ಸಮಗ್ರ ಸಮಾಚಾರ

ಕಾಡು ಪ್ರಾಣಿ ಡಿಕ್ಕಿ ಹೊಡೆದು ಸವಾರ ಸಾವು| ಮಗನ ಶವ ಕಂಡು ಜೀವ ಬಿಟ್ಟ ತಂದೆ| ಹೃದಯ ವಿದ್ರಾವಕ ಘಟನೆಗೆ ಮರುಗಿದ‌ ಗ್ರಾಮಸ್ಥರು

ಸಮಗ್ರ ನ್ಯೂಸ್: ಒಂದು ಕ್ಷಣದ ಅಂತರದಲ್ಲಿ ಇಡೀ ಕುಟುಂಬವೇ ಅನಾಥವಾಗಿರುವ ಅತ್ಯಂತ ಹೃದಯವಿದ್ರಾವಕ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ರಾತ್ರಿ ಪಾಳಯದ ಕೆಲಸ ಮುಗಿಸಿಕೊಂಡು ಮನೆಗೆ ಮರಳುತ್ತಿದ್ದ ಯುವಕನ ಬೈಕ್‌ಗೆ ಕಾಡು ಪ್ರಾಣಿಯೊಂದು ಡಿಕ್ಕಿ ಹೊಡೆದ ಪರಿಣಾಮ ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಹೆತ್ತ ಮಗನ ಶವವನ್ನು ನೋಡಿ ತೀವ್ರ ಆಘಾತಕ್ಕೊಳಗಾದ ತಂದೆ ಮನೆಗೆ ಬಂದು ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಭಾನುವಾರ ತಡರಾತ್ರಿ ಈ ಭೀಕರ ದುರಂತ ಸಂಭವಿಸಿದ್ದು, ಇಡೀ ಮಲೆನಾಡು ಭಾಗದ ಜನರನ್ನು […]

ಕಾಡು ಪ್ರಾಣಿ ಡಿಕ್ಕಿ ಹೊಡೆದು ಸವಾರ ಸಾವು| ಮಗನ ಶವ ಕಂಡು ಜೀವ ಬಿಟ್ಟ ತಂದೆ| ಹೃದಯ ವಿದ್ರಾವಕ ಘಟನೆಗೆ ಮರುಗಿದ‌ ಗ್ರಾಮಸ್ಥರು Read More »

ಕಲ್ಯಾಣ ಮಂಟಪದಲ್ಲಿ ಝಳಪಿಸಿದ ಲಾಂಗು ಮಚ್ಚು| ಮಸ್ತಿಗಾಗಿ ಡ್ಯಾನ್ಸ್ ಮಾಡಿದ ಮೂವರು ಅರೆಸ್ಟ್

ಸಮಗ್ರ ನ್ಯೂಸ್: ಕಲ್ಯಾಣ ಮಂಟಪದಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಯುವಕರಿಬ್ಬರು ಕೈಯಲ್ಲಿ ಮಾರಾಕಾಸ್ತ್ರ ಹಿಡಿದು ನೃತ್ಯ ಮಾಡಿದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಘಟನೆ ಕಲಬುರಗಿಯ ಆದರ್ಶ ಕಲ್ಯಾಣ ಮಂಟಪದಲ್ಲಿ ನಡೆದಿದ್ದು, ವಿಡಿಯೊ ವೈರಲ್ ಬೆನ್ನಲ್ಲೇ ‌ಮೂವರು ಅರೆಸ್ಟ್ ಆಗಿದ್ದಾರೆ. ಇತ್ತೀಚೆಗೆ ಅರಿಸಿನ ಶಾಸ್ತ್ರ ಸಮಾರಂಭದಲ್ಲಿ ರಾಜಕೀಯ ಮುಖಂಡರೊಬ್ಬರು ಕೈ‌ಯಲ್ಲಿ ಪಿಸ್ತೂಲ್‌ ಹಿಡಿದು ಕುಣಿದ ಪ್ರಕರಣ ಸದ್ದು ಮಾಡಿದ ಬೆನ್ನಲ್ಲೆ ಈ ಘಟನೆ ಬೆಳಕಿಗೆ ಬಂದಿದೆ. ಇತ್ತೀಚೆಗೆ ತುಷಾರ್ ಎಂಬ ಯುವಕನ ಮದುವೆ ಇತ್ತು. ಆ ಸಮಾರಂಭದಲ್ಲಿ

ಕಲ್ಯಾಣ ಮಂಟಪದಲ್ಲಿ ಝಳಪಿಸಿದ ಲಾಂಗು ಮಚ್ಚು| ಮಸ್ತಿಗಾಗಿ ಡ್ಯಾನ್ಸ್ ಮಾಡಿದ ಮೂವರು ಅರೆಸ್ಟ್ Read More »

ಕರಾವಳಿ ಜನತೆಗೆ ಗುಡ್ ನ್ಯೂಸ್ ನೀಡಿದ ಖಾಸಗಿ ಸಾರಿಗೆ| ಶೀಘ್ರದಲ್ಲೇ 100% ಎಲೆಕ್ಟ್ರಿಕ್ ಬಸ್ ಸೇವೆ ಲಭ್ಯ

ಸಮಗ್ರ ನ್ಯೂಸ್: ಕರಾವಳಿ ಭಾಗದ ಜನರಿಗೆ ಗುಡ್‌ ನ್ಯೂಸ್‌ವೊಂದು ಇದೆ. ದಕ್ಷಿಣ ಕನ್ನಡದಲ್ಲಿ ಕೆಎಸ್‌ಆರ್‌ಟಿಸಿ ವಿವಿಧ ಮಾರ್ಗಗಳಲ್ಲಿ 100 ಎಲೆಕ್ಟ್ರಿಕ್‌ ಬಸ್ಸುಗಳನ್ನು ಓಡಿಸಲು ಸಿದ್ಧತೆ ನಡೆಸುತ್ತಿರುವ ನಡುವೆಯೇ, ಖಾಸಗಿ ಸಾರಿಗೆ ಸಂಸ್ಥೆ ಕೂಡ ಎಲೆಕ್ಟ್ರಿಕ್‌ ಬಸ್‌ಗಳನ್ನು ಪರಿಚಯಿಸಲು ಮುಂದಾಗಿದೆ. ಮಂಗಳೂರಿನ ಮಂಗಳಾದೇವಿ ದೇವಸ್ಥಾನದಿಂದ ಪ್ರಾರಂಭವಾಗುವ ರೂಟ್‌ ನಂ. 27ರಲ್ಲಿ ಖಾಸಗಿ ಎಲೆಕ್ಟ್ರಿಕ್‌ ಬಸ್‌ ಒಂದು ವಾರದೊಳಗೆ ಸಂಚಾರ ಆರಂಭಿಸುವ ಸಾಧ್ಯತೆಯಿದೆ. ಇದು ನಗರ ಸಾರಿಗೆ ಕ್ಷೇತ್ರದಲ್ಲಿ ಮಹತ್ವದ ಬೆಳವಣಿಗೆಯಾಗಿದೆ ಎಂದು ಹೇಳಲಾಗುತ್ತಿದೆ. ಎಲೆಕ್ಟ್ರಿಕ್‌ ಬಸ್‌ಗಳ ಪರಿಚಯದಿಂದ ಇಂಧನ

ಕರಾವಳಿ ಜನತೆಗೆ ಗುಡ್ ನ್ಯೂಸ್ ನೀಡಿದ ಖಾಸಗಿ ಸಾರಿಗೆ| ಶೀಘ್ರದಲ್ಲೇ 100% ಎಲೆಕ್ಟ್ರಿಕ್ ಬಸ್ ಸೇವೆ ಲಭ್ಯ Read More »

ಬಂಟ್ವಾಳ: ಪ್ರತ್ಯೇಕ ಪ್ರಕರಣ; ಇಬ್ಬರು ಸಾವು

ಸಮಗ್ರ ನ್ಯೂಸ್: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ ಎರಡು ಜೀವಗಳು ಬಲಿಯಾದ ಘಟನೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಿಂತಿದ್ದ ಪಿಕಪ್ ವಾಹನಕ್ಕೆ ಬೈಕ್ ಡಿಕ್ಕಿಯಾಗಿ ಸವಾರ ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ ಬ್ರಹ್ಮರಕೂಟ್ಲು ಎಂಬಲ್ಲಿ ನಡೆದಿದೆ. ತಾಲೂಕಿನ ನರಿಕೊಂಬು ಮರ್ದೊಳಿ ನಿವಾಸಿ ಸಂತೋಷ್ ಮೃತರು. ಅವರು ಬೆಳಗ್ಗೆ ಮನೆಯಿಂದ ಮಂಗಳೂರಿಗೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಬ್ರಹ್ಮರಕೂಟ್ಲು ಎಂಬಲ್ಲಿ ಟಯರ್ ಬ್ಲಾಸ್ಟ್ ಆಗಿದ್ದ ಕಾರಣಕ್ಕಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ಪಿಕಪ್ ವಾಹನಕ್ಕೆ

ಬಂಟ್ವಾಳ: ಪ್ರತ್ಯೇಕ ಪ್ರಕರಣ; ಇಬ್ಬರು ಸಾವು Read More »

ಟ್ಯೂಷನ್ ಗೆ ತೆರಳಿದ್ದ ವಿದ್ಯಾರ್ಥಿಯನ್ನು ಥಳಿಸಿ ಕೊಂದ ಅಪ್ರಾಪ್ತ ಬಾಲಕರು| ಶಿವಮೊಗ್ಗ ಮತ್ತೆ ಕೊತಕೊತ

ಸಮಗ್ರ ನ್ಯೂಸ್: ವಿಶೇಷ ತರಗತಿ ಮುಗಿಸಿ ಬರುತ್ತಿದ್ದ ಎಸ್‌‍ಎಸ್‌‍ಎಲ್‌ಸಿ ವಿದ್ಯಾರ್ಥಿಯನ್ನು ಗುಂಪೊಂದು ಅಡ್ಡಗಟ್ಟಿ ಥಳಿಸಿ ಕೊಲೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ. ಕಳೆದ ರಾತ್ರಿ ಈ ದುರ್ಘಟನೆ ನಡೆದಿದ್ದು ಸಂಕೇತ್‌ ಎಂಬ ವಿದ್ಯಾರ್ಥಿಯನ್ನು ಥಳಿಸಿ ಕೊಲೆ ಮಾಡಲಾಗಿದೆ. ಸರ್ಕಾರಿ ಶಾಲೆಯಲ್ಲಿ ಓದುತ್ತಿದ್ದ ಸಾಕೇತ್‌ ನಿನ್ನೆ ಸಂಜೆ ವಿಶೇಷ ತರಗತಿಯಲ್ಲಿ ಪಾಲ್ಗೊಂಡು ಶಾಲೆಯಿಂದ ಹೊರಬರುತ್ತಿದ್ದಂತೆ ಸುಮಾರು 5 ರಿಂದ 6 ಮಂದಿ ಅನ್ಯಕೋಮಿನ ವಿದ್ಯಾರ್ಥಿಗಳ ಗುಂಪು ಆತನ ಮೇಲೆ ಮನ ಬಂದಂತೆ ಥಳಿಸಿ ಕೊಲೆ ಮಾಡಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.

ಟ್ಯೂಷನ್ ಗೆ ತೆರಳಿದ್ದ ವಿದ್ಯಾರ್ಥಿಯನ್ನು ಥಳಿಸಿ ಕೊಂದ ಅಪ್ರಾಪ್ತ ಬಾಲಕರು| ಶಿವಮೊಗ್ಗ ಮತ್ತೆ ಕೊತಕೊತ Read More »

ಕೇರಳ ಇನ್ಮುಂದೆ ‘ಕೇರಳಂ’| ಹೆಸರು ಬದಲಾವಣೆ ಪ್ರಸ್ತಾವನೆಗೆ ಕೇಂದ್ರ ಸಂಪುಟ ಒಪ್ಪಿಗೆ

ಸಮಗ್ರ ನ್ಯೂಸ್: ಕೇರಳ ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಕೇರಳ ಸರ್ಕಾರದ ಪ್ರಸ್ತಾವನೆಯನ್ನು ಕೇಂದ್ರ ಸಚಿವ ಸಂಪುಟ ಇಂದು ಅನುಮೋದಿಸಿದೆ. ಏಪ್ರಿಲ್-ಮೇ ತಿಂಗಳಲ್ಲಿ ನಡೆಯಲಿರುವ ಕೇರಳ ವಿಧಾನಸಭಾ ಚುನಾವಣೆಗೂ ಮುಂಚಿತವಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಕೇರಳಂ ಎಂಬ ಹೆಸರು ಮಲಯಾಳಂ ಮೂಲ ಭಾಷೆಯದ್ದಾದ್ದರಿಂದ ಇಂಗ್ಲಿಷ್​ನ ಕೇರಳ ಎಂಬ ಹೆಸರಿನ ಬದಲು ಕೇರಳ ಬಳಸಲು ನಿರ್ಧರಿಸಲಾಗಿದೆ. ಈ ಬಗ್ಗೆ ಕೇರಳದ ವಿಧಾನಸಭೆಯಲ್ಲಿ ಸರ್ವಾನುಮತದ ನಿರ್ಣಯ ತೆಗೆದುಕೊಳ್ಳಲಾಗಿತ್ತು. ಇದೀಗ ಇದಕ್ಕೆ ಕೇಂದ್ರ ಸಚಿವ ಸಂಪುಟದ ಒಪ್ಪಿಗೆಯೂ ಸಿಕ್ಕಿದೆ. ಇನ್ನು

ಕೇರಳ ಇನ್ಮುಂದೆ ‘ಕೇರಳಂ’| ಹೆಸರು ಬದಲಾವಣೆ ಪ್ರಸ್ತಾವನೆಗೆ ಕೇಂದ್ರ ಸಂಪುಟ ಒಪ್ಪಿಗೆ Read More »

ಉದ್ಯೋಗದ ಆಮಿಷವೊಡ್ಡಿ‌ ಸೆಕ್ಸ್ ದಂಧೆ| ಸಹೋದರಿಯರಿಬ್ಬರು ಅರೆಸ್ಟ್

ಸಮಗ್ರ ನ್ಯೂಸ್: ಉದ್ಯೋಗ ನೀಡುವ ಆಮಿಷವೊಡ್ಡಿ ಯುವತಿಯರನ್ನು ಸೆಕ್ಸ್ ರಾಕೆಟ್‌ಗೆ ತಳ್ಳುವುದು ಮತ್ತು ಬಲವಂತದ ಮತಾಂತರ ಮಾಡುತ್ತಿದ್ದ ಆರೋಪದ ಮೇಲೆ ಭೋಪಾಲ್‌ನಲ್ಲಿ ಇಬ್ಬರು ಸಹೋದರಿಯರನ್ನು ಪೊಲೀಸರು ಬಂಧಿಸಿದ್ದಾರೆ. ಅಮ್ರೀನ್ ಮತ್ತು ಆಫ್ರೀನ್ ಎಂಬ ಸಹೋದರಿಯರು ಹಾಗೂ ಅವರ ಸಹಚರ ಚಂದನ್ ಯಾದವ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಬಿಲಾಲ್, ಚಾನು ಮತ್ತು ಯಾಸಿರ್ ಎಂಬ ಮೂವರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.21 ಮತ್ತು 32 ವರ್ಷದ ಇಬ್ಬರು ಮಹಿಳೆಯರು ಬಾಗ್ ಸೇವಾನಿಯಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ನಂತರ ಈ ಜಾಲ

ಉದ್ಯೋಗದ ಆಮಿಷವೊಡ್ಡಿ‌ ಸೆಕ್ಸ್ ದಂಧೆ| ಸಹೋದರಿಯರಿಬ್ಬರು ಅರೆಸ್ಟ್ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: 2026ರ ಫೆಬ್ರವರಿಯ ಕೊನೆಯ ವಾರದಲ್ಲಿ ಅನೇಕ ಬದಲಾವಣೆಗಳನ್ನು ನಿರೀಕ್ಷಿಸಬಹುದು. ಸಕಾರಾತ್ಮಕ ಅಂಶಗಳು ಇರಲಿದ್ದು, ಜೀವನ ಸುಖಮಯ ಎನಿಸಲಿದೆ. ಕುಜನು ಉಚ್ಚಸ್ಥಾನವನ್ನು ಬಿಟ್ಟು ಮುಂದಕ್ಕೆ ಹೋಗಲಿದ್ದಾನೆ, ಮಾತ್ರವಲ್ಲ ಐದು ಗ್ರಹಗಳ ಯೋಗ ಸಂಭವಿಸುವುದು. ಅಪರೂಪದ ಸಂಯೋಗವೂ ಆಗಿದ್ದು ಅನೇಕ ಶುಭಗಳನ್ನು ನಿರೀಕ್ಷಿಸಬಹುದು. ಈ ವಾರದಲ್ಲಿ ನಿಮ್ಮ ರಾಶಿಗಳ ವಾರಭವಿಷ್ಯ ಹೇಗಿದೆ ನೋಡೋಣ… ​ಮೇಷ:ಈ ವಾರ ಸೂರ್ಯ ಮತ್ತು ಬುಧನ ಸಂಚಾರದಿಂದ ಉದ್ಯೋಗದಲ್ಲಿ ಬಡ್ತಿ ಸಾಧ್ಯತೆ ಇದೆ. ಆರ್ಥಿಕವಾಗಿ ಲಾಭದಾಯಕವಾಗಿದ್ದರೂ, ಮಂಗಳನ ಪ್ರಭಾವದಿಂದ ಕೋಪ ಹೆಚ್ಚಾಗಬಹುದು. ಕುಟುಂಬದಲ್ಲಿ

ದ್ವಾದಶ ರಾಶಿಗಳ ವಾರಭವಿಷ್ಯ Read More »

ಕಡಬ ಮೂಲದ ಯುವಕ ಐರ್ಲೆಂಡ್ ನಲ್ಲಿ ನಿಗೂಢ ಸಾವು

ಸಮಗ್ರ ನ್ಯೂಸ್: ಉದ್ಯೋಗಕ್ಕಾಗಿ ಐರ್ಲೆಂಡ್‌ಗೆ ತೆರಳಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಮೂಲದ ಯುವಕರೊಬ್ಬರು ತಮ್ಮ ನಿವಾಸದಲ್ಲೇ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಮೃತರನ್ನು ಕಡಬದ ಕುಟ್ರುಪಾಡಿ ಗ್ರಾಮದ ವಿಮಲಗಿರಿ ನಿವಾಸಿ ಸುನಿಲ್ ಅವರ ಪುತ್ರ ಸಾಂಜೋ ಸುನಿಲ್ (31) ಎಂದು ಗುರುತಿಸಲಾಗಿದೆ. ಇವರು ಐರ್ಲೆಂಡ್‌ನ ಡಬ್ಲಿನ್ ನಗರದ ಫಿಂಗ್ಲಾಸ್‌ನ ಚಾರ್ಲ್ಸ್‌ಟೌನ್ ಪ್ರದೇಶದಲ್ಲಿ ವಾಸವಾಗಿದ್ದರು. ಗುರುವಾರ ಸಾಂಜೋ ಸುನಿಲ್ ಅವರು ತಮ್ಮ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಐರಿಶ್ ಪೊಲೀಸರು ಪ್ರಾಥಮಿಕ

ಕಡಬ ಮೂಲದ ಯುವಕ ಐರ್ಲೆಂಡ್ ನಲ್ಲಿ ನಿಗೂಢ ಸಾವು Read More »

ಶ್ರೀಲಂಕಾ ಕರಾವಳಿಯಲ್ಲಿ ವಾಯುಭಾರ ಕುಸಿತ| ಕರ್ನಾಟಕದ ಕರಾವಳಿ, ಮಲೆನಾಡಿನಲ್ಲಿ ಹಗುರ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ಕರಾವಳಿ ಜಿಲ್ಲೆಗಳಲ್ಲಿ ಸುಡುತ್ತಿರುವ ಬಿಸಿಲಿಂದ ಹೈರಾಣಾಗಿರುವ ಜನರಿಗೆ ಮಳೆಯ ಸಿಂಚನವಾಗಲಿದೆ. ಮಲೆನಾಡಲ್ಲಿಯೂ 2-3 ದಿನಗಳಲ್ಲಿ ಮಳೆಯಾಗಿವ ಮುನ್ಸೂಚನೆ ಇದ್ದು, ಕಾಫಿ ಬೆಳೆಗಾರರಿಗೆ ಇದು ಸಿಹಿಸುದ್ದಿಯಾಗಿದೆ.ಶ್ರೀಲಂಕಾ ಆಗ್ನೇಯ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಪಶ್ಚಿಮಾಭಿಮುಖವಾಗಿ ಚಲಿಸುವ ಸಾಧ್ಯತೆಯಿದೆ. ಇದರ ಪರಿಣಾಮ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದ್ದು, ಉಡುಪಿ ಮತ್ತು ಉತ್ತರ

ಶ್ರೀಲಂಕಾ ಕರಾವಳಿಯಲ್ಲಿ ವಾಯುಭಾರ ಕುಸಿತ| ಕರ್ನಾಟಕದ ಕರಾವಳಿ, ಮಲೆನಾಡಿನಲ್ಲಿ ಹಗುರ ಮಳೆ ಸಾಧ್ಯತೆ Read More »