ಸಮಗ್ರ ಸಮಾಚಾರ

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್| ರಾಜ್ಯದಲ್ಲಿ 3395 ಪೊಲೀಸ್ ಕಾನ್ಸ್ ಟೇಬರ್ ನೇಮಕಾತಿಗೆ ಅಧಿಸೂಚನೆ

ಸಮಗ್ರ ನ್ಯೂಸ್: ಖಾಕಿ ಧರಿಸಿ ನಾಡಿನ ಸೇವೆ ಮಾಡಬೇಕು ಅಂದುಕೊಂಡಿರೋ ರಾಜ್ಯದ ಸುವರ್ಣಾವಕಾಶ ಕಾಯ್ತಿದ್ದ ಯುವಜನತೆಗೆ ಕರ್ನಾಟಕ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದೆ. ಒಟ್ಟು 3,395 ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗಳ ಬೃಹತ್ ನೇಮಕಾತಿಗೆ ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ. ಈ ಬಾರಿ ವಿಶೇಷ ಏನೆಂದರೆ, ಇಡೀ ನೇಮಕಾತಿ ಪ್ರಕ್ರಿಯೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸುತ್ತಿದ್ದು, ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಯಾವ್ಯಾವ ವಿಭಾಗದಲ್ಲಿ ಎಷ್ಟೆಷ್ಟು ಹುದ್ದೆಗಳು ಖಾಲಿ ಇವೆ? ಅರ್ಜಿ ಸಲ್ಲಿಕೆ ಹೇಗೆ? ವಯೋಮಿತಿ ಸಡಿಲಿಕೆ […]

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್| ರಾಜ್ಯದಲ್ಲಿ 3395 ಪೊಲೀಸ್ ಕಾನ್ಸ್ ಟೇಬರ್ ನೇಮಕಾತಿಗೆ ಅಧಿಸೂಚನೆ Read More »

ನಾರ್ವೆ ಚೆಸ್ ಟೂರ್ನಿ| ಇತಿಹಾಸ ಬರೆದ ಆರ್ ಪ್ರಜ್ಞಾನಂದ

ಸಮಗ್ರ ನ್ಯೂಸ್: ಭಾರತದ ಯುವ ಗ್ರಾಂಡ್‌ಮಾಸ್ಟರ್ ಆರ್. ಪ್ರಜ್ಞಾನಂದ (R Praggnanandhaa) ಅವರು ಜಾಗತಿಕ ಚೆಸ್ ಇತಿಹಾಸದಲ್ಲಿ ಮತ್ತೊಂದು ಸುವರ್ಣ ಅಧ್ಯಾಯ ಬರೆದಿದ್ದಾರೆ. ಪ್ರತಿಷ್ಠಿತ ನಾರ್ವೆ ಚೆಸ್ ಟೂರ್ನಿಯಲ್ಲಿ ಪ್ರಶಸ್ತಿ ಮುಡಿಗೇರಿಸಿಕೊಳ್ಳುವ ಮೂಲಕ, ಈ ಸಾಧನೆ ಮಾಡಿದ ಭಾರತದ ಅತ್ಯಂತ ಮೊದಲ ಚೆಸ್ ಆಟಗಾರ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದಾರೆ. ಶುಕ್ರವಾರ ನಡೆದ ರೋಮಾಂಚನಕಾರಿ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡಿದ ಅವರು ಐತಿಹಾಸಿಕ ವಿಜಯ ಪತಾಕೆ ಹಾರಿಸಿದರು. ಕೇವಲ ಇಪ್ಪತ್ತು ವರ್ಷದ ಈ ಯುವ ಚೆಸ್ ತಾರೆ,

ನಾರ್ವೆ ಚೆಸ್ ಟೂರ್ನಿ| ಇತಿಹಾಸ ಬರೆದ ಆರ್ ಪ್ರಜ್ಞಾನಂದ Read More »

ಕಾಕ್ರೋಚ್ ಜನತಾ ಪಾರ್ಟಿಯಿಂದ ಇಂದು ನವದೆಹಲಿಯಲ್ಲಿ ಪ್ರತಿಭಟನೆ| ಶಿಕ್ಷಣ ಸಚಿವರ ರಾಜೀನಾಮೆ ಆಗ್ರಹಿಸಿ ಹೋರಾಟ

ಸಮಗ್ರ ನ್ಯೂಸ್: ‘ಕಾಕ್ರೋಚ್ ಜನತಾ ಪಾರ್ಟಿ’ ಇಂದು (ಜೂನ್ 6) ನವದೆಹಲಿಯ ಜಂತರ್ ಮಂತರ್‌ನಲ್ಲಿ ತನ್ನ ಮೊದಲ ಸಾರ್ವಜನಿಕ ಪ್ರತಿಭಟನೆಯನ್ನು ನಡೆಸಲು ಸಜ್ಜಾಗಿದೆ. ಈ ಪ್ರತಿಭಟನೆಗೆ ಮುನ್ನ, ಗುಂಪು ಭಾಗವಹಿಸುವವರಿಗಾಗಿ ‘ಮಾಡಬೇಕಾದ ಮತ್ತು ಮಾಡಬಾರದ ಕೆಲಸಗಳ’ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಭಾಗವಹಿಸುವವರು ರಾಷ್ಟ್ರಧ್ವಜವನ್ನು ಹೊತ್ತು ತರಲು, ಸನ್‌ಸ್ಕ್ರೀನ್ ಹಚ್ಚಿಕೊಳ್ಳಲು, ಟೋಪಿಗಳನ್ನು ಧರಿಸಲು, ಸಾಕಷ್ಟು ನೀರು ಕುಡಿದು ಹೈಡ್ರೀಕರಿಸಿಕೊಳ್ಳಲು ಮತ್ತು ಪ್ರತಿಭಟನೆಯ ಘಟನೆಗಳನ್ನು ವಿಡಿಯೋ ರೆಕಾರ್ಡ್ ಮಾಡಲು ಸೂಚಿಸಲಾಗಿದೆ. ಪಾರ್ಟಿಯ ಸ್ಥಾಪಕ ಅಭಿಜಿತ್ ದಿಪ್ಕೆ, ಪ್ರತಿಭಟನೆಯಲ್ಲಿ ಭಾಗವಹಿಸಲು ಭಾರತಕ್ಕೆ

ಕಾಕ್ರೋಚ್ ಜನತಾ ಪಾರ್ಟಿಯಿಂದ ಇಂದು ನವದೆಹಲಿಯಲ್ಲಿ ಪ್ರತಿಭಟನೆ| ಶಿಕ್ಷಣ ಸಚಿವರ ರಾಜೀನಾಮೆ ಆಗ್ರಹಿಸಿ ಹೋರಾಟ Read More »

ಕರ್ನಾಟಕ ಪ್ರವೇಶಿಸಿದ ಮುಂಗಾರು| ಈ ಜಿಲ್ಲೆಗಳಲ್ಲಿ ವ್ಯಾಪಕ ಮಳೆ‌ ಸಾಧ್ಯತೆ

ಸಮಗ್ರ ನ್ಯೂಸ್: ಕೇರಳಕ್ಕೆ ಮುಂಗಾರು ಕಾಲಿಟ್ಟಿದ್ದು, ದೇಶಾದ್ಯಂತ ಮಳೆ ಚುರುಕು ಕಾಣುತ್ತಿದೆ. ಕರ್ನಾಟಕದಲ್ಲಿಯೂ ಹಲವು ಜಿಲ್ಲೆಗಳಲ್ಲಿ ಮುಂಗಾರು ಮಳೆ ವಾತಾವರಣ ಸೃಷ್ಟಿಯಾಗಿದೆ. ಇಂದು ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಂದೆರಡು ಸ್ಥಳಗಳಲ್ಲಿ ಭಾರಿಯಿಂದ ಅತಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಉತ್ತರ ಒಳನಾಡಿನ ಧಾರವಾಡ, ಗದಗ, ಹಾವೇರಿ, ಬೆಳಗಾವಿ ಜಿಲ್ಲೆಗಳಲ್ಲಿ ಒಂದೆರಡು ಸ್ಥಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ. ಇನ್ನು ಬಾಗಲಕೋಟೆ, ಬೀದರ್‌, ಕೊಪ್ಪಳ, ಕಲಬುರ್ಗಿ, ರಾಯಚೂರು,

ಕರ್ನಾಟಕ ಪ್ರವೇಶಿಸಿದ ಮುಂಗಾರು| ಈ ಜಿಲ್ಲೆಗಳಲ್ಲಿ ವ್ಯಾಪಕ ಮಳೆ‌ ಸಾಧ್ಯತೆ Read More »

ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟ

samagra job news : 3,395 ಪೊಲೀಸ್ ಕಾನ್‌ಸ್ಟೇಬಲ್ (Police Constable) ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 2,266 ಪುರುಷ, 755 ಮಹಿಳಾ, 257 ಸೇವಾನಿರತ ಪುರುಷ, 82 ಸೇವಾನಿರತ ಮಹಿಳಾ, 35 ತೃತೀಯಲಿಂಗ ಅಭ್ಯರ್ಥಿಗಳ ಹುದ್ದೆಗಳು ಖಾಲಿ ಇವೆ. ಜೂನ್ 8 ರಿಂದ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದು. ಅರ್ಜಿ ಸಲ್ಲಿಸಲು ಜುಲೈ 3 ಕೊನೆ ದಿನ. ಶುಲ್ಕ ಪಾವತಿ ಮಾಡಲು ಜು.4 ಕೊನೆ ದಿನವಾಗಿದೆ.

ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟ Read More »

ಬಿಜೆಪಿಗೆ ಮಗ್ಗುಲ ಮುಳ್ಳಾದ ಸಿಎಂ ನಡೆ| ಧರ್ಮ, ಸಂಪ್ರದಾಯ ಪಾಲಿಸುವ ಡಿಕೆಶಿ ವಿರುದ್ದ ಇನ್ನು ಹೇಗೆ ಹೋರಾಟ ಮಾಡುತ್ತೆ ಕೇಸರಿ ಪಡೆ?

ಸಮಗ್ರ ನ್ಯೂಸ್: ಬಹುಷಃ ಬಿಜೆಪಿಯ ನಾಯಕರು ಇಷ್ಟೊಂದು ಸಂಪ್ರದಾಯಗಳನ್ನು ಪಾಲನೆ ಮಾಡುತ್ತಾರೋ ಗೊತ್ತಿಲ್ಲ, ಡಿಕೆ ಶಿವಕುಮಾರ್ ಅವರು ಸಿಎಂ ಆಗುವುದಕ್ಕಿಂದ ಮೊದಲು ಹಾಗೂ ನಂತರದಲ್ಲೂ ಧಾರ್ಮಿಕ ಸಂಪ್ರದಾಯಗಳನ್ನು ಹಾಗೂ ದೈವ ಭಕ್ತಿಯ ಉತ್ಕೃಷ್ಟತೆಯನ್ನು ಪ್ರದರ್ಶನ ಮಾಡಿದ್ದಾರೆ. ಈ ಮೂಲಕ ನಾನೊಬ್ಬ ಅಪ್ಪಟ ದೈವ ಭಕ್ತ ಎಂಬುವುದನ್ನು ಸಾಬೀತು ಮಾಡಿದ್ದಾರೆ. ಹೀಗಿರುವಾಗ ಡಿಕೆ ಶಿವಕುಮಾರ್ ಅವರನ್ನು ಬಿಜೆಪಿ ನಾಯಕರು ಟಾರ್ಗೆಟ್ ಮಾಡುವಾಗ ಹಿಂದೂ ವಿರೋಧಿ ಎನ್ನಲು ಸಾಧ್ಯವಿಲ್ಲ. ಹಿಂದುತ್ವ ಹೋರಾಟ ಮುಂದಿಟ್ಟುಕೊಂಡು ಡಿಕೆ ಶಿವಕುಮಾರ್ ಅವರನ್ನು ಕಟ್ಟಿಹಾಕಲು ಸಾಧ್ಯವಿಲ್ಲ.

ಬಿಜೆಪಿಗೆ ಮಗ್ಗುಲ ಮುಳ್ಳಾದ ಸಿಎಂ ನಡೆ| ಧರ್ಮ, ಸಂಪ್ರದಾಯ ಪಾಲಿಸುವ ಡಿಕೆಶಿ ವಿರುದ್ದ ಇನ್ನು ಹೇಗೆ ಹೋರಾಟ ಮಾಡುತ್ತೆ ಕೇಸರಿ ಪಡೆ? Read More »

ಬಿಜೆಪಿಗೆ ಕೊನೆಗೂ ಗುಡ್ ಬೈ ಹೇಳಿದ ಅಣ್ಣಾಮಲೈ

ಸಮಗ್ರ ನ್ಯೂಸ್: ತಮಿಳುನಾಡು ಬಿಜೆಪಿ ಫೈರ್‌ಬ್ರ್ಯಾಂಡ್ ಮತ್ತು ಪಕ್ಷದ ಮಾಜಿ ರಾಜ್ಯ ಅಧ್ಯಕ್ಷ ಅಣ್ಣಾಮಲೈ ತಮ್ಮ ಹುದ್ದೆಗೆ ಮತ್ತು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ದ್ರಾವಿಡ ರಾಜಕೀಯದ ಭದ್ರಕೋಟೆಯಲ್ಲಿ ಬಿಜೆಪಿಗೆ ಹೊಸ ಉತ್ಸಾಹ ತಂದ ಯುವ ನಾಯಕನ ಈ ಸಂಚಲನ ನಿರ್ಧಾರವು ಈಗ ದೇಶದ ರಾಜಕೀಯದಲ್ಲಿ ದೊಡ್ಡ ಸಂಚಲನ ಮೂಡಿಸಿದೆ. ಹೈಕಮಾಂಡ್ ಕೂಡ ಅವರ ರಾಜೀನಾಮೆಯನ್ನು ಅನುಮೋದಿಸಿದೆ. ಕರ್ನಾಟಕ ಕೇಡರ್‌ನ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರು ತಮ್ಮ ಪೊಲೀಸ್ ಕೆಲಸಕ್ಕೆ ರಾಜೀನಾಮೆ ನೀಡಿ ಬಿಜೆಪಿ

ಬಿಜೆಪಿಗೆ ಕೊನೆಗೂ ಗುಡ್ ಬೈ ಹೇಳಿದ ಅಣ್ಣಾಮಲೈ Read More »

ನಡುರಾತ್ರಿ ಆಸ್ಪತ್ರೆಗೆ ಭೇಟಿ ನೀಡಿದ ಸಚಿವ ಖಾದರ್| ಜಯನಗರ ಆಸ್ಪತ್ರೆಯ ಅವಸ್ಥೆಗೆ ಫುಲ್ ಗರಂ

ಸಮಗ್ರ ನ್ಯೂಸ್: ನೂತನ ಸಚಿವರಿಗೆ ಖಾತೆ ಹಂಚಿಕೆಯಾಗ್ತಿದ್ದಂತೆ ಫುಲ್​ ಅಲರ್ಟ್​ ಆಗಿದ್ದಾರೆ. ಖಾತೆ ಹಂಚಿಕೆಯಾದ ಒಂದೇ ಗಂಟೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಯು ಟಿ ಖಾದರ್ ಅವರು ಜಯನಗರ ಸಾರ್ವಜನಿಕ ಆಸ್ಪತ್ರೆಗೆ ದಿಢೀರ್ ಭೇಟಿ ಕೊಟ್ಟಿದ್ದಾರೆ. ಮಧ್ಯರಾತ್ರಿ 12 ಗಂಟೆ ಸುಮಾರಿಗೆ ಬೆಂಗಳೂರಿನ ಜಯನಗರ ಜನರಲ್ ಆಸ್ಪತ್ರೆಗೆ ಭೇಟಿ ನೀಡಿದ ಯುಟಿ ಖಾದರ್​ ಅವರು, ಆಸ್ಪತ್ರೆ ಸಿಬ್ಬಂದಿ ಬಗ್ಗೆ ಪರಿಶೀಲನೆ, ಸ್ವಚ್ಛತೆ, ರೋಗಿಗಳಿಗೆ ಚಿಕಿತ್ಸೆ ವಿಧಾನ, ತುರ್ತು ಚಿಕಿತ್ಸಾ ಘಟಕದಲ್ಲಿ ಪರಿಶೀಲನೆ ನಡೆಸಿದ್ದಾರೆ.

ನಡುರಾತ್ರಿ ಆಸ್ಪತ್ರೆಗೆ ಭೇಟಿ ನೀಡಿದ ಸಚಿವ ಖಾದರ್| ಜಯನಗರ ಆಸ್ಪತ್ರೆಯ ಅವಸ್ಥೆಗೆ ಫುಲ್ ಗರಂ Read More »

ಕೇರಳ ಪ್ರವೇಶಿಸಿದ ಮುಂಗಾರು| ಕರ್ನಾಟಕ ಕರಾವಳಿಯಲ್ಲಿ ಟ್ರಕ್ಕಿಂಗ್, ಕಡಲು, ನದಿತೀರಗಳಿಗೆ ನಿರ್ಬಂಧ

ಸಮಗ್ರ ನ್ಯೂಸ್: ಕೇರಳಕ್ಕೆ ಕೊನೆಗೂ ಮುಂಗಾರು ಮಾರುತಗಳು ಪ್ರವೇಶ ಮಾಡಿರುವುದಾಗಿ ಭಾರತೀಯ ಹವಾಮಾನ ಇಲಾಖೆ ಅಧಿಕೃತವಾಗಿ ತಿಳಿಸಿದೆ. ಇದರ ಬೆನ್ನಲ್ಲೇ ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಗೂ ಇನ್ನೆರಡು ದಿನಗಳಲ್ಲಿ ಮುಂಗಾರು ಮಳೆ ಆಗಮನವಾಗುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿವೆ. ಮಳೆಗಾಲದ ಆರಂಭದಲ್ಲೇ ಸಂಭವಿಸಬಹುದಾದ ನೆರೆ, ಪ್ರವಾಹ ಹಾಗೂ ಭೂಕುಸಿತದಂತಹ ಪ್ರಾಕೃತಿಕ ವಿಕೋಪಗಳನ್ನು ಸಮರ್ಥವಾಗಿ ಎದುರಿಸಲು ದಕ್ಷಿಣ ಕನ್ನಡ ಜಿಲ್ಲಾಡಳಿತ ಸಂಪೂರ್ಣ ಸಿದ್ಧತೆ ಮಾಡಿಕೊಂಡಿದೆ. ಕರಾವಳಿಯಲ್ಲಿ ಮಳೆಗಾಲದ ಸಂದರ್ಭದಲ್ಲಿ ಉಂಟಾಗುವ ಅವಾಂತರಗಳು ಮತ್ತು ಪ್ರಾಣಹಾನಿಯ ಆತಂಕವನ್ನು ತಪ್ಪಿಸಲು ಜಿಲ್ಲಾಧಿಕಾರಿ

ಕೇರಳ ಪ್ರವೇಶಿಸಿದ ಮುಂಗಾರು| ಕರ್ನಾಟಕ ಕರಾವಳಿಯಲ್ಲಿ ಟ್ರಕ್ಕಿಂಗ್, ಕಡಲು, ನದಿತೀರಗಳಿಗೆ ನಿರ್ಬಂಧ Read More »

ಶ್ರೇಯಸ್ ಅಯ್ಯರ್ ಗೆ ಟಿ20 ಟೀಂ ಕ್ಯಾಪ್ಟನ್ ಪಟ್ಟ| ಸೂರ್ಯಕುಮಾರ್ ಗೆ ಕೋಕ್ ಕೊಟ್ಟ ಬಿಸಿಸಿಐ

ಸಮಗ್ರ ನ್ಯೂಸ್: ಭಾರತೀಯ ಟಿ20 ಕ್ರಿಕೆಟ್ ತಂಡದಲ್ಲಿ ಪ್ರಮುಖ ಬದಲಾವಣೆಯಾಗಿದ್ದು, ಸೂರ್ಯಕುಮಾರ್ ಯಾದವ್ ಅವರ ಸ್ಥಾನಕ್ಕೆ ಶ್ರೇಯಸ್ ಅಯ್ಯರ್ ಅವರನ್ನು ನೂತನ ನಾಯಕರನ್ನಾಗಿ ಬಿಸಿಸಿಐ (BCCI) ಅಧಿಕೃತವಾಗಿ ನೇಮಕ ಮಾಡಿದೆ. ಮಾರ್ಚ್ 2026 ರಲ್ಲಿ ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ ಭಾರತ ತಂಡ ಟಿ20 ವಿಶ್ವಕಪ್ ಪ್ರಶಸ್ತಿಯನ್ನು ಯಶಸ್ವಿಯಾಗಿ ಉಳಿಸಿಕೊಂಡಿದ್ದರೂ ಸಹ, ಬ್ಯಾಟಿಂಗ್‌ನಲ್ಲಿ ಅವರ ವೈಯಕ್ತಿಕ ಫಾರ್ಮ್ ಕೈಕೊಟ್ಟಿರುವುದು ಈ ದಿಢೀರ್ ಬದಲಾವಣೆಗೆ ಕಾರಣವಾಗಿದೆ ಎನ್ನಲಾಗಿದೆ. ಮಹತ್ತರ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಭಾರತೀಯ ಆಯ್ಕೆಗಾರರು ಇಂತಹ ಕಠಿಣ ನಿರ್ಧಾರ

ಶ್ರೇಯಸ್ ಅಯ್ಯರ್ ಗೆ ಟಿ20 ಟೀಂ ಕ್ಯಾಪ್ಟನ್ ಪಟ್ಟ| ಸೂರ್ಯಕುಮಾರ್ ಗೆ ಕೋಕ್ ಕೊಟ್ಟ ಬಿಸಿಸಿಐ Read More »