ಸಮಗ್ರ ಸಮಾಚಾರ

ಮಲೆನಾಡು, ಘಟ್ಟಪ್ರದೇಶದಲ್ಲಿ ಅಬ್ಬರಿಸಿದ ವರುಣ| ಕುಕ್ಕೆ ಸುಬ್ರಹ್ಮಣ್ಯ, ಭಾಗಮಂಡಲ ಜಲಾವೃತ

ಸಮಗ್ರ ನ್ಯೂಸ್: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಂಗಳವಾರ ಬೆಳಿಗ್ಗೆಯಿಂದ ನಿರಂತರವಾಗಿ ಧಾರಾಕಾರ ಮಳೆ ಸುರಿಯಿತು. ಕುಮಾರಧಾರಾ ಹಾಗೂ ಆದಿಸುಬ್ರಹ್ಮಣ್ಯದ ದರ್ಪಣತೀರ್ಥ ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದು, ಆದಿಸುಬ್ರಹ್ಮಣ್ಯ ದೇವಸ್ಥಾನದ ಆವರಣದ ಮೆಟ್ಟಿಲಿನವರೆಗೂ ನೀರು ಬಂದಿತ್ತು. ಸುಬ್ರಹ್ಮಣ್ಯದ ದೇವರಗದ್ದೆ ರಸ್ತೆಯಲ್ಲಿ ಮಳೆ ನೀರು ಹರಿದು ಪಾದಚಾರಿಗಳು ಹಾಗೂ ವಾಹನ ಸವಾರರು ತೊಂದರೆ ಅನುಭವಿಸಿದರು. ಬಿಸಿಲೆಘಾಟ್ ಮಾರ್ಗದಲ್ಲಿ ಗಾಳಿ-ಮಳೆಗೆ ಮರಗಳು ಬಿದ್ದು ವಾಹನಗಳಲ್ಲಿದ್ದ ಪ್ರವಾಸಿಗರು ದಾರಿ ಮಧ್ಯೆ ಸಿಲುಕಿದ್ದರು. ಏನೆಕಲ್ಲಿನ ಬೂದಿಪಲ್ಲ-ಮಧುವನ-ದೇವರಹಳ್ಳಿ ರಸ್ತೆಯ ಮಧ್ಯೆ ಭೂಕುಸಿತ ಉಂಟಾಗಿ, ಸಂಪರ್ಕ ಕಡಿತಗೊಂಡಿದೆ. ದಕ್ಷಿಣ

ಮಲೆನಾಡು, ಘಟ್ಟಪ್ರದೇಶದಲ್ಲಿ ಅಬ್ಬರಿಸಿದ ವರುಣ| ಕುಕ್ಕೆ ಸುಬ್ರಹ್ಮಣ್ಯ, ಭಾಗಮಂಡಲ ಜಲಾವೃತ Read More »

ಸುಬ್ರಹ್ಮಣ್ಯ: ಭಾರೀ ಮಳೆಗೆ ಆದಿ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಜಲದಿಗ್ಬಂಧನ

ಸಮಗ್ರ ನ್ಯೂಸ್: ಪ್ರಸಿದ್ಧ ನಾಗ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಇದರಿಂದಾಗಿ ದರ್ಪಣ ತೀರ್ಥ ಹೊಳೆ ಉಕ್ಕಿ ಹರಿಯುತ್ತಿದೆ. ಸತತ ಮಳೆಯ ಪ್ರಭಾವದಿಂದ ದರ್ಪಣ ತೀರ್ಥ ನದಿಯಲ್ಲಿ ನೀರಿನ ಮಟ್ಟ ಗಣನೀಯವಾಗಿ ಏರಿಕೆಯಾಗಿದ್ದು, ನದಿ ನೀರು ಪ್ರವಾಹದ ರೂಪದಲ್ಲಿ ಬಂದು ಆದಿ ಸುಬ್ರಹ್ಮಣ್ಯ ಕ್ಷೇತ್ರದ ಬಾಗಿಲ ತನಕ ನುಗ್ಗಿದೆ. ಹೊಳೆ ನೀರು ಕ್ಷೇತ್ರ ವ್ಯಾಪ್ತಿಗೆ ನುಗ್ಗಿರುವ ಹಿನ್ನೆಲೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸುತ್ತಿರುವ ಭಕ್ತರು ಓಡಾಡಲು ಮತ್ತು ದರ್ಶನ ಪಡೆಯಲು ತೀವ್ರ ತೊಂದರೆ

ಸುಬ್ರಹ್ಮಣ್ಯ: ಭಾರೀ ಮಳೆಗೆ ಆದಿ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಜಲದಿಗ್ಬಂಧನ Read More »

ವಿಟ್ಲ: ಕೋಟಿಕೆರೆಗೆ ಈಜಲು ತೆರಳಿದ್ದ ಯುವಕ ಮುಳುಗಿ ಸಾವು

ಸಮಗ್ರ ನ್ಯೂಸ್: ವಿಟ್ಲದ ಕೋಟಿಕೆರೆ ಎಂಬಲ್ಲಿ ಈಜಲು ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟ ಕರುಣಾಜನಕ ಘಟನೆ ಆ.25ರ ಬೆಳಗಿನ ಜಾವ ನಡೆದಿದೆ. ಮೃತರನ್ನು ವಿಟ್ಲ ಕಸಬಾ ಗಾಳಿಹಿತ್ಲು ನಿವಾಸಿ ವೀರಪ್ಪ ಗೌಡ ಅವರ ಪುತ್ರ, ಎಸ್‌ಸಿಡಿಸಿಸಿ ಬ್ಯಾಂಕ್ ಉದ್ಯೋಗಿ ಲಿತಿನ್ (32) ಎಂದು ಗುರುತಿಸಲಾಗಿದೆ. ಬೆಳಗಿನ ಜಾವ ಈಜಲು ಕೆರೆಗೆ ಇಳಿದಿದ್ದ ಲಿತಿನ್ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿದ್ದಾರೆ. ಇದನ್ನು ಗಮನಿಸಿದ ಸ್ಥಳೀಯರು ತಕ್ಷಣವೇ ಕೆರೆಗೆ ಇಳಿದು ಅವರನ್ನು ಮೇಲಕ್ಕೆತ್ತಿ ರಕ್ಷಿಸಲು ಯತ್ನಿಸಿದ್ದಾರೆ. ಆದರೆ ಅಷ್ಟರಲ್ಲಾಗಲೇ ಲಿತಿನ್

ವಿಟ್ಲ: ಕೋಟಿಕೆರೆಗೆ ಈಜಲು ತೆರಳಿದ್ದ ಯುವಕ ಮುಳುಗಿ ಸಾವು Read More »

ಬಂಗಾರ ಈಗ ಮತ್ತಷ್ಟು ಭಾರ| ದೇಶೀಯ ಮಾರುಕಟ್ಟೆಯಲ್ಲಿ ಭಾರಿ ಏರಿಕೆ ಕಂಡ ಚಿನ್ನ

ಸಮಗ್ರ ನ್ಯೂಸ್: ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ತೀವ್ರ ಏರಿಳಿತ ಹಾಗೂ ಅಮೆರಿಕ ಮತ್ತು ಇರಾನ್ ನಡುವೆ ಹೆಚ್ಚುತ್ತಿರುವ ರಾಜಕೀಯ ಉದ್ವಿಗ್ನತೆಯ ನೇರ ಪರಿಣಾಮ ಈಗ ಹೂಡಿಕೆದಾರರು ಮತ್ತು ಗ್ರಾಹಕರ ಜೇಬಿನ ಮೇಲೆ ಬಿದ್ದಿದೆ. ಸೋಮವಾರ ದೇಶೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯು ಭಾರಿ ಏರಿಕೆ ಕಂಡಿದ್ದು, ಕಳೆದ ಐದು ತಿಂಗಳಲ್ಲೇ ಅತ್ಯಂತ ಗರಿಷ್ಠ ಮಟ್ಟವನ್ನು ತಲುಪಿದೆ. ಆಲ್ ಇಂಡಿಯಾ ಸರಾಫ್ ಅಸೋಸಿಯೇಷನ್ ನೀಡಿರುವ ಮಾಹಿತಿಯ ಪ್ರಕಾರ, 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯಲ್ಲಿ 900 ರೂಪಾಯಿ ಏರಿಕೆಯಾಗಿದೆ.

ಬಂಗಾರ ಈಗ ಮತ್ತಷ್ಟು ಭಾರ| ದೇಶೀಯ ಮಾರುಕಟ್ಟೆಯಲ್ಲಿ ಭಾರಿ ಏರಿಕೆ ಕಂಡ ಚಿನ್ನ Read More »

ಫಾರ್ಚೂನರ್ ಕಾರಲ್ಲಿ ಬಂದು ಕಸ ಗುಡಿಸುತ್ತಾರೆ ಈ ಪೌರಕಾರ್ಮಿಕ| ಇದು ಬಂಟ್ವಾಳದ ಸೇಸಪ್ಪಣ್ಣನ ಕಥೆ!!

ಸಮಗ್ರ ನ್ಯೂಸ್: ಭಾರತ ನಿಧಾನವಾಗಿ ಅಭಿವೃದ್ಧಿಯತ್ತ ಹೊರಳುತ್ತಿದೆ. ಇದಕ್ಕೆ ಈ ಪೌರಕಾರ್ಮಿಕರೇ ಸಾಕ್ಷಿ. ಇವರು ಬಂಟ್ವಾಳದ ಸೇಸಪ್ಪ. ಅವರು ಇಲ್ಲಿನ ಪುರಸಭೆಯ ಪೌರ ಕಾರ್ಮಿಕ. ಬೀದಿ ಬದಿಯಲ್ಲಿ ಕಸ ಗುಡಿಸುವ ಕೆಲಸಕ್ಕೆ ಅವರು ಬರುವುದು ಟೊಯೊಟ ಫಾರ್ಚೂನರ್ ಕಾರಿನಲ್ಲಿ. ಕಸ ಗುಡಿಸುವ ಅವರ ಕೆಲಸ ನಿತ್ಯ ಬೆಳಿಗ್ಗೆ 5ಕ್ಕೆ ಶುರುವಾಗುತ್ತದೆ. ಕೆಲಸದ ಸ್ಥಳಕ್ಕೆ ಫಾರ್ಚೂನ‌ರ್ ಕಾರನ್ನು ಸ್ವತಃ ಚಲಾಯಿಸಿಕೊಂಡು ಬರುವ ಅವರು, ಮಧ್ಯಾಹ್ನ 12ರ ವರೆಗೆ ಕಸ ಗುಡಿಸುತ್ತಾರೆ. ಬಳಿಕ ಅದೇ ಕಾರಿನಲ್ಲಿ ನಿರ್ಗಮಿಸುತ್ತಾರೆ. ಪುರಸಭೆಯವರು ತಮಗೆ

ಫಾರ್ಚೂನರ್ ಕಾರಲ್ಲಿ ಬಂದು ಕಸ ಗುಡಿಸುತ್ತಾರೆ ಈ ಪೌರಕಾರ್ಮಿಕ| ಇದು ಬಂಟ್ವಾಳದ ಸೇಸಪ್ಪಣ್ಣನ ಕಥೆ!! Read More »

ರಾಜ್ಯಾದ್ಯಂತ ಚುರುಕುಗೊಂಡ ಮುಂಗಾರು| ಕರಾವಳಿಯ ಹಲವೆಡೆ ಭಾರೀ ಮಳೆ

ಸಮಗ್ರ ನ್ಯೂಸ್: ರಾಜ್ಯಾದ್ಯಂತ ಮುಂಗಾರು ಚುರುಕುಗೊಂಡಿದೆ. ಅದರಲ್ಲೂ ಕರಾವಳಿ ಭಾಗಗಳಲ್ಲಿ ಹೆಚ್ಚಿನ ಮಳೆಯಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ ಅನೇಕ ಭಾಗಗಳಲ್ಲಿ ವಿಪರೀತ ಮಳೆಯಾಗುತ್ತಿದ್ದು, ಬೆಂಗಳೂರಲ್ಲೂ ಕೂಡ ಹೆಚ್ಚಿನ ಮಳೆಯಾಗುತ್ತಿದೆ. ಬೆಂಗಳೂರಲ್ಲಿ ದಿನವಿಡೀ ಮೋಡ ಕವಿದ ವಾತಾವರಣ ಇರುತ್ತಿದೆ. ಆಗಸ್ಟ್‌ 24ರಂದು ಅತಿಹೆಚ್ಚು ಮಳೆ 9 ಸೆಂ.ಮೀ. ಬಿದ್ದಿತ್ತು. ಇನ್ನು ಬೀದರ್‌ನ ಹುಮನಾಬಾದ್‌, ಕೊಡಗಿನ ಶ್ರೀಮಂಗಲ, ಶಿವಮೊಗ್ಗದ ಆಗುಂಬೆ, ದಕ್ಷಿಣ ಕನ್ನಡದ ಧರ್ಮಸ್ಥಳದಲ್ಲಿ ಭಾರಿ ಮಳೆಯಾಗಿದೆ. ಇಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ

ರಾಜ್ಯಾದ್ಯಂತ ಚುರುಕುಗೊಂಡ ಮುಂಗಾರು| ಕರಾವಳಿಯ ಹಲವೆಡೆ ಭಾರೀ ಮಳೆ Read More »

ಕರ್ನಾಟಕದಲ್ಲಿ ಮೊದಲ ಎಸ್ಐಆರ್ ಕರಡು ಮತದಾರರ ಪಟ್ಟಿ ಪ್ರಕಟ| 1.7 ಕೋಟಿ ಮತದಾರರ ಹೆಸರು ಡಿಲಿಟ್

ಸಮಗ್ರ ನ್ಯೂಸ್: ರಾಜ್ಯದಲ್ಲಿ ಕೈಗೊಳ್ಳಲಾದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿಯನ್ನು ಅಧಿಕೃತವಾಗಿ ಬಿಡುಗಡೆ ಮಾಡಲಾಗಿದ್ದು, ಒಟ್ಟು 1,07,96,399 ಮತದಾರರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡಲಾಗಿದೆ (ಡಿಲೀಟ್ ಮಾಡಲಾಗಿದೆ) ಎಂದು ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ತಿಳಿಸಿದ್ದಾರೆ. ಗೈರುಹಾಜರಿ, ಶಾಶ್ವತ ಸ್ಥಳಾಂತರ, ಮೃತರು ಹಾಗೂ ನಕಲಿ ಹೆಸರುಗಳು ಸೇರಿದಂತೆ ಒಟ್ಟು 1,07,96,399 ಮತದಾರರ ಹೆಸರುಗಳನ್ನು ಮೊದಲ ಕರಡು ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಮತದಾರರು ತಮ್ಮ ಹೆಸರು

ಕರ್ನಾಟಕದಲ್ಲಿ ಮೊದಲ ಎಸ್ಐಆರ್ ಕರಡು ಮತದಾರರ ಪಟ್ಟಿ ಪ್ರಕಟ| 1.7 ಕೋಟಿ ಮತದಾರರ ಹೆಸರು ಡಿಲಿಟ್ Read More »

ನಾಳೆ(ಆ.25) ದ.ಕ ಮತ್ತು ಉಡುಪಿ ಜಿಲ್ಲೆಗಳಲ್ಲಿ ಈದ್ ಮಿಲಾದ್ ಸಾರ್ವತ್ರಿಕ ರಜೆ

ಸಮಗ್ರ ನ್ಯೂಸ್: : ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಆಗಸ್ಟ್ 26ರ ಬದಲಿಗೆ ಆಗಸ್ಟ್ 25ರಂದು ಈದ್ ಮಿಲಾದ್ ಸಾರ್ವತ್ರಿಕ ರಜೆ ಘೋಷಣೆ ಮಾಡಲಾಗಿದೆ. ಚಂದ್ರ ದರ್ಶನದ ಆಧಾರದ ಮೇಲೆ ಈದ್ ಮಿಲಾದ್ (ಮೀಲಾದುನ್ನೆಬಿ) ರಜೆಯನ್ನು ಆಗಸ್ಟ್ 26ರ ಬದಲಿಗೆ ಆಗಸ್ಟ್ 25ರಂದು ನೀಡುವಂತೆ ಮೊನ್ನೆ ಮುಸ್ಲಿಂ ಮುಖಂಡರು ಜಿಲ್ಲಾ ಉಸ್ತುವಾರಿ ಸಚಿವ ಯು ಟಿ ಖಾದರ್ ಹಾಗೂ ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ ಅವರಿಗೆ ಮನವಿ ಸಲ್ಲಿಸಿದ್ದರು.

ನಾಳೆ(ಆ.25) ದ.ಕ ಮತ್ತು ಉಡುಪಿ ಜಿಲ್ಲೆಗಳಲ್ಲಿ ಈದ್ ಮಿಲಾದ್ ಸಾರ್ವತ್ರಿಕ ರಜೆ Read More »

ಕುಕ್ಕೆ ಸುಬ್ರಹ್ಮಣ್ಯ: ಈ ನಾಲ್ಕು ದಿನಗಳಂದು ಹಲವು ಸೇವೆಗಳು ಅಲಭ್ಯ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಶ್ರೀ ಸುಬ್ರಹ್ಮಣ್ಯ ದೇವಾಲಯದಲ್ಲಿ ಕೃಷ್ಣ ಜನ್ಮಾಷ್ಟಮಿ, ದಶಮಿ ಏಕಾದಶಿ ಪ್ರಯುಕ್ತ ಸೆಪ್ಟೆಂಬರ್ 3, 4, 6 ಮತ್ತು 7ರಂದು ಸರ್ಪ ಸಂಸ್ಕಾರ ಸೇವೆ ಇರುವುದಿಲ್ಲ. ಸೆಪ್ಟೆಂಬರ್ 4ರಂದು ಶ್ರೀ ಕೃಷ್ಣ ಜನ್ಮಾಷ್ಟಮಿ ದಿನದಂದು, ಸೆಪ್ಟೆಂಬರ್ 7ರಂದು ಏಕಾದಶಿ ದಿನದಂದು ಆಶ್ಲೇಷ ಬಲಿ, ನಾಗ ಪ್ರತಿಷ್ಠೆ, ಮಹಾಭಿಷೇಕ ನೆರವೇರುವುದಿಲ್ಲ. ಮಹಾಪೂಜೆ, ಶೇಷ ಸೇವೆ, ಅಭಿಷೇಕಗಳು, ಅರ್ಚನೆ ಸೇವೆಗಳು ಮತ್ತು ದೇವರ ದರ್ಶನ ಎಂದಿನಂತೆ ನೆರವೇರಲಿದೆ ಎಂದು

ಕುಕ್ಕೆ ಸುಬ್ರಹ್ಮಣ್ಯ: ಈ ನಾಲ್ಕು ದಿನಗಳಂದು ಹಲವು ಸೇವೆಗಳು ಅಲಭ್ಯ Read More »

ಮಂಗಳೂರಿನ ಅಶ್ಮಿತ್ ಸರಿಗಮಪ ಲಿಟಲ್ ಚಾಂಪ್ಸ್ ವಿನ್ನರ್

ಸಮಗ್ರ ನ್ಯೂಸ್: ಜನಪ್ರಿಯ ರಿಯಾಲಿಟಿ ಶೋ ಸರಿಗಮಪ ಲಿಟಲ್‌ ಚಾಂಪ್ಸ್‌ ಗೆ ತೆರೆ ಬಿದ್ದಿದೆ. ಅದ್ಧೂರಿ ಗ್ರ್ಯಾಂಡ್‌ ಫಿನಾಲೆ ಕಾರ್ಯಕ್ರಮದಲ್ಲಿ ಮಂಗಳೂರಿನ ಅಶ್ಮಿತ್‌ ಗೆದ್ದು ಚಾಂಪಿಯನ್‌ ಆಗಿದ್ದಾರೆ. ಫಿನಾಲೆಯಲ್ಲಿ ಶಿವಶಂಕರಿ ಹಾಡನ್ನು ಹಾಡಿದ್ದ ಅಶ್ಮಿತ್‌ ಸರಿಗಮಪ ಲಿಟಲ್‌ ಚಾಂಪ್ಸ್‌ ಟ್ರೋಫಿಯೊಂದಿಗೆ 20 ಲಕ್ಷ ರೂ ಗೆದ್ದು ಬೀಗಿದ್ದಾರೆ. ಅಶ್ಮಿತ್‌, ಅಚಿಂತ್ಯ, ಮಹನ್ಯಾ, ಹರುಷ್‌, ಜಯಲಕ್ಷ್ಮೀ, ಅವ್ಯುಕ್ತ್‌ ಫಿನಾಲೆ ಸ್ಪರ್ಧೆಯಲ್ಲಿದ್ದರು. ಇಂದು ನಾಗರಾಜ್‌ ತಂಡದಲ್ಲಿದ್ದ ಅಶ್ಮಿತ್‌ ಚಾಂಪಿಯನ್‌ ಪಟ್ಟಕ್ಕೇರಿದರೆ, ಮಂಗಳೂರಿನ ಮತ್ತೊಬ್ಬ ಸ್ಪರ್ಧಿ ಅಚಿಂತ್ಯ ದ್ವಿತೀಯ ಸ್ಥಾನ ಪಡೆದರು.

ಮಂಗಳೂರಿನ ಅಶ್ಮಿತ್ ಸರಿಗಮಪ ಲಿಟಲ್ ಚಾಂಪ್ಸ್ ವಿನ್ನರ್ Read More »