35 ವರ್ಷಗಳ ಬಳಿಕ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಿಂದ ಯಕ್ಷಗಾನ ಮೇಳ ರಂಗಸ್ಥಳಕ್ಕೆ| ಡಿ.5ರಿಂದ ಶುರುವಾಗಲಿದೆ ಪ್ರದರ್ಶನ
ಸಮಗ್ರ ನ್ಯೂಸ್: 35 ವರ್ಷಗಳ ಬಳಿಕ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಿಂದ ಯಕ್ಷಗಾನ ಮೇಳ ಮತ್ತೆ ಪ್ರಾರಂಭವಾಗಲಿದೆ. ಈಗಾಗಲೇ 50ಕ್ಕೂ ಆಟಗಳು ಮುಂಗಡ ಬುಕ್ಕಿಂಗ್ ಆಗಿದೆ ಎಂದು ಹೇಳಲಾಗಿದೆ. ಕುಕ್ಕೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ ಹೆಸರಿನಲ್ಲಿ ತಿರುಗಾಟ ಪ್ರಾರಂಭಿಸಲಿರುವ ಮೇಳವು, ಸ್ಥಳ ಪುರಾಣದ ಕಥಾಹಂದರ ಹೊಂದಿರುವ ‘ಶ್ರೀ ಸುಬ್ರಹ್ಮಣ್ಯ ಕ್ಷೇತ್ರ ಮಹಾತ್ಮೆ’ ಹಾಗೂ ಸಿ. ರಾಘವೇಂದ್ರ ಕುಂಬ್ಳೆ ವಿರಚಿತ ‘ಸರ್ಪ ಸಂಪತ್ತ್’ ಎಂಬ ಎರಡು ಹೊಸ ಪ್ರಸಂಗಗಳೊಂದಿಗೆ ಪ್ರಸಂಗ ಪ್ರದರ್ಶನಕ್ಕೆ ಸಿದ್ಧವಾಗಿದೆ. ಹಿಮ್ಮೇಳ ಹಾಗೂ […]










