ನಿಮ್ಮ ಜನರ ಮೇಲೆ ಬಾಂಬ್ ಹಾಕಿ ಮುಗಿದಿದ್ದರೆ ಸ್ವಲ್ಪ ಆರ್ಥಿಕತೆಯತ್ತ ಗಮನಹರಿಸಿ| ವಿಶ್ವಸಂಸ್ಥೆಯಲ್ಲಿ ಪಾಕ್ ಗೆ ಬೆವರಿಳಿಸಿದ ಭಾರತ
ಸಮಗ್ರ ನ್ಯೂಸ್: ಖೈಬರ್ ಪಖ್ತುಂಖ್ವಾದಲ್ಲಿ ತನ್ನದೇ ಜನರ ಮೇಲೆ ಪಾಕಿಸ್ತಾನ ಬಾಂಬ್ ದಾಳಿ ಮಾಡಿದ್ದಕ್ಕಾಗಿ, ಭಾರತವು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಯಲ್ಲಿ (UNHRC) ಪಾಕಿಸ್ತಾನವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಯ 60ನೇ ಅಧಿವೇಶನದಲ್ಲಿ ಮಾತನಾಡಿದ ಭಾರತೀಯ ರಾಜತಾಂತ್ರಿಕ ಕ್ಷಿತಿಜ್ ತ್ಯಾಗಿ, “ಇಸ್ಲಾಮಾಬಾದ್ ತನ್ನ ಜನರನ್ನು ಕೊಲ್ಲುವುದನ್ನು ನಿಲ್ಲಿಸಿ ದೇಶದ ಆರ್ಥಿಕತೆಯನ್ನು ಸುಧಾರಿಸುವ ಪ್ರಯತ್ನ ಆರಂಭಿಸಬೇಕು” ಎಂದು ಕುಹುಕವಾಡಿದ್ದಾರೆ. “ಪಾಕಿಸ್ತಾನವು ಭಾರತದ ನೆಲದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ ಎಂದು ಆರೋಪಿಸುತ್ತಿದೆ. ಇಂತಹ ಸುಳ್ಳು ಆರೋಪಗಳನ್ನು […]










