ಕರಾವಳಿಯ ಬ್ಯೂಟಿ ಅನುಷ್ಕಾ ಶೆಟ್ಟಿ ಮತ್ತೆ ಸಿನಿಮಾ ರಂಗಕ್ಕೆ
ಕರಾವಳಿಯ ಬ್ಯೂಟಿ ಅನುಷ್ಕಾ ಶೆಟ್ಟಿ ಮತ್ತೆ ಸಿನಿಮಾ ರಂಗಕ್ಕೆ Read More »
ಸಮಗ್ರ ನ್ಯೂಸ್: ಚುನಾವಣಾ ಅಖಾಡಕ್ಕೆ ಹ್ಯಾಟ್ರಿಕ್ ಹೀರೋ,‘ಶಿವರಾಜ್ ಕುಮಾರ್ ಎಂಟ್ರಿ ಕೊಟ್ಟಿದ್ದು, ಕಾಂಗ್ರೆಸ್ ನ ಮಧು ಬಂಗಾರಪ್ಪ ಪರ ಮಾ.೩೦ರಂದು ನಟ ಶಿವರಾಜ್ ಕುಮಾರ್ ಪ್ರಚಾರ ಮಾಡಲಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಆನವಟ್ಟಿಯಲ್ಲಿ ಇಂದು ಮಧ್ಯಾಹ್ನ ೧೨ ಕ್ಕೆ ನಟ ಶಿವರಾಜ್ ಕುಮಾರ್ ಹಾಗೂ ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ ರೋಡ್ ಶೋ ನಡೆಸಲಿದ್ದಾರೆ. ಗೀತಾ ಶಿವರಾಜ್ ಕುಮಾರ್ ಈಗಾಗಲೇ ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಪತಿ ಶಿವರಾಜ್ ಕುಮಾರ್ ಪತ್ನಿಗೆ ಸಾಥ್ ನೀಡುತ್ತಿದ್ದಾರೆ. ಮಧು ಬಂಗಾರಪ್ಪ
ಚುನಾವಣಾ ಅಖಾಡಕ್ಕೆ `ಹ್ಯಾಟ್ರಿಕ್ ಹೀರೋ’ಎಂಟ್ರಿ…! Read More »
ಸಮಗ್ರ ನ್ಯೂಸ್: ಮನೆಯ ಮಹಡಿಯಿಂದ ಬಿದ್ದು ಯುವಕನರ್ವ ಸಾವನ್ನಪ್ಪಿರುವ ಘಟನೆ ತಾಲೂಕಿನ ಮಿತ್ತಬಾಗಿಲು ಗ್ರಾಮದ ಕುಕ್ಕಾವು ಎಂಬಲ್ಲಿ ನಡೆದಿದೆ. ಮೃತರನ್ನು ಕುಕ್ಕಾವು ನಿವಾಸಿ ಲಕ್ಷ್ಮಣ ಕುಂಬಾರ ಎಂಬವರ ಪುತ್ರ ಹರೀಶ್ (೩೦) ಎಂದು ಗುರುತಿಸಲಾಗಿದೆ. ಹರೀಶ್ ಅವರು ಏಪ್ರಿಲ್ ೨೧ ರಂದು ನಾರಾಯಣ ಕುಂಬಾರ ಅವರ ಮನೆಯ ಮಹಡಿ ಮೇಲೆ ಕೆಲಸ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಗಂಭೀರ ಗಾಯಗೊಂಡಿದ್ದರು. ತಕ್ಷಣ ಅವರನ್ನು ಉಜಿರೆ ಆಸ್ಪತ್ರೆಗೆ ಸಾಗಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ
ಬೆಳ್ತಂಗಡಿ: ಮಹಡಿಯಿಂದ ಬಿದ್ದು ಯುವಕ ಮೃತ್ಯು Read More »
ಸಮಗ್ರ ನ್ಯೂಸ್: ಕರಾವಳಿಯಲ್ಲಿ ಚುನಾವಣಾ ಕಾವು ಜೋರಾಗಿದ್ದು, ಅಲ್ಲಲ್ಲಿ ರಾಷ್ಟ್ರೀಯ ನಾಯಕರು ಪ್ರಚಾರದಲ್ಲಿ ತೊಡಗಿದ್ದಾರೆ. ಇದೀಗ ಬಿಜಪಿ ರಾಷ್ಟ್ರೀಯ ಅಧ್ಯಕ್ಷ ಅಧ್ಯಕ್ಷ ಜೆಪಿ ನಡ್ಡಾ ಎ.30ರಂದು ಸುಳ್ಯಕ್ಕೆ ಆಗಮಿಸಲಿದ್ದಾರೆ ಎಂದು ತಿಳಿದು ಬಂದಿದೆ. ಬಿಜೆಪಿ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಸುಳ್ಯದಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಜೆಪಿ ನಡ್ಡಾ ಸುಳ್ಯಕ್ಕೆ ಆಗಮಿಸುವುದನ್ನು ಬಿಜೆಪಿ ಮುಖಂಡರು ಖಚಿತ ಪಡಿಸಿದ್ದಾರೆ.
ಎ.30ರಂದು ಸುಳ್ಯಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ Read More »
ಸಮಗ್ರ ಸಮಾಚಾರ: ಸುಳ್ಯದಲ್ಲಿ ಇಂದು ಅಪರಾಹ್ನ ಗುಡುಗು, ಸಹಿತ ಬಾರೀ ಗಾಳಿ ಮಳೆಯಾಗಿದೆ. ಬೆಳಗ್ಗೆ ಯಿಂದಲೇ ಮೋಡ ಕವಿದ ವಾತಾವರಣ ಕಂಡುಬಂದಿದ್ದು ಮಧ್ಯಾಹ್ನ ಮೂರು ಗಂಟೆ ವೇಳೆ ಬಾರೀ ಗಾಳಿ ಸಹಿತ ಮಳೆಯಾಗಿದೆ. ಸುಳ್ಯ ನಗರ ಸೇರಿದಂತೆ ಸುಳ್ಯ, ಕಡಬ ತಾಲೂಕಿನ ಹಲವೆಡೆ ಮಳೆಯಾಗಿದೆ ಎಂದು ತಿಳಿದುಬಂದಿದೆ. ನಿನ್ನೆ ಮಧ್ಯಾಹ್ನ ಹನಿ ಮಳೆಯಾಗಿತ್ತು.
ಸುಳ್ಯದಲ್ಲಿ ಗುಡುಗು ಸಹಿತ ಗಾಳಿ ಮಳೆ Read More »
ಸಮಗ್ರ ನ್ಯೂಸ್: ಸುಳ್ಯದ ಮಾಜಿ ಶಾಸಕ ಕೆ ಕುಶಲರವರ ಮಗ ಸುಧೀರ್ ಬೆಳ್ಳಾಳ್ಕರ್ ರವರು ಇಂದು ಕೆಆರ್ ಎಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಪಕ್ಷದ ಸಿದ್ದಾಂತವನ್ನು ಒಪ್ಪಿ ಸಂಘಟನಾ ಕಾರ್ಯದರ್ಶಿಯಾಗಿ ಸುಧೀರ್ ನೇಮಕಗೊಂಡಿದ್ದಾರೆ. ಪಕ್ಷದ ಸಂಪೂರ್ಣ ಬೆಳವಣಿಗೆಗೆ ಇದು ಪೂರಕವಾಗಲಿದೆ ಎಂದು ಪಕ್ಷದ ವಕ್ತಾರರು ತಿಳಿಸಿದ್ದಾರೆ. ಕೆ.ಆರ್.ಎಸ್ ಪಕ್ಷದ ಅಧ್ಯಕ್ಷರು ಅವಿನಾಶ್ ಕಾರಿಂಜ, ಪ್ರದಾನ ಕಾರ್ಯದರ್ಶಿ ಜೀವನ್ ನಾರ್ಕೋಡು ಮತ್ತು ಸುಚೇತ್ ಮತ್ತು ಅಖಿಲ್ ರವರು ಸುದೀರ್ ರನ್ನು ಬರಮಾಡಿಕೊಂಡರು.
ಸುಳ್ಯ: ಮಾಜಿ ಶಾಸಕ ಕೆ.ಕುಶಲ ಪುತ್ರ ಸುಧೀರ್ ಕೆಆರ್ ಎಸ್ ಪಕ್ಷಕ್ಕೆ ಸೇರ್ಪಡೆ Read More »
ಸಮಗ್ರ ನ್ಯೂಸ್: ಕೊಲ್ಲಮೊಗ್ರ ಯುವಕನೋರ್ವ ಬೆಂಗಳೂರಿನಲ್ಲಿ ಅಪಘಾತಕ್ಕೆ ಬಲಿಯಾದ ಘಟನೆ ಎ.24 ರಂದು ಸಂಭವಿಸಿದೆ. ಕೊಲ್ಲಮೊಗ್ರ ಧರ್ಮಪಾಲ ಗೌಡ ಬಾಳೆಬೈಲು ಮತ್ತು ಶ್ರೀಮತಿ ವಿಮಲಾಕ್ಷಿ ದಂಪತಿಗಳ ಪುತ್ರ ಯತೀಶ್ ಬಾಳೆಬೈಲು ಮೃತಪಟ್ಟ ದುರ್ದೈವಿ. ಎ.24 ರ ಬೆಳಿಗ್ಗೆ ಯತೀಶ್ ರವರು ಬೈಕ್ ನಲ್ಲಿ ಹೋಗುತ್ತಿದ್ದಾಗ ಕಾರೊಂದು ಡಿಕ್ಕಿ ಹೊಡೆದಿರುವುದು ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡ ಯತೀಶ್ ರು ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತ ಪಟ್ಟಿರುವವುದಾಗಿ ತಿಳಿದು ಬಂದಿದೆ. ಅವಿವಾಹಿತರಾಗಿರುವ ಯತೀಶ್ ಅವರು ಬೆಂಗಳೂರಿನ ವಿಮಾನ ನಿಲ್ದಾಣ ಬಳಿ ಉದ್ಯೋಗದಲ್ಲಿದ್ದು,
ಸುಳ್ಯ: ಕೊಲ್ಲಮೊಗ್ರದ ಯುವಕ ಬೆಂಗಳೂರಿನಲ್ಲಿ ಅಪಘಾತಕ್ಕೆ ಬಲಿ Read More »
ಸಮಗ್ರ ನ್ಯೂಸ್: ಚಾರ್ಮಾಡಿ ಘಾಟಿಯ (charmadi ghat) ಅಣ್ಣಪ್ಪ ದೇವಸ್ಥಾನದ ಸಮೀಪ ಒಮ್ಮುಖ ಇಕ್ಕಟ್ಟು ರಸ್ತೆಯಲ್ಲಿ ತಡೆಗೋಡೆ ಕುಸಿಯುವ ಆತಂಕ ಎದುರಾಗಿದೆ. ಚಾರ್ಮಾಡಿ ಘಾಟಿಯಲ್ಲಿ ಬಾರಿ ಕಿರಿದಾದ ರಸ್ತೆ ಇದಾಗಿದ್ದು ಈ ರಸ್ತೆಯಲ್ಲಿ ಒಂದೇ ವಾಹನ ಸಾಗಲು ಆಗುವುದರಿಂದ ಯಾವುದೋ ವಾಹನ ತಡೆಗೋಡೆಗೆ ಡಿಕ್ಕಿ ಹೊಡೆದಿರುವ ಪರಿಣಾಮ ತಡೆಗೋಡೆ ತಳದಿಂದಲೇ ಬಿರುಕು ಬಿಟ್ಟಿದ್ದು ತಡೆಗೊಡೆ ಕುಸಿಯುವ ಸಂಭವವೇ ಹೆಚ್ಚಾಗಿದೆ. ಈ ರಸ್ತೆಯ ಬಲ ಭಾಗದಲ್ಲಿ ಬೃಹತ್ ಬಂಡೆ ಆಕಾಶಕ್ಕೆ ಮುಖ ಮಾಡಿರುವುದರಿಂದ ಈ ಸ್ಥಳದಲ್ಲಿ ರಸ್ತೆ ಮಾಡಲು
ಚಾರ್ಮಾಡಿ ಘಾಟ್: ತಡೆಗೋಡೆ ಬಿರುಕು, ಕುಸಿಯುವ ಭೀತಿ|ದುರಸ್ತಿಗೊಳಿಸುವಂತೆ ವಾಹನ ಚಾಲಕರ ಒತ್ತಾಯ Read More »
Samagra news “ಜನರು ಕೋವಿಡ್ ಬಳಿಕ ಬೆಲೆ ಏರಿಕೆಯಿಂದ ತತ್ತರಿಸಿಹೋಗಿದ್ದಾರೆ. ಅದೆಷ್ಟೋ ವಿದ್ಯಾವಂತ ಯುವಜನತೆ ಉದ್ಯೋಗ ಕಳೆದುಕೊಂಡಿದ್ದಾರೆ. ಬಿಜೆಪಿಯವರು ತಮ್ಮದು ಡಬಲ್ ಇಂಜಿನ್ ಸರಕಾರ ಅಂತ ಹೇಳ್ತಾರೆ. ಆದರೆ ಅದರ ಇಂಜಿನ್ ಮಾತ್ರ ಇಲ್ಲಿದೆ, ಬೋಗಿ ದೂರದ ಯುಪಿ, ಗುಜರಾತ್ ಕಡೆಗೆ ಹೊರಟುಹೋಗಿದೆ. ಅಭಿವೃದ್ಧಿ ಮಾಡುವುದನ್ನು ಬಿಟ್ಟು ಸಮಾಜದಲ್ಲಿ ಜಾತಿ ಮತಗಳ ಮಧ್ಯೆ ಹುಳಿ ಹಿಂಡುವ ಕೆಲಸವನ್ನು ಬಿಜೆಪಿ ನಾಯಕರು ಮಾಡಿದ್ದಾರೆ. ಈ ಬಾರಿ ಜನರು ಬಿಜೆಪಿ ಸರಕಾರದಿಂದ ಭ್ರಮ ನಿರಸನಗೊಂಡು ಕಾಂಗ್ರೆಸ್ ಕೈಹಿಡಿಯಲಿದ್ದಾರೆ. ಈ ಮೂಲಕ
Samagra news: ನಿವೃತ ಎಸ್ಪಿ ಮಗನೋರ್ವ ವರ್ತಕನಿಗೆ ಗುಂಡು ಹೊಡೆದ ಘಟನೆ ವಿರಾಜಪೇಟೆ ತಾಲೂಕು ಅಮ್ಮತ್ತಿಯಲ್ಲಿ ನಡೆದಿದೆ. ನಿವೃತ ಎಸ್ಪಿ ನೆಲ್ಲಮಕ್ಕಡ ಚಿನ್ನಪ್ಪ ಎಂಬುವವರ ಪುತ್ರ ರಂಜಿತ್ ಎಂಬಾತ ಪ್ರಕರಣ ಅರೋಪಿ. ಈತ ಬೋಪಣ್ಣ ಎಂಬ ವರ್ತಕ ಮೇಲೆ ಸರ್ವಿಸ್ ರಿವಾಲ್ವರ್ ನಿಂದ ಮೂರು ಸುತ್ತಿನ ಗುಂಡು ಹಾರಿಸಿದ್ದಾನೆ. ಈ ವೇಳೆ ಕೂದುಲೆಳೆಯಲ್ಲಿ ಪ್ರಾಣಾಪಾಯದಿಂದ ವರ್ತಕ ಬೋಪಣ್ಣ ಪಾರಾಗಿದ್ದಾರೆ. ಆರೋಪಿ ರಂಜಿತ್ ಸಣ್ಣಪುಟ್ಟ ಗಾಯಗೊಂಡಿದ್ದು ಅಮ್ಮತ್ತಿ ಆಸ್ಪತ್ರೆಯಲ್ಲಿ ಆರೋಪಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನೂ ಆಸ್ಪತ್ರೆಯಲ್ಲೇ ಪೊಲೀಸರು ಬೀಡುಬಿಟ್ಟಿದ್ದಾರೆ
ವಿರಾಜಪೇಟೆ: ವರ್ತಕನಿಗೆ ಗುಂಡು ಹೊಡೆದ ನಿವೃತ ಎಸ್ಪಿ ಮಗ Read More »