ಸಮಗ್ರ ಸಮಾಚಾರ

ಧರ್ಮಸ್ಥಳ ಪ್ರಕರಣ| ಮೀಸಲು ಅರಣ್ಯದಲ್ಲಿ ಹೆಣ ಹೂತವರ ವಿರುದ್ಧವೂ ಕ್ರಮ – ಸಚಿವ ಖಂಡ್ರೆ

ಸಮಗ್ರ ನ್ಯೂಸ್: ಧರ್ಮಸ್ಥಳ ಸುತ್ತಮುತ್ತ ಮೀಸಲು ಅರಣ್ಯದೊಳಗೆ ಸಮಾಧಿ ಅಗೆಯುತ್ತಿರುವ ಎಸ್.ಐ.ಟಿ.ಗೆ ಕೆಲವೆಡೆ ಮಾನವರ ಅಸ್ಥಿ ಸಿಕ್ಕಿದ್ದು, ತನಿಖೆ ಮುಗಿದ ಬಳಿಕ ಅಕ್ರಮವಾಗಿ ಶವ ಹೂತಿರುವುದು ಸಾಬೀತಾದರೆ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ. ಬೀದರ್ ನಲ್ಲಿಂದು ಕರ್ನಾಟಕ ಮಾಧ್ಯಮ ಅಕಾಡಮಿ ಆಯೋಜಿಸಿದ್ದ ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅರಣ್ಯದಲ್ಲಿ ಅಕ್ರಮವಾಗಿ ಶವ ಹೂತಿರುವುದು ದೃಢಪಟ್ಟರೆ, ಬೇಜವಾಬ್ದಾರಿತನ, ನಿರ್ಲಕ್ಷ್ಯ ತೋರಿದ ಅರಣ್ಯ ಅಧಿಕಾರಿ, […]

ಧರ್ಮಸ್ಥಳ ಪ್ರಕರಣ| ಮೀಸಲು ಅರಣ್ಯದಲ್ಲಿ ಹೆಣ ಹೂತವರ ವಿರುದ್ಧವೂ ಕ್ರಮ – ಸಚಿವ ಖಂಡ್ರೆ Read More »

ಮಂಗಳೂರಿಗೆ ಬಂದಿಳಿದ T-55 ಯುದ್ಧ ಟ್ಯಾಂಕ್

ಸಮಗ್ರ ನ್ಯೂಸ್: ಸಾಮಾನ್ಯವಾಗಿ ಯುದ್ಧದಲ್ಲಿ ಪಾಲ್ಗೊಂಡು ಸೇವೆಯಿಂದ ನಿವೃತ್ತಿ ಪಡೆದ ಟ್ಯಾಂಕ್ ಮತ್ತಿತರ ಸೇನೆಯ ಆಯುಧಗಳನ್ನು ವಾರ್ ಟ್ರೋಫಿ (ಯುದ್ಧ ಸ್ಮರಣಿಕೆ) ರೀತಿಯಲ್ಲಿ ಪ್ರದರ್ಶನಕ್ಕೆ ಇರಿಸಲಾಗುತ್ತದೆ. ಅದೇ ರೀತಿ ಮಂಗಳೂರಿಗೆ ಟ್ಯಾಂಕ್ ಅನ್ನು ನೀಡುವಂತೆ ಸಂಸದ ಕ್ಯಾ|ಬ್ರಿಜೇಶ್ ಚೌಟ ರಕ್ಷಣಾ ಸಚಿವಾಲಯಕ್ಕೆ ಮನವಿ ಮೇರೆಗೆ ಯುದ್ದ ಟ್ಯಾಂಕ್ ಮಂಗಳೂರು ತಲುಪಿದೆ. ಕದ್ರಿ ಯುದ್ಧಸ್ಮಾರಕ ಅಥವಾ ಸರ್ಕಿಟ್ ಹೌಸ್ ಮುಂಭಾಗ ಅಥವಾ ಇತರ ಯೋಗ್ಯ ಸ್ಥಳದಲ್ಲಿ ಟ್ಯಾಂಕ್ ಅನ್ನು ಇರಿಸಲಾಗುವುದು. ಅದಕ್ಕಾಗಿ ಪ್ರತ್ಯೇಕ ವೇದಿಕೆ ನಿರ್ಮಿಸುವ ಕೆಲಸವನ್ನು ಮಹಾನಗರಪಾಲಿಕೆ

ಮಂಗಳೂರಿಗೆ ಬಂದಿಳಿದ T-55 ಯುದ್ಧ ಟ್ಯಾಂಕ್ Read More »

ಬೆಳ್ತಂಗಡಿ: ಮತ್ತೆರಡು ಪ್ರಕರಣ‌‌ ಎಸ್ಐಟಿ‌ ತನಿಖೆಗೆ ಆದೇಶ| ತನಿಖೆಯಲ್ಲಿ ಸರ್ಕಾರದ ಹಸ್ತಕ್ಷೇಪ ಇಲ್ಲವೆಂದ ಹೋಮ್ ಮಿನಿಸ್ಟರ್

ಸಮಗ್ರ ನ್ಯೂಸ್: ಹಲವಾರು ಮೃತದೇಹ ಹೂತು ಹಾಕಿದ ಆರೋಪ ಪ್ರಕರಣ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಜುಲೈ 31 ರಂದು 6 ನೇ ಗುರುತು ಮಾಡಿದ ಜಾಗದಲ್ಲಿ ಪತ್ತೆಯಾದ ಅಸ್ಥಿಪಂಜರ ಪ್ರಕರಣ ಆಗಸ್ಟ್ 1 ರಂದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣ ಮತ್ತು ಆಗಸ್ಟ್ 4 ರಂದು ಅಪ್ರಾಪ್ತ ಬಾಲಕಿಯನ್ನು ಕಾನೂನು ಬಾಹಿರವಾಗಿ ಹೂತು ಹಾಕಿರುವ ಬಗ್ಗೆ ಜಯಂತ್.ಟಿ ನೀಡಿದ ದೂರಿನ ಪಿಟಿಷನ್ ಪ್ರಕರಣವನ್ನು ಮುಂದಿನ ತನಿಖೆಗಾಗಿ ಕರ್ನಾಟಕ ರಾಜ್ಯದ ಡಿಜಿಪಿ & ಐಜಿಪಿ ರವರು

ಬೆಳ್ತಂಗಡಿ: ಮತ್ತೆರಡು ಪ್ರಕರಣ‌‌ ಎಸ್ಐಟಿ‌ ತನಿಖೆಗೆ ಆದೇಶ| ತನಿಖೆಯಲ್ಲಿ ಸರ್ಕಾರದ ಹಸ್ತಕ್ಷೇಪ ಇಲ್ಲವೆಂದ ಹೋಮ್ ಮಿನಿಸ್ಟರ್ Read More »

ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ‌ತಡೆಯಾಜ್ಞೆ| ನಾಳೆಯಿಂದ‌ ಬಸ್ ಸಂಚಾರ ಯಥಾಸ್ಥಿತಿ

ಸಮಗ್ರ ನ್ಯೂಸ್: ಸಾರಿಗೆ ಮುಷ್ಕರ ಪ್ರಶ್ನಿಸಿ ಹೈಕೋರ್ಟ್ ಗೆ ಸಲ್ಲಿಸಲಾಗಿದ್ದಂತ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯನ್ನು ಇಂದು ವಿಚಾರಣೆ ನಡೆಸಲಾಯಿತು. ವಾದ-ಪ್ರತಿವಾದವನ್ನು ಆಲಿಸಿದಂತ ಹೈಕೋರ್ಟ್ ನ್ಯಾಯಪೀಠವು ಸಾರಿಗೆ ನೌಕರರ ಮುಷ್ಕರಕ್ಕೆ ನೀಡಿದ್ದಂತ ತಡೆಯಾಜ್ಞೆಯನ್ನು 2 ದಿನ ವಿಸ್ತರಿಸಿ ಆದೇಶಿಸಿದೆ. ಇಂದು ಸಾರಿಗೆ ಮುಷ್ಕರ ಪ್ರಶ್ನಿಸಿ ಸಲ್ಲಿಸಿದ್ದಂತ ಪಿಐಎಲ್ ಅನ್ನು ಹೈಕೋರ್ಟ್ ವಿಭಾಗೀಯ ನ್ಯಾಯಪೀಠದಲ್ಲಿ ವಿಚಾರಣೆ ನಡೆಸಿತು. ಈ ವೇಳೆ ಮುಷ್ಕರದಿಂದಾಗಿ ಜನಸಾಮಾನ್ಯರಿಗೆ ತೊಂದರೆಯಾಗಿದೆ ಎಂಬುದಾಗಿ ಎಜಿ ಕೋರ್ಟ್ ಗಮನಕ್ಕೆ ತಂದರು. ಈ ಸಂದರ್ಭದಲ್ಲಿ ಹೈಕೋರ್ಟ್ ನ್ಯಾಯಪೀಠವು ರಾಜಿ ಸಂಧಾನದ

ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ‌ತಡೆಯಾಜ್ಞೆ| ನಾಳೆಯಿಂದ‌ ಬಸ್ ಸಂಚಾರ ಯಥಾಸ್ಥಿತಿ Read More »

ಉತ್ತರಕಾಶಿಯಲ್ಲಿ ಮೇಘ ಸ್ಪೋಟ| 60ಕ್ಕೂ ಹೆಚ್ಚು ಮಂದಿ ಕಣ್ಮರೆ

ಸಮಗ್ರ ನ್ಯೂಸ್: ಉತ್ತರಾಖಂಡದ ಉತ್ತರ ಕಾಶಿಯಲ್ಲಿ ಭೀಕರ ಮೇಘಸ್ಪೋಟ ಉಂಟಾಗಿದೆ. ಉತ್ತರ ಕಾಶಿ ಜಿಲ್ಲೆಯ ಗ್ರಾಮವೊಂದರಲ್ಲಿ ಈ ಭೀಕರ ಮೇಘಸ್ಪೋಟ ಸಂಭವಿಸಿದೆ. ಉತ್ತರಾಖಂಡದ ಉತ್ತರಕಾಶಿಯ ಹರ್ಸಿಲ್ ಬಳಿಯ ಧರಾಲಿ ಪ್ರದೇಶದಲ್ಲಿ ಮಂಗಳವಾರ ಸಂಭವಿಸಿದ ಭಾರಿ ಮೇಘಸ್ಫೋಟದಲ್ಲಿ ಒಂದು ಹಳ್ಳಿ ಕೊಚ್ಚಿಹೋಗಿದ್ದು, ಹಲವಾರು ಜನರು ನಾಪತ್ತೆಯಾಗಿದ್ದಾರೆ ಎಂದು ಶಂಕಿಸಲಾಗಿದೆ. ಉತ್ತರಾಖಾಂಡ್ ನ ಉತ್ತರ ಕಾಶಿಯ ಗ್ರಾಮವೊಂದರಲ್ಲಿ ಇಂದು ಭೀಕರ ಮೇಘಸ್ಪೋಟ ಸಂಭವಿಸಿದೆ. ಈ ಭೀಕರ ಮೇಘಸ್ಪೋಟದಿಂದಾಗಿ ಗುಡ್ಡ ಕುಸಿತದಲ್ಲಿ ಹಲವು ಮನೆಗಳು ಕೊಚ್ಚಿ ಹೋಗಿದ್ದಾವೆ. ಗಂಗೋತ್ರಿ ವ್ಯಾಪ್ಯಿ ಜನವಸತಿ

ಉತ್ತರಕಾಶಿಯಲ್ಲಿ ಮೇಘ ಸ್ಪೋಟ| 60ಕ್ಕೂ ಹೆಚ್ಚು ಮಂದಿ ಕಣ್ಮರೆ Read More »

ಗಣಪ,‌ ಕರಿಯ 2 ಖ್ಯಾತಿಯ ನಟ‌ ಸಂತೋಷ್ ಬಾಲರಾಜ್ ನಿಧನ

ಸಮಗ್ರ ನ್ಯೂಸ್: ಸ್ಯಾಂಡಲ್‌ವುಡ್‌ ಯುವ ನಟ ಸಂತೋಷ್ ಬಾಲರಾಜ (38)ಮಂಗಳವಾರ ನಿಧನ ಹೊಂದಿದ್ದಾರೆ. ‘ಕರಿಯ 2’, ‘ಗಣಪ’ ಸೇರಿದಂತೆ ಇನ್ನೂ ಕೆಲ ಸಿನಿಮಾಗಳಲ್ಲಿ ಇವರು ನಟಿಸಿದ್ದಾರೆ. ಕಳೆದ ಕೆಲ ದಿನಗಳಿಂದ ಸಂತೋಷ್‌ ಅವರು ಜಾಂಡೀಸ್‌ ಕಾಯಿಲೆಯಿಂದ ಬಳಲುತ್ತಿದ್ದರು ಇತ್ತೀಚೆಗೆ ಬನಶಂಕರಿಯ ಸಾಗರ್ ಅಪೋಲೊ ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆದಿದ್ದರು. ಆದಾಗ್ಯೂ, ಅವರ ಆರೋಗ್ಯ ಪರಿಸ್ಥಿತಿ ಗಂಭೀರವಾಗಿದ್ದ ಹಿನ್ನೆಲೆಯಲ್ಲಿ ತೀವ್ರ ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು. ಸೋಮವಾರ ರಾತ್ರಿ ಚಿಕಿತ್ಸೆಗೆ ಸ್ಪಂದಿಸದೆ ಸಂತೋಷ್ ಬಾಲರಾಜ್ ನಿಧನ ಹೊಂದಿದ್ದಾರೆ. ʼಕೆಂಪ’

ಗಣಪ,‌ ಕರಿಯ 2 ಖ್ಯಾತಿಯ ನಟ‌ ಸಂತೋಷ್ ಬಾಲರಾಜ್ ನಿಧನ Read More »

ಜನಾಕ್ರೋಶಕ್ಕೆ ಬೆದರಿದ ಇಲಾಖೆ|ಎನ್ ಆರ್ ಪುರದಲ್ಲಿ ಕಾಡಾನೆ ಕಾರ್ಯಾಚರಣೆ

ಸಮಗ್ರ ನ್ಯೂಸ್: ಚಿಕ್ಕಮಗಳೂರು ಜಿಲ್ಲೆ ಎನ್.ಆರ್. ಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿ ಮಲೆನಾಡಿಗರ ಆಕ್ರೋಶಕ್ಕೆ ಅರಣ್ಯ ಇಲಾಖೆ ಮತ್ತೊಮ್ಮೆ ಬೆದರಿದ್ದು ನಾಲ್ಕೇ ದಿನಕ್ಕೆ ಮತ್ತೆ ಕುಮ್ಕಿ ಆನೆಗಳನ್ನ ಕರೆಸಿ ಕಾಡಾನೆ ಸೆರೆ ಕಾರ್ಯಾಚರಣೆಗೆ ಮುಂದಾಗಿದೆ. ಕಾಡಾನೆಯು 4 ದಿನದಲ್ಲಿ ಇಬ್ಬರನ್ನ ಬಲಿ ಪಡೆದಿತ್ತು. ಮಲೆನಾಡಿಗರ ತಾಳ್ಮೆಯ ಕಟ್ಟೆ ಸಹ ಒಡೆದಿತ್ತು. ಬಾಳೆಹೊನ್ನೂರು – ಖಾಂಡ್ಯ ಬಂದ್ ಮಾಡಿ ಜನ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದರು. ಸಂಗಮೇಶ್ವರಪೇಟೆ ಅರಣ್ಯ ಇಲಾಖೆ ಹಾಗೂ ಜಿಲ್ಲಾಧಿಕಾರಿ ಕಾರಿಗೂ ಕೂಡ ಮುತ್ತಿಗೆ ಹಾಕಿದ್ದರು. ಗಂಟೆಗಟ್ಟಲೇ

ಜನಾಕ್ರೋಶಕ್ಕೆ ಬೆದರಿದ ಇಲಾಖೆ|ಎನ್ ಆರ್ ಪುರದಲ್ಲಿ ಕಾಡಾನೆ ಕಾರ್ಯಾಚರಣೆ Read More »

ಬಂಟ್ವಾಳ: ನಾಪತ್ತೆಯಾಗಿದ್ದ ಯುವಕನ ಶವ ನೇತ್ರಾವತಿ ನದಿಯಲ್ಲಿ ಪತ್ತೆ

ಸಮಗ್ರ ನ್ಯೂಸ್: ಕಳೆದ ಕೆಲವು ದಿನಗಳಿಂದ ನಾಪತ್ತೆಯಾಗಿದ್ದ ಕಡೇಶಿವಾಲಯದ ಹೇಮಂತ್ ಆಚಾರ್ಯ (21) ಅವರ ಮೃತದೇಹ ಬಜಾಲ್ ಮುಗೇರು ಸಮೀಪ ನೇತ್ರಾವತಿ ನದಿ ಮಧ್ಯ ಭಾಗದಲ್ಲಿ ತೇಲಾಡುವ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕಡೇಶಿವಾಲಯದ ಹೇಮಂತ್ ಆಚಾರ್ಯ ಜುಲೈ 27 ರಿಂದ ಕಾಣೆಯಾಗಿದ್ದು, ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು.ಜುಲೈ 28ರಂದು ಈತನ ಸ್ಕೂಟರ್​ ಹಾಗೂ ಮೊಬೈಲ್ ಬಂಟ್ವಾಳ ಸಮೀಪದ ಜಕ್ರಿಬೆಟ್ಟು ಕಿಂಡಿ ಅಣೆಕಟ್ಟಿನ ಬಳಿ ಪತ್ತೆಯಾಗಿತ್ತು. ಹೀಗಾಗಿ ಆತ ನದಿಗೆ ಹಾರಿರಬಹುದು ಎಂಬ

ಬಂಟ್ವಾಳ: ನಾಪತ್ತೆಯಾಗಿದ್ದ ಯುವಕನ ಶವ ನೇತ್ರಾವತಿ ನದಿಯಲ್ಲಿ ಪತ್ತೆ Read More »

ಧರ್ಮಸ್ಥಳ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್| ಬಾಲಕಿ ಶವ ಹೂತಿದ್ದನ್ನು ನೋಡಿದ್ದೇನೆ ಎಂದ ಮತ್ತೊಬ್ಬ ಸಾಕ್ಷಿದಾರ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ ಅಪರಿಚಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಮತ್ತೊಂದು ಸಿಕ್ಕಿದ್ದು, ಈಗಾಗಲೇ ಒಬ್ಬ ದೂರುದಾರನ ಹೇಳಿಕೆ ಆಧಾರದ ಮೇಲೆ ಎಸ್‌ಐಟಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದು 6ನೇ ಪಾಯಿಂಟ್ ನಲ್ಲಿ ಮನುಷ್ಯ ದೇಹದ ಅಸ್ತಿಪಂಜರದ ಕೆಲವು ಮೂಳೆಗಳು ದೊರೆತಿವೆ. ಇನ್ನು ನಿನ್ನೆ ಎಸ್‌ಐಟಿ ಕಚೇರಿಗೆ ಮತೊಬ್ಬ ದೂರುದಾರ ಆಗಮಿಸಿ 15 ವರ್ಷದ ಬಾಲಕಿಯ ಶವ ಹೂತಿದ್ದನ್ನು ನಾನು ನೋಡಿದ್ದೇನೆ. ಎಂದು ಅದಕ್ಕೆ ನಾನೇ ಪ್ರತ್ಯಕ್ಷ ಸಾಕ್ಷಿ ಎಂದು ಹೇಳಿಕೆ ನೀಡಿದ್ದು

ಧರ್ಮಸ್ಥಳ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್| ಬಾಲಕಿ ಶವ ಹೂತಿದ್ದನ್ನು ನೋಡಿದ್ದೇನೆ ಎಂದ ಮತ್ತೊಬ್ಬ ಸಾಕ್ಷಿದಾರ Read More »

ವಿಟ್ಲ: ದೇವಸ್ಥಾನದಿಂದ ಹುಂಡಿಹಣ ಕಳ್ಳತನ| ಮೂವರು ಅರೆಸ್ಟ್

ಸಮಗ್ರ ನ್ಯೂಸ್: ಧಾರ್ಮಿಕ ಶೃದ್ದಾ ಕೇಂದ್ರಕ್ಕೆ ಸಂಬಂಧಿಸಿದಂತೆ ರಸ್ತೆ ಬದಿಯಲ್ಲಿ ಇಟ್ಟ ಕಾಣಿಕೆ ಡಬ್ಬದಲ್ಲಿದ್ದ ಹಣವನ್ನು ಕದ್ದ ಕಳ್ಳರನ್ನು ವಿಟ್ಲ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ವಿಟ್ಲ ಕಸಬಾ ಗ್ರಾಮದ ನಿವಾಸಿಗಳಾದ ತ್ವಾಹಿದ್‌ (19), ಉಮ್ಮರ್‌ ಫಾರೂಕ್‌ (18 , ಮೊಹಮ್ಮದ್‌ ನಬೀಲ್‌(18) ಎಂದು ಗುರುತಿಸಲಾಗಿದೆ. ಕನ್ಯಾನ ಗ್ರಾಮದ ದೇಲಂತಬೆಟ್ಟು ನಿವಾಸಿ ಡಿ.ನಾರಾಯಣ ರಾವ್ ನೀಡಿದ ದೂರಿನಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಾರಾಯಣ ಅವರು ಅಧ್ಯಕ್ಷರಾಗಿದ್ದ ಧಾರ್ಮಿಕ ಶ್ರಧ್ದಾ ಕೇಂದ್ರಕ್ಕೆ ಸಂಬಂಧಿಸಿದ ಕಾಣಿಕೆ ಕಟ್ಟೆಯನ್ನು

ವಿಟ್ಲ: ದೇವಸ್ಥಾನದಿಂದ ಹುಂಡಿಹಣ ಕಳ್ಳತನ| ಮೂವರು ಅರೆಸ್ಟ್ Read More »