ಸಮಗ್ರ ಸಮಾಚಾರ

ಬಾಂಗ್ಲಾಕ್ಕೆ ಮರಳುವುದಾಗಿ ಘೋಷಿಸಿದ ಶೇಕ್ ಹಸೀನಾ

ಸಮಗ್ರ ನ್ಯೂಸ್: ಬಾಂಗ್ಲಾದೇಶದ ಮಾಜಿ ಪ್ರಧಾನಮಂತ್ರಿ ಶೇಖ್ ಹಸೀನಾ ಅವರು ತಮ್ಮ ಪ್ರಾಣ ಉಳಿಸಿಕೊಳ್ಳಲು ಆಗಸ್ಟ್ 5. 2024 ರಂದು ಭಾರತಕ್ಕೆ ಆಗಮಿಸಿದ್ದರು. ಅಂದಿನಿಂದ ಅವರು ಭಾರತದಲ್ಲೇ ನೆಲೆಸಿದ್ದಾರೆ. ಆದರೆ, ಈಗ ತಾವು ಮತ್ತೆ ತಾಯ್ನಾಡಿಗೆ ಮರಳುವುದಾಗಿ ಸ್ವತಃ ಘೋಷಿಸಿದ್ದಾರೆ. ಬಾಂಗ್ಲಾದೇಶದಲ್ಲಿ ಇತ್ತೀಚೆಗೆ ನಡೆದ ಚುನಾವಣೆಗಳನ್ನು ಕಟುವಾಗಿ ಟೀಕಿಸಿದ ಅವರು, ತಮ್ಮ ‘ಆವಾಮಿ ಲೀಗ್’ ಪಕ್ಷಕ್ಕೆ ಆಗಿರುವ ಅನ್ಯಾಯದ ಬಗ್ಗೆಯೂ ಧ್ವನಿ ಎತ್ತಿದ್ದಾರೆ. ಢಾಕಾದಲ್ಲಿ ನಡೆದ ಆವಾಮಿ ಲೀಗ್ ಪಕ್ಷದ ಕೆಲವು ನಾಯಕರ ಸಭೆಯಲ್ಲಿ ಹಸೀನಾ ಅವರು […]

ಬಾಂಗ್ಲಾಕ್ಕೆ ಮರಳುವುದಾಗಿ ಘೋಷಿಸಿದ ಶೇಕ್ ಹಸೀನಾ Read More »

ಮಾ.1ರಿಂದ ಸಿಮ್ ಬೈಂಡಿಂಗ್ ಜಾರಿ| ಸಿಮ್ ಕಾರ್ಡ್ ಇಲ್ಲದಿದ್ರೆ ವಾಟ್ಸ್ಯಾಪ್ ಸೇರಿ ಹಲವು ಅಪ್ಲಿಕೇಶನ್ಸ್ ಕೆಲ್ಸ ಮಾಡಲ್ಲ

ಸಮಗ್ರ ನ್ಯೂಸ್: ಮಾರ್ಚ್ 1, 2026 ರಿಂದ ಹೊಸ ನಿಯಮ ಜಾರಿಗೆ ಬರಲಿದ್ದು, ಇದರ ಅಡಿಯಲ್ಲಿ ಸಿಮ್-ಬೈಂಡಿಂಗ್ ನಿಯಮಗಳಲ್ಲಿ ಯಾವುದೇ ಸಡಿಲಿಕೆ ನೀಡಲಾಗುವುದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ನವೆಂಬರ್ ಅಂತ್ಯದಲ್ಲಿ, ದೂರಸಂಪರ್ಕ ಇಲಾಖೆಯು ವಾಟ್ಸಾಪ್, ಟೆಲಿಗ್ರಾಮ್, ಸಿಗ್ನಲ್, ಸ್ನ್ಯಾಪ್‌ಚಾಟ್‌ನಂತಹ ತ್ವರಿತ ಸಂದೇಶ ಕಳುಹಿಸುವ ಅಪ್ಲಿಕೇಶನ್‌’ಗಳಿಗೆ ‘ಸಿಮ್ ಬೈಂಡಿಂಗ್’ ಜಾರಿಗೆ ತರಲು ನಿರ್ದೇಶಿಸಿತ್ತು. ಈ ಸಾಮಾಜಿಕ ಮಾಧ್ಯಮ ಮತ್ತು ಸಂದೇಶ ಕಳುಹಿಸುವ ವೇದಿಕೆಗಳಿಗೆ ಇದನ್ನು ಕಾರ್ಯಗತಗೊಳಿಸಲು 90 ದಿನಗಳ ಕಾಲಾವಕಾಶ ನೀಡಲಾಗಿತ್ತು, ಇದರ ಗಡುವು ಫೆಬ್ರವರಿ 28

ಮಾ.1ರಿಂದ ಸಿಮ್ ಬೈಂಡಿಂಗ್ ಜಾರಿ| ಸಿಮ್ ಕಾರ್ಡ್ ಇಲ್ಲದಿದ್ರೆ ವಾಟ್ಸ್ಯಾಪ್ ಸೇರಿ ಹಲವು ಅಪ್ಲಿಕೇಶನ್ಸ್ ಕೆಲ್ಸ ಮಾಡಲ್ಲ Read More »

ಅಪ್ರಾಪ್ತರ ಮೇಲೆ ನೈತಿಕ ಪೊಲೀಸ್ ಗಿರಿ| ತಂದೆ – ಮಗ ಅರೆಸ್ಟ್

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದಲ್ಲಿ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರ ಮೇಲೆ ನೈತಿಕ ಪೊಲೀಸ್ ಗಿರಿ ನಡೆಸಿದ ಪ್ರಕರಣ ಬೆಳಕಿಗೆ ಬಂದಿದೆ. ಘಟನೆಗೆ ಸಂಬಂಧಿಸಿ ಸ್ಟೀವನ್ ಮೊಂತೆರೊ ಮತ್ತು ಆತನ ಮಗ ಅವಿಲ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಫೆಬ್ರವರಿ 23ರಂದು ಸಂಜೆ 4 ಗಂಟೆ ಸುಮಾರಿಗೆ ಬಾಬುಗೆಡ್ಡೆಯ ಗ್ರಾಮ ಸಂಘದ ಬಳಿಯ ರೈಲ್ವೆ ಹಳಿಯಲ್ಲಿ ಕುಳಿತು ಮಾತನಾಡುತ್ತಿದ್ದ ವೇಳೆ ಆರೋಪಿಗಳು ಮೊಬೈಲ್‌ನಲ್ಲಿ ವಿಡಿಯೋ ಚಿತ್ರೀಕರಿಸುತ್ತಾ ಅಲ್ಲಿಗೆ ಬಂದಿದ್ದಾರೆ. “ನೀವು ಇಲ್ಲಿ

ಅಪ್ರಾಪ್ತರ ಮೇಲೆ ನೈತಿಕ ಪೊಲೀಸ್ ಗಿರಿ| ತಂದೆ – ಮಗ ಅರೆಸ್ಟ್ Read More »

ಟಿ.20 ವಿಶ್ವಕಪ್ ಕ್ರಿಕೆಟ್| ಜಿಂಬಾಬ್ವೆ ವಿರುದ್ಧ ರೋಚಕ ಜಯ ಸಾಧಿಸಿದ ಟೀಂ ಇಂಡಿಯಾ

ಸಮಗ್ರ ನ್ಯೂಸ್: ಸೆಮಿಫೈನಲ್​ ರೇಸ್​​​ನಲ್ಲಿ ಉಳಿಯಲು ಮಾಡು ಇಲ್ಲವೇ ಮಡಿ ಎನಿಸಿದ್ದ ಪಂದ್ಯದಲ್ಲಿ ಭಾರತ ತಂಡ ಜಿಂಬಾಬ್ವೆ ವಿರುದ್ಧ 72 ರನ್​ಗಳ ಅಂತರದಿಂದ ಗೆಲುವು ಸಾಧಿಸಿದೆ. ನಿರ್ಣಾಯಕ ಟಾಸ್ ಸೋತು ಬ್ಯಾಟಿಂಗ್​​ ಇಳಿದ ಭಾರತ ತಂಡ 256 ರನ್​ಗಳ ಬೃಹತ್​ ಮೊತ್ತ ದಾಖಲಿಸಿತ್ತು. ನಂತರ ಬೌಲಿಂಗ್​​ನಲ್ಲೂ ಅಮೋಘ ಪ್ರದರ್ಶನ ತೋರಿ ಜಿಂಬಾಬ್ವೆ ತಂಡವನ್ನ 184 ರನ್​ಗಳಿಗೆ ನಿಯಂತ್ರಿಸುವ ಮೂಲಕ ಗೆಲುವು ಸಾಧಿಸಿತು. ಈ ಗೆಲುವಿನೊಂದಿಗೆ ಭಾರತ ತಂಡ ಸೆಮಿಫೈನಲ್​ ರೇಸ್​​ನಲ್ಲಿ ಉಳಿದುಕೊಂಡರೆ, ಅತ್ತ ಜಿಂಬಾಬ್ವೆ ತಂಡ ಇನ್ನೂ

ಟಿ.20 ವಿಶ್ವಕಪ್ ಕ್ರಿಕೆಟ್| ಜಿಂಬಾಬ್ವೆ ವಿರುದ್ಧ ರೋಚಕ ಜಯ ಸಾಧಿಸಿದ ಟೀಂ ಇಂಡಿಯಾ Read More »

ಪುತ್ತೂರು: ಕರ್ತವ್ಯ ನಿರ್ಲಕ್ಷ್ಯ ಆರೋಪ| ಮಹಿಳಾ ಕಾಲೇಜು ಪ್ರಾಂಶುಪಾಲೆ ಅಮಾನತು

ಸಮಗ್ರ ನ್ಯೂಸ್: ಪುತ್ತೂರಿನ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಭಾರ ಪ್ರಾಂಶುಪಾಲರಾಗಿದ್ದ ವೇದಶ್ರೀ ನಿಡ್ಯಾ ಅವರನ್ನು ಕರ್ತವ್ಯ ನಿರ್ಲಕ್ಷ್ಯದ ಆರೋಪದ ಮೇಲೆ ಅಮಾನತುಗೊಳಿಸಲಾಗಿದೆ. ಈ ಕುರಿತಂತೆ ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಯಿಂದ ಆದೇಶ ಹೊರಡಿಸಿದ್ದಾರೆ. ತರಗತಿಯ ಪಕ್ಕದಲ್ಲಿಯೇ ನಡೆಯುತ್ತಿರುವ ಆರೋಗ್ಯ ಇಲಾಖೆಯ ಕಟ್ಟಡ ಕಾಮಗಾರಿಯಿಂದಾಗಿ ಉಂಟಾಗುವ ದೂಳಿನಿಂದಾಗಿ ತರಗತಿಯಲ್ಲಿ ಕುಳಿತುಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಮಹಿಳಾ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿಯರು ತರಗತಿಯಿಂದ ಹೊರಬಂದು ರಸ್ತೆಯಲ್ಲಿ ಕುಳಿತು ಪ್ರತಿಭಟಿಸಿದ್ದರು. ಈ ವಿದ್ಯಾರ್ಥಿಗಳ ಈ ಪ್ರತಿಭಟನೆ

ಪುತ್ತೂರು: ಕರ್ತವ್ಯ ನಿರ್ಲಕ್ಷ್ಯ ಆರೋಪ| ಮಹಿಳಾ ಕಾಲೇಜು ಪ್ರಾಂಶುಪಾಲೆ ಅಮಾನತು Read More »

ಕಾಡು ಪ್ರಾಣಿ ಡಿಕ್ಕಿ ಹೊಡೆದು ಸವಾರ ಸಾವು| ಮಗನ ಶವ ಕಂಡು ಜೀವ ಬಿಟ್ಟ ತಂದೆ| ಹೃದಯ ವಿದ್ರಾವಕ ಘಟನೆಗೆ ಮರುಗಿದ‌ ಗ್ರಾಮಸ್ಥರು

ಸಮಗ್ರ ನ್ಯೂಸ್: ಒಂದು ಕ್ಷಣದ ಅಂತರದಲ್ಲಿ ಇಡೀ ಕುಟುಂಬವೇ ಅನಾಥವಾಗಿರುವ ಅತ್ಯಂತ ಹೃದಯವಿದ್ರಾವಕ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ರಾತ್ರಿ ಪಾಳಯದ ಕೆಲಸ ಮುಗಿಸಿಕೊಂಡು ಮನೆಗೆ ಮರಳುತ್ತಿದ್ದ ಯುವಕನ ಬೈಕ್‌ಗೆ ಕಾಡು ಪ್ರಾಣಿಯೊಂದು ಡಿಕ್ಕಿ ಹೊಡೆದ ಪರಿಣಾಮ ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಹೆತ್ತ ಮಗನ ಶವವನ್ನು ನೋಡಿ ತೀವ್ರ ಆಘಾತಕ್ಕೊಳಗಾದ ತಂದೆ ಮನೆಗೆ ಬಂದು ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಭಾನುವಾರ ತಡರಾತ್ರಿ ಈ ಭೀಕರ ದುರಂತ ಸಂಭವಿಸಿದ್ದು, ಇಡೀ ಮಲೆನಾಡು ಭಾಗದ ಜನರನ್ನು

ಕಾಡು ಪ್ರಾಣಿ ಡಿಕ್ಕಿ ಹೊಡೆದು ಸವಾರ ಸಾವು| ಮಗನ ಶವ ಕಂಡು ಜೀವ ಬಿಟ್ಟ ತಂದೆ| ಹೃದಯ ವಿದ್ರಾವಕ ಘಟನೆಗೆ ಮರುಗಿದ‌ ಗ್ರಾಮಸ್ಥರು Read More »

ಕಲ್ಯಾಣ ಮಂಟಪದಲ್ಲಿ ಝಳಪಿಸಿದ ಲಾಂಗು ಮಚ್ಚು| ಮಸ್ತಿಗಾಗಿ ಡ್ಯಾನ್ಸ್ ಮಾಡಿದ ಮೂವರು ಅರೆಸ್ಟ್

ಸಮಗ್ರ ನ್ಯೂಸ್: ಕಲ್ಯಾಣ ಮಂಟಪದಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಯುವಕರಿಬ್ಬರು ಕೈಯಲ್ಲಿ ಮಾರಾಕಾಸ್ತ್ರ ಹಿಡಿದು ನೃತ್ಯ ಮಾಡಿದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಘಟನೆ ಕಲಬುರಗಿಯ ಆದರ್ಶ ಕಲ್ಯಾಣ ಮಂಟಪದಲ್ಲಿ ನಡೆದಿದ್ದು, ವಿಡಿಯೊ ವೈರಲ್ ಬೆನ್ನಲ್ಲೇ ‌ಮೂವರು ಅರೆಸ್ಟ್ ಆಗಿದ್ದಾರೆ. ಇತ್ತೀಚೆಗೆ ಅರಿಸಿನ ಶಾಸ್ತ್ರ ಸಮಾರಂಭದಲ್ಲಿ ರಾಜಕೀಯ ಮುಖಂಡರೊಬ್ಬರು ಕೈ‌ಯಲ್ಲಿ ಪಿಸ್ತೂಲ್‌ ಹಿಡಿದು ಕುಣಿದ ಪ್ರಕರಣ ಸದ್ದು ಮಾಡಿದ ಬೆನ್ನಲ್ಲೆ ಈ ಘಟನೆ ಬೆಳಕಿಗೆ ಬಂದಿದೆ. ಇತ್ತೀಚೆಗೆ ತುಷಾರ್ ಎಂಬ ಯುವಕನ ಮದುವೆ ಇತ್ತು. ಆ ಸಮಾರಂಭದಲ್ಲಿ

ಕಲ್ಯಾಣ ಮಂಟಪದಲ್ಲಿ ಝಳಪಿಸಿದ ಲಾಂಗು ಮಚ್ಚು| ಮಸ್ತಿಗಾಗಿ ಡ್ಯಾನ್ಸ್ ಮಾಡಿದ ಮೂವರು ಅರೆಸ್ಟ್ Read More »

ಕರಾವಳಿ ಜನತೆಗೆ ಗುಡ್ ನ್ಯೂಸ್ ನೀಡಿದ ಖಾಸಗಿ ಸಾರಿಗೆ| ಶೀಘ್ರದಲ್ಲೇ 100% ಎಲೆಕ್ಟ್ರಿಕ್ ಬಸ್ ಸೇವೆ ಲಭ್ಯ

ಸಮಗ್ರ ನ್ಯೂಸ್: ಕರಾವಳಿ ಭಾಗದ ಜನರಿಗೆ ಗುಡ್‌ ನ್ಯೂಸ್‌ವೊಂದು ಇದೆ. ದಕ್ಷಿಣ ಕನ್ನಡದಲ್ಲಿ ಕೆಎಸ್‌ಆರ್‌ಟಿಸಿ ವಿವಿಧ ಮಾರ್ಗಗಳಲ್ಲಿ 100 ಎಲೆಕ್ಟ್ರಿಕ್‌ ಬಸ್ಸುಗಳನ್ನು ಓಡಿಸಲು ಸಿದ್ಧತೆ ನಡೆಸುತ್ತಿರುವ ನಡುವೆಯೇ, ಖಾಸಗಿ ಸಾರಿಗೆ ಸಂಸ್ಥೆ ಕೂಡ ಎಲೆಕ್ಟ್ರಿಕ್‌ ಬಸ್‌ಗಳನ್ನು ಪರಿಚಯಿಸಲು ಮುಂದಾಗಿದೆ. ಮಂಗಳೂರಿನ ಮಂಗಳಾದೇವಿ ದೇವಸ್ಥಾನದಿಂದ ಪ್ರಾರಂಭವಾಗುವ ರೂಟ್‌ ನಂ. 27ರಲ್ಲಿ ಖಾಸಗಿ ಎಲೆಕ್ಟ್ರಿಕ್‌ ಬಸ್‌ ಒಂದು ವಾರದೊಳಗೆ ಸಂಚಾರ ಆರಂಭಿಸುವ ಸಾಧ್ಯತೆಯಿದೆ. ಇದು ನಗರ ಸಾರಿಗೆ ಕ್ಷೇತ್ರದಲ್ಲಿ ಮಹತ್ವದ ಬೆಳವಣಿಗೆಯಾಗಿದೆ ಎಂದು ಹೇಳಲಾಗುತ್ತಿದೆ. ಎಲೆಕ್ಟ್ರಿಕ್‌ ಬಸ್‌ಗಳ ಪರಿಚಯದಿಂದ ಇಂಧನ

ಕರಾವಳಿ ಜನತೆಗೆ ಗುಡ್ ನ್ಯೂಸ್ ನೀಡಿದ ಖಾಸಗಿ ಸಾರಿಗೆ| ಶೀಘ್ರದಲ್ಲೇ 100% ಎಲೆಕ್ಟ್ರಿಕ್ ಬಸ್ ಸೇವೆ ಲಭ್ಯ Read More »

ಬಂಟ್ವಾಳ: ಪ್ರತ್ಯೇಕ ಪ್ರಕರಣ; ಇಬ್ಬರು ಸಾವು

ಸಮಗ್ರ ನ್ಯೂಸ್: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ ಎರಡು ಜೀವಗಳು ಬಲಿಯಾದ ಘಟನೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಿಂತಿದ್ದ ಪಿಕಪ್ ವಾಹನಕ್ಕೆ ಬೈಕ್ ಡಿಕ್ಕಿಯಾಗಿ ಸವಾರ ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ ಬ್ರಹ್ಮರಕೂಟ್ಲು ಎಂಬಲ್ಲಿ ನಡೆದಿದೆ. ತಾಲೂಕಿನ ನರಿಕೊಂಬು ಮರ್ದೊಳಿ ನಿವಾಸಿ ಸಂತೋಷ್ ಮೃತರು. ಅವರು ಬೆಳಗ್ಗೆ ಮನೆಯಿಂದ ಮಂಗಳೂರಿಗೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಬ್ರಹ್ಮರಕೂಟ್ಲು ಎಂಬಲ್ಲಿ ಟಯರ್ ಬ್ಲಾಸ್ಟ್ ಆಗಿದ್ದ ಕಾರಣಕ್ಕಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ಪಿಕಪ್ ವಾಹನಕ್ಕೆ

ಬಂಟ್ವಾಳ: ಪ್ರತ್ಯೇಕ ಪ್ರಕರಣ; ಇಬ್ಬರು ಸಾವು Read More »

ಟ್ಯೂಷನ್ ಗೆ ತೆರಳಿದ್ದ ವಿದ್ಯಾರ್ಥಿಯನ್ನು ಥಳಿಸಿ ಕೊಂದ ಅಪ್ರಾಪ್ತ ಬಾಲಕರು| ಶಿವಮೊಗ್ಗ ಮತ್ತೆ ಕೊತಕೊತ

ಸಮಗ್ರ ನ್ಯೂಸ್: ವಿಶೇಷ ತರಗತಿ ಮುಗಿಸಿ ಬರುತ್ತಿದ್ದ ಎಸ್‌‍ಎಸ್‌‍ಎಲ್‌ಸಿ ವಿದ್ಯಾರ್ಥಿಯನ್ನು ಗುಂಪೊಂದು ಅಡ್ಡಗಟ್ಟಿ ಥಳಿಸಿ ಕೊಲೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ. ಕಳೆದ ರಾತ್ರಿ ಈ ದುರ್ಘಟನೆ ನಡೆದಿದ್ದು ಸಂಕೇತ್‌ ಎಂಬ ವಿದ್ಯಾರ್ಥಿಯನ್ನು ಥಳಿಸಿ ಕೊಲೆ ಮಾಡಲಾಗಿದೆ. ಸರ್ಕಾರಿ ಶಾಲೆಯಲ್ಲಿ ಓದುತ್ತಿದ್ದ ಸಾಕೇತ್‌ ನಿನ್ನೆ ಸಂಜೆ ವಿಶೇಷ ತರಗತಿಯಲ್ಲಿ ಪಾಲ್ಗೊಂಡು ಶಾಲೆಯಿಂದ ಹೊರಬರುತ್ತಿದ್ದಂತೆ ಸುಮಾರು 5 ರಿಂದ 6 ಮಂದಿ ಅನ್ಯಕೋಮಿನ ವಿದ್ಯಾರ್ಥಿಗಳ ಗುಂಪು ಆತನ ಮೇಲೆ ಮನ ಬಂದಂತೆ ಥಳಿಸಿ ಕೊಲೆ ಮಾಡಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.

ಟ್ಯೂಷನ್ ಗೆ ತೆರಳಿದ್ದ ವಿದ್ಯಾರ್ಥಿಯನ್ನು ಥಳಿಸಿ ಕೊಂದ ಅಪ್ರಾಪ್ತ ಬಾಲಕರು| ಶಿವಮೊಗ್ಗ ಮತ್ತೆ ಕೊತಕೊತ Read More »