ಸಮಗ್ರ ಸಮಾಚಾರ

ಉಪ್ಪಿನಂಗಡಿ: ಬಸ್ ನಿಲ್ಲಿಸಿಲ್ಲವೆಂದು‌ ಬಸ್ ಗೆ ಕಲ್ಲೆಸೆದ ಕುಡುಕ ಮಹಾಶಯ!!

ಸಮಗ್ರ ನ್ಯೂಸ್: ಕೆಎಸ್‌ಆರ್‌ಟಿಸಿ ಚಾಲಕ ಬಸ್ಸನ್ನು ನಿಲ್ಲಿಸಲಿಲ್ಲ ಎಂಬ ಕಾರಣಕ್ಕೆ ಕೋಪಗೊಂಡ ವ್ಯಕ್ತಿಯೋರ್ವ ಬೆಂಗಳೂರಿನಿಂದ ಮಂಗಳೂರಿಗೆ ಸಂಚರಿಸುತ್ತಿದ್ದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ನ ಗಾಜಿಗೆ ಕಲ್ಲೆಸೆದು ಪುಡಿಗಟ್ಟಿದ ಘಟನೆ ಸೋಮವಾರದಂದು ಸಂಜೆ ವರದಿಯಾಗಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿಯಲ್ಲಿ ಕೆಲಸ ಮಾಡುತ್ತಿದ್ದ ಕೂಲಿ ಕಾರ್ಮಿಕನೋರ್ವ ಮದ್ಯದ ಅಮಲಿನಲ್ಲಿದ್ದು ಬಸ್ ನಿಲ್ಲಿಸಲು ಸೂಚಿಸಿದ್ದಾನೆ. ಆದರೆ, ಬಸ್ ನಿಲ್ಲಿಸದೇ ಮುಂದೆ ಸಾಗಿದ್ದು, ತದನಂತರ ಬಸ್‌ನಿಂದ ಕೆಳಗಿಳಿದ ಕೂಡಲೇ ಬಸ್‌ನ ಗಾಜುಗೆ ಕಲ್ಲು ಎಸೆದು ಹಾನಿ ಮಾಡಿದ್ದಾನೆ ಎನ್ನಲಾಗಿದೆ.

ಉಪ್ಪಿನಂಗಡಿ: ಬಸ್ ನಿಲ್ಲಿಸಿಲ್ಲವೆಂದು‌ ಬಸ್ ಗೆ ಕಲ್ಲೆಸೆದ ಕುಡುಕ ಮಹಾಶಯ!! Read More »

ಕಾಂತಾರದ ವಿರುದ್ದ ಕಾನೂನು ಸಮರಕ್ಕೆ ಸಿದ್ಧತೆ| ‘ವರಾಹರೂಪಂ’ ಮೇಲೆ ಕೃತಿಚೌರ್ಯದ ಕರಿನೆರಳು

ಸಮಗ್ರ ನ್ಯೂಸ್: ರಿಷಬ್ ಶೆಟ್ಟಿ ನಟಿಸಿ ನಿರ್ದೇಶಿಸಿರುವ ‘ಕಾಂತಾರ’ ಭರ್ಜರಿ ಯಶಸ್ಸು ಕಂಡಿದ್ದು, ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.ಹೀಗಿರುವಾಗಲೇ ‘ಕಾಂತಾರ’ ಚಿತ್ರದ ‘ವರಾಹ ರೂಪಂ’ ಹಾಡಿನ ಬಗ್ಗೆ ಕಾನೂನು ಹೋರಾಟಕ್ಕೆ ಕೇರಳದ ತೈಕುಡಂ ಬ್ರಿಗೇಡ್ ಸಂಸ್ಥೆ ಮುಂದಾಗಿದೆ. ಮಲಯಾಳಂ ‘ನವರಸಂ’ ಹಾಡು ಹೋಲುವಂತೆ ‘ವರಾಹ ರೂಪಂ’ ಹಾಡಿನ ಸಾಮ್ಯತೆ ಇದೆ. 5 ವರ್ಷಗಳ ಹಿಂದೆ ‘ನವರಸಂ’ ಆಲ್ಬಂ ಸಾಂಗ್ ಬಿಡುಗಡೆಯಾಗಿದ್ದು, ಅದರ ಟ್ಯೂನ್ ಕಾಪಿ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಇದು ಕಾಪಿ ರೈಟ್ ಉಲ್ಲಂಘನೆಯಾಗಿದ್ದು, ‘ಕಾಂತಾರ’ ಚಿತ್ರತಂಡದ

ಕಾಂತಾರದ ವಿರುದ್ದ ಕಾನೂನು ಸಮರಕ್ಕೆ ಸಿದ್ಧತೆ| ‘ವರಾಹರೂಪಂ’ ಮೇಲೆ ಕೃತಿಚೌರ್ಯದ ಕರಿನೆರಳು Read More »

ಬಂಟ್ವಾಳ: ತಲೆನೋವಿನಿಂದ ಬಳಲುತ್ತಿದ್ದ ಕಾಲೇಜು ವಿದ್ಯಾರ್ಥಿನಿ ಮೃತ್ಯು

ಸಮಗ್ರ ನ್ಯೂಸ್: ತಲೆನೋವಿನಿಂದ ಬಳಲುತ್ತಿದ್ದ ಕಾಲೇಜು ವಿದ್ಯಾರ್ಥಿನಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಅ.24 ರಂದು ಮಂಚಿಯಲ್ಲಿ ನಡೆದಿದೆ. ಮಂಚಿ ಗ್ರಾಮದ ಮಣ್ಣಗುಳಿ ನಿವಾಸಿ ರತಿ ಕುಲಾಲ್ ಅವರ ಮಗಳು ಭವ್ಯಾ (20) ಮೃತಪಟ್ಟ ವಿದ್ಯಾರ್ಥಿನಿ. ಇವರು ಪುತ್ತೂರು ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, ಕೆಲ ದಿನಗಳಿಂದ ತಲೆನೋವು ಎಂದು ಸ್ಥಳೀಯ ಖಾಸಗಿ ವೈದ್ಯರ ಬಳಿ ಪರೀಕ್ಷೆ ಮಾಡಿ ಮದ್ದು ಪಡೆಯುತ್ತಿದ್ದಳು. ಆದರೆ ಆದಿತ್ಯವಾರ ರಾತ್ರಿ ಸುಮಾರು 7 ಗಂಟೆ ವೇಳೆ ತಲೆ ನೋವು

ಬಂಟ್ವಾಳ: ತಲೆನೋವಿನಿಂದ ಬಳಲುತ್ತಿದ್ದ ಕಾಲೇಜು ವಿದ್ಯಾರ್ಥಿನಿ ಮೃತ್ಯು Read More »

ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ದೌರ್ಜನ್ಯ| ಬಾವಿಗೆ ಹಾರಲು ಯತ್ನಿಸಿದ ಬಾಲಕಿ

ಸಮಗ್ರ ನ್ಯೂಸ್: ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ದೌರ್ಜನ್ಯ ನಡೆಸಿದ ವ್ಯಕ್ತಿಯ ವಿರುದ್ಧ ಧರ್ಮಸ್ಥಳ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದ ಅಪ್ರಾಪ್ತ ಯುವತಿಗೂ ಕಳೆಂಜ ಗ್ರಾಮದ ಯುವಕನಿಗೂ ಕಳೆದ ಕೆಲವು ತಿಂಗಳುಗಳಿಂದ ಇನ್ ಸ್ಟಾಗ್ರಾಮ್ ಮೂಲಕ ಪರಿಚಯವಾಗಿತ್ತು. ಬಳಿಕ ಆಕೆಯ ದೂರವಾಣಿ ನಂಬರ್ ಪಡೆದು ಆಕೆಯೊಂದಿಗೆ ಚಾಟ್ ಮಾಡುತ್ತಿದ್ದ ಪರಿಚಯ ಪ್ರೀತಿಯಾಗಿ, ಆಕೆಯನ್ನು ಮದುವೆಯಾಗುತ್ತೇನೆಂದು ನಂಬಿಸಿ ಎರಡು ಬಾರಿ ಲೈಂಗಿಕವಾಗಿಯೂ ಬಳಸಿಕೊಂಡಿದ್ದ ಎಂದು ಆರೋಪಿಸಲಾಗಿದೆ. ಇವರಿಬ್ಬರ ದೂರವಾಣಿ ಚಾಟ್ ಆಕೆಯ ಸಂಬಂಧಿಕರಿಗೆ

ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ದೌರ್ಜನ್ಯ| ಬಾವಿಗೆ ಹಾರಲು ಯತ್ನಿಸಿದ ಬಾಲಕಿ Read More »

ರೈತ ಸಮುದಾಯಕ್ಕೆ‌ ಗುಡ್ ನ್ಯೂಸ್ ನೀಡಿದ ಸಚಿವ ಸುನಿಲ್‌ಕುಮಾರ್| 3.5 ಲಕ್ಷ ಜನರಿಗೆ ಉಚಿತ ಸೌರ ವಿದ್ಯುತ್

ಸಮಗ್ರ ನ್ಯೂಸ್: ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಕುಸುಮ್ ಯೋಜನೆಯಡಿ ರಾಜ್ಯದ ಸುಮಾರು 3.50 ಲಕ್ಷ ರೈತರಿಗೆ ಉಚಿತ ಸೌರ ವಿದ್ಯುತ್ ಪೂರೈಕೆ ಮಾಡಲಾಗುವುದು ಎಂದು ಇಂಧನ ಸಚಿವ ಸುನೀಲ್ ಕುಮಾರ್ ಘೋಷಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಸುಮಾರು 3.50 ಲಕ್ಷ ರೈತಗರಿಗೆ ಉಚಿತವಾಗಿ ಸೌರ ವಿದ್ಯುತ್ ಪೂರೈಕೆ ಮಾಡುವ ಉದ್ದೇಶದಿಂದ ಕುಸುಮ್ ಯೋಜನೆಯನ್ನು ಜಾರಿಗೊಳಿಸಲಾಗುವುದು. ಕೇಂದ್ರ ಸರ್ಕಾರದ ಸಹಾಯದಿಂದ ಅನುಷ್ಠಾನಗೊಳಿಸಲಾಗುವ ಈ ಯೋಜನೆಯಡಿ ರಾಜ್ಯದಲ್ಲಿ 1,000 ಮೆಗಾ ವ್ಯಾಟ್ ಸಾಮರ್ಥ್ಯದ

ರೈತ ಸಮುದಾಯಕ್ಕೆ‌ ಗುಡ್ ನ್ಯೂಸ್ ನೀಡಿದ ಸಚಿವ ಸುನಿಲ್‌ಕುಮಾರ್| 3.5 ಲಕ್ಷ ಜನರಿಗೆ ಉಚಿತ ಸೌರ ವಿದ್ಯುತ್ Read More »

ನೇಣುಬಿಗಿದುಕೊಂಡು ಸ್ವಾಮೀಜಿ ಆತ್ಮಹತ್ಯೆ

ಸಮಗ್ರ ನ್ಯೂಸ್: ರಾಮನಗರ ಜಿಲ್ಲೆಯ ಸೋಲೂರಿನ ಬಂಡೆ ಮಠದ ಸ್ವಾಮೀಜಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಮನಗರ ಜಿಲ್ಲೆ, ಮಾಗಡಿ ತಾಲೂಕಿನ ಸೋಲೂರಿನಲ್ಲಿರುವ ಕಂಚುಗಲ್ ಬಂಡೆ ಮಠದಲ್ಲಿ 43 ವರ್ಷದ ಬಸವಲಿಂಗ ಸ್ವಾಮೀಜಿ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಠದಲ್ಲಿಯೇ ಬಂಡೆ ಮಠದ ಸ್ವಾಮೀಜಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅನುಮಾನಾಸ್ಪದ ರೀತಿಯಲ್ಲಿ ಸ್ವಾಮೀಜಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಠದ ಜಮೀನು ವಿಚಾರಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಾಗಡಿ ತಾಲೂಕಿನಲ್ಲೇ ದೊಡ್ಡ ಮಠ ಎಂಬ

ನೇಣುಬಿಗಿದುಕೊಂಡು ಸ್ವಾಮೀಜಿ ಆತ್ಮಹತ್ಯೆ Read More »

ಸುಳ್ಯ: ರಾತ್ರೋರಾತ್ರಿ ತಲೆ ಎತ್ತಿದ ವೈನ್ ಶಾಪ್| ಗ್ರಾಮೀಣ ಜನರಿಗೆ ಫುಲ್ ಶಾಕ್

ಸಮಗ್ರ ನ್ಯೂಸ್: ಹೋರಾಟಗಾರರು ನಮ್ಮೂರಲ್ಲಿ ಮದ್ಯದ ಅಂಗಡಿ ಬೇಡ ಎಂದು ಹೋರಾಟ, ಪ್ರತಿಭಟನೆ ಮಾಡುತ್ತಿರುವಾಗಲೇ ಪಕ್ಕದ‌ ಊರಲ್ಲಿ ರಾತ್ರೋರಾತ್ರಿ ವೈನ್ ಶಾಪ್ ಒಂದು ತಲೆ‌ ಎತ್ತಿದ್ದು‌‌ ಗ್ರಾಮಸ್ಥರು ಫುಲ್ ಶಾಕ್ ಅನುಭವಿಸಿದ ಘಟನೆ ದ.ಕ ಜಿಲ್ಲೆಯ ಸುಳ್ಯ ತಾಲೂಕಿನ ಕೊಲ್ಲಮೊಗ್ರುವಿನಲ್ಲಿ ನಡೆದಿದೆ. ಕಳೆದೆರಡು ವಾರಗಳ ಹಿಂದೆ ಕೊಲ್ಲಮೊಗ್ರುವಿಗೆ 6 ಕಿ.ಮೀ ದೂರವಿರುವ ಹರಿಹರ ಪಲ್ಲತ್ತಡ್ಕದಲ್ಲಿ ಮದ್ಯದಂಗಡಿ ತೆರೆಯುವ ಬಗ್ಗೆ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿ ಹೋರಾಟ ನಡೆಸಿದ್ದರು. ಗ್ರಾಮದ ಸಮಾನ ಮನಸ್ಕ ಜನರು ಒಟ್ಟಾಗಿ ಮದ್ಯದಂಗಡಿ ವಿರುದ್ದ ಮುಗಿಬಿದ್ದಿದ್ದರು.

ಸುಳ್ಯ: ರಾತ್ರೋರಾತ್ರಿ ತಲೆ ಎತ್ತಿದ ವೈನ್ ಶಾಪ್| ಗ್ರಾಮೀಣ ಜನರಿಗೆ ಫುಲ್ ಶಾಕ್ Read More »

ಸುಳ್ಯ: ರಸ್ತೆ ದುರಸ್ತಿ ಮಾಡಿಕೊಡುವಂತೆ ಸ್ಥಳೀಯರಿಂದ ಅಂಬೇಡ್ಕರ್ ರಕ್ಷಣೆ ವೇದಿಕೆಗೆ ಮನವಿ

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ಮಿತ್ತೂರು ಉಬರಡ್ಕ ಗ್ರಾಮದ ಕಟ್ಟಕೊಡಿ ಯಾವಟೆ ಸಂಪರ್ಕ ರಸ್ತೆ ಸಂಪೂರ್ಣವಾಗಿ ಹದಕ್ಕೆಟ್ಟು ಹೋಗಿದ್ದು ಇದನ್ನು ದುರಸ್ತಿ ಮಾಡಿಕೊಡುವಂತೆ ಸ್ಥಳೀಯರಿಂದ ಅಂಬೇಡ್ಕರ್ ರಕ್ಷಣೆ ವೇದಿಕೆಗೆ ಮನವಿ ನೀಡಲಾಯಿತು. ಮಿತ್ತೂರು ಉಬರಡ್ಕ ಗ್ರಾಮದ ಕಟ್ಟಕೊಡಿ ಯಾವಟೆ ಸಂಪರ್ಕ ರಸ್ತೆ ಸಂಪೂರ್ಣವಾಗಿ ಹದಕ್ಕೆಟ್ಟು ಹೋಗಿದ್ದು ರಸ್ತೆಗೆ ಕಾಂಕ್ರಿಟ್ ಮಾಡಿಕೊಡಿಯೆಂದ್ದು ಸುಳ್ಯ ಶಾಸಕರಿಗೆ ಮತ್ತು ಸಂಬಂಧ ಪಟ್ಟ ಇಲಾಖೆಗೆ ಹಲವು ವರ್ಷಗಳಿಂದ ಮನವಿ ಮಾಡಿದ್ದರು. ಆದರೆ ಯಾವುದೇ ಪ್ರಯೋಜನವಿಲ್ಲವೆಂದು ಪರಿಶಿಷ್ಟ ಪಂಗಡದವರು ಮತ್ತು ಅಲ್ಲಿಯ ನಿವಾಸಿಗಳು ಅಂಬೇಡ್ಕರ್

ಸುಳ್ಯ: ರಸ್ತೆ ದುರಸ್ತಿ ಮಾಡಿಕೊಡುವಂತೆ ಸ್ಥಳೀಯರಿಂದ ಅಂಬೇಡ್ಕರ್ ರಕ್ಷಣೆ ವೇದಿಕೆಗೆ ಮನವಿ Read More »

ನೀನು ನೋಡಲು ಕಪ್ಪಾಗಿದ್ಯಾ ಎಂದ ಪತಿಯನ್ನು ಕೊಚ್ಚಿ ಕೊಂದ ಪತ್ನಿ

ಚಂಡೀಗಢ: ನೀನು ನೋಡಲು ಕಪ್ಪಾಗಿದ್ಯಾ, ನಿನ್ನ ಮೈ ಬಣ್ಣ ಕಪ್ಪು ಎಂದು ಹೀಯಾಳಿಸುತ್ತಿದ್ದ ಪತಿಯನ್ನು ಪತ್ನಿ ಹತ್ಯೆಗೈದಿರುವ ಘಟನೆ ಛತ್ತೀಸ್‍ಗಢದ ದುರ್ಗ್ ಜಿಲ್ಲೆಯಲ್ಲಿ ನಡೆದಿದೆ. ಅನಂತ್ ಸೋನ್ವಾನಿ ಮೃತ ವ್ಯಕ್ತಿಯಾಗಿದ್ದಾರೆ ಮತ್ತು ಆರೋಪಿ ಪತ್ನಿಯನ್ನು ಸಂಗೀತಾ ಸೋನ್ವಾನಿ ಎಂದು ಗುರುತಿಸಲಾಗಿದೆ. ಸೋಮವಾರ ಸಂಗೀತಾಳನ್ನು ಬಂಧಿಸಿರುವುದಾಗಿ ಪೊಲೀಸ್ ಉಪವಿಭಾಗಾಧಿಕಾರಿ (ಪಟಾನ್ ಪ್ರದೇಶ) ದೇವಾಂಶ್ ರಾಥೋಡ್ ತಿಳಿಸಿದ್ದಾರೆ. ಈ ಸಂಬಂಧ ವಿಚಾರಣೆ ವೇಳೆ ಅನಂತ್ ನನ್ನನ್ನು ಯಾವಾಗಲೂ ಕೊಳಕಿ ಎಂದು ರೇಗಿಸುತ್ತಿದ್ದ ಮತ್ತು ಕಪ್ಪು ಮೈ ಬಣ್ಣ ಹೊಂದಿರುವ ಕಾರಣ

ನೀನು ನೋಡಲು ಕಪ್ಪಾಗಿದ್ಯಾ ಎಂದ ಪತಿಯನ್ನು ಕೊಚ್ಚಿ ಕೊಂದ ಪತ್ನಿ Read More »

ತಂದೆಯ ಮರ್ಮಾಂಗಕ್ಕೆ ಸಲಾಕೆಯಿಂದ ಹೊಡೆದು ಕೊಲೆಗೈದ ಪಾಪಿ ಮಗ| ಬುದ್ದಿವಾದ ಹೇಳಿದ್ದೇ ಪ್ರಾಣಕ್ಕೆ ಮುಳುವಾಯಿತೇ?

ಸಮಗ್ರ ನ್ಯೂಸ್: ಸ್ವಂತ ತಂದೆಯ ಮರ್ಮಾಂಗಕ್ಕೆ ಸಲಾಕೆಯಿಂದ ಹೊಡೆದು ಕೊಲೆ ಮಾಡಿದ ಪಾಪಿ ಮಗನನ್ನು ಬೆಂಗಳೂರಿನ ಕಾಡುಗೋಡಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ಖಾಜಿಸೊನ್ನನಹಳ್ಳಿಯ ನಿವಾಸಿ ಚನ್ನಬಸವರಾಜು ಕೊಲೆಯಾದ ವ್ಯಕ್ತಿಯಾಗಿದ್ದು, ಈತನ ಪುತ್ರ ರಾಕೇಶ್ ಕುಮಾರ್ ಬಂಧಿತ ಆರೋಪಿ. ಚನ್ನಬಸವರಾಜು ಅವರ ಹಿರಿಯ ಮಗ ವಕೀಲನಾಗಿದ್ದು, ಮತೊಬ್ಬ ಪುತ್ರ ರಾಕೇಶ್ 10ನೇ ತರಗತಿವರೆಗೆ ಮಾತ್ರ ಓದಿ ಹೊಲದಲ್ಲಿ ಕೆಲಸ ಮಾಡುತ್ತಿದ್ದ. ಇಬ್ಬರೂ ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಒಳ್ಳೆಯ ವ್ಯಾಸಂಗ ಮಾಡಿದ್ದರೆ ನಿನಗೆ ಉತ್ತಮ ಹುದ್ದೆಯಲ್ಲಿ ಕೆಲಸ ಮಾಡಬಹುದಿತ್ತು

ತಂದೆಯ ಮರ್ಮಾಂಗಕ್ಕೆ ಸಲಾಕೆಯಿಂದ ಹೊಡೆದು ಕೊಲೆಗೈದ ಪಾಪಿ ಮಗ| ಬುದ್ದಿವಾದ ಹೇಳಿದ್ದೇ ಪ್ರಾಣಕ್ಕೆ ಮುಳುವಾಯಿತೇ? Read More »