ಸಮಗ್ರ ಸಮಾಚಾರ

ರೈಲಿನಲ್ಲಿ ‌ಹೆರಿಗೆ ಮಾಡಿಸಿದ ಯುವಕ| ಜಾಲತಾಣಗಳಲ್ಲಿ ವ್ಯಾಪಕ ಪ್ರಶಂಸೆ

ಸಮಗ್ರ ನ್ಯೂಸ್: ರೈಲಿನಲ್ಲಿ ಹೆರಿಗೆ ನೋವಿನಿಂದ ಬಳಲುತ್ತಿದ್ದ ಮಹಿಳೆಯೊಬ್ಬರಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಯುವಕನೋರ್ವ ಹೆರಿಗೆ ಮಾಡಿಸಿ ಮಾನವೀಯತೆ ಮೆರೆದಂತಹ ಘಟನೆ ಮುಂಬೈನ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ಈ ಘಟನೆಯ ನಂತರ ಅಲ್ಲಿ ಸೇರಿದವರೆಲ್ಲರೂ ಸೇರಿ ಯುವಕನನ್ನು ಶ್ಲಾಘಿಸುತ್ತಿರುವ ವೀಡಿಯೋ ಈಗ ವೈರಲ್ ಆಗಿದೆ. ಅನೇಕರು ಯುವಕನ ಸಮಯಪ್ರಜ್ಞೆಗೆ ಮೆಚ್ಚುಗೆ ವ್ಯಕ್ತಪಡಿಸಿ ಧನ್ಯವಾದ ಹೇಳಿದ್ದಾರೆ. ಯುವಕನೋರ್ವನ ಸಮಯಪ್ರಜ್ಞೆ ಎರಡು ಅಮೂಲ್ಯ ಜೀವಗಳನ್ನು ಉಳಿಸಿದೆ. ಮುಂಬೈನ ರಾಮ ಮಂದಿರ್ ರೈಲ್ವೆ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಈ ಘಟನೆ ನಡೆಯುವ […]

ರೈಲಿನಲ್ಲಿ ‌ಹೆರಿಗೆ ಮಾಡಿಸಿದ ಯುವಕ| ಜಾಲತಾಣಗಳಲ್ಲಿ ವ್ಯಾಪಕ ಪ್ರಶಂಸೆ Read More »

ಪುತ್ತೂರು:ಶಸ್ತ್ರಚಿಕಿತ್ಸೆ ಇಲ್ಲದೆ ಮಗುವಿನ ಗಂಟಲಲ್ಲಿ ಸಿಲುಕಿದ ಕಾಡಿಗೆ ಡಬ್ಬ ತೆಗೆದ ಡಾ. ರಾಮಮೋಹನ್

ಸಮಗ್ರ ನ್ಯೂಸ್: ಮಗುವಿನ ಗಂಟಲಿನಲ್ಲಿ ಸಿಕ್ಕಿಹಾಕಿಕೊಂಡಿದ್ದ ಸಣ್ಣ ಕಾಡಿಗೆ ಡಬ್ಬವನ್ನು ಯಾವುದೇ ರೀತಿಯ ಅಪರೇಶನ್ ಇಲ್ಲದೆ ತೆಗೆಯುವಲ್ಲಿ ಇಎನ್‌ಟಿ ತಜ್ಞ ಡಾ| ರಾಮಮೋಹನ್ ಅವರು ಯಶಸ್ವಿಯಾಗಿದ್ದಾರೆ. ಪುತ್ತೂರಿನ ನಿವಾಸಿ ಸದ್ಯ ಬೆಂಗಳೂರಿನಲ್ಲಿರುವ ಮಂಜು ಹಾಗೂ ವಿಶಾಲಾಕ್ಷಿ ದಂಪತಿಯಒಂದೂವರೆ ವರ್ಷದ ಗಂಡು ಮಗು ಆರ್ಯನ್ ವರ್ಷದ ಹಿಂದೆ ಜುಲೈಯಲ್ಲಿ ಸಣ್ಣದಾದ ಕಾಡಿಗೆ ಡಬ್ಬವನ್ನು ನುಂಗಿತ್ತು. ಆದರೆ ಈ ವಿಚಾರ ಮನೆಯವರಿಗೆ ತಿಳಿದಿರಲಿಲ್ಲ. ಕಾಡಿಗೆ ಡಬ್ಬ ಗಂಟಲಲ್ಲೇ ಇದ್ದ ಕಾರಣ ಮಗು ಊಟ ಮಾಡಲಾಗದೇ, ಮಾತನಾಡಲೂ ಆಗದ ಪರಿಸ್ಥಿತಿಯಲ್ಲಿತ್ತು. ಬೆಂಗಳೂರು

ಪುತ್ತೂರು:ಶಸ್ತ್ರಚಿಕಿತ್ಸೆ ಇಲ್ಲದೆ ಮಗುವಿನ ಗಂಟಲಲ್ಲಿ ಸಿಲುಕಿದ ಕಾಡಿಗೆ ಡಬ್ಬ ತೆಗೆದ ಡಾ. ರಾಮಮೋಹನ್ Read More »

ಶೀಘ್ರದಲ್ಲೇ ಕುಸಿಯಲಿದೆ ಚಿನ್ನದ ದರ| ಮಾರುಕಟ್ಟೆ ತಜ್ಞರು ಹೇಳಿದ ಶಾಕಿಂಗ್ ಸುದ್ದಿ ಇದು…

ಸಮಗ್ರ ನ್ಯೂಸ್: ಚಿನ್ನದ ಬೆಲೆ ಶೀಘ್ರದಲ್ಲೇ ಕುಸಿಯುವ ಸಾಧ್ಯತೆಯಿದೆ ಎಂದು ತಜ್ಞರು ಭವಿಷ್ಯ ನುಡಿದಿದ್ದಾರೆ. ಪೇಸ್ 360 ಸಂಸ್ಥೆಯ ಸಹ-ಸಂಸ್ಥಾಪಕ ಹಾಗೂ ಮುಖ್ಯ ಜಾಗತಿಕ ತಂತ್ರಜ್ಞಾನಿ ಅಮಿತ್ ಗೋಯಲ್ ಅವರು ಈ ಬೆಲೆಗಳ ಹೆಚ್ಚಳವು ದೀರ್ಘಕಾಲ ಉಳಿಯುವುದಿಲ್ಲ ಎಂಬ ಶಾಕಿಂಗ್‌ ಹೇಳಿಕೆ ಕೊಟ್ಟಿದ್ದಾರೆ.. ಬೆಲೆ ನಿಗದಿಪಡಿಸುವ ವ್ಯವಸ್ಥೆಯಲ್ಲಿ ಬದಲಾವಣೆಯಾಗಿ ಪ್ರಮುಖ ಕುಸಿತ ಕಾಣಲಿದೆ ಎಂದು ಅವರು ಅಂದಾಜಿಸಿದ್ದಾರೆ. ಅಮಿತ್ ಗೋಯಲ್ ಅವರ ಪ್ರಕಾರ, ಚಿನ್ನದ ಬೆಲೆ ಶೇಕಡಾ 30 ರಿಂದ 35 ರಷ್ಟು ಇಳಿಕೆಯಾಗುತ್ತದೆ ಎಂದು ಹೇಳಿದ್ದರೆ.

ಶೀಘ್ರದಲ್ಲೇ ಕುಸಿಯಲಿದೆ ಚಿನ್ನದ ದರ| ಮಾರುಕಟ್ಟೆ ತಜ್ಞರು ಹೇಳಿದ ಶಾಕಿಂಗ್ ಸುದ್ದಿ ಇದು… Read More »

ಸಾಮೂಹಿಕ ಅತ್ಯಾಚಾರಕ್ಕೆ ಸಂಚು ಹೂಡುತ್ತಿದ್ದ ನಾಲ್ಕು ಮಂದಿಯ ಬಂಧನ| ಇಬ್ಬರು ಬಾಲಕಿಯರ ರಕ್ಷಣೆ

ಸಮಗ್ರ ನ್ಯೂಸ್: ನಿಡ್ಡೋಡಿ ಗ್ರಾಮದ ಕಲ್ಲಕುಮೇರಿನ ಮನೆಯೊಂದಕ್ಕೆ ಮೂಡುಬಿದಿರೆ ಪೊಲೀಸ್ ಇನ್‍ಸ್ಪೆಕ್ಟರ್ ಸಂದೇಶ್ ಕುಮಾರ್ ನೇತೃತ್ವದ ಪೊಲೀಸರ ತಂಡ ಸೋಮವಾರ ರಾತ್ರಿ ದಾಳಿ ನಡೆಸಿ ನಾಲ್ವರು ಯುವಕರನ್ನು ಬಂಧಿಸಿದ್ದು, ಇಬ್ಬರು ಬಾಲಕಿಯರನ್ನು ರಕ್ಷಿಸಿದ್ದಾರೆ. ನಿಡ್ಡೋಡಿ ಕಲ್ಲಕುಮೇರಿನ ಮಹೇಶ, ಕಟೀಲಿನ ಯಜ್ಞೇಶ್, ಮೂಲ್ಕಿ ನಡುಗೊಡೆಯ ದಿಲೀಪ್, ಬಜಪೆ ಕೊಂಡೆಮೂಲೆಯ ಶ್ರೀಕಾಂತ್ ಬಂಧಿತರು. ಅವರ ವಿರುದ್ಧ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳು ಸಾಮೂಹಿಕ ಅತ್ಯಾಚಾರಕ್ಕೆ ಸಿದ್ಧತೆ ನಡೆಸುತ್ತಿದ್ದರು ಎಂಬುದು ಪೊಲೀಸರ ವಿಚಾರಣೆಯಲ್ಲಿ ಗೊತ್ತಾಗಿದೆ. ಸಂತ್ರಸ್ತ ಬಾಲಕಿಯರು ಮತ್ತು ಆರೋಪಿಗಳನ್ನು

ಸಾಮೂಹಿಕ ಅತ್ಯಾಚಾರಕ್ಕೆ ಸಂಚು ಹೂಡುತ್ತಿದ್ದ ನಾಲ್ಕು ಮಂದಿಯ ಬಂಧನ| ಇಬ್ಬರು ಬಾಲಕಿಯರ ರಕ್ಷಣೆ Read More »

ರಾಜ್ಯದಲ್ಲಿ ಅ.18ರವರೆಗೆ ಭಾರೀ ಮಳೆ ಮುನ್ಸೂಚನೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ವರುಣಾರ್ಭಟ ಕೊಂಚ ತಣ್ಣಗಾಗಿತ್ತು. ಇದರ ನಡುವೆಯೇ ಮತ್ತೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ಅಕ್ಟೋಬರ್ 18 ರವರೆಗೆ ಭಾರಿ ಮಳೆಯಾಗಲಿದೆ ಎಂದು ತಿಳಿಸಿದೆ. ಕರ್ನಾಟಕ, ಕೇರಳ, ತಮಿಳುನಾಡು, ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳ ಹಲವೆಡೆ ಸಾಧಾರಣ ಮಳೆಯಾಗಲಿದ್ದು, ಕೆಲವು ಭಾಗಗಳಲ್ಲಿ ಭಾರಿ ಮಳೆಯಾಗಲಿದೆ. ಬೆಂಗಳೂರಿನಲ್ಲಿಯೂ ಮಳೆ ಅಬ್ಬರ ಜೋರಾಗಲಿದೆ. ಗಾಳಿಯ ವೇಗವು ಗಂಟೆಗೆ 30ರಿಂದ 40ಕಿ.ಮೀ ವೇಗದಲ್ಲಿ ಬೀಸಲಿದೆ. ಈ ವೇಳೆ

ರಾಜ್ಯದಲ್ಲಿ ಅ.18ರವರೆಗೆ ಭಾರೀ ಮಳೆ ಮುನ್ಸೂಚನೆ Read More »

ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ತಿರುವು| ನ್ಯಾಯಾಲಯದಲ್ಲಿ 10 ಹೆಣಗಳ ಹೂತ ಹೊಸ ಕಥೆ ಹೇಳಿದ ಚಿನ್ನಯ್ಯ

ಸಮಗ್ರ ನ್ಯೂಸ್: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಲಾಗಿದೆ ಎಂಬ ಹೇಳಿಕೆ ನೀಡಿರುವ ಬುರುಡೆ ಚಿನ್ನಯ್ಯನ ವಿಚಾರಣೆ ಈಗ ಬಿಗ್ ಟ್ವಿಸ್ಟ್ ಪಡೆದುಕೊಂಡಿದೆ. ಎಸ್ಐಟಿ ಅಧಿಕಾರಿಗಳ ಮುಂದೆ ಹೇಳದೆ ಇದ್ದ ಶವ ಹೂತ ರಹಸ್ಯವನ್ನು ಚಿನ್ನಯ್ಯ ನ್ಯಾಯಾಲಯದಲ್ಲಿ ಹೇಳಿಕೆ ನೀಡುವ ವೇಳೆ ಬಾಯಿಬಿಟ್ಟಿದ್ದಾನೆ ಎನ್ನಲಾಗಿದೆ. ಬೆಳ್ತಂಗಡಿ ನ್ಯಾಯಾಲಯದಲ್ಲಿ (belthangady Court) ತಪ್ಪೊಪ್ಪಿಗೆ ಹೇಳಿಕೆ ನೀಡುವ ವೇಳೆ ಚಿನ್ನಯ್ಯ, ಒಂದೇ ಜಾಗದಲ್ಲಿ ಹತ್ತು ಹೆಣಗಳನ್ನು ಹೂತ ಹೊಸ ಕಥೆಯನ್ನು ಹೇಳಿದ್ದಾನೆ. ಎಸ್ಐಟಿ ವಿಚಾರಣೆ ವೇಳೆ ಈ ಮಾಹಿತಿಯನ್ನು ನೀಡದೆ

ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ತಿರುವು| ನ್ಯಾಯಾಲಯದಲ್ಲಿ 10 ಹೆಣಗಳ ಹೂತ ಹೊಸ ಕಥೆ ಹೇಳಿದ ಚಿನ್ನಯ್ಯ Read More »

ರಾಜಸ್ಥಾನದಲ್ಲಿ ಹೊತ್ತಿ ಉರಿದ ಬಸ್| 15 ಮಂದಿ ಸಜೀವ ದಹನ

ಸಮಗ್ರ ನ್ಯೂಸ್: ರಾಜಸ್ಥಾನದ ಜೈಸಲ್ಮೇರ್‌ನಿಂದ ಜೋಧಪುರಕ್ಕೆ ಹೋಗುತ್ತಿದ್ದ ಖಾಸಗಿ ಬಸ್‌ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದು ಬಸ್ ಹೊತ್ತಿ ಉರಿದಿದೆ. ದುರಂತದಲ್ಲಿ ಮೂವರು ಮಕ್ಕಳು, ನಾಲ್ವರು ಮಹಿಳೆಯರು ಸೇರಿದಂತೆ ಸುಮಾರು 15 ಪ್ರಯಾಣಿಕರು ಮೃತಪಟ್ಟಿದ್ದಾರೆ. ಇನ್ನು 15ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಧ್ಯಮ ವರದಿಗಳ ಪ್ರಕಾರ, ಜೈಸಲ್ಮೇರ್-ಜೋಧಪುರ ಹೆದ್ದಾರಿಯ ಥೈಯಾತ್ ಗ್ರಾಮದ ಬಳಿ ಮಧ್ಯಾಹ್ನ 3:30ರ ಸುಮಾರಿಗೆ ಅಪಘಾತ ಸಂಭವಿಸಿದೆ. ಸುಮಾರು 57 ಪ್ರಯಾಣಿಕರು ಬಸ್‌ನಲ್ಲಿದ್ದರು. ಬಸ್ ಎಂದಿನಂತೆ ಮಧ್ಯಾಹ್ನ 3

ರಾಜಸ್ಥಾನದಲ್ಲಿ ಹೊತ್ತಿ ಉರಿದ ಬಸ್| 15 ಮಂದಿ ಸಜೀವ ದಹನ Read More »

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್| ರಾಜ್ಯದ ಹಲವು ಕಡೆ ದಾಳಿ

ಸಮಗ್ರ ನ್ಯೂಸ್: ಆದಾಯ ಮೀರಿ ಆಸ್ತಿ ಗಳಿಕೆ ಸಂಬಂಧ ದಾವಣಗೆರೆ, ಚಿತ್ರದುರ್ಗ ಸೇರಿದಂತೆ ಹಲವು ಕಡೆ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾವಣಗೆರೆಯಲ್ಲಿ ಇಬ್ಬರು ಅಧಿಕಾರಿಗಳ ಮೇಲೆ ಲೋಕಾಯಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕೆಆರ್ ಐಡಿಎಲ್ ಸಹಾಯಕ ಇಂಜಿನಿಯರ್ ಜಗದೀಶ್ ನಾಯ್ಕ್, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಎಸ್ ಡಿಎ ನಡುವಿನ ಮನೆ ಇಬ್ಬರು ಅಧಿಕಾರಿಗಳ ಸೇರಿದ 10 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಚಿತ್ರದುರ್ಗದಲ್ಲಿ ಬೆಳ್ಳಂಬೆಳಗ್ಗೆ

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್| ರಾಜ್ಯದ ಹಲವು ಕಡೆ ದಾಳಿ Read More »

ರಾಜ್ಯದಲ್ಲಿ ತಮಿಳುನಾಡಿನಂತೆ RSS ವಿರುದ್ಧ ಕ್ರಮ – ಸಿಎಂ

ಸಮಗ್ರ ನ್ಯೂಸ್: ತಮಿಳುನಾಡಿನಲ್ಲಿ ಕೈಗೊಂಡಂತೆ ರಾಷ್ಟ್ರೀಯ ಸ್ವಯಂ ಸೇವಾ ಸಂಘ ( RSS) ವಿರುದ್ಧ ಕರ್ನಾಟಕದಲ್ಲಿ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಿಸಿದ್ದಾರೆ. ರಾಜ್ಯದ ಸರ್ಕಾರಿ ಸ್ಥಳ, ಮುಜುರಾಯಿ ದೇವಸ್ಥಾನಗಳಲ್ಲಿ ಆರ್‌ಎಸ್‌ಎಸ್‌ನ (RSS) ಎಲ್ಲಾ ಚಟುವಟಿಕೆಗಳನ್ನು ರದ್ದುಪಡಿಸುವಂತೆ ಐಟಿ ಬಿಟಿ ಸಚಿವ ಪ್ರಿಯಾಂಕ್‌ ಖರ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ಬರೆದಿದ್ದರು. ಸರ್ಕಾರದ ಸ್ಥಳಗಳಲ್ಲಿ ಆರ್‌ಎಸ್‌ಎಸ್‌ನ ಎಲ್ಲ ಚಟುವಟಿಕೆಗಳನ್ನು ನಿಷೇಧಿಸುವಂತೆ ಮನವಿ ಮಾಡಿದ್ದಾರೆ. ಈ ಪ್ರತ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರಿಗೆ ಕಳುಹಿಸಿ

ರಾಜ್ಯದಲ್ಲಿ ತಮಿಳುನಾಡಿನಂತೆ RSS ವಿರುದ್ಧ ಕ್ರಮ – ಸಿಎಂ Read More »

ಮಂಗಳೂರು: ನಕಲಿ ಚಿನ್ನ ಅಡವಿಟ್ಟು ಸಹಕಾರಿ ಸಂಸ್ಥೆಗೆ ವಂಚನೆ| ಆರೋಪಿಗಳು ಅರೆಸ್ಟ್

ಸಮಗ್ರ ನ್ಯೂಸ್: ಸಹಕಾರಿ ಸಂಸ್ಥೆಯೊಂದರಲ್ಲಿ ಅಸಲಿ ಎಂದು ನಂಬಿಸಿ ನಕಲಿ ಚಿನ್ನಾಭರಣಗಳನ್ನು ಅಡವಿಟ್ಟು 6.24 ಲಕ್ಷ ರೂ. ವಂಚನೆ ಮಾಡಿದ ಪ್ರಕರಣದಲ್ಲಿ ಕಡಬದ ಆರೋಪಿ ಸಹಿತ ಮೂವರನ್ನು ಮಂಗಳೂರಿನ ಕಾವೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನ ಆಕಾಶಭವನ ಅನಂದ ನಗರ ನಿವಾಸಿ ಹಾರೀಫ್ ಅಬೂಬಕ್ಕರ್ (39), ನಂತೂರು ಬಿಕರ್ನಕಟ್ಟೆ ನಿವಾಸಿ ಮಹಮ್ಮದ್ ಆಶೀಕ್ ಕಟ್ಟತ್ತಾರ್ ಹುಸೈನ್ (34) ಮತ್ತು ಕಡಬ ತಾಲೂಕು ಬೆಳಂದೂರು ಗ್ರಾಮದ ಅಬ್ದುಲ್ ರಮೀಝ್ (33) ಬಂಧಿತರು. ಆರೋಪಿಗಳಿಂದ 5 ಲಕ್ಷ ರೂ. ನಗದು,

ಮಂಗಳೂರು: ನಕಲಿ ಚಿನ್ನ ಅಡವಿಟ್ಟು ಸಹಕಾರಿ ಸಂಸ್ಥೆಗೆ ವಂಚನೆ| ಆರೋಪಿಗಳು ಅರೆಸ್ಟ್ Read More »