ಸಮಗ್ರ ಸಮಾಚಾರ

ರಾಜ್ಯ ಸರ್ಕಾರದ ಮೊದಲ ಸಚಿವ ಸಂಪುಟ ಸಭೆ ಮಂಗಳೂರಿನಲ್ಲಿ! ರಾಜಧಾನಿಯ ಹೊರಗೆ ಆಡಳಿತ ಯಂತ್ರ ವಿಸ್ತರಣೆ ಮಾಡಿದ ಡಿಕೆಶಿ

ಸಮಗ್ರ ನ್ಯೂಸ್: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸರ್ಕಾರ ಪೂರ್ಣ ಪ್ರಮಾಣದಲ್ಲಿ ಸಂಪುಟ ವಿಸ್ತರಣೆಗೊಂಡ ಬಳಿಕ ಅದರ ಮೊದಲ ಸಚಿವ ಸಂಪುಟ ಸಭೆಯನ್ನು ಮಂಗಳೂರಿನಲ್ಲಿ ನಡೆಸಲು ಉದ್ದೇಶಿಸಲಾಗಿದೆ. ರಾಜ್ಯದ ರಾಜಧಾನಿಯಿಂದ ಹೊರಗೆ ಜಿಲ್ಲಾ ಕೇಂದ್ರ ಮಂಗಳೂರಿನಲ್ಲಿ ಮೊದಲ ಬಾರಿಗೆ ಜುಲೈ ತಿಂಗಳಲ್ಲಿ ಸಚಿವ ಸಂಪುಟ ಸಭೆ ನಡೆಯುವುದು ಬಹುತೇಕ ಖಚಿತವಾಗಿದೆ. ಈ ಬಗ್ಗೆ ವಿಧಾನಸೌಧ ಸಚಿವಾಲಯದ ಅಧಿಕಾರಿಗಳು ಸಿದ್ಧತೆಗೆ ಸೂಚನೆ ನೀಡಿದ್ದಾರೆ. ಮಂಗಳೂರಿನಲ್ಲಿ ಪಡೀಲಿನ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ. ವಿಧಾನ […]

ರಾಜ್ಯ ಸರ್ಕಾರದ ಮೊದಲ ಸಚಿವ ಸಂಪುಟ ಸಭೆ ಮಂಗಳೂರಿನಲ್ಲಿ! ರಾಜಧಾನಿಯ ಹೊರಗೆ ಆಡಳಿತ ಯಂತ್ರ ವಿಸ್ತರಣೆ ಮಾಡಿದ ಡಿಕೆಶಿ Read More »

ಧರ್ಮಸ್ಥಳ ಬುರುಡೆ ಪ್ರಕರಣ|ಎಸ್ಐಟಿಗೆ ದೂರು ನೀಡಿದ ಚಿನ್ನಯ್ಯ

ಸಮಗ್ರ ನ್ಯೂಸ್: ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತುಹಾಕಲಾಗಿದೆ ಎನ್ನಲಾದ ಪ್ರಕರಣ ಸಂಬಂಧ ಹೈಕೋರ್ಟ್‌ನಲ್ಲಿ ರಿಟ್‌ ಅರ್ಜಿ ಸಲ್ಲಿಸಿರುವ ಸಾಕ್ಷಿ ದೂರುದಾರ ಚಿನ್ನ ಸಿ.ಎನ್‌. ಅಲಿಯಾಸ್‌ ಚಿನ್ನಯ್ಯ, ತನ್ನ ಮೇಲೆ ಮತ್ತು ಕುಟುಂಬದವರ ಮೇಲೆ ಬೆದರಿಕೆ ಒಡ್ಡುವ ಹಾಗೂ ಮಾನಸಿಕ ಒತ್ತಡ ಹೇರುವ ಪ್ರಯತ್ನಗಳು ನಡೆಯುತ್ತಿವೆ ಎಂದು ಆರೋಪಿಸಿ ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ದೂರು ಸಲ್ಲಿಸಿದ್ದಾರೆ. ‘ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿ ಜೂ 8ರಂದು ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದು ತನಿಖೆಯನ್ನು ಚುರುಕುಗೊಳಿಸಿ ಅಂತಿಮ ವರದಿ ಸಲ್ಲಿಸುವಂತೆಯೂ ಮಹೇಶ್

ಧರ್ಮಸ್ಥಳ ಬುರುಡೆ ಪ್ರಕರಣ|ಎಸ್ಐಟಿಗೆ ದೂರು ನೀಡಿದ ಚಿನ್ನಯ್ಯ Read More »

ದ.ಕ ಜಿಲ್ಲೆಯ 8 ರಸ್ತೆಗಳ ಅಭಿವೃದ್ಧಿಗೆ ಕೇಂದ್ರದಿಂದ 57 ಕೋಟಿ ರೂ ಬಿಡುಗಡೆ| ಸಂಸದ ಬ್ರಿಜೇಶ್ ಚೌಟ ಮಾಹಿತಿ

ಸಮಗ್ರ ನ್ಯೂಸ್: ಕೇಂದ್ರ ಸರ್ಕಾರವು ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶಗಳ ಸಂಪರ್ಕ ರಸ್ತೆಗಳ ಸುಧಾರಣೆಗೆ ಆಡಳಿತಾತ್ಮಕ ಅನುಮೋದನೆ ನೀಡಿದ್ದು, ಕೇಂದ್ರ ರಸ್ತೆ ಮತ್ತು ಮೂಲಸೌಕರ್ಯ ನಿಧಿ (CRIF) ಅಡಿಯಲ್ಲಿ ಒಟ್ಟು 57 ಕೋಟಿ ರೂ. ವೆಚ್ಚದ ಅಭಿವೃದ್ಧಿ ಯೋಜನೆಗೆ ಮಂಜೂರು ಮಾಡಿದೆ ಎಂದು ದ.ಕ. ಸಂಸದ ಕ್ಯಾ.‌ಬ್ರಿಜೇಶ್ ಚೌಟ ತಿಳಿಸಿದ್ದಾರೆ. ಈ ಯೋಜನೆಯಡಿ ಜಿಲ್ಲೆಯಾದ್ಯಂತ ಒಟ್ಟು 14 ಪ್ರಮುಖ ಕಾಮಗಾರಿ ಮೂಲಕ ವಿವಿಧೆಡೆ ಒಟ್ಟು 82.94 ಕಿ.ಮೀ. ಉದ್ದದ ರಸ್ತೆ ಅಭಿವೃದ್ಧಿಪಡಿಸಲಾಗುವುದು. ಜಿಲ್ಲೆಯ

ದ.ಕ ಜಿಲ್ಲೆಯ 8 ರಸ್ತೆಗಳ ಅಭಿವೃದ್ಧಿಗೆ ಕೇಂದ್ರದಿಂದ 57 ಕೋಟಿ ರೂ ಬಿಡುಗಡೆ| ಸಂಸದ ಬ್ರಿಜೇಶ್ ಚೌಟ ಮಾಹಿತಿ Read More »

ಇನ್ಮುಂದೆ ವೈದ್ಯರ ಸಲಹೆ ಚೀಟಿ ಇಲ್ಲದೆ ಯಾವುದೇ ಸಿರಪ್ ಗಳು ಮೆಡಿಕಲ್ ಗಳಲ್ಲಿ ಸಿಗಲ್ಲ| ಔಷಧಿ ಮಾರಾಟಕ್ಕೆ ಹೊಸ ನಿಯಮ ಜಾರಿ

ಸಮಗ್ರ ನ್ಯೂಸ್: ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ದೇಶಾದ್ಯಂತ ಔಷಧಿಗಳ ಮಾರಾಟಕ್ಕೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಂಡಿದೆ. ಇನ್ಮುಂದೆ ಕೆಮ್ಮಿನ ಸಿರಪ್ ಸೇರಿದಂತೆ ಯಾವುದೇ ರೀತಿಯ ‘ಸಿರಪ್‌ಗಳು’ ವೈದ್ಯರ ಲಿಖಿತ ಚೀಟಿ ಇಲ್ಲದೆ ಮೆಡಿಕಲ್ ಶಾಪ್‌ಗಳಲ್ಲಿ ನೇರವಾಗಿ ಸಿಗುವುದಿಲ್ಲ. ಅಧಿಕೃತ ಗೆಜೆಟ್ ಅಧಿಸೂಚನೆಯ ಪ್ರಕಾರ, ಕೇಂದ್ರ ಸರ್ಕಾರವು ಡ್ರಗ್ಸ್ ನಿಯಮಾವಳಿಗಳು, 1945 ಕ್ಕೆ ತಿದ್ದುಪಡಿ ತಂದಿದ್ದು, ಇದನ್ನು ‘ಡ್ರಗ್ಸ್ (ಐದನೇ ತಿದ್ದುಪಡಿ) ನಿಯಮಗಳು, 2026’ ಎಂದು ಹೆಸರಿಸಲಾಗಿದೆ. ಡ್ರಗ್ಸ್ ನಿಯಮಾವಳಿಗಳು 1945ರ ‘ಷೆಡ್ಯೂಲ್ ಕೆ’

ಇನ್ಮುಂದೆ ವೈದ್ಯರ ಸಲಹೆ ಚೀಟಿ ಇಲ್ಲದೆ ಯಾವುದೇ ಸಿರಪ್ ಗಳು ಮೆಡಿಕಲ್ ಗಳಲ್ಲಿ ಸಿಗಲ್ಲ| ಔಷಧಿ ಮಾರಾಟಕ್ಕೆ ಹೊಸ ನಿಯಮ ಜಾರಿ Read More »

ಕೇರಳಂನಲ್ಲಿ ಮಹಿಳೆಯರ ಉಚಿತ ಬಸ್ ಪ್ರಯಾಣ ಯೋಜನೆಗೆ ಚಾಲನೆ| ಕರ್ನಾಟಕದ ಮಹಿಳೆಯರಿಗೂ ಉಚಿತ ಪ್ರಯಾಣದ ಲಾಭ

ಸಮಗ್ರ ನ್ಯೂಸ್: ಕೇರಳದ ಕಾಂಗ್ರೆಸ್ ನೇತೃತ್ವದ ಯುಡಿಎಫ್ (UDF) ಸರ್ಕಾರವು ತನ್ನ ಪ್ರಮುಖ ಚುನಾವಣಾ ಭರವಸೆಗಳಲ್ಲೊಂದಾದ ‘ಪ್ರಿಯದರ್ಶಿನಿ’ ಯೋಜನೆಗೆ ಸೋಮವಾರ ಅಧಿಕೃತವಾಗಿ ಚಾಲನೆ ನೀಡಿದೆ. ಈ ಯೋಜನೆಯಡಿ ರಾಜ್ಯಾದ್ಯಂತ ಮಹಿಳೆಯರು ಮತ್ತು ತೃತೀಯ ಲಿಂಗಿಗಳಿಗೆ ಸಾಮಾನ್ಯ ಕೆಎಸ್‌ಆರ್‌ಟಿಸಿ (KSRTC) ಬಸ್‌ಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯ ಸಿಗಲಿದೆ. ತಿರುವನಂತಪುರಂನ ತಂಬಾನೂರು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಮುಖ್ಯಮಂತ್ರಿ ವಿ.ಡಿ. ಸತೀಶನ್ ಅವರು ಸಾಂಪ್ರದಾಯಿಕ ದೀಪ ಬೆಳಗಿಸುವ ಮೂಲಕ ಈ ಯೋಜನೆಗೆ ಚಾಲನೆ ನೀಡಿದರು. ಬಳಿಕ ಮುಖ್ಯಮಂತ್ರಿಗಳು,

ಕೇರಳಂನಲ್ಲಿ ಮಹಿಳೆಯರ ಉಚಿತ ಬಸ್ ಪ್ರಯಾಣ ಯೋಜನೆಗೆ ಚಾಲನೆ| ಕರ್ನಾಟಕದ ಮಹಿಳೆಯರಿಗೂ ಉಚಿತ ಪ್ರಯಾಣದ ಲಾಭ Read More »

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಸಲ್ಲಿಸಲು ಹೀಗೆ ಮಾಡಿ…

ಸಮಗ್ರ ನ್ಯೂಸ್: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಪೈಕಿ ಹೆಚ್ಚು ಜನಪ್ರಿಯತೆ ಪಡೆದಿರುವ ಗೃಹಲಕ್ಷ್ಮಿ ಹಾಗೂ ಗೃಹಜ್ಯೋತಿ ಯೋಜನೆಗಳಲ್ಲಿ ಮಹತ್ವದ ಬದಲಾವಣೆ ತರಲು ಸರ್ಕಾರ ಮುಂದಾಗಿದೆ. ಈ ಎರಡೂ ಯೋಜನೆಗಳ ಫಲಾನುಭವಿಗಳು ಮುಂದುವರಿದು ಸೌಲಭ್ಯ ಪಡೆಯಬೇಕಾದರೆ ಹೊಸದಾಗಿ ಅರ್ಜಿ ಸಲ್ಲಿಸುವುದು ಕಡ್ಡಾಯವಾಗುವ ಸಾಧ್ಯತೆ ಇದೆ. ಸರ್ಕಾರದ ಪ್ರಕಾರ, ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಯೋಜನೆಗಳಲ್ಲಿ ನಕಲಿ ಫಲಾನುಭವಿಗಳ ಸಂಖ್ಯೆ ಹೆಚ್ಚುತ್ತಿರುವುದು ಕಂಡುಬಂದಿದೆ. ಹೀಗಾಗಿ ಅರ್ಹ ಫಲಾನುಭವಿಗಳನ್ನು ಗುರುತಿಸಿ, ಅನರ್ಹರನ್ನು ಹೊರಗಿಡುವ ಉದ್ದೇಶದಿಂದ ಮರು ನೋಂದಣಿ ಪ್ರಕ್ರಿಯೆ ಕೈಗೊಳ್ಳಲು

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಸಲ್ಲಿಸಲು ಹೀಗೆ ಮಾಡಿ… Read More »

ಶಬರಿಮಲೆ‌ ಯಾತ್ರೆ ಕೈಗೊಂಡ ಸಂಸದ ಹೆಚ್.ಡಿ ಕುಮಾರಸ್ವಾಮಿ

ಸಮಗ್ರ ನ್ಯೂಸ್: ಕೇಂದ್ರ ಸಚಿವರಾದ ಹೆಚ್‌ಡಿ ಕುಮಾರಸ್ವಾಮಿ ಅವರು ಮಣಿಕಂಠನ ದರ್ಶನಕ್ಕಾಗಿ ಶಬರಿಮಲೆಗೆ ಹೊರಟಿದ್ದಾರೆ. ಇಂದು ಬೆಳಗ್ಗೆ ಕುಮಾರಸ್ವಾಮಿಯವರು ಪಡಿಪೂಜೆ, ಪುಷ್ಪಾಭಿಷೇಕ ಪೂಜೆ ಮಾಡಿಸಿದ್ದಾರೆ. ಪೂಜೆ ಬಳಿಕ ಅಯ್ಯಪ್ಪ ಮಾಲೆ ಹಾಕಿಕೊಂಡು, ಇರಿಮುಡಿ ಹೊತ್ತು ಕುಮಾರಸ್ವಾಮಿ ಶಬರಿಮಲೆ ಯಾತ್ರೆ ಕೈಗೊಳ್ಳಲಿದ್ದಾರೆ. ಕೇಂದ್ರ ಸಚಿವ ಕುಮಾರಸ್ವಾಮಿ ಜೊತೆಯಲ್ಲಿ ಜೆಡಿಎಸ್ ನಾಯಕರು ಸಹ ಮಾಲೆ ಹಾಕಿ ಅಯ್ಯಪ್ಪ ದರ್ಶನಕ್ಕೆ ತೆರಳುತ್ತಿದ್ದಾರೆ. ಸುರೇಶ್ ಬಾಬು, ಬೋಜೇಗೌಡ, ಸಾ ರಾ ಮಹೇಶ್, ಎ ಮಂಜು ಸೇರಿದಂತೆ ಹಲವು ಜೆಡಿಎಸ್ ನಾಯಕರು ಕುಮಾರಸ್ವಾಮಿ ಜೊತೆಯಲ್ಲಿ

ಶಬರಿಮಲೆ‌ ಯಾತ್ರೆ ಕೈಗೊಂಡ ಸಂಸದ ಹೆಚ್.ಡಿ ಕುಮಾರಸ್ವಾಮಿ Read More »

ಹತ್ತು ರೂಪಾಯಿ ಕೂಡಾ ಲಂಚ ನೀಡಬೇಡಿ, ಲಂಚ ಕೇಳಿದರೆ ತಕ್ಷಣ ದೂರು ನೀಡಿ – ಸಿಎಂ

ಸಮಗ್ರ ನ್ಯೂಸ್: ರಾಜ್ಯದ ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರಕ್ಕೆ ಇತಿಶ್ರೀ ಹಾಡಿ ಪಾರದರ್ಶಕ ಆಡಳಿತ ನೀಡಲು ಮುಖ್ಯಮಂತ್ರಿಗಳು ಮಾಸ್ಟರ್ ಪ್ಲಾನ್ ಸಿದ್ಧಪಡಿಸಿದ್ದಾರೆ. ಸಾರ್ವಜನಿಕರಿಗೆ ಕಿರುಕುಳ ನೀಡುವ ಮತ್ತು ಲಂಚ ಕೇಳುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಹಾಗೂ ಹಿರಿಯ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಇನ್ನು ಮುಂದೆ ಯಾವುದೇ ಸರ್ಕಾರಿ ಕಚೇರಿಯಲ್ಲಿ ಕೆಲಸ ಮಾಡಿಕೊಡಲು ಅಧಿಕಾರಿಗಳು ಅಥವಾ ಸಿಬ್ಬಂದಿ ಲಂಚಕ್ಕೆ ಬೇಡಿಕೆ ಇಟ್ಟರೆ ಸಾರ್ವಜನಿಕರು ತಕ್ಷಣ ದೂರು ನೀಡಬಹುದು. ಇದಕ್ಕಾಗಿ ಪ್ರತಿ ಕಚೇರಿಯ ಪ್ರಮುಖ ಸ್ಥಳಗಳಲ್ಲಿ

ಹತ್ತು ರೂಪಾಯಿ ಕೂಡಾ ಲಂಚ ನೀಡಬೇಡಿ, ಲಂಚ ಕೇಳಿದರೆ ತಕ್ಷಣ ದೂರು ನೀಡಿ – ಸಿಎಂ Read More »

ದಿನಕ್ಕೆ ಮೂರ್ನಾಲ್ಕು ಬಾಟಲಿ‌ ಸ್ಟಿಂಗ್ ಕುಡಿಯುತ್ತಿದ್ದ ಯುವಕ ಕಿಡ್ನಿ ವೈಫಲ್ಯದಿಂದ ಸಾವು

ಸಮಗ್ರ ನ್ಯೂಸ್: ದಿನಕ್ಕೆ ಮೂರರಿಂದ ನಾಲ್ಕು ಬಾಟಲಿ ಸ್ಟಿಂಗ್ ಜ್ಯೂಸ್ ಕುಡಿಯುತ್ತಿದ್ದ ಯುವಕನೊಬ್ಬ ಕಿಡ್ನಿ ಫೇಲ್ ಆಗಿ ಮೃತಪಟ್ಟಿರುವ ದಾರುಣ ಘಟನೆ ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರದಲ್ಲಿ ನಡೆದಿದೆ. ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದಲ್ಲಿ ವ್ಯಾಸಂಗ ಮಾಡುತ್ತಿದ್ದ 19 ವರ್ಷದ ಬಾಲು ದೇಸಾಯಿ ಮೃತಪಟ್ಟ ದುರ್ದೈವಿ ಯುವಕ. ಮೃತ ಯುವಕ ಬಾಲು ದೇಸಾಯಿ ಕಳೆದ ಕೆಲವು ದಿನಗಳಿಂದ ಪ್ರತಿದಿನ ಸತತವಾಗಿ 3 ರಿಂದ 4 ಬಾಟಲಿ ಸ್ಟಿಂಗ್ ಜ್ಯೂಸ್ ಅನ್ನು ಅತಿಯಾಗಿ ಸೇವಿಸುತ್ತಿದ್ದ ಎಂದು ಹೇಳಲಾಗಿದೆ.ಅಷ್ಟೊಂದು ಪ್ರಮಾಣದಲ್ಲಿ

ದಿನಕ್ಕೆ ಮೂರ್ನಾಲ್ಕು ಬಾಟಲಿ‌ ಸ್ಟಿಂಗ್ ಕುಡಿಯುತ್ತಿದ್ದ ಯುವಕ ಕಿಡ್ನಿ ವೈಫಲ್ಯದಿಂದ ಸಾವು Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ನಿತ್ಯ ಜೀವನದಲ್ಲಿ ರಾಶಿಗಳು ಹಾಗೂ ಗ್ರಹಗಳ ಪ್ರಭಾವ ಮಹತ್ವ ಪಡೆಯುತ್ತದೆ. ರಾಶಿಗಳ ಚಲನೆಯಿಂದ ನಮ್ಮ ಜೀವನದ ಆಗುಹೋಗುಗಳು ನಿರ್ಧರಿತವಾಗುತ್ತವೆ. ಆದ್ದರಿಂದ ರಾಶಿಗಳ ಭವಿಷ್ಯ ತಿಳಿದುಕೊಳ್ಳುವುದು ಅವಶ್ಯಕ. ಈ ವಾರದಲ್ಲಿ (ಜೂ.14ರಿಂದ 20ರವರೆಗೆ) ಯಾವ ರಾಶಿಗೆ ಶುಭ? ಯಾವ ರಾಶಿಯ ಸಮಸ್ಯೆಗಳಿಗೆ ಏನು ಪರಿಹಾರ ಎಂಬುದನ್ನು ತಿಳಿಯೋಣ.. ಮೇಷ: ಅಧಿಕ ಜ್ಯೇಷ್ಠ ಮಾಸವು ಮುಗಿದು ನಿಜ ಜ್ಯೇಷ್ಠ ಮಾಸವು ಜೂನ್ 15ರಿಂದ ಆರಂಭವಾಗುತ್ತದೆ. ಅಂದೇ ಮಿಥುನ ಸಂಕ್ರಮಣವು ಬಂದು ರವಿ ಬುಧರು ಒಂದೇ ಮನೆಯಲ್ಲಿ ಇರುವುದು

ದ್ವಾದಶ ರಾಶಿಗಳ ವಾರಭವಿಷ್ಯ Read More »