ಸಮಗ್ರ ಸಮಾಚಾರ

ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಇಲ್ಲಿ ತಿಳಿಯಿರಿ

ಸಮಗ್ರ ನ್ಯೂಸ್: ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆಯ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಮಾ.31ರಂದು ಬಿಡುಗಡೆ ಮಾಡಿದೆ. ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಇಲಾಖೆ ಅಧಿಕೃತ ವೆಬ್‌ಸೈಟ್‌ಗೆ https://result.dkpucpa.com/ ಭೇಟಿ ನೀಡಿ ಪಡೆಯಬಹುದಾಗಿದೆ. ವಿದ್ಯಾರ್ಥಿಗಳು ಫಲಿತಾಂಶವನ್ನು ಚೆಕ್ ಮಾಡಲು ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕ ನಮೂದಿಸುವ ಮೂಲಕ ಫಲಿತಾಂಶ ಪಡೆಯಬಹುದಾಗಿದೆ.

ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಇಲ್ಲಿ ತಿಳಿಯಿರಿ Read More »

ಅಡಿಕೆ ಬೆಳೆಗಾರರಿಗೆ ಸಿಹಿ ಸುದ್ದಿ| ಕೆಲವೇ ಸೆಕೆಂಡುಗಳಲ್ಲಿ ಅಡಿಕೆ ಮರ ಏರಲು ಬಂದಿದೆ ವಿನೂತನ ‘ಟ್ರೀ ಸ್ಕೂಟರ್’!| ವಾರಕ್ಕೆ ಉಳಿತಾಯವಾಗುತ್ತೆ ₹ 24 ಸಾವಿರ!!

ಸಮಗ್ರ ನ್ಯೂಸ್: ಮುಂದಿನ ದಿನಗಳಲ್ಲಿ ಕೆಲಸ ಮಾಡುವುದಕ್ಕೆ ಕಾರ್ಮಿಕರು ಸಿಗುವುದಿಲ್ಲ ಎಂಬುದು ಎಲ್ಲ ರೈತರ ಅಳಲು. ಇದಕ್ಕೆ ಪರಿಹಾರ ಎನ್ನುವಂತೆ ಮಂಗಳೂರು ಮೂಲದ ನಿವಾಸಿಯೊಬ್ಬರು ವಿನೂತನವಾದ ‘ಟ್ರೀ ಸ್ಕೂಟರ್’ ಕಂಡುಹಿಡಿದಿದ್ದಾರೆ. ಕಾರ್ಮಿಕ ಶಕ್ತಿ ಮತ್ತು ಅಡಿಕೆ ಮರಗಳ ಅಕಾಲಿಕ ನಿರ್ವಹಣೆಯು ಕೃಷಿ ಆದಾಯದ ಮೇಲೆ ಪರಿಣಾಮ ಬೀರುತ್ತದೆ. ಈ ಅಂತರವನ್ನು ಮನಗಂಡ ಗಣಪತಿ ಭಟ್ ಅವರು ರೈತರಿಗೆ ಬಳಸಲು ಸುಲಭವಾದ ಟ್ರೀ ಸ್ಕೂಟರ್ ಅನ್ನು ಆವಿಷ್ಕರಿಸಿದ್ದಾರೆ, ಇದು ಕಾರ್ಮಿಕರ ಮೇಲೆ ಅವಲಂಬನೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ

ಅಡಿಕೆ ಬೆಳೆಗಾರರಿಗೆ ಸಿಹಿ ಸುದ್ದಿ| ಕೆಲವೇ ಸೆಕೆಂಡುಗಳಲ್ಲಿ ಅಡಿಕೆ ಮರ ಏರಲು ಬಂದಿದೆ ವಿನೂತನ ‘ಟ್ರೀ ಸ್ಕೂಟರ್’!| ವಾರಕ್ಕೆ ಉಳಿತಾಯವಾಗುತ್ತೆ ₹ 24 ಸಾವಿರ!! Read More »

ಸುಳ್ಯ: ಹೃದಯಾಘಾತಕ್ಕೆ ಯುವಕ‌ ಬಲಿ

ಸಮಗ್ರ ನ್ಯೂಸ್: ಎದೆನೋವಿನಿಂದ ಆಸ್ಪತ್ರೆಗೆ ದಾಖಲಾದ ಯುವಕನೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಪಂಬೆತ್ತಾಡಿ ಗ್ರಾಮದಿಂದ ವರದಿಯಾಗಿದೆ. ಪಂಬೆತ್ತಾಡಿ ಗ್ರಾಮದ ಎದುರುಮಜಲು ಮಹಾಲಿಂಗ ನಾಯ್ಕ ರವರ ಪುತ್ರ ಜಗದೀಶ್ (33) ಮೃತ ಪಟ್ಟ ದುರ್ದೈವಿ. ಮೂರು ದಿನಗಳ ಹಿಂದೆ ಎದೆ ನೋವು ಕಾಣಿಸಿಕೊಂಡಿದ್ದು, ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮಾ.23ರಂದು ಕೊನೆಯುಸಿರೆಳೆದಿದ್ದಾರೆ.

ಸುಳ್ಯ: ಹೃದಯಾಘಾತಕ್ಕೆ ಯುವಕ‌ ಬಲಿ Read More »

ಸುಳ್ಯ: ಮತದಾನ ಬಹಿಷ್ಕಾರಕ್ಕೆ ನಿರ್ಧರಿಸಿದ ಅರಮನೆಗಯ ನಿವಾಸಿಗಳು| ಬ್ಯಾನರ್ ಹರಿದವರಿಗೆ ಕೊರಗಜ್ಜ ಶಿಕ್ಷೆ ನೀಡಲಿ ಎಂದು ಪ್ರಾರ್ಥನೆ| ಕೋಟಿ ಲೆಕ್ಕದ ಅನುದಾನ ಪೊಳ್ಳು ಭರವಸೆಯೇ?

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ಮರ್ಕಂಜ ಗ್ರಾಮದ ಅರಮನೆಗಯ ಎಂಬಲ್ಲಿ ಸುಮಾರು 30 ವರ್ಷಗಳಿಂದ ಬೇಡಿಕೆಯ ಸೇತುವೆಯನ್ನು ನಿರ್ಮಿಸದ ಹಿನ್ನಲೆ ಆ ಭಾಗದ ಜನರು ಇದೀಗ ಮತದಾನ ಬಹಿಷ್ಕಾರಕ್ಕೆ ಮುಂದಾಗಿದ್ದಾರೆ. ಅರಮನೆಗಯ ಎಂಬ ಊರು ಹಳ್ಳಿ ಪ್ರದೇಶವಾಗಿದ್ದು ಮರ್ಕಂಜ ಹಾಗೂ ಅಂರತೋಡು ಗ್ರಾಮಕ್ಕೆ ಸೇರಿಕೊಂಡಿರುವ ಊರಾಗಿದೆ. ಈ ಭಾಗದಲ್ಲಿ ಸುಮಾರು ನೂರಕ್ಕಿಂತ ಹೆಚ್ಚು ಜನರು ವಾಸ ಮಾಡುತ್ತಿದ್ದಾರೆ. ಈ ಊರಿನ ಮಧ್ಯದಲ್ಲಿ ನದಿಯಿದ್ದು, ಮಳೆಗಾಲದಲ್ಲಿ ಉಕ್ಕಿ ಹರಿಯುತ್ತದೆ. ಆ ಸಮಯದಲ್ಲಿ ಅಲ್ಲಿಯ ಜನರು ಸೇರಿದಂತೆ ಶಾಲಾ ಮಕ್ಕಳ

ಸುಳ್ಯ: ಮತದಾನ ಬಹಿಷ್ಕಾರಕ್ಕೆ ನಿರ್ಧರಿಸಿದ ಅರಮನೆಗಯ ನಿವಾಸಿಗಳು| ಬ್ಯಾನರ್ ಹರಿದವರಿಗೆ ಕೊರಗಜ್ಜ ಶಿಕ್ಷೆ ನೀಡಲಿ ಎಂದು ಪ್ರಾರ್ಥನೆ| ಕೋಟಿ ಲೆಕ್ಕದ ಅನುದಾನ ಪೊಳ್ಳು ಭರವಸೆಯೇ? Read More »

ಅರಂತೋಡು – ಅಡ್ತಲೆ ರಸ್ತೆ ಕಾಮಗಾರಿ ಆರಂಭ| ನಾಗರಿಕ ‌ಹಿತರಕ್ಷಣಾ ವೇದಿಕೆಯ ಹೋರಾಟಕ್ಕೆ ಮಣಿದ ಜನಪ್ರತಿನಿಧಿಗಳು

ಸಮಗ್ರ ನ್ಯೂಸ್: ಅರಂತೋಡು – ಅಡ್ತಲೆ ರಸ್ತೆ ಕಾಮಗಾರಿ ಆರಂಭವಾಗದಿದ್ದರೆ ಅಡ್ತಲೆ ವಾರ್ಡ್ ವ್ಯಾಪ್ತಿಯಲ್ಲಿ ಮಾ.23ರಿಂದ ನೋಟ ಅಭಿಯಾನದ ಜಾಗೃತಿಯ ಎಚ್ಚರಿಕೆ ನೀಡಿದ್ದ ಬೆನ್ನಲ್ಲೇ ಅರಂತೋಡು – ಅಡ್ತಲೆ ರಸ್ತೆ ಕಾಮಗಾರಿ ಆರಂಭಗೊಂಡಿದೆ. ರಸ್ತೆ ಅಭಿವೃದ್ಧಿಗೆ ಆಗ್ರಹಿಸಿ ಅಡ್ತಲೆಯ ನಾಗರಿಕ ‌ಹಿತರಕ್ಷಣಾ ವೇದಿಕೆ ಹೋರಾಟ ನಡೆಸುತ್ತಾ ಬಂದಿದ್ದು ಅದರ ಪರಿಣಾಮ ಆರಂಭದಲ್ಲಿ ರೂ.1 ಕೋಟಿ ಅನುದಾನ ಬಿಡುಗಡೆ ಗೊಂಡು‌ ಅರಂತೋಡಿನಿಂದ ಅಡ್ತಲೆ ರಸ್ತೆಯ 1357 ಮೀಟರ್ ಕಾಮಗಾರಿ ನಡೆದಿದೆ. ಆದಾದ ಬಳಿಕ ಕಾಮಗಾರಿ ನಿಲ್ಲಿಸಲಾಗಿತ್ತು. ಆದರೆ ಮುಂದಿನ

ಅರಂತೋಡು – ಅಡ್ತಲೆ ರಸ್ತೆ ಕಾಮಗಾರಿ ಆರಂಭ| ನಾಗರಿಕ ‌ಹಿತರಕ್ಷಣಾ ವೇದಿಕೆಯ ಹೋರಾಟಕ್ಕೆ ಮಣಿದ ಜನಪ್ರತಿನಿಧಿಗಳು Read More »

ಕೊಟ್ಟಿಗೆಹಾರ: ಕಳ್ಳಭಟ್ಟಿ ಅಡ್ಡೆಯ ಮೇಲೆ ಅಬಕಾರಿ ಪೊಲೀಸರ ದಾಳಿ

ಸಮಗ್ರ ನ್ಯೂಸ್ : ಕೊಟ್ಟಿಗೆಹಾರ, ಬಿದರಹಳ್ಳಿಯ ಕಳ್ಳಭಟ್ಟಿ ಅಡ್ಡೆಯ ಮೇಲೆ ಅಬಕಾರಿ ಪೊಲೀಸರು ದಾಳಿ ನಡೆಸಿದ್ದಾರೆ. ಬಿದರಹಳ್ಳಿಯ ಮಂಜುಳ ಎಂಬುವವರ ಮನೆಯ ಮೇಲೆ ದಾಳಿ‌ ನಡೆಸಿದ್ದು 15 ಲೀ ಬೆಲ್ಲದ ಕೊಳೆ, 6 ಲೀ ಕಳ್ಳಭಟ್ಟಿಯನ್ನು ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ‌. ಕಾರ್ಯಾಚರಣೆಯಲ್ಲಿ ಮೂಡಿಗೆರೆ ಉಪ ವಿಭಾಗದ ಅಬಕಾರಿ ನಿರೀಕ್ಷಕರಾದ ಲೋಕೇಶ್ ಅಬಕಾರಿ ಪೇದೆಯಾದ ರಮೇಶ್ ವಾಹನ ಚಾಲಕರಾದ ಪ್ರಸನ್ನ ಕುಮಾರ್ ಹಾಜರಿದ್ದರು.

ಕೊಟ್ಟಿಗೆಹಾರ: ಕಳ್ಳಭಟ್ಟಿ ಅಡ್ಡೆಯ ಮೇಲೆ ಅಬಕಾರಿ ಪೊಲೀಸರ ದಾಳಿ Read More »

ಬಿ.ಬಿ ನಿಂಗಯ್ಯಗೆ ಟಿಕೇಟ್ ನೀಡಲು ಸ್ವಪಕ್ಷದಲ್ಲಿ ವಿರೋಧ|ಮೂಡಿಗೆರೆ ಜೆಡಿಎಸ್‍ನಲ್ಲಿ ಭಿನ್ನಮತ ಸ್ಪೋಟ

ಸಮಗ್ರ ನ್ಯೂಸ್:ಮೂಡಿಗೆರೆ ಜೆಡಿಎಸ್‍ನಲ್ಲಿ ಭಿನ್ನಮತ ಸ್ಪೋಟಗೊಂಡಿದ್ದು ಸ್ವಪಕ್ಷದ ಮುಖಂಡರು, ಕಾರ್ಯಕರ್ತರು ಬಿ.ಬಿ ನಿಂಗಯ್ಯ ಅವರಿಗೆ ಟಿಕೇಟ್ ನೀಡಲು ವಿರೋಧ ವ್ಯಕ್ತಪಡಿಸಿದ್ದಾರೆ. ಸೋಮವಾರ ಬಣಕಲ್‍ನಲ್ಲಿ ಜೆಡಿಎಸ್ ಪಕ್ಷದ ಬಿ.ಬಿ ನಿಂಗಯ್ಯ ವಿರೋಧಿ ಬಣದಿಂದ ಬಹಿರಂಗ ಸಭೆ ನಡೆದಿದ್ದು ಸಭೆಯಲ್ಲಿ ಬಿ.ಬಿ ನಿಂಗಯ್ಯಗೆ ಟಿಕೇಟ್ ನೀಡಲು ಸ್ವಪಕ್ಷದಲ್ಲಿ ವಿರೋಧ ವ್ಯಕ್ತಪಡಿಸಿದ್ದಾರೆ. ಸಭೆಯಲ್ಲಿ ಮಾತನಾಡಿದ ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಲಕ್ಷ್ಮಣಗೌಡ ಮಾತನಾಡಿ, ಬಿ.ಬಿ ನಿಂಗಯ್ಯ ಅವರು ಕಾರ್ಯಕರ್ತರಿಗೆ ಸರಿಯಾಗಿ ಸ್ಪಂದಿಸುವುದಿಲ್ಲ. ಶಾಸಕರಾಗಿದ್ದ ಸಂದರ್ಭದಲ್ಲಿ ತಾಲ್ಲೂಕಿಗೆ ಯಾವುದೇ ಕೊಡುಗೆ ನೀಡಲಿಲ್ಲ. ಹೆಚ್.ಡಿ ಕುಮಾರಸ್ವಾಮಿ

ಬಿ.ಬಿ ನಿಂಗಯ್ಯಗೆ ಟಿಕೇಟ್ ನೀಡಲು ಸ್ವಪಕ್ಷದಲ್ಲಿ ವಿರೋಧ|ಮೂಡಿಗೆರೆ ಜೆಡಿಎಸ್‍ನಲ್ಲಿ ಭಿನ್ನಮತ ಸ್ಪೋಟ Read More »

ಸುರತ್ಕಲ್: “ಯುವಶಕ್ತಿಯ ಸಮಾಜಪರ ಕಾಳಜಿಯನ್ನು ಬೆಂಬಲಿಸಬೇಕಿದೆ”
-ಇನಾಯತ್ ಅಲಿ

ಸಮಗ್ರ ನ್ಯೂಸ್: ಸೇವಾಶಿಖರ್ ಫೌಂಡೇಶನ್ ಮಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಹಾಗೂ ಮಂಗಳೂರು ತಾಲೂಕು ಕಬಡ್ಡಿ ಅಸೋಸಿಯೇಷನ್ ಇದರ ಸಹಯೋಗದಲ್ಲಿ “ಕುಡ್ಲ ಕಬಡ್ಡಿ-2023” ಕ್ರೀಡಾಕೂಟ ಇತ್ತೀಚಿಗೆ ನಡೆಯಿತು. ಸಮಾರೋಪ ಸಮಾರಂಭದಲ್ಲಿ ಮಾತಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರು, “ಯುವಜನರು ಸೇವಾಶಿಖರ್ ನಂತಹ ಸಂಘಟನೆಯನ್ನು ಕಟ್ಟಿಕೊಂಡು ನಶಿಸುತ್ತಿರುವ ಕಬಡ್ಡಿಯಂತಹ ಗ್ರಾಮೀಣ ಕ್ರೀಡೆಯನ್ನು ಇನ್ನಷ್ಟು ಬೆಳೆಸಲು ಪಣ ತೊಡಬೇಕು. ಸಮಾಜ ಸೇವೆಯಲ್ಲಿ ಹೆಸರು ಪಡೆದಿರುವ ಸಂಘಟನೆಗೆ ನಾವೆಲ್ಲರೂ ಬೆಂಬಲ ನೀಡಬೇಕು” ಎಂದರು. ಕ್ಯಾಪ್ಟನ್

ಸುರತ್ಕಲ್: “ಯುವಶಕ್ತಿಯ ಸಮಾಜಪರ ಕಾಳಜಿಯನ್ನು ಬೆಂಬಲಿಸಬೇಕಿದೆ”
-ಇನಾಯತ್ ಅಲಿ
Read More »

ಪುತ್ತೂರು: ಹಾವಿನ ಕಡಿತದ ವಿಷ ಹೀರಿ ಅಮ್ಮನ ರಕ್ಷಿಸಿದ ಮಗಳು| ಜೀವ ಒತ್ತೆ ಇಟ್ಟು ತಾಯಿಯ ಕಾಪಾಡಿದ ಧೀರ ಪುತ್ರಿ

ಸಮಗ್ರ ನ್ಯೂಸ್ : ಅಮ್ಮನಿಗೆ ಹಾವು ಕಡಿದ ವೇಳೆ ಆಕೆಯ ಜೀವ ಉಳಿಸಲು ಆಕೆ ಮಗಳೊಬ್ಬಳು ಸಾಹಸ ಮೆರೆದ ಘಟನೆಯೊಂದು ಪುತ್ತೂರು ತಾಲೂಕಿನ ಮಾಡಾವು ಎಂಬಲ್ಲಿಂದ ವರದಿಯಾಗಿದೆ. ಮಾಡಾವಿನ ಶ್ರಮ್ಯ ರೈ ಎಂಬ ಯುವತಿಯೊಬ್ಬಳು ತನ್ನ ಅಮ್ಮನಿಗೆ ಹಾವು ಕಡಿದ ವೇಳೆ ಧೈರ್ಯ ತುಂಬಿ ಬಾಯಿಂದ ಕಚ್ಚಿ ವಿಷ ತೆಗೆದು ಅಮ್ಮನ ಜೀವವನ್ನು ಕಾಪಾಡಿದ್ದಾಳೆ. ಇದು ಕರಾವಳಿಯಲ್ಲಿ ಭಾರೀ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಕೆಯ್ಯೂರು ಗ್ರಾಮ ಪಂಚಾಯತ್‌ ಸಮಸ್ಯೆ ಮಮತಾ ರೈ ಎಂಬವರು ತಮ್ಮ ಅಡಿಕೆ ತೋಟದಲ್ಲಿ ಕೆಲಸ

ಪುತ್ತೂರು: ಹಾವಿನ ಕಡಿತದ ವಿಷ ಹೀರಿ ಅಮ್ಮನ ರಕ್ಷಿಸಿದ ಮಗಳು| ಜೀವ ಒತ್ತೆ ಇಟ್ಟು ತಾಯಿಯ ಕಾಪಾಡಿದ ಧೀರ ಪುತ್ರಿ Read More »

ಭಾರತ ಕೇವಲ ಎರಡ್ಮೂರು ಮಂದಿಗೆ ಸೇರಿದ್ದಲ್ಲ; ಅದು ಎಲ್ಲಾ ಭಾರತೀಯರದ್ದು – ರಾಹುಲ್ ಗಾಂಧಿ

ಸಮಗ್ರ ನ್ಯೂಸ್: ಈ ದೇಶ ಎಲ್ಲರಿಗೂ ಸೇರಿದ್ದು, ಯಾರೋ 2ರಿಂದ 3 ಮಂದಿಗೆ ಸೇರಿದ್ದಲ್ಲ ಅಥವಾ ಅದಾನಿಯವರದ್ದಲ್ಲ. ಬಿಜೆಪಿಯ ಮಿತ್ರರಾದ ಆಯ್ದ ಜನರಿಗೆ ಎಲ್ಲಾ ಲಾಭಗಳು ಸಿಗುತ್ತಿವೆ. ಇದುವೇ ಭ್ರಷ್ಟಾಚಾರಕ್ಕೆ ಕಾರಣ. ಕರ್ನಾಟಕದ ಸರ್ಕಾರವು ದೇಶದಲ್ಲೇ ಅತ್ಯಂತ ಭ್ರಷ್ಟ ಸರ್ಕಾರ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರಗಳ ವಿರುದ್ಧ ವಾಗ್ದಾಳಿ ನಡೆಸಿದರು. ಬೆಳಗಾವಿಯ ಸಿಪಿಎಡ್​ ಮೈದಾನದಲ್ಲಿ ನಡೆದ ‘ಯುವ ಕ್ರಾಂತಿ’ ಸಮಾವೇಶದಲ್ಲಿ ಮಾತನಾಡಿದ ಅವರು, ‘ಭಾರತ ಅದಾನಿಯವರದ್ದಲ್ಲ. ಬದಲಿಗೆ ರೈತರ,

ಭಾರತ ಕೇವಲ ಎರಡ್ಮೂರು ಮಂದಿಗೆ ಸೇರಿದ್ದಲ್ಲ; ಅದು ಎಲ್ಲಾ ಭಾರತೀಯರದ್ದು – ರಾಹುಲ್ ಗಾಂಧಿ Read More »