ಸಮಗ್ರ ಸಮಾಚಾರ

ಬೆಳ್ತಂಗಡಿ: ನಾಪತ್ತೆಯಾಗಿದ್ದ ಯುವಕ ನದಿಯಲ್ಲಿ ಶವವಾಗಿ ಪತ್ತೆ

ಸಮಗ್ರ ನ್ಯೂಸ್: ಕಳೆದೆರಡು ದಿನಗಳ(ಡಿ.27) ಹಿಂದೆ ಮನೆಯಿಂದ ನಾಪತ್ತೆಯಾಗಿದ್ದ ಬೆಳ್ತಂಗಡಿ ತಾಲೂಕಿನ ಬೆಳಾಲು ಪುರುಷರಬೆಟ್ಟು ನಿವಾಸಿ ರಾಜೇಶ್ ಪಿ. (30) ರವರ ಮೃತದೇಹ ಬೆಳಾಲು ಗ್ರಾಮದ ಬಲಿಪೆ ನೇತ್ರಾವತಿ ನದಿಯಲ್ಲಿ ಡಿ.30ರಂದು ಪತ್ತೆಯಾಗಿದೆ. ಮನೆಯಿಂದ ಹೊರಟ ರಾಜೇಶ್ ಪಿ, ವಾಪಾಸು ಹಿಂದಿರುಗದೆ ನಾಪತ್ತೆಯಾಗಿದ್ದರು.ಅವರ ಪತ್ತೆಗಾಗಿ ಮನೆಯವರು ಹಾಗೂ ಸ್ಥಳೀಯವರು ಹುಡುಕಾಟ ನಡೆಸಿದ್ದರೂ ಪತ್ತೆಯಾಗಿರಲಿಲ್ಲ. ಈ ಬಗ್ಗೆ ಧರ್ಮಸ್ಥಳ ಪೊಲೀಸರಿಗೆ ಮಾಹಿತಿ ನೀಡಿ ನಂತರ ತೀವ್ರ ಹುಡುಕಾಟ ನಡೆಸಿದಾಗ ಇಂದು ಬೆಳಿಗ್ಗೆ ಬಲಿಪೆಯ ನೇತ್ರಾವತಿ ನದಿಯಲ್ಲಿ ಮೃತದೇಹ ಪತ್ತೆಯಾಗಿದೆ. […]

ಬೆಳ್ತಂಗಡಿ: ನಾಪತ್ತೆಯಾಗಿದ್ದ ಯುವಕ ನದಿಯಲ್ಲಿ ಶವವಾಗಿ ಪತ್ತೆ Read More »

ರಾಜ್ಯದ ಶ್ರೀಮಂತ ದೇವಾಲಯಗಳ ಪಟ್ಟಿ‌ ರಿಲೀಸ್| ಈ ಬಾರಿಯೂ ನಂ.1 ಸ್ಥಾನ ಕಾಯ್ದುಕೊಂಡ ಕುಕ್ಕೆ ಸುಬ್ರಹ್ಮಣ್ಯ

ಸಮಗ್ರ ನ್ಯೂಸ್: ರಾಜ್ಯ ಮುಜರಾಯಿ ಇಲಾಖೆ ಶ್ರೀಮಂತ ದೇವಾಲಯಗಳ ಪಟ್ಟಿ ಬಿಡುಗಡೆ ಮಾಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರ ಅಗ್ರಸ್ಥಾನ ಪಡೆದಿದೆ. ರಾಜ್ಯದ ಎ ಗ್ರೇಡ್‌ ದೇವಾಲಯಗಳ ಪೈಕಿ ಕರಾವಳಿ ದೇವಾಲಯಗಳೇ ಪಾರಮ್ಯ ಮೆರೆದಿವೆ. ರಾಜ್ಯದ ದೇವಳಗಳ ಆದಾಯದಲ್ಲಿ ಟಾಪ್‌ 10ರಲ್ಲಿ ಕರಾವಳಿಯ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ, ಕೊಲ್ಲೂರು ಶ್ರೀಮೂಕಾಂಬಿಕಾ ದೇವಳ, ಮಂದಾರ್ತಿ ಶ್ರೀದುರ್ಗಾಪರಮೇಶ್ವರಿ ದೇವಳ ಸ್ಥಾನ ಪಡೆದುಕೊಂಡಿವೆ. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ 2023-24ರಲ್ಲಿ 146.01 ಕೋಟಿ ಆದಾಯ ಪಡೆದಿದ್ದರೆ, 2024-24ರಲ್ಲಿ

ರಾಜ್ಯದ ಶ್ರೀಮಂತ ದೇವಾಲಯಗಳ ಪಟ್ಟಿ‌ ರಿಲೀಸ್| ಈ ಬಾರಿಯೂ ನಂ.1 ಸ್ಥಾನ ಕಾಯ್ದುಕೊಂಡ ಕುಕ್ಕೆ ಸುಬ್ರಹ್ಮಣ್ಯ Read More »

ಹಳಿ ತಪ್ಪಿದ ರೈಲು| 13 ಸಾವು, 98 ಮಂದಿ ಗಂಭೀರ

ಸಮಗ್ರ ನ್ಯೂಸ್: ಮೆಕ್ಸಿಕೋದ ದಕ್ಷಿಣ ರಾಜ್ಯವಾದ ಓಕ್ಸಾಕದಲ್ಲಿ 250 ಜನರನ್ನು ಹೊತ್ತೊಯ್ಯುತ್ತಿದ್ದ ಇಂಟರ್‌ಓಷಿಯಾನಿಕ್ ರೈಲು ಹಳಿತಪ್ಪಿದ ಪರಿಣಾಮ ಕನಿಷ್ಠ 13 ಜನರು ಸಾವನ್ನಪ್ಪಿದ್ದು, 98 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಮೆಕ್ಸಿಕನ್ ನೌಕಾಪಡೆಯ ಪ್ರಕಾರ, ನಿಜಾಂಡಾ ಪಟ್ಟಣದ ಬಳಿ ಹಳಿತಪ್ಪಿದ ರೈಲು ಒಂಬತ್ತು ಸಿಬ್ಬಂದಿ ಮತ್ತು 241 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿತ್ತು. ಹಡಗಿನಲ್ಲಿದ್ದ 139 ಜನರು ಅಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ. ಏತನ್ಮಧ್ಯೆ, ಅಧ್ಯಕ್ಷೆ ಕ್ಲೌಡಿಯಾ ಶೀನ್ಬಾಮ್ ಅವರು X ನಲ್ಲಿ ಪೋಸ್ಟ್ನಲ್ಲಿ ಗಾಯಗೊಂಡವರಲ್ಲಿ ಐದು

ಹಳಿ ತಪ್ಪಿದ ರೈಲು| 13 ಸಾವು, 98 ಮಂದಿ ಗಂಭೀರ Read More »

ವಿಟ್ಲ: ಕೋಳಿ ಅಂಕಕ್ಕೆ ಪೊಲೀಸ್ ದಾಳಿ| ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಮಾಜಿ ಶಾಸಕ ಮಠಂದೂರು ಸೇರಿ 27 ಮಂದಿ ವಿರುದ್ಧ ಪ್ರಕರಣ

ಸಮಗ್ರ ನ್ಯೂಸ್: ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಕೇಪು ಗ್ರಾಮದ ಮುರಳೀಧರ ರೈ ಎಂಬವರ ಗದ್ದೆಯಲ್ಲಿ ಅಕ್ರಮವಾಗಿ ಕೋಳಿ ಅಂಕ ನಡೆಸುತ್ತಿದ್ದವರ ಮೇಲೆ ಭಾನುವಾರ ದಾಳಿ ಮುಂದುವರೆಸಿರುವ ವಿಟ್ಲ ಪೊಲೀಸರು, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸತೀಶ ಕುಂಪಲ, ಮಾಜಿ ಶಾಸಕ ಸಂಜೀವ ಮಠಂದೂರು ಸೇರಿ 27 ಮಂದಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಖಚಿತ ಮಾಹಿತಿ ಬಂದ ಮೇರೆಗೆ ವಿಟ್ಲ ಪೊಲೀಸ್‌ ಠಾಣೆ ಇನ್‌ಸ್ಪೆಕ್ಟರ್ ಪ್ರಕಾಶ್ ದೇವಾಡಿಗ ಮತ್ತು ಸಿಬ್ಬಂದಿ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ ಹಲವು ಜನರು

ವಿಟ್ಲ: ಕೋಳಿ ಅಂಕಕ್ಕೆ ಪೊಲೀಸ್ ದಾಳಿ| ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಮಾಜಿ ಶಾಸಕ ಮಠಂದೂರು ಸೇರಿ 27 ಮಂದಿ ವಿರುದ್ಧ ಪ್ರಕರಣ Read More »

ಹವಾಮಾನ ವರದಿ| ರಾಜ್ಯಾದ್ಯಂತ ಮುಂದುವರಿದ ಮೈಕೊರೆವ ಚಳಿ| ಈ ಐದು ಜಿಲ್ಲೆಗಳಿಗೆ ಅಲರ್ಟ್ ಘೋಷಣೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಶೀತ ಅಲೆಯ ಆರ್ಭಟ ಜೋರಾಗಿದೆ. ಮೋಡ ಕವಿದ ವಾತಾವರಣ ಸಹಿತ ತೇವ ಭರಿತ ಗಾಳಿ ಬೀಸುತ್ತಿದೆ. ಬೆಂಗಳೂರು ಸೇರಿದಂತೆ ವಿವಿಧ ಭಾಗಗಳಲ್ಲಿ ತಾಪಮಾನ ಕಡಿಮೆ ಆಗಿದ್ದು, ಮೈಕೊರೆವ ಚಳಿ ಹೆಚ್ಚಾಗಿದೆ. ಮುಂದಿನ ಮೂರು ದಿನಗಳ ಕಾಲ ಇದೇ ವಾತಾವರಣ ಮುಂದುವರಿಯಲಿದೆ. ಭಾರತೀಯ ಹವಾಮಾನ ಇಲಾಖೆಯ (IMD) ಕರ್ನಾಟಕ ಕೇಂದ್ರದ ಪ್ರಕಾರ, ಉತ್ತರ ಒಳನಾಡಿನಲ್ಲಿ ಚಳಿ ಮುಂದುವರಿಯಲಿದೆ. ಕಳೆದ ಎರಡು ದಿನಗಳಿಗೆ ಹೋಲಿಕೆ ಮಾಡಿದರೆ ಕೊಂಚ ಚಳಿ ತಗ್ಗಿದೆ ಎನ್ನಬಹುದು. ಆದರೂ ಸಮಾನಧಾನಕರ ಅಲ್ಲದ

ಹವಾಮಾನ ವರದಿ| ರಾಜ್ಯಾದ್ಯಂತ ಮುಂದುವರಿದ ಮೈಕೊರೆವ ಚಳಿ| ಈ ಐದು ಜಿಲ್ಲೆಗಳಿಗೆ ಅಲರ್ಟ್ ಘೋಷಣೆ Read More »

ರೈಲು ಪ್ರಯಾಣ ದರದಲ್ಲಿ ಏರಿಕೆ| ಡಿ.26ರಿಂದ ನೂತನ ದರ ಜಾರಿ

ಸಮಗ್ರ ನ್ಯೂಸ್: ಭಾರತೀಯ ರೈಲ್ವೆ ಇಲಾಖೆಯು ರೈಲು ಟಿಕೆಟ್ ದರದಲ್ಲಿ ಅಲ್ಪ ಪ್ರಮಾಣದ ಏರಿಕೆ ಮಾಡುವ ಮೂಲಕ ಪ್ರಯಾಣಿಕರಿಗೆ ಶಾಕ್ ನೀಡಿದೆ. ಹೆಚ್ಚುತ್ತಿರುವ ಕಾರ್ಯಾಚರಣಾ ವೆಚ್ಚವನ್ನು ಸರಿದೂಗಿಸಲು ಈ ಕ್ರಮ ಕೈಗೊಳ್ಳಲಾಗಿದ್ದು, ಹೊಸ ದರಗಳು 2025ರ ಡಿಸೆಂಬರ್ 26ರಿಂದ ಜಾರಿಗೆ ಬರಲಿವೆ. ಸಾಮಾನ್ಯ ರೈಲುಗಳು: 215 ಕಿ.ಮೀ ಗಿಂತ ಹೆಚ್ಚಿನ ದೂರದ ಪ್ರಯಾಣಕ್ಕೆ ಪ್ರತಿ ಕಿ.ಮೀಗೆ 1 ಪೈಸೆ ಏರಿಕೆ.ಮೇಲ್/ಎಕ್ಸ್‌ಪ್ರೆಸ್ ರೈಲುಗಳು: ಎಸಿ ಮತ್ತು ನಾನ್-ಎಸಿ ಎರಡೂ ವಿಭಾಗಗಳಲ್ಲಿ ಪ್ರತಿ ಕಿ.ಮೀಗೆ 2 ಪೈಸೆ ಏರಿಕೆ. ಯಾರಿಗೆ

ರೈಲು ಪ್ರಯಾಣ ದರದಲ್ಲಿ ಏರಿಕೆ| ಡಿ.26ರಿಂದ ನೂತನ ದರ ಜಾರಿ Read More »

ಈ ವಾರಾಂತ್ಯದೊಳಗೆ ಗೃಹಲಕ್ಷಿ ಹಣ ಖಾತೆಗೆ ಜಮೆ| ಹಣಕಾಸು ಇಲಾಖೆಯಿಂದ‌ ಅನುಮತಿ

ಸಮಗ್ರ ನ್ಯೂಸ್: ಗೃಹಲಕ್ಷ್ಮಿ ಯೋಜನೆಯ 24ನೇ ಕಂತಿನ ಹಣ ಬಿಡುಗಡೆಗೆ ಹಣಕಾಸು ಇಲಾಖೆ ಅನುಮತಿ ನೀಡಿದೆ. ಸೋಮವಾರದಿಂದ ಶನಿವಾರದೊಳಗೆ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಜಮಾ ಮಾಡಲಾಗುವುದು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಗೃಹಲಕ್ಷ್ಮಿ ಯೋಜನೆಯ 24 ನೇ ಕಂತಿನ ಹಣ ಬಿಡುಗಡೆಗೆ ಆರ್ಥಿಕ ಇಲಾಖೆ ಅನುಮತಿ ನೀಡಿದ್ದು, ಸೋಮವಾರದಿಂದ ಶನಿವಾರದೊಳಗೆ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಪಾವತಿಸಲಾಗುವುದು ಎಂದು ಹೇಳಿದ್ದಾರೆ. ಇನ್ನು ಸತ್ತವರ ಖಾತೆ​​ಗೂ

ಈ ವಾರಾಂತ್ಯದೊಳಗೆ ಗೃಹಲಕ್ಷಿ ಹಣ ಖಾತೆಗೆ ಜಮೆ| ಹಣಕಾಸು ಇಲಾಖೆಯಿಂದ‌ ಅನುಮತಿ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಡಿಸೆಂಬರ್ ತಿಂಗಳ ಈ ವಾರ ಸೂರ್ಯ, ಶುಕ್ರ, ಕುಜರ ಯೋಗ ಧನುರಾಶಿಯಲ್ಲಿ ಆಗಲಿದ್ದು ಗುರುವಿನ ರಾಶಿಯಲ್ಲಿ ಇರುವ ಇವರು ಶುಭ ಫಲವನ್ನೇ ಕೊಡುವರು. ಉತ್ಸಾಹ ಹಾಗು ಸರ್ಕಾರದ ಕಾರ್ಯಗಳು ಬೇಗ ಆಗಲಿವೆ. ಶಸ್ತ್ರಕ್ಕೆ ಸಂಬಂಧಿಸಿದ ಉದ್ಯೋಗಳು ಫಲಿತವಾಗುವುದು. ಎಲ್ಲ ಗ್ರಹಗಳೂ ಏಕಾದಶ ಸ್ಥಾನದ ಫಲವನ್ನು ಕೊಡಲಿ. ಮೇಷ ರಾಶಿ:ಈ ವಾರ ವೃತ್ತಿಗೆ ಸಂಬಂಧಿಸಿದ ಸಮಸ್ಯೆಗಳು ನಿಮಗೆ ಇಂದ್ರಜಾಲದಂತೆ ಮಾಯವಾಗಲಿದೆ. ಕ್ಷಣಾರ್ಧದಲ್ಲಿ ಪರಿಹಾರವನ್ನು ಕಂಡುಕೊಳ್ಳಬಲ್ಲಿರಿ. ನಿಮ್ಮ ವ್ಯವಹಾರದ ಬಗ್ಗೆ ಸಲ್ಲದ ಮಾತುಗಳು ಕೇಳಿಬರಬಹುದು. ಕಿವಿಗೆ ಹಾಕಿಕೊಳ್ಳಿ,

ದ್ವಾದಶ ರಾಶಿಗಳ ವಾರಭವಿಷ್ಯ Read More »

ಟೇಕಾಫ್ ವೇಳೆ‌ ಪತನಗೊಂಡ ವಿಮಾನ| ಎಲ್ಲಾ ಪ್ರಯಾಣಿಕರು ಸಾವು

ಸಮಗ್ರ ನ್ಯೂಸ್: ಟೇಕಾಫ್‌ ಆಗುವ ವೇಳೆ ವಿಮಾನದ ನಿಯಂತ್ರಣ ತಪ್ಪಿದ ಪರಿಣಾಮವಾಗಿ, ವಿಮಾನ ನಿಲ್ದಾಣದ ರನ್‌ವೇಗೆ ಅಪ್ಪಳಿಸಿದ ಸಣ್ಣ ವಿಮಾನ ಕೆಲವೇ ಕ್ಷಣದಲ್ಲಿ ಬೆಂಕಿಯ ಉಂಡೆಯಾಗಿ ಮಾರ್ಪಟ್ಟಿತು. ಅಮೆರಿಕದ ಉತ್ತರ ಕೆರೊಲಿನಾದ ಸ್ಟೇಟ್ಸ್‌ವಿಲ್ಲೆ ಪ್ರಾದೇಶಿಕ ವಿಮಾನ ನಿಲ್ದಾಣದಲ್ಲಿ ಗುರುವಾರ ಈ ಅಪಘಾತ ಸಂಭವಿಸಿದೆ. ಸ್ಥಳೀಯ ಸಮಯ ಬೆಳಿಗ್ಗೆ 10:30 ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಸೆಸ್ನಾ ಸಿ 550 ವಿಮಾನ ಅಪಘಾತಕ್ಕೀಡಾಗಿದೆ ಎಂದು ವರದಿಯಾಗಿದೆ. ಅಮೇರಿಕನ್ ಆಟೋ ರೇಸಿಂಗ್ ಕಂಪನಿ ನ್ಯಾಷನಲ್ ಅಸೋಸಿಯೇಷನ್ ​​ಫಾರ್ ಸ್ಟಾಕ್

ಟೇಕಾಫ್ ವೇಳೆ‌ ಪತನಗೊಂಡ ವಿಮಾನ| ಎಲ್ಲಾ ಪ್ರಯಾಣಿಕರು ಸಾವು Read More »

ಹವಾಮಾನ ವರದಿ| ರಾಜ್ಯಾದ್ಯಂತ ‌ಮುಂದುವರಿದ ಚಳಿ, ಶೀತಗಾಳಿ| ೫ ಜಿಲ್ಲೆಗಳಿಗೆ ಅಲರ್ಟ್

ಸಮಗ್ರ ನ್ಯೂಸ್: ರಾಜ್ಯದಲ್ಲಿ ಚಳಿ ಪ್ರಮಾಣ ಹೆಚ್ಚಾಗಿದ್ದು, ಉತ್ತರ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಗಣನೀಯವಾಗಿ ಇಳಿಕೆಯಾಗಿದೆ. ಮುಂದಿನ ಎರಡು ದಿನ ಬೆಂಗಳೂರಿನಲ್ಲಿ ಮುಂಜು ಬೀಳಲಿದೆ. ಶುಕ್ರವಾರ ಉತ್ತರ ಒಳನಾಡಿನ ಬೀದರ್‌, ವಿಜಯಪುರದಲ್ಲಿಕನಿಷ್ಠ ತಾಪಮಾನ 7.4 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ. ರಾಯಚೂರು ಮತ್ತು ಧಾರವಾಡದಲ್ಲಿ ಕನಿಷ್ಠ ತಾಪಮಾನ 9 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ. ಗದಗ, ಹಾವೇರಿಯಲ್ಲಿ ತಲಾ 10 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ. ಉಳಿದಂತೆ ದಕ್ಷಿಣ ಒಳನಾಡಿನ ಹಾಸನದಲ್ಲಿ 8.5 ಡಿಗ್ರಿ ಸೆಲ್ಸಿಯಸ್‌, ದಾವಣಗೆರೆಯಲ್ಲಿ 10 ಡಿಗ್ರಿ ಸೆಲ್ಸಿಯಸ್‌,

ಹವಾಮಾನ ವರದಿ| ರಾಜ್ಯಾದ್ಯಂತ ‌ಮುಂದುವರಿದ ಚಳಿ, ಶೀತಗಾಳಿ| ೫ ಜಿಲ್ಲೆಗಳಿಗೆ ಅಲರ್ಟ್ Read More »