ಸಮಗ್ರ ಸಮಾಚಾರ

ಮದ್ದೂರು ಗಲಾಟೆಗೆ ಮುಸ್ಲಿಮರೇ ಕಾರಣ – ಸಚಿವ ಚೆಲುವರಾಯ ಸ್ವಾಮಿ

ಸಮಗ್ರ ನ್ಯೂಸ್: ಮಂಡ್ಯ ಜಿಲ್ಲೆಯ ಮದ್ದೂರು ಗಣಪತಿ ಗಲಾಟೆ ಪೂರ್ಣ ಪ್ರಮಾಣದಲ್ಲಿ ಮುಸ್ಲಿಂ ಕಡೆಯಿಂದಲೇ ಆಗಿದ್ದು, ಗಲಭೆಗೆ ಕಾರಣರಾದವರನ್ನು ಬಂಧಿಸಲಾಗಿದೆ. ಹಿಂದೂಗಳ ಮೇಲೆ ಎಫ್‌ಐಆರ್‌ ಹಾಕಿಲ್ಲ ಯಾರನ್ನೂ ಬಂಧನ ಮಾಡಿಲ್ಲ ಎಂದು ಕೃಷಿ ಸಚಿವ ಎನ್‌.ಚಲುವರಾಯಸ್ವಾಮಿ ಸ್ಪಷ್ಟಪಡಿಸಿದರು. ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಂಧಿತರಲ್ಲಿ ಇಬ್ಬರು ಚನ್ನಪಟ್ಟಣದವರು, ಉಳಿದವರೆಲ್ಲ ಮದ್ದೂರು ಪಟ್ಟಣದವರು. ಪ್ರಕರಣದಲ್ಲಿ ಸ್ವಲ್ಪ ಮಟ್ಟಿಗೆ ಕಾನೂನು ಸುವ್ಯವಸ್ಥೆಯಲ್ಲಿ ವೈಫಲ್ಯವಾಗಿರುವ ಅನುಮಾನವಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಗಿಯುವವರೆಗೂ ಏನೂ ಹೇಳುವುದಿಲ್ಲ. ಈ ಪ್ರಕರಣದಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ನವರು […]

ಮದ್ದೂರು ಗಲಾಟೆಗೆ ಮುಸ್ಲಿಮರೇ ಕಾರಣ – ಸಚಿವ ಚೆಲುವರಾಯ ಸ್ವಾಮಿ Read More »

ನೇಪಾಳದಲ್ಲಿ ಮಧ್ಯಂತರ ಸರ್ಕಾರ ರಚನೆಗೆ ಯತ್ನ| ಸುಶೀಲಾ‌ ಕರ್ಕಿ ಪರ ಹೋರಾಟಗಾರರ ಒಲವು

ಸಮಗ್ರ ನ್ಯೂಸ್: ಯುವ ಸಮುದಾಯದ ಪ್ರತಿಭಟನೆ, ಹಿಂಸಾಚಾರದಿಂದಾಗಿ ಅರಾಜಕತೆ ಮನೆ ಮಾಡಿರುವ ನೇಪಾಳದಲ್ಲಿ ಮಧ್ಯಂತರ ಸರ್ಕಾರ ರಚನೆ ಕುರಿತಂತೆ ಪ್ರಯತ್ನಗಳು ಬುಧವಾರ ನಡೆದಿವೆ. ಇನ್ನೊಂದೆಡೆ, ಘರ್ಷಣೆಯನ್ನು ಹತ್ತಿಕ್ಕುವ ಸಲುವಾಗಿ ನೇಪಾಳ ಸೇನೆಯು ರಾಷ್ಟ್ರದಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿದ್ದು, ದೇಶವನ್ನು ನಿಯಂತ್ರಣಕ್ಕೆ ತೆಗೆದುಕೊಂಡಿದೆ. ಮಧ್ಯಂತರ ಸರ್ಕಾರ ಮುನ್ನಡೆಸಲು, ಸುಪ್ರೀಂ ಕೋರ್ಟ್‌ ನಿವೃತ್ತ ಮುಖ್ಯ ನ್ಯಾಯಮೂರ್ತಿ ಸುಶೀಲಾ ಕರ್ಕಿ, ಕಠ್ಮಂಡು ಮೇಯರ್ ಬಾಲೇಂದ್ರ ಶಾ ಹಾಗೂ ವಿದ್ಯುತ್‌ ಮಂಡಳಿಯ ಮಾಜಿ ವ್ಯವಸ್ಥಾಪಕ ನಿರ್ದೇಶಕ ಕುಲಮಾನ್ ಘೀಸಿಂಗ್ ಅವರ ಹೆಸರುಗಳನ್ನು ಪ್ರತಿಭಟನೆ ನಡೆಸುತ್ತಿರುವ

ನೇಪಾಳದಲ್ಲಿ ಮಧ್ಯಂತರ ಸರ್ಕಾರ ರಚನೆಗೆ ಯತ್ನ| ಸುಶೀಲಾ‌ ಕರ್ಕಿ ಪರ ಹೋರಾಟಗಾರರ ಒಲವು Read More »

ಧರ್ಮಸ್ಥಳ ವಿರುದ್ಧ ಷಡ್ಯಂತ್ರ| ವಿವಿಧ ಭಾಷೆಗಳ ೫ ಯೂಟ್ಯೂಬ್ ಚಾನಲ್ ವಿರುದ್ಧ ಎಸ್ಐಟಿಗೆ ದೂರು

ಸಮಗ್ರ ನ್ಯೂಸ್: ಧರ್ಮಸ್ಥಳ ಮತ್ತು ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಅವರ ವಿರುದ್ದ ಅಪಪ್ರಚಾರ ಮಾಡುತ್ತಿರುವ ಹಲವು ಯೂಟ್ಯೂಬ್ ಚಾನೆಲ್ ಗಳ ವಿರುದ್ದ ಕ್ರಮ ಕೈಗೊಳ್ಳುವಂತೆ ಧರ್ಮಸ್ಥಳ ಗ್ರಾಮದ ಸುರೇಂದ್ರ ಪ್ರಭು ಎಂಬವರು ಬೆಳ್ತಂಗಡಿ ಎಸ್ ಐ ಟಿ ಠಾಣೆಗೆ ಸೆಪ್ಟೆಂಬರ್ 9ರಂದು ದೂರು ನೀಡಿದ್ದಾರೆ. ಕಳೆದ ಹಲವಾರು ವರ್ಷಗಳಿಂದ ಹೆಚ್ಚಿನ ಯೂಟ್ಯೂಬ್ ಚಾನೆಲ್ ಗಳು ಮತ್ತು ಸಾಮಾಜಿಕ ಮಾಧ್ಯಮ ವೇದಿಕೆಗಳು ದೇವಾಲಯದ ವಿರುದ್ಧ ಸುಳ್ಳು ನಿರೂಪಣೆ ಸೃಷ್ಟಿಸುವ ಉದ್ದೇಶದಿಂದ ನಿರಂತರವಾಗಿ ಮಾನನಷ್ಟ, ಪ್ರಚೋದನಕಾರಿ, ದಾರಿ

ಧರ್ಮಸ್ಥಳ ವಿರುದ್ಧ ಷಡ್ಯಂತ್ರ| ವಿವಿಧ ಭಾಷೆಗಳ ೫ ಯೂಟ್ಯೂಬ್ ಚಾನಲ್ ವಿರುದ್ಧ ಎಸ್ಐಟಿಗೆ ದೂರು Read More »

ಖರೀದಿಸಿದ ಥಾರ್ ಅನ್ನು ನಿಂಬೆಹಣ್ಣು ಮೇಲೆ‌ ಹತ್ತಿಸಲು ಹೋಗಿ ಶೋರೂಂನಿಂದ ಕಾರು ಸಹಿತ ಕೆಳಕ್ಕೆ ಬಿದ್ದ ಮಹಿಳೆ

ಸಮಗ್ರ ನ್ಯೂಸ್: ಹೊಸ ಥಾರ್ ಖರೀದಿಸಿದ ಮಹಿಳೆಯೊಬ್ಬರು ನಿಂಬೆ ಹಣ್ಣು ಹತ್ತಿಸಲು ಹೋಗಿ ಶೋರೂಂ ಮೇಲಿಂದ ಕಾರಿನ ಸಮೆತ ಕೆಳಗೆ ಬಿದ್ದ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಗಾಜಿಯಾಬಾದ್ ಮಹಿಳೆಯೊಬ್ಬರು ಥಾರ್ ಖರೀದಿಸಿದ್ದು, ನಿಂಬೆ ಹಣ್ಣು ಹತ್ತಿಸಲು ಹೋಗಿ ಶೋರೂಂನ ಮೊದಲ ಮಹಡಿಯ ಗಾಜನ್ನು ಒಡೆದು ರಸ್ತೆಗೆ ಹಾರಿದರು. ಸೋಮವಾರ ಸಂಜೆ ನಿರ್ಮಾಣ್ ವಿಹಾರ್‌ನಲ್ಲಿರುವ ಮಹೀಂದ್ರಾ ಶೋರೂಂನಿಂದ 27 ಲಕ್ಷ ರೂ. ಮೌಲ್ಯದ ಥಾರ್ ಅನ್ನು ಆ ಮಹಿಳೆ ಖರೀದಿಸಿದರು. ಶೋರೂಂನಲ್ಲಿಯೇ ಪೂಜೆ ಮಾಡಿರುವುದಾಗಿ ಅವರು

ಖರೀದಿಸಿದ ಥಾರ್ ಅನ್ನು ನಿಂಬೆಹಣ್ಣು ಮೇಲೆ‌ ಹತ್ತಿಸಲು ಹೋಗಿ ಶೋರೂಂನಿಂದ ಕಾರು ಸಹಿತ ಕೆಳಕ್ಕೆ ಬಿದ್ದ ಮಹಿಳೆ Read More »

ನೇಪಾಳದಲ್ಲಿ ಭಾರೀ ಜನಾಕ್ರೋಶ| ಪ್ರಧಾನಿ, ರಾಷ್ಟ್ರಪತಿ ರಾಜೀನಾಮೆ| ಮುಂದುವರಿದ ಹಿಂಸಾಚಾರ

ಸಮಗ್ರ ನ್ಯೂಸ್: ಸಾಮಾಜಿಕ ಜಾಲತಾಣಗಳಲ್ಲಿ ಬ್ಯಾನ್ ಮಾಡಿದ ನೇಪಾಳ ಸರಕಾರದ ವಿರುದ್ದ ಯುವ ಜನತೆ ಪ್ರಾರಂಭಿಸಿದ ಹೋರಾಟ ಇದೀಗ ಇಡೀ ನೇಪಾಳವನ್ನೆ ಅಕ್ಷರಶಃ ಅಶಾಂತಿಗೆ ದೂಡಿದೆ. ಕಳೆದ ಕೆಲವು ದಿನಗಳಿಂದ ಪ್ರತಿಭಟನೆ ತೀವ್ರ ಸ್ವರೂಪದ ಹಿಂಸಾಚಾರಕ್ಕೆ ತಿರುಗಿತು. ಪ್ರತಿಭಟನಾಕಾರರು ಅಲ್ಲಿನ ಪ್ರಧಾನಿ ಕೆ.ಪಿ. ಓಲಿಯವರ ನಿವಾಸಕ್ಕೆ ಬೆಂಕಿ ಹಚ್ಚಿದ್ದಾರೆ. ನೇಪಾಳದಲ್ಲಿ ನಡೆಯುತ್ತಿದ್ದ ಪ್ರತಿಭಟನೆಗಳು ಕೇವಲ ಸಾಮಾಜಿಕ ಜಾಲತಾಣಗಳ ನಿಷೇಧದಿಂದ ಮಾತ್ರ ಭುಗಿಲೆದ್ದಿದ್ದಲ್ಲ. ಅಲ್ಲಿನ ಸರ್ಕಾರದ ವಿರುದ್ಧ ಭ್ರಷ್ಟಾಚಾರ, ಸ್ವಜನಪಕ್ಷಪಾತಿ ಧೋರಣೆ, ಅಗಾಧವಾಗಿ ಬೆಳೆದಿರುವ ನಿರುದ್ಯೋಗ ಸಮಸ್ಯೆಗೆ ಸ್ಪಂದಿಸದೇ

ನೇಪಾಳದಲ್ಲಿ ಭಾರೀ ಜನಾಕ್ರೋಶ| ಪ್ರಧಾನಿ, ರಾಷ್ಟ್ರಪತಿ ರಾಜೀನಾಮೆ| ಮುಂದುವರಿದ ಹಿಂಸಾಚಾರ Read More »

ಅಕ್ರಮ ಆಸ್ತಿ ಗಳಿಕೆ ಪ್ರಕರಣ| ಕಾರವಾರ ಶಾಸಕ ಸತೀಶ್ ಸೈಲ್ ಬಂಧನ

ಸಮಗ್ರ ನ್ಯೂಸ್: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಕಾರವಾರ ಶಾಸಕ ಸತೀಶ್ ಸೈಲ್ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ. ವಿಚಾರಣೆಗೆ ಹಾಜರಾದ ವೇಳೆ ಕಾರವಾರ ಶಾಸಕ ಸತೀಶ್ ಸೈಲ್ ಅವರನ್ನು ಬಂಧಿಸಲಾಗಿದೆ. ಆಗಸ್ಟ್ 13, 14ರಂದು ಇಡಿ ಅಧಿಕಾರಿಗಳಿಂದ ಕಾರವಾರ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ನಿವಾಸದ ಮೇಲೆ ದಾಳಿ ನಡೆದಿತ್ತು.ಈ ವೇಳೆ ಅಕ್ರಮ ಆಸ್ತಿ ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಇಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರು. ವಿಚಾರಣೆ ಬಳಿಕ ಶಾಸಕನನ್ನು ಬಂಧಿಸಲಾಗಿದೆ. ಇಡಿ ಅಧಿಕಾರಿಗಳು ಆ.13 ಮತ್ತು

ಅಕ್ರಮ ಆಸ್ತಿ ಗಳಿಕೆ ಪ್ರಕರಣ| ಕಾರವಾರ ಶಾಸಕ ಸತೀಶ್ ಸೈಲ್ ಬಂಧನ Read More »

ಕಾಸರಗೋಡು: ಈದ್ ಮಿಲಾದ್ ಮೆರವಣಿಗೆಯಲ್ಲಿ ದೇಗುಲಕ್ಕೆ ಗೌರವ ವಂದನೆ| ಸಾಮರಸ್ಯಕ್ಕೆ ಹೊಸ ಭಾಷ್ಯ ಬರೆದ ದೇವರನಾಡು

ಸಮಗ್ರ ನ್ಯೂಸ್: ಕರ್ನಾಟಕದ ಮಂಡ್ಯದಲ್ಲಿ ಗಣೇಶ ಮೆರವಣಿಗೆ ವೇಳೆ ಕೋಮುಜ್ವಾಲೆಯ ಕಿಡಿ ಹಚ್ಚಿದ್ದರೆ ಅತ್ತ ಕೇರಳದ ಕಾಸರಗೋಡಿನಲ್ಲಿ ಮುಸ್ಲಿಂ ಸಮುದಾಯದವರು ಈದ್ ಮಿಲಾದ್ ಮೆರವಣಿಗೆ ವೇಳೆ ದೇವಾಲಯಕ್ಕೆ ವಿಶೇಷ ಗೌರವ ಸಲ್ಲಿಸಿದ್ದು ಸದ್ಯ ಈ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಕಾಸರಗೋಡಿನ ಪಾಲಕುನ್ನುವಿನಲ್ಲಿರುವ ಕೊಟ್ಟಿಕುಲಂ ನೂರುಲ್ ಹುದಾ ಮದರಸಾ ಆಯೋಜಿಸಿದ್ದ ಈದ್ ಮಿಲಾದ್ ಮೆರವಣಿಗೆ ವೇಳೆ ಕಜಕಂ ಭಗವತಿ ದೇವಸ್ಥಾನಕ್ಕೆ ವಿಶೇಷ ಗೌರವ ಸಲ್ಲಿಸಲಾಗಿದೆ. ಅನಿಶಿತ್ ಎಂಬವರು ಗೌರವ ಸಲ್ಲಿಸುವ ವಿಡಿಯೊವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಇದು

ಕಾಸರಗೋಡು: ಈದ್ ಮಿಲಾದ್ ಮೆರವಣಿಗೆಯಲ್ಲಿ ದೇಗುಲಕ್ಕೆ ಗೌರವ ವಂದನೆ| ಸಾಮರಸ್ಯಕ್ಕೆ ಹೊಸ ಭಾಷ್ಯ ಬರೆದ ದೇವರನಾಡು Read More »

ಪುತ್ತೂರು: ವಿಶ್ವದಾಖಲೆ ಬರೆದ‌ ನಾಲ್ಕರ ಪೋರ

ಸಮಗ್ರ ನ್ಯೂಸ್: ತನ್ನ ಅಸಾಧಾರಣ ಪ್ರತಿಭೆಯಿಂದಾಗಿ ಪುತ್ತೂರು ತಾಲೂಕಿನ ಕೆಮ್ಮಿಂಜೆ ಎಂಬಲ್ಲಿನ ನಾಲ್ಕೂವರೆ ವರ್ಷದ ಪುಟ್ಟ ಬಾಲಕನೋರ್ವ ವರ್ಲ್ಡ್ ವೈಡ್ ಬುಕ್ ಆಫ್ ರೆಕಾರ್ಡ್‌ನಲ್ಲಿ ತನ್ನ ಹೆಸರನ್ನು ದಾಖಲಿಸಿಕೊಂಡಿದ್ದಾನೆ. ವಿವಿಧ ವಿಷಯಗಳನ್ನು ಅತೀ ವೇಗವಾಗಿ ಗುರುತಿಸಿ ಪಠಿಸುವ ಅಪೂರ್ವ ಸಾಮರ್ಥ್ಯವನ್ನು ಹೊಂದಿರುವ ಅಪ್ರಮೇಯ ಪಿ.ಎನ್. ಎಂಬ ಬಾಲಕ ತನ್ನ ಈ ಜ್ಞಾನದ ಕಾರಣಕ್ಕಾಗಿ ದಾಖಲೆ ನಿರ್ಮಿಸಿದ್ದಾನೆ. ಭಗವದ್ಗೀತೆಯ ಮೊದಲ ಅಧ್ಯಾಯದ ಕೆಲವು ಶ್ಲೋಕಗಳು, ಶ್ರೀರಾಮನ ವಂಶವೃಕ್ಷ, 6೦ ಸಂವತ್ಸರಗಳು, ಮಾಸಗಳು, ನಕ್ಷತ್ರಗಳು, ಪ್ರಾಣಿಗಳು, ಪಕ್ಷಿಗಳು, ಬಣ್ಣಗಳು, ದೇಹದ

ಪುತ್ತೂರು: ವಿಶ್ವದಾಖಲೆ ಬರೆದ‌ ನಾಲ್ಕರ ಪೋರ Read More »

ಭಾರತದ 15ನೇ ಉಪರಾಷ್ಟ್ರಪತಿಯಾಗಿ ಸಿ.ಪಿ ರಾಧಾಕೃಷ್ಣನ್ ಆಯ್ಕೆ

ಸಮಗ್ರ ನ್ಯೂಸ್: ಮಂಗಳವಾರ (ಸೆ.9) ನಡೆದ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ ಪಿ ರಾಧಾಕೃಷ್ಣನ್ ಅವರು ಗೆಲುವು ಸಾಧಿಸಿದ್ದು, ವಿರೋಧ ಪಕ್ಷದ ಬಿ ಸುದರ್ಶನ್ ರೆಡ್ಡಿ ಅವರನ್ನು ಸೋಲಿಸಿದ್ದಾರೆ. ಜಗದೀಪ್ ಧಂಖರ್ ಅವರ ಹಠಾತ್ ರಾಜೀನಾಮೆಯಿಂದ ಅನಿವಾರ್ಯವಾದ ಚುನಾವಣೆಯಲ್ಲಿ 427 ಶಾಸಕರು ರಾಧಾಕೃಷ್ಣನ್ ಅವರಿಗೆ ಮತ ಚಲಾಯಿಸಿದ್ದಾರೆ. ಈ ಮೂಲಕ ಭಾರತದ 15ನೇ ಉಪರಾಷ್ಟ್ರಪತಿಯಾಗಿ ಸಿ.ಪಿ ರಾಧಾಕೃಷ್ಣ ಅವರು ಆಯ್ಕೆಯಾಗಿದ್ದಾರೆ. ಬಿಜು ಜನತಾದಳ (ಬಿಜೆಡಿ), ಭಾರತೀಯ ರಾಷ್ಟ್ರ ಸಮಿತಿ (ಬಿಆರ್‌ಎಸ್), ಶಿರೋಮಣಿ ಅಕಾಲಿ ದಳ (ಎಸ್‌ಎಡಿ)

ಭಾರತದ 15ನೇ ಉಪರಾಷ್ಟ್ರಪತಿಯಾಗಿ ಸಿ.ಪಿ ರಾಧಾಕೃಷ್ಣನ್ ಆಯ್ಕೆ Read More »

ಮಂಗಳೂರು: ಬೈಕ್ ನಿಂದ ಬಿದ್ದ ಮಹಿಳೆಯ ಮೇಲೆ ಹರಿದ ಲಾರಿ| ಮಹಿಳೆ ದಾರುಣ ಸಾವು

ಸಮಗ್ರ ನ್ಯೂಸ್: ಗುಂಡಿಮಯ ರಸ್ತೆಯಲ್ಲಿ ಬೈಕ್ ನಿಂದ ಕೆಳಗೆ ಬಿದ್ದ ಮಹಿಳೆ ಮೇಲೆಯೇ ಕ್ಯಾಂಟರ್ ಲಾರಿ ಹರಿದು ಹೋಗಿದ್ದು, ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಕೂಳೂರು ರಾಯಲ್ ಓಕೆ ಶೋರೂಂ ಮುಂಭಾಗ ಈ ಅಪಘಾತ ಸಂಭವಿಸಿದೆ. ಮೃತ ಮಹಿಳೆಯನ್ನು ಮಾಧವಿ ಎಂದು ಗುರುತಿಸಲಾಗಿದೆ. ಉಡುಪಿಯ ಪರ್ಕಳ ಮೂಲದವರು. ಮಂಗಳೂರಿನ ಎ.ಜೆ. ಆಸ್ಪತ್ರೆ ಸಿಬ್ಬಂದಿಯಾಗಿರುವ ಮಾಧವಿ ಎಂದಿನಿಂದತೆ ಕೆಲಸಕ್ಕೆ ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ರಸ್ತೆಗುಂಡಿಯಲ್ಲಿ ಬೈಕ್ ಬಿದ್ದಿದೆ. ಆಯತಪ್ಪಿ ಕೆಳಗೆ ಬಿದ್ದ ಮಾಧವಿ ಮೇಲೆಯೇ

ಮಂಗಳೂರು: ಬೈಕ್ ನಿಂದ ಬಿದ್ದ ಮಹಿಳೆಯ ಮೇಲೆ ಹರಿದ ಲಾರಿ| ಮಹಿಳೆ ದಾರುಣ ಸಾವು Read More »