ಕರ್ನೂಲ್ ಬಸ್ ದುರಂತದಲ್ಲಿ ಸಾವಿನ ಸಂಖ್ಯೆ 20ಕ್ಕೆ ಏರಿಕೆ| ಅಪಘಾತ ಸಂಭವಿಸಿದ್ದು ಹೇಗೆ? ಇಲ್ಲಿದೆ ಮಾಹಿತಿ…
ಸಮಗ್ರ ನ್ಯೂಸ್: ಕರ್ನೂಲ್ನಲ್ಲಿ ನಡೆದ ಭೀಕರ ಬಸ್ ದುರಂತದಲ್ಲಿ 20ಕ್ಕೂ ಹೆಚ್ಚು ಪ್ರಯಾಣಿಕರು ಮೃತಪಟ್ಟಿದ್ದಾರೆ. ಆದರೆ ಈ ದುರಂತಕ್ಕೆ ಕಾರಣವಾದ ಬೈಕ್ ಮತ್ತು ಬಸ್ಸಿನ ನಡುವೆ ಅಪಘಾತ ಹೇಗೆ ಸಂಭವಿಸಿದೆ ಎನ್ನುವುದರ ಬಗ್ಗೆ ಈಗ ತನಿಖೆ ನಡೆಯುತ್ತಿದೆ. ಬೈಕ್ನಲ್ಲಿದ್ದ ವ್ಯಕ್ತಿಯನ್ನು ಶಿವಶಂಕರ್ ಎಂದು ಗುರುತಿಸಲಾಗಿದೆ. ಬಸ್ಸು ಮತ್ತು ಬೈಕ್ ಒಂದೇ ದಿಕ್ಕಿನಲ್ಲಿ ಪ್ರಯಾಣಿಸುತ್ತಿತ್ತು. ವೇಗವಾಗಿ ಬರುತ್ತಿದ್ದ ಬಸ್ಸು ಮೊದಲು ಬೈಕಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಕೆಳಗಡೆ ಬಿದ್ದಿದೆ. ಬೈಕ್ ಕೆಳಗಡೆ ಬಿದ್ದರೂ ಚಾಲಕ […]










