ಸಮಗ್ರ ಸಮಾಚಾರ

ಸಮಗ್ರ ಸಮಾಚಾರ ಮುದ್ದು ಕೃಷ್ಣ ಫೋಟೋ ಸ್ಪರ್ಧೆ| ಫೋಟೋ ಕಳುಹಿಸಲು ಇಂದು(ಆ17) ಕೊನೆ ದಿನ

ಸಮಗ್ರ ನ್ಯೂಸ್: ಸಮಗ್ರ ಮೀಡಿಯಾ ನೆಟ್ವರ್ಕ್ ಹಾಗೂ ಸಮಗ್ರ ಸಮಾಚಾರ.ಕಾಂ ಅರ್ಪಿಸುವ ಮುದ್ದು ಕೃಷ್ಣ ಫೋಟೋ ಸ್ಪರ್ಧೆಗೆ ಫೋಟೋ ಕಳುಹಿಸಲು ಇಂದು(ಆ.17) ಕೊನೆ ದಿನವಾಗಿದೆ. ನಿಮ್ಮ ಮೂರು ವರ್ಷದೊಳಗಿನ ಕಂದಮ್ಮಗಳ ಕೃಷ್ಣ ವೇಷದ ಫೋಟೋ ಹಾಗೂ ಜನನ ಪ್ರಮಾಣ ಪತ್ರ, ಸಂಪರ್ಕ ವಿಳಾಸವನ್ನು 91081 31193 ನಂಬರ್ ಗೆ ವಾಟ್ಸಾಪ್ ಮಾಡುವುದು. ಸ್ಪರ್ಧೆಗೆ ಪ್ರವೇಶ ಶುಲ್ಕ ₹100 ಆಗಿದ್ದು ಯುಪಿಐ ಮೂಲಕ ಪಾವತಿಸಬಹುದು. ಸ್ಪರ್ಧೆಯ ಫಲಿತಾಂಶ ಆ. 17ರಂದು ಪ್ರಕಟವಾಗಲಿದ್ದು, ಆಸಕ್ತರು ಈ ಕೂಡಲೇ ಸ್ಪರ್ಧೆಯಲ್ಲಿ ಭಾಗವಹಿಸುವರೇ […]

ಸಮಗ್ರ ಸಮಾಚಾರ ಮುದ್ದು ಕೃಷ್ಣ ಫೋಟೋ ಸ್ಪರ್ಧೆ| ಫೋಟೋ ಕಳುಹಿಸಲು ಇಂದು(ಆ17) ಕೊನೆ ದಿನ Read More »

ಭಾರೀ ಮಳೆಯಿಂದ ಘಾಟ್ ನಲ್ಲಿ ಭೂಕುಸಿತ| ಸುಬ್ರಹ್ಮಣ್ಯ ರೋಡ್ – ಹಾಸನ ಮಾರ್ಗದಲ್ಲಿ ರೈಲು ಸಂಚಾರ ಬಂದ್| ಹಲವು ರೈಲುಗಳ ಮಾರ್ಗ ಬದಲಾವಣೆ

ಸಮಗ್ರ ನ್ಯೂಸ್: ಭಾರಿ ಮಳೆಯಿಂದ ಸುಬ್ರಹ್ಮಣ್ಯ ರೋಡ್ ಹಾಗೂ ಸಕಲೇಶಪುರ ರೈಲು ನಿಲ್ದಾಣದ ನಡುವಿನ ಘಾಟ್ ಪ್ರದೇಶದ ರೈಲು ಮಾರ್ಗದ ಮೂರು ಕಡೆ ಶನಿವಾರ ಭೂ ಕುಸಿತ ಉಂಟಾದ ಪರಿಣಾಮ ಕೆಲವು ರೈಲುಗಳ ಮಾರ್ಗವನ್ನು ಬದಲಾಯಿಸಲಾಗಿದೆ. ಸಂಜೆ 4.40ರ ವೇಳೆಗೆ ಸಿರಿಬಾಗಿಲು-ಎಡಕುಮೇರಿ, ಎಡಕುಮೇರಿ-ಕಡಗರವಳ್ಳಿ ಮತ್ತು ಕಡಗರವಳ್ಳಿ-ಡೋಣಿಗಲ್ ನಡುವಿನ ಕೆಲವೆಡೆ ಮಣ್ಣು ಮತ್ತು ಬಂಡೆಗಳು ಹಳಿಗಳ ಮೇಲೆ ಬಿದ್ದಿದೆ. ಮಂಗಳೂರು ಸೆಂಟ್ರಲ್-ವಿಜಯಪುರ ವಿಶೇಷ ಎಕ್ಸ್‌ಪ್ರೆಸ್ ರೈಲು (ರೈಲು ಸಂಖ್ಯೆ 07378) ಶನಿವಾರ ಪ್ರಯಾಣವನ್ನು ತೋಕೂರು, ಕಾರವಾರ, ಮಡಗಾಂವ್, ಲೋಂಡಾ

ಭಾರೀ ಮಳೆಯಿಂದ ಘಾಟ್ ನಲ್ಲಿ ಭೂಕುಸಿತ| ಸುಬ್ರಹ್ಮಣ್ಯ ರೋಡ್ – ಹಾಸನ ಮಾರ್ಗದಲ್ಲಿ ರೈಲು ಸಂಚಾರ ಬಂದ್| ಹಲವು ರೈಲುಗಳ ಮಾರ್ಗ ಬದಲಾವಣೆ Read More »

ಧರ್ಮಸ್ಥಳ: ಅನಿಯಂತ್ರಿತ ಅಗೆಯುವಿಕೆಯಿಂದ ಸಾಕ್ಷ್ಯ ನಾಶ| ಎಸ್ಐಟಿ ಗೆ ಹಿರಿಯ ವಿಜ್ಞಾನಿಯೊಬ್ಬರ ಸಲಹೆ

ಸಮಗ್ರ ನ್ಯೂಸ್: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ನಡೆಸುತ್ತಿರುವ ಕಾರ್ಯಾಚರಣೆಯ ಕುರಿತು ಕಳವಳ ವ್ಯಕ್ತಪಡಿಸಿರುವ ಮಣ್ಣಿನ ವಿಜ್ಞಾನಿಗಳು, ಅನಿಯಂತ್ರಿತ ಅಗೆಯುವಿಕೆಯಿಂದ ಸಾಮೂಹಿಕ ಅಂತ್ಯಕ್ರಿಯೆಯ ಸಾಕ್ಷ್ಯ ನಾಶವಾಗಬಹುದು ಎಂದು ಎಸ್‌ಐಟಿಗೆ ಎಚ್ಚರಿಕೆ ನೀಡಿದ್ದಾರೆ. ಧರ್ಮಸ್ಥಳದಲ್ಲಿ ಭೌಗೋಳಿಕ ರಚನೆಯಿಂದಾಗಿ ಧರ್ಮಸ್ಥಳದಲ್ಲಿನ ಮಣ್ಣು ಮತ್ತು ನೆಲದಲ್ಲಿ ಹುದುಗಿದ ಮೂಳೆಗಳು ವರ್ಷಗಳು ಕಳೆದಂತೆ ಕರಗಿ ಹೋಗುತ್ತದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಮಾಧ್ಯಮವೊಂದಕ್ಕೆ ಈ ಕುರಿತು ಪ್ರತಿಕ್ರಿಯಿಸಿದ ಹೆಸರು ಬಹಿರಂಗಪಡಿಸಲು ಬಯಸದ ಮಣ್ಣಿನ ವಿಜ್ಞಾನಿಯೊಬ್ಬರು ಧರ್ಮಸ್ಥಳದಲ್ಲಿ ಹುಡುಕಬೇಕಿರುವುದು ಮೂಳೆಗಳನ್ನಲ್ಲ. ಕಳೆಬರವೂ ಅಲ್ಲ. ಬದಲಾಗಿ ಮೂಳೆಯ

ಧರ್ಮಸ್ಥಳ: ಅನಿಯಂತ್ರಿತ ಅಗೆಯುವಿಕೆಯಿಂದ ಸಾಕ್ಷ್ಯ ನಾಶ| ಎಸ್ಐಟಿ ಗೆ ಹಿರಿಯ ವಿಜ್ಞಾನಿಯೊಬ್ಬರ ಸಲಹೆ Read More »

ಮಂಗಳೂರು: ಜಿಲ್ಲಾ ಉಸ್ತುವಾರಿ ಸಚಿವರಿಂದ ನೆಹರು ಮೈದಾನದಲ್ಲಿ ಧ್ವಜಾರೋಹಣ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲಾಡಳಿತ ವತಿಯಿಂದ 79 ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಮಂಗಳೂರು ನೆಹರು ಮೈದಾನಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ದಿನೇಶ್ ಗುಂಡೂರಾವ್ ಅವರು ಧ್ವಜಾರೋಹಣ ನಡೆಸಿದರು. ಗೌರವ ವಂದನೆ ಸ್ವೀಕರಿಸಿದ ಬಳಿಕ ವಿವಿಧ ಪರೇಡ್ ತಂಡಗಳ ಪಥಸಂಚಲನ ವೀಕ್ಷಿಸಿದರು. ಬಳಿಕ‌ ಮಾತನಾಡಿದ ಅವರು, ಹಲವು ಸವಾಲುಗಳ ಮಧ್ಯೆ ದೇಶದ ಪ್ರಥಮ ಪ್ರಧಾನಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಪಂಡಿತ್ ಜವಾಹರ್ ಲಾಲ್ ನೆಹರೂ ಅವರು ಈ ದೇಶದ ವಿಕಾಸಕ್ಕೆ ಮಹತ್ತರ ಮುನ್ನುಡಿ

ಮಂಗಳೂರು: ಜಿಲ್ಲಾ ಉಸ್ತುವಾರಿ ಸಚಿವರಿಂದ ನೆಹರು ಮೈದಾನದಲ್ಲಿ ಧ್ವಜಾರೋಹಣ Read More »

ಆ.16ರಿಂದ ರಾಜ್ಯಾದ್ಯಂತ ಭಾರೀ ಮಳೆ ಮುನ್ಸೂಚನೆ

ಸಮಗ್ರ ನ್ಯೂಸ್: ಆಗಸ್ಟ್‌ 16ರಂದು ಕರಾವಳಿ ಜಿಲ್ಲೆಗಳು, ಬೆಳಗಾವಿ, ಬೀದರ್‌ ಸೇರಿ ಐದು ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್‌ ಘೋಷಿಸಿದ್ದು, ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ನಿರೀಕ್ಷೆ ಇದೆ. ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನ ಬೀದರ್, ಬೆಳಗಾವಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ,

ಆ.16ರಿಂದ ರಾಜ್ಯಾದ್ಯಂತ ಭಾರೀ ಮಳೆ ಮುನ್ಸೂಚನೆ Read More »

ಕೊಪ್ಪಳ: ತುಂಗಭದ್ರಾ ಡ್ಯಾಂ ನ ಏಳು ಗೇಟ್ ಗಳು ಶಿಥಿಲ – ಸಚಿವ ತಂಗಡಗಿ

ಸಮಗ್ರ ನ್ಯೂಸ್: ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿ ಇರುವ ತುಂಗಭದ್ರಾ ಜಲಾಶಯದ ಏಳು ಗೇಟ್​ಗಳು ಬೆಂಡ್ ಆಗಿವೆ ಎಂದು ಡ್ಯಾಂ ಸೇಫ್ಟಿ ರೀವಿವ್ ಕಮೀಟಿ ವರದಿ ನೀಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಹೇಳಿದರು. ಕೊಪ್ಪಳದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ತುಂಗಭದ್ರಾ ಜಲಾಶಯದ ಗೇಟ್ ನಂಬರ್ 4, 11, 18, 20, 24, 27 ಹಾಗೂ 28ನೇ ಗೇಟ್​ ಸೇರಿದಂತೆ 7 ಗೇಟ್​ಗಳು ಬೆಂಡ್ ಆಗಿವೆ. ಇದರಲ್ಲಿ, 6 ಗೇಟ್​ಗಳನ್ನು ಮೇಲೆ ಎತ್ತಲು

ಕೊಪ್ಪಳ: ತುಂಗಭದ್ರಾ ಡ್ಯಾಂ ನ ಏಳು ಗೇಟ್ ಗಳು ಶಿಥಿಲ – ಸಚಿವ ತಂಗಡಗಿ Read More »

ದೇಶಾದ್ಯಂತ ಇಂದು ಸಂಭ್ರಮದ 79ನೇ ಸ್ವಾತಂತ್ರ್ಯ ದಿನಾಚರಣೆ| ಪ್ರಧಾನಿ ಮೋದಿಯಿಂದ ಸತತ 12ನೇ ಬಾರಿ ಧ್ವಜಾರೋಹಣ

ಸಮಗ್ರ ನ್ಯೂಸ್: ಆಗಸ್ಟ್ 15 ರ ಇಂದು ಭಾರತವು 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ದೇಶಾದ್ಯಂತ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಈ ಪ್ರಯುಕ್ತ ಇಂದು ಪ್ರಧಾನಿ ನರೇಂದ್ರ ಮೋದಿ ದೆಹಲಿಯ ಕೆಂಪುಕೋಟೆಯಲ್ಲಿ ಧ್ವಜಾರೋಹಣ ಮಾಡಿ, ದೇಶವನ್ನುದ್ದೇಶಿ ಮಾತನಾಡಲಿದ್ದಾರೆ. ಭಾರತವು ಆಗಸ್ಟ್ 15, 2025 ರಂದು ತನ್ನ 79 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಿದೆ, ಇದನ್ನು ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯ ಐತಿಹಾಸಿಕ ಕೆಂಪು ಕೋಟೆಯಿಂದ ಮುನ್ನಡೆಸಲಿದ್ದಾರೆ. ಪ್ರಧಾನ ಮಂತ್ರಿಗಳು ಐತಿಹಾಸಿಕ ಸ್ಮಾರಕದ ಕೋಟೆಯಿಂದ ರಾಷ್ಟ್ರಧ್ವಜಾರೋಹಣ ಮಾಡಿ ಇಡೀ ರಾಷ್ಟ್ರವನ್ನು

ದೇಶಾದ್ಯಂತ ಇಂದು ಸಂಭ್ರಮದ 79ನೇ ಸ್ವಾತಂತ್ರ್ಯ ದಿನಾಚರಣೆ| ಪ್ರಧಾನಿ ಮೋದಿಯಿಂದ ಸತತ 12ನೇ ಬಾರಿ ಧ್ವಜಾರೋಹಣ Read More »

ಪಾಕಿಸ್ತಾನದಲ್ಲಿ ಸ್ವಾತಂತ್ರ್ಯ ದಿನಾಚರಣೆ ವೇಳೆ ಗುಂಡಿನ ದಾಳಿ|ಮೂವರು ಸಾವು, 60 ಮಂದಿಗೆ ಗಾಯ

ಸಮಗ್ರ ನ್ಯೂಸ್: ಪಾಕಿಸ್ತಾನದ ಕರಾಚಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಆಚರಣೆಯು ಮಾರಣಾಂತಿಕ ತಿರುವು ಪಡೆದುಕೊಂಡಿದ್ದು, ಅಜಾಗರೂಕ ವೈಮಾನಿಕ ಗುಂಡಿನ ದಾಳಿಯಲ್ಲಿ 8 ವರ್ಷದ ಬಾಲಕಿ ಮತ್ತು ಹಿರಿಯ ನಾಗರಿಕ ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ ಮತ್ತು 60 ಕ್ಕೂ ಹೆಚ್ಚು ಜನರು ಗುಂಡೇಟಿನಿಂದ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕರಾಚಿ ನಗರದಾದ್ಯಂತ ಘಟನೆಗಳು ನಡೆದಿದ್ದು, ಅಜೀಜಾಬಾದ್ನಲ್ಲಿ ಯುವತಿಗೆ ಗುಂಡು ತಗುಲಿದ್ದರೆ, ಕೋರಂಗಿಯಲ್ಲಿ ಸ್ಟೀಫನ್ ಎಂಬ ವ್ಯಕ್ತಿ ಸಾವನ್ನಪ್ಪಿದ್ದಾನೆ. ಒಟ್ಟಾರೆಯಾಗಿ, ಈ ನಗರವ್ಯಾಪಿ ಘಟನೆಗಳಲ್ಲಿ ಕನಿಷ್ಠ 64 ನಿವಾಸಿಗಳು ಗುಂಡೇಟಿನಿಂದ ಗಾಯಗೊಂಡಿದ್ದಾರೆ

ಪಾಕಿಸ್ತಾನದಲ್ಲಿ ಸ್ವಾತಂತ್ರ್ಯ ದಿನಾಚರಣೆ ವೇಳೆ ಗುಂಡಿನ ದಾಳಿ|ಮೂವರು ಸಾವು, 60 ಮಂದಿಗೆ ಗಾಯ Read More »

ದ.ಕ ಜಿಲ್ಲೆಗೆ ಮರು ನಾಮಕರಣ ವಿಚಾರ| ಎಲ್ಲರ ಅಭಿಪ್ರಾಯ ಸಂಗ್ರಹಿಸಿ‌ ತೀರ್ಮಾನ – ಕೃಷ್ಣ ಬೈರೇಗೌಡ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಗೆ ʼಮಂಗಳೂರುʼ ಎಂದು ಮರು ನಾಮಕರಣ ಮಾಡುವ ಸಂಬಂಧ ಪರ, ವಿರೋಧ ಮನವಿಗಳು ಸ್ವೀಕೃತವಾಗಿವೆ. ಜಿಲ್ಲಾಧಿಕಾರಿಯಿಂದ ವರದಿ ಬರುವುದು ಬಾಕಿಯಿದೆ. ಎಲ್ಲರ ಅಭಿಪ್ರಾಯ ಪಡೆದು ಸರಕಾರ ಮುಂದಿನ ತೀರ್ಮಾನ ಕೈಗೊಳ್ಳಲಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು. ಬುಧವಾರ ವಿಧಾನಸಭೆಯಲ್ಲಿ ಬಿಜೆಪಿ ಸದಸ್ಯ ಹರೀಶ್ ಪೂಂಜ ದಕ್ಷಿಣ ಕನ್ನಡ ಜಿಲ್ಲೆಯ ಹೆಸರನ್ನು ಮಂಗಳೂರು ಎಂದು ಮರು ನಾಮಕರಣ ಮಾಡುವ ಬಗ್ಗೆ ಗಮನ ಸೆಳೆದ ಸೂಚನೆಗೆ ಅವರು ಉತ್ತರಿಸಿದರು. ದಕ್ಷಿಣ ಕನ್ನಡ

ದ.ಕ ಜಿಲ್ಲೆಗೆ ಮರು ನಾಮಕರಣ ವಿಚಾರ| ಎಲ್ಲರ ಅಭಿಪ್ರಾಯ ಸಂಗ್ರಹಿಸಿ‌ ತೀರ್ಮಾನ – ಕೃಷ್ಣ ಬೈರೇಗೌಡ Read More »

ಬೆಳ್ತಂಗಡಿ: ಇನ್ನೋವಾ ಕಾರಿನಲ್ಲಿ ಹಿಂಸಾತ್ಮಕವಾಗಿ ಗೋಸಾಗಾಟ| ವಾಹನ ಮತ್ತು ಆರೋಪಿ ಪೊಲೀಸ್ ವಶಕ್ಕೆ

ಸಮಗ್ರ ನ್ಯೂಸ್: ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯಲ್ಲಿ ಇನ್ನೋವಾ ಕಾರಿನಲ್ಲಿ ಹಿಂಸಾತ್ಮಕವಾಗಿ ದನ ಸಾಗಾಟ ಮಾಡುತ್ತಿದ್ದ ಪ್ರಕರಣವೊಂದು ಬುಧವಾರ ಬೆಳಕಿಗೆ ಬಂದಿದ್ದು ವಾಹನ ಹಾಗೂ ಒಬ್ಬ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚಾರ್ಮಾಡಿ ಕಡೆಯಿಂದ ಅತಿ ವೇಗದಲ್ಲಿ ಬಂದ ಇನ್ನೋವಾ ಕಾರು ಹಲವು ವಾಹನಗಳಿಗೆ ಢಿಕ್ಕಿ ಹೊಡೆದಿದೆ ಎಂದು ಹೇಳಲಾಗುತ್ತಿದ್ದು, ಗುರುವಾಯಕೆರೆಯಲ್ಲಿ ವಾಹನವನ್ನು ಸ್ಥಳೀಯರು ಹಾಗೂ ಸ್ಥಳದಲ್ಲಿದ್ದ ಟ್ರಾಫಿಕ್ ಪೊಲೀಸರು ತಡೆದಿದ್ದಾರೆ. ಈ ವೇಳೆ ಕಾರಿನಲ್ಲಿದ್ದ ಇಬ್ಬರು ಪರಾರಿಯಾಗಿದ್ದಾರೆ ಎನ್ನಲಾಗಿದ್ದು, ಇನ್ನೋವಾ ಕಾರಿನಲ್ಲಿ ಮೂರು ದನಗಳನ್ನು ಹಿಂಸಾತ್ಮಕವಾಗಿ ತುಂಬಿಕೊಂಡು

ಬೆಳ್ತಂಗಡಿ: ಇನ್ನೋವಾ ಕಾರಿನಲ್ಲಿ ಹಿಂಸಾತ್ಮಕವಾಗಿ ಗೋಸಾಗಾಟ| ವಾಹನ ಮತ್ತು ಆರೋಪಿ ಪೊಲೀಸ್ ವಶಕ್ಕೆ Read More »