ಸಮಗ್ರ ಸಮಾಚಾರ

ಸುಬ್ರಹ್ಮಣ್ಯ: ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ಪ್ರತಿಭಟನೆ

ಸುಬ್ರಮಣ್ಯ: ಕಸ್ತೂರಿ ರಂಗನ್ ವರದಿ ಜಾರಿಗೆ ವಿರೋಧಿಸಿ ಬಳ್ಪ ಹಾಗೂ ಸುಬ್ರಹ್ಮಣ್ಯದಲ್ಲಿ ಸೋಮವಾರ ಮಲೆನಾಡು ಜನಹಿತ ರಕ್ಷಣ ವೇದಿಕೆ ನೇತೃತ್ವದಲ್ಲಿ ರೈತರು ಪ್ರತಿಭಟನೆ ನಡೆಸಿದರು. ಬಳಿಕ ಬಳ್ಪ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಮನವಿ ಸಲ್ಲಿಸ ಲಾಯಿತು. ಎರಡನೇ ಹಂತದಲ್ಲಿ ಸುಬ್ರಹ್ಮಣ್ಯ ದಲ್ಲಿ ಪ್ರತಿಭಟನೆ ನಡೆಸಿ ಸುಬ್ರಹ್ಮಣ್ಯ ಗ್ರಾಮ ಪಂಚಾಯಿತಿ ಕಾರ್ಯದರ್ಶಿಗೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಸುಮಾರು 1,000ಕ್ಕೂ ಅಧಿಕ ಮಂದಿ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಮಲೆನಾಡು ಜನಹಿತ ರಕ್ಷಣ ವೇದಿಕೆಯ ರಾಜ್ಯ ಸಂಚಾಲಕ ಕಿಶೋರ್ ಶಿರಾಡಿ ಮಾತನಾಡಿ,

ಸುಬ್ರಹ್ಮಣ್ಯ: ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ಪ್ರತಿಭಟನೆ Read More »

ಪುತ್ತೂರು ಜೆರಾಕ್ಸ್ ಅಂಗಡಿಯಲ್ಲಿ ಹಲ್ಲೆ ಪ್ರಕರಣ| ಬಂಧಿತ ಆರೋಪಿ ಸುದರ್ಶನ್ ಪೈ ಗೆ ಜಾಮೀನು

ಸಮಗ್ರ ನ್ಯೂಸ್: ದರ್ಬೆಯ ಜನಸೇವಾ ಕೇಂದ್ರವೊಂದರಲ್ಲಿ ತಾಂತ್ರಿಕ ದೋಷದಿಂದ ಗ್ರಾಹಕರ ದಾಖಲಾತಿ ಹಾನಿಗೊಂಡ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಹಲ್ಲೆ ಪ್ರಕರಣದಲ್ಲಿ ಬಂಧಿತರಾಗಿ ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸುದರ್ಶನ್ ಪೈಗೆ ಜಿಲ್ಲಾ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಇದೇ ಪ್ರಕರಣದ ಇನ್ನೋರ್ವ ಆರೋಪಿಯಾಗಿರುವ ಜನಸೇವಾ ಕೇಂದ್ರದ ಮಾಲಕಿ ಅಂಜನಾ ಎಸ್. ಪೈ ಅವರಿಗೆ ನಿರೀಕ್ಷಣಾ ಜಾಮೀನು ಲಭಿಸಿದೆ. ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಉಭಯ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿ ಆದೇಶಿಸಿದೆ. ಸುಳ್ಯ ತಾಲೂಕಿನ

ಪುತ್ತೂರು ಜೆರಾಕ್ಸ್ ಅಂಗಡಿಯಲ್ಲಿ ಹಲ್ಲೆ ಪ್ರಕರಣ| ಬಂಧಿತ ಆರೋಪಿ ಸುದರ್ಶನ್ ಪೈ ಗೆ ಜಾಮೀನು Read More »

ಸೆ.18: ಮಂಗಳೂರಿನಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಸಮಗ್ರ ನ್ಯೂಸ್: ಮುಖ್ಯಮಂತ್ರಿಯಾದ ಬಳಿಕ ಡಿ.ಕೆ.ಶಿವಕುಮಾರ್‌ ಆಡಳಿತವನ್ನು ಜನರ ಬಳಿಗೆ ತೆಗೆದುಕೊಂಡು ಹೋಗಲು ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಮತ್ತೂ ಒಂದು ಹೆಜ್ಜೆ ಮುಂದೆ ಹೋಗಿ ಇದೇ ಮೊದಲ ಬಾರಿಗೆ ಕರಾವಳಿ ಪ್ರದೇಶಗಳಲ್ಲಿ ಸಚಿವ ಸಂಪುಟ ಸಭೆ ನಡೆಸಲು ಮುಂದಾಗಿದ್ದಾರೆ.ಸೆ. 18ರಂದು ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಸಲು ನಿರ್ಧರಿಸಲಾಗಿದೆ. ಈ ಮೊದಲು ಬೆಳಗಾವಿ, ಕಲಬುರಗಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಇತ್ತೀಚೆಗೆ ಸಚಿವ ಸಂಪುಟ ಸಭೆಗಳು ನಡೆದಿದ್ದವು. ಸಾಮಾನ್ಯವಾಗಿ ರಾಜಧಾನಿ ಬೆಂಗಳೂರಿನಲ್ಲೇ ಸಚಿವ ಸಂಪುಟ ಸಭೆಗಳು ನಡೆಯುವುದು ವಾಡಿಕೆ.

ಸೆ.18: ಮಂಗಳೂರಿನಲ್ಲಿ ರಾಜ್ಯ ಸಚಿವ ಸಂಪುಟ ಸಭೆ Read More »

ಕರಾವಳಿಯಲ್ಲಿ ಜನ್ಮಾಷ್ಟಮಿ, ಕ್ರೈಸ್ತ ತೆನೆಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಿ| ಶಾಸಕ ವೇದವ್ಯಾಸ ಕಾಮತ್ ಮನವಿ

ಸಮಗ್ರ ನ್ಯೂಸ್: ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಅತ್ಯಂತ ಶ್ರದ್ಧಾ-ಭಕ್ತಿಯಿಂದ ಆಚರಿಸಲ್ಪಡುವ ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ಕ್ರೈಸ್ತ ಸಮುದಾಯದ ಪ್ರಮುಖ ಹಬ್ಬವಾದ ಮರಿಯಮ್ಮ ಜಯಂತಿ/ತೆನೆ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸುವಂತೆ ಮಂಗಳೂರು ನಗರ ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಅವರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ನಾಡಿನೆಲ್ಲೆಡೆ ಸಾಲು ಸಾಲು ಹಬ್ಬಗಳ ಸಂಭ್ರಮ ಮನೆಮಾಡಿದ್ದು, ಸೆಪ್ಟೆಂಬರ್ 4 ರಂದು ಕರಾವಳಿಯಾದ್ಯಂತ ಅತ್ಯಂತ ವಿಜೃಂಭಣೆಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು

ಕರಾವಳಿಯಲ್ಲಿ ಜನ್ಮಾಷ್ಟಮಿ, ಕ್ರೈಸ್ತ ತೆನೆಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಿ| ಶಾಸಕ ವೇದವ್ಯಾಸ ಕಾಮತ್ ಮನವಿ Read More »

ಬ್ಯಾಂಕ್ ಆಫ್ ಬರೋಡಾದಲ್ಲಿ 2482 ಹುದ್ದೆಗಳಿಗೆ ಅರ್ಜಿ ಆಹ್ವಾನ| ಸ್ಥಳೀಯ ಭಾಷೆ ಬಲ್ಲವರಿಗೆ ಆಧ್ಯತೆ

ಸಮಗ್ರ ನ್ಯೂಸ್: ಬ್ಯಾಂಕ್‌ ಸಿಬ್ಬಂದಿಗೆ ಸ್ಥಳಿಯ ಭಾಷೆ ಬರಬೇಕು ಎಂಬ ಕನ್ನಡಿಗರ ಹೋರಾಟಕ್ಕೆ ಜಯ ಸಂದಿದ್ದು, ಬ್ಯಾಂಕಿಂಗ್ ವಲಯದಲ್ಲಿ ಉದ್ಯೋಗ ಹುಡುಕುತ್ತಿರುವ ಕನ್ನಡಿಗರಿಗೂ ಮಹತ್ವದ ಸುದ್ದಿ ಲಭಿಸಿದೆ. ಕರ್ನಾಟಕ ಸೇರಿದಂತೆ ದೇಶದ 20 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಸ್ಥಳೀಯ ಭಾಷೆಗಳನ್ನು ಮಾತನಾಡಬಲ್ಲ 2,482 ಅಧಿಕಾರಿಗಳನ್ನು ನೇಮಿಸಿಕೊಳ್ಳಲು ಬ್ಯಾಂಕ್ ಆಫ್ ಬರೋಡಾ (ಬಿಒಬಿ) ನಿರ್ಧರಿಸಿದೆ. ಬ್ಯಾಂಕ್ ಸಿಬ್ಬಂದಿ ಗ್ರಾಹಕರಿಗೆ ಸ್ಥಳೀಯ ಭಾಷೆಗಳನ್ನು ಮಾತನಾಡಲು ಸಾಧ್ಯವಾಗುತ್ತಿಲ್ಲ ಎಂಬ ಕಳವಳ ಹಾಗೂ ಆಕ್ರೋಶ ಹೆಚ್ಚುತ್ತಿರುವ ಸಮಯದಲ್ಲಿ ಈ ನಿರ್ಧಾರ ಬಂದಿದೆ.

ಬ್ಯಾಂಕ್ ಆಫ್ ಬರೋಡಾದಲ್ಲಿ 2482 ಹುದ್ದೆಗಳಿಗೆ ಅರ್ಜಿ ಆಹ್ವಾನ| ಸ್ಥಳೀಯ ಭಾಷೆ ಬಲ್ಲವರಿಗೆ ಆಧ್ಯತೆ Read More »

ಕೊಪ್ಪಳ: ಜಾನಕಿಯಾಗಿ ವೆಂಕಟೇಶ್ ನ ಕೈಹಿಡಿದ ಶಹೀನಾ

ಸಮಗ್ರ ನ್ಯೂಸ್: ಕೊಪ್ಪಳದ ಭಾಗ್ಯನಗರದ ಕಲ್ಯಾಣ ಮಂಟಪದಲ್ಲಿ ನಡೆದ ಹಿಂದೂ ಯುವಕ-ಮುಸ್ಲಿಂ ಯುವತಿಯ ವಿವಾಹ ಸಾಮರಸ್ಯ, ಸೌಹಾರ್ದಕ್ಕೆ ಸಾಕ್ಷಿಯಾಯಿತು. ಪ್ರೀತಿಸಿದ ಯುವಕನಿಗಾಗಿ ಮುಸ್ಲಿಂ ಯುವತಿ ಧರ್ಮದ ಕಟ್ಟಳೆ ಮೀರಿ ಬಿಂದಿ ಧರಿಸಿ, ಸಪ್ತಪದಿ ತುಳಿದು ಹಿಂದೂ ಸಂಪ್ರದಾಯದಂತೆ ಶಾಸ್ತ್ರೋಕ್ತವಾಗಿ ಮದುವೆಯಾಗಿದ್ದಾರೆ. ತಾಲೂಕಿನ ಅಳವಂಡಿ ಗ್ರಾಮದ ಚಂದ್ರಕಲಾ ಹಾಗೂ ಸಿದ್ದರಡ್ಡಿ ಬಿಸನಹಳ್ಳಿ ಎಂಬುವರ ಮಗ ವೆಂಕಟೇಶ್ ರಡ್ಡಿ ಹಾಗೂ ಧಾರವಾಡ ಜಿಲ್ಲೆ ನವಲಗುಂದ ತಾಲೂಕಿನ ಚಿಲಕವಾಡ ಗ್ರಾಮದ ಮಮ್ತಾಜಿ ಹಾಗೂ ಬಾಷುಸಾಬ್‌ ಕಟ್ಟಿಮನಿ ಅವರ ಪುತ್ರಿ ಶಹೀನಾ ಮದುವೆ

ಕೊಪ್ಪಳ: ಜಾನಕಿಯಾಗಿ ವೆಂಕಟೇಶ್ ನ ಕೈಹಿಡಿದ ಶಹೀನಾ Read More »

ನೇಪಾಳ ಹಿಮ ಪ್ರವಾಹ| 900 ದಾಟಿದ ಸಾವಿನ ಸಂಖ್ಯೆ| 4000 ಕ್ಕೂ ಅಧಿಕ ಮಂದಿ ಕಣ್ಮರೆ

ಸಮಗ್ರ ನ್ಯೂಸ್: ಹಿಮ ಪರ್ವತಗಳ ಸುಂದರ ದೇಶ ನೇಪಾಳದಲ್ಲಿ ಭೀಕರ ಪ್ರವಾಹ ಮತ್ತು ಸರಣಿ ಭೂಕುಸಿತದಿಂದಾಗಿ ಭೀಕರ ಜಲಪ್ರಳಯ ಸಂಭವಿಸಿದ್ದು, ದಿನದಿಂದ ದಿನಕ್ಕೆ ಸಾವಿನ ಸಂಖ್ಯೆ ಏರುತ್ತಲೇ ಇದೆ. ಪ್ರವಾಹಕ್ಕೆ ಬಲಿಯಾದವರ ಸಂಖ್ಯೆ ಈಗಾಗಲೇ 903ಕ್ಕೆ ಏರಿಕೆಯಾಗಿದ್ದು, ಸುಮಾರು 4,000 ಜನರು ನಾಪತ್ತೆಯಾಗಿದ್ದಾರೆ. ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಕಾಲಿಟ್ಟಲ್ಲೆಲ್ಲ ಶವಗಳ ರಾಶಿ ಕಂಡುಬರುತ್ತಿದ್ದು, ಶವಗಳ ದುರ್ನಾತದಿಂದ ಇಡೀ ಪ್ರದೇಶವೇ ನರಕಸಾದೃಶ್ಯವಾಗಿ ಬದಲಾಗಿದೆ. ಅನೇಕ ಶವಗಳು ಸಂಪೂರ್ಣವಾಗಿ ಸಿಥಿಲಗೊಂಡಿರುವುದರಿಂದ ಅವುಗಳ ಗುರುತು ಪತ್ತೆ ಮಾಡುವುದು ರಕ್ಷಣಾ ಸಿಬ್ಬಂದಿಗೆ ದೊಡ್ಡ

ನೇಪಾಳ ಹಿಮ ಪ್ರವಾಹ| 900 ದಾಟಿದ ಸಾವಿನ ಸಂಖ್ಯೆ| 4000 ಕ್ಕೂ ಅಧಿಕ ಮಂದಿ ಕಣ್ಮರೆ Read More »

ನೇಪಾಳ ಪ್ರವಾಹ| ದಿನದಿನವಹ ಏರುತ್ತಿರುವ ಸಾವಿನ ಲೆಕ್ಕ

ಸಮಗ್ರ ನ್ಯೂಸ್: ನೇಪಾಳದಲ್ಲಿ ಸಂಭವಿಸಿದ ಹಠಾತ್‌ ಪ್ರವಾಹದಿಂದ ಮೃತಪಟ್ಟವರ ಸಂಖ್ಯೆ ಶನಿವಾರ 675ಕ್ಕೆ ಏರಿಕೆಯಾಗಿದ್ದು, ರಕ್ಷಣಾ ತಂಡಗಳು ಸಮರೋಪಾದಿಯಲ್ಲಿ ಶೋಧ ಮತ್ತು ಪರಿಹಾರ ಕಾರ್ಯಗಳನ್ನು ಮುಂದುವರಿಸಿವೆ. ಅಲ್ಲದೆ, ಚೀನಾ ಭಾಗದಲ್ಲಿಯೂ ಏಳು ಜನ ಮೃತಪಟ್ಟಿದ್ದಾರೆ. ಇನ್ನೂ 2,426 ಮಂದಿ ನಾಪತ್ತೆಯಾಗಿದ್ದಾರೆ. ಇಲ್ಲಿಯವರೆಗೆ ಸುಮಾರು 2,465 ಜನರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ. ಮತ್ತೊಂದೆಡೆ, ಭೋಟೆ ಕೋಶಿ ನದಿಯಲ್ಲಿ ನೀರಿನ ಮಟ್ಟ ಏರುತ್ತಿದ್ದು ಮತ್ತೊಂದು ಪ್ರವಾಹದ ಭೀತಿಯೂ ಆವರಿಸಿದೆ. ನಾಪತ್ತೆ ಆದವರಲ್ಲಿ 517 ವಿದೇಶಿಯರು ಮತ್ತು ಜಲವಿದ್ಯುತ್‌ ಯೋಜನೆಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದ

ನೇಪಾಳ ಪ್ರವಾಹ| ದಿನದಿನವಹ ಏರುತ್ತಿರುವ ಸಾವಿನ ಲೆಕ್ಕ Read More »

ಭಾರತದ ಮೇಲಿದೆ 200 ಲಕ್ಷ ಕೋಟಿ ಸಾಲ| ಸಾಲ‌ ಕೊಟ್ಟವರಾರು? ಬಡ್ಡಿ ಎಷ್ಟು ಗೊತ್ತಾ?

ಸಮಗ್ರ ನ್ಯೂಸ್: ಭಾರತದ ಆರ್ಥಿಕತೆ ವೇಗವಾಗಿ ಬೆಳೆಯುತ್ತಿದ್ದರೂ, ದೇಶದ ಮೇಲಿನ ಸಾಲದ ಹೊರೆಯೂ ಹೆಚ್ಚಾಗುತ್ತಿದೆ. ಮಾರ್ಚ್ 2026ರ ವೇಳೆಗೆ ಕೇಂದ್ರ ಸರ್ಕಾರದ ಒಟ್ಟು ಸಾಲ ಬರೋಬ್ಬರಿ ₹200.53 ಲಕ್ಷ ಕೋಟಿಗೆ ತಲುಪಿದೆ. ಈ ಪೈಕಿ ₹191.46 ಲಕ್ಷ ಕೋಟಿ ದೇಶೀಯ ಸಾಲವಾಗಿದ್ದರೆ, ₹9.07 ಲಕ್ಷ ಕೋಟಿ ವಿದೇಶಿ ಸಾಲವಾಗಿದೆ. ಇನ್ನು ಸಾಲದ ಮೇಲಿನ ಬಡ್ಡಿ ಪಾವತಿಗೂ ಸರ್ಕಾರ ₹12.74 ಲಕ್ಷ ಕೋಟಿ ಖರ್ಚು ಮಾಡುತ್ತಿದೆ. ವಿಶ್ವಬ್ಯಾಂಕ್‌ನ 2025ರ ಅಂಕಿಅಂಶಗಳ ಪ್ರಕಾರ ಭಾರತದ ಜಿಡಿಪಿ (GDP) ಸುಮಾರು 3.96

ಭಾರತದ ಮೇಲಿದೆ 200 ಲಕ್ಷ ಕೋಟಿ ಸಾಲ| ಸಾಲ‌ ಕೊಟ್ಟವರಾರು? ಬಡ್ಡಿ ಎಷ್ಟು ಗೊತ್ತಾ? Read More »

ದ್ವಾದಶ ರಾಶಿಗಳ ವಾರಭವಿಷ್ಯ| ಆ.31 ರಿಂದ ಸೆ.5ರ ವರೆಗೆ

ಸಮಗ್ರ ನ್ಯೂಸ್: ಸೆಪ್ಟೆಂಬರ್ ತಿಂಗಳ ಮೊದಲನೇ ವಾರದಲ್ಲಿ ಔದ್ಯೋಗಿಕವಾದ ಪ್ರಗತಿ ಅನುಭವಕ್ಕೆ ಬರಲಿದೆ. ಆರ್ಥಿಕ ವೃದ್ಧಿ ಹೆಚ್ಚು ಇರದಿದ್ದರೂ ನೆಮ್ಮದಿ, ಕಾರ್ಯದಲ್ಲಿ ಉತ್ಸಾಹ ಅಧಿಕವಾಗಿ ಇರಲಿದೆ. ಹವ್ಯಾಸವಾಗಿ ತೆಗೆದುಕೊಂಡ ಉದ್ಯೋಗದಲ್ಲಿ ಸೃಜನಾತ್ಮಕತೆ ಕಾಣಿಸುವುದು. ಮೇಷ ರಾಶಿ:​ಮಂಗಳ ತೃತೀಯ ಸ್ಥಾನದಲ್ಲಿ ಹಾಗೂ ಶನಿ ದ್ವಾದಶ ಸ್ಥಾನದಲ್ಲಿ. ನಿಮ್ಮ ಶೌರ್ಯ ಮತ್ತು ಆತ್ಮವಿಶ್ವಾಸ ಹೆಚ್ಚಾಗುತ್ತದೆ. ಮಾಧ್ಯಮ, ಮಾರಾಟ, ಸಂವಹನ ಮತ್ತು ಸಾಹಸಮಯ ಕ್ಷೇತ್ರಗಳಲ್ಲಿ ಇರುವವರಿಗೆ ಹೊಸ ಅವಕಾಶಗಳು ಲಭ್ಯವಾಗಲಿವೆ. ಉದ್ಯೋಗ ಬದಲಾವಣೆಗೆ ಇದು ಸೂಕ್ತ ಸಮಯ. ಆದರೆ 12ನೇ ಮನೆಯ

ದ್ವಾದಶ ರಾಶಿಗಳ ವಾರಭವಿಷ್ಯ| ಆ.31 ರಿಂದ ಸೆ.5ರ ವರೆಗೆ Read More »