ಸಮಗ್ರ ಸಮಾಚಾರ

ತಮಿಳುನಾಡು ಸಿಎಂ ವಿಜಯ್ ಜೋಸೆಫ್ ಕೊಲ್ಲೂರು ಭೇಟಿ| ದೇವಿಗೆ ಬೆಳ್ಳಿ ಖಡ್ಗ ಕಾಣಿಕೆ

ಸಮಗ್ರ ನ್ಯೂಸ್: ಕೊಲ್ಲೂರು ಮೂಕಾಂಬಿಕೆ ದೇವಿ ದರ್ಶನ ಪಡೆದ ತಮಿಳುನಾಡು ಮುಖ್ಯಮಂತ್ರಿ ಜೊಸೆಫ್ ವಿಜಯ್ ದೇವಿಗೆ ಬೆಳ್ಳಿ ಖಡ್ಗ ಕಾಣಿಕೆ ನೀಡಿದ್ದಾರೆ. ದೇಗುಲದಲ್ಲಿ ಸರಿಸುಮಾರು 30 ನಿಮಿಷಗಳ ಕಾಲ ಕಳೆದ ಜೊಸೆಫ್ ವಿಜಯ್ ಬಳಿಕ ಹೊರಬಂದು ಅಭಿಮಾನಿಗಳತ್ತ ಕೈಬೀಸಿ ತೆರಳಿದ್ದಾರೆ. ಕೊಲ್ಲೂರು ಮೂಕಾಂಬಿಕೆ ದೇವಿ ದರ್ಶನ ಪಡೆದ ತಮಿಳುನಾಡು ಮುಖ್ಯಮಂತ್ರಿ ಜೊಸೆಫ್ ವಿಜಯ್ ದೇವಿಗೆ ಬೆಳ್ಳಿ ಖಡ್ಗ ಕಾಣಿಕೆ ನೀಡಿದ್ದಾರೆ. ದೇಗುಲದಲ್ಲಿ ಸರಿಸುಮಾರು 30 ನಿಮಿಷಗಳ ಕಾಲ ಕಳೆದ ಜೊಸೆಫ್ ವಿಜಯ್ ಬಳಿಕ ಹೊರಬಂದು ಅಭಿಮಾನಿಗಳತ್ತ ಕೈಬೀಸಿ […]

ತಮಿಳುನಾಡು ಸಿಎಂ ವಿಜಯ್ ಜೋಸೆಫ್ ಕೊಲ್ಲೂರು ಭೇಟಿ| ದೇವಿಗೆ ಬೆಳ್ಳಿ ಖಡ್ಗ ಕಾಣಿಕೆ Read More »

ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಆರೋಪ| ಅಂಚೆವಿತರಕ ಸುರೇಶ್ ಬಂಧನ

ಸಮಗ್ರ ನ್ಯೂಸ್: ವಿವಾಹಿತ ಮಹಿಳೆಯನ್ನು ಬಲವಂತವಾಗಿ ಅತ್ಯಾಚಾರ ಮಾಡಿದ ಪ್ರಕರಣ ಸಂಬಂಧ ಧರ್ಮಸ್ಥಳ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಕುತ್ತೋಡಿ ನಿವಾಸಿ ಪ್ರಸ್ತುತ ಅರಸಿಮಕ್ಕಿ ಗ್ರಾಮೀಣ ಅಂಚೆ ವಿತರಕ ಸುರೇಶ್ (35) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ಧರ್ಮಸ್ಥಳ ಪೊಲೀಸ್‌ ಠಾಣಾ ವ್ಯಾಪ್ತಿಯ ವಿವಾಹಿತ ಮಹಿಳೆಯನ್ನು 2023ರ ಡಿಸೆಂಬರ್ ನಲ್ಲಿ ಅತ್ಯಾಚಾರ ಮಾಡಿದ ಪ್ರಕರಣ ಸಂಬಂಧ ಸಂತ್ರಸ್ತ ಮಹಿಳೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಜೂ.7 ರಂದು ದೂರು ನೀಡಿದ್ದರು. ಪ್ರಕರಣದ ಬಗ್ಗೆ

ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಆರೋಪ| ಅಂಚೆವಿತರಕ ಸುರೇಶ್ ಬಂಧನ Read More »

ಜಗತ್ತಿನ ಮೊತ್ತಮೊದಲ ಟ್ರಿಲೇನಿಯರ್ ಆದ ಎಲಾನ್ ಮಸ್ಕ್| ಯಾರೂ ಸಾಧಿಸದ ಸಾಧನೆ ತೋರಿದ ಉದ್ಯಮಿ

ಸಮಗ್ರ ನ್ಯೂಸ್: ಜಗತ್ತಿನ ಮಹಾನ್ ಉದ್ಯಮಿ, ಟೆಕ್ ದಂತಕಥೆ ಎಲೋನ್ ಮಸ್ಕ್ ಈಗ ಜಗತ್ತಿನ ಇತಿಹಾಸದಲ್ಲೇ ಮೊದಲ ಟ್ರಿಲಿಯನೇರ್ (ಲಕ್ಷ ಕೋಟಿ ಡಾಲರ್ ಒಡೆಯ) ಎಂಬ ಐತಿಹಾಸಿಕ ಮತ್ತು ಅದ್ಭುತ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ ಮಸ್ಕ್ ಒಡೆತನದ ಬಾಹ್ಯಾಕಾಶ ಸಂಸ್ಥೆಯಾದ ಸ್ಪೇಸ್‌ಎಕ್ಸ್ ಜಾಗತಿಕ ಷೇರು ಮಾರುಕಟ್ಟೆಗೆ ಲಗ್ಗೆ ಇಟ್ಟ ಬೆನ್ನಲ್ಲೇ, ಅವರ ಆಸ್ತಿ ಮೌಲ್ಯವು ಜಗತ್ತಿನ ಯಾವುದೇ ವ್ಯಕ್ತಿ ಇದುವರೆಗೆ ತಲುಪದ ಅತಿ ದೊಡ್ಡ ಮೈಲಿಗಲ್ಲನ್ನು ದಾಟಿದೆ. ವಾಲ್ ಸ್ಟ್ರೀಟ್‌ನ ನಾಸ್ದಾಕ್ (Nasdaq) ಮಾರುಕಟ್ಟೆಯಲ್ಲಿ SPCX ಹೆಸರಿನಲ್ಲಿ ಸ್ಪೇಸ್‌ಎಕ್ಸ್

ಜಗತ್ತಿನ ಮೊತ್ತಮೊದಲ ಟ್ರಿಲೇನಿಯರ್ ಆದ ಎಲಾನ್ ಮಸ್ಕ್| ಯಾರೂ ಸಾಧಿಸದ ಸಾಧನೆ ತೋರಿದ ಉದ್ಯಮಿ Read More »

ಸರ್ಕಾರಿ ಕಟ್ಟಡದಲ್ಲಿ ಭಾರೀ ಬೆಂಕಿ| ಪ.ಬಂಗಾಳದ ಚುನಾವಣೆಗೆ ಬಳಸಲಾಗಿದ್ದ ೪ ಸಾವಿರ ಇವಿಎಂ ಭಸ್ಮ

ಸಮಗ್ರ ನ್ಯೂಸ್: ಕೊಲ್ಕತ್ತಾದ ಸರ್ಕಾರಿ ಕಟ್ಟಡವೊಂದರಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಚುನಾವಣೆಯಲ್ಲಿ ಬಳಸಲಾಗಿದ್ದ ಸುಮಾರು 4,000 ಎಲೆಕ್ಟ್ರಾನಿಕ್ ವೋಟಿಂಗ್ ಯಂತ್ರಗಳು (EVM) ಸುಟ್ಟು ಕರಕಲಾಗಿವೆ. ಘಟನೆಗೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ದಕ್ಷಿಣ ಕೊಲ್ಕತ್ತಾದ ಅಲಿಪೋರ್ ಪ್ರದೇಶದಲ್ಲಿರುವ 9 ಅಂತಸ್ತಿನ ಕಟ್ಟಡದಲ್ಲಿ ಭೀಕರ ಬೆಂಕಿ ಕಾಣಿಸಿಕೊಂಡಿತ್ತು. ಈ ಬೃಹತ್ ಕಟ್ಟಡದಲ್ಲಿ ದಕ್ಷಿಣ 24 ಪರಗಣ ಜಿಲ್ಲಾ ಪರಿಷತ್ ಕಚೇರಿ ಸೇರಿದಂತೆ ಇತರ ಇಲಾಖೆಗಳ ಕಚೇರಿಗಳೂ ಕಾರ್ಯನಿರ್ವಹಿಸುತ್ತಿದ್ದವು. ಬೆಂಕಿಗೆ 4,000 ಇವಿಎಂ ಯಂತ್ರಗಳು ನಾಶವಾಗಿವೆ.

ಸರ್ಕಾರಿ ಕಟ್ಟಡದಲ್ಲಿ ಭಾರೀ ಬೆಂಕಿ| ಪ.ಬಂಗಾಳದ ಚುನಾವಣೆಗೆ ಬಳಸಲಾಗಿದ್ದ ೪ ಸಾವಿರ ಇವಿಎಂ ಭಸ್ಮ Read More »

ಫೀಫಾ ವಿಶ್ವಕಪ್| ಆರಂಭಿಕ ಪಂದ್ಯದಲ್ಲೇ ರೆಡ್ ಕಾರ್ಡ್ ಪಡೆದ ಮೂವರು ಆಟಗಾರರು

ಸಮಗ್ರ ನ್ಯೂಸ್: ಫಿಫಾ-2026 ಟೂರ್ನಿಗೆ ಗುರುವಾರ ನಾಟಕೀಯ ಚಾಲನೆ ದೊರಕಿದ್ದು, ಸಹ ಅತಿಥೇಯ ಮೆಕ್ಸಿಕೊ ತಂಡ ಆರಂಭಿಕ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು 2-0 ಗೋಲುಗಳಿಂದ ಸೋಲಿಸಿದೆ. ಆದರೆ ಆರಂಭಿಕ ಪಂದ್ಯದಲ್ಲೇ ಮೂವರು ಆಟಗಾರರು ರೆಡ್‌ಕಾರ್ಡ್ ಪಡೆದಿರುವುದು ಹೊಸ ದಾಖಲೆ ಎನಿಸಿದೆ. ಫಿಫಾ ವಿಶ್ವಕಪ್-2010ರ ಆರಂಭಿಕ ಪಂದ್ಯದಲ್ಲಿ ಜೋಹಾನ್ಸ್‌ಬರ್ಗ್‌ನಲ್ಲಿ 1-1 ಡ್ರಾ ಮಾಡಿಕೊಂಡ ಹದಿನಾರು ವರ್ಷಗಳ ಬಳಿಕ ಎಸ್ಟಾಡಿಯೊ ಅಝೆಟ್ಕಾದಲ್ಲಿ ತವರಿನ ಪ್ರೇಕ್ಷಕರ ಬೆಂಬಲದ ಪ್ರಯೋಜನ ಪಡೆದ ಮೆಕ್ಸಿಕೋ ತಂಡ, ಜ್ಯೂಲಿಯನ್ ಕ್ವಿನೊನೆಸ್ ಹಾಗೂ ರವೂಲ್ ಜಿಮೆನೆಝ್ ಅವರ

ಫೀಫಾ ವಿಶ್ವಕಪ್| ಆರಂಭಿಕ ಪಂದ್ಯದಲ್ಲೇ ರೆಡ್ ಕಾರ್ಡ್ ಪಡೆದ ಮೂವರು ಆಟಗಾರರು Read More »

ಇನ್ನೆರಡು ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ – ಸಚಿವ ಬೈರತಿ

ಸಮಗ್ರ ನ್ಯೂಸ್: ರಾಜ್ಯದ ವಿದ್ಯಾರ್ಥಿಗಳಿಗೆ ಭಾರೀ ಸಂತಸದ ಸುದ್ದಿಯೊಂದು ಹೊರಬಿದ್ದಿದೆ. ಇದೇ ಮೊದಲ ಬಾರಿಗೆ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಿಸುವ ಐತಿಹಾಸಿಕ ಯೋಜನೆಗೆ ರಾಜ್ಯ ಸರ್ಕಾರ ಚಾಲನೆ ನೀಡಿದ್ದು, ಇನ್ನೆರಡು ದಿನಗಳೊಳಗೆ ಅದರ ಮಾರ್ಗಸೂಚಿಗಳನ್ನು ಪ್ರಕಟಿಸಲಾಗುವುದು ಎಂದು ಸಾರಿಗೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ. ಇದುವರೆಗೆ ಉಚಿತ ಬಸ್ ಪಾಸ್ ಸೌಲಭ್ಯವು ವಿದ್ಯಾರ್ಥಿನಿಯರಿಗೆ ಮಾತ್ರ ಸೀಮಿತವಾಗಿತ್ತು. ಆದರೆ ಇದೀಗ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ವಿದ್ಯಾರ್ಥಿಗಳಿಗೂ ಈ ಸೌಲಭ್ಯವನ್ನು ವಿಸ್ತರಿಸುವ ಮಹತ್ವದ ನಿರ್ಧಾರ

ಇನ್ನೆರಡು ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ – ಸಚಿವ ಬೈರತಿ Read More »

ಧರ್ಮಸ್ಥಳ ಬುರುಡೆ ಪ್ರಕರಣ| ನಟ ಪ್ರಕಾಶ್ ರಾಜ್ ಹೆಸರು ಉಲ್ಲೇಖಿಸಿದ ಚಿನ್ನಯ್ಯ

ಸಮಗ್ರ ನ್ಯೂಸ್: ಧರ್ಮಸ್ಥಳ ಗ್ರಾಮದ ಬಹುಚರ್ಚಿತ “ಬುರುಡೆ ಕೇಸ್” ಪ್ರಕರಣಕ್ಕೆ ಈಗ ಅತ್ಯಂತ ಸ್ಫೋಟಕ ತಿರುವು ಸಿಕ್ಕಿದೆ. ಈ ಇಡೀ ಪ್ರಕರಣವು ಧರ್ಮಸ್ಥಳ ಕ್ಷೇತ್ರ ಮತ್ತು ಹೆಗ್ಗಡೆಯವರ ವಿರುದ್ಧ ನಡೆದ ದೊಡ್ಡ ಮಟ್ಟದ ಪಿತೂರಿ ಎಂದು ಆರೋಪಿಸಿ, ಪ್ರಕರಣದ ಪ್ರಮುಖ ವ್ಯಕ್ತಿ ಚಿನ್ನಯ್ಯ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದಾನೆ. ವಿಶೇಷವೆಂದರೆ, ಈ ಅರ್ಜಿಯಲ್ಲಿ ಆತ ಬಹುಭಾಷಾ ನಟ ಪ್ರಕಾಶ್ ರಾಜ್ ಸೇರಿದಂತೆ ಹಲವು ಪ್ರಮುಖರ ಹೆಸರುಗಳನ್ನು ಬಹಿರಂಗಪಡಿಸಿದ್ದು, ಇದು ಕರಾವಳಿ ಹಾಗೂ ರಾಜ್ಯರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದೆ.

ಧರ್ಮಸ್ಥಳ ಬುರುಡೆ ಪ್ರಕರಣ| ನಟ ಪ್ರಕಾಶ್ ರಾಜ್ ಹೆಸರು ಉಲ್ಲೇಖಿಸಿದ ಚಿನ್ನಯ್ಯ Read More »

ಕೊನೆಕ್ಷಣದಲ್ಲಿ ಯೂಟರ್ನ್ ಹೊಡೆದ ಟ್ರಂಪ್| ಅಮೇರಿಕಾ ಮಿಲಿಟರಿ ಕಾರ್ಯಾಚರಣೆ ಸ್ಥಗಿತಗೊಳಿಸಲು ಕಾರಣವೇನು?

ಸಮಗ್ರ ನ್ಯೂಸ್: ಇರಾನ್ ವಿರುದ್ಧ ನಡೆಸಲು ನಿಗದಿಯಾಗಿದ್ದ ಮಿಲಿಟರಿ ಕಾರ್ಯಾಚರಣೆ ಹಾಗೂ ಭೀಕರ ಬಾಂಬ್ ದಾಳಿಗಳನ್ನು ಕೊನೆ ಕ್ಷಣದಲ್ಲಿ ರದ್ದುಪಡಿಸಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗುರುವಾರ ಅಧಿಕೃತವಾಗಿ ಘೋಷಿಸಿದ್ದಾರೆ. ಇರಾನ್‌ನ ಉನ್ನತ ನಾಯಕರೊಂದಿಗೆ ನಡೆಸಲಾದ ರಾಜತಾಂತ್ರಿಕ ಮಾತುಕತೆಗಳು ಅತ್ಯಂತ ಮಹತ್ವದ ಹಂತವನ್ನು ತಲುಪಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ತಮ್ಮದೇ ಒಡೆತನದ ‘ಟ್ರೂತ್ ಸೋಷಿಯಲ್’ (Truth Social) ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಸಂದೇಶ ಪ್ರಕಟಿಸಿರುವ ಡೊನಾಲ್ಡ್ ಟ್ರಂಪ್, ಇರಾನ್‌ನ ಅತ್ಯುನ್ನತ

ಕೊನೆಕ್ಷಣದಲ್ಲಿ ಯೂಟರ್ನ್ ಹೊಡೆದ ಟ್ರಂಪ್| ಅಮೇರಿಕಾ ಮಿಲಿಟರಿ ಕಾರ್ಯಾಚರಣೆ ಸ್ಥಗಿತಗೊಳಿಸಲು ಕಾರಣವೇನು? Read More »

ಒಂಟಿ ಪುರುಷರಿಗೂ ಸಿಗಲಿದೆ 6 ತಿಂಗಳ ‘ಶಿಶುಪಾಲನಾ ರಜೆ’

ಸಮಗ್ರ ನ್ಯೂಸ್: ರಾಜ್ಯದ ಒಂಟಿ ಪುರುಷ ಸರ್ಕಾರಿ ನೌಕರರಿಗೆ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದೆ. ಇದುವರೆಗೆ ಕೇವಲ ಮಹಿಳಾ ಉದ್ಯೋಗಿಗಳಿಗೆ ಮಾತ್ರ ಸೀಮಿತವಾಗಿದ್ದ ‘ಶಿಶುಪಾಲನಾ ರಜೆ’ ಸೌಲಭ್ಯವನ್ನು ಇದೀಗ ಒಂಟಿ ಪುರುಷ ನೌಕರರಿಗೂ ವಿಸ್ತರಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಇದು ಕೇವಲ ಆಡಳಿತಾತ್ಮಕ ಬದಲಾವಣೆಯಷ್ಟೇ ಅಲ್ಲದೆ, ಮಕ್ಕಳ ಹಕ್ಕು ಮತ್ತು ಅವರ ಪಾಲನೆಯನ್ನು ಗಮನದಲ್ಲಿಟ್ಟುಕೊಂಡು ಕೈಗೊಂಡಿರುವ ಅತ್ಯಂತ ಮಾನವೀಯ ಹೆಜ್ಜೆಯಾಗಿದೆ. ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ತಂದೆ-ತಾಯಿ ಇಬ್ಬರ ಆಸರೆಯೂ ಮುಖ್ಯ. ಆದರೆ ಅನಿವಾರ್ಯ ಕಾರಣಗಳಿಂದ

ಒಂಟಿ ಪುರುಷರಿಗೂ ಸಿಗಲಿದೆ 6 ತಿಂಗಳ ‘ಶಿಶುಪಾಲನಾ ರಜೆ’ Read More »

ರಾಜ್ಯಸಭಾ ಚುನಾವಣೆ| ಕಾಂಗ್ರೆಸ್ ನ ಮೂವರು, ಬಿಜೆಪಿಯ ಒಬ್ಬರು ಅವಿರೋಧ ಆಯ್ಕೆ

ಸಮಗ್ರ ನ್ಯೂಸ್: ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಘೋಷಣೆಯಾಗಿದ್ದ ದ್ವೈವಾರ್ಷಿಕ ಚುನಾವಣೆಯ ಪ್ರಕ್ರಿಯೆ ಪೂರ್ಣಗೊಂಡಿದ್ದು, ನಾಲ್ಕೂ ಜನ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಾಮಪತ್ರಗಳನ್ನು ಹಿಂಪಡೆಯಲು ಇಂದು ಕಡೆಯ ದಿನವಾಗಿದ್ದು, ಕಣದಲ್ಲಿದ್ದ ಏಕೈಕ ಪಕ್ಷೇತರ ಅಭ್ಯರ್ಥಿಯ ನಾಮಪತ್ರ ತಾಂತ್ರಿಕ ಕಾರಣಗಳಿಂದಾಗಿ ತಿರಸ್ಕೃತಗೊಂಡ ಹಿನ್ನೆಲೆಯಲ್ಲಿ ಈ ಅವಿರೋಧ ಆಯ್ಕೆ ನಿಶ್ಚಿತವಾಗಿದೆ. ಕಾಂಗ್ರೆಸ್ ಪಕ್ಷದ ಮೂವರು ಹಾಗೂ ಬಿಜೆಪಿಯ ಓರ್ವ ಅಭ್ಯರ್ಥಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿಯೂ ಆಗಿರುವ ವಿಧಾನಸಭೆಯ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ಅವರು ಅಧಿಕೃತವಾಗಿ ಪ್ರಕಟಿಸಿದ್ದಾರೆ. ಅವಿರೋಧವಾಗಿ

ರಾಜ್ಯಸಭಾ ಚುನಾವಣೆ| ಕಾಂಗ್ರೆಸ್ ನ ಮೂವರು, ಬಿಜೆಪಿಯ ಒಬ್ಬರು ಅವಿರೋಧ ಆಯ್ಕೆ Read More »