ಸಮಗ್ರ ಸಮಾಚಾರ

ಸರ್ಕಾರಿ ಕಟ್ಟಡದಲ್ಲಿ ಭಾರೀ ಬೆಂಕಿ| ಪ.ಬಂಗಾಳದ ಚುನಾವಣೆಗೆ ಬಳಸಲಾಗಿದ್ದ ೪ ಸಾವಿರ ಇವಿಎಂ ಭಸ್ಮ

ಸಮಗ್ರ ನ್ಯೂಸ್: ಕೊಲ್ಕತ್ತಾದ ಸರ್ಕಾರಿ ಕಟ್ಟಡವೊಂದರಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಚುನಾವಣೆಯಲ್ಲಿ ಬಳಸಲಾಗಿದ್ದ ಸುಮಾರು 4,000 ಎಲೆಕ್ಟ್ರಾನಿಕ್ ವೋಟಿಂಗ್ ಯಂತ್ರಗಳು (EVM) ಸುಟ್ಟು ಕರಕಲಾಗಿವೆ. ಘಟನೆಗೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ದಕ್ಷಿಣ ಕೊಲ್ಕತ್ತಾದ ಅಲಿಪೋರ್ ಪ್ರದೇಶದಲ್ಲಿರುವ 9 ಅಂತಸ್ತಿನ ಕಟ್ಟಡದಲ್ಲಿ ಭೀಕರ ಬೆಂಕಿ ಕಾಣಿಸಿಕೊಂಡಿತ್ತು. ಈ ಬೃಹತ್ ಕಟ್ಟಡದಲ್ಲಿ ದಕ್ಷಿಣ 24 ಪರಗಣ ಜಿಲ್ಲಾ ಪರಿಷತ್ ಕಚೇರಿ ಸೇರಿದಂತೆ ಇತರ ಇಲಾಖೆಗಳ ಕಚೇರಿಗಳೂ ಕಾರ್ಯನಿರ್ವಹಿಸುತ್ತಿದ್ದವು. ಬೆಂಕಿಗೆ 4,000 ಇವಿಎಂ ಯಂತ್ರಗಳು ನಾಶವಾಗಿವೆ. […]

ಸರ್ಕಾರಿ ಕಟ್ಟಡದಲ್ಲಿ ಭಾರೀ ಬೆಂಕಿ| ಪ.ಬಂಗಾಳದ ಚುನಾವಣೆಗೆ ಬಳಸಲಾಗಿದ್ದ ೪ ಸಾವಿರ ಇವಿಎಂ ಭಸ್ಮ Read More »

ಫೀಫಾ ವಿಶ್ವಕಪ್| ಆರಂಭಿಕ ಪಂದ್ಯದಲ್ಲೇ ರೆಡ್ ಕಾರ್ಡ್ ಪಡೆದ ಮೂವರು ಆಟಗಾರರು

ಸಮಗ್ರ ನ್ಯೂಸ್: ಫಿಫಾ-2026 ಟೂರ್ನಿಗೆ ಗುರುವಾರ ನಾಟಕೀಯ ಚಾಲನೆ ದೊರಕಿದ್ದು, ಸಹ ಅತಿಥೇಯ ಮೆಕ್ಸಿಕೊ ತಂಡ ಆರಂಭಿಕ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು 2-0 ಗೋಲುಗಳಿಂದ ಸೋಲಿಸಿದೆ. ಆದರೆ ಆರಂಭಿಕ ಪಂದ್ಯದಲ್ಲೇ ಮೂವರು ಆಟಗಾರರು ರೆಡ್‌ಕಾರ್ಡ್ ಪಡೆದಿರುವುದು ಹೊಸ ದಾಖಲೆ ಎನಿಸಿದೆ. ಫಿಫಾ ವಿಶ್ವಕಪ್-2010ರ ಆರಂಭಿಕ ಪಂದ್ಯದಲ್ಲಿ ಜೋಹಾನ್ಸ್‌ಬರ್ಗ್‌ನಲ್ಲಿ 1-1 ಡ್ರಾ ಮಾಡಿಕೊಂಡ ಹದಿನಾರು ವರ್ಷಗಳ ಬಳಿಕ ಎಸ್ಟಾಡಿಯೊ ಅಝೆಟ್ಕಾದಲ್ಲಿ ತವರಿನ ಪ್ರೇಕ್ಷಕರ ಬೆಂಬಲದ ಪ್ರಯೋಜನ ಪಡೆದ ಮೆಕ್ಸಿಕೋ ತಂಡ, ಜ್ಯೂಲಿಯನ್ ಕ್ವಿನೊನೆಸ್ ಹಾಗೂ ರವೂಲ್ ಜಿಮೆನೆಝ್ ಅವರ

ಫೀಫಾ ವಿಶ್ವಕಪ್| ಆರಂಭಿಕ ಪಂದ್ಯದಲ್ಲೇ ರೆಡ್ ಕಾರ್ಡ್ ಪಡೆದ ಮೂವರು ಆಟಗಾರರು Read More »

ಇನ್ನೆರಡು ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ – ಸಚಿವ ಬೈರತಿ

ಸಮಗ್ರ ನ್ಯೂಸ್: ರಾಜ್ಯದ ವಿದ್ಯಾರ್ಥಿಗಳಿಗೆ ಭಾರೀ ಸಂತಸದ ಸುದ್ದಿಯೊಂದು ಹೊರಬಿದ್ದಿದೆ. ಇದೇ ಮೊದಲ ಬಾರಿಗೆ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಿಸುವ ಐತಿಹಾಸಿಕ ಯೋಜನೆಗೆ ರಾಜ್ಯ ಸರ್ಕಾರ ಚಾಲನೆ ನೀಡಿದ್ದು, ಇನ್ನೆರಡು ದಿನಗಳೊಳಗೆ ಅದರ ಮಾರ್ಗಸೂಚಿಗಳನ್ನು ಪ್ರಕಟಿಸಲಾಗುವುದು ಎಂದು ಸಾರಿಗೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ. ಇದುವರೆಗೆ ಉಚಿತ ಬಸ್ ಪಾಸ್ ಸೌಲಭ್ಯವು ವಿದ್ಯಾರ್ಥಿನಿಯರಿಗೆ ಮಾತ್ರ ಸೀಮಿತವಾಗಿತ್ತು. ಆದರೆ ಇದೀಗ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ವಿದ್ಯಾರ್ಥಿಗಳಿಗೂ ಈ ಸೌಲಭ್ಯವನ್ನು ವಿಸ್ತರಿಸುವ ಮಹತ್ವದ ನಿರ್ಧಾರ

ಇನ್ನೆರಡು ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ – ಸಚಿವ ಬೈರತಿ Read More »

ಧರ್ಮಸ್ಥಳ ಬುರುಡೆ ಪ್ರಕರಣ| ನಟ ಪ್ರಕಾಶ್ ರಾಜ್ ಹೆಸರು ಉಲ್ಲೇಖಿಸಿದ ಚಿನ್ನಯ್ಯ

ಸಮಗ್ರ ನ್ಯೂಸ್: ಧರ್ಮಸ್ಥಳ ಗ್ರಾಮದ ಬಹುಚರ್ಚಿತ “ಬುರುಡೆ ಕೇಸ್” ಪ್ರಕರಣಕ್ಕೆ ಈಗ ಅತ್ಯಂತ ಸ್ಫೋಟಕ ತಿರುವು ಸಿಕ್ಕಿದೆ. ಈ ಇಡೀ ಪ್ರಕರಣವು ಧರ್ಮಸ್ಥಳ ಕ್ಷೇತ್ರ ಮತ್ತು ಹೆಗ್ಗಡೆಯವರ ವಿರುದ್ಧ ನಡೆದ ದೊಡ್ಡ ಮಟ್ಟದ ಪಿತೂರಿ ಎಂದು ಆರೋಪಿಸಿ, ಪ್ರಕರಣದ ಪ್ರಮುಖ ವ್ಯಕ್ತಿ ಚಿನ್ನಯ್ಯ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದಾನೆ. ವಿಶೇಷವೆಂದರೆ, ಈ ಅರ್ಜಿಯಲ್ಲಿ ಆತ ಬಹುಭಾಷಾ ನಟ ಪ್ರಕಾಶ್ ರಾಜ್ ಸೇರಿದಂತೆ ಹಲವು ಪ್ರಮುಖರ ಹೆಸರುಗಳನ್ನು ಬಹಿರಂಗಪಡಿಸಿದ್ದು, ಇದು ಕರಾವಳಿ ಹಾಗೂ ರಾಜ್ಯರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದೆ.

ಧರ್ಮಸ್ಥಳ ಬುರುಡೆ ಪ್ರಕರಣ| ನಟ ಪ್ರಕಾಶ್ ರಾಜ್ ಹೆಸರು ಉಲ್ಲೇಖಿಸಿದ ಚಿನ್ನಯ್ಯ Read More »

ಕೊನೆಕ್ಷಣದಲ್ಲಿ ಯೂಟರ್ನ್ ಹೊಡೆದ ಟ್ರಂಪ್| ಅಮೇರಿಕಾ ಮಿಲಿಟರಿ ಕಾರ್ಯಾಚರಣೆ ಸ್ಥಗಿತಗೊಳಿಸಲು ಕಾರಣವೇನು?

ಸಮಗ್ರ ನ್ಯೂಸ್: ಇರಾನ್ ವಿರುದ್ಧ ನಡೆಸಲು ನಿಗದಿಯಾಗಿದ್ದ ಮಿಲಿಟರಿ ಕಾರ್ಯಾಚರಣೆ ಹಾಗೂ ಭೀಕರ ಬಾಂಬ್ ದಾಳಿಗಳನ್ನು ಕೊನೆ ಕ್ಷಣದಲ್ಲಿ ರದ್ದುಪಡಿಸಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗುರುವಾರ ಅಧಿಕೃತವಾಗಿ ಘೋಷಿಸಿದ್ದಾರೆ. ಇರಾನ್‌ನ ಉನ್ನತ ನಾಯಕರೊಂದಿಗೆ ನಡೆಸಲಾದ ರಾಜತಾಂತ್ರಿಕ ಮಾತುಕತೆಗಳು ಅತ್ಯಂತ ಮಹತ್ವದ ಹಂತವನ್ನು ತಲುಪಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ತಮ್ಮದೇ ಒಡೆತನದ ‘ಟ್ರೂತ್ ಸೋಷಿಯಲ್’ (Truth Social) ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಸಂದೇಶ ಪ್ರಕಟಿಸಿರುವ ಡೊನಾಲ್ಡ್ ಟ್ರಂಪ್, ಇರಾನ್‌ನ ಅತ್ಯುನ್ನತ

ಕೊನೆಕ್ಷಣದಲ್ಲಿ ಯೂಟರ್ನ್ ಹೊಡೆದ ಟ್ರಂಪ್| ಅಮೇರಿಕಾ ಮಿಲಿಟರಿ ಕಾರ್ಯಾಚರಣೆ ಸ್ಥಗಿತಗೊಳಿಸಲು ಕಾರಣವೇನು? Read More »

ಒಂಟಿ ಪುರುಷರಿಗೂ ಸಿಗಲಿದೆ 6 ತಿಂಗಳ ‘ಶಿಶುಪಾಲನಾ ರಜೆ’

ಸಮಗ್ರ ನ್ಯೂಸ್: ರಾಜ್ಯದ ಒಂಟಿ ಪುರುಷ ಸರ್ಕಾರಿ ನೌಕರರಿಗೆ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದೆ. ಇದುವರೆಗೆ ಕೇವಲ ಮಹಿಳಾ ಉದ್ಯೋಗಿಗಳಿಗೆ ಮಾತ್ರ ಸೀಮಿತವಾಗಿದ್ದ ‘ಶಿಶುಪಾಲನಾ ರಜೆ’ ಸೌಲಭ್ಯವನ್ನು ಇದೀಗ ಒಂಟಿ ಪುರುಷ ನೌಕರರಿಗೂ ವಿಸ್ತರಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಇದು ಕೇವಲ ಆಡಳಿತಾತ್ಮಕ ಬದಲಾವಣೆಯಷ್ಟೇ ಅಲ್ಲದೆ, ಮಕ್ಕಳ ಹಕ್ಕು ಮತ್ತು ಅವರ ಪಾಲನೆಯನ್ನು ಗಮನದಲ್ಲಿಟ್ಟುಕೊಂಡು ಕೈಗೊಂಡಿರುವ ಅತ್ಯಂತ ಮಾನವೀಯ ಹೆಜ್ಜೆಯಾಗಿದೆ. ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ತಂದೆ-ತಾಯಿ ಇಬ್ಬರ ಆಸರೆಯೂ ಮುಖ್ಯ. ಆದರೆ ಅನಿವಾರ್ಯ ಕಾರಣಗಳಿಂದ

ಒಂಟಿ ಪುರುಷರಿಗೂ ಸಿಗಲಿದೆ 6 ತಿಂಗಳ ‘ಶಿಶುಪಾಲನಾ ರಜೆ’ Read More »

ರಾಜ್ಯಸಭಾ ಚುನಾವಣೆ| ಕಾಂಗ್ರೆಸ್ ನ ಮೂವರು, ಬಿಜೆಪಿಯ ಒಬ್ಬರು ಅವಿರೋಧ ಆಯ್ಕೆ

ಸಮಗ್ರ ನ್ಯೂಸ್: ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಘೋಷಣೆಯಾಗಿದ್ದ ದ್ವೈವಾರ್ಷಿಕ ಚುನಾವಣೆಯ ಪ್ರಕ್ರಿಯೆ ಪೂರ್ಣಗೊಂಡಿದ್ದು, ನಾಲ್ಕೂ ಜನ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಾಮಪತ್ರಗಳನ್ನು ಹಿಂಪಡೆಯಲು ಇಂದು ಕಡೆಯ ದಿನವಾಗಿದ್ದು, ಕಣದಲ್ಲಿದ್ದ ಏಕೈಕ ಪಕ್ಷೇತರ ಅಭ್ಯರ್ಥಿಯ ನಾಮಪತ್ರ ತಾಂತ್ರಿಕ ಕಾರಣಗಳಿಂದಾಗಿ ತಿರಸ್ಕೃತಗೊಂಡ ಹಿನ್ನೆಲೆಯಲ್ಲಿ ಈ ಅವಿರೋಧ ಆಯ್ಕೆ ನಿಶ್ಚಿತವಾಗಿದೆ. ಕಾಂಗ್ರೆಸ್ ಪಕ್ಷದ ಮೂವರು ಹಾಗೂ ಬಿಜೆಪಿಯ ಓರ್ವ ಅಭ್ಯರ್ಥಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿಯೂ ಆಗಿರುವ ವಿಧಾನಸಭೆಯ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ಅವರು ಅಧಿಕೃತವಾಗಿ ಪ್ರಕಟಿಸಿದ್ದಾರೆ. ಅವಿರೋಧವಾಗಿ

ರಾಜ್ಯಸಭಾ ಚುನಾವಣೆ| ಕಾಂಗ್ರೆಸ್ ನ ಮೂವರು, ಬಿಜೆಪಿಯ ಒಬ್ಬರು ಅವಿರೋಧ ಆಯ್ಕೆ Read More »

ಹವಾಮಾನ ವರದಿ| ಜೂ.15ರವರೆಗೆ ಭಾರೀ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮುಂಗಾರು ಚುರುಕಾಗಿದ್ದು, ಜೂನ್ 15 ರವರೆಗೂ ಕರಾವಳಿ ಜಿಲ್ಲೆಯಲ್ಲಿ ಭಾರಿ ಮಳೆ ಆಗಲಿದೆ ಹಾಗೂ ಮುಂದಿನ 48 ಗಂಟೆ ಬೆಂಗಳೂರಿನ ಕೆಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉತ್ತರ ಒಳನಾಡಿನ ಬೆಳಗಾವಿ, ವಿಜಯಪುರ, ಬಾಗಲಕೋಟೆ, ಕಲಬುರಗಿ ಸೇರಿದಂತೆ ಕೆಲವು ಜಿಲ್ಲೆಗಳು, ದಕ್ಷಿಣ ಒಳನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆ ಆಗಲಿದೆ ಎಂದು ಹೇಳಲಾಗಿದೆ.

ಹವಾಮಾನ ವರದಿ| ಜೂ.15ರವರೆಗೆ ಭಾರೀ ಮಳೆ ಸಾಧ್ಯತೆ Read More »

ತಾಯಿಯ ಕಂಕುಳಲ್ಲಿದ್ದ ಮಗುವಿನ ತಲೆಗೆ ತೆಂಗಿನಕಾಯಿ ಬಿದ್ದು ಸಾವು

ಸಮಗ್ರ ನ್ಯೂಸ್: ತಾಯಿಯ ಕಂಕುಳಲ್ಲಿದ್ದ ಮಗುವಿನ ತಲೆಗೆ ನೇರವಾಗಿ ತೆಂಗಿನಕಾಯಿ ಬಿದ್ದ ಪರಿಣಾಮ, ಒಂದೂವರೆ ವರ್ಷದ ಗಂಡು ಮಗು ಮೃತಪಟ್ಟ ಅತ್ಯಂತ ದುರದೃಷ್ಟಕರ ಘಟನೆ ಹೆರಂಜೆಯಲ್ಲಿ ಮಂಗಳವಾರ(ಜೂ.9) ನಡೆದಿದೆ. ಬ್ರಹ್ಮಾವರದಲ್ಲಿ ಫಾಸ್ಟ್ ಫುಡ್ ಅಂಗಡಿ ನಡೆಸುತ್ತಿರುವ ಪ್ರಶಾಂತ್ ಹಾಗೂ ಗೃಹಿಣಿ ಸುಚಿತ್ರಾ ದಂಪತಿಯ ಪುಟ್ಟ ಕಂದಮ್ಮನೇ ವಿಧಿಯಾಟಕ್ಕೆ ಬಲಿಯಾದ ದುರ್ದೈವಿ. ಮಂಗಳವಾರ ತಾಯಿ ಸುಚಿತ್ರಾ ಅವರು ತಮ್ಮ 6 ವರ್ಷದ ಹಿರಿಯ ಮಗಳನ್ನು ಶಾಲೆಗೆ ಬಿಡಲು ಹೊರಟಿದ್ದರು. ಎಂದಿನಂತೆ ಚಿಕ್ಕ ಮಗುವನ್ನು ಮನೆಯಲ್ಲಿ ಬಿಟ್ಟು ಹೋಗುವ ಬದಲು,

ತಾಯಿಯ ಕಂಕುಳಲ್ಲಿದ್ದ ಮಗುವಿನ ತಲೆಗೆ ತೆಂಗಿನಕಾಯಿ ಬಿದ್ದು ಸಾವು Read More »

ಎಲ್ ನಿನೋ ಅಬ್ಬರಕ್ಕೆ ಕ್ಷೀಣಗೊಂಡ ಮುಂಗಾರು| ಭಾರತದ ಕೃಷಿ ಆರ್ಥಿಕತೆ ಕಂಗಾಲು

ಸಮಗ್ರ ನ್ಯೂಸ್: ವಿಶ್ವದ ಹವಾಮಾನ ವ್ಯವಸ್ಥೆಯನ್ನೇ ಏರುಪೇರು ಮಾಡುವ ‘ಎಲ್ ನಿನೋ’ (El Nino) ಹವಾಮಾನ ಪ್ರಕ್ರಿಯೆ ಪೆಸಿಫಿಕ್ ಮಹಾಸಾಗರದಲ್ಲಿ ಅಧಿಕೃತವಾಗಿ ಆರಂಭವಾಗಿದೆ ಎಂದು ಜಪಾನ್ ಹವಾಮಾನ ಇಲಾಖೆ ಘೋಷಿಸಿದೆ. ಈ ಪ್ರಕಟಣೆಯು ಭಾರತದ ರೈತರು ಹಾಗೂ ಹವಾಮಾನ ತಜ್ಞರಲ್ಲಿ ತೀವ್ರ ಆತಂಕ ಮೂಡಿಸಿದೆ. ಸಾಮಾನ್ಯವಾಗಿ ಭಾರತದಲ್ಲಿ ಸುಡುವ ಬೇಸಿಗೆ ಮತ್ತು ದುರ್ಬಲ ಮುಂಗಾರು ಮಳೆಗೆ ಕಾರಣವಾಗುವ ಈ ಎಲ್ ನಿನೋ, ಈ ಬಾರಿ ಭಾರತದ ಕೃಷಿ ವಲಯದ ಮೇಲೆ ನೇರ ಪರಿಣಾಮ ಬೀರಲು ಹೊಂಚು ಹಾಕುತ್ತಿದೆ.

ಎಲ್ ನಿನೋ ಅಬ್ಬರಕ್ಕೆ ಕ್ಷೀಣಗೊಂಡ ಮುಂಗಾರು| ಭಾರತದ ಕೃಷಿ ಆರ್ಥಿಕತೆ ಕಂಗಾಲು Read More »