ಬಿಸ್ಲೆ ಘಾಟ್ ರಸ್ತೆ ಸಂಚಾರಕ್ಕೆ ಮುಕ್ತ
ಸಮಗ್ರ ನ್ಯೂಸ್: ಭಾರೀ ಮಳೆಯಿಂದ ಕುಕ್ಕೆ ಸುಬ್ರಹ್ಮಣ್ಯ- ಬಿಸಿಲೆ ಘಾಟಿ ರಸ್ತೆಯ ಒಂದು ಬದಿಯ ಮಣ್ಣು ಕುಸಿದು ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆಯಾದ ಘಟನೆ ಬುಧವಾರ ಸಂಭವಿಸಿದೆ. ಬಿಸಿಲೆ ಘಾಟಿ ರಸ್ತೆಯ ಗಡಿ ದೇವಸ್ಥಾನದಿಂದ 1 ಕಿ.ಮೀ. ದೂರದಲ್ಲಿ ರಸ್ತೆಗೆ ಮಣ್ಣು ಕುಸಿತಗೊಂಡಿದ್ದು, ಘಟನೆಯ ಕುರಿತು ಮಾಹಿತಿ ತಿಳಿಯುತ್ತಲೇ ಸಂಬಂಧಪಟ್ಟವರು ಭೇಟಿ ಇತ್ತು ರಸ್ತೆಗೆ ಕುಸಿದು ಬಿದ್ದ ಮಣ್ಣಿನ ತೆರವು ಮಾಡುವ ಕಾರ್ಯಾಚರಣೆ ನಡೆಸಿದರು. ಬಳಿಕ ವಾಹನಗಳ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಲಾಯಿತು.
ಬಿಸ್ಲೆ ಘಾಟ್ ರಸ್ತೆ ಸಂಚಾರಕ್ಕೆ ಮುಕ್ತ Read More »










