದೆ.  ರಾಕಿಂಗ್ ಸ್ಟಾರ್ ಯಶ್ ನಟನೆಯ ಟಾಕ್ಸಿಕ್ ಮತ್ತೆ ಪೋಸ್ಟ್ ಪೋನ್ ಆದ ಮೇಲೆ, ಫ್ಯಾನ್ಸ್ ಯಾವಾಗ ರಿಲೀಸ್ ಅನ್ನೋದನ್ನ ಕೇಳೋದೇ ಬಿಟ್ಟುಬಿಟ್ಟಿದ್ದಾರೆ. ಅದ್ಯಾವಾಗ ಬರುತ್ತೋ ಬರಲಿ ಅಂತ ಸೈಲೆಂಟ್ ಆಗಿಬಿಟ್ಟಿದ್ದಾರೆ. ಆದ್ರೆ ಇದರ ನಡುವೆ ರಾಮಾಯಣ ಟೀಂ ಮಾತ್ರ ಫ್ಯಾನ್ಸ್ ಗೆ ಒಂದು ಗುಡ್ ನ್ಯೂಸ್

ರಾಕಿಂಗ್ ಸ್ಟಾರ್ ಯಶ್ ನಟನೆಯ “ರಾಮಾಯಣ“ ರಿಲೀಸ್ ಗೆ ಡೇಟ್ ಫಿಕ್ಸ್  Read More »

108 ಆಂಬುಲೆನ್ಸ್ ಇನ್ಮುಂದೆ ಸರ್ಕಾರದ ಸುಪರ್ದಿಯಲ್ಲಿ 

ಸಮಗ್ರ ನ್ಯೂಸ್ : 108 ಆಂಬುಲೆನ್ಸ್ ಸೇವೆ ಸರ್ಕಾರದ ಸುಪರ್ದಿಯಲ್ಲಿ ಕಾರ್ಯನಿರ್ವಹಿಸಲಿದ್ದು, ದೇಶದಲ್ಲೇ ಪ್ರಥಮ ಬಾರಿಗೆ ಕರ್ನಾಟಕ ಸರ್ಕಾರದ ಆರೋಗ್ಯ ಇಲಾಖೆ ಈ ಕ್ರಮ ಕೈಗೊಂಡಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ (Dinesh Gundurao) ಹೇಳಿದ್ದಾರೆ. 108 ಆರೋಗ್ಯ ಕವಚ ಆಂಬುಲೆನ್ಸ್ ಕಮಾಂಡ್ ಕಂಟ್ರೋಲ್ ಸೆಂಟರ್ ಲೋಕಾರ್ಪಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಬೆಂಬಲ, ಪ್ರೋತ್ಸಾಹದೊಂದಿಗೆ ಈ ಯೋಜನೆ ಜಾರಿಗೆ ಬಂದಿದೆ. 2008ರಲ್ಲಿ ಜನರ ಅನುಕೂಲಕ್ಕಾಗಿ 108 ಆಂಬುಲೆನ್ಸ್ ಸೇವೆ ಪ್ರಾರಂಭಿಸಲಾಗಿತ್ತು. ಈವರೆಗೆ ಖಾಸಗಿ

108 ಆಂಬುಲೆನ್ಸ್ ಇನ್ಮುಂದೆ ಸರ್ಕಾರದ ಸುಪರ್ದಿಯಲ್ಲಿ  Read More »