ಸಮಗ್ರ ಸಮಾಚಾರ

ಭಾರತ್ ಜೋಡೋ ಯಾತ್ರೆಗೆ ಕೆಜಿಎಫ್ ಮ್ಯೂಸಿಕ್ ಬಳಕೆ : ರಾಹುಲ್ ವಿರುದ್ಧ ಎಫ್ಐಆರ್‌

ಸಮಗ್ರ ನ್ಯೂಸ್: ರಾಷ್ಟ್ರೀಯ ಕಾಂಗ್ರಸ್ ಪಕ್ಷದ ಭಾರತ್ ಜೋಡೋ ಯಾತ್ರೆಯ ವಿಡಿಯೋಗಳಿಗೆ ‘ಕೆಜಿಎಫ್’ ಸಿನಿಮಾದ ಹಾಡೊಂದರ ಮ್ಯೂಸಿಕ್ ಬಳಸಿರುವ ಆರೋಪ ಕೇಳಿ ಬಂದಿದ್ದು, ಕಾಪಿ ರೈಟ್ಸ್ ಉಲ್ಲಂಘನೆಗಾಗಿ ಕಾಂಗ್ರೆಸ್ ಪಕ್ಷದ ಮೇಲೆ ಎಮ್.ಆರ್.ಟಿ ಸಂಸ್ಥೆಯು ಕಾನೂನು ಸಮರಕ್ಕೆ ಮುಂದಾಗಿದೆ. ತಮ್ಮ ಸಂಸ್ಥೆಯ ಅನುಮತಿ ಇಲ್ಲದೇ, ಕೆಜಿಎಫ್ ಸಿನಿಮಾದ ಸಂಗೀತವನ್ನು ಬಳಸಿಕೊಂಡಿದ್ದಕ್ಕಾಗಿ ಸಂಸ್ಥೆಯು ದೂರು ದಾಖಲಿಸಿದೆ. MRT ಸಂಸ್ಥೆಗೆ ಸೇರಿದ ಹಾಡುಗಳನ್ನು ಬಳಸಿದ ಆರೋಪ ಹೊತ್ತಿರುವ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷವು, ಸಂಸ್ಥೆಯ ಅನುಮತಿ ಇಲ್ಲದೇ ಹಾಡುಗಳನ್ನು ಯಾತ್ರೆಯಲ್ಲಿ […]

ಭಾರತ್ ಜೋಡೋ ಯಾತ್ರೆಗೆ ಕೆಜಿಎಫ್ ಮ್ಯೂಸಿಕ್ ಬಳಕೆ : ರಾಹುಲ್ ವಿರುದ್ಧ ಎಫ್ಐಆರ್‌ Read More »

“ಟಿಕೆಟ್ ಆಕಾಂಕ್ಷಿಗಳಿಂದ ಕಾಂಗ್ರೆಸ್ ಲಕ್ಷ-ಲಕ್ಷ ಲೂಟಿ ಮಾಡಲು ಹೊರಟಿದೆ”| “ಜೇಬು ಖಾಲಿಯಾಗಲಿದೆಯೇ ಹೊರತು ಖಾಲಿಯಾದ ಜೇಬಿಗೆ ಟಿಕೆಟ್ ಬರುವುದಿಲ್ಲ”

ಬೆಂಗಳೂರು: ಟಿಕೆಟ್ ಆಕಾಂಕ್ಷಿಗಳಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಲಕ್ಷ-ಲಕ್ಷ ಲೂಟಿ ಮಾಡ್ತಿದ್ದಾರೆ ಎಂದು ಬಿಜೆಪಿ ಗಂಭೀರ ಆರೋಪ ಮಾಡಿದೆ. ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ, 2018ರಲ್ಲಿ ನಾಮಪತ್ರ ಸಲ್ಲಿಸಲು ಕಾರ್ಯಕರ್ತರಿಂದ ಡಿಕೆ ಶಿವಕುಮಾರ್ 50-100 ಭಿಕ್ಷೆ ಬೇಡಿದರು. ಇದೀಗ ಕೋಟಿ-ಕೋಟಿ ರೂಪಾಯಿ ಆಸ್ತಿ ಇದ್ದರೂ, ಕೆಪಿಸಿಸಿ ಅಧ್ಯಕ್ಷರಾದ ಮೇಲೆ ಟಿಕೆಟ್ ಆಕಾಂಕ್ಷಿಗಳಿಂದ ಕಾಂಗ್ರೆಸ್ ಲಕ್ಷ-ಲಕ್ಷ ಲೂಟಿ ಮಾಡಲು ಹೊರಟಿದೆ. ಇದರಿಂದ ಆಕಾಂಕ್ಷಿಗಳ ಜೇಬು ಖಾಲಿಯಾಗಲಿದೆಯೇ ಹೊರತು ಖಾಲಿಯಾದ ಜೇಬಿಗೆ ಟಿಕೆಟ್ ಬರುವುದಿಲ್ಲ ಎಂದು ಕುಟುಕಿದೆ.

“ಟಿಕೆಟ್ ಆಕಾಂಕ್ಷಿಗಳಿಂದ ಕಾಂಗ್ರೆಸ್ ಲಕ್ಷ-ಲಕ್ಷ ಲೂಟಿ ಮಾಡಲು ಹೊರಟಿದೆ”| “ಜೇಬು ಖಾಲಿಯಾಗಲಿದೆಯೇ ಹೊರತು ಖಾಲಿಯಾದ ಜೇಬಿಗೆ ಟಿಕೆಟ್ ಬರುವುದಿಲ್ಲ” Read More »

ಸುಳ್ಯ: ದಲಿತ ಕುಟುಂಬಗಳಿಗೆ ಕುಡಿಯುವ ನೀರಿನ ಸಮಸ್ಯೆ|ಅಂಬೇಡ್ಕರ್ ರಕ್ಷಣೆ ವೇದಿಕೆಗೆ ಮನವಿ

ಸಮಗ್ರ ನ್ಯೂಸ್: ಸುಳ್ಯ ತಾಲೂಕು ಕಸಬಾ ಗ್ರಾಮದ ಕುದ್ಪಾಜೆ ಎಂಬಲ್ಲಿ ಸುಮಾರು ಹದಿನೈದು ದಲಿತ ಕುಟುಂಬಗಳಿಗೆ ಕುಡಿಯುವ ನೀರಿನ ಸಮಸ್ಯೆ ಇದ್ದು ಈ ಬಗ್ಗೆ ಅಂಬೇಡ್ಕರ್ ರಕ್ಷಣೆ ವೇದಿಕೆಗೆ ಮನವಿ ಸಲ್ಲಿಸಲಾಯಿತು. ಕುದ್ಪಾಜೆಯಲ್ಲಿ ಸುಮಾರು ಹದಿನೈದು ದಲಿತ ಕುಟುಂಬಗಳು ವಾಸವಾಗಿದ್ದು ಪಂಚಾಯತ್ ನಿಂದ ಕುಡಿಯುವ ನೀರಿನ ಯೋಜನೆಗೆ ತಾರಾನಾಥ ಎಂಬವರ ಗೇಟಿನ ಹತ್ತಿರ ಕೊಳವೆಬಾವಿ ತೆಗೆಯಲು ಗುರುತು ಮಾಡಿದ್ದಾರು. ಆದರೆ ಸ್ಥಳೀಯ ರಾಜಕೀಯ ವ್ಯಕ್ತಿಗಳು ತಾರಾನಾಥ ಎಂಬವರ ಗೇಟಿನ ಹತ್ತಿರ ಕೊಳವೆಬಾವಿ ತೆಗೆಯಬಾರದು ಎಂದು ಹೇಳುತ್ತಿದ್ದಾರೆ. ತಾರಾನಾಥ

ಸುಳ್ಯ: ದಲಿತ ಕುಟುಂಬಗಳಿಗೆ ಕುಡಿಯುವ ನೀರಿನ ಸಮಸ್ಯೆ|ಅಂಬೇಡ್ಕರ್ ರಕ್ಷಣೆ ವೇದಿಕೆಗೆ ಮನವಿ Read More »

ಸುಳ್ಯ: ವಿಕಲಚೇತನ ಹೆಸರಿನಲ್ಲಿ ಬಂದಿರುವ ಅನುದಾನ ದುರುಪಯೋಗ|ಅಂಬೇಡ್ಕರ್ ರಕ್ಷಣಾ ವೇದಿಕೆಗೆ ಮನವಿ

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ಅರಂತೋಡು ಗ್ರಾಮದ ಬೆದ್ರಪಣೆಗೆ ವಿಕಲಚೇತನ ಹೆಸರಿನಲ್ಲಿ ಬಂದಿರುವ ಅನುದಾನ ದುರುಪಯೋಗ,ಅಂಬೇಡ್ಕರ್ ರಕ್ಷಣಾ ವೇದಿಕೆಗೆ ಮನವಿ. ಅರಂತೋಡು ಗ್ರಾಮದ ಬೆದ್ರಪಣೆ ವಿಕಲಚೇತನ ನಿವಾಸಿಯಾದ ಹೊನ್ನಪ್ಪ .ಬಿ.ಬಿನ್ ಸುಬ್ಬಯ್ಯ ಗೌಡ ಎಂಬವರಿಗೆ ಅರಂತೋಡು ಗ್ರಾಮ ಪಂಚಾಯತ್ ಕ್ರಿಯ ಯೋಜನೆ 15ನೇ ಹಣಕಾಸು ಯೋಜನೆ ಅಡಿಯಲ್ಲಿ ಬಂದಿರುವ ಕಾಂಕ್ರೀಟ್ರಿಕರಣವನ್ನು ಸುಬ್ಬಯ್ಯ ಗೌಡರ ಮನೆಯಿಂದ ಒಂದುವರೆ ಕಿಲೋಮೀಟರ್ ದೂರದಲ್ಲಿರುವಂತ ಮೇಲಡ್ತಲೆ ವೆಂಕಪ್ಪ ಗೌಡರ ಮನೆಯ ಬಳಿ ಕಾಂಕ್ರೀಟ್ರಿಕರಣ ಮಾಡಿದ್ದಾರೆ. ವಿಕಲಚೇತನದವರಿಗೆ ಸರಕಾರದಿಂದ ಬರುವಂತ ಸವಲತ್ತುಗಳನ್ನು ಈ ರೀತಿಯಾಗಿ

ಸುಳ್ಯ: ವಿಕಲಚೇತನ ಹೆಸರಿನಲ್ಲಿ ಬಂದಿರುವ ಅನುದಾನ ದುರುಪಯೋಗ|ಅಂಬೇಡ್ಕರ್ ರಕ್ಷಣಾ ವೇದಿಕೆಗೆ ಮನವಿ Read More »

ಪುತ್ತೂರು: ‘ರೈಟ್ ಪೋಯಿ’ ಎಂದ ವಿದ್ಯಾರ್ಥಿ|ನಿರ್ವಾಹಕನನ್ನು ಬಿಟ್ಟು ಬಸ್ ಚಲಾಯಿಸಿಕೊಂಡು ಹೋದ ಚಾಲಕ

ಸಮಗ್ರ ನ್ಯೂಸ್: ನಿರ್ವಾಹಕನನ್ನು ನಿಲ್ದಾಣದಲ್ಲಿಯೇ ಬಿಟ್ಟು ಚಾಲಕ ಬಸ್ ಚಲಾಯಿಸಿಕೊಂಡು ಹೋದ ಘಟನೆ ಪುತ್ತೂರಿನಲ್ಲಿ ನ.3ರಂದು ನಡೆದಿದೆ. ಪುತ್ತೂರುನಿಂದ ಮಂಗಳೂರಿಗೆ ಹೋಗುವ ಕೆ.ಎಸ್.ಆರ್.ಟಿ.ಸಿ. ಬಸ್ಸಿನ ಚಾಲಕ ನಿರ್ವಾಹಕನನ್ನು ಪುತ್ತೂರು ಬಸ್ ನಿಲ್ದಾಣದಲ್ಲಿ ಬಿಟ್ಟು ಬಂದಿದ್ದರು. ನಿಲ್ದಾಣದಿಂದ ಬಸ್ ಹೊರಡುವ ವೇಳೆ ವಿದ್ಯಾರ್ಥಿಯೋರ್ವ ‘ರೈಟ್ ಪೋಯಿ’ ಎಂದು ಹೇಳಿದ್ದ.‌ ನಿರ್ವಾಹಕನೇ ‘ರೈಟ್ ಪೋಯಿ’ ಎಂದು ಹೇಳಿದ್ದಾಗಿ ಭಾವಿಸಿದ ಚಾಲಕ ಬಸ್ ಚಲಾಯಿಸಿದ್ದಾರೆ. ಪುತ್ತೂರು ನಿಲ್ದಾಣದಿಂದ ಹೊರಟ ಬಸ್ ಎಂ.ಟಿ.ರಸ್ತೆಯಾಗಿ ತಾಲೂಕು ಕಛೇರಿ ರಸ್ತೆ ದಾಟಿ ಮುಖ್ಯ ರಸ್ತೆಗೆ ಪ್ರವೇಶಿಸುತ್ತಿದ್ದಂತೆಯೇ

ಪುತ್ತೂರು: ‘ರೈಟ್ ಪೋಯಿ’ ಎಂದ ವಿದ್ಯಾರ್ಥಿ|ನಿರ್ವಾಹಕನನ್ನು ಬಿಟ್ಟು ಬಸ್ ಚಲಾಯಿಸಿಕೊಂಡು ಹೋದ ಚಾಲಕ Read More »

ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮೇಲೆ ಗುಂಡಿನ ದಾಳಿ| ಆಪ್ತ ಸಹಾಯಕ ಸಾವು

ಸಮಗ್ರ ನ್ಯೂಸ್: ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ. ಪಾಕಿಸ್ತಾನದ ಶಹಬಾಜ್ ಷರೀಫ್ ಸರ್ಕಾರದ ವಿರುದ್ಧ ಲಾಹೋರ್‌ ನಿಂದ ಇಸ್ಲಾಮಾಬಾದ್‌ಗೆ ಮೆರವಣಿಗೆ ನಡೆಸುತ್ತಿದ್ದ ವೇಳೆ ಘಟನೆ ನಡೆದಿದೆ. ಇಮ್ರಾನ್ ಖಾನ್ ಗುರುವಾರ ವಜೀರಾಬಾದ್‌ ನಲ್ಲಿ ನಡೆದ ರ್ಯಾಲಿಯಲ್ಲಿ ಭಾಗವಹಿಸಿದ್ದ ವೇಳೆ ಗುಂಡಿನ ದಾಳಿ ನಡೆದಿದೆ. ಘಟನೆಯಲ್ಲಿ ಇಮ್ರಾನ್ ಖಾನ್ ಸೇರಿದಂತೆ 6 ಜನರು ಗಾಯಗೊಂಡಿದ್ದು, ಒಬ್ಬರು ಸಾವನ್ನಪ್ಪಿದ್ದಾರೆ. ಗುಂಡು ಹಾರಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸಿದ್ದಾರೆ. ಇಮ್ರಾನ್

ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮೇಲೆ ಗುಂಡಿನ ದಾಳಿ| ಆಪ್ತ ಸಹಾಯಕ ಸಾವು Read More »

ಶಾಸಕ ರೇಣುಕಾಚಾರ್ಯ ಸಹೋದರನ ಪುತ್ರ ಶವವಾಗಿ ಪತ್ತೆ

ಸಮಗ್ರ ನ್ಯೂಸ್: ಕಳೆದ ಐದು ದಿನಗಳಿಂದ ನಾಪತ್ತೆಯಾಗಿದ್ದ ರೇಣುಕಾಚಾರ್ಯ ರವರ ಸಹೋದರ ಪುತ್ರ ಕಾಲುವೆಯೊಂದರಲ್ಲಿ ಕಾರಿನಲ್ಲಿ ಶವವಾಗಿ ಪತ್ತೆಯಾದ ಘಟನೆ ಇಂದು ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಕಡದಕಟ್ಟೆ ಗ್ರಾಮದ ತುಂಗಾ ಕಾಲುವೆ ಬಳಿ ಸಂಭವಿಸಿದೆ. ಶಾಸಕ ರೇಣುಕಾಚಾರ್ಯ ರವರ ಸಹೋದರನ ಮಗ ಚಂದ್ರ ಶೇಖರ್ ಕಳೆದ ಐದು ದಿನಗಳಿಂದ ಕಾಣೆಯಾಗಿದ್ದರು. ಈ ಬಗ್ಗೆ ಎಲ್ಲೆಡೆ ಪತ್ತೆ ಹಚ್ಚುವ ಕಾರ್ಯ ನಡೆಯುತ್ತಿತ್ತು. ತುಂಗಾ ಕಾಲುವೆಗೆ ಕಾರು ಬಿದ್ದ ಬಗ್ಗೆ ಶಂಕೆ ವ್ಯಕ್ತವಾಗಿತ್ತು ಈ ಹಿನ್ನಲೆಯಲ್ಲಿ ಕಾಲುವೆಯಲ್ಲಿ ಶೋಧ

ಶಾಸಕ ರೇಣುಕಾಚಾರ್ಯ ಸಹೋದರನ ಪುತ್ರ ಶವವಾಗಿ ಪತ್ತೆ Read More »

ಕಿನ್ನಿಗೋಳಿ: ಅತಿವೇಗದ ಕಾರ್ ಡಿಕ್ಕಿ, ಮಹಿಳೆ ಗಂಭೀರ

ಸಮಗ್ರ ನ್ಯೂಸ್: ಪಾದಚಾರಿ ಮಹಿಳೆಗೆ ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಿಸಿದ ಕಾರ್ ಡಿಕ್ಕಿ ಹೊಡೆದ ಪರಿಣಾಮ ಆಕೆ ಗಂಭೀರ ಗಾಯಗೊಂಡ ಘಟನೆ ಕಿನ್ನಿಗೋಳಿಯ ಮುಖ್ಯರಸ್ತೆಯಲ್ಲಿ ಸಂಭವಿಸಿದೆ. ಗಾಯಾಳುವನ್ನು ಕೆಮ್ರಾಲ್ ಮನೋಲಿ ಬಲ್ಲೆ ನಿವಾಸಿ ಜಯಂತಿ ಶೆಟ್ಟಿ ಎಂದು ಗುರುತಿಸಲಾಗಿದೆ. ಜಯಂತಿ ಅವರು ಕಿನ್ನಿಗೋಳಿ ಚರ್ಚ್ ಕಡೆಯಿಂದ ತರಕಾರಿ ಹಿಡಿದುಕೊಂಡು ನಡೆದುಕೊಂಡು ಬರುತ್ತಿದ್ದ ಸಂದರ್ಭ ಕಿನ್ನಿಗೋಳಿ ಕಡೆಯಿಂದ ಮೂರುಕಾವೇರಿ ಕಡೆಗೆ ಸಂಚರಿಸುತ್ತಿದ್ದ ಬ್ರೀಜಾ ಕಾರು ಡಿಕ್ಕಿ ಹೊಡೆದಿದೆ, ಡಿಕ್ಕಿ ಹೊಡೆದ ರಭಸಕ್ಕೆ ಮಹಿಳೆ ದೂರಕ್ಕೆ ಹಾರಿದ್ದು ಗಂಭೀರ ಗಾಯಗೊಂಡಿದ್ದಾರೆ.

ಕಿನ್ನಿಗೋಳಿ: ಅತಿವೇಗದ ಕಾರ್ ಡಿಕ್ಕಿ, ಮಹಿಳೆ ಗಂಭೀರ Read More »

ಪ್ರಧಾನಿ ಭಾಷಣದ ವೇಳೆ ಪೆಂಡಾಲ್ ನಿಂದ ಬೋಲ್ಟ್ ತೆಗೆದ ಭೂಪ| ಆರೋಪಿಯನ್ನು ಬಂಧಿಸಿದ ಪೊಲೀಸರು

ಸಮಗ್ರ ನ್ಯೂಸ್: ಗುಜರಾತ್‌ನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಭಾಷಣ ಮಾಡುತ್ತಿರುವಾಗಲೇ ಸಾರ್ವಜನಿಕವಾಗಿ ಹಾಕಲಾದ ಪೆಂಡಾಲ್‌ನಿಂದ ಬೋಲ್ಟ್ ಅನ್ನು ತೆಗದ ವ್ಯಕ್ತಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಕಳೆದ ಅಕ್ಟೋಬರ್ 31ರಂದು ಥರಾಡ್‌ನಲ್ಲಿ ನಡೆದ ಪ್ರಧಾನಿ ನರೇಂದ್ರ ಮೋದಿಯವರ ಸಾರ್ವಜನಿಕ ಸಭೆಯಲ್ಲಿನ ವಿಡಿಯೋವೊಂದು ವೈರಲ್ ಆಗಿತ್ತು. ಒಂದು ಕಡೆಯಲ್ಲಿ ಪ್ರಧಾನಿ ಮೋದಿ ಭಾಷಣ ಮಾಡುತ್ತಿದ್ದರೆ, ಇನ್ನೊಂದು ಮಗ್ಗಲಿನಲ್ಲಿ ಸಾರ್ವಜನಿಕ ಸಭೆಗಾಗಿ ಹಾಕಿದ್ದ ಮಂಟಪದ ಬೋಲ್ಟ್ ಅನ್ನು ಬಿಚ್ಚಿ, ತೆಗೆಯುತ್ತಿರುವುದು ವಿಡಿಯೋದಲ್ಲಿ ಗೋಚರಿಸಿತು. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್

ಪ್ರಧಾನಿ ಭಾಷಣದ ವೇಳೆ ಪೆಂಡಾಲ್ ನಿಂದ ಬೋಲ್ಟ್ ತೆಗೆದ ಭೂಪ| ಆರೋಪಿಯನ್ನು ಬಂಧಿಸಿದ ಪೊಲೀಸರು Read More »

ಸುಳ್ಯ ಕೆ.ವಿ.ಜಿ.ಆಸ್ಪತ್ರೆಗೆ ಸೇರಿದ ‌ಆಂಬ್ಯುಲೆನ್ಸ್ ಗೆ ಲಾರಿ ಡಿಕ್ಕಿ

ಸಮಗ್ರ ನ್ಯೂಸ್: ಟಿಪ್ಪರ್ ಲಾರಿಯೊಂದು ಅಂಬ್ಯುಲೆನ್ಸ್ ವಾಹನಕ್ಕೆ ಡಿಕ್ಕಿಯಾದ ಘಟನೆ ಮೆಲ್ಕಾರ್ ಸಮೀಪದ ನರಹರಿ ಎಂಬಲ್ಲಿ ನ.2ರ ರಾತ್ರಿ ವೇಳೆ ಸಂಭವಿಸಿದೆ. ಸುಳ್ಯ ಕೆ.ವಿ.ಜಿ.ಆಸ್ಪತ್ರೆಗೆ ಸೇರಿದ ‌ಆಂಬ್ಯುಲೆನ್ಸ್ ಇದಾಗಿದ್ದು, ರೋಗಿಯೋರ್ವರನ್ನು ಕೆ.ವಿ.ಜಿ.ಆಸ್ಪತ್ರೆಯಿಂದ ಮಂಗಳೂರು ಖಾಸಗಿ ಆಸ್ಪತ್ರೆಗೆ ಸಾಗಿಸುವ ವೇಳೆ ಈ‌ ಘಟನೆ ನಡೆದಿದೆ. ದಿವ್ಯ ರೂಪ ಗುತ್ತಿಗೆ ಸಂಸ್ಥೆಗೆ ಸೇರಿದ ಲಾರಿ‌ ಇದಾಗಿದ್ದು, ಅಪಘಾತದಲ್ಲಿ ಚಾಲಕ ಸಹಿತ ರೋಗಿಗೆ ಯಾವುದೇ ಅಪಾಯವಾಗಿಲ್ಲ.

ಸುಳ್ಯ ಕೆ.ವಿ.ಜಿ.ಆಸ್ಪತ್ರೆಗೆ ಸೇರಿದ ‌ಆಂಬ್ಯುಲೆನ್ಸ್ ಗೆ ಲಾರಿ ಡಿಕ್ಕಿ Read More »